< ՄԱՐԿՈՍ 1 >

1 Աստուծոյ Որդիին՝ Յիսուս Քրիստոսի աւետարանին սկիզբը:
ದೇವಪುತ್ರರಾದ ಯೇಸುಕ್ರಿಸ್ತರ ಸುವಾರ್ತೆಯ ಆರಂಭ.
2 Ինչպէս Մարգարէներուն մէջ գրուած է. «Ահա՛ ես կը ղրկեմ իմ պատգամաւորս քու առջեւէդ. ան պիտի պատրաստէ ճամբադ՝ քու առջեւդ»:
ಪ್ರವಾದಿ ಯೆಶಾಯನ ಗ್ರಂಥದಲ್ಲಿ: “ಇಗೋ, ನಿನ್ನ ಮುಂದೆ ನಾನು ನನ್ನ ದೂತನನ್ನು ಕಳುಹಿಸುತ್ತೇನೆ, ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.”
3 «Անապատին մէջ գոչողին ձայնը. “Պատրաստեցէ՛ք Տէրոջ ճամբան, շտկեցէ՛ք անոր շաւիղները”»:
“‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವವನ ಸ್ವರವದೆ.”
4 Յովհաննէս կը մկրտէր անապատին մէջ եւ կը քարոզէր ապաշխարութեան մկրտութիւնը՝ մեղքերու ներումին համար:
ಎಂದು ಬರೆದಿಟ್ಟ ಪ್ರಕಾರ, ಸ್ನಾನಿಕನಾದ ಯೋಹಾನನು ಅರಣ್ಯದಲ್ಲಿ ಪಾಪಗಳ ಪರಿಹಾರಕ್ಕಾಗಿ ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು, ಸಾರುತ್ತಾ ಬಂದನು.
5 Ամբողջ Հրէաստանի երկիրը ու բոլոր Երուսաղեմացիները կ՚երթային անոր: Բոլորը կը մկրտուէին անկէ Յորդանան գետին մէջ՝ իրենց մեղքերը խոստովանելով:
ಯೂದಾಯ ಪ್ರಾಂತದ ಎಲ್ಲಾ ಹಳ್ಳಿಗಳಿಂದ ಮತ್ತು ಯೆರೂಸಲೇಮ್ ನಗರದಿಂದ ಎಲ್ಲಾ ಜನರು ಅವನ ಬಳಿಗೆ ಬರುತ್ತಿದ್ದರು. ಅವರು ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
6 Յովհաննէս հագած էր ուղտի մազէ հագուստ, եւ իր մէջքը կապած էր կաշիէ գօտի. իր կերակուրը մարախ ու վայրի մեղր էր:
ಯೋಹಾನನು ಒಂಟೆಯ ಕೂದಲಿನ ಉಡುಪನ್ನು ಧರಿಸಿ, ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳು ಮತ್ತು ಕಾಡುಜೇನು ಅವನ ಆಹಾರವಾಗಿತ್ತು.
7 Ան կը քարոզէր ու կ՚ըսէր. «Ինձմէ հզօրը կու գայ իմ ետեւէս: Ես արժանի չեմ ծռելու եւ անոր կօշիկներուն կապերը քակելու:
ಅವನು, “ನನಗಿಂತ ಶಕ್ತರೊಬ್ಬರು ನನ್ನ ನಂತರ ಬರುತ್ತಾರೆ, ಅವರ ಪಾದರಕ್ಷೆಗಳ ಪಟ್ಟಿಗಳನ್ನು ದಾಸನಂತೆ ಬಾಗಿ ಬಿಚ್ಚುವುದಕ್ಕೂ ನಾನು ಅರ್ಹನಲ್ಲ.
8 Արդարեւ ես ջուրո՛վ մկրտեցի ձեզ, բայց ան Սուրբ Հոգիո՛վ պիտի մկրտէ ձեզ»:
ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ, ಆದರೆ ಅವರು ನಿಮಗೆ ಪವಿತ್ರಾತ್ಮರಲ್ಲಿಯೇ ದೀಕ್ಷಾಸ್ನಾನ ಮಾಡಿಸುವರು,” ಎಂದು ಘೋಷಿಸುತ್ತಿದ್ದನು.
9 Այդ օրերը Յիսուս Գալիլեայի Նազարէթէն եկաւ, ու Յովհաննէսէ մկրտուեցաւ Յորդանանի մէջ:
ಹೀಗಿರುವಲ್ಲಿ, ಒಂದು ದಿನ ಯೇಸು ಗಲಿಲಾಯ ಪ್ರಾಂತದ ನಜರೇತ್ ಎಂಬ ಪಟ್ಟಣದಿಂದ ಬಂದು, ಯೊರ್ದನ್ ನದಿಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡರು.
10 Իսկոյն ջուրէն դուրս ելլելով՝ տեսաւ երկինքը բացուած, եւ Հոգին՝ որ աղաւնիի պէս կ՚իջնէր իր վրայ.
ಯೇಸು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಆಕಾಶವು ತೆರೆದು, ಪವಿತ್ರಾತ್ಮರು ಪಾರಿವಾಳದಂತೆ ತಮ್ಮ ಮೇಲೆ ಇಳಿದು ಬರುವುದನ್ನು ಕಂಡರು.
11 ու ձայն մը եկաւ երկինքէն՝ որ կ՚ըսէր. «Դո՛ւն ես իմ սիրելի Որդիս՝ որուն հաճեցայ»:
ಆಗ, “ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ,” ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.
12 Իսկոյն Հոգին անապատը մղեց զայն:
ಕೂಡಲೇ ಪವಿತ್ರಾತ್ಮ ದೇವರು ಯೇಸುವನ್ನು ಅರಣ್ಯಕ್ಕೆ ನಡೆಸಿದರು.
13 Քառասուն օր հոն էր՝ անապատին մէջ՝ Սատանայէն փորձուած. գազաններու հետ էր, եւ հրեշտակները կը սպասարկէին իրեն:
ಯೇಸು ಅಲ್ಲಿ ನಲವತ್ತು ದಿನಗಳು, ಸೈತಾನನಿಂದ ಶೋಧನೆಗೆ ಒಳಗಾದರು. ಕಾಡುಮೃಗಗಳೊಡನೆ ಅರಣ್ಯದಲ್ಲಿ ಇದ್ದು, ದೇವದೂತರಿಂದ ಉಪಚಾರ ಪಡೆದರು.
14 Յովհաննէսի մատնուելէն ետք Յիսուս՝ Գալիլեա գալով՝ Աստուծոյ արքայութեան աւետարանը կը քարոզէր
ಯೋಹಾನನು ಬಂಧಿತನಾಗಿ ಸೆರೆಯಾದ ತರುವಾಯ, ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಸಾರಿದರು:
15 ու կ՚ըսէր. «Ժամանակը լրացած է, եւ Աստուծոյ թագաւորութիւնը մօտեցած է. ապաշխարեցէ՛ք, ու հաւատացէ՛ք աւետարանին»:
“ಕಾಲವು ಪರಿಪೂರ್ಣವಾಗಿದೆ, ದೇವರ ರಾಜ್ಯವು ಸಮೀಪಿಸಿದೆ, ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ,” ಎಂದು ಹೇಳಿದರು.
16 Երբ Գալիլեայի ծովուն եզերքը կը քալէր, տեսաւ Սիմոնը եւ Սիմոնի եղբայրը՝ Անդրէասը, ծովը ուռկան նետած, որովհետեւ ձկնորս էին:
ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಹೋಗುತ್ತಿರುವಾಗ, ಸೀಮೋನನು ಮತ್ತು ಅವನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾಗಿದ್ದ ಅವರು ಸರೋವರದಲ್ಲಿ ಬಲೆ ಬೀಸುತ್ತಿದ್ದರು.
17 Յիսուս ըսաւ անոնց. «Եկէ՛ք իմ ետեւէս, ու մարդո՛ց որսորդ պիտի ընեմ ձեզ»:
ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ. ನಾನು ನಿಮ್ಮನ್ನು, ಮನುಷ್ಯರನ್ನು ದೇವರ ಮಾರ್ಗದಲ್ಲಿ ನಡೆಸುವವರನ್ನಾಗಿ ಮಾಡುವೆನು,” ಎಂದು ಹೇಳಿದರು.
18 Անոնք ալ իսկոյն թողուցին իրենց ուռկանները եւ հետեւեցան անոր:
ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
19 Անկէ քիչ մը յառաջ երթալով՝ տեսաւ Զեբեդեան Յակոբոսն ու անոր եղբայրը՝ Յովհաննէսը, որոնք նաւուն մէջ կը կարկտնէին իրենց ուռկանները:
ಯೇಸು ಅಲ್ಲಿಂದ ಮುಂದೆ ಹೋಗುತ್ತಿದ್ದಾಗ, ಜೆಬೆದಾಯನ ಮಗ ಯಾಕೋಬ ಮತ್ತು ಅವನ ತಮ್ಮ ಯೋಹಾನನನ್ನು ಕಂಡರು. ಅವರು ತಮ್ಮ ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು.
20 Իսկոյն կանչեց զանոնք. անոնք ալ գացին անոր ետեւէն, նաւուն մէջ ձգելով իրենց հայրը՝ Զեբեդէոսը վարձկաններուն հետ:
ಕೂಡಲೇ ಯೇಸು ಅವರನ್ನು ಕರೆಯಲು, ಅವರು ತಮ್ಮ ತಂದೆ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
21 Մտան Կափառնայում, եւ իսկոյն Շաբաթ օրը ժողովարանը մտնելով՝ կը սորվեցնէր:
ಅವರು ಕಪೆರ್ನೌಮಿಗೆ ಹೋದರು, ಕೂಡಲೇ ಸಬ್ಬತ್ ದಿನದಂದು ಯೇಸು ಸಭಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು.
22 Անոնք կ՚ապշէին անոր ուսուցումին վրայ, որովհետեւ անոնց կը սորվեցնէր իշխանութիւն ունեցողի մը պէս, ո՛չ թէ դպիրներուն պէս:
ಯೇಸುವಿನ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು. ಏಕೆಂದರೆ ಯೇಸು ನಿಯಮ ಬೋಧಕರಂತೆ ಬೋಧಿಸದೆ, ಅಧಿಕಾರವಿದ್ದವರಂತೆ ಬೋಧಿಸುತ್ತಿದ್ದರು.
23 Անոնց ժողովարանին մէջ մարդ մը կար՝ անմաքուր ոգիով: Ան աղաղակեց.
ಆ ಸಮಯದಲ್ಲಿ ಸಭಾಮಂದಿರದೊಳಗೆ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನಿದ್ದನು.
24 «Թո՛ղ մեզ. դուն ի՞նչ ունիս մեզի հետ, Յիսո՛ւս Նազովրեցի. միթէ մեզ կորսնցնելո՞ւ եկար: Գիտեմ թէ ո՛վ ես՝ Աստուծոյ Սուրբը»:
ಅವನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀವು ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರುವೆಯೋ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರಿಂದ ಬಂದ ಪರಿಶುದ್ಧರು,” ಎಂದು ಕೂಗಿ ಹೇಳಿದನು.
25 Յիսուս զայն սաստեց՝ ըսելով. «Պապանձէ՛ ու ելի՛ր ատկէ»:
ಆಗ ಯೇಸು, “ಸುಮ್ಮನಿರು, ಅವನೊಳಗಿಂದ ಹೊರಗೆ ಬಾ,” ಎಂದು ಗದರಿಸಿದರು.
26 Անմաքուր ոգին սաստիկ ցնցեց զայն, բարձրաձայն աղաղակեց եւ ելաւ անկէ:
ಅಶುದ್ಧಾತ್ಮವು ಅವನನ್ನು ಉಗ್ರವಾಗಿ ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂತು.
27 Բոլորը այլայլեցան, ա՛յնքան՝ որ կը հարցնէին իրարու. «Այս ի՞նչ է. ի՞նչ նոր ուսուցում է ասիկա, որովհետեւ անմաքուր ոգիներո՛ւն ալ կը հրամայէ իշխանութեամբ, ու կը հնազանդին իրեն»:
ಜನರೆಲ್ಲರು ಇದನ್ನು ಕಂಡು ವಿಸ್ಮಯಗೊಂಡು, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ಅಶುದ್ಧಾತ್ಮಗಳಿಗೆ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
28 Եւ իսկոյն իր համբաւը տարածուեցաւ Գալիլեայի ամբողջ շրջակայքը:
ಕೂಡಲೇ ಯೇಸುವಿನ ಸುದ್ದಿಯು ಗಲಿಲಾಯದ ಸುತ್ತಮುತ್ತಲಿನ ಪ್ರಾಂತದಲ್ಲೆಲ್ಲಾ ಹಬ್ಬಿತು.
29 Իսկոյն ժողովարանէն ելլելով՝ Յակոբոսի ու Յովհաննէսի հետ մտաւ Սիմոնի եւ Անդրէասի տունը:
ಅವರು ಸಭಾಮಂದಿರವನ್ನು ಬಿಟ್ಟ ಕೂಡಲೇ, ಯಾಕೋಬ ಯೋಹಾನರೊಡನೆ ಸೀಮೋನ ಅಂದ್ರೆಯರ ಮನೆಗೆ ಹೋದರು.
30 Սիմոնի զոքանչը պառկած էր՝ տենդով հիւանդացած. իսկոյն անոր մասին ըսին իրեն:
ಅಲ್ಲಿ ಸೀಮೋನನ ಅತ್ತೆಯು ಜ್ವರದಿಂದ ಮಲಗಿದ್ದಳು. ಕೂಡಲೇ ಅವರು ಆಕೆಯ ವಿಷಯವಾಗಿ ಯೇಸುವಿಗೆ ತಿಳಿಸಿದರು.
31 Յիսուս մօտեցաւ, բռնեց անոր ձեռքէն ու ոտքի հանեց զայն. իսկոյն տենդը թողուց զայն, եւ կը սպասարկէր անոնց:
ಯೇಸು ಆಕೆಯ ಬಳಿಗೆ ಬಂದು, ಕೈಹಿಡಿದು ಎಬ್ಬಿಸಿದರು. ಜ್ವರವು ಆಕೆಯನ್ನು ಬಿಟ್ಟುಹೋಯಿತು ಮತ್ತು ಆಕೆಯು ಅವರಿಗೆ ಉಪಚರಿಸಿದಳು.
32 Երբ իրիկուն եղաւ, արեւին մայր մտած ատենը՝ բոլոր ախտաւորներն ու դիւահարները իրեն կը բերէին:
ಆ ಸಂಜೆ ಸೂರ್ಯಾಸ್ತವಾದ ಮೇಲೆ ಜನರು ಅಸ್ವಸ್ಥರಾದವರನ್ನು ಮತ್ತು ದೆವ್ವಪೀಡಿತರನ್ನು ಯೇಸುವಿನ ಬಳಿಗೆ ಕರೆತಂದರು.
33 Ամբողջ քաղաքը դուռը հաւաքուած էր:
ಇಡೀ ಊರಿನವರು ಕೂಡಿ ಆ ಮನೆಯ ಬಾಗಿಲಿನ ಬಳಿ ಬಂದರು.
34 Շատ հիւանդներ՝ զանազան ախտերէ բուժեց, եւ շատ դեւեր դուրս հանեց: Դեւերուն թոյլ չէր տար որ խօսին, որովհետեւ կը ճանչնային զինք:
ಯೇಸು ವಿವಿಧ ರೋಗಗಳಿಗೆ ಒಳಗಾದ ಅನೇಕರನ್ನು ಸ್ವಸ್ಥಪಡಿಸಿ, ಅನೇಕ ದೆವ್ವಗಳನ್ನು ಓಡಿಸಿದರು. ಆದರೆ ತಾನು ಯಾರೆಂದು ಆ ದೆವ್ವಗಳಿಗೆ ತಿಳಿದಿದ್ದರಿಂದ ಯೇಸು ಅವುಗಳಿಗೆ ಮಾತನಾಡಲು ಅನುಮತಿಸಲಿಲ್ಲ.
35 Առտուն՝ արշալոյսէն շատ առաջ՝ կանգնեցաւ, դուրս ելաւ, գնաց ամայի տեղ մը, ու հոն աղօթեց:
ಬೆಳಗಾಗುವ ಮೊದಲೇ, ಇನ್ನೂ ಕತ್ತಲಿರುವಾಗ, ಯೇಸು ಎದ್ದು ಏಕಾಂತ ಸ್ಥಳಕ್ಕೆ ಹೊರಟುಹೋಗಿ, ಅಲ್ಲಿ ಪ್ರಾರ್ಥನೆ ಮಾಡುತ್ತಿದ್ದರು.
36 Սիմոն եւ իրեն հետ եղողները հետապնդեցին զայն:
ಆಗ ಸೀಮೋನನು ಮತ್ತು ಅವನ ಸಂಗಡಿಗರು ಯೇಸುವನ್ನು ಹುಡುಕಿಕೊಂಡು ಹೋದರು.
37 Երբ գտան զայն՝ ըսին անոր. «Բոլորը կը փնտռեն քեզ»:
ಯೇಸುವನ್ನು ಕಂಡ ಮೇಲೆ, “ಎಲ್ಲರೂ ನಿಮ್ಮನ್ನು ಎದುರು ನೋಡುತ್ತಿದ್ದಾರೆ,” ಎಂದು ಹೇಳಿದರು.
38 Ըսաւ անոնց. «Եկէ՛ք երթանք մերձակայ գիւղաքաղաքները, որպէսզի հոն ալ քարոզեմ, որովհետեւ եկած եմ ա՛յս նպատակով»:
ಯೇಸು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ. ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು. ನಾನು ಬಂದಿರುವುದು ಇದಕ್ಕಾಗಿಯೇ,” ಎಂದು ಹೇಳಿದರು.
39 Եւ անոնց ժողովարաններուն մէջ կը քարոզէր՝ ամբողջ Գալիլեայի մէջ, ու դեւեր կը հանէր:
ಆದ್ದರಿಂದ ಯೇಸು ಗಲಿಲಾಯ ಪ್ರಾಂತವನ್ನೆಲ್ಲಾ ಸಂಚರಿಸಿ, ಅವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೆವ್ವಗಳನ್ನು ಓಡಿಸುತ್ತಾ ಇದ್ದರು.
40 Բորոտ մըն ալ եկաւ. կ՚աղաչէր, կը ծնրադրէր ու կ՚ըսէր անոր. «Եթէ ուզես՝ կրնա՛ս զիս մաքրել»:
ಕುಷ್ಠರೋಗಿಯಾಗಿದ್ದ ಒಬ್ಬನು ಯೇಸುವಿನ ಬಳಿಗೆ ಬಂದು, ಮೊಣಕಾಲೂರಿ, “ನಿಮಗೆ ಮನಸ್ಸಿದ್ದರೆ, ನೀವು ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದು ಅವರನ್ನು ಬೇಡಿಕೊಂಡನು.
41 Յիսուս գթալով՝ երկարեց ձեռքը, դպաւ անոր եւ ըսաւ. «Կ՚ուզե՛մ, մաքրուէ՛»:
ಯೇಸು ಕನಿಕರಪಟ್ಟು, ತಮ್ಮ ಕೈಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸಿದೆ, ನೀನು ಶುದ್ಧನಾಗು,” ಎಂದರು.
42 Երբ ասիկա ըսաւ անոր, իսկոյն բորոտութիւնը գնաց անկէ, ու մաքրուեցաւ:
ತಕ್ಷಣವೇ ಕುಷ್ಠರೋಗವು ಹೋಗಿ ಅವನು ಶುದ್ಧನಾದನು.
43 Իսկ ինք ազդարարեց անոր եւ իսկոյն ուղարկեց՝ ըսելով անոր.
ಯೇಸು ಅವನಿಗೆ, “ನೋಡು, ಇದನ್ನು ಯಾರಿಗೂ ಹೇಳಬೇಡ. ಆದರೆ ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿ, ಮೋಶೆಯು ಆಜ್ಞಾಪಿಸಿದ್ದನ್ನು ಶುದ್ಧತ್ವಕ್ಕಾಗಿ ಸಮರ್ಪಿಸು ಇದು ಅವರಿಗೆ ಸಾಕ್ಷಿಯಾಗಿರಲಿ,” ಎಂದು ಅವನಿಗೆ ಕಟ್ಟುನಿಟ್ಟಾಗಿ ಎಚ್ಚರಿಸಿ, ಕೂಡಲೇ ಅವನನ್ನು ಕಳುಹಿಸಿಬಿಟ್ಟರು.
44 «Զգուշացի՛ր որ ո՛չ մէկուն բան մը ըսես. հապա գնա՛, ցո՛յց տուր քեզ քահանային, ու մատուցանէ՛ քու մաքրուելուդ ընծան՝ որ Մովսէս պատուիրեց, իբր վկայութիւն անոնց»:
45 Բայց ան դուրս ելլելով՝ սկսաւ շատ հրապարակել եւ բանը տարածել, այնպէս որ ա՛լ ինք չէր կրնար բացայայտօրէն քաղաք մը մտնել, հապա դուրսը՝ ամայի տեղեր էր. սակայն ամէն կողմէ կու գային իրեն:
ಆದರೆ ಅವನು ಹೋಗಿ ಈ ವಿಷಯವನ್ನು ಎಲ್ಲಾ ಕಡೆಗಳಲ್ಲಿ ಹಬ್ಬಿಸಿದನು. ಇದರ ಪರಿಣಾಮವಾಗಿ ಯೇಸು ಯಾವ ಊರೊಳಗೂ ಬಹಿರಂಗವಾಗಿ ಪ್ರವೇಶಿಸಲಾಗದೆ, ನಿರ್ಜನ ಪ್ರದೇಶಗಳಲ್ಲಿರುತ್ತಿದ್ದರು. ಆದರೂ ಜನರು ಎಲ್ಲಾ ಕಡೆಗಳಿಂದ ಯೇಸುವಿನ ಬಳಿಗೆ ಬರುತ್ತಿದ್ದರು.

< ՄԱՐԿՈՍ 1 >