< ՅՈՎՀԱՆՆՈԻ 12 >

1 Իսկ Յիսուս Զատիկէն վեց օր առաջ եկաւ Բեթանիա, ուր կը գտնուէր մեռած Ղազարոսը՝ որ ինք մեռելներէն յարուցանեց:
ಪಸ್ಕ ಹಬ್ಬಕ್ಕೆ ಇನ್ನು ಆರು ದಿನಗಳು ಇರಲಾಗಿ ಯೇಸುವು, ಸತ್ತವರೊಳಗಿಂದ ಎಬ್ಬಿಸಿದ ಲಾಜರನು ವಾಸವಾಗಿದ್ದ ಬೇಥಾನ್ಯಕ್ಕೆ ಬಂದನು.
2 Հոն՝ ընթրիք մը սարքեցին անոր. Մարթա կը սպասարկէր, ու Ղազարոս անոր հետ սեղան նստողներէն՝՝ մէկն էր:
ಯೇಸುವಿಗೆ ಅಲ್ಲಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಉಪಚಾರ ಮಾಡುತ್ತಿದ್ದಳು. ಲಾಜರನು ಆತನ ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನಾಗಿದ್ದನು.
3 Իսկ Մարիամ՝ առնելով մէկ լիտր թանկագին նարդոսի օծանելիք՝ օծեց Յիսուսի ոտքերը, եւ սրբեց անոր ոտքերը իր մազերով. ու տունը լեցուեցաւ օծանելիքին հոտով:
ಆಗ ಮರಿಯಳು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು.
4 Ուստի աշակերտներէն մէկը՝ Իսկարիովտացի Սիմոնեան Յուդա, որ պիտի մատնէր զինք, ըսաւ.
ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ, ಆತನನ್ನು ಹಿಡಿದುಕೊಡುವುದಕ್ಕಿದ್ದ ಇಸ್ಕರಿಯೋತ ಯೂದನೆಂಬುವನು,
5 «Ինչո՞ւ այդ օծանելիքը չծախուեցաւ երեք հարիւր դահեկանի՝ որ տրուէր աղքատներուն»:
“ಈ ತೈಲವನ್ನು ಮುನ್ನೂರು ಬೆಳ್ಳಿನಾಣ್ಯಕ್ಕೆ ಮಾರಿ ಬಡವರಿಗೆ ಕೊಡಬಹುದಿತ್ತಲ್ಲಾ?” ಎಂದನು.
6 Ասիկա ըսաւ՝ ո՛չ թէ աղքատները հոգալուն համար, հապա՝ քանի որ գող էր եւ ինք ունէր գանձանակը, ու կը կրէր ինչ որ ձգուէր:
ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಆದುದರಿಂದಲೇ ಹೀಗೆ ಹೇಳಿದನು.
7 Իսկ Յիսուս ըսաւ. «Թո՛յլ տուր անոր. այդ բանը պահեց իմ թաղումիս օրուան համար:
ಆಗ ಯೇಸುವು, “ಈಕೆಯನ್ನು ಬಿಟ್ಟುಬಿಡಿರಿ, ನನ್ನನ್ನು ಸಮಾಧಿ ಮಾಡುವ ದಿನಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಳು ಎಂದಿರಲಿ.
8 Որովհետեւ աղքատները ամէն ատեն ունիք ձեզի հետ, բայց զիս ամէն ատեն չունիք»:
ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲವಲ್ಲಾ” ಎಂದನು.
9 Ուստի Հրեաներէն մեծ բազմութիւն մը գիտցաւ անոր հոն ըլլալը, ու եկաւ՝ ո՛չ միայն Յիսուսի համար, այլ նաեւ տեսնելու Ղազարոսը՝ որ մեռելներէն յարուցանած էր:
ಯೆಹೂದ್ಯರ ಗುಂಪು ಆತನು ಅಲ್ಲಿ ಇದ್ದಾನೆಂದು ತಿಳಿದು, ಯೇಸುವನ್ನು ನೋಡುವುದಕ್ಕಾಗಿ ಮಾತ್ರವಲ್ಲದೆ, ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ಸಹ ನೋಡಬೇಕೆಂಬುದಾಗಿ ಅಲ್ಲಿಗೆ ಬಂದರು.
10 Իսկ քահանայապետները խորհրդակցեցան՝ որ սպաննեն Ղազարոսն ալ.
೧೦ಆದರೆ ಮುಖ್ಯಯಾಜಕರು ಲಾಜರನನ್ನೂ ಸಹ ಕೊಲ್ಲಬೇಕೆಂದು ಆಲೋಚಿಸಿದರು.
11 որովհետեւ Հրեաներէն շատեր անոր պատճառով կ՚երթային ու կը հաւատային Յիսուսի:
೧೧ಏಕೆಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು.
12 Հետեւեալ օրը՝ մեծ բազմութիւն մը, որ եկած էր տօնին, երբ լսեց թէ Յիսուս կու գայ Երուսաղէմ,
೧೨ಮರುದಿನ ಹಬ್ಬಕ್ಕೆ ಬಂದಿದ್ದ ಜನರ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಾನೆಂಬ ಸುದ್ದಿ ಕೇಳಿ
13 առաւ արմաւենիի ոստեր, դուրս ելաւ զայն դիմաւորելու, եւ կ՚աղաղակէր. «Ովսաննա՜, օրհնեա՜լ է Իսրայէլի թագաւորը՝ որ կու գայ Տէրոջ անունով»:
೧೩ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, “ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು.
14 Յիսուս՝ գտնելով աւանակ մը՝ նստաւ անոր վրայ, ինչպէս գրուած է.
೧೪ಯೇಸು ದಾರಿಯಲ್ಲಿ ಪ್ರಾಯದ ಕತ್ತೆಯೊಂದನ್ನು ಕಂಡು ಅದರ ಮೇಲೆ ಕುಳಿತುಕೊಂಡನು.
15 «Մի՛ վախնար, Սիոնի՛ աղջիկ. ահա՛ Թագաւորդ կու գայ՝ նստած իշու աւանակի վրայ»:
೧೫ಹೀಗೆ, “ಚೀಯೋನ್ ನಗರಿಯೇ, ಹೆದರಬೇಡ ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು.
16 Անոր աշակերտները նախապէս չհասկցան այդ բաները. բայց երբ Յիսուս փառաւորուեցաւ, այն ատեն յիշեցին թէ ատոնք գրուած էին անոր մասին, եւ թէ իրենք ըրին անոր այդ բաները:
೧೬ಇದು ಆತನ ಶಿಷ್ಯರಿಗೆ ಮೊದಲು ತಿಳಿಯಲಿಲ್ಲ. ಆದರೆ ಯೇಸು ತನ್ನ ಮಹಿಮೆಯನ್ನು ಹೊಂದಿದ ಮೇಲೆ ಇದು ಆತನ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಆತನಿಗೆ ಮಾಡಿದೆವೆಂದೂ ನೆನಪು ಮಾಡಿಕೊಂಡರು.
17 Իրեն հետ եղող բազմութիւնը կը վկայէր թէ գերեզմանէն դուրս կանչեց Ղազարոսը ու մեռելներէն յարուցանեց զայն:
೧೭ಇದಲ್ಲದೆ ಆತನು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರೇ ಈ ವಿಷಯಕ್ಕೆ ಸಾಕ್ಷಿಕೊಡುತ್ತಿದ್ದರು.
18 Այս պատճառով ալ բազմութիւնը դիմաւորեց զինք, որովհետեւ լսեցին թէ ի՛նք ըրած էր այս նշանը:
೧೮ಆತನು ಈ ಸೂಚಕಕಾರ್ಯವನ್ನು ಮಾಡಿದನೆಂದು ಕೇಳಿದ ಕಾರಣದಿಂದಲೂ ಜನರು ಆತನನ್ನು ಸಂಧಿಸಲು ಬಂದರು.
19 Իսկ Փարիսեցիները կ՚ըսէին իրարու. «Կը նշմարէ՞ք թէ անօգուտ է. ահա՛ ամբողջ աշխարհը կը հետեւի անոր՝՝»:
೧೯ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
20 Հոն՝ տօնին երկրպագելու բարձրացողներուն մէջ՝ քանի մը Յոյներ կային:
೨೦ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು.
21 Ասոնք մօտեցան Փիլիպպոսի, որ Գալիլեայի Բեթսայիդայէն էր, ու կը թախանձէին անոր՝ ըսելով. «Տէ՛ր, կ՚ուզենք Յիսո՛ւսը տեսնել»:
೨೧ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆಂದು” ಅವನನ್ನು ಬೇಡಿಕೊಂಡರು.
22 Փիլիպպոս եկաւ եւ ըսաւ Անդրէասի, ապա դարձեալ Անդրէաս ու Փիլիպպոս միասին ըսին Յիսուսի:
೨೨ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನು ಹಾಗೂ ಫಿಲಿಪ್ಪನೂ ಬಂದು ಯೇಸುವಿಗೆ ಹೇಳಿದರು.
23 Յիսուս ալ պատասխանեց անոնց. «Ժամը հասաւ՝ որ մարդու Որդին փառաւորուի:
೨೩ಆಗ ಯೇಸು ಅವರಿಗೆ, “ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ.
24 Ճշմա՛րտապէս, ճշմա՛րտապէս կը յայտարարեմ ձեզի. “Եթէ ցորենին հատիկը հողին մէջ իյնալով չմեռնի՝ ինք մինակ կը մնայ. բայց եթէ մեռնի՝ շատ պտուղ կը բերէ”:
೨೪ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು
25 Ա՛ն որ կը սիրէ իր անձը՝ պիտի կորսնցնէ զայն, եւ ա՛ն որ կ՚ատէ իր անձը այս աշխարհի մէջ՝ յաւիտենական կեանքին համար պիտի պահէ զայն: (aiōnios g166)
೨೫ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು. (aiōnios g166)
26 Եթէ մէկը կը սպասարկէ ինծի՝ թող հետեւի ինծի. ու ես ո՛ւր որ եմ, իմ սպասարկուս ալ հո՛ն պիտի ըլլայ. եթէ մէկը կը սպասարկէ ինծի, Հայրը պիտի պատուէ զինք»:
೨೬ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
27 «Հիմա իմ անձս վրդոված է, եւ ի՞նչ ըսեմ. “Հա՛յր, ազատէ՛ զիս այս ժամէ՞ն”: Բայց ես եկած եմ ասո՛ր համար՝ ա՛յս ժամուն:
೨೭ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?
28 “Հա՛յր, փառաւորէ՛ քու անունդ”»: Ուստի ձայն մը եկաւ երկինքէն. «Փառաւորեցի ալ, ու դարձեալ պիտի փառաւորեմ»:
೨೮ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.
29 Բազմութիւնը՝ որ կայնած էր ու կը լսէր, կ՚ըսէր. «Որոտում կ՚ըլլայ»: Ոմանք ալ կ՚ըսէին. «Հրեշտա՛կ մը խօսեցաւ իրեն հետ»:
೨೯ಆಗ ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ, “ಗುಡುಗಿತು” ಎಂದರು. ಇನ್ನು ಕೆಲವರು “ದೇವದೂತನು ಈತನ ಸಂಗಡ ಮಾತನಾಡಿದನು” ಎಂದರು.
30 Յիսուս պատասխանեց. «Այս ձայնը եկաւ ո՛չ թէ ինծի համար, հապա՝ ձեզի համար:
೩೦ಯೇಸು ಅವರಿಗೆ, “ಈ ಶಬ್ದವು ನನಗಾಗಿ ಆಗಲಿಲ್ಲ, ನಿಮಗಾಗಿಯೇ ಆಯಿತು.
31 Հիմա է այս աշխարհի դատաստանը, հիմա պիտի վտարուի այս աշխարհի իշխանը:
೩೧ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು
32 Ես ալ, երբ բարձրանամ երկրէն, բոլորդ ալ պիտի քաշեմ ինծի»:
೩೨ಆದರೆನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.
33 Այս բանը կ՚ըսէր՝ մատնանշելով թէ ի՛նչ տեսակ մահով պիտի մեռնէր:
೩೩ತಾನು ಎಂಥಾ ಮರಣವನ್ನು ಹೊಂದುತ್ತೇನೆಂದು ಸೂಚಿಸಿ ಇದನ್ನು ಹೇಳಿದನು.
34 Բազմութիւնը պատասխանեց անոր. «Մենք լսեցինք Օրէնքէն թէ Քրիստոս յաւիտեա՛ն կը մնայ: Դուն ի՞նչպէս կ՚ըսես. “Մարդու Որդին պէտք է բարձրանայ”: Ո՞վ է այդ մարդու Որդին»: (aiōn g165)
೩೪ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು. (aiōn g165)
35 Ուստի Յիսուս ըսաւ անոնց. «Քի՛չ մը ատեն ալ լոյսը ձեզի հետ է. քալեցէ՛ք՝ մինչ տակաւին լոյսը ունիք, որպէսզի խաւարը չհասնի ձեր վրայ. որովհետեւ խաւարի մէջ քալողը չի գիտեր թէ ո՛ւր կ՚երթայ:
೩೫ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
36 Մինչ լոյսը ունիք՝ հաւատացէ՛ք այդ լոյսին, որպէսզի լոյսի որդիներ ըլլաք»: Յիսուս այս բաները խօսեցաւ, ապա գնաց՝ ինքզինք ծածկելով անոնց աչքերէն:
೩೬ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾರಾಗುವಿರಿ” ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು.
37 Թէպէտ այնքան նշաններ ըրած էր անոնց առջեւ, անոնք չէին հաւատար իրեն.
೩೭ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ.
38 որպէսզի իրագործուի Եսայի մարգարէին խօսքը՝ որ ըսած էր. «Տէ՛ր, ո՞վ հաւատաց մեր տուած լուրին, ու Տէրոջ բազուկը որո՞ւն յայտնուեցաւ»:
೩೮ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.
39 Չէին կրնար հաւատալ՝ քանի որ Եսայի դարձեալ ըսած է.
೩೯ಅವರು ನಂಬಲಾರದೇ ಹೋದುದ್ದಕ್ಕೆ ಯೆಶಾಯನು ಮತ್ತೊಂದು ಮಾತಿನಲ್ಲಿ ಕಾರಣವನ್ನು ಸೂಚಿಸಿದ್ದಾನೆ, ಅದೇನೆಂದರೆ,
40 «Կուրցուց անոնց աչքերը եւ կարծրացուց անոնց սիրտը, որպէսզի չտեսնեն իրենց աչքերով, չհասկնան իրենց սիրտով ու դարձի չգան, եւ ես չբժշկեմ զանոնք»:
೪೦“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.
41 Եսայի ըսաւ ասիկա՝ երբ տեսաւ անոր փառքը ու խօսեցաւ անոր մասին:
೪೧ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು.
42 Սակայն միաժամանակ՝ պետերէն ալ շատեր հաւատացին իրեն. բայց չէին դաւաներ զայն՝ Փարիսեցիներուն պատճառով, որպէսզի չվռնտուին ժողովարանէն.
೪೨ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ.
43 որովհետեւ աւելի սիրեցին մարդոց փառքը՝ քան Աստուծոյ փառքը:
೪೩ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರಿಂದ ಬರುವ ಹೊಗಳಿಕೆ ಅವರಿಗೆ ಇಷ್ಟವಾಗಿತ್ತು.
44 Յիսուս կ՚աղաղակէր. «Ա՛ն որ կը հաւատայ ինծի, կը հաւատայ ո՛չ թէ ինծի, հապա՝ զիս ղրկողի՛ն.
೪೪ಯೇಸು ಕೂಗಿ ಹೇಳಿದ ಮಾತೇನಂದರೆ, “ನನ್ನನ್ನು ನಂಬುವವನು ನನ್ನನ್ನೇ ನಂಬುವವನಲ್ಲದೇ ನನ್ನನ್ನು ಕಳುಹಿಸಿಕೊಟ್ಟಾತನನ್ನು ಸಹ ನಂಬುವವನಾಗಿದ್ದಾನೆ.
45 եւ ա՛ն որ կը տեսնէ զիս, կը տեսնէ զիս ղրկո՛ղը:
೪೫ಮತ್ತು ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ನೋಡುವವನಾಗಿದ್ದಾನೆ.
46 Ես աշխարհ եկայ իբր լոյս, որպէսզի ո՛վ որ հաւատայ ինծի՝ չմնայ խաւարի մէջ:
೪೬ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
47 Եթէ մէկը լսէ իմ խօսքերս ու չհաւատայ՝ ես չեմ դատեր զինք, քանի որ ես եկայ՝ ո՛չ թէ դատելու աշխարհը, հապա՝ փրկելու աշխարհը:
೪೭ಯಾರಾದರೂ ನನ್ನ ಮಾತುಗಳನ್ನು ಕೇಳಿದರೂ ಅದನ್ನು ಕೈಕೊಂಡು ನಡೆಯದೆ ಹೋದರೆ, ನಾನು ಅವನಿಗೆ ತೀರ್ಪುಮಾಡುವುದಿಲ್ಲ. ಲೋಕಕ್ಕೆ ತೀರ್ಪುಮಾಡುವುದಕ್ಕಾಗಿ ನಾನು ಬಂದಿಲ್ಲ, ಆದರೆ ಲೋಕವನ್ನು ರಕ್ಷಿಸುವುದಕ್ಕಾಗಿ ಬಂದಿದ್ದೇನಷ್ಟೇ.
48 Ա՛ն որ կ՚անարգէ զիս եւ չ՚ընդունիր իմ խօսքերս, ունի մէկը՝ որ կը դատէ զինք. այն խօսքը՝ որ ես ըսի, անիկա՛ պիտի դատէ զինք՝ վերջին օրը:
೪೮ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು.
49 Որովհետեւ ես ինձմէ չխօսեցայ, հապա Հայրը՝ որ ղրկեց զիս, ի՛նք պատուիրեց ինծի թէ ի՛նչ պիտի ըսեմ եւ ի՛նչ պիտի խօսիմ:
೪೯ಏಕೆಂದರೆ ಇದನ್ನು ನನ್ನಷ್ಟಕ್ಕೆ ನಾನೇ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿ ಕೊಟ್ಟ ತಂದೆಯೇ, ನಾನು ಏನು ಹೇಳಬೇಕು ಮತ್ತು ಹೇಗೆ ಮಾತನಾಡಬೇಕು, ಎಂಬುದಾಗಿ ನನಗೆ ಆಜ್ಞಾಪಿಸಿದ್ದಾನೆ.
50 Եւ գիտեմ թէ անոր պատուիրածը՝ յաւիտենական կեանքն է. ուրեմն ինչ որ կը խօսիմ, ա՛յնպէս կը խօսիմ՝ ինչպէս Հայրը ըսաւ ինծի»: (aiōnios g166)
೫೦ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದುದರಿಂದ ನಾನು ಮಾತನಾಡುವುದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತನಾಡುತ್ತಿದ್ದೇನೆ” ಎಂದನು. (aiōnios g166)

< ՅՈՎՀԱՆՆՈԻ 12 >