< ՄԱՏԹԷՈՍ 16 >

1 Փարիսեցիներն ու Սադուկեցիները քովը եկան՝ փորձելու համար զինք, եւ կը խնդրէին իրմէ որ երկինքէն նշան մը ցոյց տայ իրենց:
ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ಪರಲೋಕದಿಂದ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಕೇಳಿದರು.
2 Ան ալ պատասխանեց անոնց. «Երբ իրիկուն ըլլայ՝ կ՚ըսէք. “Վաղը լաւ օդ պիտի ըլլայ, որովհետեւ երկինքը շառագունած է”,
ಯೇಸು ಉತ್ತರವಾಗಿ ಅವರಿಗೆ, “ಸಂಜೆಯಾದಾಗ ಆಕಾಶವು ಕೆಂಪಾಗಿದ್ದರೆ, ‘ಒಳ್ಳೆಯ ಹವಾಮಾನ ಇರುವುದು’ ಎಂದೂ
3 իսկ առտուն. “Այսօր մրրիկ պիտի ըլլայ, որովհետեւ երկինքը շառագունած ու մթագնած է”: Կեղծաւորնե՛ր, գիտէ՛ք զննել երկինքի երեսը, բայց չէ՞ք կրնար գիտնալ ժամանակներուն նշանները:
ಬೆಳಿಗ್ಗೆ ಆಕಾಶವು ಮೋಡ ಕವಿದು ಕೆಂಪಾಗಿದ್ದರೆ, ‘ಇಂದು ಬಿರುಗಾಳಿ ಇರುವುದು’ ಎಂದೂ ನೀವು ಹೇಳುತ್ತೀರಿ. ಆಕಾಶದಲ್ಲಾಗುವ ಸೂಚನೆಗಳನ್ನು ನೀವು ಗ್ರಹಿಸಬಲ್ಲಿರಿ, ಆದರೆ ಕಾಲದ ಸೂಚನೆಗಳನ್ನು ನೀವು ಗ್ರಹಿಸಲಾರಿರಿ.
4 Չար ու շնացող սերունդը նշան կը խնդրէ: Սակայն ուրիշ նշան պիտի չտրուի անոր, բայց միայն Յովնան մարգարէին նշանը»: Եւ ձգեց զանոնք ու գնաց:
ವ್ಯಭಿಚಾರಿಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ, ಆದರೆ ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಸಿಕ್ಕುವುದಿಲ್ಲ,” ಎಂದು ಹೇಳಿ, ಯೇಸು ಅವರನ್ನು ಬಿಟ್ಟು ಹೊರಟು ಹೋದರು.
5 Երբ իր աշակերտները անցան միւս եզերքը, մոռցած էին հաց առնել:
ಶಿಷ್ಯರು ರೊಟ್ಟಿಬುತ್ತಿಯನ್ನು ಕಟ್ಟಿಕೊಳ್ಳುವುದನ್ನು ಮರೆತು ಆಚೆದಡಕ್ಕೆ ಬಂದಿದ್ದರು.
6 Յիսուս ըսաւ անոնց. «Ուշադի՛ր եղէք, զգուշացէ՛ք Փարիսեցիներու եւ Սադուկեցիներու խմորէն»:
ಆಗ ಯೇಸು ಅವರಿಗೆ, “ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ಬಗ್ಗೆ ಎಚ್ಚರಿಕೆ ವಹಿಸಿ ಜಾಗರೂಕರಾಗಿರಿ,” ಎಂದು ಹೇಳಿದರು.
7 Անոնք ալ կը մտածէին իրենց մէջ՝ ըսելով. «Հաց չբերինք մեզի հետ»:
ಅದಕ್ಕೆ ಅವರು ತಮ್ಮತಮ್ಮಲ್ಲಿಯೇ, “ನಾವು ರೊಟ್ಟಿ ತಂದಿಲ್ಲವೆಂದು ಹೀಗೆ ಹೇಳುತ್ತಾರೆ,” ಎಂದು ಮಾತನಾಡಿಕೊಂಡರು.
8 Երբ Յիսուս ըմբռնեց՝ ըսաւ անոնց. «Ինչո՞ւ կը մտածէք ձեր մէջ, թերահաւատնե՛ր, թէ հաց չառիք:
ಯೇಸು ಅವರು ಮಾತನಾಡಿದ್ದನ್ನು ತಿಳಿದುಕೊಂಡು ಅವರಿಗೆ, “ಅಲ್ಪ ವಿಶ್ವಾಸದವರೇ, ನೀವು ರೊಟ್ಟಿ ಇಲ್ಲವೆಂದು ನಿಮ್ಮಲ್ಲಿ ಏಕೆ ಮಾತನಾಡಿಕೊಳ್ಳುತ್ತೀರಿ?
9 Տակաւին չէ՞ք հասկնար եւ չէ՞ք յիշեր հինգ նկանակները՝ որ բաժնեցիք հինգ հազարին, ու քանի՞ կողով վերցուցիք.
ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ, ಎಷ್ಟು ಬುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ?
10 ո՛չ ալ եօթը նկանակները՝ որ բաժնեցիք չորս հազարին, եւ քանի՞ զամբիւղ վերցուցիք:
ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಬುಟ್ಟಿಗಳನ್ನು ತುಂಬಿದಿರಿ?
11 Ի՞նչպէս չէք հասկնար թէ հացի՛ համար չըսի ձեզի. “Զգուշացէ՛ք Փարիսեցիներու եւ Սադուկեցիներու խմորէն”»:
ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವುದು ಹೇಗೆ?” ಎಂದು ಕೇಳಿದರು.
12 Այդ ատեն հասկցան թէ չըսաւ որ զգուշանան հացի խմորէն, հապա՝ Փարիսեցիներու եւ Սադուկեցիներու ուսուցումէն:
ಆಗ ಅವರು, ರೊಟ್ಟಿ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಯೇಸು ಹೇಳಿದ್ದನ್ನು ಗ್ರಹಿಸಿಕೊಂಡರು.
13 Երբ Յիսուս կ՚երթար Փիլիպպոսի Կեսարիային երկրամասը՝ հարցուց իր աշակերտներուն. «Մարդիկ ի՞նչ կ՚ըսեն, ո՞վ եմ ես՝ մարդու Որդին»:
ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತಗಳಿಗೆ ಬಂದಾಗ ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನನ್ನು ಯಾರೆಂದು ಜನರು ಹೇಳುತ್ತಾರೆ?” ಎಂದು ಕೇಳಿದರು.
14 Անոնք ըսին. «Ոմանք կ՚ըսեն թէ Յովհաննէս Մկրտիչն ես, ուրիշներ՝ Եղիան, ուրիշներ ալ՝ Երեմիան կամ մարգարէներէն մէկը»:
ಅದಕ್ಕೆ ಅವರು, “ಕೆಲವರು ಸ್ನಾನಿಕನಾದ ಯೋಹಾನನು ಎಂದು ಹೇಳುತ್ತಾರೆ, ಇನ್ನು ಕೆಲವರು ಎಲೀಯನು ಎನ್ನುತ್ತಾರೆ, ಬೇರೆಯವರು ಯೆರೆಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ” ಎಂದರು.
15 Ըսաւ անոնց. «Իսկ դո՛ւք ի՞նչ կ՚ըսէք, ո՞վ եմ»:
ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಿದರು.
16 Սիմոն Պետրոս պատասխանեց. «Դուն Քրիստո՛սն ես, ապրող Աստուծոյ Որդին»:
ಅದಕ್ಕೆ ಸೀಮೋನ ಪೇತ್ರನು ಉತ್ತರವಾಗಿ, “ನೀವು ಕ್ರಿಸ್ತ ಮತ್ತು ಜೀವಂತ ದೇವರ ಪುತ್ರರಾಗಿದ್ದೀರಿ,” ಎಂದು ಉತ್ತರಕೊಟ್ಟನು.
17 Յիսուս ըսաւ անոր. «Երանի՜ քեզի, Սիմո՛ն, Յովնանի՛ որդի. որովհետեւ ո՛չ թէ մարմինն ու արիւնը յայտնեցին քեզի ասիկա, հապա իմ Հայրս՝ որ երկինքն է:
ಯೇಸು ಅವನಿಗೆ, “ಯೋನನ ಮಗ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದನ್ನು ಪ್ರಕಟಿಸಿದ್ದು ಮಾನವರಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನು ನಿನಗೆ ಪ್ರಕಟಿಸಿದರು.
18 Ես ալ կը յայտարարեմ քեզի. “Դուն Պետրոս ես, եւ այս վէմին վրայ պիտի կառուցանեմ իմ եկեղեցիս, ու դժոխքին դռները պիտի չյաղթեն անոր: (Hadēs g86)
ನಾನು ಸಹ ನಿನಗೆ ಹೇಳುವುದೇನಂದರೆ, ನೀನು ಪೇತ್ರನು. ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ದ್ವಾರಗಳು ಅದನ್ನು ಜಯಿಸಲಾರವು. (Hadēs g86)
19 Երկինքի թագաւորութեան բանալիները պիտի տամ քեզի, եւ ի՛նչ որ երկրի վրայ կապես՝ երկինքի մէջ կապուած պիտի ըլլայ, ու ի՛նչ որ երկրի վրայ արձակես՝ երկինքի մէջ արձակուած պիտի ըլլայ”»:
ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುವೆನು; ನೀನು ಭೂಮಿಯಲ್ಲಿ ಯಾವುದನ್ನು ಬಂಧಿಸುತ್ತೀಯೋ ಅದು ಪರಲೋಕದಲ್ಲಿಯೂ ಬಂಧಿತವಾಗುವುದು. ನೀನು ಭೂಮಿಯಲ್ಲಿ ಏನನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲಾಗುವುದು,” ಎಂದರು.
20 Այն ատեն աշակերտներուն պատուիրեց՝ որ ո՛չ մէկուն ըսեն թէ ինք Քրիստոսն է:
ತರುವಾಯ ಯೇಸು, ತಾನೇ ಕ್ರಿಸ್ತ ಎಂಬುದನ್ನು ಯಾರಿಗೂ ಹೇಳಬಾರದೆಂದು ತಮ್ಮ ಶಿಷ್ಯರಿಗೆ ಆಜ್ಞಾಪಿಸಿದರು.
21 Այդ ատենէն ետք Յիսուս ցոյց տուաւ իր աշակերտներուն թէ պէտք էր որ երթար Երուսաղէմ, շատ չարչարանքներ կրէր երէցներէն, քահանայապետներէն եւ դպիրներէն, սպաննուէր ու յարութիւն առնէր երրորդ օրը:
ತಾವು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ಬಹು ಕಷ್ಟಗಳನ್ನು ಅನುಭವಿಸಿ ಕೊಲೆಗೀಡಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದು ಬರುವುದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತಮ್ಮ ಶಿಷ್ಯರಿಗೆ ತಿಳಿಸಲಾರಂಭಿಸಿದರು.
22 Պետրոս մէկդի առաւ զինք, եւ սկսաւ յանդիմանել զինք՝ ըսելով. «Ամե՛նեւին, Տէ՛ր. այդ բանը չպատահի՛ քեզի»:
ಆಗ ಪೇತ್ರನು ಯೇಸುವಿನ ಕೈಹಿಡಿದು, “ಹಾಗೆ ಆಗಬಾರದು ಸ್ವಾಮೀ! ಅದು ನಿಮಗೆ ಎಂದಿಗೂ ಸಂಭವಿಸಬಾರದು!” ಎಂದು ಹೇಳಿ ಯೇಸುವನ್ನು ಗದರಿಸಲಾರಂಭಿಸಿದನು.
23 Ինք ալ դառնալով՝ Պետրոսի ըսաւ. «Ետե՛ւս գնա, Սատանա՛յ, դուն գայթակղութիւն ես ինծի. որովհետեւ ո՛չ թէ Աստուծոյ բաները կը մտածես, հապա՝ մարդոց բաները»:
ಆಗ ಯೇಸು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನೀನು ನನಗೆ ಅಡ್ಡಿಯಾಗಿದ್ದೀ; ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದರು.
24 Այն ատեն Յիսուս ըսաւ իր աշակերտներուն. «Եթէ մէկը ուզէ գալ իմ ետեւէս, թող ուրանայ ինքզինք, վերցնէ իր խաչը, ու հետեւի ինծի:
ತರುವಾಯ ಯೇಸು ತಮ್ಮ ಶಿಷ್ಯರಿಗೆ, “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ತಾವೇ ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
25 Որովհետեւ ո՛վ որ ուզէ փրկել իր անձը՝ պիտի կորսնցնէ զայն, իսկ ո՛վ որ կորսնցնէ իր անձը՝ ինծի համար, պիտի գտնէ զայն:
ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವವರು ಅದನ್ನು ಕಳೆದುಕೊಳ್ಳುವರು, ಆದರೆ ನನ್ನ ನಿಮಿತ್ತವಾಗಿ ಯಾರಾದರೂ ತಮ್ಮ ಪ್ರಾಣವನ್ನು ಕಳೆದುಕೊಳ್ಳುವವರು ಅದನ್ನು ಕಂಡುಕೊಳ್ಳುವರು.
26 Քանի որ մարդ ի՞նչ օգուտ կ՚ունենայ, եթէ շահի ամբողջ աշխարհը բայց կորսնցնէ իր անձը. կամ՝ մարդ ի՞նչ փրկանք պիտի տայ իր անձին փոխարէն:
ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?
27 Որովհետեւ մարդու Որդին պիտի գայ իր Հօր փառքով՝ իր հրեշտակներուն հետ, եւ այն ատեն պիտի հատուցանէ իւրաքանչիւրին՝ իր գործերուն համեմատ:
ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು.
28 Ճշմա՛րտապէս կը յայտարարեմ ձեզի. “Հոս ներկայ եղողներէն կան ոմանք՝ որ մահ պիտի չհամտեսեն, մինչեւ որ տեսնեն մարդու Որդին՝ եկած իր թագաւորութեամբ”»:
“ನಿಮಗೆ ನಿಜವಾಗಿ ಹೇಳುತ್ತೇನೆ: ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಪುತ್ರನಾದ ನಾನು ನನ್ನ ರಾಜ್ಯದಲ್ಲಿ ಬರುವುದನ್ನು ಕಾಣುವವರೆಗೆ ಮರಣವನ್ನು ಹೊಂದುವುದೇ ಇಲ್ಲ,” ಎಂದರು.

< ՄԱՏԹԷՈՍ 16 >