< ՄԱՏԹԷՈՍ 12 >

1 Այդ ատեն Յիսուս՝ Շաբաթ օր մը՝ գնաց արտերու մէջէն. իր աշակերտները՝ անօթենալով՝ սկսան ցորենի հասկեր փրցնել եւ ուտել:
ಯೇಸು ಒಂದು ಸಬ್ಬತ್ ದಿನ ಪೈರಿನ ಹೊಲವನ್ನು ಹಾದುಹೋಗುತ್ತಿದ್ದಾಗ, ಅವರ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.
2 Երբ Փարիսեցիները տեսան՝ ըսին անոր. «Ահա՛ քու աշակերտներդ կը գործեն, մինչդեռ արտօնուած չէ գործել Շաբաթ օրը»:
ಫರಿಸಾಯರು ಅದನ್ನು ಕಂಡು ಯೇಸುವಿಗೆ, “ಇಗೋ, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಯಮಕ್ಕೆ ವಿರುದ್ಧವಾಗಿರುವದನ್ನು ಮಾಡುತ್ತಿದ್ದಾರೆ,” ಎಂದರು.
3 Ան ալ ըսաւ անոնց. «Չէ՞ք կարդացեր Դաւիթի ըրածը, երբ ինք եւ իրեն հետ եղողները անօթեցան.
ಅದಕ್ಕೆ ಯೇಸು ಅವರಿಗೆ, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೇ?
4 մտաւ Աստուծոյ տունը, ու կերաւ առաջադրութեան հացերը, որ ո՛չ իրեն արտօնուած էր ուտել, ո՛չ ալ իրեն հետ եղողներուն, բայց միայն քահանաներուն:
ಅವನು ದೇವರ ಆಲಯದೊಳಗೆ ಹೋಗಿ, ಯಾಜಕರ ಹೊರತು ತಾನಾಗಲಿ ತನ್ನ ಸಂಗಡಿಗರಾಗಲಿ, ತಿನ್ನುವುದಕ್ಕೆ ಧರ್ಮಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತಿನ್ನಲಿಲ್ಲವೇ?
5 Կամ թէ Օրէնքին մէջ չէ՞ք կարդացեր թէ քահանաները կը սրբապղծեն Շաբաթը տաճարին մէջ՝ Շաբաթ օրերը, եւ անպարտ են:
ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಉಲ್ಲಂಘಿಸಿದರೂ ನಿರ್ದೋಷಿಗಳಾಗಿದ್ದಾರೆಂದು ನೀವು ನಿಯಮದಲ್ಲಿ ಓದಲಿಲ್ಲವೇ?
6 Բայց կը յայտարարեմ ձեզի թէ այստեղ տաճարէ՛ն աւելի մեծ մէկը կայ:
ದೇವಾಲಯಕ್ಕಿಂತಲೂ ದೊಡ್ಡವನು ಇಲ್ಲಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.
7 Եթէ գիտնայիք թէ ի՛նչ ըսել է. “Կարեկցութի՛ւն կ՚ուզեմ, ու ո՛չ թէ զոհ”, այն ատեն չէիք դատապարտեր անպարտները.
ಆದರೆ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ, ನಿರಪರಾಧಿಗಳನ್ನು ಖಂಡಿಸುತ್ತಿರಲಿಲ್ಲ.
8 որովհետեւ մարդու Որդին տէրն է Շաբաթին»:
ಏಕೆಂದರೆ ಮನುಷ್ಯಪುತ್ರನಾದ ನಾನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದೇನೆ,” ಎಂದು ಹೇಳಿದರು.
9 Մեկնելով անկէ՝ եկաւ անոնց ժողովարանը:
ಯೇಸು ಅಲ್ಲಿಂದ ಹೊರಟು ಅವರ ಸಭಾಮಂದಿರದೊಳಕ್ಕೆ ಹೋದರು.
10 Հոն մարդ մը կար, որուն ձեռքը չորցած էր: Ամբաստանելու համար զինք՝ հարցուցին անոր. «Արտօնուա՞ծ է բուժել Շաբաթ օրը»:
ಅಲ್ಲಿ ಕೈ ಬತ್ತಿದ ಒಬ್ಬ ಮನುಷ್ಯನಿದ್ದನು. ಆಗ ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯಸಮ್ಮತವೋ?” ಎಂದು ಕೇಳಿದರು.
11 Ան ալ ըսաւ անոնց. «Ձեզմէ ո՞վ է այն մարդը, որ եթէ ոչխար մը ունենայ եւ ան փոսի մէջ իյնայ Շաբաթ օրը, չի բռներ ու վեր չի հաներ զայն:
ಅದಕ್ಕೆ ಯೇಸು ಅವರಿಗೆ, “ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ, ಅವನು ಅದನ್ನು ಮೇಲಕ್ಕೆ ಎತ್ತದೆ ಇರುವನೇ?
12 Հետեւաբար մարդը ո՜րչափ աւելի կ՚արժէ ոչխարէն: Ուրեմն արտօնուած է բարիք գործել Շաբաթ օրը»:
ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಮೌಲ್ಯವುಳ್ಳವನಾಗಿದ್ದಾನಲ್ಲವೇ? ಆದ್ದರಿಂದ ಸಬ್ಬತ್ ದಿನಗಳಲ್ಲಿ ಒಳ್ಳೆಯದನ್ನು ಮಾಡುವುದು ನ್ಯಾಯಸಮ್ಮತವಾಗಿದೆ!” ಎಂದು ಹೇಳಿದರು.
13 Այն ատեն ըսաւ այդ մարդուն. «Երկարէ՛ ձեռքդ»: Ան ալ երկարեց, եւ առողջացաւ միւսին պէս:
ಆಗ ಯೇಸು ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದರು. ಅವನು ಕೈಚಾಚಿದಾಗ ಅದು ಸಂಪೂರ್ಣ ವಾಸಿಯಾಗಿ ಇನ್ನೊಂದು ಕೈಯಂತೆಯೇ ಆಯಿತು.
14 Իսկ Փարիսեցիները դուրս ելլելով՝ խորհրդակցեցան անոր դէմ թէ ի՛նչպէս կորսնցնեն զայն:
ಆದರೆ ಫರಿಸಾಯರು ಹೊರಗೆ ಹೋಗಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಅವರ ವಿರೋಧವಾಗಿ ಆಲೋಚನೆಮಾಡಿದರು.
15 Երբ Յիսուս գիտցաւ՝ մեկնեցաւ անկէ: Մեծ բազմութիւններ հետեւեցան անոր, եւ բուժեց բոլորը.
ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದರು. ದೊಡ್ಡ ಜನರ ಗುಂಪು ಅವರನ್ನು ಹಿಂಬಾಲಿಸಿತು. ಯೇಸು ಅವರಲ್ಲಿ ಅಸ್ವಸ್ಥರಾದವರನ್ನು ಗುಣಪಡಿಸಿದರು.
16 բայց սաստիկ հրահանգեց անոնց՝ որ ո՛չ մէկուն յայտնեն զինք,
ಆದರೆ ಯೇಸು ತಾನು ಯಾರೆಂದು ಯಾರಿಗೂ ಪ್ರಕಟಿಸಬಾರದೆಂದು ಅವರನ್ನು ಎಚ್ಚರಿಸಿದರು.
17 որպէսզի իրագործուի Եսայի մարգարէին միջոցով ըսուած խօսքը.
ಹೀಗೆ ದೇವರು ಪ್ರವಾದಿಯಾದ ಯೆಶಾಯನ ಮುಖಾಂತರ ಹೇಳಿದ ಮಾತು ನೆರವೇರಿತು. ಅದೇನೆಂದರೆ:
18 «Ահա՛ իմ ծառաս՝ որ ընտրեցի, եւ իմ սիրելիս՝ որուն հաճեցաւ իմ անձս. իմ Հոգիս պիտի դնեմ անոր վրայ, ու իրաւունքը պիտի հռչակէ հեթանոսներուն:
“ಈತನು ನಾನು ಆರಿಸಿಕೊಂಡ ನನ್ನ ದಾಸನು, ಈ ನನ್ನ ಪ್ರಿಯನಲ್ಲಿ ನನ್ನ ಪ್ರಾಣವು ಸಂಪೂರ್ಣ ಮೆಚ್ಚಿದೆ. ನಾನು ಈತನ ಮೇಲೆ ನನ್ನ ಆತ್ಮವನ್ನು ಇರಿಸುವೆನು, ಈತನು ಜನಾಂಗಗಳಿಗೆ ನ್ಯಾಯವನ್ನು ಸಾರುವನು.
19 Ո՛չ պիտի հակառակի, ո՛չ պիտի պոռայ, եւ ո՛չ մէկը պիտի լսէ անոր ձայնը հրապարակներուն մէջ:
ಈತನು ಜಗಳವಾಡುವವನಲ್ಲ, ಕೂಗಾಡುವವನಲ್ಲ; ಬೀದಿಗಳಲ್ಲಿ ಈತನ ಸ್ವರವನ್ನು ಯಾರೂ ಕೇಳಿಸಿಕೊಳ್ಳುವುದೂ ಇಲ್ಲ.
20 Պիտի չփշրէ ջախջախուած եղէգը ու պիտի չմարէ պլպլացող պատրոյգը, մինչեւ որ իրաւունքը հասցնէ յաղթութեան:
ಈತನು ನ್ಯಾಯವನ್ನು ಜಯಕ್ಕೆ ನಡೆಸುವವರೆಗೆ, ಜಜ್ಜಿದ ದಂಟನ್ನು ಮುರಿಯುವವನಲ್ಲ, ಆರಿ ಹೋಗುತ್ತಿರುವ ಬತ್ತಿಯನ್ನು ನಂದಿಸುವವನೂ ಅಲ್ಲ.
21 Եւ հեթանոսները պիտի յուսան անոր անունին»:
ಈತನ ಹೆಸರಿನಲ್ಲಿಯೇ ಯೆಹೂದ್ಯರಲ್ಲದವರು ನಿರೀಕ್ಷೆ ಇಡುವರು.”
22 Այն ատեն բերին իրեն կոյր ու համր դիւահար մը, եւ բուժեց զայն, այնպէս որ համրն ու կոյրը խօսեցաւ եւ տեսաւ:
ಆಗ ಕೆಲವರು ದೆವ್ವಹಿಡಿದ ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವರು ಅವನನ್ನು ಗುಣಪಡಿಸಿದ್ದರಿಂದ, ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ದೃಷ್ಟಿ ಹೊಂದಿದನು.
23 Ամբողջ բազմութիւնը զմայլեցաւ, ու կ՚ըսէր. «Արդեօք ասիկա՞ է Դաւիթի որդին»:
ಆಗ ಜನರೆಲ್ಲರೂ ವಿಸ್ಮಯಗೊಂಡವರಾಗಿ, “ದಾವೀದನ ಪುತ್ರನು ಈತನೇ ಅಲ್ಲವೇ?” ಎಂದರು.
24 Բայց երբ Փարիսեցիները լսեցին՝ ըսին. «Ասիկա ուրիշ բանով դուրս չի հաներ դեւերը, բայց միայն դեւերուն Բէեղզեբուղ իշխանով»:
ಆದರೆ ಫರಿಸಾಯರು ಇದನ್ನು ಕೇಳಿದಾಗ, “ಈತನು ದೆವ್ವಗಳನ್ನು ಓಡಿಸುತ್ತಿರುವುದು ದೆವ್ವಗಳ ಅಧಿಪತಿಯಾದ ಬೆಲ್ಜೆಬೂಲನಿಂದಲೇ,” ಎಂದರು.
25 Յիսուս գիտնալով անոնց մտածումները՝ ըսաւ անոնց. «Ինքնիր դէմ բաժնուած որեւէ թագաւորութիւն՝ կ՚աւերի, եւ ինքնիր դէմ բաժնուած որեւէ քաղաք կամ տուն՝ չի կրնար կենալ:
ಯೇಸು ಅವರ ಆಲೋಚನೆಗಳನ್ನು ತಿಳಿದು ಅವರಿಗೆ, “ತನಗೆ ವಿರೋಧವಾಗಿ ವಿಭಜಿಸಿಕೊಳ್ಳುವ ಪ್ರತಿಯೊಂದು ರಾಜ್ಯವು ನಾಶವಾಗುವುದು ಮತ್ತು ತನಗೆ ವಿರೋಧವಾಗಿ ವಿಭಾಗವಾಗಿರುವ ಪ್ರತಿಯೊಂದು ಪಟ್ಟಣವಾಗಲಿ ಮನೆಯಾಗಲಿ ನಿಲ್ಲುವುದಿಲ್ಲ.
26 Եթէ Սատանա՛ն դուրս հանէ Սատանան, բաժնուած է ինքնիր դէմ. ուրեմն անոր թագաւորութիւնը ի՞նչպէս պիտի կենայ:
ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಓಡಿಸಿದರೆ, ಅವನು ತನಗೆ ವಿರೋಧವಾಗಿ ವಿಭಾಗವಾಗಿರುವನು. ಹಾಗಾದರೆ ಅವನ ರಾಜ್ಯವು ನಿಲ್ಲುವುದು ಹೇಗೆ?
27 Ու եթէ ես Բէեղզեբուղո՛վ կը հանեմ դեւերը, ձեր որդիները ինչո՞վ կը հանեն. ուստի անո՛նք պիտի ըլլան ձեր դատաւորները:
ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಓಡಿಸುವುದಾದರೆ, ನಿಮ್ಮ ಜನರು ಯಾರಿಂದ ಅವುಗಳನ್ನು ಓಡಿಸುತ್ತಾರೆ? ಆದ್ದರಿಂದ, ನಿಮ್ಮವರೇ ನಿಮಗೆ ನ್ಯಾಯಾಧಿಪತಿಗಳಾಗಿರುವರು.
28 Բայց եթէ ես Աստուծոյ Հոգիով կը հանեմ դեւերը, ուրեմն Աստուծոյ թագաւորութիւնը հասած է ձեր վրայ:
ನಾನು ದೇವರ ಆತ್ಮನಿಂದ ದೆವ್ವಗಳನ್ನು ಓಡಿಸುವುದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.
29 Կամ մէկը ի՞նչպէս կրնայ մտնել ուժեղ մարդու մը տունը եւ յափշտակել անոր կարասիները, եթէ նախ չկապէ այդ ուժեղ մարդը, եւ ա՛յն ատեն կողոպտէ անոր տունը:
“ಇದಲ್ಲದೆ, ಯಾವನಾದರೂ ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ, ಅವನ ಮನೆಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸೂರೆ ಮಾಡಲಾದೀತೇ? ಕಟ್ಟಿದ ನಂತರ ಅವನ ಮನೆಯನ್ನು ಕೊಳ್ಳೆ ಹೊಡೆಯಬಹುದು.
30 Ա՛ն որ ինծի հետ չէ՝ ինծի հակառակ է, եւ ա՛ն որ ինծի հետ չի ժողվեր՝ կը ցրուէ:
“ನನ್ನ ಪರವಾಗಿ ಇರದವನು ನನಗೆ ವಿರೋಧಿಯಾಗಿದ್ದಾನೆ, ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.
31 Ուստի կը յայտարարեմ ձեզի. “Ամէն տեսակ մեղք ու հայհոյութիւն պիտի ներուի մարդոց, բայց Սուրբ Հոգիին դէմ եղած հայհոյութիւնը պիտի չներուի մարդոց”:
ಆದಕಾರಣ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಕ್ಕೂ ದೂಷಣೆಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮರಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದಕ್ಕೆ ಕ್ಷಮಾಪಣೆಯಿಲ್ಲ.
32 Ո՛վ որ խօսք մը ըսէ մարդու Որդիին դէմ՝ պիտի ներուի անոր, բայց ո՛վ որ խօսի Սուրբ Հոգիին դէմ՝ պիտի չներուի անոր, ո՛չ այս աշխարհին մէջ եւ ո՛չ գալիքին մէջ»: (aiōn g165)
ಯಾರಾದರೂ ಮನುಷ್ಯಪುತ್ರನಾದ ನನಗೆ ವಿರೋಧವಾಗಿ ಮಾತನಾಡುವ ಪ್ರತಿಯೊಬ್ಬರಿಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ, ಈ ಯುಗದಲ್ಲೇ ಆಗಲಿ ಬರುವ ಯುಗದಲ್ಲೇ ಆಗಲಿ ಅದಕ್ಕಾಗಿ ಅವರಿಗೆ ಕ್ಷಮೆ ದೊರಕುವುದಿಲ್ಲ. (aiōn g165)
33 «Կա՛մ լա՛ւ սեպեցէք ծառը, ու անոր պտուղը լաւ կ՚ըլլայ, կա՛մ վա՛տ սեպեցէք ծառը, եւ անոր պտուղը վատ կ՚ըլլայ. որովհետեւ ծառը կը ճանչցուի իր պտուղէն:
“ಮರವು ಒಳ್ಳೆಯದಾಗಿದ್ದರೆ, ಅದರ ಫಲವು ಒಳ್ಳೆಯದಾಗಿರುವುದು; ಮರವು ಕೆಟ್ಟದ್ದಾಗಿದ್ದರೆ, ಅದರ ಫಲವು ಕೆಟ್ಟದ್ದಾಗಿರುವುದು. ಏಕೆಂದರೆ ಮರವನ್ನು ಅದರ ಫಲದಿಂದಲೇ ಗುರುತಿಸಲಾಗುವುದು.
34 Իժերո՛ւ ծնունդներ, ի՞նչպէս կրնաք՝ չար ըլլալով՝ բարի բաներ խօսիլ. որովհետեւ բերանը կը խօսի սիրտին լիութենէն:
ಸರ್ಪಸಂತತಿಯವರೇ, ಕೆಟ್ಟವರಾಗಿರುವ ನೀವು ಒಳ್ಳೆಯದೇನನ್ನಾದರೂ ಮಾತನಾಡುವಿರೋ? ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.
35 Բարի մարդը իր սիրտին բարի գանձէն կը հանէ բարի բաներ, իսկ չար մարդը իր սիրտին չար գանձէն կը հանէ չար բաներ:
ಒಳ್ಳೆಯವನು ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.
36 Բայց կը յայտարարեմ ձեզի. “Ամէն դատարկ խօսքի համար՝ որ մարդիկ կը խօսին, հաշիւ պիտի տան դատաստանին օրը”:
ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
37 Որովհետեւ քու խօսքերէ՛դ պիտի արդարանաս, եւ քու խօսքերէ՛դ պիտի դատապարտուիս»:
ನೀನು ನಿನ್ನ ಮಾತುಗಳಿಂದಲೇ ನೀತಿವಂತನೆಂದು ನಿರ್ಣಯಿಸಲಾಗುವುದು ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ನಿರ್ಣಯಿಸಲಾಗುವುದು,” ಎಂದು ಹೇಳಿದರು.
38 Այն ատեն դպիրներէն ու Փարիսեցիներէն ոմանք ըսին իրեն. «Վարդապե՛տ, նշա՛ն մը կ՚ուզենք տեսնել քեզմէ»:
ಆಗ ನಿಯಮ ಬೋಧಕರೂ ಫರಿಸಾಯರೂ, “ಬೋಧಕರೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ಕಾಣಬೇಕೆಂದಿದ್ದೇವೆ,” ಎಂದು ಕೇಳಿದರು.
39 Իսկ ինք պատասխանեց անոնց. «Չար եւ շնացող սերունդը նշան կը խնդրէ: Ուրիշ նշան պիտի չտրուի անոր, բայց միայն Յովնան մարգարէին նշանը:
ಯೇಸು ಉತ್ತರವಾಗಿ ಅವರಿಗೆ, “ವ್ಯಭಿಚಾರದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ. ಪ್ರವಾದಿ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಈ ಸಂತತಿಗೆ ಕೊಡಲಾಗುವುದಿಲ್ಲ.
40 Որովհետեւ ինչպէս Յովնան մնաց կէտ ձուկին փորին մէջ՝ երեք օր ու երեք գիշեր, այնպէս մարդու Որդին պիտի մնայ երկրի սիրտին մէջ՝ երեք օր եւ երեք գիշեր:
ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ದೊಡ್ಡ ಮೀನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಪುತ್ರನಾದ ನಾನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭದಲ್ಲಿರುವೆನು.
41 Նինուէի մարդիկը դատաստանին օրը պիտի կանգնին այս սերունդին դէմ ու պիտի դատապարտեն զայն, որովհետեւ զղջացին Յովնանի քարոզութեամբ. եւ ահա՛ Յովնանէ մեծ մէկը կայ հոս:
ನಿನೆವೆ ಪಟ್ಟಣದವರು ನ್ಯಾಯತೀರ್ಪಿನಲ್ಲಿ ಈ ಸಂತತಿಗೆ ಎದುರಾಗಿ ಎದ್ದು ನಿಂತು ಇದನ್ನು ಅಪರಾಧ ಎಂದು ತೀರ್ಪುಮಾಡುವರು, ಏಕೆಂದರೆ ಯೋನನು ಸಾರಿದ್ದನ್ನು ಕೇಳಿ ಅವರು ದೇವರ ಕಡೆಗೆ ತಿರುಗಿಕೊಂಡರು; ಇಗೋ, ಇಲ್ಲಿ ಯೋನನಿಗಿಂತಲೂ ತುಂಬಾ ದೊಡ್ಡವನು ಇದ್ದಾನೆ.
42 Հարաւի թագուհին դատաստանին օրը ոտքի պիտի ելլէ այս սերունդին դէմ ու զայն պիտի դատապարտէ, որովհետեւ ինք եկաւ երկրի ծայրերէն՝ Սողոմոնի իմաստութիւնը լսելու. եւ ահա՛ Սողոմոնէ մեծ մէկը կայ հոս»:
ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ.
43 «Երբ անմաքուր ոգին դուրս կ՚ելլէ մարդէ մը՝ կը շրջի անջուր տեղեր, հանգստութիւն կը փնտռէ, ու չի գտներ:
“ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ಹುಡುಕಾಡಿದರೂ ಅದನ್ನು ಕಂಡುಕೊಳ್ಳದೆ, ಅದು,
44 Այն ատեն կ՚ըսէ. “Վերադառնամ իմ տունս՝ ուրկէ ելայ”: Կու գայ եւ կը գտնէ զայն՝ պարապ, աւլուած ու զարդարուած:
‘ನಾನು ಹೊರಟು ಬಂದ ನನ್ನ ಮನೆಗೆ ಹಿಂದಿರುಗುವೆನು,’ ಎಂದು ಹೇಳಿಕೊಂಡು ಬಂದು, ಆ ಮನೆಯು ಬರಿದಾಗಿಯೂ ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ.
45 Այն ատեն կ՚երթայ, եւ կ՚առնէ իրեն հետ եօթը ուրիշ ոգիներ՝ իրմէ աւելի չար, ու մտնելով հոն կը բնակին. եւ այդ մարդուն վերջին վիճակը կ՚ըլլայ առաջինէն աւելի գէշ: Ա՛յսպէս պիտի ըլլայ այս չար սերունդին ալ»:
ಆಗ ಅದು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ಅಶುದ್ಧಾತ್ಮಗಳನ್ನು ತನ್ನೊಂದಿಗೆ ಕರೆದುಕೊಂಡು ಅವನ ಒಳಗೆ ಸೇರಿ ಅಲ್ಲಿ ವಾಸಮಾಡುವವು. ಹೀಗೆ ಆ ಮನುಷ್ಯನ ಕಡೆಯ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು. ಅದರಂತೆಯೇ ಈ ದುಷ್ಟ ಸಂತತಿಗೂ ಆಗುವುದು,” ಎಂದು ಹೇಳಿದರು.
46 Մինչ ինք կը խօսէր բազմութեան, իր մայրն ու եղբայրները կայնած էին դուրսը, եւ կը ջանային խօսիլ իրեն հետ:
ಯೇಸು ಇನ್ನೂ ಜನರ ಸಂಗಡ ಮಾತನಾಡುತ್ತಿದ್ದಾಗ, ಅವರ ತಾಯಿ ಮತ್ತು ಸಹೋದರರು ಅವರೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.
47 Մէկը ըսաւ իրեն. «Ահա՛ քու մայրդ ու եղբայրներդ կայնած են դուրսը, եւ կը ջանան խօսիլ քեզի հետ»:
ಆಗ ಒಬ್ಬನು ಯೇಸುವಿಗೆ, “ನಿಮ್ಮ ತಾಯಿಯೂ ಸಹೋದರರೂ ನಿಮ್ಮೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ,” ಎಂದನು.
48 Ինք ալ պատասխանեց իրեն ըսողին. «Ո՞վ է իմ մայրս, ու որո՞նք են իմ եղբայրներս»:
ಅದಕ್ಕೆ ಯೇಸು ತಮಗೆ ಹೇಳಿದವನಿಗೆ ಉತ್ತರವಾಗಿ, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಹೇಳಿ,
49 Եւ երկարելով իր ձեռքը դէպի իր աշակերտները՝ ըսաւ. «Ահա՛ մայրս ու եղբայրներս.
ಶಿಷ್ಯರ ಕಡೆಗೆ ತಮ್ಮ ಕೈಚಾಚಿ, “ಇಗೋ, ಇವರೇ ನನ್ನ ತಾಯಿ ಮತ್ತು ನನ್ನ ಸಹೋದರರು.
50 որովհետեւ ո՛վ որ կը գործադրէ իմ երկնաւոր Հօրս կամքը, անիկա՛ է իմ եղբայրս, քոյրս եւ մայրս»:
ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ,” ಎಂದು ಹೇಳಿದರು.

< ՄԱՏԹԷՈՍ 12 >