< ՅՈՎՀԱՆՆՈԻ 12 >

1 Իսկ Յիսուս Զատիկէն վեց օր առաջ եկաւ Բեթանիա, ուր կը գտնուէր մեռած Ղազարոսը՝ որ ինք մեռելներէն յարուցանեց:
ಪಸ್ಕಹಬ್ಬಕ್ಕೆ ಆರು ದಿನಗಳ ಮುಂಚೆ ಯೇಸು ಬೇಥಾನ್ಯಕ್ಕೆ ಬಂದರು. ಅಲ್ಲಿಯೇ ಯೇಸು ಮರಣದಿಂದ ಎಬ್ಬಿಸಿದ ಲಾಜರನು ಇದ್ದನು.
2 Հոն՝ ընթրիք մը սարքեցին անոր. Մարթա կը սպասարկէր, ու Ղազարոս անոր հետ սեղան նստողներէն՝՝ մէկն էր:
ಅಲ್ಲಿ ಅವರು ಯೇಸುವಿಗಾಗಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಬಡಿಸುತ್ತಿದ್ದಳು. ಯೇಸುವಿನೊಂದಿಗೆ ಊಟಕ್ಕೆ ಕುಳಿತವರಲ್ಲಿ ಲಾಜರನೂ ಒಬ್ಬನಾಗಿದ್ದನು.
3 Իսկ Մարիամ՝ առնելով մէկ լիտր թանկագին նարդոսի օծանելիք՝ օծեց Յիսուսի ոտքերը, եւ սրբեց անոր ոտքերը իր մազերով. ու տունը լեցուեցաւ օծանելիքին հոտով:
ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ಮೂಲಿಕೆಯ ತೈಲವನ್ನು ಸುಮಾರು ಅರ್ಧ ಲೀಟರಿನಷ್ಟು ತಂದು ಯೇಸುವಿನ ಪಾದಕ್ಕೆ ಸುರಿದು ತನ್ನ ತಲೆಯ ಕೂದಲಿನಿಂದ ಅವರ ಪಾದಗಳನ್ನು ಒರೆಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತು.
4 Ուստի աշակերտներէն մէկը՝ Իսկարիովտացի Սիմոնեան Յուդա, որ պիտի մատնէր զինք, ըսաւ.
ಆಗ ಯೇಸುವಿನ ಶಿಷ್ಯರಲ್ಲಿ ಒಬ್ಬನಾಗಿದ್ದ ಹಾಗೂ ಅವರನ್ನು ಹಿಡಿದುಕೊಡುವುದಕ್ಕಿದ್ದ ಯೂದ ಇಸ್ಕರಿಯೋತನು,
5 «Ինչո՞ւ այդ օծանելիքը չծախուեցաւ երեք հարիւր դահեկանի՝ որ տրուէր աղքատներուն»:
“ಈ ತೈಲವನ್ನು ಏಕೆ ಮುನ್ನೂರು ಬೆಳ್ಳಿ ನಾಣ್ಯಗಳನ್ನು ಮಾರಿ ಬಡವರಿಗೆ ಕೊಡಲಿಲ್ಲ?” ಎಂದನು.
6 Ասիկա ըսաւ՝ ո՛չ թէ աղքատները հոգալուն համար, հապա՝ քանի որ գող էր եւ ինք ունէր գանձանակը, ու կը կրէր ինչ որ ձգուէր:
ಅವನು ಬಡವರ ಹಿತಚಿಂತನೆಯಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು, ಹಣದ ಚೀಲವನ್ನು ಇಟ್ಟುಕೊಂಡು ಅದರಲ್ಲಿ ಹಾಕಿದ್ದನ್ನು ಕದ್ದುಕೊಳ್ಳುತ್ತಿದ್ದನು. ಆದ್ದರಿಂದಲೇ ಇದನ್ನು ಹೇಳಿದನು.
7 Իսկ Յիսուս ըսաւ. «Թո՛յլ տուր անոր. այդ բանը պահեց իմ թաղումիս օրուան համար:
ಆಗ ಯೇಸು, “ಮರಿಯಳನ್ನು ಬಿಟ್ಟುಬಿಡಿರಿ, ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಳ್ಳಲಿ.
8 Որովհետեւ աղքատները ամէն ատեն ունիք ձեզի հետ, բայց զիս ամէն ատեն չունիք»:
ಏಕೆಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ,” ಎಂದರು.
9 Ուստի Հրեաներէն մեծ բազմութիւն մը գիտցաւ անոր հոն ըլլալը, ու եկաւ՝ ո՛չ միայն Յիսուսի համար, այլ նաեւ տեսնելու Ղազարոսը՝ որ մեռելներէն յարուցանած էր:
ಯೇಸು ಅಲ್ಲಿರುವುದನ್ನು ಯೆಹೂದ್ಯರ ದೊಡ್ಡ ಗುಂಪು ತಿಳಿದು, ಅವರನ್ನು ಮಾತ್ರವಲ್ಲ, ಯೇಸು ಮರಣದಿಂದ ಎಬ್ಬಿಸಿದ ಲಾಜರನನ್ನೂ ಕಾಣಲು ಬಂದಿದ್ದರು.
10 Իսկ քահանայապետները խորհրդակցեցան՝ որ սպաննեն Ղազարոսն ալ.
ಮುಖ್ಯಯಾಜಕರು ಲಾಜರನನ್ನು ಸಹ ಕೊಲ್ಲಬೇಕೆಂದು ಆಲೋಚಿಸಿದರು.
11 որովհետեւ Հրեաներէն շատեր անոր պատճառով կ՚երթային ու կը հաւատային Յիսուսի:
ಏಕೆಂದರೆ ಅವನ ದೆಸೆಯಿಂದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಡೆಗೆ ಹೋಗಿ ನಂಬಿಕೆ ಇಟ್ಟಿದ್ದರು.
12 Հետեւեալ օրը՝ մեծ բազմութիւն մը, որ եկած էր տօնին, երբ լսեց թէ Յիսուս կու գայ Երուսաղէմ,
ಮರುದಿನ ಹಬ್ಬಕ್ಕೆ ಬಂದ ದೊಡ್ಡ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಿದ್ದಾರೆಂಬ ಸುದ್ದಿ ಕೇಳಿ,
13 առաւ արմաւենիի ոստեր, դուրս ելաւ զայն դիմաւորելու, եւ կ՚աղաղակէր. «Ովսաննա՜, օրհնեա՜լ է Իսրայէլի թագաւորը՝ որ կու գայ Տէրոջ անունով»:
ಖರ್ಜೂರದ ಗರಿಗಳನ್ನು ತೆಗೆದುಕೊಂಡು ಅವರನ್ನು ಎದುರುಗೊಳ್ಳಲು ಹೊರಗೆ ಬಂದು, “ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಇಸ್ರಾಯೇಲಿನ ಅರಸನಿಗೆ ಶುಭವಾಗಲಿ!” ಎಂದು ಕೂಗಿದರು.
14 Յիսուս՝ գտնելով աւանակ մը՝ նստաւ անոր վրայ, ինչպէս գրուած է.
ಯೇಸು ಕತ್ತೆಮರಿಯನ್ನು ಕಂಡು ಅದರ ಮೇಲೆ ಕುಳಿತುಕೊಂಡರು. ಪವಿತ್ರ ವೇದದಲ್ಲಿ ಬರೆದಿರುವಂತೆ:
15 «Մի՛ վախնար, Սիոնի՛ աղջիկ. ահա՛ Թագաւորդ կու գայ՝ նստած իշու աւանակի վրայ»:
“ಚೀಯೋನ್ ಪುತ್ರಿಯೇ, ಭಯಪಡಬೇಡ, ಇಗೋ, ನಿನ್ನ ಅರಸ ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾರೆ,” ಎಂಬ ಮಾತು ನೆರವೇರಿತು.
16 Անոր աշակերտները նախապէս չհասկցան այդ բաները. բայց երբ Յիսուս փառաւորուեցաւ, այն ատեն յիշեցին թէ ատոնք գրուած էին անոր մասին, եւ թէ իրենք ըրին անոր այդ բաները:
ಇವುಗಳನ್ನು ಯೇಸುವಿನ ಶಿಷ್ಯರು ಮೊದಲು ತಿಳಿದಿರಲಿಲ್ಲ. ಆದರೆ ಯೇಸು ಮಹಿಮೆ ಹೊಂದಿದಾಗ ಪವಿತ್ರ ವೇದದಲ್ಲಿ ಅವರ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಜನರು ಅವರಿಗೆ ಮಾಡಿದರೆಂದು ಗ್ರಹಿಸಿದರು.
17 Իրեն հետ եղող բազմութիւնը կը վկայէր թէ գերեզմանէն դուրս կանչեց Ղազարոսը ու մեռելներէն յարուցանեց զայն:
ಯೇಸು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾಗ ಅವರ ಸಂಗಡ ಇದ್ದ ಜನರೇ ಈ ವಿಷಯವನ್ನು ಸಾರುತ್ತಿದ್ದರು.
18 Այս պատճառով ալ բազմութիւնը դիմաւորեց զինք, որովհետեւ լսեցին թէ ի՛նք ըրած էր այս նշանը:
ಯೇಸು ಈ ಸೂಚಕಕಾರ್ಯವನ್ನು ಮಾಡಿದರೆಂದು ಅನೇಕ ಜನರು ಕೇಳಿದ್ದರಿಂದ ಅವರು ಸಹ ಯೇಸುವನ್ನು ಸಂಧಿಸಲು ಬಂದರು.
19 Իսկ Փարիսեցիները կ՚ըսէին իրարու. «Կը նշմարէ՞ք թէ անօգուտ է. ահա՛ ամբողջ աշխարհը կը հետեւի անոր՝՝»:
ಆದ್ದರಿಂದ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ, ನಮಗೆ ಏನೂ ಪ್ರಯೋಜನವಾಗಲಿಲ್ಲ. ಲೋಕವೇ ಆತನ ಹಿಂದೆ ಹೋಗುತ್ತಿದೆ!” ಎಂದು ಮಾತನಾಡಿಕೊಂಡರು.
20 Հոն՝ տօնին երկրպագելու բարձրացողներուն մէջ՝ քանի մը Յոյներ կային:
ಹಬ್ಬದ ಆರಾಧನೆಗೆ ಗ್ರೀಕರಲ್ಲಿ ಕೆಲವರು ಬಂದಿದ್ದರು.
21 Ասոնք մօտեցան Փիլիպպոսի, որ Գալիլեայի Բեթսայիդայէն էր, ու կը թախանձէին անոր՝ ըսելով. «Տէ՛ր, կ՚ուզենք Յիսո՛ւսը տեսնել»:
ಇವರು ಗಲಿಲಾಯದ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ,” ಎಂದರು.
22 Փիլիպպոս եկաւ եւ ըսաւ Անդրէասի, ապա դարձեալ Անդրէաս ու Փիլիպպոս միասին ըսին Յիսուսի:
ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನೂ ಫಿಲಿಪ್ಪನೂ ಬಂದು ಯೇಸುವಿಗೆ ತಿಳಿಸಿದರು.
23 Յիսուս ալ պատասխանեց անոնց. «Ժամը հասաւ՝ որ մարդու Որդին փառաւորուի:
ಯೇಸು ಅವರಿಗೆ, “ಮನುಷ್ಯಪುತ್ರನು ಮಹಿಮೆಪಡುವ ಸಮಯ ಬಂದಿದೆ.
24 Ճշմա՛րտապէս, ճշմա՛րտապէս կը յայտարարեմ ձեզի. “Եթէ ցորենին հատիկը հողին մէջ իյնալով չմեռնի՝ ինք մինակ կը մնայ. բայց եթէ մեռնի՝ շատ պտուղ կը բերէ”:
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋಧಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು, ಆದರೆ ಅದು ಸತ್ತರೆ ಬಹಳ ಫಲಕೊಡುವುದು.
25 Ա՛ն որ կը սիրէ իր անձը՝ պիտի կորսնցնէ զայն, եւ ա՛ն որ կ՚ատէ իր անձը այս աշխարհի մէջ՝ յաւիտենական կեանքին համար պիտի պահէ զայն: (aiōnios g166)
ತಮ್ಮ ಪ್ರಾಣವನ್ನು ಪ್ರೀತಿಸುವವರು ಅದನ್ನು ಕಳೆದುಕೊಳ್ಳುವರು. ಈ ಲೋಕದಲ್ಲಿ ತಮ್ಮ ಪ್ರಾಣವನ್ನು ದ್ವೇಷಿಸುವವರು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವರು. (aiōnios g166)
26 Եթէ մէկը կը սպասարկէ ինծի՝ թող հետեւի ինծի. ու ես ո՛ւր որ եմ, իմ սպասարկուս ալ հո՛ն պիտի ըլլայ. եթէ մէկը կը սպասարկէ ինծի, Հայրը պիտի պատուէ զինք»:
ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.
27 «Հիմա իմ անձս վրդոված է, եւ ի՞նչ ըսեմ. “Հա՛յր, ազատէ՛ զիս այս ժամէ՞ն”: Բայց ես եկած եմ ասո՛ր համար՝ ա՛յս ժամուն:
“ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸಿರಿ’ ಎಂದು ಹೇಳಲೋ? ಇಲ್ಲ. ನಾನು ಈ ಗಳಿಗೆಗಾಗಿಯೇ ಬಂದಿದ್ದೇನಲ್ಲಾ?
28 “Հա՛յր, փառաւորէ՛ քու անունդ”»: Ուստի ձայն մը եկաւ երկինքէն. «Փառաւորեցի ալ, ու դարձեալ պիտի փառաւորեմ»:
ತಂದೆಯೇ, ನಿಮ್ಮ ಹೆಸರನ್ನು ಮಹಿಮೆ ಪಡಿಸಿಕೊಳ್ಳಿರಿ,” ಎಂದರು. ಆಗ, “ಹೌದು, ನಾನು ಮಹಿಮೆಪಡಿಸಿದ್ದೇನೆ, ಪುನಃ ಮಹಿಮೆ ಪಡಿಸುವೆನು,” ಎಂಬ ಸ್ವರವು ಪರಲೋಕದಿಂದ ಕೇಳಿಸಿತು.
29 Բազմութիւնը՝ որ կայնած էր ու կը լսէր, կ՚ըսէր. «Որոտում կ՚ըլլայ»: Ոմանք ալ կ՚ըսէին. «Հրեշտա՛կ մը խօսեցաւ իրեն հետ»:
ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ, “ಗುಡುಗಿತು,” ಎಂದರು. ಬೇರೆಯವರು, “ದೇವದೂತನೊಬ್ಬನು ಈತನ ಸಂಗಡ ಮಾತನಾಡಿದನು,” ಎಂದರು.
30 Յիսուս պատասխանեց. «Այս ձայնը եկաւ ո՛չ թէ ինծի համար, հապա՝ ձեզի համար:
ಯೇಸು, “ಈ ಸ್ವರವು ನನಗಾಗಿ ಅಲ್ಲ, ನಿಮಗಾಗಿಯೇ ಬಂದಿದೆ.
31 Հիմա է այս աշխարհի դատաստանը, հիմա պիտի վտարուի այս աշխարհի իշխանը:
ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಇಹಲೋಕದ ಅಧಿಪತಿಯನ್ನು ಈಗ ಹೊರಗೆ ಹಾಕಲಾಗುವುದು.
32 Ես ալ, երբ բարձրանամ երկրէն, բոլորդ ալ պիտի քաշեմ ինծի»:
ಆದರೆ ನನ್ನನ್ನು ಭೂಮಿಯಿಂದ ಮೇಲೇರಿಸಿದಾಗ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುತ್ತೇನೆ,” ಎಂದರು.
33 Այս բանը կ՚ըսէր՝ մատնանշելով թէ ի՛նչ տեսակ մահով պիտի մեռնէր:
ತಾವು ಎಂಥಾ ಮರಣದಿಂದ ಸಾಯಬೇಕಾಗಿದೆ ಎಂದು ಸೂಚಿಸಿ ಇದನ್ನು ಹೇಳಿದರು.
34 Բազմութիւնը պատասխանեց անոր. «Մենք լսեցինք Օրէնքէն թէ Քրիստոս յաւիտեա՛ն կը մնայ: Դուն ի՞նչպէս կ՚ըսես. “Մարդու Որդին պէտք է բարձրանայ”: Ո՞վ է այդ մարդու Որդին»: (aiōn g165)
ಜನರು ಯೇಸುವಿಗೆ, “ಕ್ರಿಸ್ತ ಸದಾಕಾಲವೂ ಇರುತ್ತಾರೆ ಎಂದು ನಾವು ಮೋಶೆಯ ನಿಯಮದಿಂದ ಕೇಳಿದ್ದೇವೆ. ಹಾಗಾದರೆ ಮನುಷ್ಯಪುತ್ರನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುವುದು ಹೇಗೆ? ಈ ಮನುಷ್ಯಪುತ್ರನು ಯಾರು?” ಎಂದು ಕೇಳಿದರು. (aiōn g165)
35 Ուստի Յիսուս ըսաւ անոնց. «Քի՛չ մը ատեն ալ լոյսը ձեզի հետ է. քալեցէ՛ք՝ մինչ տակաւին լոյսը ունիք, որպէսզի խաւարը չհասնի ձեր վրայ. որովհետեւ խաւարի մէջ քալողը չի գիտեր թէ ո՛ւր կ՚երթայ:
ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮ ನಡುವೆ ಇರುತ್ತದೆ. ಕತ್ತಲು ನಿಮ್ಮನ್ನು ಕವಿಯುವುದಕ್ಕೆ ಮುಂಚೆ, ನಿಮಗೆ ಬೆಳಕಿರುವಾಗಲೇ ನಡೆಯಿರಿ. ಕತ್ತಲಿನಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯದು.
36 Մինչ լոյսը ունիք՝ հաւատացէ՛ք այդ լոյսին, որպէսզի լոյսի որդիներ ըլլաք»: Յիսուս այս բաները խօսեցաւ, ապա գնաց՝ ինքզինք ծածկելով անոնց աչքերէն:
ನೀವು ಬೆಳಕಿನ ಪುತ್ರರಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ,” ಎಂದರು. ಯೇಸು ಇವುಗಳನ್ನು ಹೇಳಿ, ಅವರಿಂದ ಹೊರಟುಹೋಗಿ ಅಡಗಿಕೊಂಡರು.
37 Թէպէտ այնքան նշաններ ըրած էր անոնց առջեւ, անոնք չէին հաւատար իրեն.
ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಜನರು ಅವರನ್ನು ನಂಬಲಿಲ್ಲ.
38 որպէսզի իրագործուի Եսայի մարգարէին խօսքը՝ որ ըսած էր. «Տէ՛ր, ո՞վ հաւատաց մեր տուած լուրին, ու Տէրոջ բազուկը որո՞ւն յայտնուեցաւ»:
ಇದರಿಂದ, “ಸ್ವಾಮೀ, ನಮ್ಮ ಸುದ್ದಿಯನ್ನು ಯಾರು ನಂಬಿದರು? ಕರ್ತ ಆಗಿರುವವರ ಬಾಹುವು ಯಾರಿಗೆ ಪ್ರಕಟವಾಯಿತು?” ಎಂದು ಪ್ರವಾದಿ ಯೆಶಾಯನು ನುಡಿದದ್ದು ನೆರವೇರಿತು.
39 Չէին կրնար հաւատալ՝ քանի որ Եսայի դարձեալ ըսած է.
ಅವರು ನಂಬಲಾರದೆ ಹೋದದ್ದರಿಂದ ಯೆಶಾಯನು ಮತ್ತೊಂದು ಕಡೆ ಹೇಳಿದ್ದೇನೆಂದರೆ:
40 «Կուրցուց անոնց աչքերը եւ կարծրացուց անոնց սիրտը, որպէսզի չտեսնեն իրենց աչքերով, չհասկնան իրենց սիրտով ու դարձի չգան, եւ ես չբժշկեմ զանոնք»:
“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ದೇವರು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣ ಮಾಡಿದರು.”
41 Եսայի ըսաւ ասիկա՝ երբ տեսաւ անոր փառքը ու խօսեցաւ անոր մասին:
ಯೆಶಾಯನು ಯೇಸುವಿನ ಮಹಿಮೆಯನ್ನು ಕಂಡಿದ್ದರಿಂದ ಅವರ ವಿಷಯವಾಗಿ ಇವುಗಳನ್ನು ಹೇಳಿದನು.
42 Սակայն միաժամանակ՝ պետերէն ալ շատեր հաւատացին իրեն. բայց չէին դաւաներ զայն՝ Փարիսեցիներուն պատճառով, որպէսզի չվռնտուին ժողովարանէն.
ಆದರೂ ಅಧಿಕಾರಿಗಳಲ್ಲಿ ಅನೇಕರು ಆ ಸಮಯದಲ್ಲಿ ಯೇಸುವನ್ನು ನಂಬಿದರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕಾರ ಆಗಬಾರದೆಂದು ಅವರು ತಮ್ಮ ನಂಬಿಕೆಯನ್ನು ಬಹಿರಂಗವಾಗಿ ಅರಿಕೆ ಮಾಡಲಿಲ್ಲ.
43 որովհետեւ աւելի սիրեցին մարդոց փառքը՝ քան Աստուծոյ փառքը:
ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.
44 Յիսուս կ՚աղաղակէր. «Ա՛ն որ կը հաւատայ ինծի, կը հաւատայ ո՛չ թէ ինծի, հապա՝ զիս ղրկողի՛ն.
ಯೇಸು, ಕೂಗಿ ಹೇಳಿದ್ದೇನೆಂದರೆ, “ನನ್ನನ್ನು ನಂಬುವವರು ನನ್ನಲ್ಲಿ ಅಲ್ಲ, ನನ್ನನ್ನು ಕಳುಹಿಸಿಕೊಟ್ಟ ತಂದೆಯಲ್ಲಿಯೇ ವಿಶ್ವಾಸವಿಡುತ್ತಾರೆ.
45 եւ ա՛ն որ կը տեսնէ զիս, կը տեսնէ զիս ղրկո՛ղը:
ನನ್ನನ್ನು ನೋಡುವವರು ನನ್ನನ್ನು ಕಳುಹಿಸಿದ ತಂದೆಯನ್ನೇ ಕಾಣುತ್ತಾರೆ.
46 Ես աշխարհ եկայ իբր լոյս, որպէսզի ո՛վ որ հաւատայ ինծի՝ չմնայ խաւարի մէջ:
ನನ್ನಲ್ಲಿ ನಂಬಿಕೆಯಿಡುವವರು ಕತ್ತಲೆಯಲ್ಲಿ ಉಳಿಯಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
47 Եթէ մէկը լսէ իմ խօսքերս ու չհաւատայ՝ ես չեմ դատեր զինք, քանի որ ես եկայ՝ ո՛չ թէ դատելու աշխարհը, հապա՝ փրկելու աշխարհը:
“ಯಾರು ನನ್ನ ಮಾತುಗಳನ್ನು ಕೇಳಿಯೂ ಅವುಗಳನ್ನು ಕೈಕೊಂಡು ನಡೆಯದೆ ಹೋದರೆ ನಾನು ಅವರಿಗೆ ಈಗ ತೀರ್ಪು ಮಾಡುವುದಿಲ್ಲ. ಏಕೆಂದರೆ ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವುದಕ್ಕಾಗಿಯೇ ನಾನು ಬಂದಿದ್ದೇನೆ.
48 Ա՛ն որ կ՚անարգէ զիս եւ չ՚ընդունիր իմ խօսքերս, ունի մէկը՝ որ կը դատէ զինք. այն խօսքը՝ որ ես ըսի, անիկա՛ պիտի դատէ զինք՝ վերջին օրը:
ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದವರಿಗೆ ತೀರ್ಪು ಮಾಡುವಂಥದ್ದು ಒಂದು ಇದೆ. ಅದು ನಾನು ಮಾತನಾಡಿದ ವಾಕ್ಯವೇ, ಅದೇ ಕಡೇ ದಿನದಲ್ಲಿ ಅವರಿಗೆ ತೀರ್ಪು ಮಾಡುವುದು.
49 Որովհետեւ ես ինձմէ չխօսեցայ, հապա Հայրը՝ որ ղրկեց զիս, ի՛նք պատուիրեց ինծի թէ ի՛նչ պիտի ըսեմ եւ ի՛նչ պիտի խօսիմ:
ಏಕೆಂದರೆ ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ. ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕು ಎಂದು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞೆ ಕೊಟ್ಟಿದ್ದಾರೆ.
50 Եւ գիտեմ թէ անոր պատուիրածը՝ յաւիտենական կեանքն է. ուրեմն ինչ որ կը խօսիմ, ա՛յնպէս կը խօսիմ՝ ինչպէս Հայրը ըսաւ ինծի»: (aiōnios g166)
ಅವರ ಆಜ್ಞೆಯು ನಿತ್ಯಜೀವಕ್ಕೆ ಮಾರ್ಗವಾಗಿದೆ ಎಂದು ನಾನು ಬಲ್ಲೆನು. ಆದ್ದರಿಂದ, ತಂದೆಯು ನನಗೆ ಹೇಳಿದಂತೆಯೇ ಮಾತನಾಡುತ್ತೇನೆ,” ಎಂದು ಹೇಳಿದರು. (aiōnios g166)

< ՅՈՎՀԱՆՆՈԻ 12 >