< ՄԱՏԹԷՈՍ 4 >

1 Այն ատեն Յիսուս անապատը տարուեցաւ Սուրբ Հոգիէն՝ Չարախօսէն փորձուելու համար:
ಆಮೇಲೆ ಸೈತಾನನಿಂದ ಶೋಧಿತರಾಗಲೆಂದು ಪವಿತ್ರಾತ್ಮರು ಯೇಸುವನ್ನು ಅರಣ್ಯಕ್ಕೆ ನಡೆಸಿದರು.
2 Քառասուն ցերեկ ու քառասուն գիշեր ծոմ պահելէ ետք՝ անօթեցաւ:
ನಲವತ್ತು ದಿನ ಹಗಲೂ ರಾತ್ರಿ ಉಪವಾಸವಿದ್ದ ಮೇಲೆ ಯೇಸುವಿಗೆ ಹಸಿವಾಯಿತು.
3 Եւ Փորձիչը մօտենալով անոր՝ ըսաւ. «Եթէ դուն Աստուծոյ Որդին ես, ըսէ՛ որ այս քարերը հաց ըլլան»:
ಆಗ ಶೋಧಕನು ಯೇಸುವಿನ ಬಳಿ ಬಂದು, “ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲುಗಳು ರೊಟ್ಟಿಗಳಾಗುವಂತೆ ಆಜ್ಞಾಪಿಸು,” ಎಂದನು.
4 Ան ալ պատասխանեց. «Գրուած է. “Միայն հացով չէ որ մարդը պիտի ապրի, հապա ամէն խօսքով՝ որ կ՚ելլէ Աստուծոյ բերանէն”»:
ಅದಕ್ಕೆ ಯೇಸು, “ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾನೆ,’” ಎಂದರು.
5 Այն ատեն Չարախօսը առաւ տա֊րաւ զայն սուրբ քաղաքը, կայնեցուց զայն տաճարին աշտարակին վրայ,
ಆಮೇಲೆ ಸೈತಾನನು ಯೇಸುವನ್ನು ಪವಿತ್ರ ನಗರಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಅತಿ ಎತ್ತರವಾದ ಶಿಖರದ ಮೇಲೆ ನಿಲ್ಲಿಸಿ,
6 եւ ըսաւ անոր. «Եթէ դուն Աստուծոյ Որդին ես, վա՛ր նետէ քեզ ասկէ. որովհետեւ գրուած է. “Իր հրեշտակներուն պիտի հրահանգէ քեզի համար, որ իրենց ձեռքերուն վրայ կրեն քեզ, որպէսզի քարի՛ մը չզարնես ոտքդ”»:
“ನೀನು ದೇವರ ಪುತ್ರನಾಗಿದ್ದರೆ, ಕೆಳಕ್ಕೆ ಧುಮುಕು. ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: “‘ದೇವರು ನಿನ್ನ ವಿಷಯವಾಗಿ ತಮ್ಮ ದೂತರಿಗೆ ಆಜ್ಞಾಪಿಸುವರು, ನಿನ್ನ ಪಾದಗಳು ಕಲ್ಲಿಗೆ ತಗಲದಂತೆ ದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು,’” ಎಂದನು.
7 Յիսուս ըսաւ անոր. «Դարձեալ գրուած է. “Մի՛ փորձեր Տէրը՝ քու Աստուածդ”»:
ಅದಕ್ಕೆ ಯೇಸು, “‘ನಿನ್ನ ದೇವರಾದ ಕರ್ತದೇವರನ್ನು ಪರೀಕ್ಷಿಸಬಾರದು’ ಎಂಬುದನ್ನು ಸಹ ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.
8 Չարախօսը դարձեալ առաւ հանեց զայն չափազանց բարձր լեռ մը, ցոյց տուաւ անոր աշխարհի բոլոր թագաւորութիւններն ու անոնց փառքը,
ಅನಂತರ ಸೈತಾನನು ಯೇಸುವನ್ನು ಬಹಳ ಎತ್ತರವಾದ ಪರ್ವತಕ್ಕೆ ಕರೆದುಕೊಂಡು ಹೋಗಿ, ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ಮಹಿಮೆಯನ್ನೂ ಅವರಿಗೆ ತೋರಿಸಿ,
9 եւ ըսաւ անոր. «Ասոնք բոլորը պիտի տամ քեզի, եթէ իյնաս՝ երկրպագես ինծի»:
“ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವೆಲ್ಲವನ್ನು ನಿನಗೆ ಕೊಡುವೆನು,” ಎಂದನು.
10 Այն ատեն Յիսուս ըսաւ անոր. «(Ետե՛ւս) գնա, Սատանա՛յ, որովհետեւ գրուած է. “Տէրո՛ջ՝ քու Աստուծոյդ երկրպագէ, ու միայն զի՛նք պաշտէ”»:
ಯೇಸು ಅವನಿಗೆ, “ಸೈತಾನನೇ, ತೊಲಗು. ಏಕೆಂದರೆ, ‘ನಿನ್ನ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.
11 Այն ատեն Չարախօսը թողուց զայն, եւ հրեշտակները մօտեցան ու սպասարկեցին անոր:
ಆಗ ಸೈತಾನನು ಯೇಸುವನ್ನು ಬಿಟ್ಟುಹೋದನು. ದೇವದೂತರು ಬಂದು ಅವರಿಗೆ ಉಪಚಾರ ಮಾಡಿದರು.
12 Երբ Յիսուս լսեց թէ Յովհաննէս մատնուեցաւ, մեկնեցաւ Գալիլեա:
ಯೋಹಾನನು ಬಂಧಿತನಾದನೆಂದು ಕೇಳಿ, ಯೇಸು ಗಲಿಲಾಯಕ್ಕೆ ಹಿಂದಿರುಗಿದರು.
13 Ու ձգելով Նազարէթը՝ եկաւ բնակեցաւ Կափառնայում, ծովեզերեայ քաղաքը, Զաբուղոնի ու Նեփթաղիմի հողամասերուն մէջ,
ಬಳಿಕ ನಜರೇತನ್ನು ಬಿಟ್ಟು, ಜೆಬುಲೂನ್ ಮತ್ತು ನೆಫ್ತಲೀಮ್ ಪ್ರಾಂತಗಳಿಗೆ ಬಂದು ಸರೋವರದ ಬಳಿಯಲ್ಲಿದ್ದ ಕಪೆರ್ನೌಮ್ ಎಂಬ ಊರಿನಲ್ಲಿ ವಾಸಮಾಡಿದರು.
14 որպէսզի իրագործուի Եսայի մարգարէին միջոցով ըսուած խօսքը.
ಹೀಗೆ ಪ್ರವಾದಿ ಯೆಶಾಯನ ಮುಖಾಂತರ ಹೇಳಿಸಿರುವ ಈ ಮಾತು ನೆರವೇರಿತು. ಅದೇನೆಂದರೆ:
15 «Զաբուղոնի երկիրն ու Նեփթաղիմի երկիրը, ծովու ճամբայով Յորդանանի միւս կողմը, հեթանոսներու Գալիլեան.
“ಜೆಬುಲೂನ್ ನಾಡು ಮತ್ತು ನೆಫ್ತಲೀಮ್ ನಾಡು, ಯೊರ್ದನ್ ನದಿಯ ಆಚೆ ಸರೋವರದ ಕಡೆ, ಯೆಹೂದ್ಯರಲ್ಲದವರಿರುವ ಗಲಿಲಾಯ ನಾಡು,
16 խաւարի մէջ բնակող ժողովուրդը մեծ լոյս տեսաւ, եւ լոյս ծագեցաւ անոնց՝ որ կը բնակէին մահուան երկրին ու շուքին մէջ»:
ಕತ್ತಲಲ್ಲಿ ವಾಸಿಸಿದ ಈ ಸ್ಥಳಗಳ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣ ಛಾಯೆಯ ಈ ಪ್ರದೇಶದಲ್ಲಿ ವಾಸಿಸುವವರಿಗೆ ಬೆಳಕು ಉದಯಿಸಿತು.”
17 Այդ ատենէն ետք Յիսուս սկսաւ քարոզել եւ ըսել. «Ապաշխարեցէ՛ք, որովհետեւ երկինքի թագաւորութիւնը մօտեցած է»:
ಅಂದಿನಿಂದ ಯೇಸು, “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಬೋಧಿಸತೊಡಗಿದರು.
18 Երբ Յիսուս կը քալէր Գալիլեայի ծովուն եզերքը, տեսաւ երկու եղբայրներ՝ Պետրոս կոչուած Սիմոնը, եւ անոր եղբայրը՝ Անդրէասը, որոնք ուռկան կը նետէին ծովը, որովհետեւ ձկնորս էին:
ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಹೋಗುತ್ತಿರುವಾಗ, ಪೇತ್ರ ಎನಿಸಿಕೊಂಡ ಸೀಮೋನನನ್ನೂ ಅವನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾಗಿದ್ದ ಅವರು ಸರೋವರದಲ್ಲಿ ಬಲೆ ಬೀಸುತ್ತಿದ್ದರು.
19 Ըսաւ անոնց. «Եկէ՛ք իմ ետեւէս, ու մարդո՛ց որսորդ ընեմ ձեզ»:
ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ. ನಾನು ನಿಮ್ಮನ್ನು, ಮನುಷ್ಯರನ್ನು ದೇವರ ಮಾರ್ಗದಲ್ಲಿ ನಡೆಸುವವರನ್ನಾಗಿ ಮಾಡುವೆನು,” ಎಂದು ಹೇಳಿದರು.
20 Անոնք ալ իսկոյն թողուցին ուռկանները եւ հետեւեցան անոր:
ತಕ್ಷಣವೇ, ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
21 Անկէ յառաջ երթալով՝ տեսաւ ուրիշ երկու եղբայրներ, Զեբեդեան Յակոբոսն ու անոր եղբայրը՝ Յովհաննէսը, որոնք նաւուն մէջ կը կարկտնէին իրենց ուռկանները, իրենց հօր՝ Զեբեդէոսի հետ: Կանչեց զանոնք.
ಯೇಸು ಅಲ್ಲಿಂದ ಮುಂದೆ ಹೋಗುತ್ತಿದ್ದಾಗ ಇನ್ನಿಬ್ಬರು ಅಣ್ಣತಮ್ಮಂದಿರನ್ನು ಅಂದರೆ, ಜೆಬೆದಾಯನ ಮಗ ಯಾಕೋಬ ಮತ್ತು ಅವನ ಸಹೋದರ ಯೋಹಾನನನ್ನು ಕಂಡರು. ಅವರು ತಮ್ಮ ತಂದೆ ಜೆಬೆದಾಯನೊಡನೆ ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಪಡಿಸುತ್ತಿದ್ದರು. ಯೇಸು ಅವರನ್ನೂ ಕರೆದರು.
22 անոնք ալ իսկոյն թողուցին նաւն ու իրենց հայրը, եւ հետեւեցան անոր:
ಕೂಡಲೇ, ಅವರು ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
23 Յիսուս ամբողջ Գալիլեան շրջելով՝ կը սորվեցնէր անոնց ժողովարաններուն մէջ, կը քարոզէր արքայութեան աւետարանը, եւ ժողովուրդին մէջ կը բուժէր ամէն տեսակ ախտ ու ամէն տեսակ վատառողջութիւն:
ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.
24 Անոր համբաւը տարածուեցաւ ամբողջ Սուրիայի մէջ, եւ բերին անոր բոլոր հիւանդները՝ որ զանազան ախտերով ու տանջանքներով կը տուայտէին, նաեւ դիւահարներ, լուսնոտներ, եւ անդամալոյծներ, ու բուժեց զանոնք:
ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.
25 Մեծ բազմութիւններ կը հետեւէին անոր՝ Գալիլեայէն, Դեկապոլիսէն, Երուսաղէմէն, Հրէաստանէն եւ Յորդանանի միւս կողմէն:
ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಹಾಗೂ ಯೊರ್ದನ್ ನದಿಯ ಆಚೆಕಡೆಯಿಂದಲೂ ಜನರು ದೊಡ್ಡ ಗುಂಪಾಗಿ ಯೇಸುವನ್ನು ಹಿಂಬಾಲಿಸಿದರು.

< ՄԱՏԹԷՈՍ 4 >