< ՄԱՐԿՈՍ 12 >

1 Ապա սկսաւ առակներով խօսիլ անոնց հետ ու ըսել. «Մարդ մը այգի տնկեց, ցանկ քաշեց անոր շուրջը, հնձանի փոս փորեց, աշտարակ կառուցանեց, մշակներու յանձնեց զայն, եւ ճամբորդեց:
ಆಗ ಯೇಸು ಅವರೊಂದಿಗೆ ಸಾಮ್ಯಗಳಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು, “ಒಬ್ಬ ಮನುಷ್ಯನುಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿಸಿ ದ್ರಾಕ್ಷಿಯ ಆಲೆಗಾಗಿ ಒಂದು ಗುಂಡಿಯನ್ನು ತೆಗೆಸಿಕಾವಲು ಗೋಪುರವನ್ನು ಕಟ್ಟಿಸಿದನು. ಬಳಿಕ ಆ ತೋಟವನ್ನು ದ್ರಾಕ್ಷಿಯ ತೋಟಗಾರರಿಗೆ ಗುತ್ತಿಗೆಗೆ ಕೊಟ್ಟು, ಹೊರದೇಶಕ್ಕೆ ಹೊರಟು ಹೋದನು.
2 Ատենին ծառայ մը ղրկեց մշակներուն, որպէսզի մշակներէն ստանայ այգիին պտուղէն:
ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಸೇವಕನನ್ನು ಗುತ್ತಿಗೆದಾರರ ಬಳಿಗೆ ಕಳುಹಿಸಿದನು.
3 Իսկ անոնք բռնեցին, ծեծեցին զայն ու պարապ ճամբեցին:
ಆದರೆ ಅವರು ಅವನನ್ನು ಹಿಡಿದುಕೊಂಡು ಹೊಡೆದು ಏನೂ ಕೊಡದೆ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
4 Դարձեալ ուրիշ ծառայ մըն ալ ղրկեց անոնց. զայն ալ քարկոծելով՝ գլուխը վիրաւորեցին եւ անպատուուած ճամբեցին:
ಆ ತೋಟದ ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಲು ಅವರು ಅವನ ತಲೆಯ ಮೇಲೆ ಹೊಡೆದು ಗಾಯಗೊಳಿಸಿ ಅಪಮಾನಮಾಡಿ ಕಳುಹಿಸಿಬಿಟ್ಟರು.
5 Դարձեալ ուրիշ մը ղրկեց, ու զայն սպաննեցին: Շատ ուրիշներ ալ ղրկեց, որոնցմէ ոմանք ծեծեցին եւ ոմանք սպաննեցին:
ಆದರೂ ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ಇವನನ್ನು ಅವರು ಕೊಂದು ಹಾಕಿದರು. ಇನ್ನೂ ಅನೇಕರಿಗೆ ಅವರು ಹಾಗೆಯೇ ಮಾಡಿ, ಅವರಲ್ಲಿ ಕೆಲವರನ್ನು ಹೊಡೆದರು ಮತ್ತು ಕೆಲವರನ್ನು ಕೊಂದು ಹಾಕಿದರು.
6 Տակաւին սիրելի որդի մը ունէր. վերջապէս զայն ալ ղրկեց անոնց՝ ըսելով. “Թերեւս պատկառին որդիէս”:
ಅವನಿಗೆ ಕಳುಹಿಸಲು ಇನ್ನು ಒಬ್ಬನಿದ್ದನು. ಯಾರೆಂದರೆ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನು. ತನ್ನ ಮಗನಿಗೆ ಅವರು ಮರ್ಯಾದೆ ಕೊಡಬಹುದೆಂದು ಯಜಮಾನನು ಕೊನೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.
7 Բայց այդ մշակները ըսին իրարու. “Ա՛յս է ժառանգորդը. եկէ՛ք սպաննենք զայն, ու ժառանգութիւնը մե՛րը պիտի ըլլայ”:
ಆದರೆ ಆ ಗುತ್ತಿಗೆದಾರರು, ‘ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು’ ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡು,
8 Բռնեցին զայն, սպաննեցին եւ այգիէն դուրս հանեցին:
ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷಿಯ ತೋಟದಿಂದ ಹೊರಗೆ ಬಿಸಾಡಿದರು.
9 Ուրեմն այգիին տէրը ի՞նչ պիտի ընէ. պիտի գայ ու կորսնցնէ մշակները, եւ այգին պիտի տայ ուրիշներու:
ಹಾಗಾದರೆ ಆ ದ್ರಾಕ್ಷಾ ತೋಟದ ಯಜಮಾನನು ಏನು ಮಾಡುವನು? ಅವನು ಬಂದು ಆ ಗುತ್ತಿಗೆದಾರರನ್ನು ಸಂಹರಿಸಿ ತನ್ನ ದ್ರಾಕ್ಷಾತೋಟವನ್ನು ಬೇರೆಯವರಿಗೆ ಒಪ್ಪಿಸುವನು.
10 Չէ՞ք կարդացեր սա՛ գրուածը. “Այն քարը՝ որ կառուցանողները մերժեցին, անիկա՛ եղաւ անկիւնաքարը.
೧೦“‘ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
11 ասիկա Տէրոջմէ՛ն եղաւ, եւ սքանչելի է մեր աչքերուն”»:
೧೧ಇದು ಕರ್ತನಿಂದಲೇ ಆಯಿತು, ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರುತ್ತದೆ ಎಂಬ ಶಾಸ್ತ್ರವಚನಗಳನ್ನೂ ನೀವು ಓದಲಿಲ್ಲವೇ?’” ಎಂದನು.
12 Անոնք կը ջանային բռնել զայն, բայց բազմութենէն կը վախնային. որովհետեւ գիտցան թէ այդ առակը խօսեցաւ իրենց դէմ: Ուստի թողուցին զայն, եւ գացին:
೧೨ಯೇಸು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದ್ದಾನೆ ಎಂದು ಅವರು ತಿಳಿದುಕೊಂಡು ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.
13 Փարիսեցիներէն ու Հերովդէսեաններէն ոմանք ղրկեցին անոր, որպէսզի խօսքով բռնեն զայն:
೧೩ಆ ಮೇಲೆ ಅವರು ಯೇಸುವನ್ನು ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ, ಹೆರೋದ್ಯರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.
14 Անոնք եկան եւ ըսին անոր. «Վարդապե՛տ, գիտենք թէ ճշմարտախօս ես, ու ո՛չ մէկուն համար հոգ կ՚ընես. քանի որ երեսպաշտութիւն չես ըներ մարդոց, հապա ճշմարտութեամբ կը սորվեցնես Աստուծոյ ճամբան: Արտօնուա՞ծ է կայսրին տուրք տալ. տա՞նք՝ թէ չտանք»:
೧೪ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು.
15 Յիսուս գիտնալով անոնց կեղծաւորութիւնը՝ ըսաւ անոնց. «Ինչո՞ւ զիս կը փորձէք: Բերէ՛ք ինծի դահեկան մը՝ որ տեսնեմ»:
೧೫ಆದರೆ ಯೇಸು ಅವರ ಕಪಟತನವನ್ನು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ನಾನು ಅದನ್ನು ನೋಡುತ್ತೇನೆ” ಎಂದು ಹೇಳಲು ಅವರು ತಂದರು.
16 Անոնք ալ բերին: Ըսաւ անոնց. «Որո՞ւնն են այս պատկերն ու գրութիւնը»: Անոնք ըսին իրեն. «Կայսրի՛ն»:
೧೬ಆಗ ಆತನು ಇದರ “ಮೇಲಿರುವುದು ಯಾರ ಮುಖಮುದ್ರೆ? ಮತ್ತು ಯಾರ ಲಿಪಿ?” ಎಂದು ಕೇಳಿದ್ದಕ್ಕೆ ಅವರು ಕೈಸರನದು ಅಂದರು.
17 Յիսուս ալ պատասխանեց անոնց. «Ինչ որ կայսրինն է՝ կայսրի՛ն տուէք, եւ ինչ որ Աստուծոյ է՝ Աստուծո՛յ oտուէքp»: Ու զարմացան իր վրայ:
೧೭ಯೇಸು, “ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ” ಎಂದು ಹೇಳಿದನು. ಅದಕ್ಕೆ ಅವರು ಆತನ ವಿಷಯವಾಗಿ ಬಹು ಆಶ್ಚರ್ಯಪಟ್ಟರು.
18 Սադուկեցիներն ալ, որոնք կ՚ըսեն թէ յարութիւն չկայ, եկան անոր քով եւ հարցուցին իրեն.
೧೮ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು,
19 «Վարդապե՛տ, Մովսէս գրեց մեզի. “Եթէ մէկուն եղբայրը մեռնի, ու կինը այրի ձգէ եւ զաւակ չթողու, անոր եղբայրը թող առնէ անոր կինը ու զարմ տայ իր եղբօր”:
೧೯ಆತನನ್ನು ಪ್ರಶ್ನೆಮಾಡಿದ್ದೇನಂದರೆ, “ಬೋಧಕನೇ, ‘ಅಣ್ಣನಾದವನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಆಕೆಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು’ ಮೋಶೆಯು ನಮಗಾಗಿ ಬರೆದಿಟ್ಟಿದ್ದಾನಲ್ಲವೇ.
20 Ուրեմն եօթը եղբայրներ կային. առաջինը կին առաւ եւ մեռաւ, ու զարմ չթողուց:
೨೦“ಒಮ್ಮೆ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು.
21 Երկրորդը առաւ զայն եւ մեռաւ. ա՛ն ալ զարմ չթողուց. նոյնպէս ալ երրորդը:
೨೧ಎರಡನೆಯವನೂ ಆಕೆಯನ್ನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು. ಅದರಂತೆ ಮೂರನೆಯವನು.
22 Եօթն ալ զայն առին ու զարմ չթողուցին. բոլորէն ետք՝ կինն ալ մեռաւ:
೨೨ಇದೇ ಪ್ರಕಾರ ಏಳು ಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಸತ್ತರು. ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು.
23 Ուրեմն յարութեան ատեն, երբ յարութիւն առնեն, անոնցմէ որո՞ւն կինը պիտի ըլլայ. որովհետեւ եօթն ալ ունեցան զայն իբր կին»:
೨೩ಪುನರುತ್ಥಾನದಲ್ಲಿ ಅವರು ಎದ್ದುಬರುವಾಗ ಅವರಲ್ಲಿ ಆಕೆಯು ಯಾರ ಹೆಂಡತಿಯಾಗಿರುವಳು? ಆ ಏಳು ಮಂದಿಗೂ ಆಕೆಯು ಹೆಂಡತಿಯಾಗಿದ್ದಳಲ್ಲಾ” ಎಂದರು.
24 Յիսուս պատասխանեց անոնց. «Արդեօք դուք մոլորած չէ՞ք՝ քանի որ ո՛չ Գիրքերը գիտէք, ո՛չ ալ Աստուծոյ զօրութիւնը:
೨೪ಅದಕ್ಕೆ ಯೇಸು, “ನೀವು ಶಾಸ್ತ್ರವಚನಗಳನ್ನಾದರೂ, ದೇವರ ಶಕ್ತಿಯನ್ನಾದರೂ ತಿಳಿಯದೆ ಇರುವುದರಿಂದಲೇ ತಪ್ಪುವವರಾಗಿದ್ದೀರಿ?
25 Արդարեւ երբ մեռելներէն յարութիւն առնեն, ո՛չ կ՚ամուսնանան եւ ո՛չ ամուսնութեան կը տրուին, հապա երկինքի հրեշտակներուն պէս կ՚ըլլան:
೨೫ಸತ್ತವರು ಬದುಕಿ ಎದ್ದಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.
26 Բայց մեռելներուն մասին՝ թէ յարութիւն կ՚առնեն, Մովսէսի գիրքին մէջ չէ՞ք կարդացեր, թէ ի՛նչպէս Աստուած մորենիին մէջէն խօսեցաւ անոր՝ ըսելով. “Ե՛ս եմ Աբրահամի Աստուածը, Իսահակի Աստուածը եւ Յակոբի Աստուածը”:
೨೬ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’
27 Ան մեռելներուն Աստուածը չէ, հապա՝ ողջերուն. ուրեմն դուք շատ մոլորած էք»:
೨೭ಆತನು ಜೀವಂತರಿಗೆ ದೇವರಾಗಿದ್ದಾನೆ ಹೊರತು ಸತ್ತವರಿಗಲ್ಲ. ಈ ವಿಷಯದಲ್ಲಿ ನೀವು ಬಹು ತಪ್ಪಾದ ಅಭಿಪ್ರಾಯವುಳ್ಳವರಾಗಿದ್ದಿರಿ” ಎಂದು ಹೇಳಿದನು.
28 Դպիրներէն մէկը մօտեցաւ, մտիկ ըրաւ անոնց՝ երբ կը վիճաբանէին, ու նշմարելով թէ լաւ պատասխանեց անոնց՝ հարցուց անոր. «Ո՞րն է բոլոր պատուիրաններուն առաջինը»:
೨೮ಶಾಸ್ತ್ರಿಗಳಲ್ಲಿ ಒಬ್ಬನು ಅವರ ವಾದವನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರ ಕೊಟ್ಟನೆಂದು ತಿಳಿದು ಆತನ ಹತ್ತಿರಕ್ಕೆ ಬಂದು, “ಎಲ್ಲಾ ಆಜ್ಞೆಗಳಲ್ಲಿ ಮುಖ್ಯವಾದ್ದದು ಯಾವುದು?” ಎಂದು ಆತನನ್ನು ಕೇಳಿದರು.
29 Յիսուս պատասխանեց անոր. «Բոլոր պատուիրաններուն առաջինը սա՛ է. “Մտի՛կ ըրէ, ո՛վ Իսրայէլ. Տէրը՝ մեր Աստուածը՝ միա՛կ Տէրն է:
೨೯ಅದಕ್ಕೆ ಯೇಸು, “‘ಇಸ್ರಾಯೇಲ್ ಜನರೇ ಕೇಳಿ, ನಮ್ಮ ದೇವರಾದ ಕರ್ತನುಒಬ್ಬನೇ ದೇವರು.
30 Սիրէ՛ Տէրը՝ քու Աստուածդ՝ ամբողջ սիրտովդ, ամբողջ անձովդ, ամբողջ միտքովդ եւ ամբողջ զօրութեամբդ”: Ա՛յս է առաջին պատուիրանը:
೩೦ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸಬೇಕು’ ಎಂಬುದೇ ಮುಖ್ಯವಾದ ಆಜ್ಞೆ.
31 Ու երկրորդը՝ ասոր նման. “Սիրէ՛ ընկերդ քու անձիդ՝՝ պէս”: Ասոնցմէ մեծ ուրիշ պատուիրան չկայ»:
೩೧‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ ಎರಡನೆಯ ಆಜ್ಞೆ. ಇವುಗಳಿಗಿಂತ ಹೆಚ್ಚಿನ ಆಜ್ಞೆ ಮತ್ತೊಂದಿಲ್ಲ” ಎಂದು ಉತ್ತರ ಕೊಟ್ಟನು.
32 Դպիրը ըսաւ անոր. «Լա՛ւ, վարդապե՛տ, ճշմարտութեամբ ըսիր թէ Աստուած մէ՛կ է, եւ անկէ զատ ուրիշ մը չկայ.
೩೨ಆಗ ಆ ಶಾಸ್ತ್ರಿಯು, “ಬೋಧಕನೇ, ನೀನು ಚೆನ್ನಾಗಿ ಹೇಳಿದೆ. ಸತ್ಯವನ್ನೇ ಹೇಳಿದಿ ದೇವರು ಒಬ್ಬನೇ, ಆತನ ಹೊರತು ಬೇರೊಬ್ಬ ದೇವರಿಲ್ಲ ಎಂದು ಹೇಳಿದನು.
33 նաեւ ամբողջ սիրտով, ամբողջ խելքով, ամբողջ անձով ու ամբողջ զօրութեամբ զայն սիրելը, եւ ընկերը իրեն պէս սիրելը՝ բոլոր ողջակէզներէն ու զոհերէն աւելի է»:
೩೩ಆತನನ್ನು ಪೂರ್ಣಹೃದಯದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವುದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಮೇಲಾದುವು” ಅಂದನು.
34 Յիսուս՝ տեսնելով որ ան խելամտութեամբ պատասխանեց, ըսաւ անոր. «Աստուծոյ թագաւորութենէն հեռու չես»: Եւ ա՛լ ուրիշ ո՛չ մէկը կը յանդգնէր բան մը հարցնել անոր:
೩೪ಅವನು ಬುದ್ಧಿಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು, “ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ” ಎಂದನು. ಅಂದಿನಿಂದ ಆತನನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.
35 Երբ Յիսուս կը սորվեցնէր տաճարին մէջ՝ ըսաւ. «Դպիրները ի՞նչպէս կ՚ըսեն թէ “Քրիստոս Դաւիթի որդին է”:
೩೫ಯೇಸು ದೇವಾಲಯದಲ್ಲಿ ಉಪದೇಶಮಾಡುತ್ತಿರಲಾಗಿ ಆತನು ಅವರನ್ನು, “ಶಾಸ್ತ್ರಿಗಳು ಕ್ರಿಸ್ತನನ್ನು ದಾವೀದನ ಮಗನೆಂದು ಹೇಳುತ್ತಾರಲ್ಲಾ ಅದು ಹೇಗೆ?
36 Արդարեւ ի՛նք՝ Դաւիթ՝ Սուրբ Հոգիով կ՚ըսէ. “Տէրը ըսաւ իմ Տէրոջս. «Բազմէ՛ իմ աջ կողմս, մինչեւ որ քու թշնամիներդ պատուանդան դնեմ ոտքերուդ»”:
೩೬“‘ನಾನು ನಿನ್ನ ಶತ್ರುಗಳನ್ನು ನಿನ್ನ ಪಾದದಡಿ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಹೇಳಿದ್ದಾನೆ.
37 Ուրեմն ի՛նք՝ Դաւիթ՝ Տէր կը կոչէ զայն. ի՞նչպէս ան կ՚ըլլայ իր որդին»: Բազմութենէն շատեր հաճոյքով մտիկ կ՚ընէին անոր:
೩೭ದಾವೀದನೇ ಆತನನ್ನು ‘ಕರ್ತನೆಂದು’ ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಪ್ರಶ್ನಿಸಿದನು. ಜನರ ದೊಡ್ಡ ಸಮೂಹವು ಆತನ ಮಾತನ್ನು ಸಂತೋಷದಿಂದ ಕೇಳುತ್ತಿತ್ತು.
38 Իր ուսուցումին մէջ կ՚ըսէր անոնց. «Զգուշացէ՛ք դպիրներէն, որոնք կ՚ուզեն երկայն հանդերձներով շրջիլ, կը փնտռեն բարեւները՝ հրապարակներուն վրայ,
೩೮ಆತನು ಉಪದೇಶಮಾಡಿ ಹೇಳಿದ್ದೇನಂದರೆ, “ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿಲುವಂಗಿಯನ್ನು ಧರಿಸಿಕೊಂಡು ತಿರುಗಾಡುತ್ತಾ,
39 առաջին աթոռները՝ ժողովարաններու մէջ, եւ առաջին բազմոցները՝ ընթրիքներու մէջ.
೩೯ಸಂತೆಯ ಬೀದಿಗಳಲ್ಲಿ ನಮಸ್ಕಾರಗಳನ್ನೂ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳನ್ನೂ, ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಅವರು ಇಷ್ಟಪಡುವವರಾಗಿದ್ದಾರೆ.
40 որոնք կը լափեն այրիներուն տուները, ու իբր պատրուակ՝ աղօթքը կ՚երկարեն: Ասոնք աւելի՛ խստութեամբ պիտի դատուին՝՝»:
೪೦ಇವರು ವಿಧವೆಯರ ಮನೆಗಳನ್ನು ದೋಚಿ ತೋರಿಕೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಿನ ದಂಡನೆಯನ್ನು ಹೊಂದುವರು” ಎಂದನು.
41 Յիսուս գանձանակին դիմաց նստած՝ կը նայէր թէ բազմութիւնը գանձանակին մէջ ի՛նչպէս դրամ կը ձգէ: Շատ հարուստներ՝ շատ բան ձգեցին:
೪೧ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು.
42 Աղքատ այրի մըն ալ եկաւ ու երկու լումայ ձգեց, որ նաքարակիտ մը կ՚ընէ:
೪೨ಒಬ್ಬ ಬಡ ವಿಧವೆಯು ಬಂದು, ಎರಡು ಕಾಸು ಬೆಲೆಯುಳ್ಳ ಒಂದು ದುಗ್ಗಾಣಿ ಹಾಕಿದಳು.
43 Իր աշակերտները կանչելով իրեն՝ ըսաւ անոնց. «Ճշմա՛րտապէս կը յայտարարեմ ձեզի թէ այս աղքատ այրին՝ գանձանակը դրամ ձգողներուն բոլորէն աւելի ձգեց.
೪೩ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತಲೂ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
44 որովհետեւ բոլորը իրենց առատութենէն ձգեցին, բայց ան՝ իր կարօտութենէն՝ ձգեց իր ամբողջ ունեցածը, իր ամբողջ ապրուստը»:
೪೪ಹೇಗೆಂದರೆ, ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈ ವಿಧವೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದ ಎಲ್ಲವನ್ನೂ ಕಾಣಿಕೆಯಾಗಿ ಹಾಕಿದ್ದಾಳೆ” ಎಂದನು.

< ՄԱՐԿՈՍ 12 >