< ՂՈԻԿԱՍ 6 >

1 Առաջին ամսուան երկրորդ Շաբաթ օրը՝ ինք կ՚անցնէր արտերու մէջէն, եւ իր աշակերտները ցորենի հասկեր փրցնելով՝ իրենց ձեռքերուն մէջ կը շփէին ու կ՚ուտէին:
ಒಂದು ಯೆಹೂದ್ಯರ ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದರು. ಆಗ ಅವರ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಕಿಕೊಂಡು ಅದರ ಕಾಳುಗಳನ್ನು ತಿನ್ನುತ್ತಿದ್ದರು.
2 Փարիսեցիներէն ոմանք ըսին անոնց. «Ինչո՞ւ կ՚ընէք ինչ որ արտօնուած չէ ընել Շաբաթ օրերը»:
ಫರಿಸಾಯರಲ್ಲಿ ಕೆಲವರು ಅವರಿಗೆ, “ಸಬ್ಬತ್ ದಿನದಲ್ಲಿ ಮೋಶೆಯ ನಿಯಮಕ್ಕೆ ವಿರುದ್ಧವಾಗಿರುವದನ್ನು ನೀವು ಏಕೆ ಮಾಡುತ್ತೀರಿ?” ಎಂದರು.
3 Յիսուս պատասխանեց անոնց. «Չէ՞ք կարդացեր Դաւիթի ըրածը, երբ ինք եւ իրեն հետ եղողները անօթեցան.
ಅದಕ್ಕೆ ಯೇಸು, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೇ?
4 ի՛նչպէս մտաւ Աստուծոյ տունը, առաւ առաջադրութեան հացերը ու կերաւ, նաեւ տուաւ իրեն հետ եղողներուն. ո՛չ մէկուն արտօնուած էր ուտել զանոնք՝ բացի քահանաներէն»:
ಅವನು ದೇವರ ಆಲಯದೊಳಗೆ ಹೋಗಿ, ಯಾಜಕರ ಹೊರತು ಬೇರೆಯವರು ತಿನ್ನುವುದಕ್ಕೆ ಮೋಶೆ ನಿಯಮಕ್ಕೆ ಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತೆಗೆದುಕೊಂಡು ತಿಂದು, ತನ್ನ ಸಂಗಡಿಗರಿಗೂ ಕೊಟ್ಟನಲ್ಲವೇ” ಎಂದರು.
5 Եւ ըսաւ անոնց. «Մարդու Որդին տէրն է նաեւ Շաբաթին»:
ಯೇಸು ಅವರಿಗೆ, “ಮನುಷ್ಯಪುತ್ರನಾದ ನಾನು ಸಬ್ಬತ್ತಿಗೂ ಕರ್ತ ದೇವರಾಗಿದ್ದೇನೆ,” ಎಂದರು.
6 Ուրիշ Շաբաթ օր մըն ալ մտաւ ժողովարանը եւ կը սորվեցնէր: Հոն մարդ մը կար՝ որուն աջ ձեռքը չորցած էր:
ಇನ್ನೊಂದು ಸಬ್ಬತ್ ದಿನದಲ್ಲಿ ಯೇಸು ಸಭಾಮಂದಿರದೊಳಕ್ಕೆ ಪ್ರವೇಶಿಸಿ ಬೋಧಿಸಿದರು, ಅಲ್ಲಿ ಬಲಗೈ ಬತ್ತಿದ ಒಬ್ಬ ಮನುಷ್ಯನಿದ್ದನು.
7 Դպիրներն ու Փարիսեցիները կը հսկէին իր վրայ՝ տեսնելու թէ պիտի բուժէ՛ զայն Շաբաթ օրը, որպէսզի ամբաստանութեան առիթ մը գտնեն իրեն դէմ:
ಆಗ ಫರಿಸಾಯರೂ ನಿಯಮ ಬೋಧಕರೂ ಯೇಸುವಿಗೆ ವಿರೋಧವಾಗಿ ತಪ್ಪು ಕಂಡು ಹಿಡಿಯಬೇಕೆಂದು, ಅವರು ಆ ಸಬ್ಬತ್ ದಿನದಲ್ಲಿ ಅವನನ್ನು ಯೇಸು ಗುಣಪಡಿಸುವರೋ ಏನೋ ಎಂದು ಗಮನಿಸಿ ನೋಡುತ್ತಿದ್ದರು.
8 Իսկ ինք՝ գիտնալով անոնց մտածումները՝ ըսաւ այն մարդուն, որուն ձեռքը չորցած էր. «Ոտքի՛ ելիր, կայնէ՛ մէջտեղը»: Ան ալ ելաւ ու կայնեցաւ:
ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈಬತ್ತಿದವನಿಗೆ, “ನೀನು ಎದ್ದು ಬಂದು ನಡುವೆ ನಿಂತುಕೋ,” ಎಂದಾಗ ಅವನು ಎದ್ದು ನಿಂತುಕೊಂಡನು.
9 Ուստի Յիսուս ըսաւ անոնց. «Ձեզի բան մը հարցնեմ. “Շաբաթ օրը ո՞րը արտօնուած է, բարի՞ք ընել՝ թէ չարիք ընել, անձ մը փրկե՞լ՝ թէ կորսնցնել”»:
ಯೇಸು ಅವರಿಗೆ, “ನಾನು ನಿಮ್ಮನ್ನು ಕೇಳುತ್ತೇನೆ: ಸಬ್ಬತ್ ದಿನದಲ್ಲಿ ಒಳ್ಳೆಯದನ್ನು ಮಾಡುವುದು ಮೋಶೆಯ ನಿಯಮಕ್ಕೆ ಸಮ್ಮತವೋ ಕೆಟ್ಟದ್ದನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಳಿಸುವುದೋ?” ಎಂದರು.
10 Եւ շուրջը նայելով՝ բոլորին վրայ, ըսաւ անոր. «Երկարէ՛ ձեռքդ»: Ան ալ այնպէս ըրաւ, ու անոր ձեռքը առողջացաւ միւսին պէս:
ಯೇಸು ಸುತ್ತಲೂ ಇದ್ದವರನ್ನು ನೋಡಿ, ಆ ಮನುಷ್ಯನಿಗೆ, “ನಿನ್ನ ಕೈಚಾಚು,” ಎಂದರು. ಅವನು ಹಾಗೆಯೇ ಮಾಡಿದನು. ಆಗ ಅವನ ಕೈ ಸಂಪೂರ್ಣವಾಗಿ ಗುಣವಾಯಿತು.
11 Իսկ անոնք լեցուեցան մոլեգնութեամբ, եւ կը խօսէին իրարու հետ՝ թէ ի՛նչ ընեն Յիսուսի:
ಆದರೆ ಫರಿಸಾಯರೂ ನಿಯಮ ಬೋಧಕರೂ ತುಂಬಾ ಕೋಪಗೊಂಡು ಯೇಸುವಿಗೆ ಏನಾದರೂ ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
12 Այդ օրերը՝ լեռը գնաց աղօթելու, եւ ամբողջ գիշերը անցուց Աստուծոյ աղօթելով:
ಆ ದಿನಗಳಲ್ಲಿ ಯೇಸು ಪ್ರಾರ್ಥಿಸುವುದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ, ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದರು.
13 Առտուն՝ կանչեց իր աշակերտները, եւ ընտրեց անոնցմէ տասներկու հոգի, ու առաքեալ անուանեց զանոնք.-
ಬೆಳಗಾದ ಮೇಲೆ, ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ “ಅಪೊಸ್ತಲರು” ಎಂದು ಹೆಸರಿಟ್ಟರು.
14 Սիմոնը՝ որ Պետրոս ալ անուանեց, եւ անոր եղբայրը՝ Անդրէասը, Յակոբոսն ու Յովհաննէսը,
ಅವರು ಯಾರೆಂದರೆ: ಪೇತ್ರನೆಂದು ಹೆಸರು ಹೊಂದಿದ ಸೀಮೋನ, ಅವನ ಸಹೋದರ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
15 Փիլիպպոսը եւ Բարթողոմէոսը, Մատթէոսն ու Թովմասը, Ալփէոսեան Յակոբոսը եւ Նախանձայոյզ կոչուած Սիմոնը,
ಮತ್ತಾಯ, ತೋಮ, ಅಲ್ಫಾಯನ ಮಗ ಯಾಕೋಬ, ದೇಶಾಭಿಮಾನಿ ಎಂದು ಅನ್ನಿಸಿಕೊಂಡ ಸೀಮೋನ,
16 Յակոբոսի եղբայրը՝ Յուդան, ու Իսկարիովտացի Յուդան՝ որ մատնիչ եղաւ:
ಯಾಕೋಬನ ಮಗ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ.
17 Անոնց հետ իջնելով՝ տափարակ տեղ մը կայնեցաւ, ինչպէս նաեւ իր աշակերտներուն խումբը եւ ժողովուրդի մեծ բազմութիւն մը՝ ամբողջ Հրէաստանէն, Երուսաղէմէն, ու Տիւրոսի եւ Սիդոնի ծովեզերքէն.
ಯೇಸು ಅವರೊಂದಿಗೆ ಕೆಳಗಿಳಿದು ಸಮತಟ್ಟಾದ ಭೂಮಿಯ ಮೇಲೆ ನಿಂತಿದ್ದಾಗ, ಅವರ ಶಿಷ್ಯರ ಗುಂಪು ಅಲ್ಲದೆ ಯೂದಾಯದಿಂದಲೂ ಯೆರೂಸಲೇಮಿನಿಂದಲೂ ಟೈರ್, ಸೀದೋನ್ ಪಟ್ಟಣಗಳಿರುವ ಸಮುದ್ರ ತೀರದಿಂದಲೂ
18 անոնք եկած էին մտիկ ընելու անոր խօսքերը, ու բուժուելու իրենց ախտերէն: Անմաքուր ոգիներէն տանջուողներն ալ եկան եւ բժշկուեցան:
ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವುದಕ್ಕೂ ಜನರು ದೊಡ್ಡ ಸಮೂಹವಾಗಿ ಬಂದರು. ದುರಾತ್ಮಗಳಿಂದ ಪೀಡಿತರಾದವರೂ ಬಂದು ಸ್ವಸ್ಥರಾದರು,
19 Ամբողջ բազմութիւնը կը ջանար դպչիլ իրեն, որովհետեւ զօրութիւն կ՚ելլէր իրմէ ու բոլորը կը բժշկէր:
ಆಗ ಸಮೂಹದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು, ಏಕೆಂದರೆ ಅವರಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥಮಾಡುತ್ತಿತ್ತು.
20 Այն ատեն աչքերը բարձրացուց դէպի իր աշակերտները եւ ըսաւ. «Երանի՜ ձեզի՝ աղքատներուդ, որովհետեւ ձերն է Աստուծոյ թագաւորութիւնը:
ಯೇಸು ತಮ್ಮ ಶಿಷ್ಯರನ್ನು ನೋಡಿ, ಹೇಳಿದ್ದೇನೆಂದರೆ: “ಬಡವರಾದ ನೀವು ಧನ್ಯರು, ದೇವರ ರಾಜ್ಯವು ನಿಮ್ಮದೇ.
21 Երանի՜ ձեզի՝ որ հիմա անօթի էք, որովհետեւ պիտի կշտանաք: Երանի՜ ձեզի՝ որ հիմա կու լաք, որովհետեւ պիտի խնդաք:
ಈಗ ಹಸಿದವರಾದ ನೀವು ಧನ್ಯರು, ನೀವು ತೃಪ್ತಿಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು, ನೀವು ನಗುವಿರಿ.
22 Երանի՜ ձեզի՝ երբ մարդիկ ատեն ձեզ, ու երբ զատեն ձեզ իրենց ընկերութենէն, նախատեն եւ վարկաբեկեն ձեր անունը՝ մարդու Որդիին պատճառով:
ಮನುಷ್ಯಪುತ್ರನಾದ ನನ್ನ ನಿಮಿತ್ತ ಜನರು ನಿಮ್ಮನ್ನು ದ್ವೇಷಮಾಡಿ, ನಿಮ್ಮನ್ನು ಬಹಿಷ್ಕರಿಸಿ, ನಿಂದಿಸಿ, ನಿಮ್ಮ ಹೆಸರನ್ನು ಕೆಟ್ಟದೆಂದು ತಿರಸ್ಕರಿಸಿದರೆ ನೀವು ಧನ್ಯರು.
23 Ուրախացէ՛ք այդ օրը ու ցնծացէ՛ք, քանի որ ձեր վարձատրութիւնը շատ է երկինքը. արդարեւ իրենց հայրերը նո՛յնպէս կ՚ընէին մարգարէներուն:
“ಆ ದಿನದಲ್ಲಿ ನೀವು ಸಂತೋಷಪಡಿರಿ, ಉಲ್ಲಾಸದಿಂದ ಕುಣಿದಾಡಿರಿ. ಇಗೋ, ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಈ ಜನರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.
24 Բայց վա՜յ ձեզի՝ հարուստներուդ, որովհետեւ ունեցա՛ծ էք ձեր մխիթարութիւնը:
“ಆದರೆ ಐಶ್ವರ್ಯವಂತರೇ, ನಿಮಗೆ ಕಷ್ಟ, ಏಕೆಂದರೆ ನೀವು ನಿಮ್ಮ ನೆಮ್ಮದಿಯನ್ನು ಹೊಂದಿದ್ದೀರಿ.
25 Վա՜յ ձեզի՝ որ կուշտ էք, որովհետեւ պիտի անօթենաք. վա՜յ ձեզի՝ որ հիմա կը խնդաք, որովհետեւ պիտի սգաք ու լաք:
ಈಗ ತಿಂದು ತೃಪ್ತಿಯಿಂದಿರುವವರೇ, ನಿಮಗೆ ಕಷ್ಟ, ಏಕೆಂದರೆ ನಿಮಗೆ ಹಸಿವೆಯಾಗುವುದು. ಈಗ ನಗುವವರೇ ನಿಮಗೆ ಕಷ್ಟ, ಏಕೆಂದರೆ ನೀವು ದುಃಖಿಸಿ ಗೋಳಾಡುವಿರಿ.
26 Վա՜յ ձեզի՝ երբ մարդիկ լաւ խօսին ձեր մասին, որովհետեւ իրենց հայրերը ա՛յդպէս կ՚ընէին սուտ մարգարէներուն»:
ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೆಯದಾಗಿ ಮಾತನಾಡಿದರೆ ನಿಮಗೆ ಕಷ್ಟ, ಇವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.
27 «Բայց կը յայտարարեմ ձեզի՝ որ մտիկ կ՚ընէք. “Սիրեցէ՛ք ձեր թշնամիները, բարի՛ք ըրէք ձեզ ատողներուն,
“ನನ್ನನ್ನು ಆಲಿಸುತ್ತಿರುವವರೆ ನನ್ನ ಮಾತನ್ನು ಕೇಳಿರಿ: ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ದ್ವೇಷಮಾಡುವವರಿಗೆ ಒಳ್ಳೆಯದನ್ನು ಮಾಡಿರಿ,
28 օրհնեցէ՛ք ձեզ անիծողները, աղօթեցէ՛ք ձեզ պախարակողներուն համար:
ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
29 Եթէ մէկը զարնէ այտիդ, մի՛ւսն ալ մօտեցուր անոր. եթէ առնէ հանդերձդ քեզմէ, մի՛ արգիլեր որ առնէ բաճկոնդ ալ:
ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ತೋರಿಸು. ನಿನ್ನ ಮೇಲಂಗಿಯನ್ನು ತೆಗೆದುಕೊಳ್ಳುವವನಿಗೆ, ನಿನ್ನ ಒಳ ಅಂಗಿಯನ್ನು ಕೊಟ್ಟುಬಿಡು.
30 Տո՛ւր ամէն մարդու՝ որ քեզմէ կ՚ուզէ, ու քու բաներդ առնողէն մի՛ պահանջեր զանոնք:
ನಿನ್ನಿಂದ ಕೇಳುವ ಪ್ರತಿಯೊಬ್ಬರಿಗೂ ಕೊಡು, ನಿನ್ನ ಸೊತ್ತನ್ನು ತೆಗೆದುಕೊಳ್ಳುವವನಿಂದ, ಅವುಗಳನ್ನು ತಿರುಗಿ ಕೇಳಬೇಡ.
31 Ի՛նչպէս կ՚ուզէք որ մարդիկ ընեն ձեզի, նո՛յնպէս ալ դուք ըրէք անոնց:
ಇತರರು ನಿಮಗೆ ಏನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿರಿ.
32 Եթէ սիրէք ձեզ սիրողները, ի՞նչ շնորհք կ՚ունենաք. որովհետեւ մեղաւորնե՛րն ալ կը սիրեն զիրենք սիրողները:
“ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ, ನಿಮಗೇನು ದೊಡ್ಡಸ್ತಿಕೆ ಬಂದೀತು? ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವರನ್ನೇ ಪ್ರೀತಿಸುತ್ತಾರೆ.
33 Եթէ բարիք ընէք ձեզի բարիք ընողներուն, ի՞նչ շնորհք կ՚ունենաք. որովհետեւ մեղաւորնե՛րն ալ նոյն բանը կ՚ընեն:
ನಿಮಗೆ ಒಳ್ಳೆಯದನ್ನು ಮಾಡುವವರಿಗೆ ನೀವು ಒಳ್ಳೆಯದನ್ನು ಮಾಡಿದರೆ ವಿಶೇಷವೇನು? ಪಾಪಿಗಳು ಸಹ ಹಾಗೆಯೇ ಮಾಡುತ್ತಾರಲ್ಲಾ.
34 Եթէ փոխ տաք այնպիսի մարդոց՝ որոնցմէ յոյս ունիք վերստանալու, ի՞նչ շնորհք կ՚ունենաք. որովհետեւ մեղաւորնե՛րն ալ փոխ կու տան մեղաւորներուն, որպէսզի վերստանան նոյն չափով:
ಯಾರಿಂದ ತಿರುಗಿ ಪಡೆದುಕೊಳ್ಳಬೇಕೆಂದು ನಿರೀಕ್ಷಿಸುತ್ತೀರೋ ಅಂಥವರಿಗೆ ಸಾಲಕೊಟ್ಟರೆ, ಅದರಿಂದ ನಿಮಗೆ ವಿಶೇಷವೇನು? ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟದ್ದನ್ನು ತಿರುಗಿ ಪಡೆಯುವಂತೆ, ಪಾಪಿಗಳಿಗೆ ಸಾಲ ಕೊಡುತ್ತಾರೆ.
35 Հապա դուք՝ սիրեցէ՛ք ձեր թշնամիները ու բարի՛ք ըրէք, փո՛խ տուէք՝ առանց փոխարէնը բան մը սպասելու, եւ ձեր վարձատրութիւնը շատ պիտի ըլլայ ու Ամենաբարձրին որդիները պիտի ըլլաք, որովհետեւ ան քաղցր է ապերախտներուն ու չարերուն հանդէպ:
ಆದರೆ ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಅವರಿಗೆ ಒಳ್ಳೆಯದನ್ನು ಮಾಡಿರಿ. ಏನನ್ನೂ ತಿರುಗಿ ನಿರೀಕ್ಷಿಸದೆ ಸಾಲ ಕೊಡಿರಿ, ಆಗ ನಿಮ್ಮ ಪ್ರತಿಫಲ ದೊಡ್ಡದಾಗಿರುವುದು. ನೀವು ಮಹೋನ್ನತ ದೇವರ ಮಕ್ಕಳಾಗಿರುವಿರಿ, ಅವರು ಕೃತಜ್ಞತೆಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವರಾಗಿದ್ದಾರೆ.
36 Ուրեմն արգահատո՛ղ եղէք, ինչպէս ձեր Հայրն ալ արգահատող է”»:
ನಿಮ್ಮ ತಂದೆಯು ಕರುಣೆಯುಳ್ಳವರಾಗಿರುವ ಪ್ರಕಾರ, ನೀವೂ ಕರುಣೆಯುಳ್ಳವರಾಗಿರಿ.
37 «Մի՛ դատէք՝ ու պիտի չդատուիք. մի՛ դատապարտէք՝ եւ պիտի չդատապարտուիք. ներեցէ՛ք՝ ու պիտի ներուի ձեզի:
“ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಇತರರನ್ನು ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಕ್ಷಮಿಸಿರಿ, ಆಗ ನಿಮ್ಮನ್ನೂ ಕ್ಷಮಿಸುವರು.
38 Տուէ՛ք՝ եւ պիտի տրուի ձեզի. լաւ չափով՝ կոխուած, ցնցուած, լեփլեցուն պիտի տրուի ձեր գոգը. քանի որ պիտի չափուի ձեզի ա՛յն չափով՝ որով դուք կը չափէք»:
ಕೊಡಿರಿ, ಆಗ ನಿಮಗೂ ಕೊಡುವರು. ಒಳ್ಳೆಯ ಅಳತೆಯಲ್ಲಿ ಒತ್ತಿ, ಕುಲುಕಿ, ಚೆಲ್ಲುವಂತೆ ಮನುಷ್ಯರು ನಿಮ್ಮ ಮಡಿಲಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು,” ಎಂದರು.
39 Առակ մըն ալ ըսաւ անոնց. «Կոյրը կրնա՞յ առաջնորդել կոյրը. միթէ երկո՛ւքն ալ փոսը պիտի չիյնա՞ն:
ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದು: “ಕುರುಡನು ಕುರುಡನಿಗೆ ದಾರಿತೋರಿಸಬಲ್ಲನೋ? ಅವರಿಬ್ಬರೂ ಹಳ್ಳಕ್ಕೆ ಬೀಳುವರಲ್ಲವೇ?
40 Աշակերտը իր վարդապետէն գերիվեր չէ. բայց ամէն կատարեալ աշակերտ՝ իր վարդապետին պէս պիտի ըլլայ:
ತನ್ನ ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ, ಆದರೆ ಪರಿಪೂರ್ಣನಾಗಿರುವ ಪ್ರತಿಯೊಬ್ಬನು ತನ್ನ ಗುರುವಿನಂತೆ ಇರುವನಷ್ಟೇ.
41 Ինչո՞ւ կը տեսնես եղբօրդ աչքին մէջի շիւղը, ու չես նշմարեր քու աչքիդ մէջի գերանը:
“ನೀನು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ನೋಡುವುದೇಕೆ?
42 Կամ ի՞նչպէս կրնաս ըսել եղբօրդ. “Եղբա՛յր, թո՛յլ տուր որ հանեմ աչքիդ մէջի շիւղը”, երբ դուն չես տեսներ քու աչքիդ մէջի գերանը: Կեղծաւո՛ր, նախ հանէ՛ քու աչքէդ գերանը, եւ ա՛յն ատեն յստակ պիտի տեսնես՝ հանելու համար եղբօրդ աչքին մէջի շիւղը»:
ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೀನು ತೆಗೆಯದೆ ನಿನ್ನ ಸಹೋದರನಿಗೆ, ‘ಸಹೋದರನೇ, ನಿನ್ನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯುತ್ತೇನೆ,’ ಎಂದು ನೀನು ಹೇಳುವುದು ಹೇಗೆ? ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ತೆಗೆದುಹಾಕು, ಆಮೇಲೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯಲು ನಿನ್ನ ಕಣ್ಣು ಸ್ಪಷ್ಟವಾಗಿ ಕಾಣುವುದು.
43 «Արդարեւ չկայ լաւ ծառ մը՝ որ վատ պտուղ բերէ, ո՛չ ալ վատ ծառ մը՝ որ լաւ պտուղ բերէ.
“ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಇಲ್ಲವೆ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.
44 քանի որ իւրաքանչիւր ծառ կը ճանչցուի իր պտուղէն: Որովհետեւ փուշերէն թուզ չեն քաղեր, ու մորենիէն խաղող չեն կթեր:
ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವುದು. ಏಕೆಂದರೆ ಮನುಷ್ಯರು ಮುಳ್ಳುಗಿಡಗಳಲ್ಲಿ ಅಂಜೂರಗಳನ್ನು ಕೀಳುವುದಿಲ್ಲ, ಮುಳ್ಳು ಕಳ್ಳಿಯಲ್ಲಿ ದ್ರಾಕ್ಷಿಗಳನ್ನು ಕೊಯ್ಯುವುದಿಲ್ಲ.
45 Բարի մարդը՝ բարութիւն կը բխեցնէ իր սիրտին բարի գանձէն, իսկ չար մարդը՝ չարիք կը բխեցնէ իր սիրտին չար գանձէն. քանի բերանը կը խօսի սիրտին լիութենէն»:
ಒಳ್ಳೆಯವನು ತನ್ನ ಹೃದಯದ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಆದರೆ ಕೆಟ್ಟವನು ತನ್ನ ಹೃದಯದ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.
46 «Ինչո՞ւ “Տէ՛ր, Տէ՛ր” կը կոչէք զիս, բայց չէք գործադրեր ինչ որ կ՚ըսեմ:
“ನನ್ನನ್ನು ನೀವು, ‘ಕರ್ತದೇವರೇ, ಕರ್ತದೇವರೇ,’ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವುದು ಏಕೆ?
47 Ո՛վ որ կու գայ ինծի, կը լսէ իմ խօսքերս ու կը գործադրէ զանոնք, ցոյց տամ ձեզի թէ որո՛ւ կը նմանի:
ಯಾರು ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿ ಅದರಂತೆ ನಡೆಯುತ್ತಾರೋ, ಅಂಥವರು ಯಾರಿಗೆ ಸಮಾನರಾಗಿದ್ದಾರೆಂದು ನಾನು ನಿಮಗೆ ತೋರಿಸುತ್ತೇನೆ.
48 Ան կը նմանի տուն կառուցանող մարդու մը, որ փորեց, խորացաւ եւ հիմը դրաւ վէմի վրայ. երբ ողողում եղաւ՝ հեղեղը զարկաւ այդ տան բայց չկրցաւ սարսել զայն, որովհետեւ վէմի վրայ հիմնուած էր:
ಅವರು ಆಳವಾಗಿ ಅಗೆದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ, ಮನೆ ಕಟ್ಟಿದವರಿಗೆ ಸಮಾನರಾಗಿದ್ದಾರೆ. ಪ್ರಳಯವು ಎದ್ದು, ಪ್ರವಾಹವು ಆ ಮನೆಗೆ ರಭಸವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು, ಏಕೆಂದರೆ ಅದು ಬಲವಾಗಿ ಕಟ್ಟಲಾಗಿತ್ತು.
49 Իսկ ա՛ն որ կը լսէ իմ խօսքերս ու չի գործադրեր, կը նմանի մարդու մը, որ հողի վրայ տուն կառուցանեց՝ առանց հիմի. հեղեղը զարկաւ անոր եւ իսկոյն փլաւ, ու մեծ եղաւ այդ տան աւերումը»:
ಆದರೆ ನನ್ನ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದೆ ಇರುವವರು, ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೆ ಕಟ್ಟಿದವರಿಗೆ ಹೋಲಿಕೆಯಾಗಿದ್ದಾರೆ. ಪ್ರವಾಹವು ಆ ಮನೆಗೆ ಅಪ್ಪಳಿಸಿದಾಗ, ಕೂಡಲೇ ಅದು ಕುಸಿದು ಬಿತ್ತು. ಹೀಗೆ ಆ ಮನೆಯು ಸರ್ವನಾಶವಾಯಿತು.”

< ՂՈԻԿԱՍ 6 >