< ՂՈԻԿԱՍ 13 >

1 Այդ ատեն ներկայ եղողներէն ոմանք պատմեցին անոր այն Գալիլեացիներուն մասին, որոնց արիւնը Պիղատոս խառնեց իրենց զոհերուն հետ:
ಪಿಲಾತನು, ಬಲಿ ಅರ್ಪಿಸುತ್ತಿದ್ದ ಗಲಿಲಾಯದವರ ರಕ್ತವನ್ನೇ ಅವರ ಬಲಿಗಳೊಂದಿಗೆ ಬೆರೆಸಿದ ವಿಷಯವನ್ನು ಯೇಸುವಿಗೆ ತಿಳಿಸಿದ ಕೆಲವರು ಆ ಸಮಯದಲ್ಲಿ ಅಲ್ಲಿದ್ದರು.
2 Յիսուս պատասխանեց անոնց. «Կը կարծէ՞ք թէ այդ Գալիլեացիները աւելի մեղաւոր էին բոլոր Գալիլեացիներէն, քանի որ այսպիսի չարչարանքներ կրեցին:
ಯೇಸು ಅವರಿಗೆ, “ಆ ಗಲಿಲಾಯದವರು ಇಂಥಾ ಕೊಲೆಗೆ ಈಡಾದ ಕಾರಣ ಅವರು ಎಲ್ಲಾ ಗಲಿಲಾಯದವರಿಗಿಂತ ದೋಷಿಗಳೆಂದು ನೀವು ಭಾವಿಸುತ್ತೀರೋ?
3 Կ՚ըսեմ ձեզի՝ ո՛չ: Հապա եթէ չապաշխարէք, բոլորդ ալ նոյնպէս պիտի կորսուիք:
ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ, ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ.
4 Կամ թէ այն տասնութ հոգիները, որոնց վրայ Սելովամի աշտարակը ինկաւ եւ սպաննեց զանոնք, կը կարծէ՞ք թէ անոնք Երուսաղէմ բնակող բոլոր մարդոցմէ աւելի յանցաւոր էին:
ಇಲ್ಲವೆ ಸಿಲೋವ ಎಂಬಲ್ಲಿ ಗೋಪುರವು ಬಿದ್ದು ಸತ್ತು ಹೋದ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ದೋಷಿಗಳೆಂದು ಭಾವಿಸುತ್ತೀರೋ?
5 Կ՚ըսեմ ձեզի՝ ո՛չ: Հապա եթէ չապաշխարէք, բոլորդ ալ նմանապէս պիտի կորսուիք»:
ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ,” ಎಂದರು.
6 Սա՛ առակն ալ ըսաւ. «Մէկը իր այգիին մէջ ունէր տնկուած թզենի մը. եկաւ պտուղ փնտռելու անոր վրայ, բայց չգտաւ:
ಅನಂತರ ಯೇಸು ಈ ಸಾಮ್ಯವನ್ನು ಹೇಳಿದರು: “ಒಬ್ಬ ಮನುಷ್ಯನಿಗೆ ತನ್ನ ದ್ರಾಕ್ಷಿಯ ತೋಟದಲ್ಲಿ ನೆಡಲಾಗಿದ್ದ, ಒಂದು ಅಂಜೂರದ ಮರವಿತ್ತು. ಅವನು ಬಂದು ಅದರಲ್ಲಿ ಫಲವನ್ನು ಹುಡುಕಲು ಒಂದೂ ಸಿಕ್ಕಲಿಲ್ಲ.
7 Ուստի ըսաւ այգեպանին. “Ահա՛ երեք տարի է, որ կու գամ՝ պտուղ կը փնտռեմ այդ թզենիին վրայ, ու չեմ գտներ. ա՛լ կտրէ՛ զայն, ինչո՞ւ խափանէ գետինը”:
ಆಗ ಅವನು ತನ್ನ ದ್ರಾಕ್ಷಿಯ ತೋಟ ಮಾಡುವವನಿಗೆ, ‘ನೋಡು, ಮೂರು ವರ್ಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕುತ್ತಾ ಬಂದಿದ್ದೇನೆ, ಆದರೆ ಏನೂ ಸಿಕ್ಕಲಿಲ್ಲ. ಇದನ್ನು ಕಡಿದುಹಾಕು! ಇದು ಏಕೆ ನೆಲವನ್ನು ಕೆಡಿಸಬೇಕು?’ ಎಂದು ಹೇಳಿದನು.
8 Ան ալ պատասխանեց անոր. “Տէ՛ր, ա՛յս տարի ալ ձգէ զայն, մինչեւ որ բրեմ անոր շուրջը ու թրիք դնեմ:
“ಆದರೆ ಅವನು ಉತ್ತರವಾಗಿ ಅವನಿಗೆ, ‘ಒಡೆಯನೇ, ಇನ್ನೊಂದು ವರ್ಷವೂ ಇದನ್ನು ಬಿಡು, ನಾನು ಅದರ ಸುತ್ತಲೂ ಅಗಿದು ಗೊಬ್ಬರ ಹಾಕುವೆನು.
9 Եթէ պտուղ տայ՝ լա՛ւ. այլապէս՝ յետագայի՛ն կտրէ զայն”»:
ಮುಂದಿನ ವರ್ಷ ಇದು ಫಲ ಫಲಿಸಿದರೆ, ಸರಿ! ಇಲ್ಲವಾದರೆ, ನೀನು ಇದನ್ನು ಕಡಿದುಹಾಕು, ಎಂದನು.’”
10 Շաբաթ օրը՝ ինք կը սորվեցնէր ժողովարաններէն մէկուն մէջ:
ಯೇಸು ಸಬ್ಬತ್ ದಿನದಲ್ಲಿ ಒಂದು ಸಭಾಮಂದಿರದೊಳಗೆ ಬೋಧಿಸುತ್ತಾ ಇದ್ದರು,
11 Եւ ահա՛ կին մը կար հոն, որ տասնութ տարիէ ի վեր ունէր հիւանդութեան ոգի մը. կքած էր, եւ ամե՛նեւին չէր կրնար շիտակ կայնիլ:
ಆಗ, ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು. ಆಕೆ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.
12 Յիսուս տեսնելով զայն՝ կանչեց ու ըսաւ անոր. «Կի՛ն, արձակուած ես հիւանդութենէդ»,
ಯೇಸು ಆಕೆಯನ್ನು ಕಂಡು, ಹತ್ತಿರಕ್ಕೆ ಕರೆದು ಆಕೆಗೆ, “ಅಮ್ಮಾ, ನೀನು ಈ ನಿನ್ನ ಬಲಹೀನತೆಯಿಂದ ಬಿಡುಗಡೆಯಾಗಿದ್ದಿ,” ಎಂದು ಹೇಳಿ,
13 եւ ձեռքը դրաւ անոր վրայ: Ան անմի՛ջապէս շտկուեցաւ, ու փառաբանեց Աստուած:
ಯೇಸು ಆಕೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು, ಕೂಡಲೇ ಆಕೆಯು ನೆಟ್ಟಗಾದಳು ಮತ್ತು ದೇವರನ್ನು ಸ್ತುತಿಸಿದಳು.
14 Քանի որ Յիսուս բուժեց Շաբաթ օրը, ժողովարանին պետը ընդվզելով ըսաւ բազմութեան. «Վեց օր կայ՝ որոնց մէջ պէտք է գործէք. ուրեմն ա՛յդ օրերը եկէք ու բուժուեցէք, ո՛չ թէ Շաբաթ օրը»:
ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಮಾಡಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ, “ಆರು ದಿವಸಗಳಲ್ಲಿ ಮನುಷ್ಯರು ಕೆಲಸ ಮಾಡತಕ್ಕದ್ದು. ಆದ್ದರಿಂದ ಆ ದಿನಗಳಲ್ಲಿ ನೀವು ಬಂದು ಸ್ವಸ್ಥರಾಗಿರಿ, ಸಬ್ಬತ್ ದಿನದಲ್ಲಿ ಬೇಡ,” ಎಂದನು.
15 Ուստի Տէրը պատասխանեց անոր. «Կեղծաւո՛ր, ձեզմէ իւրաքանչիւրը Շաբաթ օրը իր եզը կամ էշը մսուրէն չ՚ա՞րձակեր, որպէսզի տանի՝ ջուր տայ:
ಅದಕ್ಕೆ ಕರ್ತದೇವರು ಅವನಿಗೆ, “ಕಪಟಿಗಳೇ! ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ, ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವುದಕ್ಕಾಗಿ ಹೋಗುವುದಿಲ್ಲವೇ?
16 Հապա ասիկա՝ որ Աբրահամի աղջիկ էր, եւ ահա՛ տասնութ տարի Սատանան կապած էր զայն, պէտք չէ՞ր որ Շաբաթ օրը արձակուէր այդ կապէն»:
ಅಬ್ರಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರ್ಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೇ?” ಎಂದರು.
17 Երբ այս բաները ըսաւ, իր բոլոր հակառակորդները ամօթահար եղան. իսկ ամբողջ բազմութիւնը ուրախացաւ այն բոլոր փառաւոր գործերուն համար՝ որ ան կը կատարէր:
ಯೇಸು ಇದನ್ನು ಹೇಳುತ್ತಿರುವಾಗ, ಅವರ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು, ಆದರೆ ಇತರರು, ಅವರಿಂದ ನಡೆದ ಎಲ್ಲಾ ಮಹಿಮೆಯುಳ್ಳ ಕಾರ್ಯಗಳಿಗಾಗಿ ಸಂತೋಷಪಟ್ಟರು.
18 Եւ ըսաւ. «Ի՞նչ բանի նման է Աստուծոյ թագաւորութիւնը, կամ ի՞նչ բանի նմանցնեմ զայն:
ಅನಂತರ ಯೇಸು, “ದೇವರ ರಾಜ್ಯವು ಯಾವುದಕ್ಕೆ ಹೋಲಿಕೆಯಾಗಿದೆ? ನಾನು ಯಾವುದಕ್ಕೆ ಅದನ್ನು ಹೋಲಿಸಲಿ?
19 Նման է մանանեխի հատիկի մը, որ մարդ մը առաւ՝ իր պարտէզը ցանեց. եւ աճեցաւ, մեծ ծառ մը եղաւ, ու երկինքի թռչունները բնակեցան անոր ճիւղերուն վրայ»:
ಅದು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ತೆಗೆದುಕೊಂಡುಹೋಗಿ ತನ್ನ ತೋಟದಲ್ಲಿ ಬಿತ್ತಲು, ಅದು ಬೆಳೆದು ಒಂದು ದೊಡ್ಡ ಮರವಾಯಿತು. ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸಮಾಡಿದವು,” ಎಂದರು.
20 Դարձեալ ըսաւ. «Ի՞նչ բանի նմանցնեմ Աստուծոյ թագաւորութիւնը:
ಪುನಃ ಯೇಸು, “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸಲಿ?
21 Նման է խմորին, որ կին մը առաւ ու երեք գրիւ ալիւրի մէջ պահեց, մինչեւ որ ամբողջը խմորուեցաւ»:
ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀಯು ತೆಗೆದುಕೊಂಡು ಹುಳಿಯಿಲ್ಲದ ಸುಮಾರು ಇಪ್ಪತ್ತೇಳು ಕಿಲೋಗ್ರಾಂ ಹಿಟ್ಟಿನಲ್ಲಿ ಕಲಸಿದಾಗ ಆ ಹಿಟ್ಟೆಲ್ಲಾ ಹುಳಿಯಾಯಿತು,” ಎಂದರು.
22 Եւ քաղաքներն ու գիւղերը շրջելով՝ կը սորվեցնէր, եւ դէպի Երուսաղէմ կը ճամբորդէր:
ಯೇಸು ಪಟ್ಟಣಗಳನ್ನೂ ಹಳ್ಳಿಗಳನ್ನೂ ಸಂಚರಿಸಿ, ಅಲ್ಲೆಲ್ಲಾ ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣಮಾಡಿದರು.
23 Մէկը ըսաւ անոր. «Տէ՛ր, քիչուո՞ր են անոնք՝ որ պիտի փրկուին»:
ಒಬ್ಬನು ಯೇಸುವಿಗೆ, “ಸ್ವಾಮಿ, ರಕ್ಷಣೆ ಹೊಂದುವವರು ಕೆಲವರೋ?” ಎಂದು ಕೇಳಲು, ಯೇಸು ಅವರಿಗೆ,
24 Ան ալ ըսաւ անոնց. «Պայքարեցէ՛ք՝ որ մտնէք նեղ դռնէն. քանի որ կ՚ըսեմ ձեզի թէ շատե՛ր պիտի ջանան մտնել՝ բայց պիտի չկարողանան:
“ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಪ್ರವೇಶಿಸುವುದಕ್ಕೆ ಪ್ರಯಾಸಪಡಿರಿ, ಅನೇಕರು ಒಳಗೆ ಪ್ರವೇಶಿಸುವುದಕ್ಕೆ ಪ್ರಯತ್ನಿಸಿದರೂ ಆಗುವುದಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.
25 Անկէ ետք՝ երբ տանուտէրը ոտքի ելլէ, գոցէ դուռը եւ դուք մնաք դուրսը, ու սկսիք բախել դուռը եւ ըսել. “Տէ՛ր, Տէ՛ր, բա՛ց մեզի”, ան ալ պիտի պատասխանէ ձեզի. “Չեմ ճանչնար ձեզ, ուրկէ՞ էք”:
ಮನೆಯಜಮಾನರು ಒಂದು ಸಾರಿ ಎದ್ದು ಬಾಗಿಲನ್ನು ಮುಚ್ಚಿಕೊಂಡರೆ, ನೀವು ಹೊರಗೆ ನಿಂತುಕೊಂಡು ಬಾಗಿಲನ್ನು ತಟ್ಟುತ್ತಾ, ‘ಸ್ವಾಮಿ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದು ಹೇಳುವುದಕ್ಕೆ ಆರಂಭಿಸಿದಾಗ, “ಆತನು ನಿಮಗೆ ಉತ್ತರವಾಗಿ, ‘ನೀವು ಯಾರು? ಎಲ್ಲಿಯವರೋ ನಾನು ನಿಮ್ಮನ್ನು ಅರಿಯೆನು,’ ಎಂದು ಹೇಳುವನು.
26 Այն ատեն պիտի սկսիք ըսել. “Մենք քու առջեւդ կերանք ու խմեցինք, եւ դուն մեր հրապարակներուն մէջ սորվեցուցիր”:
“ಆಗ ನೀವು, ‘ನಿಮ್ಮೊಂದಿಗೆ ನಾವು ಊಟಮಾಡಿದೆವು, ಪಾನಮಾಡಿದೆವು, ನೀವು ನಮ್ಮ ಬೀದಿಗಳಲ್ಲಿ ಬೋಧಿಸಿದಿರಿ,’ ಎಂದು ಹೇಳಲಾರಂಭಿಸುವಿರಿ.
27 Բայց ան պիտի ըսէ. “Կ՚ըսեմ ձեզի. "Չեմ ճանչնար ձեզ, ուրկէ՞ էք. հեռացէ՛ք ինձմէ բոլորդ՝ անիրաւութիւն գործողներ"”:
“ಅದಕ್ಕೆ ಆತನು, ‘ನೀವು ಎಲ್ಲಿಯವರೋ ನಾನರಿಯೆ, ಅನೀತಿಯನ್ನು ಮಾಡುವವರಾದ ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳುವರು.
28 Հոն պիտի ըլլայ լաց ու ակռաներու կրճտում, երբ տեսնէք Աբրահամը, Իսահակը, Յակոբը եւ բոլոր մարգարէները՝ Աստուծոյ թագաւորութեան մէջ, իսկ դուք՝ դուրս հանուած:
“ಅಬ್ರಹಾಮ, ಇಸಾಕ, ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ಕಾಣುವಾಗ, ಅಲ್ಲಿ ನಿಮಗೆ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
29 Այնտեղ պիտի գան արեւելքէն եւ արեւմուտքէն, հիւսիսէն ու հարաւէն, եւ պիտի բազմին Աստուծոյ թագաւորութեան մէջ:
ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಜನರು ಬಂದು, ದೇವರ ರಾಜ್ಯದಲ್ಲಿ ಹಬ್ಬದ ಔತಣಕ್ಕೆ ಕುಳಿತುಕೊಳ್ಳುವರು.
30 Ու ահա՛ յետիններ կան՝ որոնք պիտի ըլլան առաջին, եւ առաջիններ՝ որոնք պիտի ըլլան յետին»:
ಆಗ ಕಡೆಯವರು ಮೊದಲನೆಯವರಾಗುವರು, ಮೊದಲನೆಯವರು ಕಡೆಯವರಾಗುವರು,” ಎಂದು ಹೇಳಿದರು.
31 Նոյն օրը քանի մը Փարիսեցիներ եկան քովը եւ ըսին իրեն. «Ելի՛ր ու հեռացի՛ր ասկէ, որովհետեւ Հերովդէս կ՚ուզէ սպաննել քեզ»:
ಅದೇ ಸಮಯದಲ್ಲಿ ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು, “ನೀವು ಇಲ್ಲಿಂದ ಹೊರಟು ಹೋಗಿರಿ. ಹೆರೋದನು ನಿಮ್ಮನ್ನು ಕೊಲ್ಲಬೇಕೆಂದಿರುವನು,” ಎಂದು ಅವರಿಗೆ ಹೇಳಿದರು.
32 Ինք ալ ըսաւ անոնց. «Գացէ՛ք, ըսէ՛ք այդ աղուէսին. “Ահա՛ ես դեւեր դուրս կը հանեմ ու բժշկութիւններ կ՚ընեմ այսօր եւ վաղը, ու երրորդ օրը աւարտած պիտի ըլլամ”:
ಅದಕ್ಕೆ ಯೇಸು ಅವರಿಗೆ, “ಇಗೋ, ‘ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಓಡಿಸುತ್ತೇನೆ ಸ್ವಸ್ಥಮಾಡುತ್ತೇನೆ, ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ,’ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.
33 Սակայն պէտք է որ այսօր եւ վաղը ու միւս օր քալեմ, որովհետեւ կարելի չէ որ մարգարէ մը կորսուի Երուսաղէմէն դուրս:
ಆದರೂ ಈ ದಿವಸ ಮತ್ತು ನಾಳೆ ಮತ್ತು ನಾಡಿದ್ದು ನಾನು ಪ್ರಯಾಣ ಮಾಡಲೇಬೇಕು. ಏಕೆಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲೆಗೀಡಾಗಬಾರದು!
34 Երուսաղէ՜մ, Երուսաղէ՜մ, դուն որ կը սպաննէիր մարգարէները եւ կը քարկոծէիր քեզի ղրկուածները. քանի՜ անգամ ուզեցի հաւաքել զաւակներդ, ինչպէս հաւը թեւերուն տակ կը հաւաքէ իր ձագերը, բայց դո՛ւք չուզեցիք:
“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.
35 Ահա՛ ձեր տունը ամայի պիտի մնայ ձեզի: Սակայն կ՚ըսեմ ձեզի թէ ա՛լ պիտի չտեսնէք զիս, մինչեւ որ գայ այն ժամանակը՝ երբ պիտի ըսէք. “Օրհնեա՜լ է ա՛ն՝ որ կու գայ Տէրոջ անունով”»:
ನೋಡಿರಿ, ನಿಮ್ಮ ದೇವಾಲಯವು ನಿಮಗೆ ಬರಿದಾಗಿ ಹಾಳುಬೀಳುವುದು. ಏಕೆಂದರೆ, ‘ಕರ್ತದೇವರ ಹೆಸರಿನಲ್ಲಿ ಬರುವವರು ಧನ್ಯರು,’ ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ಕಾಣುವುದೇ ಇಲ್ಲ, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.

< ՂՈԻԿԱՍ 13 >