< ՄԱՏԹԷՈՍ 15 >

1 Այն ատեն Յիսուսի եկան դպիրներ ու Փարիսեցիներ, որոնք Երուսաղէմէն էին, եւ ըսին.
ಯೆರೂಸಲೇಮಿನಿಂದ ಫರಿಸಾಯರು ಮತ್ತು ನಿಯಮ ಬೋಧಕರು ಯೇಸುವಿನ ಬಳಿಗೆ ಬಂದು,
2 «Ինչո՞ւ քու աշակերտներդ զանց կ՚ընեն նախնիքներուն աւանդութիւնը, քանի որ չեն լուար իրենց ձեռքերը՝ երբ հաց կ՚ուտեն»:
“ನಿನ್ನ ಶಿಷ್ಯರು ಪೂರ್ವಿಕರ ಸಂಪ್ರದಾಯವನ್ನು ಏಕೆ ಮೀರುತ್ತಾರೆ? ಅವರು ಊಟಕ್ಕೆ ಮುಂಚೆ ತಮ್ಮ ಕೈಗಳನ್ನು ಏಕೆ ತೊಳೆದುಕೊಳ್ಳುವುದಿಲ್ಲ?” ಎಂದರು.
3 Ինք ալ պատասխանեց անոնց. «Հապա դո՛ւք ինչո՞ւ զանց կ՚ընէք Աստուծոյ պատուիրանը՝ ձեր աւանդութեան պատճառով:
ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ನೀವು ದೇವರ ಆಜ್ಞೆಯನ್ನು ಏಕೆ ಮೀರುತ್ತೀರಿ?
4 Արդարեւ Աստուած պատուիրեց. “Պատուէ՛ հայրդ ու մայրդ.
‘ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು,’ ಎಂದೂ ‘ತಂದೆತಾಯಿಗಳನ್ನು ದೂಷಿಸುವವನಿಗೆ ಮರಣದಂಡನೆ ಆಗಬೇಕು,’ ಎಂದು ದೇವರು ಹೇಳಿದ್ದಾರೆ.
5 եւ ո՛վ որ անիծէ իր հայրը կամ մայրը, մահո՛վ թող վախճանի”:
ಆದರೆ ನೀವು, ಯಾರಾದರೂ ತನ್ನ ತಂದೆಗೆ ಇಲ್ಲವೆ ತಾಯಿಗೆ, ನಾನು ನಿಮ್ಮ ಸಹಾಯಕ್ಕಾಗಿ ಇಟ್ಟಿದ್ದನ್ನು, ‘ದೇವರಿಗೆ ಕೊಟ್ಟಿದ್ದೇನೆ’ ಎಂದು ಹೇಳುವುದಾದರೆ,
6 Բայց դուք կ՚ըսէք. “Ո՛վ որ իր հօր կամ մօր ըսէ թէ "ի՛նչ օգուտ որ պիտի ստանաս ինձմէ՝ Աստուծոյ տալիք ընծայ է", եւ իր հայրը կամ մայրը չպատուէ՝ ազատ է”: Ա՛յսպէս՝ անվաւեր դարձուցած էք Աստուծոյ պատուիրանը՝ ձեր աւանդութեան պատճառով:
‘ಅವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಗೌರವಿಸಬೇಕಾಗಿಲ್ಲ’ ಎಂದು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ.
7 Կեղծաւորնե՛ր, Եսայի ճի՛շդ մարգարէացաւ ձեր մասին՝ ըսելով.
ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ:
8 “Այս ժողովուրդը միայն շրթունքո՛վ կը պատուէ զիս, բայց իրենց սիրտը հեռու է ինձմէ.
“‘ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.
9 եւ պարապ տեղը կը պաշտեն զիս՝ մարդոց պատուէրները սորվեցնելով իբր վարդապետութիւն”»:
ಅವರು ಮನುಷ್ಯರ ಆಜ್ಞೆಗಳನ್ನು ಉಪದೇಶಗಳನ್ನಾಗಿ ಬೋಧಿಸುವುದರಿಂದ ನನ್ನನ್ನು ಆರಾಧಿಸುವುದು ವ್ಯರ್ಥ.’”
10 Եւ բազմութիւնը կանչելով իրեն՝ ըսաւ անոնց. «Լսեցէ՛ք ու հասկցէ՛ք.
ಯೇಸು ಜನಸಮೂಹವನ್ನು ಕರೆದು ಅವರಿಗೆ, “ಕೇಳಿ ತಿಳಿದುಕೊಳ್ಳಿರಿ.
11 ո՛չ թէ ինչ որ կը մտնէ բերանը՝ կը պղծէ մարդը, հապա ինչ որ կ՚ելլէ բերանէն՝ անիկա՛ կը պղծէ մարդը»:
ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧ ಮಾಡುವುದಿಲ್ಲ, ಆದರೆ ಬಾಯೊಳಗಿಂದ ಹೊರಗೆ ಬರುವಂಥದ್ದೇ ಮನುಷ್ಯನನ್ನು ಅಶುದ್ಧ ಮಾಡುತ್ತದೆ,” ಎಂದು ಹೇಳಿದರು.
12 Այն ատեն իր աշակերտները մօտեցան եւ ըսին իրեն. «Գիտե՞ս թէ Փարիսեցիները գայթակղեցան, երբ լսեցին այդ խօսքը»:
ತರುವಾಯ ಯೇಸುವಿನ ಶಿಷ್ಯರು ಬಂದು, “ಫರಿಸಾಯರು ನಿಮ್ಮ ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿಮಗೆ ತಿಳಿಯಿತೇ?” ಎಂದು ಕೇಳಿದರು.
13 Ան ալ պատասխանեց. «Ամէն տունկ՝ որ իմ երկնաւոր Հայրս չէ տնկած, պիտի խլուի:
ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ಪರಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊಂದು ಗಿಡವು ಬೇರುಸಹಿತವಾಗಿ ಕಿತ್ತುಹಾಕಲಾಗುವುದು.
14 Թողուցէ՛ք զանոնք. իրենք կոյր են, ու կոյրերու առաջնորդ: Եթէ կոյրը առաջնորդէ կոյրը, երկուքն ալ փոսը պիտի իյնան»:
ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿತೋರಿಸುವ ಕುರುಡರು. ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಹಳ್ಳಕ್ಕೆ ಬೀಳುವರು,” ಎಂದು ಹೇಳಿದರು.
15 Պետրոս ըսաւ անոր. «Բացատրէ՛ մեզի այս առակը»:
ಪೇತ್ರನು, “ಈ ಸಾಮ್ಯವನ್ನು ನಮಗೆ ವಿವರಿಸು,” ಎಂದನು.
16 Յիսուս ըսաւ. «Դո՞ւք ալ տակաւին անխելք էք.
ಅದಕ್ಕೆ ಯೇಸು, “ನೀವು ಸಹ ಇನ್ನೂ ಬುದ್ಧಿಯಿಲ್ಲದವರಾಗಿದ್ದೀರಾ?” ಎಂದು ಕೇಳಿ,
17 չէ՞ք հասկնար թէ ամէն ինչ որ կը մտնէ բերանը, կը պարունակուի փորին մէջ, ու կը ձգուի արտաքնոցը:
“ಬಾಯೊಳಕ್ಕೆ ಹೋಗಿ ಹೊಟ್ಟೆಯಲ್ಲಿ ಸೇರುವುದೆಲ್ಲವೂ ವಿಸರ್ಜಿತವಾಗುವುದೆಂದು ನೀವು ಇನ್ನೂ ಗ್ರಹಿಸಲಿಲ್ಲವೋ?
18 Իսկ ինչ որ բերանէն դուրս կ՚ելլէ՝ սիրտէ՛ն յառաջ կու գայ, եւ անիկա՛ կը պղծէ մարդը:
ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವು ಹೃದಯದೊಳಗಿಂದ ಬಂದು ಮನುಷ್ಯನನ್ನು ಅಶುದ್ಧ ಮಾಡುತ್ತವೆ.
19 Որովհետեւ սիրտէ՛ն կ՚ելլեն չար մտածումներ, սպանութիւններ, շնութիւններ, պոռնկութիւններ, գողութիւններ, սուտ վկայութիւններ ու հայհոյութիւններ:
ಏಕೆಂದರೆ ಹೃದಯದೊಳಗಿಂದ ದುರಾಲೋಚನೆಗಳು, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ದೂರು ಇವು ಹೊರ ಬರುತ್ತವೆ.
20 Ասո՛նք են որ կը պղծեն մարդը, բայց անլուայ ձեռքով հաց ուտելը՝ չի պղծեր մարդը»:
ಇವುಗಳೇ ಮನುಷ್ಯನನ್ನು ಅಶುದ್ಧ ಮಾಡುತ್ತವೆ; ಆದರೆ ಕೈತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧ ಮಾಡುವುದಿಲ್ಲ,” ಎಂದರು.
21 Յիսուս անկէ մեկնելով՝ գնաց Տիւրոսի ու Սիդոնի երկրամասերը:
ಯೇಸು ಅಲ್ಲಿಂದ ಹೊರಟು ಟೈರ್ ಸೀದೋನ್ ಪ್ರದೇಶಕ್ಕೆ ಬಂದರು.
22 Եւ ահա՛ քանանացի կին մը, այդ հողամասերէն ելած, կը պոռար անոր. «Ողորմէ՜ ինծի, Տէ՛ր, Դաւիթի՛ որդի, աղջիկս սաստիկ կը չարչարուի դեւէն»:
ಆಗ, ಕಾನಾನ್ಯ ಸ್ತ್ರೀಯೊಬ್ಬಳು ಬಂದು ಅವರಿಗೆ, “ಸ್ವಾಮೀ, ದಾವೀದನ ಪುತ್ರನೇ, ನನ್ನನ್ನು ಕರುಣಿಸು. ನನ್ನ ಮಗಳು ದೆವ್ವದ ಕಾಟದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ,” ಎಂದು ಕೂಗಿಕೊಂಡಳು.
23 Ինք ո՛չ մէկ խօսքով պատասխանեց անոր. իսկ իր աշակերտները մօտենալով՝ կը թախանձէին իրեն ու կ՚ըսէին. «Արձակէ՛ զայն, որովհետեւ կ՚աղաղակէ մեր ետեւէն»:
ಆದರೆ ಯೇಸು ಆಕೆಗೆ ಉತ್ತರ ಕೊಡಲಿಲ್ಲ. ಆಗ ಶಿಷ್ಯರು ಯೇಸುವಿನ ಬಳಿ ಬಂದು, “ಆಕೆಯನ್ನು ಕಳುಹಿಸಿಬಿಡು, ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ” ಎಂದು ಕೇಳಿಕೊಂಡರು.
24 Ինք ալ պատասխանեց. «Ես ղրկուեցայ միայն Իսրայէլի տան կորսուած ոչխարներուն»:
ಯೇಸು ಉತ್ತರವಾಗಿ, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ನನ್ನನ್ನು ಕಳುಹಿಸಲಾಗಿದೆ,” ಎಂದರು.
25 Բայց անիկա եկաւ, երկրպագեց անոր եւ ըսաւ. «Տէ՛ր, օգնէ՛ ինծի»:
ಆಕೆಯು ಬಂದು ಯೇಸುವಿನ ಮುಂದೆ ಮೊಣಕಾಲೂರಿ, “ಸ್ವಾಮೀ, ನನಗೆ ಸಹಾಯಮಾಡು!” ಎಂದು ಕೇಳಿಕೊಂಡಳು.
26 Ան ալ պատասխանեց. «Լաւ չէ առնել զաւակներուն հացը ու նետել շուներուն»:
ಆಗ ಯೇಸು, “ಮಕ್ಕಳು ತಿನ್ನುವ ರೊಟ್ಟಿಯನ್ನು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ,” ಎಂದು ಹೇಳಿದರು.
27 Անիկա ալ ըսաւ. «Այո՛, Տէ՛ր. սակայն շուները կը կերակրուին իրենց տիրոջ սեղանէն ինկած փշրանքներով»:
ಆಗ ಆಕೆಯು, “ಸ್ವಾಮೀ, ಅದು ನಿಜವೇ, ಆದರೂ ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿತುಂಡುಗಳನ್ನು ನಾಯಿಮರಿಗಳು ತಿನ್ನುತ್ತವಲ್ಲಾ,” ಎಂದಳು.
28 Այն ատեն Յիսուս պատասխանեց անոր. «Ո՛վ կին, մեծ է հաւատքդ. թող ըլլայ քեզի՝ ի՛նչ որ կ՚ուզես»: Եւ նոյն ժամուն անոր աղջիկը բժշկուեցաւ:
ಯೇಸು ಉತ್ತರವಾಗಿ ಆಕೆಗೆ, “ಅಮ್ಮಾ ನಿನ್ನ ನಂಬಿಕೆಯು ದೊಡ್ಡದು! ನೀನು ಇಷ್ಟಪಟ್ಟಂತೆಯೇ ನಿನಗಾಗಲಿ,” ಎಂದು ಹೇಳಿದರು. ಆಕೆಯ ಮಗಳು ಅದೇ ಗಳಿಗೆಯಲ್ಲಿ ಗುಣಹೊಂದಿದಳು.
29 Յիսուս անկէ մեկնեցաւ. երբ Գալիլեայի ծովեզերքը հասաւ՝ լեռը ելլելով նստաւ:
ಯೇಸು ಅಲ್ಲಿಂದ ಹೊರಟು ಗಲಿಲಾಯ ಸರೋವರದ ಸಮೀಪಕ್ಕೆ ಬಂದು, ಬೆಟ್ಟವನ್ನು ಹತ್ತಿ ಅಲ್ಲಿ ಕುಳಿತುಕೊಂಡರು.
30 Ու մեծ բազմութիւններ եկան իրեն, որոնք ունէին իրենց հետ կաղեր, կոյրեր, համրեր, հաշմանդամներ եւ շատ ուրիշներ, ու ձգեցին զանոնք Յիսուսի ոտքը: Ան ալ բուժեց զանոնք.
ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು, ಕುರುಡರನ್ನು, ಮೂಕರನ್ನು, ಊನವಾದವರನ್ನು ಮತ್ತು ಬೇರೆ ಅನೇಕ ರೋಗಿಗಳನ್ನು ತಮ್ಮೊಂದಿಗೆ ಕರೆದುಕೊಂಡು ಬಂದು ಯೇಸುವಿನ ಪಾದದ ಬಳಿಯಲ್ಲಿ ಬಿಟ್ಟರು. ಯೇಸು ಅವರನ್ನೆಲ್ಲಾ ಸ್ವಸ್ಥಪಡಿಸಿದರು.
31 այնպէս որ բազմութիւնը զմայլեցաւ՝ տեսնելով որ համրերը կը խօսէին, հաշմանդամները կը բժշկուէին, կաղերը կը քալէին եւ կոյրերը կը տեսնէին. ու կը փառաբանէին Իսրայէլի Աստուածը:
ಮೂಕರು ಮಾತನಾಡುವುದನ್ನೂ ಊನವಾದವರು ಸ್ವಸ್ಥರಾಗಿರುವುದನ್ನೂ ಕುಂಟರು ನಡೆದಾಡುವುದನ್ನೂ ಕುರುಡರು ಕಾಣುವುದನ್ನೂ ಜನಸಮೂಹದವರು ಕಂಡು ಆಶ್ಚರ್ಯಪಟ್ಟರು. ಅವರು ಇಸ್ರಾಯೇಲಿನ ದೇವರನ್ನು ಕೊಂಡಾಡಿದರು.
32 Յիսուս՝ քովը կանչելով իր աշակերտները՝ ըսաւ. «Կը գթամ այդ բազմութեան վրայ, որովհետեւ արդէն երեք օրէ ի վեր քովս են, եւ ուտելիք ոչի՛նչ ունին: Չեմ ուզեր անօթի արձակել զանոնք, որպէսզի ճամբան չպարտասին»:
ಯೇಸು ತಮ್ಮ ಶಿಷ್ಯರನ್ನು ಕರೆದು, “ನಾನು ಈ ಜನಸಮೂಹವನ್ನು ನೋಡಿ ಕನಿಕರಪಡುತ್ತೇನೆ. ಮೂರು ದಿನಗಳಿಂದ ಇವರು ನನ್ನೊಂದಿಗಿದ್ದಾರೆ. ಇವರಿಗೆ ಊಟಕ್ಕೆ ಏನೂ ಇಲ್ಲ, ದಾರಿಯಲ್ಲಿ ಅವರು ಬಳಲಿ ಹೋಗುವರು. ಇವರನ್ನು ಉಪವಾಸವಾಗಿ ಕಳುಹಿಸುವುದಕ್ಕೆ ನನಗೆ ಮನಸ್ಸಿಲ್ಲ,” ಎಂದರು.
33 Աշակերտները ըսին անոր. «Մենք անապատին մէջ ուրկէ՞ պիտի ունենանք այնչափ հաց, որ կշտացնենք ա՛յսչափ մեծ բազմութիւն մը»:
ಅದಕ್ಕೆ ಶಿಷ್ಯರು, “ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ನಿರ್ಜನ ಪ್ರದೇಶದಲ್ಲಿ ನಮಗೆ ಎಲ್ಲಿಂದ ರೊಟ್ಟಿ ಸಿಕ್ಕೀತು?” ಎಂದರು.
34 Յիսուս ըսաւ անոնց. «Քանի՞ նկանակ ունիք»: Անոնք ալ ըսին. «Եօթը, ու քանի մը մանր ձուկ»:
ಯೇಸು ಅವರಿಗೆ, “ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದರು. ಶಿಷ್ಯರು, “ಏಳು ರೊಟ್ಟಿಗಳು ಮತ್ತು ಕೆಲವು ಸಣ್ಣ ಮೀನುಗಳಿವೆ,” ಎಂದರು.
35 Հրամայեց բազմութեան՝ որ նստին գետինին վրայ:
ಯೇಸು ಜನಸಮೂಹವು ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟರು.
36 Առաւ եօթը նկանակներն ու ձուկերը, շնորհակալ եղաւ, կտրեց եւ տուաւ աշակերտներուն, աշակերտներն ալ՝ բազմութեան:
ಅನಂತರ ಯೇಸು ಆ ಏಳು ರೊಟ್ಟಿಗಳನ್ನು ಮತ್ತು ಮೀನುಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ, ಅವುಗಳನ್ನು ಮುರಿದು ತಮ್ಮ ಶಿಷ್ಯರಿಗೆ ಕೊಡಲು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
37 Բոլորը կերան ու կշտացան, եւ վերցնելով աւելցած բեկորները՝ եօթը զամբիւղ լեցուցին:
ಅವರೆಲ್ಲರೂ ಊಟಮಾಡಿ ತೃಪ್ತರಾದರು. ಅನಂತರ ಶಿಷ್ಯರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಬುಟ್ಟಿಗಳು ತುಂಬಿದವು.
38 Անոնք որ կերան՝ չորս հազար այր մարդիկ էին, կիներէն ու մանուկներէն զատ:
ಊಟಮಾಡಿದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ನಾಲ್ಕು ಸಾವಿರ ಗಂಡಸರಿದ್ದರು.
39 Երբ արձակեց բազմութիւնը, նաւ մտաւ եւ գնաց Մագդաղայի հողամասը:
ತರುವಾಯ ಯೇಸು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಊರಿಗೆ ಬಂದರು.

< ՄԱՏԹԷՈՍ 15 >