< ՂՈԻԿԱՍ 11 >

1 Երբ տեղ մը կ՚աղօթէր, դադրելէն ետք իր աշակերտներէն մէկը ըսաւ իրեն. «Տէ՛ր, աղօթե՛լ սորվեցուր մեզի, ինչպէս Յովհաննէս սորվեցուց իր աշակերտներուն»:
ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆಮಾಡಿ ಮುಗಿಸಿದ ಮೇಲೆ, ಅವರ ಶಿಷ್ಯರಲ್ಲಿ ಒಬ್ಬನು ಅವರಿಗೆ, “ಕರ್ತದೇವರೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆಮಾಡುವುದಕ್ಕೆ ಕಲಿಸಿರಿ,” ಎಂದು ಕೇಳಿದನು.
2 Ուստի ըսաւ անոնց. «Երբ կ՚աղօթէք՝ ըսէ՛ք. “Հա՛յր մեր՝ որ երկինքն ես՝՝, քու անունդ սուրբ ըլլայ. քու թագաւորութիւնդ գայ. քու կամքդ ըլլայ, ինչպէս երկինքը՝ նոյնպէս երկրի վրայ՝՝:
ಯೇಸು ಅವರಿಗೆ, “ನೀವು ಪ್ರಾರ್ಥನೆ ಮಾಡುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, “ಪರಲೋಕದಲ್ಲಿರುವ ನಮ್ಮ ತಂದೆಯೇ, ನಿಮ್ಮ ನಾಮವು ಪರಿಶುದ್ಧವೆಂದು ಎಣಿಕೆಯಾಗಿರಲಿ, ನಿಮ್ಮ ರಾಜ್ಯವು ಬರಲಿ. ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.
3 Մեր ամէնօրեայ հացը՝ տո՛ւր մեզի օրէ օր.
ನಮ್ಮ ಅನುದಿನದ ಆಹಾರವನ್ನು ನಮಗೆ ಪ್ರತಿದಿನವೂ ದಯಪಾಲಿಸಿರಿ.
4 ներէ՛ մեզի մեր մեղքերը, քանի որ մենք ալ կը ներենք բոլոր անոնց՝ որ պարտապան են մեզի. ու մի՛ տանիր մեզ փորձութեան, հապա ազատէ՛ մեզ Չարէն՝՝”»:
ನಮಗೆ ಪಾಪಮಾಡಿದವರನ್ನು, ನಾವು ಕ್ಷಮಿಸಿದಂತೆಯೇ ನಮ್ಮ ಪಾಪಗಳನ್ನು ಕ್ಷಮಿಸಿರಿ. ನಮ್ಮನ್ನು ಶೋಧನೆಯೊಳಗೆ ಸೇರಿಸದೆ, ಕೇಡಿನಿಂದ ನಮ್ಮನ್ನು ತಪ್ಪಿಸಿ.”
5 Նաեւ ըսաւ անոնց. «Եթէ ձեզմէ մէկը՝՝ բարեկամ մը ունենայ, ու կէս գիշերին երթայ անոր եւ ըսէ. “Բարեկա՛մ, ինծի երե՛ք նկանակ փոխ տուր.
ಯೇಸು ಅವರಿಗೆ, “ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಸ್ನೇಹಿತನಿರಲಾಗಿ, ಮಧ್ಯರಾತ್ರಿಯಲ್ಲಿ ಅವನ ಬಳಿಗೆ ಹೋಗಿ ಅವನಿಗೆ, ‘ಸ್ನೇಹಿತನೇ, ಮೂರು ರೊಟ್ಟಿಗಳನ್ನು ನನಗೆ ಸಾಲವಾಗಿ ಕೊಡು;
6 որովհետեւ մէկ բարեկամս ճամբորդած ատեն ինծի եկաւ, եւ ոչինչ ունիմ՝ անոր հրամցնելու”,
ಏಕೆಂದರೆ ನನ್ನ ಒಬ್ಬ ಸ್ನೇಹಿತನು ಪ್ರಯಾಣಮಾಡಿ ನನ್ನ ಬಳಿಗೆ ಬಂದಿದ್ದಾನೆ, ಅವನಿಗೆ ಬಡಿಸುವುದಕ್ಕೆ ನನ್ನಲ್ಲಿ ಏನೂ ಇಲ್ಲ,’ ಎಂದು ಕೇಳಲು
7 ու եթէ ան ներսէն պատասխանէ. “Զիս մի՛ անհանգստացներ. արդէն դուռը գոցուած է, ու զաւակներս իմ քովս՝ անկողինին մէջ են. չեմ կրնար կանգնիլ եւ քեզի հաց տալ”,
ಅವನು ಒಳಗಿನಿಂದಲೇ ಇವನಿಗೆ ಉತ್ತರವಾಗಿ, ‘ನನ್ನನ್ನು ತೊಂದರೆಪಡಿಸಬೇಡ. ಬಾಗಿಲು ಈಗ ಮುಚ್ಚಿದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆ ಮಲಗಿದ್ದಾರೆ. ನಾನೆದ್ದು ಕೊಡಲಾರೆನು,’ ಎಂದು ಹೇಳುವನು.
8 կը յայտարարեմ ձեզի. “Թէեւ բարեկամութեան համար ոտքի չելլէ՝ անոր տալու, անոր պատճառած տաղտուկին՝՝ համար պիտի կանգնի ու պէտք եղածը տայ անոր”:
ಆದರೆ ನಾನು ನಿಮಗೆ ಹೇಳುವುದೇನೆಂದರೆ, ಅವನು ಸ್ನೇಹಿತನಾಗಿರುವುದರಿಂದ ಎದ್ದು ಇವನಿಗೆ ಕೊಡದೆಹೋದರೂ ಮೇಲಿಂದ ಮೇಲೆ ನಾಚಿಕೆಪಡದೆ ಬೇಡುವುದರಿಂದ ಎದ್ದು ಇವನಿಗೆ ಬೇಕಾದಷ್ಟು ಕೊಡುವನು.
9 Ես ալ կը յայտարարեմ ձեզի. “Խնդրեցէ՛ք՝ եւ պիտի տրուի ձեզի. փնտռեցէ՛ք՝ ու պիտի գտնէք. դուռը բախեցէ՛ք՝ եւ պիտի բացուի ձեզի:
“ಕೇಳಿಕೊಳ್ಳಿರಿ ನಿಮಗೆ ಕೊಡಲಾಗುವುದು; ಹುಡುಕಿರಿ ನಿಮಗೆ ಸಿಗುವುದು; ತಟ್ಟಿರಿ ನಿಮಗೆ ಬಾಗಿಲು ತೆರೆಯಲಾಗುವುದು.
10 Որովհետեւ ո՛վ որ խնդրէ՝ կը ստանայ, ո՛վ որ փնտռէ՝ կը գտնէ, եւ ո՛վ որ դուռը բախէ՝ պիտի բացուի անոր:
ಬೇಡಿಕೊಳ್ಳುವ ಪ್ರತಿಯೊಬ್ಬರು ಪಡೆದುಕೊಳ್ಳುವರು; ಹುಡುಕುವವರಿಗೆ ಸಿಗುವುದು; ತಟ್ಟುವವರಿಗೆ ಬಾಗಿಲು ತೆರೆಯಲಾಗುವುದು.
11 Եթէ որդի մը հաց ուզէ ձեզմէ ոեւէ մէկէն՝ որ հայր է, միթէ քա՞ր պիտի տայ անոր. կամ եթէ ձուկ ուզէ, միթէ ձուկին տեղ օ՞ձ պիտի տայ անոր.
“ನಿಮ್ಮಲ್ಲಿ ತಂದೆಯಾಗಿರುವಾತನು, ತನ್ನ ಮಗನು ರೊಟ್ಟಿಯನ್ನು ಕೇಳಿದರೆ ಮಗನಿಗೆ ಕಲ್ಲನ್ನು ಕೊಡುವನೇ, ಮೀನನ್ನು ಕೇಳಿದರೆ, ಮೀನಿಗೆ ಬದಲಾಗಿ ಹಾವನ್ನು ಕೊಡುವನೇ?
12 կամ եթէ հաւկիթ ուզէ, միթէ կարի՞ճ պիտի տայ անոր:
ಇಲ್ಲವೆ ಮೊಟ್ಟೆಯನ್ನು ಕೇಳಿದರೆ, ಅವನಿಗೆ ಚೇಳನ್ನು ಕೊಡುವನೇ?
13 Ուրեմն եթէ դո՛ւք որ չար էք՝ գիտէք ձեր զաւակներուն բարի նուէրներ տալ, ո՜րչափ աւելի ձեր Հայրը երկինքէն Սուրբ Հոգի՛ն պիտի տայ անոնց՝ որ կը խնդրեն իրմէ”»:
ಹಾಗಾದರೆ ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತಮ್ಮನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮರನ್ನು ದಯಪಾಲಿಸುವರಲ್ಲವೇ!” ಎಂದು ನಾನು ನಿಮಗೆ ಹೇಳುತ್ತೇನೆ ಎಂದರು.
14 Յիսուս կը հանէր դեւ մը՝ որ համր էր: Երբ դեւը դուրս ելաւ՝ համրը խօսեցաւ, եւ բազմութիւնները սքանչացան:
ಯೇಸು ಒಂದು ಮೂಕದೆವ್ವವನ್ನು ಹೊರಗೆ ಓಡಿಸುತ್ತಿದ್ದರು. ಆ ದೆವ್ವವು ಹೊರಟುಹೋದ ಮೇಲೆ, ಆ ಮೂಕನು ಮಾತನಾಡಿದನು. ಅದಕ್ಕೆ ಜನರು ಆಶ್ಚರ್ಯಪಟ್ಟರು.
15 Բայց անոնցմէ ոմանք ըսին. «Ան դեւերու Բէեղզեբուղ իշխանին միջոցով կը հանէ դեւերը»:
ಆದರೆ ಅವರಲ್ಲಿ ಕೆಲವರು, “ದೆವ್ವಗಳ ಅಧಿಪತಿಯಾದ ಬೆಲ್ಜೆಬೂಲನಿಂದ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.
16 Ուրիշներ ալ՝ փորձելու համար՝ կը խնդրէին իրմէ նշան մը երկինքէն:
ಇನ್ನು ಕೆಲವರು ಯೇಸುವನ್ನು ಪರೀಕ್ಷಿಸುವವರಾಗಿ ಪರಲೋಕದಿಂದ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಕೇಳಿದರು.
17 Բայց ինք գիտնալով անոնց մտածումները՝ ըսաւ անոնց. «Ինքնիր դէմ բաժնուած որեւէ թագաւորութիւն՝ կ՚աւերի, եւ տուն մը ինքնիր դէմ բաժնուած՝ կը փլչի:
ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು: “ತನಗೆ ತಾನೇ ವಿರೋಧವಾಗಿ ವಿಭಾಗಗೊಂಡರೆ ಪ್ರತಿಯೊಂದು ರಾಜ್ಯವು ನಾಶವಾಗುವುದು, ಒಂದು ಮನೆಯು ತನಗೆ ತಾನೇ ವಿರೋಧವಾಗಿ ವಿಭಾಗವಾದರೆ, ಅದು ಬಿದ್ದುಹೋಗುವುದು.
18 Հապա եթէ Սատանա՛ն ինքնիր դէմ բաժնուած է, անոր թագաւորութիւնը ի՞նչպէս պիտի կենայ. որովհետեւ կ՚ըսէք թէ Բէեղզեբուղո՛վ կը հանեմ դեւերը:
ಸೈತಾನನು ಸಹ ತನಗೆ ತಾನೇ ವಿರೋಧವಾಗಿ ತನ್ನಲ್ಲಿ ವಿಭಾಗವಾದರೆ, ಅವನ ರಾಜ್ಯವು ನಿಲ್ಲುವುದು ಹೇಗೆ? ಏಕೆಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಓಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ.
19 Իսկ եթէ ես Բէեղզեբուղով կը հանեմ դեւերը, ձեր որդինե՛րը ինչո՞վ կը հանեն. ուստի անո՛նք պիտի ըլլան ձեր դատաւորները:
ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಓಡಿಸುವುದಾದರೆ, ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಓಡಿಸುತ್ತಾರೆ? ಆದ್ದರಿಂದ, ನಿಮ್ಮವರೇ ನಿಮಗೆ ನ್ಯಾಯಾಧಿಪತಿಗಳಾಗಿರುವರು.
20 Բայց եթէ ես Աստուծո՛յ մատով կը հանեմ դեւերը, ուրեմն Աստուծոյ թագաւորութիւնը հասած է ձեր վրայ:
ನಾನು ದೇವರ ಬಲದಿಂದಲೇ ದೆವ್ವಗಳನ್ನು ಓಡಿಸುವುದಾದರೆ, ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.
21 Երբ ուժեղ մարդ մը՝ զէնքերը վրան առած՝ պահպանէ իր տան գաւիթը, անոր ինչքը կը մնայ խաղաղութեան մէջ:
“ಆಯುಧಗಳನ್ನು ಧರಿಸಿಕೊಂಡು, ಬಲಿಷ್ಠನಾದವನೊಬ್ಬನು ತನ್ನ ಮನೆಯನ್ನು ಕಾಯುವುದಾದರೆ ಅವನ ಸೊತ್ತು ಸುರಕ್ಷಿತವಾಗಿರುವುದು.
22 Բայց երբ իրմէ աւելի ուժեղը յարձակի վրան ու յաղթէ անոր, կը գրաւէ անոր զէնքերը՝ որոնց ան վստահած էր, եւ կը բաշխէ իրմէ առած կողոպուտը:
ಆದರೆ ಅವನಿಗಿಂತ ಬಲಿಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ, ಅವನು ಭರವಸೆಯಿಟ್ಟಿದ್ದ ಆಯುಧಗಳನ್ನು ಅವನಿಂದ ತೆಗೆದುಕೊಂಡು ತನ್ನ ಸುಲಿಗೆಯನ್ನೆಲ್ಲಾ ಹಂಚುವನು.
23 Ա՛ն որ ինծի հետ չէ՝ ինծի հակառակ է, եւ ա՛ն որ ինծի հետ չի հաւաքեր՝ կը ցրուէ»:
“ನನ್ನ ಪರವಾಗಿ ಇರದವನು ನನಗೆ ವಿರೋಧಿಯಾಗಿದ್ದಾನೆ, ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.
24 «Երբ անմաքուր ոգին դուրս ելլէ մարդէ մը, կը շրջի անջուր տեղեր, հանգստութիւն կը փնտռէ, ու եթէ չգտնէ՝ կ՚ըսէ. “Վերադառնամ իմ տունս՝ ուրկէ ելայ”:
“ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ, ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ಹುಡುಕಾಡಿದರೂ ಅದನ್ನು ಕಂಡುಕೊಳ್ಳದೆ ಅದು, ‘ನಾನು ಹೊರಟು ಬಂದ ನನ್ನ ಮನೆಗೆ ಹಿಂದಿರುಗುವೆನು,’ ಎಂದು ಹೇಳಿಕೊಂಡು ಬಂದು,
25 Եւ կու գայ, զայն կը գտնէ աւլուած ու զարդարուած:
ಅದು ಬಂದು ಆ ಮನೆಯು ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ.
26 Այն ատեն կ՚երթայ, եւ իրեն հետ կ՚առնէ ուրիշ եօթը ոգիներ՝ իրմէ աւելի չար, ու մտնելով՝ կը բնակին հոն, եւ այդ մարդուն վերջին վիճակը առաջինէն աւելի գէշ կ՚ըլլայ»:
ಆ ಅಶುದ್ಧಾತ್ಮವು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ಅಶುದ್ಧಾತ್ಮಗಳನ್ನು ತನ್ನೊಂದಿಗೆ ಕರೆದುಕೊಂಡು ಅವನ ಒಳಗೆ ಸೇರಿ ಅಲ್ಲಿ ವಾಸಮಾಡುತ್ತವೆ. ಹೀಗೆ ಆ ಮನುಷ್ಯನ ಕಡೆಯ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು,” ಎಂದರು.
27 Երբ ան այս բաները կը խօսէր, բազմութեան մէջէն կին մը ձայնը բարձրացուց ու ըսաւ անոր. «Երանի՜ այն որովայնին՝ որ կրեց քեզ, եւ այն ծիծերուն՝ որոնք կաթ տուին քեզի՝՝»:
ಯೇಸು ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನೆತ್ತಿ ಅವರಿಗೆ, “ನಿಮ್ಮನ್ನು ಗರ್ಭದಲ್ಲಿ ಹೊತ್ತು, ನಿಮಗೆ ಹಾಲುಣಿಸಿದ ತಾಯಿ ಧನ್ಯಳು,” ಎಂದು ಹೇಳಿದಳು.
28 Իսկ ինք ըսաւ. «Մա՛նաւանդ երանի՜ անոնց, որ կը լսեն Աստուծոյ խօսքը ու կը պահեն»:
ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವರು ಹೆಚ್ಚು ಭಾಗ್ಯವಂತರು,” ಎಂದರು.
29 Երբ բազմութիւնները կը խռնուէին անոր շուրջ, ինք ըսաւ. «Այս սերունդը չար է, նշան կը խնդրէ. սակայն ուրիշ նշան պիտի չտրուի անոր, բայց միայն Յովնան մարգարէին նշանը:
ಜನರು ಗುಂಪುಗುಂಪಾಗಿ ಕೂಡಿಬಂದಿದ್ದಾಗ, ಯೇಸು, “ಇದು ದುಷ್ಟ ಸಂತತಿಯು. ಇದು ಸೂಚಕಕಾರ್ಯವನ್ನು ಹುಡುಕುತ್ತದೆ, ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ದೊರಕದು.
30 Որովհետեւ ինչպէս Յովնան նշան եղաւ Նինուէցիներուն, այնպէս մարդու Որդին պիտի ըլլայ այս սերունդին:
ಏಕೆಂದರೆ ಯೋನನು ನಿನೆವೆ ಪಟ್ಟಣದವರಿಗೆ ಸೂಚನೆಯಾಗಿದ್ದಂತೆಯೇ, ಮನುಷ್ಯಪುತ್ರನಾದ ನಾನೇ ಈ ಸಂತತಿಗೆ ಸೂಚನೆಯಾಗಿರುವೆನು.
31 Հարաւի թագուհին՝ դատաստանին օրը ոտքի պիտի ելլէ այս սերունդին մարդոց դէմ ու պիտի դատապարտէ ասոնք, որովհետեւ եկաւ երկրի ծայրերէն՝ լսելու Սողոմոնի իմաստութիւնը. եւ ահա՛ Սողոմոնէ մեծ մէկը կայ հոս:
ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ.
32 Նինուէի մարդիկը դատաստանին օրը պիտի կանգնին այս սերունդին դէմ ու պիտի դատապարտեն զայն, որովհետեւ զղջացին Յովնանի քարոզութեամբ. եւ ահա՛ Յովնանէ մեծ մէկը կայ հոս»:
ನಿನೆವೆ ಪಟ್ಟಣದವರು ನ್ಯಾಯತೀರ್ಪಿನಲ್ಲಿ ಈ ಸಂತತಿಗೆ ಎದುರಾಗಿ ಎದ್ದು ಇದನ್ನು ಅಪರಾಧ ಎಂದು ತೀರ್ಪುಮಾಡುವರು, ಏಕೆಂದರೆ ಯೋನನು ಸಾರಿದ್ದನ್ನು ಕೇಳಿ ಅವರು ದೇವರ ಕಡೆಗೆ ತಿರುಗಿಕೊಂಡರು; ಇಗೋ, ಇಲ್ಲಿ ಯೋನನಿಗಿಂತಲೂ ತುಂಬಾ ದೊಡ್ಡವನು ಇದ್ದಾನೆ,” ಎಂದು ಹೇಳಿದರು.
33 «Ո՛չ մէկը՝ ճրագը վառելէ ետք՝ կը դնէ ծածուկ տեղ մը, կամ ալ՝ գրուանի տակ, հապա՝ աշտանակի՛ վրայ, որպէսզի ներս մտնողները տեսնեն փայլը:
“ಯಾರೂ ದೀಪವನ್ನು ಹಚ್ಚಿ ಮರೆಯಾದ ಸ್ಥಳದಲ್ಲಾಗಲಿ ಬಟ್ಟಲ ಕೆಳಗಾಗಲಿ ಇಡುವುದಿಲ್ಲ. ಮನೆಯೊಳಕ್ಕೆ ಬರುವವರಿಗೆ, ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
34 Մարմինին ճրագը աչքն է. ուրեմն երբ աչքդ պարզ է՝ ամբողջ մարմինդ ալ լուսաւոր կ՚ըլլայ, բայց երբ աչքդ չար է՝ մարմինդ ալ խաւարամած կ՚ըլլայ:
ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ. ಆದ್ದರಿಂದ ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಬೆಳಕಾಗಿರುವುದು. ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವು ಸಹ ಕತ್ತಲೆಯಾಗಿರುವುದು.
35 Ուստի ուշադի՛ր եղիր, որ քու մէջդ եղած լոյսը խաւար չըլլայ:
ಆದ್ದರಿಂದ, ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ.
36 Ուրեմն եթէ ամբողջ մարմինդ լուսաւոր է ու մութ մաս մը չունի, ամբողջովին լուսաւոր կ՚ըլլայ, ինչպէս երբ ճրագ մը կը լուսաւորէ քեզ իր փայլով»:
ದೇಹದ ಯಾವುದೊಂದು ಭಾಗದಲ್ಲಿಯೂ ಕತ್ತಲೆಯಾಗಿರದೆ, ನಿನ್ನ ದೇಹವೆಲ್ಲವೂ ಪೂರ್ಣವಾಗಿ ಬೆಳಕಾಗಿರುವುದಾದರೆ, ಪ್ರಕಾಶಮಾನವಾದ ದೀಪವು ನಿನಗೆ ಬೆಳಕುಕೊಡುವಂತೆ ಸಮಸ್ತವೂ ಬೆಳಕಾಗಿರುವುದು,” ಎಂದು ಹೇಳಿದರು.
37 Երբ այս բաները կը խօսէր, Փարիսեցի մը կը թախանձէր անոր՝ որ իր քով ճաշէ: Ան ալ մտաւ եւ սեղան նստաւ:
ಯೇಸು ಮಾತನಾಡುವುದನ್ನು ಮುಗಿಸಿದಾಗ, ಒಬ್ಬ ಫರಿಸಾಯನು ತನ್ನೊಂದಿಗೆ ಊಟ ಮಾಡಬೇಕೆಂದು ಯೇಸುವನ್ನು ಬೇಡಿಕೊಂಡನು, ಆಗ ಅವರು ಒಳಗೆ ಹೋಗಿ ಊಟಕ್ಕೆ ಕೂತುಕೊಂಡರು.
38 Երբ Փարիսեցին տեսաւ՝ զարմացաւ, որովհետեւ ճաշէն առաջ չլուացուեցաւ:
ಆದರೆ ಊಟಕ್ಕೆ ಮೊದಲು ಯೇಸು ಕೈತೊಳೆಯದೆ ಇರುವುದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.
39 Տէրը ըսաւ անոր. «Հիմա դուք՝ Փարիսեցինե՛ր, կը մաքրէք գաւաթին ու պնակին արտաքինը, բայց ձեր ներքինը լեցուն է յափշտակութեամբ եւ չարութեամբ:
ಆಗ ಕರ್ತದೇವರು ಅವನಿಗೆ, “ಫರಿಸಾಯರಾದ ನೀವು, ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ, ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.
40 Անմիտնե՛ր, ա՛ն որ արտաքինը ըրաւ, ներքինն ալ ինք չըրա՞ւ:
ಮೂರ್ಖರೇ! ಹೊರಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ?
41 Սակայն ողորմութի՛ւն տուէք անոնց մէջ եղածներէն, եւ ահա՛ ամէն բան մաքուր կ՚ըլլայ ձեզի»:
ನೀವು ನಿಮ್ಮೊಳಗೆ ಅಂಟಿಕೊಂಡಿರುವವುಗಳನ್ನು ಬಡವರಿಗೆ ದಾನ ಮಾಡಿಬಿಡಿರಿ, ಆಗ ನಿಮಗೆ ಎಲ್ಲವೂ ಶುದ್ಧವಾಗಿರುವುವು.
42 «Բայց վա՜յ ձեզի՝ Փարիսեցիներուդ, որ կը վճարէք անանուխին, փեգենային եւ ամէն տեսակ բանջարեղէնի տասանորդը, բայց զանց կ՚ընէք իրաւունքը եւ Աստուծոյ սէրը. ասո՛նք պէտք է ընէիք, ու զանոնք չթողուիք:
“ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ಪುದೀನ, ಸದಾಪು ಮತ್ತು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು, ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಅವುಗಳನ್ನು ಮಾಡಿದ ನೀವು ಇವುಗಳನ್ನೂ ಅವಶ್ಯವಾಗಿ ಮಾಡಬೇಕಾಗಿತ್ತು.
43 Վա՜յ ձեզի՝ Փարիսեցիներուդ, որ կը սիրէք առաջին աթոռները՝ ժողովարաններու մէջ, եւ բարեւները՝ հրապարակներուն վրայ:
“ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ ಇಷ್ಟಪಡುತ್ತೀರಿ.
44 Վա՜յ ձեզի՝ կեղծաւո՛ր դպիրներ ու Փարիսեցիներ, որ նման էք անյայտ գերեզմաններու, որոնց վրայէն մարդիկ կը քալեն եւ չեն գիտեր»:
“ನಿಮಗೆ ಕಷ್ಟ, ಏಕೆಂದರೆ ನೀವು ನೆಲಸಮವಾದ ಸಮಾಧಿಗಳಂತೆ ಇದ್ದೀರಿ, ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು,” ಎಂದು ಹೇಳಿದರು.
45 Օրինականներէն մէկը ըսաւ անոր. «Վարդապե՛տ, ա՛յսպէս խօսելով՝ մե՛զ ալ կը նախատես»:
ನಿಯಮ ಬೋಧಕ ಒಬ್ಬನು ಯೇಸುವಿಗೆ, “ಬೋಧಕರೇ, ನೀವು ಇವುಗಳನ್ನು ಹೇಳುವುದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀರಿ,” ಎಂದನು.
46 Իսկ ան ըսաւ. «Ձեզի՛ ալ վա՜յ՝ օրինականներո՛ւդ, որ դժուարակիր բեռներ կը բեռցնէք մարդոց, բայց դուք՝ ձեր մէ՛կ մատով չէք հպիր այդ բեռներուն:
ಅದಕ್ಕೆ ಯೇಸು, “ನಿಯಮ ಪಂಡಿತರೇ, ನಿಮಗೂ ಕಷ್ಟ, ಏಕೆಂದರೆ ಹೊರಲಾಗದ ಹೊರೆಗಳನ್ನು ಮನುಷ್ಯರ ಮೇಲೆ ಹೊರಿಸುತ್ತೀರಿ, ನೀವಾದರೋ ಈ ಹೊರೆಗಳನ್ನು ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ಮುಟ್ಟುವುದಿಲ್ಲ.
47 Վա՜յ ձեզի, որ գերեզմաններ կը կառուցանէք մարգարէներուն, մինչդեռ ձեր հայրե՛րը սպաննեցին զանոնք:
“ನಿಮಗೆ ಕಷ್ಟ, ಏಕೆಂದರೆ ನಿಮ್ಮ ಪಿತೃಗಳು ಪ್ರವಾದಿಗಳನ್ನು ಕೊಂದರು, ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
48 Ուստի կը վկայէք եւ հաւանութիւն կու տաք ձեր հայրերուն գործերուն. որովհետեւ իսկապէս իրե՛նք սպաննեցին զանոնք, ու դուք գերեզմաններ կը կառուցանէք անոնց:
ಇದರಿಂದ ನಿಜವಾಗಿಯೂ ನಿಮ್ಮ ಪಿತೃಗಳ ಕೃತ್ಯಗಳನ್ನು ನೀವು ಒಪ್ಪಿಕೊಳ್ಳುವಂತೆ ಸಾಕ್ಷಿಕರಿಸುತ್ತೀರಿ; ಏಕೆಂದರೆ ಅವರು ನಿಜವಾಗಿಯೂ ಪ್ರವಾದಿಗಳನ್ನು ಕೊಂದರು, ನೀವೋ ಅವರ ಸಮಾಧಿಗಳನ್ನು ಕಟ್ಟುತ್ತೀರಿ.
49 Հետեւաբար՝ Աստուծոյ իմաստութիւնը նաեւ ըսաւ. “Անոնց պիտի ղրկեմ մարգարէներ եւ առաքեալներ: Անոնցմէ ոմանք պիտի սպաննեն ու ոմանք հալածեն,
ಈ ಕಾರಣದಿಂದ, ದೇವರ ಜ್ಞಾನವು ಸಹ ಹೇಳಿರುವುದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸೆಪಡಿಸುವರು.’
50 որպէսզի աշխարհի հիմնադրութենէն ի վեր թափուած բոլոր մարգարէներուն արիւնը պահանջուի այս սերունդէն:
ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಲೆಕ್ಕ ಕೊಡಬೇಕಾಗಿರುವುದು,
51 Աբէլի արիւնէն մինչեւ Զաքարիայի արիւնը, որ թափուեցաւ զոհասեղանին ու տաճարին մէջտեղ, այո՛, կը յայտարարեմ ձեզի, պիտի պահանջուի այս սերունդէն”:
ಹೇಬೆಲನ ರಕ್ತ ಮೊದಲುಗೊಂಡು ಬಲಿಪೀಠಕ್ಕೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು. ಹೌದು, ಈ ಸಂತತಿಯವರೇ ಇದಕ್ಕೆಲ್ಲಾ ಉತ್ತರಕೊಡಬೇಕೆಂದು, ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
52 Վա՜յ ձեզի՝ օրինականներուդ, որ վերցուցիք գիտութեան բանալին. դո՛ւք չմտաք, եւ մտնողներն ալ արգիլեցիք»:
“ನಿಯಮ ಪಂಡಿತರೇ, ನಿಮಗೆ ಕಷ್ಟ, ಏಕೆಂದರೆ ನೀವು ಜ್ಞಾನದ ಬೀಗದ ಕೈಯನ್ನು ತೆಗೆದುಕೊಂಡಿದ್ದೀರಿ. ನೀವಂತೂ ಒಳಗೆ ಪ್ರವೇಶಿಸಲಿಲ್ಲ; ಒಳಗೆ ಪ್ರವೇಶಿಸುತ್ತಿರುವವರಿಗೂ ನೀವು ತಡೆಗಟ್ಟುತ್ತೀರಿ,” ಎಂದು ಹೇಳಿದರು.
53 Երբ այս բաները կ՚ըսէր անոնց, դպիրներն ու Փարիսեցիները սկսան բուռն կերպով ճնշել զինք, եւ խօսեցնել շատ բաներու մասին.
ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ, ನಿಯಮ ಬೋಧಕರೂ ಫರಿಸಾಯರೂ ಕೋಪಾವೇಶವುಳ್ಳವರಾಗಿ, ಯೇಸು ಇನ್ನೂ ಹೆಚ್ಚು ವಿಷಯಗಳನ್ನು ಮಾತನಾಡುವಂತೆ ಅವರನ್ನು ಕೆಣಕಿದರು,
54 անոր դարան պատրաստելով՝ կը փնտռէին թէ ի՛նչպէս անոր բերանէն խօսք մը՝՝ որսան, որպէսզի ամբաստանեն զինք:
ಏಕೆಂದರೆ ಯೇಸುವಿನ ಮಾತಿನಲ್ಲಿ ಏನನ್ನಾದರೂ ಕಂಡುಹಿಡಿದು ಅವರ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡುತ್ತಿದ್ದರು.

< ՂՈԻԿԱՍ 11 >