< ՅՈՎՀԱՆՆՈԻ 6 >

1 Ասկէ ետք, Յիսուս գնաց Գալիլեայի՝ այսինքն Տիբերիայի ծովուն միւս կողմը:
ಇವುಗಳಾದ ಮೇಲೆ ಯೇಸು ತಿಬೇರಿಯದ ಗಲಿಲಾಯ ಸರೋವರದ ಆಚೆಗೆ ಹೋದರು.
2 Մեծ բազմութիւն մը կը հետեւէր անոր, որովհետեւ կը տեսնէին այն նշանները՝ որ կ՚ընէր հիւանդներուն վրայ:
ಯೇಸು ರೋಗಿಗಳಲ್ಲಿ ನಡೆಸಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ ಜನರ ದೊಡ್ಡ ಗುಂಪು ಯೇಸುವನ್ನು ಹಿಂಬಾಲಿಸಿತು.
3 Յիսուս լեռը ելաւ ու նստաւ հոն՝ իր աշակերտներուն հետ:
ಯೇಸು ಬೆಟ್ಟವನ್ನೇರಿ ಅಲ್ಲಿ ತಮ್ಮ ಶಿಷ್ಯರೊಂದಿಗೆ ಕುಳಿತುಕೊಂಡರು.
4 Հրեաներուն Զատիկի տօնը մօտ էր:
ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾಗಿತ್ತು.
5 Երբ Յիսուս աչքերը բարձրացուց ու տեսաւ թէ մեծ բազմութիւն մը կու գար իրեն, ըսաւ Փիլիպպոսի. «Ուրկէ՞ հաց գնենք՝ որպէսզի ասոնք ուտեն»:
ಯೇಸು ಕಣ್ಣೆತ್ತಿ ನೋಡಿ ಮತ್ತು ಜನರ ದೊಡ್ಡ ಗುಂಪು ಅವರ ಕಡೆಗೆ ಬರುವುದನ್ನು ಕಂಡು ಫಿಲಿಪ್ಪನಿಗೆ, “ಇವರು ಊಟ ಮಾಡಲು ನಾವು ರೊಟ್ಟಿಯನ್ನು ಎಲ್ಲಿಂದ ಕೊಂಡುಕೊಳ್ಳೋಣ?” ಎಂದರು.
6 (Ասիկա կ՚ըսէր՝ զայն փորձելու համար, քանի որ ինք գիտէր թէ ի՛նչ պիտի ընէր: )
ಅವನನ್ನು ಪರೀಕ್ಷಿಸುವುದಕ್ಕಾಗಿ ಯೇಸು ಇದನ್ನು ಹೇಳಿದರು. ಏಕೆಂದರೆ ತಾನು ಮಾಡಲಿರುವುದು ಏನೆಂದು ಯೇಸುವಿಗೆ ತಿಳಿದಿತ್ತು.
7 Փիլիպպոս պատասխանեց անոր. «Երկու հարիւր դահեկանի հաց չի բաւեր անոնց, որպէսզի իւրաքանչիւրը քիչ մը առնէ»:
ಫಿಲಿಪ್ಪನು ಯೇಸುವಿಗೆ, “ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಆರು ತಿಂಗಳ ಕೂಲಿಯಷ್ಟು ರೊಟ್ಟಿಗಳೂ ಅವರಿಗೆ ಸಾಲುವುದಿಲ್ಲ,” ಎಂದನು.
8 Իր աշակերտներէն մէկը, Սիմոն Պետրոսի եղբայրը՝ Անդրէաս, ըսաւ իրեն.
ಆಗ ಯೇಸುವಿನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು
9 «Հոս պատանի մը կայ, որ ունի հինգ գարիէ նկանակ ու երկու ձուկ. բայց ի՞նչ են անոնք՝ այդչափ մարդոց համար»:
ಯೇಸುವಿಗೆ, “ಇಲ್ಲಿ ಒಬ್ಬ ಹುಡುಗನ ಬಳಿ ಐದು ಜವೆಗೋಧಿಯ ರೊಟ್ಟಿಗಳೂ ಎರಡು ಮೀನುಗಳೂ ಇವೆ. ಆದರೆ ಅಷ್ಟೊಂದು ಜನರಿಗೆ ಇವು ಹೇಗೆ ಸಾಕಾಗುತ್ತವೆ?” ಎಂದನು.
10 Յիսուս ըսաւ. «Նստեցուցէ՛ք այդ մարդիկը»: Հոն առատ խոտ կար, ու մարդիկը նստան՝ թիւով հինգ հազարի չափ:
ಯೇಸು, “ಜನರನ್ನು ಊಟಕ್ಕೆ ಕುಳಿತುಕೊಳ್ಳಲು ಹೇಳಿರಿ,” ಎಂದರು. ಆ ಸ್ಥಳದಲ್ಲಿ ಬಹಳ ಹುಲ್ಲು ಇದ್ದುದರಿಂದ ಜನರೆಲ್ಲರೂ ಕುಳಿತುಕೊಂಡರು, ಗಂಡಸರೇ ಐದು ಸಾವಿರ ಮಂದಿ ಇದ್ದರು.
11 Յիսուս առաւ նկանակները, շնորհակալ եղաւ եւ բաշխեց աշակերտներուն, աշակերտներն ալ՝ նստողներուն. նմանապէս ձուկերէն՝ ո՛րչափ որ ուզեցին:
ಆಮೇಲೆ ಯೇಸು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಬೇಕಾದಷ್ಟು ಹಂಚಿದರು. ಅದೇ ರೀತಿಯಲ್ಲಿ ಮೀನುಗಳನ್ನು ಅವರಿಗೆ ಹಂಚಿದರು.
12 Երբ կշտացան՝ ըսաւ իր աշակերտներուն. «Ժողվեցէ՛ք աւելցած բեկորները, որպէսզի ոչինչ կորսուի»:
ಅವರೆಲ್ಲರೂ ತಿಂದು ತೃಪ್ತಿಯಾದ ಮೇಲೆ ಯೇಸು ತಮ್ಮ ಶಿಷ್ಯರಿಗೆ, “ಏನೂ ನಷ್ಟವಾಗದಂತೆ ಉಳಿದ ತುಂಡುಗಳನ್ನು ಕೂಡಿಸಿರಿ,” ಎಂದರು.
13 Ուստի ժողվեցին, եւ տասներկու կողով լեցուցին այդ հինգ գարիէ նկանակներէն մնացած բեկորներով, որոնք ուտողներէն աւելցան:
ಅದರಂತೆ ಅವರು ಐದು ಜವೆಗೋಧಿಯ ರೊಟ್ಟಿಗಳಲ್ಲಿ ತಿಂದವರಿಂದ ಉಳಿದ ತುಂಡುಗಳನ್ನು ಕೂಡಿಸಿ, ಹನ್ನೆರಡು ಬುಟ್ಟಿಗಳಲ್ಲಿ ತುಂಬಿದರು.
14 Իսկ մարդիկը, երբ տեսան Յիսուսի ըրած նշանը, կ՚ըսէին. «Ճշմա՛րտապէս ասիկա՛ է այն մարգարէն, որ աշխարհ պիտի գար»:
ಆ ಜನರು ಯೇಸು ಮಾಡಿದ ಸೂಚಕಕಾರ್ಯವನ್ನು ಕಂಡು, “ಸತ್ಯವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಇವರೇ,” ಎಂದರು.
15 Ուրեմն Յիսուս, գիտնալով թէ պիտի գան յափշտակելու զինք՝ որպէսզի թագաւոր ընեն զինք, դարձեալ լեռը գնաց՝ առանձին:
ಅವರು ಬಂದು ತನ್ನನ್ನು ಹಿಡಿದುಕೊಂಡುಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ಯೇಸು ತಿಳಿದು ತಾವೊಬ್ಬರೇ ಪುನಃ ಬೆಟ್ಟದ ಕಡೆಗೆ ಹೋದರು.
16 Երբ իրիկուն եղաւ՝ իր աշակերտները իջան ծովեզերքը,
ಸಂಜೆಯಾದಾಗ ಯೇಸುವಿನ ಶಿಷ್ಯರು ಸರೋವರಕ್ಕೆ ಹೋಗಿ,
17 ու նաւ մտնելով կ՚երթային ծովուն միւս կողմը՝ Կափառնայում: Արդէն մթնցած էր, բայց դեռ Յիսուս եկած չէր իրենց:
ದೋಣಿಯನ್ನು ಹತ್ತಿ ಸರೋವರ ಮಾರ್ಗವಾಗಿ ಕಪೆರ್ನೌಮಿಗೆ ಸಾಗಿದರು. ಆಗಲೇ ಕತ್ತಲಾಗಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.
18 Ծովն ալ ալեկոծ էր՝ սաստիկ փչող հովէն:
ಆಗ ರಭಸವಾದ ಗಾಳಿಯು ಬೀಸಿದ್ದರಿಂದ ಸರೋವರವು ಅಲ್ಲೋಲಕಲ್ಲೋಲವಾಯಿತು.
19 Երբ թի վարելով քսանհինգ կամ երեսուն ասպարէզի չափ գացին՝ տեսան Յիսուսը, որ կը մօտենար նաւուն՝ ծովուն վրայ քալելով, ու վախցան:
ಅವರು ದೋಣಿಯನ್ನು ನಡೆಸುತ್ತಾ ಸುಮಾರು ಐದಾರು ಕಿಲೋಮೀಟರಿನಷ್ಟು ದೂರ ಹೋದ ಮೇಲೆ ಯೇಸು ಸರೋವರದ ಮೇಲೆ ನಡೆದು ದೋಣಿಯ ಕಡೆಗೆ ಸಮೀಪಿಸುತ್ತಿರುವುದನ್ನು ಅವರು ಕಂಡು, ಭಯಪಟ್ಟರು.
20 Բայց ինք ըսաւ անոնց. «Ե՛ս եմ, մի՛ վախնաք»:
ಆದರೆ ಯೇಸು ಅವರಿಗೆ, “ನಾನೇ, ಭಯಪಡಬೇಡಿರಿ,” ಎಂದರು.
21 Ուստի ուզեցին ընդունիլ զինք նաւուն մէջ. եւ նաւը իսկոյն հասաւ այն երկիրը՝ ուր կ՚երթային:
ಆಗ ಶಿಷ್ಯರು ಯೇಸುವನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಅಷ್ಟರಲ್ಲಿ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಸೇರಿತು.
22 Հետեւեալ օրը՝ բազմութիւնը, որ ծովուն միւս եզերքն էր, տեսաւ թէ ուրիշ նաւակ չկար այն մէկէն զատ՝ որուն մէջ անոր աշակերտները մտած էին, եւ թէ Յիսուս իր աշակերտներուն հետ մտած չէր նաւակը, այլ անոր աշակերտները առանձին գացեր էին
ಮರುದಿನ ಅಲ್ಲಿ ಒಂದೇ ದೋಣಿಯ ಹೊರತು ಬೇರೆ ಇರಲಿಲ್ಲವೆಂದೂ ಯೇಸುವಿನ ಶಿಷ್ಯರು ಮಾತ್ರ ಆ ದೋಣಿಯಲ್ಲಿ ಹೋದರೆಂದೂ ಯೇಸು ತಮ್ಮ ಶಿಷ್ಯರ ಸಂಗಡ ದೋಣಿಯಲ್ಲಿ ಹೋಗಲಿಲ್ಲವೆಂದೂ ಸರೋವರದ ಆಚೆಯಲ್ಲಿ ನಿಂತಿದ್ದ ಜನರು ಅರಿತುಕೊಂಡರು.
23 (բայց Տիբերիայէն ուրիշ նաւակներ եկան այն տեղին մօտ, ուր կերեր էին հացը՝ Տէրոջ շնորհակալ ըլլալէն ետք):
ಬೇರೆ ದೋಣಿಗಳು ತಿಬೇರಿಯದಿಂದ ಹೊರಟು, ಕರ್ತ ಯೇಸು ಕೃತಜ್ಞತೆ ಸಲ್ಲಿಸಿ ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.
24 Ուրեմն բազմութիւնը՝ տեսնելով թէ ո՛չ Յիսուս հոն է, ո՛չ ալ անոր աշակերտները, իրե՛նք ալ նաւ մտան եւ գացին Կափառնայում՝ փնտռելու Յիսուսը:
ಆಗ ಯೇಸು ಮತ್ತು ಅವರ ಶಿಷ್ಯರು ಅಲ್ಲಿ ಇಲ್ಲದಿರುವುದನ್ನು ಜನರು ನೋಡಿ, ದೋಣಿಗಳಲ್ಲಿ ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.
25 Երբ գտան զինք՝ ծովուն միւս եզերքը, ըսին իրեն. «Ռաբբի՛, ե՞րբ եկար հոս»:
ಜನರು ಯೇಸುವನ್ನು ಸರೋವರದ ಆಚೆ ಕಡೆಯಲ್ಲಿ ಕಂಡು ಅವರಿಗೆ, “ಗುರುವೇ, ನೀವು ಇಲ್ಲಿಗೆ ಬಂದದ್ದು ಯಾವಾಗ?” ಎಂದರು.
26 Յիսուս պատասխանեց անոնց. «Ճշմա՛րտապէս, ճշմա՛րտապէս կը յայտարարեմ ձեզի. “Դուք զիս կը փնտռէք՝ ո՛չ թէ քանի որ նշաններ տեսաք, հապա՝ որովհետեւ նկանակներէն կերաք ու կշտացաք”:
ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.
27 Գացէ՛ք, գործեցէ՛ք ո՛չ թէ կորստական կերակուրին համար, հապա այն կերակուրին համար՝ որ կը մնայ յաւիտենական կեանքին մէջ, եւ մարդու Որդի՛ն պիտի տայ ձեզի, որովհետեւ Հայրը՝ Աստուած զի՛նք կնքեց»: (aiōnios g166)
ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು. (aiōnios g166)
28 Ուրեմն ըսին իրեն. «Ի՞նչ ընենք՝ որպէսզի կատարենք Աստուծոյ գործերը»:
ಆಗ ಅವರು ಯೇಸುವಿಗೆ, “ನಾವು ದೇವರ ಕಾರ್ಯವನ್ನು ಮಾಡಬೇಕಾದರೆ ಏನು ಮಾಡಬೇಕು?” ಎಂದು ಕೇಳಿದ್ದಕ್ಕೆ,
29 Յիսուս պատասխանեց անոնց. «Սա՛ է Աստուծոյ գործը, որ հաւատաք անոր ղրկածին»:
ಯೇಸು ಅವರಿಗೆ, “ದೇವರು ಕಳುಹಿಸಿದ ನನ್ನನ್ನು ನೀವು ನಂಬುವುದೇ ದೇವರು ಮೆಚ್ಚುವ ಕಾರ್ಯ,” ಎಂದರು.
30 Ուստի ըսին իրեն. «Բայց դուն ի՞նչ նշան կ՚ընես, որ տեսնենք ու հաւատանք քեզի. ի՞նչ կը գործես:
ಅದಕ್ಕೆ ಅವರು ಯೇಸುವಿಗೆ, “ಹಾಗಾದರೆ ನಾವು ನೋಡಿ ನಿಮ್ಮನ್ನು ನಂಬುವಂತೆ ಯಾವ ಸೂಚಕಕಾರ್ಯವನ್ನು ಮಾಡುತ್ತೀರಿ?
31 Մեր հայրերը անապատին մէջ մանանա՛ն կերան, ինչպէս գրուած է. “Երկինքէն հաց տուաւ անոնց՝ որպէսզի ուտեն”»:
‘ಅವರಿಗೆ ಪರಲೋಕದಿಂದ ರೊಟ್ಟಿ ಕೊಡಲಾಯಿತು’ ಎಂದು ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅರಣ್ಯದಲ್ಲಿ ಮನ್ನಾ ಎಂಬ ಆಹಾರವನ್ನು ತಿಂದರು,” ಎಂದು ಕೇಳಿದರು.
32 Իսկ Յիսուս ըսաւ անոնց. «Ճշմա՛րտապէս, ճշմա՛րտապէս կը յայտարարեմ ձեզի. “Մովսէս չտուաւ ձեզի երկնային հացը, բայց իմ Հա՛յրս կու տայ ձեզի ճշմարիտ երկնային հացը”.
ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮಗೆ ಪರಲೋಕದಿಂದ ರೊಟ್ಟಿಯನ್ನು ಮೋಶೆ ಕೊಡಲಿಲ್ಲ. ನನ್ನ ತಂದೆಯೇ ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದಲೇ ಕೊಡುತ್ತಾರೆ.
33 որովհետեւ Աստուծոյ հացը ա՛ն է, որ կ՚իջնէ երկինքէն եւ կեանք կու տայ աշխարհի»:
ಪರಲೋಕದಿಂದ ಇಳಿದುಬಂದು ಲೋಕಕ್ಕೆ ಜೀವವನ್ನು ಕೊಡುವ ದೇವರ ರೊಟ್ಟಿಯು ನಾನೇ,” ಎಂದರು.
34 Ուրեմն ըսին իրեն. «Տէ՛ր, ամէ՛ն ատեն տուր մեզի այդ հացը»:
ಅದಕ್ಕವರು ಯೇಸುವಿಗೆ, “ಸ್ವಾಮೀ, ಈ ರೊಟ್ಟಿಯನ್ನೇ ನಮಗೆ ಯಾವಾಗಲೂ ಕೊಡು,” ಎಂದರು.
35 Յիսուս ըսաւ անոնց. «Ե՛ս եմ կեանքի հացը. ա՛ն որ կու գայ ինծի՝ երբե՛ք պիտի չանօթենայ, եւ ա՛ն որ կը հաւատայ ինծի՝ պիտի չծարաւնայ:
ಯೇಸು ಅವರಿಗೆ, “ನಾನೇ ಜೀವದ ರೊಟ್ಟಿ. ನನ್ನ ಬಳಿಗೆ ಬರುವವರಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವರಿಗೆ ಎಂದಿಗೂ ದಾಹವಾಗುವುದಿಲ್ಲ.
36 Բայց ես ըսի ձեզի. “Դուք զիս տեսաք ալ, ու չէք հաւատար”:
ಆದರೆ, ‘ನೀವು ನನ್ನನ್ನು ಕಂಡಿದ್ದರೂ ನಂಬಲಿಲ್ಲ,’ ಎಂದು ನಾನು ನಿಮಗೆ ಹೇಳಿದೆನು.
37 Բոլոր անոնք որ Հայրը կու տայ ինծի՝ պիտի գան ինծի, եւ ա՛ն որ կու գայ ինծի՝ բնա՛ւ պիտի չվտարեմ:
ತಂದೆಯು ನನಗೆಂದು ಕೊಟ್ಟಿರುವ ಪ್ರತಿಯೊಬ್ಬರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವರನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.
38 Որովհետեւ ես իջայ երկինքէն՝ գործադրելու ո՛չ թէ ի՛մ կամքս, հապա անո՛ր կամքը՝ որ ղրկեց զիս:
ನಾನು ನನ್ನ ಚಿತ್ತವನ್ನು ಮಾಡುವುದಕ್ಕಲ್ಲ. ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ಮಾಡುವುದಕ್ಕೆ ಪರಲೋಕದಿಂದ ಬಂದೆನು.
39 Եւ զիս ղրկող Հօրը կամքը սա՛ է, որ ո՛չ մէկը կորսնցնեմ բոլոր անոնցմէ՝ որ ինք տուաւ ինծի, հապա յարուցանեմ զանոնք՝ վերջին օրը:
ನನ್ನನ್ನು ಕಳುಹಿಸಿಕೊಟ್ಟ ತಂದೆಯ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ ಕಡೆಯ ದಿನದಲ್ಲಿ ಅವರನ್ನು ಎಬ್ಬಿಸುವುದೇ.
40 Որովհետեւ զիս ղրկողին կամքը սա՛ է, որ ո՛վ որ տեսնէ Որդին ու հաւատայ իրեն՝ ունենայ յաւիտենական կեանքը. ե՛ս ալ պիտի յարուցանեմ զայն՝ վերջին օրը»: (aiōnios g166)
ನನ್ನ ತಂದೆಯ ಚಿತ್ತವೇನೆಂದರೆ ನನ್ನನ್ನು ನೋಡಿ ನನ್ನಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವುದೇ; ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು,” ಎಂದು ಹೇಳಿದರು. (aiōnios g166)
41 Ուստի Հրեաները կը տրտնջէին իրեն դէմ, որովհետեւ ըսաւ. «Ե՛ս եմ երկինքէն իջած հացը»,
“ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ,” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಯೇಸುವಿನ ವಿಷಯವಾಗಿ ಗೊಣಗುಟ್ಟಿ,
42 եւ կ՚ըսէին. «Ասիկա Յովսէփի որդին՝ Յիսուսը չէ՞, որուն հայրն ու մայրը կը ճանչնանք. հապա ի՞նչպէս ասիկա կ՚ըսէ. “Ես իջայ երկինքէն”»:
“ಈತನು ಯೋಸೇಫನ ಪುತ್ರ ಯೇಸು ಅಲ್ಲವೇ? ಈತನ ತಂದೆತಾಯಿ ನಮಗೆ ಗೊತ್ತಿಲ್ಲವೇ? ಹಾಗಾದರೆ, ‘ನಾನು ಪರಲೋಕದಿಂದ ಬಂದೆನು,’ ಎಂದು ಈತನು ಹೇಳುವುದು ಹೇಗೆ?” ಎಂದರು.
43 Յիսուս ալ պատասխանեց անոնց. «Մի՛ տրտնջէք ձեր մէջ:
ಯೇಸು ಅವರಿಗೆ, “ನಿಮ್ಮನಿಮ್ಮೊಳಗೆ ಗೊಣಗುಟ್ಟಬೇಡಿರಿ.
44 Ո՛չ մէկը կրնայ գալ ինծի՝ եթէ զիս ղրկող Հայրը չքաշէ զայն. ու ես պիտի յարուցանեմ զայն՝ վերջին օրը:
ನನ್ನನ್ನು ಕಳುಹಿಸಿದ ತಂದೆ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬರಲಾರರು. ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು.
45 Մարգարէներուն մէջ գրուած է. “Բոլորն ալ սորված պիտի ըլլան Աստուծմէ”: Ո՛վ որ կը լսէ Հօրմէն ու կը սորվի՝ ինծի՛ կու գայ:
‘ಅವರೆಲ್ಲರೂ ದೇವರಿಂದಲೇ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ.
46 Ո՛չ մէկը տեսած է Հայրը, բացի անկէ՝ որ Աստուծմէ է. անիկա՛ տեսած է Հայրը:
ದೇವರಿಂದ ಬಂದಿರುವ ನಾನೇ ತಂದೆಯನ್ನು ನೋಡಿದ್ದೇನೆ, ಬೇರೆ ಯಾರೂ ತಂದೆಯನ್ನು ನೋಡಲಿಲ್ಲ.
47 Ճշմա՛րտապէս, ճշմա՛րտապէս կը յայտարարեմ ձեզի. “Ա՛ն որ կը հաւատայ ինծի՝ ունի՛ յաւիտենական կեանքը”: (aiōnios g166)
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. (aiōnios g166)
48 Ե՛ս եմ կեանքի հացը:
ನಾನೇ ಜೀವದ ರೊಟ್ಟಿ.
49 Ձեր հայրերը կերան մանանան անապատին մէջ, բայց մեռան:
ನಿಮ್ಮ ಪಿತೃಗಳು ಅರಣ್ಯದಲ್ಲಿ ‘ಮನ್ನಾ’ ತಿಂದರೂ ಸತ್ತುಹೋದರು.
50 Ա՛յս է այն հացը՝ որ կ՚իջնէ երկինքէն, որպէսզի եթէ մէկը ուտէ ասկէ՝ չմեռնի:
ಯಾರು ತಿಂದರೂ ಸಾಯದೇ ಇರುವಂತೆ ಪರಲೋಕದಿಂದ ಇಳಿದು ಬಂದ ಜೀವದ ರೊಟ್ಟಿ ಇದೇ.
51 Ե՛ս եմ կենարար հացը՝ որ իջայ երկինքէն: Եթէ մէկը ուտէ այս հացէն՝ պիտի ապրի յաւիտեա՛ն. եւ այն հացը որ ես պիտի տամ՝ իմ մարմի՛նս է, որ պիտի տամ աշխարհի կեանքին համար»: (aiōn g165)
ನಾನೇ ಪರಲೋಕದಿಂದ ಬಂದ ಜೀವದ ರೊಟ್ಟಿ. ಈ ರೊಟ್ಟಿಯನ್ನು ಯಾರು ತಿನ್ನುವರೋ ಅವರು ಸದಾಕಾಲವೂ ಬದುಕುವರು. ಲೋಕದ ಜೀವಕ್ಕಾಗಿ ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ,” ಎಂದರು. (aiōn g165)
52 Ուստի Հրեաները կը վիճէին իրարու հետ եւ կ՚ըսէին. «Ի՞նչպէս ասիկա կրնայ տալ մեզի իր մարմինը՝ ուտելու»:
ಆದ್ದರಿಂದ ಯೆಹೂದ್ಯರು ಒಬ್ಬರಿಗೊಬ್ಬರು ಚರ್ಚೆಮಾಡುತ್ತಾ, “ಈ ಮನುಷ್ಯನು ತನ್ನ ಮಾಂಸವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೆ?” ಎಂದರು.
53 Իսկ Յիսուս ըսաւ անոնց. «Ճշմա՛րտապէս, ճշմա՛րտապէս կը յայտարարեմ ձեզի. “Եթէ չուտէք մարդու Որդիին մարմինը ու չխմէք անոր արիւնը, կեանքը չէք ունենար ձեր մէջ”:
ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಪುತ್ರನಾದ ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ಜೀವವಿರುವುದಿಲ್ಲ.
54 Ո՛վ որ կ՚ուտէ իմ մարմինս եւ կը խմէ իմ արիւնս՝ ունի յաւիտենական կեանքը, ու ես պիտի յարուցանեմ զայն՝ վերջին օրը. (aiōnios g166)
ಯಾರು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾರೋ ಅವರು ನಿತ್ಯಜೀವವನ್ನು ಹೊಂದಿದ್ದಾರೆ, ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು. (aiōnios g166)
55 որովհետեւ իմ մարմինս ճշմա՛րտապէս կերակուր է, եւ իմ արիւնս՝ ճշմա՛րտապէս խմելիք:
ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ.
56 Ա՛ն որ կ՚ուտէ իմ մարմինս ու կը խմէ իմ արիւնս՝ անիկա՛ կը բնակի իմ մէջս, եւ ես՝ անոր մէջ:
ಯಾರು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾರೋ ಅವರು ನನ್ನಲ್ಲಿ ನೆಲೆಸಿರುತ್ತಾರೆ. ನಾನು ಅವರಲ್ಲಿ ನೆಲೆಸಿರುತ್ತೇನೆ.
57 Ինչպէս ապրող Հայրը ղրկեց զիս, ու ես կ՚ապրիմ Հօրը միջոցով, այնպէս ալ ա՛ն որ կ՚ուտէ զիս՝ ի՛նք ալ պիտի ապրի ինձմով:
ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿದ್ದಾರೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುವಂತೆಯೇ ನನ್ನನ್ನು ತಿನ್ನುವವರು ನನ್ನ ನಿಮಿತ್ತವಾಗಿಯೇ ಜೀವಿಸುವರು.
58 Ա՛յս է այն հացը՝ որ իջած է երկինքէն: Ա՛ն որ ուտէ այս հացը՝ պիտի ապրի յաւիտեա՛ն. ո՛չ թէ ձեր հայրերուն պէս, որոնք կերան մանանան՝ բայց մեռան»: (aiōn g165)
ಪರಲೋಕದಿಂದ ಬಂದ ರೊಟ್ಟಿಯು ಇದೇ. ನಿಮ್ಮ ಪಿತೃಗಳು ‘ಮನ್ನಾ’ ತಿಂದರೂ ಸತ್ತರು. ಇದು ಹಾಗಲ್ಲ, ಈ ರೊಟ್ಟಿಯನ್ನು ತಿನ್ನುವವರು ಸದಾಕಾಲಕ್ಕೂ ಜೀವಿಸುವರು,” ಎಂದರು. (aiōn g165)
59 Այս բաները խօսեցաւ ժողովարանին մէջ, երբ կը սորվեցնէր Կափառնայումի մէջ:
ಕಪೆರ್ನೌಮಿನ ಸಭಾಮಂದಿರದಲ್ಲಿ ಬೋಧಿಸುತ್ತಿರುವಾಗ ಯೇಸು ಈ ಮಾತುಗಳನ್ನು ಹೇಳಿದರು.
60 Իսկ աշակերտներէն շատերը՝ երբ լսեցին՝ ըսին. «Խիստ է այդ խօսքը, ո՞վ կրնայ մտիկ ընել զայն»:
ಯೇಸುವಿನ ಶಿಷ್ಯರಲ್ಲಿ ಅನೇಕರು ಈ ಮಾತುಗಳನ್ನು ಕೇಳಿ, “ಇದು ಕಠಿಣವಾದ ಮಾತು. ಇದನ್ನು ಯಾರು ಪಾಲಿಸುವರು?” ಎಂದರು.
61 Երբ Յիսուս ինքնիրեն հասկցաւ թէ իր աշակերտները կը տրտնջեն ատոր համար, ըսաւ անոնց. «Ատիկա կը գայթակղեցնէ՞ ձեզ:
ತಮ್ಮ ಶಿಷ್ಯರು ಇದನ್ನು ಕುರಿತು ಗೊಣಗುಟ್ಟುತ್ತಾರೆಂದು ಯೇಸು ತಮ್ಮಲ್ಲಿ ತಿಳಿದುಕೊಂಡು ಅವರಿಗೆ, “ಇದು ನಿಮಗೆ ಬೇಸರವಾಯಿತೋ?
62 Հապա ի՞նչ պիտի մտածէք, եթէ տեսնէք մարդու Որդիին բարձրանալը հոն՝ ուր նախապէս էր:
ಹಾಗಾದರೆ ಮನುಷ್ಯಪುತ್ರನಾದ ನಾನು ಮೊದಲಿದ್ದ ಕಡೆಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?
63 Հոգի՛ն է կեանք տուողը. մարմինը օգո՛ւտ մը չունի: Այն խօսքերը որ կ՚ըսեմ ձեզի՝ Հոգի ու կեանք են:
ಬದುಕಿಸುವುದು ದೇವರ ಆತ್ಮವೇ, ನರಮಾಂಸವಾದರೋ ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ನುಡಿದ ಮಾತುಗಳೇ ದೇವರಾತ್ಮವೂ ಜೀವವೂ ಆಗಿರುತ್ತವೆ.
64 Բայց ձեր մէջ կան ոմանք՝ որ չեն հաւատար»: Որովհետեւ Յիսուս սկիզբէն գիտէր թէ որո՛նք են անոնք՝ որ չեն հաւատար, եւ ո՛վ է ան՝ որ պիտի մատնէ զինք:
ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ,” ಎಂದರು. ನಂಬದವರು ಯಾರೆಂದೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸು ಮೊದಲಿನಿಂದಲೂ ತಿಳಿದಿದ್ದರು.
65 Ու ըսաւ. «Ասո՛ր համար ըսի ձեզի. “Ո՛չ մէկը կրնայ գալ ինծի, եթէ իմ Հօրմէս տրուած չըլլայ անոր”»:
ಯೇಸು ಮುಂದುವರಿಸಿ ಹೇಳಿದ್ದೇನೆಂದರೆ, “ಯಾರನ್ನಾದರೂ ನನ್ನ ತಂದೆಯು ನನಗೆ ಕೊಟ್ಟರಷ್ಟೇ ಅವರು ನನ್ನ ಬಳಿಗೆ ಬರಲು ಸಾಧ್ಯ, ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ.”
66 Այս պատճառով իր աշակերտներէն շատեր հեռացան, եւ ա՛լ չէին շրջեր իրեն հետ:
ಅಂದಿನಿಂದ ಯೇಸುವಿನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟು ಹೋದರು ಮತ್ತು ಯೇಸುವಿನ ಸಂಗಡ ಸಂಚಾರ ಮಾಡಲಿಲ್ಲ.
67 Ուստի Յիսուս ըսաւ տասներկուքին. «Միթէ դո՞ւք ալ կ՚ուզէք երթալ»:
ಆದಕಾರಣ ಯೇಸು ಹನ್ನೆರಡು ಮಂದಿ ಶಿಷ್ಯರಿಗೆ, “ನೀವು ಸಹ ಹೋಗಬೇಕೆಂದು ಇದ್ದೀರಾ?” ಎಂದು ಕೇಳಲು,
68 Սիմոն Պետրոս պատասխանեց անոր. «Տէ՛ր, որո՞ւն պիտի երթանք. դո՛ւն ունիս յաւիտենական կեանքի խօսքերը: (aiōnios g166)
ಸೀಮೋನ್ ಪೇತ್ರನು ಯೇಸುವಿಗೆ, “ಸ್ವಾಮೀ, ನಾವು ಯಾರ ಬಳಿಗೆ ಹೋಗೋಣ? ನಿಮ್ಮಲ್ಲಿಯೇ ನಿತ್ಯಜೀವದ ವಾಕ್ಯಗಳಿವೆ. (aiōnios g166)
69 Մենք հաւատացինք ու գիտցանք թէ դո՛ւն ես Քրիստոսը՝ Աստուծոյ Որդին»:
ನೀವು ದೇವರ ಪರಿಶುದ್ಧರು ಎಂದು ನಾವು ನಂಬಿ ತಿಳಿದಿದ್ದೇವೆ,” ಎಂದನು.
70 Յիսուս պատասխանեց անոնց. «Ես չընտրեցի՞ ձեզ՝ տասներկուքդ. բայց ձեզմէ մէկը չարախօս է»:
ಅದಕ್ಕೆ ಯೇಸು ಅವರಿಗೆ, “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿಕೊಂಡೆನಲ್ಲವೇ? ಆದರೆ ನಿಮ್ಮಲ್ಲಿಯೂ ಒಬ್ಬನು ಪಿಶಾಚನಾಗಿದ್ದಾನೆ,” ಎಂದರು.
71 Ան կը խօսէր Իսկարիովտացի Սիմոնեան Յուդայի մասին, որովհետեւ անիկա՛ էր որ պիտի մատնէր զինք, թէպէտ տասներկուքէն մէկն էր:
ಸೀಮೋನನ ಮಗ ಇಸ್ಕರಿಯೋತ ಯೂದನ ವಿಷಯವಾಗಿ ಯೇಸು ಹೀಗೆ ಹೇಳಿದರು. ಏಕೆಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದ ಇವನೇ ಯೇಸುವನ್ನು ಹಿಡಿದು ಕೊಡುವುದಕ್ಕಿದ್ದನು.

< ՅՈՎՀԱՆՆՈԻ 6 >