< ՄԱՐԿՈՍ 9 >

1 Եւ ըսաւ անոնց. «Ճշմա՛րտապէս կը յայտարարեմ ձեզի. “Հոս ներկայ եղողներէն կան ոմանք՝ որ մահ պիտի չհամտեսեն, մինչեւ որ տեսնեն Աստուծոյ թագաւորութիւնը՝ զօրութեամբ եկած”»:
ಅನಂತರ ಯೇಸು ಅವರಿಗೆ, “ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಶಕ್ತಿಯೊಂದಿಗೆ ಬರುವುದನ್ನು ಕಾಣುವವರೆಗೆ ಮರಣದ ಅನುಭವ ಹೊಂದುವುದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.
2 Վեց օր ետք՝ Յիսուս առաւ իրեն հետ Պետրոսը, Յակոբոսն ու Յովհաննէսը, հանեց զանոնք բարձր լեռ մը՝ առանձին, եւ այլակերպեցաւ անոնց առջեւ:
ಯೇಸು ಆರು ದಿನಗಳಾದ ಮೇಲೆ ಪೇತ್ರ, ಯಾಕೋಬ, ಯೋಹಾನನನ್ನೂ ತಮ್ಮೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದರು. ಅಲ್ಲಿ ಯೇಸು ಅವರ ಮುಂದೆ ರೂಪಾಂತರಗೊಂಡರು.
3 Իր հանդերձները փայլուն, չափազանց ճերմակ եղան՝ ձիւնի պէս, այնպէս որ երկրի վրայ ո՛չ մէկ թափիչ կրնար այդպէս ճերմկցնել:
ಯೇಸುವಿನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷ್ಟು ಉಜ್ವಲವಾಗಿ ಹೊಳೆಯುತ್ತಿತ್ತು.
4 Ու Եղիա երեւցաւ անոնց՝ Մովսէսի հետ, եւ կը խօսակցէին Յիսուսի հետ:
ಆಗ ಅಲ್ಲಿ ಎಲೀಯನು ಮತ್ತು ಮೋಶೆಯು ಯೇಸುವಿನೊಂದಿಗೆ ಮಾತನಾಡುತ್ತಿರುವುದನ್ನು ಅವರು ಕಂಡರು.
5 Ապա Պետրոս ըսաւ Յիսուսի. «Ռաբբի՛, լաւ է որ կենանք հոս եւ շինենք երեք վրան, մէկը՝ քեզի, մէկը՝ Մովսէսի ու մէկը՝ Եղիայի».
ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ನಮಗೆ ಒಳ್ಳೆಯದು. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದರಂತೆ ಮೂರು ಗುಡಾರಗಳನ್ನು ನಾವು ಕಟ್ಟುವೆವು,” ಎಂದು ಹೇಳಿದನು.
6 որովհետեւ չէր գիտեր թէ ի՛նչ կը խօսի, քանի որ զարհուրած էին:
ತಾನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ. ಏಕೆಂದರೆ ಅವರು ಬಹಳವಾಗಿ ಹೆದರಿದ್ದರು.
7 Ամպ մը հովանի եղաւ անոնց վրայ, եւ ձայն մը եկաւ ամպէն՝ ըսելով. «Ա՛յս է իմ սիրելի Որդիս, անո՛ր մտիկ ըրէք»:
ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು. ಮೋಡದೊಳಗಿಂದ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂಬ ಧ್ವನಿಯು ಬಂದಿತು.
8 Յանկարծ, երբ իրենց շուրջը նայեցան, ուրիշ ո՛չ մէկը տեսան, հապա միայն Յիսուսը՝ իրենց հետ:
ಕೂಡಲೇ ಅವರು ಸುತ್ತಲೂ ನೋಡಲಾಗಿ ತಮ್ಮೊಂದಿಗೆ ಯೇಸುವನ್ನೇ ಹೊರತು ಇನ್ನಾರನ್ನೂ ಕಾಣಲಿಲ್ಲ.
9 Երբ վար կ՚իջնէին լեռնէն, պատուիրեց անոնց՝ որ ո՛չ մէկուն պատմեն իրենց տեսածը, բայց միայն՝ մարդու Որդիին մեռելներէն յարութիւն առնելէն ետք:
ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಮನುಷ್ಯಪುತ್ರರಾದ ತಾವು ಸತ್ತವರೊಳಗಿಂದ ಎದ್ದು ಬರುವವರೆಗೆ ಅವರು ಕಂಡದ್ದನ್ನು ಯಾರಿಗೂ ಹೇಳಬಾರದೆಂದು ಯೇಸು ಆಜ್ಞಾಪಿಸಿದರು.
10 Անոնք պահեցին այդ խօսքը, ու կը հարցնէին իրարու թէ ի՛նչ կը նշանակէ “մեռելներէն յարութիւն առնել”:
“ಸತ್ತವರೊಳಗಿಂದ ಎದ್ದು ಬರುವುದೆಂದರೆ ಏನು?” ಅವರು ಒಬ್ಬರಿಗೊಬ್ಬರು ಆ ಮಾತನ್ನು ತಮ್ಮತಮ್ಮೊಳಗೆ ಚರ್ಚಿಸಿಕೊಂಡರು.
11 Եւ հարցուցին իրեն. «Ինչո՞ւ դպիրները կ՚ըսեն թէ “պէտք է որ նախ Եղիա գայ”»:
ಇದಲ್ಲದೆ ಅವರು ಯೇಸುವಿಗೆ, “ಎಲೀಯನು ಮೊದಲು ಬರುವುದು ಅಗತ್ಯವೆಂದು ನಿಯಮ ಬೋಧಕರು ಏಕೆ ಹೇಳುತ್ತಾರೆ?” ಎಂದು ಕೇಳಿದರು.
12 Ան ալ պատասխանեց անոնց. «Արդարեւ նախ Եղիա կու գայ ու կը վերահաստատէ ամէն բան. ի՛նչպէս գրուած է մարդու Որդիին մասին՝ թէ պէտք է շատ չարչարանքներ կրէ եւ անարգուի:
ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನೂ ಸರಿಪಡಿಸುತ್ತಾನೆಂಬ ಮಾತು ನಿಜವೇ. ಆದರೆ ಮನುಷ್ಯಪುತ್ರನಾದ ನಾನು ಬಹಳ ಯಾತನೆಗಳನ್ನು ಅನುಭವಿಸಿ ತಿರಸ್ಕರಿಸಲಾಗಬೇಕೆಂದು ನನ್ನ ವಿಷಯವಾಗಿ ಬರೆದಿರುವುದು ಹೇಗೆ?
13 Բայց կ՚ըսեմ ձեզի թէ Եղիա եկաւ ալ, ու ինչ որ ուզեցին՝ ըրին անոր, ինչպէս գրուած էր իր մասին»:
ಆದರೆ, ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಜನರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.
14 Աշակերտներուն քով գալով՝ տեսաւ մեծ բազմութիւն մը անոնց շուրջը, ու դպիրներ՝ որ կը վիճաբանէին անոնց հետ:
ಯೇಸು ತಮ್ಮ ಶಿಷ್ಯರ ಬಳಿಗೆ ಬಂದಾಗ, ಅವರ ಸುತ್ತಲು ದೊಡ್ಡ ಸಮೂಹವನ್ನೂ ನಿಯಮ ಬೋಧಕರು ಅವರೊಂದಿಗೆ ತರ್ಕಿಸುತ್ತಿರುವುದನ್ನೂ ಕಂಡರು.
15 Իսկոյն ամբողջ բազմութիւնը՝ երբ տեսաւ զայն՝ շատ այլայլեցաւ, եւ յառաջ վազելով զայն կը բարեւէր:
ಜನರೆಲ್ಲರೂ ಯೇಸುವನ್ನು ಕಂಡಕೂಡಲೇ, ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಯೇಸುವನ್ನು ವಂದಿಸಿದರು.
16 Յիսուս հարցուց դպիրներուն. «Ի՞նչ բանի մասին կը վիճաբանէիք անոնց հետ:
ಆಗ ಯೇಸು ಅವರಿಗೆ, “ಅವರೊಂದಿಗೆ ನೀವು ಏನು ತರ್ಕಮಾಡುತ್ತಿದ್ದಿರಿ?” ಎಂದು ಕೇಳಿದರು.
17 Բազմութենէն մէկը պատասխանեց. «Վարդապե՛տ, որդիս՝ որ համր ոգի ունի՝ քեզի բերի:
ಸಮೂಹದಲ್ಲಿದ್ದ ಒಬ್ಬನು, “ಬೋಧಕರೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತೆಗೆದುಕೊಂಡು ಬಂದೆನು.
18 Ո՛ւր որ ալ բռնէ զայն՝ գետին կը զարնէ՝՝ զայն. ինք ալ կը փրփրի, իր ակռաները կը կրճտէ եւ կը ցամքի: Քու աշակերտներուդ ըսի որ հանեն զայն, բայց չկրցան»:
ಅಶುದ್ಧಾತ್ಮವು ಅವನನ್ನು ಹಿಡಿದುಕೊಂಡಾಗಲೆಲ್ಲಾ ಅವನನ್ನು ಒದ್ದಾಡಿಸುತ್ತದೆ. ಅವನು ನೊರೆ ಕಾರುತ್ತಾ ತನ್ನ ಹಲ್ಲು ಕಡಿದು ಸೆಟೆದುಕೊಂಡು ಬೀಳುತ್ತಾನೆ. ಅದನ್ನು ಬಿಡಿಸಬೇಕೆಂದು ನಾನು ನಿನ್ನ ಶಿಷ್ಯರಿಗೆ ಹೇಳಿದೆನು. ಆದರೆ ಅದು ಅವರಿಂದ ಆಗಲಿಲ್ಲ,” ಎಂದು ಹೇಳಿದನು.
19 Ինք ալ պատասխանեց անոնց. «Ո՛վ անհաւատ սերունդ, մինչեւ ե՞րբ պիտի ըլլամ ձեզի հետ, մինչեւ ե՞րբ պիտի հանդուրժեմ ձեզի. ինծի՛ բերէք զայն»:
ಆಗ ಯೇಸು ಅವರಿಗೆ, “ವಿಶ್ವಾಸವಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.
20 Իրեն բերին զայն: Երբ տղան տեսաւ զինք, իսկոյն չար ոգին ցնցեց զայն, եւ գետին ինկած՝ կը թաւալէր ու կը փրփրէր:
ಅವರು ಅವನನ್ನು ಯೇಸುವಿನ ಬಳಿಗೆ ತಂದರು. ಯೇಸುವನ್ನು ನೋಡಿದ ತಕ್ಷಣವೇ ಆ ದೆವ್ವವು ಆ ಬಾಲಕನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಕಾರುತ್ತಾ ಹೊರಳಾಡಿದನು.
21 Յիսուս հարցուց անոր հօր. «Ո՞րչափ ատեն է՝ որ այդ բանը պատահեցաւ անոր»: Ան ալ ըսաւ. «Մանկութենէն ի վեր:
ಯೇಸು ಅವನ ತಂದೆಗೆ, “ಇದು ಇವನನ್ನು ಹಿಡಿದು ಎಷ್ಟು ಕಾಲವಾಯಿತು?” ಎಂದು ಕೇಳಲು, ಅವನು, “ಬಾಲ್ಯದಿಂದಲೇ ಹೀಗಿದೆ.
22 Յաճախ կրակի ու ջուրի մէջ կը նետէ զայն՝ որպէսզի կորսնցնէ. բայց եթէ կարողութիւն ունիս՝ օգնէ՛ մեզի, գթալով մեր վրայ»:
ಅಶುದ್ಧಾತ್ಮವು ಅವನನ್ನು ಕೊಲ್ಲಬೇಕೆಂದು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು. ಆದರೆ ನೀನು ಏನಾದರೂ ಮಾಡಲು ಸಾಧ್ಯವಿದ್ದರೆ, ಕನಿಕರಿಸಿ ನಮಗೆ ಸಹಾಯಮಾಡು,” ಎಂದನು.
23 Յիսուս ըսաւ անոր. «Եթէ կրնաս հաւատալ. ամէն բան կարելի է անոր՝ որ կը հաւատայ»:
ಆಗ ಯೇಸು ಅವನಿಗೆ, “ನಿನಗೆ ಸಾಧ್ಯವಿದ್ದರೆ ಎನ್ನುತ್ತೀಯಲ್ಲಾ? ನಂಬುವವನಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು.
24 Իսկոյն մանուկին հայրը աղաղակեց եւ արցունքով ըսաւ. «Կը հաւատա՛մ, Տէ՛ր. օգնէ՛ իմ անհաւատութեանս»:
ತಕ್ಷಣವೇ ಬಾಲಕನ ತಂದೆಯು, “ನಾನು ನಂಬುತ್ತೇನೆ. ನನಗೆ ಅಪನಂಬಿಕೆಯಿದೆ ನನಗೆ ಸಹಾಯಮಾಡು,” ಎಂದು ಮೊರೆಯಿಟ್ಟನು.
25 Յիսուս՝ երբ տեսաւ թէ բազմութիւնը կը խռնուի շուրջը, սաստեց անմաքուր ոգին եւ ըսաւ անոր. «Հա՛մր ու խո՛ւլ ոգի, կը հրամայեմ քեզի, ելի՛ր ատկէ, եւ անգա՛մ մըն ալ մի՛ մտներ անոր մէջ»:
ಜನರು ಕೂಡಿಕೊಂಡು ಓಡಿಬರುವುದನ್ನು ಯೇಸು ಕಂಡು, ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ, “ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ, ಇನ್ನೆಂದಿಗೂ ಅವನೊಳಗೆ ಸೇರಬಾರದೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.
26 Ոգին աղաղակելով՝ սաստիկ ցնցեց զայն ու ելաւ. եւ տղան մեռելի պէս եղաւ, այնպէս որ շատեր ըսին. «Մեռա՛ւ»:
ಆಗ ಅಶುದ್ಧಾತ್ಮವು ಕೂಗಿ ಬಾಲಕನನ್ನು ಕ್ರೂರವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂದಿತು. ಅವನು ಸತ್ತವನ ಹಾಗೆ ಬಿದ್ದಿದ್ದರಿಂದ ಅನೇಕರು, “ಅವನು ಸತ್ತಿದ್ದಾನೆ,” ಎಂದರು.
27 Իսկ Յիսուս անոր ձեռքէն բռնելով՝ ոտքի հանեց զայն, ան ալ կանգնեցաւ:
ಆದರೆ ಯೇಸು ಕೈಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದು ನಿಂತನು.
28 Երբ ինք տուն մտաւ, իր աշակերտները առանձին հարցուցին իրեն. «Մե՛նք ինչո՞ւ չկրցանք հանել զայն»:
ಯೇಸು ಮನೆಯೊಳಕ್ಕೆ ಬಂದಾಗ, ಅವರ ಶಿಷ್ಯರು ಅವರಿಗೆ ಪ್ರತ್ಯೇಕವಾಗಿ, “ಆ ಅಶುದ್ಧಾತ್ಮವನ್ನು ಹೊರಗೆ ಹಾಕುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು.
29 Ըսաւ անոնց. «Այդ տեսակը կարելի չէ ուրիշ բանով հանել, բայց միայն աղօթքով ու ծոմապահութեամբ»:
ಯೇಸು ಅವರಿಗೆ, “ಈ ತರವಾದದ್ದು ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಹೋಗಲಾರದು,” ಎಂದರು.
30 Անկէ մեկնելով՝ Գալիլեայի մէջէն կ՚անցնէին, եւ չէր ուզեր որ մէ՛կը գիտնայ.
ಅವರು ಅಲ್ಲಿಂದ ಹೊರಟು ಗಲಿಲಾಯದ ಮಾರ್ಗವಾಗಿ ಹಾದುಹೋದರು. ತಾವು ಎಲ್ಲಿದ್ದೇವೆ ಎಂಬುದು ಬೇರೆಯವರಿಗೆ ತಿಳಿಯಬಾರದೆಂದು ಯೇಸು ಅಪೇಕ್ಷಿಸಿದರು.
31 որովհետեւ կը սորվեցնէր իր աշակերտներուն ու կ՚ըսէր անոնց. «Մարդու Որդին պիտի մատնուի մարդոց ձեռքը, պիտի սպաննեն զայն, ու երբ սպաննուի՝ յարութիւն պիտի առնէ երրորդ օրը»:
ಏಕೆಂದರೆ ಯೇಸು ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನನ್ನು ಜನರ ಕೈಗಳಿಗೆ ಒಪ್ಪಿಸಿಕೊಡಲಾಗುವುದು. ಅವರು ನನ್ನನ್ನು ಕೊಲ್ಲುವರು. ನನ್ನನ್ನು ಕೊಂದ ತರುವಾಯ ಮೂರನೆಯ ದಿನದಲ್ಲಿ ನಾನು ಜೀವಂತವಾಗಿ ಏಳುವೆನು,” ಎಂದು ಬೋಧಿಸುತ್ತಿದ್ದರು.
32 Անոնք չէին հասկնար այդ խօսքը, եւ կը վախնային հարցնել իրեն:
ಆದರೆ ಅವರಲ್ಲಿ ಆ ಮಾತನ್ನು ಯಾರೂ ಗ್ರಹಿಸಲಿಲ್ಲ. ಯೇಸುವನ್ನು ಕೇಳುವುದಕ್ಕೂ ಭಯಪಟ್ಟರು.
33 Եկաւ Կափառնայում. ու երբ տուն մտաւ՝ հարցուց անոնց. «Ի՞նչ բանի մասին կը մտածէիք ճամբան՝ իրարու հետ»:
ಅವರು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ, ಯೇಸು ಅವರಿಗೆ, “ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ?” ಎಂದು ಕೇಳಿದರು.
34 Անոնք լուռ կեցան, որովհետեւ ճամբան վիճաբանած էին իրարու հետ՝ թէ ո՛վ է մեծագոյնը:
ಆದರೆ ಅವರು ಸುಮ್ಮನಿದ್ದರು. ಏಕೆಂದರೆ ಅವರು ತಮ್ಮೊಳಗೆ ಯಾವನು ಅತಿ ದೊಡ್ಡವನು ಎಂದು ದಾರಿಯಲ್ಲಿ ವಾಗ್ವಾದ ಮಾಡಿದ್ದರು.
35 Երբ նստաւ, կանչեց տասներկուքը եւ ըսաւ անոնց. «Եթէ մէկը ուզէ առաջին ըլլալ, բոլորին յետի՛նը թող ըլլայ, ու բոլորին սպասարկուն»:
ಆಗ ಯೇಸು ಕುಳಿತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ, “ಯಾವನಾದರೂ ಮೊದಲಿನವನಾಗಬೇಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು,” ಎಂದರು.
36 Եւ առաւ մանուկ մը, կայնեցուց անոնց մէջտեղ, ապա իր գիրկը առնելով զայն՝ ըսաւ անոնց.
ಯೇಸು ಒಂದು ಮಗುವನ್ನು ತೆಗೆದುಕೊಂಡು ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ, ತಮ್ಮ ಕೈಗಳಲ್ಲಿ ಅದನ್ನು ಎತ್ತಿಕೊಂಡು ಅವರಿಗೆ,
37 «Ո՛վ որ կ՚ընդունի այսպիսի մանուկներէն մէկը՝ իմ անունովս, զի՛ս կ՚ընդունի. եւ ո՛վ որ զիս կ՚ընդունի, ո՛չ թէ զի՛ս կ՚ընդունի, հապա՝ զիս ղրկո՛ղը»:
“ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿದರೆ, ಅವನು ನನ್ನನ್ನು ಸ್ವೀಕರಿಸುತ್ತಾನೆ. ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಅಲ್ಲ ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ,” ಎಂದರು.
38 Յովհաննէս ըսաւ անոր. «Վարդապե՛տ, տեսանք մէկը որ դեւեր կը հանէր քու անունովդ, բայց մեզի չի հետեւիր: Արգիլեցինք զայն, քանի որ մեզի չի հետեւիր»:
ಆಗ ಯೋಹಾನನು, “ಬೋಧಕರೇ, ನಮ್ಮನ್ನು ಹಿಂಬಾಲಿಸದ ಒಬ್ಬನು ನಿಮ್ಮ ಹೆಸರಿನಲ್ಲಿ ದೆವ್ವ ಓಡಿಸುವುದನ್ನು ನಾವು ಕಂಡೆವು. ಅವನು ನಮ್ಮವನು ಅಲ್ಲದ್ದರಿಂದ ನಾವು ಅವನನ್ನು ತಡೆದೆವು,” ಎಂದು ಹೇಳಿದನು.
39 Յիսուս ըսաւ. «Մի՛ արգիլէք զայն, որովհետեւ չկայ մէկը՝ որ իմ անունովս հրաշք գործէ, ու կարենայ շուտով զիս անիծել.
ಅದಕ್ಕೆ ಯೇಸು, “ಅವನನ್ನು ತಡೆಯಬೇಡಿರಿ; ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿದವನು, ನನ್ನ ವಿಷಯದಲ್ಲಿ ಕೆಟ್ಟದ್ದನ್ನು ಮಾತನಾಡಲಾರನು.
40 ա՛ն որ մեզի հակառակ չէ, մեր՝՝ կողմէն է:
ನಮಗೆ ವಿರೋಧಿಯಾಗಿರದವನು ನಮ್ಮ ಪಕ್ಷದವನಾಗಿದ್ದಾನೆ.
41 Ա՛ն որ ձեզի գաւաթ մը ջուր խմցնէ իմ անունովս՝՝, քանի որ դուք Քրիստոսի կը պատկանիք, ճշմա՛րտապէս կը յայտարարեմ ձեզի. “Անիկա իր վարձատրութիւնը պիտի չկորսնցնէ”»:
ಇದಲ್ಲದೆ ನೀವು ಕ್ರಿಸ್ತನಲ್ಲಿ ಸೇರಿದವರಾದ್ದರಿಂದ ಯಾರಾದರೂ ನನ್ನ ಹೆಸರಿನಲ್ಲೆ ನಿಮಗೆ ಒಂದು ಲೋಟ ನೀರನ್ನು ಕೊಟ್ಟರೂ ಅವರು ತಮ್ಮ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.
42 «Ո՛վ որ գայթակղեցնէ այս պզտիկներէն մէկը՝ որ ինծի կը հաւատայ, աւելի լաւ պիտի ըլլար՝ որ ջաղացքի քար մը կախուէր անոր վիզէն, եւ ծովը նետուէր:
“ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬರಿಗೆ ಯಾರಾದರೂ ಪಾಪಕ್ಕೆ ಕಾರಣರಾದರೆ, ಅಂಥವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವರಿಗೆ ಲೇಸು.
43 Եթէ ձեռքդ կը գայթակղեցնէ քեզ՝ կտրէ՛ զայն. աւելի լաւ է քեզի՝ պակասաւո՛ր մտնել կեանքը, քան երկու ձեռք ունենալ ու երթալ գեհենը՝ անշէջ կրակին մէջ, (Geenna g1067)
ನಿಮ್ಮ ಕೈ ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ಎರಡು ಕೈಯುಳ್ಳವರಾಗಿ ಎಂದಿಗೂ ಆರದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಅಂಗಹೀನರಾಗಿ ನಿತ್ಯಜೀವನವನ್ನು ಸೇರುವುದು ನಿಮಗೆ ಲೇಸು. (Geenna g1067)
44 ուր անոնց որդը չի վախճանիր եւ կրակը չի մարիր:
ನರಕದಲ್ಲಿ, “‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ ಮತ್ತು ಬೆಂಕಿಯು ಆರುವುದಿಲ್ಲ.’
45 Եթէ ոտքդ կը գայթակղեցնէ քեզ՝ կտրէ՛ զայն. աւելի լաւ է քեզի՝ կա՛ղ մտնել կեանքը, քան երկու ոտք ունենալ ու նետուիլ գեհենը՝ անշէջ կրակին մէջ, (Geenna g1067)
ನಿಮ್ಮ ಕಾಲು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ನೀವು ಎರಡು ಕಾಲುಳ್ಳವರಾಗಿ ಆರದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಕುಂಟರಾಗಿ ನಿತ್ಯಜೀವನವನ್ನು ಸೇರುವುದು ನಿಮಗೆ ಲೇಸು. (Geenna g1067)
46 ուր անոնց որդը չի վախճանիր եւ կրակը չի մարիր:
ನರಕದಲ್ಲಿ, “‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ ಮತ್ತು ಬೆಂಕಿಯು ಆರುವುದಿಲ್ಲ.’
47 Եթէ աչքդ կը գայթակղեցնէ քեզ՝ հանէ՛ զայն. աւելի լաւ է քեզի՝ մէ՛կ աչքով մտնել Աստուծոյ թագաւորութիւնը, քան երկու աչք ունենալ ու նետուիլ գեհենի կրակը, (Geenna g1067)
ನಿಮ್ಮ ಕಣ್ಣು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಬಿಡಿರಿ. ಎರಡು ಕಣ್ಣುಳ್ಳವರಾಗಿ ನರಕದ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದು ಕಣ್ಣುಳ್ಳವರಾಗಿ ದೇವರ ರಾಜ್ಯದಲ್ಲಿ ಸೇರುವುದು ನಿಮಗೆ ಲೇಸು. (Geenna g1067)
48 ուր անոնց որդը չի վախճանիր եւ կրակը չի մարիր:
ನರಕದಲ್ಲಿ, “‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ, ಮತ್ತು ಬೆಂಕಿಯು ಆರುವುದಿಲ್ಲ.’
49 Որովհետեւ իւրաքանչիւրը կրակո՛վ պիտի աղուի, ու ամէն զոհ աղո՛վ պիտի աղուի:
ಉಪ್ಪನ್ನು ಪರೀಕ್ಷಿಸುವಂತೆ ಪ್ರತಿಯೊಬ್ಬರು ಬೆಂಕಿಯ ಮೂಲಕ ಪರೀಕ್ಷೆಗೆ ಒಳಪಡಬೇಕಾಗುತ್ತದೆ.
50 Աղը լաւ է. բայց եթէ աղը դառնայ անհամ, ինչո՞վ պիտի համեմէք զայն. ձեր մէջ ա՛ղ ունեցէք, եւ իրարու հետ խաղա՛ղ եղէք»:
“ಉಪ್ಪು ಒಳ್ಳೆಯದು. ಆದರೆ ಉಪ್ಪೇ ಸಪ್ಪಗಾದರೆ, ಇನ್ನಾವುದರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರುವಂತೆ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ,” ಎಂದರು.

< ՄԱՐԿՈՍ 9 >