< ՄԱՏԹԷՈՍ 22 >

1 Յիսուս դարձեալ առակներով խօսեցաւ անոնց եւ ըսաւ.
ಯೇಸು ಪುನಃ ಸಾಮ್ಯಗಳ ಮೂಲಕ ಅವರ ಕೂಡ ಮಾತನಾಡುತ್ತಾ:
2 «Երկինքի թագաւորութիւնը կը նմանի թագաւորի մը՝ որ հարսանիք ըրաւ իր որդիին, ու ղրկեց իր ծառաները՝ կանչելու հարսանիքին հրաւիրեալները.
“ಪರಲೋಕ ರಾಜ್ಯವು ಮಗನ ಮದುವೆ ಮಾಡಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
3 սակայն անոնք չուզեցին գալ:
ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಸೇವಕರನ್ನು ಕಳುಹಿಸಿದನು. ಆದರೆ ಅವರು ಬರಲು ಒಪ್ಪಲಿಲ್ಲ.
4 Դարձեալ ուրիշ ծառաներ ղրկեց եւ ըսաւ. “Ըսէ՛ք հրաւիրեալներուն. «Ահա՛ պատրաստեցի իմ ճաշս. զուարակներս ու գէր անասուններս մորթուած են, եւ ամէն բան պատրաստ է. եկէ՛ք հարսանիքի»”:
“ಅವನು ಪುನಃ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ, ‘ಇಗೋ ಔತಣವು ಸಿದ್ಧವಾಗಿದೆ. ಶ್ರೇಷ್ಠ ಔತಣ ಮಾಡಿಸಿದ್ದೇನೆ: ಎಲ್ಲವೂ ಸಿದ್ಧವಾಗಿವೆ. ಮದುವೆಗೆ ಬನ್ನಿರಿ ಎಂದು ಆಹ್ವಾನಿತರಿಗೆ ಹೇಳಿರಿ,’ ಎಂದನು.
5 Բայց անոնք անհոգութիւն ընելով՝ գացին մէկը իր արտը, ու միւսը՝ իր առեւտուրին:
“ಆದರೆ ಅವರು ಅದನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟು ಹೋದರು.
6 Ուրիշներ՝ բռնեցին անոր ծառաները, նախատեցին եւ սպաննեցին:
ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನಪಡಿಸಿ, ಅವರನ್ನು ಕೊಂದುಹಾಕಿದರು.
7 Թագաւորն ալ՝ երբ լսեց՝ բարկացաւ. ղրկեց իր զօրքերը, կորսնցուց այդ մարդասպանները ու այրեց անոնց քաղաքը:
ಆದರೆ ಅರಸನು ಅದನ್ನು ಕೇಳಿ ಬಹುಕೋಪಗೊಂಡು ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
8 Այն ատեն ըսաւ իր ծառաներուն. “Հարսանիքը պատրաստ է, բայց հրաւիրեալները արժանի չէին:
“ತರುವಾಯ ಅವನು ತನ್ನ ಸೇವಕರಿಗೆ, ‘ಮದುವೆಯ ಔತಣ ಸಿದ್ಧವಾಗಿದೆ, ಆದರೆ ಆಹ್ವಾನಿತರು ಸಿದ್ಧರಾಗಿರಲಿಲ್ಲ.
9 Ուրեմն գացէ՛ք դէպի ճամբաներուն գլուխները, եւ ո՛վ որ գտնէք՝ հրաւիրեցէ՛ք հարսանիքի”:
ಆದ್ದರಿಂದ ನೀವು ಮುಖ್ಯ ಬೀದಿಗಳಿಗೆ ಹೊರಟುಹೋಗಿ ಅಲ್ಲಿ ಕಂಡವರನ್ನೆಲ್ಲಾ ಮದುವೆಗೆ ಆಹ್ವಾನಿಸಿರಿ,’ ಎಂದನು.
10 Այդ ծառաները դուրս ելան՝ դէպի ճամբաներուն գլուխները, եւ ո՛վ որ գտան՝ թէ՛ չար, թէ՛ բարի, բոլորն ալ հաւաքեցին. ու հարսնետունը լեցուեցաւ հրաւիրեալներով:
ಆಗ ಆ ಸೇವಕರು ಮುಖ್ಯ ಬೀದಿಗಳಿಗೆ ಹೋಗಿ ತಾವು ಕಂಡ ಕೆಟ್ಟವರನ್ನೂ ಒಳ್ಳೆಯವರನ್ನೂ ಕರೆತಂದರು. ಹೀಗೆ ಮದುವೆ ಮಂಟಪವು ಅತಿಥಿಗಳಿಂದ ತುಂಬಿಹೋಯಿತು.
11 Երբ թագաւորը մտաւ՝ տեսնելու հարսնեւորները, տեսաւ մարդ մը՝ որ հագած չէր հարսանիքի հագուստ:
“ಅನಂತರ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದಾಗ, ಅಲ್ಲಿ ಮದುವೆಯ ವಸ್ತ್ರವಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಕಂಡನು.
12 Ըսաւ անոր. “Ընկե՛ր, ի՞նչպէս մտար հոս՝ առանց հարսանիքի հագուստի”: Ան ալ պապանձեցաւ:
ಅರಸನು ಆ ಮನುಷ್ಯನಿಗೆ, ‘ಸ್ನೇಹಿತನೇ, ಮದುವೆಯ ವಸ್ತ್ರವಿಲ್ಲದೆ ನೀನು ಒಳಗೆ ಹೇಗೆ ಬಂದೆ?’ ಎಂದು ಕೇಳಲು ಅವನು ಸುಮ್ಮನಿದ್ದನು.
13 Այն ատեն թագաւորը ըսաւ սպասարկուներուն. “Կապեցէ՛ք ասոր ոտքերն ու ձեռքերը, եւ առէ՛ք ու նետեցէ՛ք զայն դուրսի խաւարը. հոն պիտի ըլլայ լաց եւ ակռաներու կրճտում”:
“ಆಗ ಅರಸನು ಸೇವಕರಿಗೆ, ‘ಅವನ ಕೈಕಾಲುಗಳನ್ನು ಕಟ್ಟಿ ತೆಗೆದುಕೊಂಡು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಹಲ್ಲು ಕಡಿಯುತ್ತಾ ಗೋಳಾಡುತ್ತಿರಲಿ,’ ಎಂದು ಹೇಳಿದನು.
14 Որովհետեւ կանչուածները շատ են, բայց ընտրուածները՝ քիչ»:
“ಹೀಗೆಯೇ ಆಹ್ವಾನಿತರಾದವರು ಅನೇಕರು, ಆದರೆ ಆಯ್ಕೆಯಾದವರು ಕೆಲವರು ಮಾತ್ರ,” ಎಂದನು.
15 Այն ատեն Փարիսեցիները գացին խորհրդակցելու, թէ ի՛նչպէս խօսքով ձգեն զայն ծուղակի մէջ:
ಆಗ ಫರಿಸಾಯರು ಹೊರಟುಹೋಗಿ ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.
16 Ու ղրկեցին անոր իրենց աշակերտները՝ Հերովդէսեաններուն հետ, եւ ըսին. «Վարդապե՛տ, գիտենք թէ ճշմարտախօս ես ու ճշմարտութեամբ կը սորվեցնես Աստուծոյ ճամբան, եւ հոգ չես ըներ ոեւէ մէկուն համար, քանի որ երեսպաշտութիւն չես ըներ մարդոց:
ಅವರು ತಮ್ಮ ಶಿಷ್ಯರನ್ನು ಹೆರೋದ್ಯರೊಂದಿಗೆ ಯೇಸುವಿನ ಬಳಿಗೆ ಕಳುಹಿಸಿ, “ಬೋಧಕರೇ, ನೀವು ಸತ್ಯವಂತರು, ದೇವರ ಮಾರ್ಗವನ್ನು ಸತ್ಯದಿಂದಲೇ ಬೋಧಿಸುವವರು, ನೀವು ಯಾರನ್ನೂ ಲಕ್ಷ್ಯ ಮಾಡುವವರಲ್ಲ, ನೀವು ಮುಖದಾಕ್ಷಿಣ್ಯ ಮಾಡುವವರೂ ಅಲ್ಲ ಎಂದು ನಮಗೆ ಗೊತ್ತಿದೆ.
17 Ուստի ըսէ՛ մեզի, ի՞նչ է քու կարծիքդ. “Արտօնուա՞ծ է տուրք տալ կայսրին՝ թէ ոչ”»:
ಆದ್ದರಿಂದ ಕೈಸರನಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಅಲ್ಲವೋ? ನಿಮ್ಮ ಅಭಿಪ್ರಾಯವೇನು? ನಮಗೆ ಹೇಳು,” ಎಂದರು.
18 Յիսուս՝ գիտնալով անոնց չարամտութիւնը՝ ըսաւ. «Ինչո՞ւ կը փորձէք զիս, կեղծաւորնե՛ր:
ಯೇಸು ಅವರ ಕುಯುಕ್ತಿಯನ್ನು ತಿಳಿದುಕೊಂಡು, “ಕಪಟಿಗಳೇ, ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ?
19 Ցո՛յց տուէք ինծի տուրքին դրամը»: Անոնք դահեկան մը բերին իրեն:
ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ,” ಎಂದರು. ಆಗ ಅವರು ಒಂದು ನಾಣ್ಯವನ್ನು ತಂದು ಕೊಟ್ಟರು.
20 Ըսաւ անոնց. «Որո՞ւնն են այս պատկերն ու գրութիւնը»:
ಯೇಸು ಅವರಿಗೆ, “ಇದರ ಮುಖ ಮುದ್ರೆಯು ಮತ್ತು ಇದರ ಮೇಲಿರುವ ಲಿಪಿ ಯಾರದು?” ಎಂದು ಕೇಳಿದರು.
21 Ըսին անոր. «Կայսրի՛ն»: Այն ատեն ըսաւ անոնց. «Ուրեմն ինչ որ կայսրինն է՝ տուէ՛ք կայսրին, եւ ինչ որ Աստուծոյ է՝ Աստուծո՛յ»:
ಅದಕ್ಕೆ ಅವರು, “ಕೈಸರನದು,” ಎಂದರು. ಆಗ ಯೇಸು, “ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಕೊಡಿರಿ,” ಎಂದರು.
22 Երբ լսեցին՝ զարմացան, ու թողուցին զայն եւ գացին:
ಅವರು ಇದನ್ನು ಕೇಳಿ ಆಶ್ಚರ್ಯಪಟ್ಟು, ಯೇಸುವನ್ನು ಬಿಟ್ಟು ಹೊರಟು ಹೋದರು.
23 Նոյն օրը անոր քով եկան Սադուկեցիները, որոնք կ՚ըսեն թէ յարութիւն չկայ, ու հարցուցին անոր.
ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಯೇಸುವಿನ ಬಳಿಗೆ ಬಂದು,
24 «Վարդապե՛տ, Մովսէս ըսաւ. “Եթէ մէկը մեռնի առանց զաւակի, անոր եղբայրը թող ամուսնանայ անոր կնոջ հետ, եւ զարմ հանէ իր եղբօր”:
“ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ತಮ್ಮನು ವಿಧವೆಯನ್ನು ಮದುವೆಯಾಗಿ ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.
25 Ուրեմն եօթը եղբայրներ կային մեր քով: Առաջինը ամուսնացաւ ու վախճանեցաւ, եւ զարմ չունենալուն համար՝ իր կինը թողուց իր եղբօր:
ಹೀಗಿರಲಾಗಿ ನಮ್ಮಲ್ಲಿ ಏಳುಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆಮಾಡಿಕೊಂಡು ಸತ್ತನು. ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು.
26 Նմանապէս ալ երկրորդն ու երրորդը՝ մինչեւ եօթներորդը:
ಅದರಂತೆಯೇ ಎರಡನೆಯವನು ಮತ್ತು ಮೂರನೆಯವನು ಹೀಗೆ ಏಳನೆಯವನವರೆಗೂ ಸಂಭವಿಸಿತು.
27 Ամենէն ետք կինն ալ մեռաւ:
ಕಡೆಯದಾಗಿ, ಆ ಸ್ತ್ರೀಯೂ ಸತ್ತಳು.
28 Ուրեմն, յարութեան ատեն՝ այդ եօթնէն որո՞ւն կինը պիտի ըլլայ. որովհետեւ բոլորն ալ ունեցան զայն իբր կին»:
ಆದ್ದರಿಂದ, ಪುನರುತ್ಥಾನದ ಜೀವನದಲ್ಲಿ, ಆ ಏಳುಮಂದಿಯಲ್ಲಿ ಆಕೆ ಯಾರಿಗೆ ಹೆಂಡತಿಯಾಗಿರುವಳು? ಏಕೆಂದರೆ ಅವರೆಲ್ಲರೂ ಆಕೆಯನ್ನು ಮದುವೆ ಮಾಡಿಕೊಂಡಿದ್ದರಲ್ಲಾ?” ಎಂದು ಕೇಳಿದರು.
29 Յիսուս պատասխանեց անոնց. «Դուք մոլորած էք. ո՛չ Գիրքերը գիտէք, ո՛չ ալ Աստուծոյ զօրութիւնը:
ಅದಕ್ಕೆ ಯೇಸು ಉತ್ತರವಾಗಿ, “ನೀವು ಪವಿತ್ರ ವೇದವನ್ನಾಗಲಿ ದೇವರ ಶಕ್ತಿಯನ್ನಾಗಲಿ ಅರ್ಥ ಮಾಡಿಕೊಳ್ಳದೆ ತಪ್ಪುತ್ತಿದ್ದೀರಿ.
30 Քանի որ յարութեան ատեն՝ ո՛չ կ՚ամուսնանան եւ ո՛չ ամուսնութեան կը տրուին, հապա երկինքի մէջ՝ Աստուծոյ հրեշտակներուն պէս են:
ಏಕೆಂದರೆ ಪುನರುತ್ಥಾನದ ಜೀವನದಲ್ಲಿ ಅವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.
31 Բայց մեռելներուն յարութեան մասին չէ՞ք կարդացեր Աստուծմէ ձեզի ըսուած խօսքը.
ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ,
32 “Ե՛ս եմ Աբրահամի Աստուածը, Իսահակի Աստուածը եւ Յակոբի Աստուածը”: Աստուած մեռելներուն Աստուածը չէ, հապա՝ ողջերուն»:
‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಆಗಿದ್ದೇನೆ,’ ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ,” ಎಂದು ಹೇಳಿದರು.
33 Բազմութիւնը ասիկա լսելով՝ կ՚ապշէր անոր ուսուցումին վրայ:
ಜನಸಮೂಹದವರು ಇದನ್ನು ಕೇಳಿದಾಗ, ಯೇಸುವಿನ ಬೋಧನೆಗೆ ವಿಸ್ಮಯಗೊಂಡರು.
34 Բայց Փարիսեցիները՝ երբ լսեցին թէ ան պապանձեցուց Սադուկեցիները, տեղ մը հաւաքուեցան,
ಯೇಸು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿದಾಗ ಅವರು ಯೇಸುವಿನ ಬಳಿಗೆ ಬಂದರು.
35 եւ անոնցմէ օրինական մը հարցուց՝ զայն փորձելով.
ಅವರಲ್ಲಿ ಮೋಶೆಯ ನಿಯಮ ಬೋಧಕನಾಗಿದ್ದ ಒಬ್ಬನು, ಯೇಸುವನ್ನು ಪರೀಕ್ಷಿಸುವುದಕ್ಕಾಗಿ,
36 «Վարդապե՛տ, ո՞ր պատուիրանը մեծ է Օրէնքին մէջ»:
“ಬೋಧಕರೇ, ನಿಯಮದಲ್ಲಿ ಅತ್ಯಂತ ಮಹಾ ಆಜ್ಞೆ ಯಾವುದು?” ಎಂದು ಪ್ರಶ್ನಿಸಿದನು.
37 Յիսուս ըսաւ անոր. «“Սիրէ՛ Տէրը՝ քու Աստուածդ՝ ամբողջ սիրտովդ, ամբողջ անձովդ եւ ամբողջ միտքովդ”:
ಯೇಸು ಅವನಿಗೆ, “‘ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು.’
38 Ա՛յս է առաջին ու մեծ պատուիրանը:
ಇದೇ ಅತ್ಯಂತ ಮಹಾ ಆಜ್ಞೆಯೂ ಮೊದಲನೆಯ ಆಜ್ಞೆಯೂ ಆಗಿದೆ.
39 Եւ երկրորդը՝ ասոր նման. “Սիրէ՛ ընկերդ քու անձիդ՝՝ պէս”:
ಇದರಂತೆಯೇ ಇರುವ ಎರಡನೆಯ ಆಜ್ಞೆಯು: ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.
40 Այս երկու պատուիրաններէն կախուած են ամբողջ Օրէնքն ու Մարգարէները»:
ಇಡೀ ನಿಯಮವೂ ಪ್ರವಾದಿಗಳ ಗ್ರಂಥಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ,” ಎಂದರು.
41 Երբ Փարիսեցիները հաւաքուեցան, Յիսուս հարցուց անոնց.
ಫರಿಸಾಯರು ಕೂಡಿಬಂದಿದ್ದಾಗ ಯೇಸು ಅವರಿಗೆ,
42 «Քրիստոսի մասին ի՞նչ է ձեր կարծիքը. որո՞ւ որդին է»:
“ಕ್ರಿಸ್ತನ ವಿಷಯವಾಗಿ ನಿಮ್ಮ ಅಭಿಪ್ರಾಯವೇನು? ಆತನು ಯಾರ ಪುತ್ರನು?” ಎಂದು ಕೇಳಿದ್ದಕ್ಕೆ ಅವರು ಯೇಸುವಿಗೆ, “ದಾವೀದನ ಪುತ್ರನು,” ಎಂದರು.
43 Ըսին իրեն. «Դաւիթի՛»: Յիսուս ըսաւ անոնց. «Հապա ի՞նչպէս Դաւիթ Հոգիով զայն Տէր կը կոչէ ու կ՚ըսէ.
“ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ, ‘ಕರ್ತನು’ ಎಂದು ಕರೆದು,
44 “Տէրը ըսաւ իմ Տէրոջս. «Բազմէ՛ իմ աջ կողմս, մինչեւ որ քու թշնամիներդ պատուանդան դնեմ ոտքերուդ»”:
“‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದದಡಿಯಲ್ಲಿ ಹಾಕುವವರೆಗೆ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು,”’ ಎಂದು ಹೇಳಿದನಲ್ಲವೇ?
45 Ուրեմն եթէ Դաւիթ զայն Տէր կը կոչէ, ի՞նչպէս ան իր որդին կ՚ըլլայ»:
ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರೇ’ ಎಂದು ಕರೆಯುವುದಾದರೆ, ಆತನು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದನು.
46 Ո՛չ մէկը կրնար խօսքո՛վ մը պատասխանել անոր: Այդ օրէն ետք՝ ո՛չ մէկը կը յանդգնէր բան մը հարցնել անոր:
ಅದಕ್ಕೆ ಯಾರೂ ಒಂದು ಮಾತನ್ನು ಸಹ ಯೇಸುವಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರಿಗೂ ಧೈರ್ಯ ಬರಲಿಲ್ಲ.

< ՄԱՏԹԷՈՍ 22 >