< ՄԱՐԿՈՍ 13 >

1 Մինչ դուրս կ՚ելլէր տաճարէն, իր աշակերտներէն մէկը ըսաւ իրեն. «Վարդապե՛տ, տե՛ս ինչպիսի՜ քարեր են, եւ ի՛նչ տեսակ շէնքեր»:
ಯೇಸು ದೇವಾಲಯದಿಂದ ಹೊರಗೆ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಗುರುವೇ, ನೋಡು, ಎಂಥಾ ಅದ್ಭುತವಾದ ಕಲ್ಲುಗಳು! ಎಂಥಾ ಮಹಾಕಟ್ಟಡಗಳು!” ಎಂದು ಹೇಳಿದನು.
2 Յիսուս պատասխանեց անոր. «Կը տեսնե՞ս այդ մեծ շէնքերը. քար քարի վրայ պիտի չմնայ, ամէնը պիտի քակուի»:
ಯೇಸು, “ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲ್ಪಡುವುದು” ಎಂದನು.
3 Մինչ ան նստած էր Ձիթենիներու լեռը՝ տաճարին դիմաց, Պետրոս, Յակոբոս, Յովհաննէս ու Անդրէաս հարցուցին իրեն՝ առանձին.
ಬಳಿಕ ಆತನು ಎಣ್ಣೆ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ ಹಾಗೂ ಅಂದ್ರೆಯ,
4 «Ըսէ՛ մեզի, ե՞րբ պիտի ըլլայ ատիկա, եւ ի՞նչ նշան պիտի ըլլայ այդ բոլորին կատարուելու ատենը»:
ಇವರು ಪ್ರತ್ಯೇಕವಾಗಿ ಆತನಿಗೆ, “ಇವೆಲ್ಲಾ ಯಾವಾಗ ಆಗುವವು? ಇವೆಲ್ಲವು ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು” ಎಂದು ಆತನನ್ನು ಕೇಳಿದರು.
5 Յիսուս պատասխանելով անոնց՝ սկսաւ ըսել. «Զգուշացէ՛ք որ ո՛չ մէկը մոլորեցնէ ձեզ.
ಯೇಸು ಅವರಿಗೆ ಹೇಳಿದ್ದೇನಂದರೆ, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ.
6 որովհետեւ շատե՜ր պիտի գան իմ անունովս՝ ըսելով. “Ե՛ս եմ Քրիստոսը”, ու պիտի մոլորեցնեն շատերը:
ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು, ‘ನಾನೇ ಕ್ರಿಸ್ತನು’ ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು.
7 Բայց երբ լսէք պատերազմներու մասին, եւ պատերազմներու տարաձայնութիւններ՝ մի՛ վրդովիք, որովհետեւ պէտք է որ այս ամէնը ըլլայ, բայց դեռ վախճանը չէ:
ಇದಲ್ಲದೆ ಯುದ್ಧಗಳಾಗುವುದನ್ನೂ, ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಹಾಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.
8 Արդարեւ ազգ ազգի դէմ պիտի ելլէ, ու թագաւորութիւն՝ թագաւորութեան դէմ, եւ տեղ-տեղ երկրաշարժներ պիտի ըլլան. սովեր ու խառնակութիւններ ալ պիտի ըլլան: Ասոնք ցաւերուն սկիզբն են:
ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ.
9 Զգուշացէ՛ք դուք ձեզի համար. քանի որ ատեաններու պիտի մատնեն ձեզ, ժողովարաններու մէջ պիտի ծեծեն ձեզ, ու կառավարիչներու եւ թագաւորներու առջեւ պիտի կենաք՝ իմ պատճառովս, անոնց վկայութիւն ըլլալու համար:
“ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,
10 Բայց նախ պէտք է որ աւետարանը քարոզուի բոլոր ազգերուն:
೧೦ಆದರೆ ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು.
11 Իսկ երբ մատնելու տանին ձեզ, նախապէս մի՛ մտահոգուիք թէ ի՛նչ պիտի խօսիք, ո՛չ ալ խոկացէք. հապա այդ ժամուն ինչ որ ձեզի տրուի՝ զա՛յն խօսեցէք. որովհետեւ ո՛չ թէ դուք էք որ պիտի խօսիք, հապա Սուրբ Հոգին»:
೧೧“ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು,
12 «Եղբայրը մահուան պիտի մատնէ եղբայրը, ու հայրը՝ զաւակը. եւ զաւակներ պիտի ելլեն իրենց ծնողներուն դէմ ու մեռցնեն զանոնք:
೧೨ಇದಲ್ಲದೆ ಸಹೋದರನು ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು,
13 Բոլորին ատելի պիտի ըլլաք իմ անունիս համար: Բայց ո՛վ որ տոկայ մինչեւ վախճանը՝ անիկա՛ պիտի փրկուի:
೧೩ಮತ್ತು ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಿಸುವರು, ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆ ಹೊಂದುವನು.”
14 Երբ տեսնէք թէ աւերողին պղծութիւնը՝՝ - որու մասին Դանիէլ մարգարէին միջոցով խօսուած է - հաստատուած է հո՛ն ուր պէտք չէ ըլլար, (ո՛վ որ կարդայ՝ թող հասկնայ, ) այն ատեն Հրէաստանի մէջ եղողները լեռնե՛րը թող փախչին:
೧೪“ಇದಲ್ಲದೆವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
15 Ա՛ն որ տանիքին վրայ է՝ թող չիջնէ տունը, ու չմտնէ իր տունէն բան մը առնելու.
೧೫ಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದಿರಲಿ; ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳದಿರಲಿ.
16 եւ ա՛ն որ արտին մէջ է՝ թող չվերադառնայ իր հանդերձը առնելու:
೧೬ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗಿ ಹೋಗದಿರಲಿ.
17 Բայց վա՜յ այդ օրերը յղի եղողներուն ու ծիծ տուողներուն:
೧೭“ಆದರೆ ಆ ದಿನಗಳಲ್ಲಿ ಗರ್ಭಿಣಿಯರಿಗೂ, ಹಾಲು ಕುಡಿಸುವ ತಾಯಂದಿರಿಗೂ ಆಗುವ ಕಷ್ಟ ಎಷ್ಟೆಂದು ಹೇಳಲಿ!
18 Աղօթեցէ՛ք՝ որ ձեր փախուստը ձմեռը չըլլայ:
೧೮ಆ ದಿನಗಳುಸಂಕಟದ ದಿನಗಳಾಗಿರುವುದರಿಂದ ಇದೆಲ್ಲಾ ಚಳಿಗಾಲದಲ್ಲಿ ಆಗಬಾರದೆಂದು ಪ್ರಾರ್ಥನೆ ಮಾಡಿರಿ.
19 Որովհետեւ այդ օրերը այնպիսի՛ տառապանք պիտի ըլլայ, որուն նմանը՝ Աստուծոյ ստեղծած աշխարհի սկիզբէն մինչեւ հիմա եղած չէ, ո՛չ ալ պիտի ըլլայ:
೧೯ಅಂಥ ಸಂಕಟವು ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ದಿನದವರೆಗೂ ಆಗಲಿಲ್ಲ; ಇನ್ನು ಮುಂದೆ ಆಗುವುದೂ ಇಲ್ಲ.
20 Եթէ Տէրը այդ օրերը չկարճեցնէր, ո՛չ մէկ մարմին պիտի փրկուէր. բայց այդ օրերը կարճեցուց ընտրեալներուն համար՝ որ ընտրեց:
೨೦ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ.
21 Այն ատեն եթէ մէկը ըսէ ձեզի. “Ահա՛ հո՛ս է Քրիստոսը”, կամ. “Ահա՛ հո՛ն է”, մի՛ հաւատաք:
೨೧“ಆಗ ಯಾರಾದರೂ ನಿಮಗೆ, ಇಗೋ, ಕ್ರಿಸ್ತನು ಇಲ್ಲಿದ್ದಾನೆ! ಅಗೋ, ಆತನು ಅಲ್ಲಿದ್ದಾನೆ! ಎಂದು ಹೇಳಿದರೆ ನಂಬಬೇಡಿರಿ.
22 Որովհետեւ սուտ քրիստոսներ եւ սուտ մարգարէներ պիտի ելլեն, ու ցոյց պիտի տան նշաններ եւ սքանչելիքներ, որպէսզի եթէ կարելի ըլլայ՝ մոլորեցնեն նոյնիսկ ընտրեալնե՛րը:
೨೨ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.
23 Իսկ դուք զգուշացէ՛ք. ահա՛ նախապէս ըսի ձեզի ամէն ինչ»:
೨೩ನೀವಂತೂ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೇ” ಹೇಳಿದ್ದೇನೆ.
24 «Բայց այդ օրերը, այդ տառապանքէն ետք, արեւը պիտի խաւարի եւ լուսինը իր փայլը պիտի չտայ.
೨೪ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ; “‘ಸೂರ್ಯನು ಕತ್ತಲಾಗಿ ಹೋಗುವನು.
25 աստղերը երկինքէն պիտի իյնան, ու երկինքի մէջ եղող զօրութիւնները պիտի սարսին:
೨೫ಚಂದ್ರನು ತನ್ನ ಬೆಳಕು ಕೊಡದೆ ಇರುವನು. ನಕ್ಷತ್ರಗಳು ಆಕಾಶದಿಂದ ಬೀಳುವವು. ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.’
26 Այն ատեն պիտի տեսնեն մարդու Որդին, ամպերու մէջ եկած՝ մեծ զօրութեամբ ու փառքով:
೨೬ಆಗಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು.
27 Այն ատեն պիտի ղրկէ իր հրեշտակները եւ պիտի հաւաքէ իր ընտրեալները չորս հովերէն, երկրի ծայրէն մինչեւ երկինքի ծայրը»:
೨೭ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.”
28 «Թզենիէ՛ն սորվեցէք առակ մը. երբ անոր ոստերը կակուղնան ու տերեւները ցցուին, կը հասկնաք թէ ամառը մօտ է:
೨೮“ಅಂಜೂರ ಮರವನ್ನು ನೋಡಿ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಕೊಂಬೆಗಳಲ್ಲಿ ಇನ್ನೂ ಎಳೆದಾಗಿ ಎಲೆಗಳು ಚಿಗುರುವಾಗ ಬೇಸಿಗೆಯು ಸಮೀಪಿಸಿತು ಎಂದು ಅರಿತುಕೊಳ್ಳುತ್ತಿರಲ್ಲಾ.
29 Դուք ալ՝ երբ եղած տեսնէք ասոնք, գիտցէ՛ք թէ մօտ է՝ դռներուն քով:
೨೯ಹಾಗೆಯೇ ಇವೆಲ್ಲವೂ ಆಗುವುದನ್ನು ನೀವು ನೋಡುವಾಗ ಬಾಗಿಲ ಹತ್ತಿರದಲ್ಲಿಯೇ ಇದ್ದೆ ಎಂದು ತಿಳಿದುಕೊಳ್ಳಿರಿ.
30 Ճշմա՛րտապէս կը յայտարարեմ ձեզի. “Այս սերունդը պիտի չանցնի, մինչեւ որ այս բոլորը պատահին”:
೩೦ಇದೆಲ್ಲವೂ ನೆರವೇರುವವರೆಗೂ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
31 Երկինք ու երկիր պիտի անցնին, բայց իմ խօսքերս բնա՛ւ պիտի չանցնին»:
೩೧ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.”
32 «Իսկ այդ օրն ու ժամը՝ ո՛չ մէկ մարդ գիտէ, ո՛չ ալ երկինքի մէջ եղող հրեշտակները, ո՛չ իսկ Որդին, հապա՝ միա՛յն Հայրը:
೩೨“ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು.
33 Զգուշացէ՛ք, հսկեցէ՛ք եւ աղօթեցէ՛ք, որովհետեւ չէք գիտեր թէ ատենը ե՛րբ է:
೩೩ಆ ಕಾಲವು ಯಾವಾಗ ಬರುವುದು ಎಂದು ನಿಮಗೆ ತಿಳಿಯದೆ ಇರುವುದರಿಂದ ನೀವುಎಚ್ಚರವಾಗಿರಿ, ಜಾಗರೂಕರಾಗಿರಿ.
34 Ինչպէս ճամբորդող մարդ մը կը թողու իր տունը, իրաւասութիւն կու տայ իր ծառաներուն, իւրաքանչիւրին՝ իր գործը, ու դռնապանին կը հրամայէ որ արթուն կենայ:
೩೪ಅದುಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ” ಎಂದು ನಾನು ನಿಮಗೆ ಹೇಳುತ್ತಿದ್ದೇನೆ.
35 Ուրեմն արթո՛ւն կեցէք, որովհետեւ չէք գիտեր թէ տան տէրը ե՛րբ պիտի գայ, իրիկո՞ւնը՝ թէ կէս գիշերին, աքլորականչի՞ն՝ թէ առտուն:
೩೫“ಮನೆ ಯಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ!
36 Թերեւս յանկարծ գալով՝ ձեզ գտնէ քունի մէջ:
೩೬ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುತ್ತಿರುವುದನ್ನು ಕಂಡಾನು.
37 Եւ ինչ որ կ՚ըսեմ ձեզի՝ կ՚ըսեմ բոլորին. “Արթո՛ւն կեցէք”»:
೩೭ನಾನು ನಿಮಗೆ ಹೇಳುತ್ತಿರುವುದನ್ನು ಎಲ್ಲರಿಗೂ ಹೇಳುತ್ತಿದ್ದೇನೆ; ಎಚ್ಚರವಾಗಿರಿ!” ಎಂದನು.

< ՄԱՐԿՈՍ 13 >