< ՄԱՏԹԷՈՍ 3 >

1 Այդ օրերը Յովհաննէս Մկրտիչը եկաւ, Հրէաստանի անապատին մէջ քարոզելով
ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನು ಯೂದಾಯ ಪ್ರಾಂತದ ಅರಣ್ಯಕ್ಕೆ ಬಂದು,
2 եւ ըսելով. «Ապաշխարեցէ՛ք, որովհետեւ երկինքի թագաւորութիւնը մօտեցած է»:
“ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಸಾರುತ್ತಿದ್ದನು.
3 Ա՛յս է ա՛ն, որուն մասին Եսայի մարգարէն խօսեցաւ՝ ըսելով. «Անապատին մէջ գոչողին ձայնը. “Պատրաստեցէ՛ք Տէրոջ ճամբան, շտկեցէ՛ք անոր շաւիղները”»:
“‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವ ಸ್ವರವು,” ಎಂದು ಪ್ರವಾದಿಯಾದ ಯೆಶಾಯನ ಮೂಲಕ ಸೂಚಿತನಾದವನು ಇವನೇ.
4 Յովհաննէսի հագուստը ուղտի մազէ էր, իր մէջքին շուրջ՝ կաշիէ գօտի ունէր, եւ իր կերակուրը՝ մարախ ու վայրի մեղր էր:
ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಲಾಗಿತ್ತು. ಅವನು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳು ಮತ್ತು ಕಾಡುಜೇನು ಅವನ ಆಹಾರವಾಗಿತ್ತು.
5 Այն ատեն Երուսաղէմէն, ամբողջ Հրէաստանէն եւ Յորդանանի ամբողջ շրջակայքէն կ՚երթային իրեն,
ಯೆರೂಸಲೇಮಿನಿಂದಲೂ ಯೂದಾಯ ಪ್ರಾಂತದ ಎಲ್ಲಾ ಸ್ಥಳಗಳಿಂದಲೂ ಯೊರ್ದನ್ ನದಿ ಸುತ್ತಲಿರುವ ಪ್ರದೇಶದಿಂದಲೂ ಜನರು ಅವನ ಬಳಿಗೆ ಬರುತ್ತಿದ್ದರು.
6 կը մկրտուէին իրմէ՝ Յորդանանի մէջ, ու կը խոստովանէին իրենց մեղքերը:
ಅವರು ತಮ್ಮ ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
7 Երբ տեսաւ Փարիսեցիներէն եւ Սադուկեցիներէն շատեր՝ որ եկած էին իր մկրտութեան, ըսաւ. «Իժերո՛ւ ծնունդներ, ո՞վ իմացուց ձեզի՝ խուսափիլ գալիք բարկութենէն:
ಆದರೆ ಫರಿಸಾಯರು ಹಾಗೂ ಸದ್ದುಕಾಯರಲ್ಲಿ ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?
8 Ուրեմն ապաշխարութեան արժանավայել պտո՛ւղ բերէք.
ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ.
9 ու մի՛ մտածէք ձեր մէջ ըսել. “Մենք Աբրահա՛մը ունինք իբր հայր”. որովհետեւ կը յայտարարեմ ձեզի թէ Աստուած կարող է այս քարերէ՛ն հանել Աբրահամի զաւակներ:
‘ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ,’ ಎಂದು ನಿಮ್ಮೊಳಗೆ ಕೊಚ್ಚಿಕೊಳ್ಳಬೇಡಿರಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಮಕ್ಕಳನ್ನು ಹುಟ್ಟಿಸಲು ಶಕ್ತರೆಂದು ನಾನು ನಿಮಗೆ ಹೇಳುತ್ತೇನೆ.
10 Կացինը արդէն իսկ դրուած է ծառերու արմատին քով. ուրեմն ամէն ծառ որ լաւ պտուղ չի բերեր, կը կտրուի ու կրակը կը նետուի:
ಮರಗಳ ಬೇರಿಗೆ ಈಗಾಗಲೇ ಕೊಡಲಿ ಬಿದ್ದಿದೆ, ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕಲಾಗುವುದು.
11 Արդարեւ ես կը մկրտեմ ձեզ ջուրով՝ ապաշխարութեան համար, բայց ա՛ն որ կու գայ իմ ետեւէս՝ ինձմէ հզօր է, ու ես արժանի չեմ անոր կօշիկները կրելու. անիկա՛ պիտի մկրտէ ձեզ Սուրբ Հոգիով ու կրակով:
“ನಾನಂತೂ ದೇವರ ಕಡೆಗೆ ತಿರುಗಿಕೊಂಡಿದ್ದಕ್ಕಾಗಿ ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ. ಆದರೆ ನನ್ನ ಬಳಿಕ ಬರುವವರು ನನಗಿಂತಲೂ ಶಕ್ತರು, ಅವರ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ. ಅವರಾದರೋ ಪವಿತ್ರಾತ್ಮರಲ್ಲಿಯೂ ಅಗ್ನಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಕೊಡುವರು.
12 Անոր հեծանոցը իր ձեռքն է. իր կալը պիտի մաքրէ եւ իր ցորենը պիտի ժողվէ ամբարը, իսկ յարդը պիտի այրէ անշէջ կրակով»:
ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ ಶುದ್ಧಮಾಡಿ ಗೋಧಿಯನ್ನು ಕಣಜದಲ್ಲಿ ತುಂಬಿಕೊಂಡು, ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.
13 Այն ատեն Յիսուս եկաւ Գալիլեայէն Յորդանան՝ Յովհաննէսի, որպէսզի մկրտուի անկէ:
ಆಮೇಲೆ ಯೇಸು ಯೋಹಾನನಿಂದ ದೀಕ್ಷಾಸ್ನಾನ ಪಡೆಯಲು ಗಲಿಲಾಯದಿಂದ ಯೊರ್ದನ್ ನದಿಗೆ ಬಂದರು.
14 Յովհաննէս կ՚արգիլէր զայն ու կ՚ըսէր. «Ե՛ս պէտք է որ մկրտուիմ քեզմէ, ու դո՞ւն կու գաս ինծի»:
ಆದರೆ ಯೋಹಾನನು ಅದಕ್ಕೆ ಅಡ್ಡಿ ಮಾಡುತ್ತಾ, “ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ, ನೀವು ನನ್ನ ಬಳಿಗೆ ಬರಬಹುದೇ?” ಎಂದು ಕೇಳಿದನು.
15 Յիսուս պատասխանեց անոր «Թո՛յլ տուր հիմա, որովհետեւ ա՛յսպէս կը պատշաճի մեզի, որ գործադրենք արդարութիւնը իր ամբողջութեամբ»: Այն ատեն թոյլ տուաւ անոր:
ಯೇಸು ಉತ್ತರವಾಗಿ, “ಸದ್ಯಕ್ಕೆ ಒಪ್ಪಿಕೋ, ಹೀಗೆ ನಾವು ಸಕಲ ನೀತಿಯನ್ನೂ ನೆರವೇರಿಸಬೇಕಾಗಿದೆ,” ಎಂದು ಹೇಳಿದಾಗ, ಯೋಹಾನನು ಒಪ್ಪಿಕೊಂಡನು.
16 Երբ Յիսուս մկրտուեցաւ, իսկոյն դուրս ելաւ ջուրէն, եւ ահա՛ երկինքը բացուեցաւ ու տեսաւ Աստուծոյ Հոգին, որ աղաւնիի պէս կ՚իջնէր ու կու գար իր վրայ:
ಯೇಸು ದೀಕ್ಷಾಸ್ನಾನ ಪಡೆದುಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಸ್ವರ್ಗವು ತೆರೆಯಿತು, ದೇವರ ಆತ್ಮ ಪಾರಿವಾಳದ ಹಾಗೆ ತಮ್ಮ ಮೇಲೆ ಇಳಿದು ಬರುವುದನ್ನು ಯೇಸು ಕಂಡರು.
17 Եւ ահա՛ ձայն մը եկաւ երկինքէն՝ որ կ՚ըսէր. «Ա՛յս է իմ սիրելի Որդիս՝ որուն հաճեցայ»:
ಸ್ವರ್ಗದೊಳಗಿಂದ, “ಈತನು ನನ್ನ ಪ್ರಿಯ ಮಗನು. ಈತನನ್ನು ನಾನು ಮೆಚ್ಚಿದ್ದೇನೆ,” ಎಂಬ ಧ್ವನಿ ಕೇಳಿಸಿತು.

< ՄԱՏԹԷՈՍ 3 >