< ՄԱՏԹԷՈՍ 11 >

1 Երբ Յիսուս աւարտեց պատուէր տալը իր տասներկու աշակերտներուն, մեկնեցաւ անկէ՝ սորվեցնելու եւ քարոզելու անոնց քաղաքներուն մէջ:
ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರಿಗೆ ಆದೇಶ ಕೊಟ್ಟಾದ ಮೇಲೆ, ಗಲಿಲಾಯ ಪ್ರದೇಶದ ಪಟ್ಟಣಗಳಲ್ಲಿ ಬೋಧಿಸುವುದಕ್ಕೂ ಶುಭವರ್ತಮಾನವನ್ನು ಸಾರುವುದಕ್ಕೂ ಅಲ್ಲಿಂದ ಹೊರಟು ಹೋದರು.
2 Երբ Յովհաննէս բանտին մէջ լսեց Քրիստոսի գործերուն մասին, իր աշակերտներէն երկուքը ղրկելով՝ ըսաւ անոր.
ಆಗ ಸೆರೆಮನೆಯಲ್ಲಿ ಯೋಹಾನನು ಕ್ರಿಸ್ತನ ಕಾರ್ಯಗಳನ್ನು ಕೇಳಿ, ತನ್ನ ಶಿಷ್ಯರನ್ನು ಕಳುಹಿಸಿ ಯೇಸುವಿಗೆ,
3 «Դո՞ւն ես ան՝ որ պիտի գար, թէ ուրիշի՛ մը սպասենք»:
“ಬರಬೇಕಾದ ಮೆಸ್ಸೀಯ ನೀನೋ ಇಲ್ಲವೇ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ?” ಎಂದು ವಿಚಾರಿಸಿದನು.
4 Յիսուս պատասխանեց անոնց. «Գացէ՛ք եւ պատմեցէ՛ք Յովհաննէսի՝ ինչ որ կը լսէք ու կը տեսնէք.
ಯೇಸು, “ನೀವು ಕೇಳುವುದನ್ನೂ ಕಾಣುವುದನ್ನೂ ಯೋಹಾನನಿಗೆ ಹೋಗಿ ತಿಳಿಸಿರಿ;
5 կոյրերը կը տեսնեն, կաղերը կը քալեն, բորոտները կը մաքրուին, խուլերը կը լսեն, մեռելները յարութիւն կ՚առնեն, եւ աղքատներուն կ՚աւետարանուի:
ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.
6 Երանի՜ անոր՝ որ չի գայթակղիր իմ պատճառովս»:
ನನ್ನ ವಿಷಯದಲ್ಲಿ ವಿಶ್ವಾಸ ಕಳೆದುಕೊಳ್ಳದವನೇ ಧನ್ಯನು,” ಎಂದರು.
7 Երբ անոնք մեկնեցան, Յիսուս սկսաւ բազմութիւններուն ըսել Յովհաննէսի մասին. «Ի՞նչ տեսնելու գացիք անապատը. հովէն տատանող եղէ՞գ մը:
ಅವರು ಹೊರಟು ಹೋಗುತ್ತಿದ್ದಾಗ, ಯೇಸು ಯೋಹಾನನ ಕುರಿತಾಗಿ ಜನಸಮೂಹಕ್ಕೆ, “ನೀವು ಯಾವುದನ್ನು ಕಾಣುವುದಕ್ಕಾಗಿ ಅರಣ್ಯಕ್ಕೆ ಹೋದಿರಿ? ಗಾಳಿಗೆ ಓಲಾಡುವ ದಂಟನ್ನೋ?
8 Հապա ի՞նչ տեսնելու գացիք. փափուկ հանդերձներ հագած մա՞րդ մը. ահա՛ փափուկ հանդերձներ կրողները՝ թագաւորներուն տուներն են:
ಇಲ್ಲವಾದರೆ, ನೀವು ಏನನ್ನು ಕಾಣುವುದಕ್ಕಾಗಿ ಹೋದಿರಿ? ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸುವವರು ರಾಜರ ಅರಮನೆಗಳಲ್ಲಿ ಇರುತ್ತಾರೆ.
9 Հապա ի՞նչ տեսնելու գացիք. մարգարէ՞ մը: Այո՛, կը յայտարարեմ ձեզի, մարգարէէ մըն ալ աւելի:
ಆದರೆ ಏನು ಕಾಣುವುದಕ್ಕಾಗಿ ಹೋದಿರಿ? ಒಬ್ಬ ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ, ಎಂದು ನಾನು ನಿಮಗೆ ಹೇಳುತ್ತೇನೆ.
10 Որովհետեւ ասիկա՛ է ա՛ն՝ որուն մասին գրուած է. “Ահա՛ ես կը ղրկեմ իմ պատգամաւորս քու առջեւէդ. ան պիտի պատրաստէ ճամբադ՝ քու առջեւդ”:
ಯೋಹಾನನ ಕುರಿತು ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “‘ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ.’
11 Ճշմա՛րտապէս կը յայտարարեմ ձեզի. “Կիներէ ծնածներուն մէջ՝ Յովհաննէս Մկրտիչէն աւելի մեծը ելած չէ”. սակայն երկինքի թագաւորութեան մէջ՝ ամենէն պզտիկը անկէ աւելի մեծ է:
ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸ್ತ್ರೀಯರಲ್ಲಿ ಹುಟ್ಟಿದವರಲ್ಲಿ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಹುಟ್ಟಲಿಲ್ಲ; ಆದರೂ ಪರಲೋಕ ರಾಜ್ಯದಲ್ಲಿರುವ ಅತ್ಯಂತ ಚಿಕ್ಕವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ.
12 Ու Յովհաննէս Մկրտիչին օրերէն մինչեւ հիմա՝ երկինքի թագաւորութիւնը ոյժո՛վ կ՚առնուի, եւ ուժեղնե՛րը կը յափշտակեն զայն.
ಸ್ನಾನಿಕನಾದ ಯೋಹಾನನ ದಿನಗಳಿಂದ ಇದುವರೆಗೆ, ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಒಳಗಾಗಿದೆ, ಬಲಾತ್ಕಾರಿಗಳು ಅದನ್ನು ಬಲವಂತವಾಗಿ ತೆಗೆದುಕೊಳ್ಳುತ್ತಾರೆ.
13 որովհետեւ բոլոր Մարգարէներն ու Օրէնքը մարգարէացան մինչեւ Յովհաննէս:
ಯೋಹಾನನ ಕಾಲದ ತನಕ ಮೋಶೆಯ ನಿಯಮ ಹಾಗು ಎಲ್ಲ ಪ್ರವಾದಿಗಳು ದೇವರ ರಾಜ್ಯವನ್ನು ಕುರಿತು ಪ್ರವಾದನೆ ಮಾಡಿದರು.
14 Եթէ կ՚ուզէք ընդունիլ, անիկա՛ է Եղիան՝ որ պիտի գար:
ನೀವು ಇದನ್ನು ಸ್ವೀಕರಿಸುವುದಕ್ಕೆ ಮನಸ್ಸಿದ್ದರೆ, ಬರತಕ್ಕ ಎಲೀಯನು ಈ ಯೋಹಾನನೇ.
15 Ա՛ն որ ականջ ունի լսելու՝ թող լսէ:
ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ.
16 Բայց որո՞ւ նմանցնեմ այս սերունդը: Կը նմանի մանուկներու, որոնք հրապարակները նստելով՝ կը գոչեն իրենց ընկերներուն
“ಆದರೆ ಈ ಸಂತತಿಯನ್ನು ನಾನು ಯಾವುದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ಇತರರನ್ನು ಕರೆಯುತ್ತಾ:
17 եւ կ՚ըսեն. “Սրինգ նուագեցինք ձեզի՝ ու չպարեցիք, ողբացինք ձեզի՝ ու չհեծեծեցիք”:
“‘ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ; ನಾವು ಶೋಕಗೀತೆ ಹಾಡಿದೆವು, ನೀವು ಗೋಳಾಡಲಿಲ್ಲ,’ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ.
18 Որովհետեւ Յովհաննէս եկաւ, ո՛չ կ՚ուտէր եւ ո՛չ կը խմէր, ու կ՚ըսէին. “Դեւ կայ անոր մէջ”:
“ಏಕೆಂದರೆ ಯೋಹಾನನು ಅನ್ನಪಾನಗಳನ್ನು ತೆಗೆದುಕೊಳ್ಳಲಿಲ್ಲ. ಅದಕ್ಕೆ ಅವರು, ‘ಅವನಿಗೆ ದೆವ್ವ ಹಿಡಿದಿದೆ,’ ಎಂದರು.
19 Մարդու Որդին եկաւ, կ՚ուտէ եւ կը խմէ, ու կ՚ըսեն. “Ահա՛ շատակեր ու գինեսէր մարդ մը, մաքսաւորներու եւ մեղաւորներու բարեկամ”: Բայց իմաստութիւնը արդարացաւ իր զաւակներով»:
ಮನುಷ್ಯಪುತ್ರನಾದ ನಾನು ಅನ್ನಪಾನ ಸೇವಿಸುವವನಾಗಿ ಬಂದೆನು. ಅದಕ್ಕೆ ಅವರು, ‘ಇಗೋ, ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು,’ ಎಂದು ಹೇಳುತ್ತಾರೆ. ಆದರೆ ಜ್ಞಾನವು ತನ್ನ ಕೃತ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದು ಹೇಳಿದರು.
20 Այն ատեն սկսաւ կշտամբել այն քաղաքները՝ որոնց մէջ կատարուեր էին իր հրաշքներէն շատերը, քանի որ չապաշխարեցին.
ತರುವಾಯ ತಮ್ಮ ಹೆಚ್ಚಾದ ಮಹತ್ಕಾರ್ಯಗಳು ನಡೆದ ಪಟ್ಟಣಗಳು, ದೇವರ ಕಡೆಗೆ ತಿರುಗಿಕೊಳ್ಳದೆ ಇದ್ದುದರಿಂದ ಯೇಸು ಅವುಗಳನ್ನು ಗದರಿಸತೊಡಗಿ,
21 «Վա՜յ քեզի՝ Քորազին, վա՜յ քեզի՝ Բեթսայիդա, որովհետեւ եթէ Տիւրոսի եւ Սիդոնի մէջ կատարուած ըլլային այն հրաշքները՝ որոնք ձեր մէջ կատարուեցան, շատո՛նց ապաշխարած պիտի ըլլային քուրձով ու մոխիրով:
“ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು.
22 Բայց ձեզի կը յայտարարեմ, Տիւրոսի եւ Սիդոնի աւելի դիւրին պիտի ըլլայ դատաստանին օրը՝ քան ձեզի:
ಆದರೂ ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ಟೈರ್ ಮತ್ತು ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ತಾಳಬಹುದಾಗಿರುವುದು.
23 Իսկ դո՛ւն, Կափառնայում, որ բարձրացած ես մինչեւ երկինք, պիտի իջնես մինչեւ դժոխք, որովհետեւ եթէ Սոդոմի մէջ կատարուած ըլլային այն հրաշքները՝ որոնք քու մէջդ կատարուեցան, տակաւին մնացած պիտի ըլլար մինչեւ այսօր: (Hadēs g86)
ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ. ಏಕೆಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ, ಅದು ಇಂದಿನವರೆಗೂ ಉಳಿಯುತ್ತಿತ್ತು. (Hadēs g86)
24 Բայց կը յայտարարեմ ձեզի թէ Սոդոմացիներու երկրին աւելի դիւրին պիտի ըլլայ դատաստանին օրը՝ քան քեզի»:
ಆದರೆ ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ಸೊದೋಮ್ ಪಟ್ಟಣದ ಗತಿಯು ಹೆಚ್ಚು ತಾಳಬಹುದಾಗಿರುವುದು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.
25 Այդ ատեն Յիսուս ըսաւ. «Կը ներբողեմ քեզ, ո՛վ Հայր, Տէր երկինքի ու երկրի, որ այս բաները ծածկեցիր իմաստուններէն եւ խելացիներէն, ու յայտնեցիր երախաներո՛ւն:
ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.
26 Այո՛, Հա՛յր, որովհետեւ ա՛յսպէս հաճելի եղաւ քու առջեւդ:
ಹೌದು ತಂದೆಯೇ, ಹೀಗೆ ಮಾಡುವುದು ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋಚಿತು.
27 Ամէն բան յանձնուեցաւ ինծի իմ Հօրմէս, եւ ո՛չ մէկը կը ճանչնայ Որդին՝ բայց միայն Հայրը, ու ո՛չ մէկը կը ճանչնայ Հայրը՝ բայց միայն Որդին, եւ ա՛ն՝ որուն Որդին փափաքի յայտնել:
“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಬೇರೆ ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾನೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು.
28 Եկէ՛ք ինծի, դուք բոլորդ որ կը յոգնիք ու բեռնաւորուած էք, եւ ես պիտի հանգստացնեմ ձեզ:
“ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
29 Առէ՛ք իմ լուծս ձեր վրայ ու սորվեցէ՛ք ինձմէ՝ որ հեզ եմ եւ սիրտով խոնարհ, ու հանգստութիւն պիտի գտնէք ձեր անձերուն.
ನಾನು ಸಾತ್ವಿಕನೂ ದೀನ ಹೃದಯದವನೂ ಆಗಿರುವುದರಿಂದ ನೀವು ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ. ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.
30 որովհետեւ իմ լուծս հեշտ է, եւ իմ բեռս՝ թեթեւ»:
ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ,” ಎಂದು ಹೇಳಿದರು.

< ՄԱՏԹԷՈՍ 11 >