< ՂՈԻԿԱՍ 6 >

1 Առաջին ամսուան երկրորդ Շաբաթ օրը՝ ինք կ՚անցնէր արտերու մէջէն, եւ իր աշակերտները ցորենի հասկեր փրցնելով՝ իրենց ձեռքերուն մէջ կը շփէին ու կ՚ուտէին:
ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಕಿಕೊಂಡು ತಿನ್ನುತ್ತಿದ್ದರು.
2 Փարիսեցիներէն ոմանք ըսին անոնց. «Ինչո՞ւ կ՚ընէք ինչ որ արտօնուած չէ ընել Շաբաթ օրերը»:
ಆದರೆ ಫರಿಸಾಯರಲ್ಲಿ ಕೆಲವರು, “ಸಬ್ಬತ್ ದಿನದಲ್ಲಿ ನಿಷಿದ್ಧವಾದ ಕೆಲಸವನ್ನು ನೀವು ಯಾಕೆ ಮಾಡುತ್ತೀರಿ?” ಎಂದು ಕೇಳಿದ್ದಕ್ಕೆ,
3 Յիսուս պատասխանեց անոնց. «Չէ՞ք կարդացեր Դաւիթի ըրածը, երբ ինք եւ իրեն հետ եղողները անօթեցան.
ಯೇಸು ಅವರಿಗೆ, “ದಾವೀದನು ಮತ್ತು ಆತನ ಸಂಗಡ ಇದ್ದವರೂ ಹಸಿದಿದ್ದಾಗ, ಆತನು ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?
4 ի՛նչպէս մտաւ Աստուծոյ տունը, առաւ առաջադրութեան հացերը ու կերաւ, նաեւ տուաւ իրեն հետ եղողներուն. ո՛չ մէկուն արտօնուած էր ուտել զանոնք՝ բացի քահանաներէն»:
ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತೆಗೆದುಕೊಂಡು ತಾನೂ ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ಉತ್ತರಿಸಿ,
5 Եւ ըսաւ անոնց. «Մարդու Որդին տէրն է նաեւ Շաբաթին»:
“ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದಾನೆ” ಎಂದು ಅವರಿಗೆ ಹೇಳಿದನು.
6 Ուրիշ Շաբաթ օր մըն ալ մտաւ ժողովարանը եւ կը սորվեցնէր: Հոն մարդ մը կար՝ որուն աջ ձեռքը չորցած էր:
ಮತ್ತೊಂದು ಸಬ್ಬತ್ ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ, ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು.
7 Դպիրներն ու Փարիսեցիները կը հսկէին իր վրայ՝ տեսնելու թէ պիտի բուժէ՛ զայն Շաբաթ օրը, որպէսզի ամբաստանութեան առիթ մը գտնեն իրեն դէմ:
ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣ ಸಿಕ್ಕಬೇಕೆಂದು ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವನೋ ಇಲ್ಲವೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು.
8 Իսկ ինք՝ գիտնալով անոնց մտածումները՝ ըսաւ այն մարդուն, որուն ձեռքը չորցած էր. «Ոտքի՛ ելիր, կայնէ՛ մէջտեղը»: Ան ալ ելաւ ու կայնեցաւ:
ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ, “ಎದ್ದು ನಡುವೆ ಬಂದು ನಿಂತುಕೋ” ಎಂದು ಹೇಳಿದನು. ಅವನು ಎದ್ದುಬಂದು ನಿಂತುಕೊಂಡನು.
9 Ուստի Յիսուս ըսաւ անոնց. «Ձեզի բան մը հարցնեմ. “Շաբաթ օրը ո՞րը արտօնուած է, բարի՞ք ընել՝ թէ չարիք ընել, անձ մը փրկե՞լ՝ թէ կորսնցնել”»:
ಆಗ ಯೇಸು ಅವರಿಗೆ, “ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ಸಬ್ಬತ್ ದಿನದಲ್ಲಿ ಯಾವುದನ್ನು ಮಾಡುವುದು ನ್ಯಾಯ? ಮೇಲನ್ನು ಮಾಡುವುದೋ ಅಥವಾ ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ಹಾಳುಮಾಡುವುದೋ?” ಎಂದು ಕೇಳಿ,
10 Եւ շուրջը նայելով՝ բոլորին վրայ, ըսաւ անոր. «Երկարէ՛ ձեռքդ»: Ան ալ այնպէս ըրաւ, ու անոր ձեռքը առողջացաւ միւսին պէս:
೧೦ಸುತ್ತಲೂ ಇದ್ದವರೆಲ್ಲರನ್ನೂ ನೋಡಿ ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು, ಕೈ ವಾಸಿಯಾಯಿತು.
11 Իսկ անոնք լեցուեցան մոլեգնութեամբ, եւ կը խօսէին իրարու հետ՝ թէ ի՛նչ ընեն Յիսուսի:
೧೧ಆದರೆ ಅವರು ಕ್ರೋಧಭರಿತರಾಗಿದ್ದರಿಂದ, ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
12 Այդ օրերը՝ լեռը գնաց աղօթելու, եւ ամբողջ գիշերը անցուց Աստուծոյ աղօթելով:
೧೨ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು.
13 Առտուն՝ կանչեց իր աշակերտները, եւ ընտրեց անոնցմէ տասներկու հոգի, ու առաքեալ անուանեց զանոնք.-
೧೩ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
14 Սիմոնը՝ որ Պետրոս ալ անուանեց, եւ անոր եղբայրը՝ Անդրէասը, Յակոբոսն ու Յովհաննէսը,
೧೪ಅವರು ಯಾರಾರೆಂದರೆ, ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
15 Փիլիպպոսը եւ Բարթողոմէոսը, Մատթէոսն ու Թովմասը, Ալփէոսեան Յակոբոսը եւ Նախանձայոյզ կոչուած Սիմոնը,
೧೫ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ,
16 Յակոբոսի եղբայրը՝ Յուդան, ու Իսկարիովտացի Յուդան՝ որ մատնիչ եղաւ:
೧೬ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ.
17 Անոնց հետ իջնելով՝ տափարակ տեղ մը կայնեցաւ, ինչպէս նաեւ իր աշակերտներուն խումբը եւ ժողովուրդի մեծ բազմութիւն մը՝ ամբողջ Հրէաստանէն, Երուսաղէմէն, ու Տիւրոսի եւ Սիդոնի ծովեզերքէն.
೧೭ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು.
18 անոնք եկած էին մտիկ ընելու անոր խօսքերը, ու բուժուելու իրենց ախտերէն: Անմաքուր ոգիներէն տանջուողներն ալ եկան եւ բժշկուեցան:
೧೮ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು.
19 Ամբողջ բազմութիւնը կը ջանար դպչիլ իրեն, որովհետեւ զօրութիւն կ՚ելլէր իրմէ ու բոլորը կը բժշկէր:
೧೯ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು.
20 Այն ատեն աչքերը բարձրացուց դէպի իր աշակերտները եւ ըսաւ. «Երանի՜ ձեզի՝ աղքատներուդ, որովհետեւ ձերն է Աստուծոյ թագաւորութիւնը:
೨೦ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ.
21 Երանի՜ ձեզի՝ որ հիմա անօթի էք, որովհետեւ պիտի կշտանաք: Երանի՜ ձեզի՝ որ հիմա կու լաք, որովհետեւ պիտի խնդաք:
೨೧ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ.
22 Երանի՜ ձեզի՝ երբ մարդիկ ատեն ձեզ, ու երբ զատեն ձեզ իրենց ընկերութենէն, նախատեն եւ վարկաբեկեն ձեր անունը՝ մարդու Որդիին պատճառով:
೨೨“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.
23 Ուրախացէ՛ք այդ օրը ու ցնծացէ՛ք, քանի որ ձեր վարձատրութիւնը շատ է երկինքը. արդարեւ իրենց հայրերը նո՛յնպէս կ՚ընէին մարգարէներուն:
೨೩ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.
24 Բայց վա՜յ ձեզի՝ հարուստներուդ, որովհետեւ ունեցա՛ծ էք ձեր մխիթարութիւնը:
೨೪“ಆದರೆ ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮ ಸುಖವು ಈಗಾಗಲೇ ನಿಮಗೆ ಬಂದದೆ.
25 Վա՜յ ձեզի՝ որ կուշտ էք, որովհետեւ պիտի անօթենաք. վա՜յ ձեզի՝ որ հիմա կը խնդաք, որովհետեւ պիտի սգաք ու լաք:
೨೫ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಟ್ಟು ಅಳುವಿರಿ.
26 Վա՜յ ձեզի՝ երբ մարդիկ լաւ խօսին ձեր մասին, որովհետեւ իրենց հայրերը ա՛յդպէս կ՚ընէին սուտ մարգարէներուն»:
೨೬“ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪೂರ್ವಿಕರು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದ್ದರು.
27 «Բայց կը յայտարարեմ ձեզի՝ որ մտիկ կ՚ընէք. “Սիրեցէ՛ք ձեր թշնամիները, բարի՛ք ըրէք ձեզ ատողներուն,
೨೭“ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ;
28 օրհնեցէ՛ք ձեզ անիծողները, աղօթեցէ՛ք ձեզ պախարակողներուն համար:
೨೮ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ.
29 Եթէ մէկը զարնէ այտիդ, մի՛ւսն ալ մօտեցուր անոր. եթէ առնէ հանդերձդ քեզմէ, մի՛ արգիլեր որ առնէ բաճկոնդ ալ:
೨೯ನಿನ್ನ ಒಂದು ಕೆನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸು; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡ.
30 Տո՛ւր ամէն մարդու՝ որ քեզմէ կ՚ուզէ, ու քու բաներդ առնողէն մի՛ պահանջեր զանոնք:
೩೦ನಿನ್ನನ್ನು ಬೇಡುವವರೆಲ್ಲರಿಗೂ ಕೊಡು; ನಿನ್ನ ಸೊತ್ತನ್ನು ಕಸಿದುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ.
31 Ի՛նչպէս կ՚ուզէք որ մարդիկ ընեն ձեզի, նո՛յնպէս ալ դուք ըրէք անոնց:
೩೧ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ.
32 Եթէ սիրէք ձեզ սիրողները, ի՞նչ շնորհք կ՚ունենաք. որովհետեւ մեղաւորնե՛րն ալ կը սիրեն զիրենք սիրողները:
೩೨“ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ.
33 Եթէ բարիք ընէք ձեզի բարիք ընողներուն, ի՞նչ շնորհք կ՚ունենաք. որովհետեւ մեղաւորնե՛րն ալ նոյն բանը կ՚ընեն:
೩೩ನಿಮಗೆ ಉಪಕಾರ ಮಾಡುವವರಿಗೇ ನೀವು ಉಪಕಾರ ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ.
34 Եթէ փոխ տաք այնպիսի մարդոց՝ որոնցմէ յոյս ունիք վերստանալու, ի՞նչ շնորհք կ՚ունենաք. որովհետեւ մեղաւորնե՛րն ալ փոխ կու տան մեղաւորներուն, որպէսզի վերստանան նոյն չափով:
೩೪ಸಾಲತೀರಿಸುವುರೆಂದು ನಿರೀಕ್ಷಿಸಿ ನೀವು ಅಂಥವರಿಗೆ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರೂ ಸಹ ತಾವು ಕೊಟ್ಟಷ್ಟು ತಮಗೆ ತಿರುಗಿ ಸಿಕ್ಕೀತೆಂದು ಸಾಲ ಕೊಡುತ್ತಾರಲ್ಲಾ.
35 Հապա դուք՝ սիրեցէ՛ք ձեր թշնամիները ու բարի՛ք ըրէք, փո՛խ տուէք՝ առանց փոխարէնը բան մը սպասելու, եւ ձեր վարձատրութիւնը շատ պիտի ըլլայ ու Ամենաբարձրին որդիները պիտի ըլլաք, որովհետեւ ան քաղցր է ապերախտներուն ու չարերուն հանդէպ:
೩೫ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.
36 Ուրեմն արգահատո՛ղ եղէք, ինչպէս ձեր Հայրն ալ արգահատող է”»:
೩೬ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರವೇ ನೀವೂ ಕರುಣೆಯುಳ್ಳವರಾಗಿರಿ.
37 «Մի՛ դատէք՝ ու պիտի չդատուիք. մի՛ դատապարտէք՝ եւ պիտի չդատապարտուիք. ներեցէ՛ք՝ ու պիտի ներուի ձեզի:
೩೭“ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.
38 Տուէ՛ք՝ եւ պիտի տրուի ձեզի. լաւ չափով՝ կոխուած, ցնցուած, լեփլեցուն պիտի տրուի ձեր գոգը. քանի որ պիտի չափուի ձեզի ա՛յն չափով՝ որով դուք կը չափէք»:
೩೮ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು” ಅಂದನು.
39 Առակ մըն ալ ըսաւ անոնց. «Կոյրը կրնա՞յ առաջնորդել կոյրը. միթէ երկո՛ւքն ալ փոսը պիտի չիյնա՞ն:
೩೯ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಕುರುಡನು ಕುರುಡನಿಗೆ ದಾರಿ ತೋರಿಸುವುದಕ್ಕಾದೀತೇ? ಅವರಿಬ್ಬರೂ ಹಳ್ಳದಲ್ಲಿ ಬೀಳುವರಲ್ಲವೆ.
40 Աշակերտը իր վարդապետէն գերիվեր չէ. բայց ամէն կատարեալ աշակերտ՝ իր վարդապետին պէս պիտի ըլլայ:
೪೦ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಪೂರ್ಣವಾಗಿ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು.
41 Ինչո՞ւ կը տեսնես եղբօրդ աչքին մէջի շիւղը, ու չես նշմարեր քու աչքիդ մէջի գերանը:
೪೧“ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ?
42 Կամ ի՞նչպէս կրնաս ըսել եղբօրդ. “Եղբա՛յր, թո՛յլ տուր որ հանեմ աչքիդ մէջի շիւղը”, երբ դուն չես տեսներ քու աչքիդ մէջի գերանը: Կեղծաւո՛ր, նախ հանէ՛ քու աչքէդ գերանը, եւ ա՛յն ատեն յստակ պիտի տեսնես՝ հանելու համար եղբօրդ աչքին մէջի շիւղը»:
೪೨ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ, ‘ಅಣ್ಣಾ, ನಿನ್ನ ಕಣ್ಣಿನೊಳಗಿನ ಅಣುವನ್ನು ತೆಗೆಯುತ್ತೇನೆ ಬಾ’ ಎಂದು ಹೇಳುವುದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಅಣುವನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು.
43 «Արդարեւ չկայ լաւ ծառ մը՝ որ վատ պտուղ բերէ, ո՛չ ալ վատ ծառ մը՝ որ լաւ պտուղ բերէ.
೪೩ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಹಾಗೆಯೇ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.
44 քանի որ իւրաքանչիւր ծառ կը ճանչցուի իր պտուղէն: Որովհետեւ փուշերէն թուզ չեն քաղեր, ու մորենիէն խաղող չեն կթեր:
೪೪ಪ್ರತಿಯೊಂದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವುದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವುದಿಲ್ಲ, ಕಳ್ಳಿ ಗಿಡದಲ್ಲಿ ದ್ರಾಕ್ಷಿಹಣ್ಣುಗಳನ್ನು ಕೊಯ್ಯುಲು ಸಾಧ್ಯವಿಲ್ಲ.
45 Բարի մարդը՝ բարութիւն կը բխեցնէ իր սիրտին բարի գանձէն, իսկ չար մարդը՝ չարիք կը բխեցնէ իր սիրտին չար գանձէն. քանի բերանը կը խօսի սիրտին լիութենէն»:
೪೫ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.
46 «Ինչո՞ւ “Տէ՛ր, Տէ՛ր” կը կոչէք զիս, բայց չէք գործադրեր ինչ որ կ՚ըսեմ:
೪೬“ಇದಲ್ಲದೆ ನೀವು ನನ್ನನ್ನು ‘ಕರ್ತನೇ, ಕರ್ತನೇ’ ಎಂದು ಕರೆದು ನಾನು ಹೇಳುವುದನ್ನು ಮಾಡದೆ ಇರುವುದೇಕೆ?
47 Ո՛վ որ կու գայ ինծի, կը լսէ իմ խօսքերս ու կը գործադրէ զանոնք, ցոյց տամ ձեզի թէ որո՛ւ կը նմանի:
೪೭ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಅಂಥವನಿಗೆ ಸಮಾನನೆಂಬುದನ್ನು ನಿಮಗೆ ತೋರಿಸುತ್ತೇನೆ.
48 Ան կը նմանի տուն կառուցանող մարդու մը, որ փորեց, խորացաւ եւ հիմը դրաւ վէմի վրայ. երբ ողողում եղաւ՝ հեղեղը զարկաւ այդ տան բայց չկրցաւ սարսել զայն, որովհետեւ վէմի վրայ հիմնուած էր:
೪೮ಅವನು ಆಳವಾಗಿ ಅಗೆದು, ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು. ಹೊಳೆಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಚೆನ್ನಾಗಿ ಕಟ್ಟಿರುವುದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು.
49 Իսկ ա՛ն որ կը լսէ իմ խօսքերս ու չի գործադրեր, կը նմանի մարդու մը, որ հողի վրայ տուն կառուցանեց՝ առանց հիմի. հեղեղը զարկաւ անոր եւ իսկոյն փլաւ, ու մեծ եղաւ այդ տան աւերումը»:
೪೯ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿತ್ತು ಮತ್ತು ಅದರ ನಾಶನವು ವಿಪರೀತವಾಗಿತ್ತು.”

< ՂՈԻԿԱՍ 6 >