< ԳԱՂԱՏԱՑԻՍ 2 >

1 Յետոյ, տասնչորս տարի ետք, դարձեալ բարձրացայ Երուսաղէմ՝ Բառնաբասի հետ, Տիտոսն ալ միասին առնելով:
ಹದಿನಾಲ್ಕು ವರ್ಷಗಳ ನಂತರ ನಾನು ಬಾರ್ನಬನ ಜೊತೆಯಲ್ಲಿ ತೀತನನ್ನು ಸಹ ಕರೆದುಕೊಂಡು, ಮತ್ತೊಮ್ಮೆ ಯೆರೂಸಲೇಮಿಗೆ ಹೋದೆನು.
2 Բարձրացած էի յայտնութեամբ, եւ անոնց ներկայացուցի այն աւետարանը՝ որ հեթանոսներուն մէջ կը քարոզեմ. բայց առանձին անոնց՝ որ երեւելիներ էին, որպէսզի ընդունայն չվազեմ կամ վազած չըլլամ:
ದೈವಪ್ರೇರಣೆಗೆ ಅನುಸಾರವಾಗಿ ಹೋಗಿ, ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬುದನ್ನು ಅಲ್ಲಿದ್ದ ಗಣ್ಯರಿಗೆ ಪ್ರತ್ಯೇಕವಾಗಿ ತಿಳಿಸಿದೆನು. ಏಕೆಂದರೆ ನಾನು ಸುವಾರ್ತೆಗಾಗಿ ಪಟ್ಟ ಶ್ರಮವಾಗಲಿ, ಈಗ ಪಡುತ್ತಿರುವ ಶ್ರಮವಾಗಲಿ ನಿಷ್ಫಲವಾಗಬಾರದೆಂದು ತಿಳಿಸಿದೆನು.
3 Բայց ո՛չ իսկ ինծի հետ եղող Տիտոսը, որ Յոյն էր, հարկադրուեցաւ թլփատուիլ՝
ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಒತ್ತಾಯಮಾಡಲಿಲ್ಲ.
4 գաղտնի ներս բերուած սուտ եղբայրներուն պատճառով, որոնք ներս սպրդած էին՝ լրտեսելու համար Քրիստոս Յիսուսով մեր ունեցած ազատութիւնը, որպէսզի ստրուկ ընեն մեզ.
ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.
5 անոնց տեղի չտուինք՝ նոյնիսկ քիչ մը ատեն՝՝ ենթարկուելով, որպէսզի աւետարանին ճշմարտութիւնը ձեր մէջ մնայ:
ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರ ಅಧೀನಕ್ಕೆ ಒಂದು ಗಳಿಗೆಯೂ ಒಳಪಡಲಿಲ್ಲ.
6 Իսկ անոնք որ կը կարծուէին բա՛ն մը ըլլալ - ինչ որ էին՝ ատիկա ինծի հարց չէ, քանի որ Աստուած մարդոց աչառութիւն չ՚ըներ -, այնպէս կարծուածները աւելի ոչինչ հաղորդեցին ինծի.
ಆದರೆ ಗಣ್ಯವ್ಯಕ್ತಿಗಳಾಗಿದ್ದವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರಿಗೆ ಮನುಷ್ಯರನ್ನು ಮೆಚ್ಚಿಸಬೇಕಾಗಿಲ್ಲ. ಗಣ್ಯವ್ಯಕ್ತಿಗಳೆಂದು ಎನಿಸಿಕೊಂಡವರು ನನಗೇನನ್ನೂ ತಿಳಿಸಿಕೊಡಲಿಲ್ಲ.
7 հապա՝ ընդհակառակը, երբ տեսան թէ անթլփատներուն աւետարանը ինծի վստահուած է, ինչպէս Պետրոսի ալ՝ թլփատուածներունը,
ಆದರೆ ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ, ಹಾಗೆಯೇ ಅನ್ಯಜನರಿಗೆ ಅದನ್ನು ಸಾರುವ ಕಾರ್ಯವನ್ನು ನನಗೆ ಕೊಡಲ್ಪಟ್ಟಿತು.
8 (որովհետեւ ա՛ն որ ներգործեց Պետրոսի մէջ՝ թլփատուածներուն առաքելութեան համար, նոյնպէս ներգործեց իմ մէջս՝ հեթանոսներուն հանդէպ, )
ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡೆಸುವುದಕ್ಕೋಸ್ಕರ ಪೇತ್ರನಿಗೆ ವಹಿಸಿಕೊಟ್ಟಂಥ ದೇವರು, ಸುನ್ನತಿಯಿಲ್ಲದವರಲ್ಲಿ ಅದನ್ನು ನಡೆಸುವುದಕ್ಕಾಗಿ ನನಗೆ ವಹಿಸಿದ್ದನು.
9 ու երբ Յակոբոս, Կեփաս եւ Յովհաննէս, որոնք սիւներ կարծուած էին, գիտակցեցան ինծի տրուած շնորհքին, իրենց աջ ձեռքը տուին ինծի ու Բառնաբասի՝ իբր նշան հաղորդակցութեան, որպէսզի մենք քարոզենք հեթանոսներուն, իսկ իրենք՝ թլփատուածներուն:
ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.
10 Միայն թէ կ՚ուզէին որ աղքատները յիշենք, ինչ որ ես ալ փութացի ընել:
೧೦ಆದರೆ ನೀವು ನಮ್ಮಲ್ಲಿರುವ ಬಡವರನ್ನು ಮರೆಯಬಾರದೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು, ಹಾಗೆ ಮಾಡುವುದರಲ್ಲಿ ನಾನೂ ಆಸಕ್ತನಾಗಿದ್ದೆನು.
11 Սակայն երբ Պետրոս եկաւ Անտիոք՝ ես դիմադարձեցի անոր, որովհետեւ պարսաւելի էր:
೧೧ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.
12 Արդարեւ Յակոբոսի քովէն ոմանց գալէն առաջ՝ ինք հեթանոսներուն հետ անխտրաբար կ՚ուտէր. բայց երբ եկան՝ ընկրկեցաւ եւ ինքզինք զատեց, թլփատուածներէն վախնալով:
೧೨ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮೊದಲು ಅವನು ಅನ್ಯಜನರೊಂದಿಗೆ ಊಟ ಮಾಡುತ್ತಿದ್ದನು. ಅವರು ಬಂದ ಮೇಲೆ ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು, ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು.
13 Միւս Հրեաներն ալ նոյնպէս անոր հետ կեղծեցին, ա՛յնքան՝ որ Բառնաբաս ալ անոնց կեղծիքէն տպաւորուեցաւ:
೧೩ಇದಲ್ಲದೆ ಉಳಿದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟತನದಿಂದ ವರ್ತಿಸಿದರು. ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.
14 Բայց երբ տեսայ թէ ուղիղ չեն ընթանար՝ աւետարանին ճշմարտութեան համաձայն, բոլորին առջեւ Պետրոսի ըսի. «Եթէ դուն՝ որ Հրեայ ես՝ հեթանոսներու պէս կ՚ապրիս, եւ ո՛չ թէ Հրեաներու պէս, ինչո՞ւ կը հարկադրես հեթանոսները՝ որ Հրեաներու պէս ապրին»:
೧೪ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?”
15 Մենք՝ որ բնիկ Հրեաներ ենք, եւ ո՛չ թէ հեթանոս մեղաւորներ,
೧೫ನಾವಂತೂ ಜನ್ಮತ ಯೆಹೂದ್ಯರು “ಪಾಪಿಗಳೆನಿಸಿಕೊಂಡ ಅನ್ಯಜನರಲ್ಲ.”
16 գիտնալով թէ մարդ Օրէնքին գործերով չէ որ կ՚արդարանայ, հապա Յիսուս Քրիստոսի հաւատքով, մե՛նք ալ հաւատացինք Քրիստոս Յիսուսի՝ որպէսզի արդարանանք Քրիստոսի՛ հաւատքով, ո՛չ թէ Օրէնքին գործերով. որովհետեւ Օրէնքին գործերով ո՛չ մէկը պիտի արդարանայ:
೧೬ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.
17 Իսկ եթէ մենք ալ՝ Քրիստոսով արդարանալու մեր ջանքին մէջ՝ մեղաւոր գտնուինք, ուրեմն Քրիստոս մեղքի սպասարկո՞ւ կ՚ըլլայ: Ամե՛նեւին:
೧೭ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದುವುದಕ್ಕೆ ಪ್ರಯತ್ನಿಸುತ್ತಿರುವಾಗ, ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸಹಾಯಕನಾಗಿರುವನೋ? ಎಂದಿಗೂ ಇಲ್ಲ.
18 Քանի որ եթէ իմ քակած բաներս դարձեալ կառուցանեմ, ես զիս օրինազանց կը դարձնեմ:
೧೮ನಾನು ಕೆಡವಿದ್ದನ್ನೇ ತಿರುಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿ ಎಂದು ತೋರಿಸಿಕೊಳ್ಳುತ್ತೇನಲ್ಲಾ.
19 Որովհետեւ ես՝ Օրէնքին միջոցով՝ մեռայ Օրէնքին, որպէսզի ապրիմ Աստուծոյ համար:
೧೯ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.
20 Քրիստոսի հետ խաչուեցայ. սակայն կ՚ապրի՛մ, բայց ա՛լ ո՛չ թէ ես՝ հապա Քրիստո՛ս կ՚ապրի իմ մէջս: Իսկ այն կեանքը որ հիմա մարմինովս կ՚ապրիմ՝ Աստուծոյ Որդիին հաւատքով կ՚ապրիմ, որ սիրեց զիս եւ ինքզինք ընծայեց ինծի համար:
೨೦ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.
21 Ես Աստուծոյ շնորհքը չեմ ջնջեր. որովհետեւ եթէ արդարութիւնը Օրէնքէն է, ուրեմն Քրիստոս ընդունայն մեռաւ:
೨೧ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಬಹುದಾದರೆ ಕ್ರಿಸ್ತನು ಮರಣಕ್ಕೀಡಾದುದು ನಿರರ್ಥಕವೇ ಸರಿ.

< ԳԱՂԱՏԱՑԻՍ 2 >