< ՄԱՏԹԷՈՍ 9 >

1 Ուստի նաւ մտնելով՝ անցաւ միւս կողմը ու գնաց իր քաղաքը:
ಯೇಸು ದೋಣಿಯನ್ನು ಹತ್ತಿ ಸಮುದ್ರವನ್ನು ದಾಟಿ ತನ್ನ ಊರಿಗೆ ಬಂದನು.
2 Եւ բերին իրեն անդամալոյծ մը, որ պառկած էր մահիճի մէջ: Յիսուս՝ տեսնելով անոնց հաւատքը՝ ըսաւ անդամալոյծին. «Քաջալերուէ՛, որդեա՛կ, մեղքերդ ներուած են քեզի»:
ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, “ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
3 Դպիրներէն ոմանք ըսին՝ իրենք իրենց մէջ. «Ասիկա կը հայհոյէ»:
ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಾನೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.
4 Յիսուս՝ գիտնալով անոնց մտածումները՝ ըսաւ. «Ինչո՞ւ չար բան կը մտածէք ձեր սիրտերուն մէջ:
ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ?
5 Ո՞րը աւելի դիւրին է, “մեղքերդ ներուած են” ըսե՞լը, թէ՝ “ոտքի՛ ելիր ու քալէ՛” ըսելը:
ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಅನ್ನುವುದೋ?
6 Բայց որպէսզի գիտնաք թէ մարդու Որդին իշխանութիւն ունի մեղքերը ներելու երկրի վրայ, (այն ատեն ըսաւ անդամալոյծին.) “Ոտքի՛ ելիր, ա՛ռ մահիճդ ու գնա՛ տունդ”»:
ಅಥವಾ ‘ಎದ್ದು ನಡೆ’ ಅನ್ನುವದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಅಂದನು.
7 Ան ալ ոտքի ելաւ եւ գնաց իր տունը:
ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು.
8 Երբ բազմութիւնները տեսան՝ զարմացան, ու փառաբանեցին Աստուած, որ այդպիսի իշխանութիւն տուած էր մարդոց:
ಜನರು ಇದನ್ನು ನೋಡಿ ಆಶ್ಚರ್ಯಚಕಿತರಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು.
9 Յիսուս անկէ յառաջ երթալով՝ տեսաւ մարդ մը, Մատթէոս կոչուած, որ նստած էր մաքս ընդունելու տեղը, եւ ըսաւ անոր. «Հետեւէ՛ ինծի»: Ան ալ կանգնեցաւ ու հետեւեցաւ անոր:
ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
10 Տունը սեղան նստած՝՝ ատենը՝ ահա՛ ուրիշ շատ մաքսաւորներ եւ մեղաւորներ եկած ու սեղան նստած էին Յիսուսի եւ անոր աշակերտներուն հետ:
೧೦ಅನಂತರ ಯೇಸು ಅವನ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಬಹು ಮಂದಿ ಸುಂಕದವರೂ ಪಾಪಿಗಳೂ ಬಂದು ಯೇಸುವಿನ ಮತ್ತು ಆತನ ಶಿಷ್ಯರ ಪಂಕ್ತಿಯಲ್ಲೇ ಕುಳಿತುಕೊಂಡರು.
11 Երբ Փարիսեցիները տեսան՝ ըսին անոր աշակերտներուն. «Ինչո՞ւ ձեր վարդապետը կ՚ուտէ մաքսաւորներու եւ մեղաւորներու հետ»:
೧೧ಅದನ್ನು ನೋಡಿದ ಫರಿಸಾಯರು ಆತನ ಶಿಷ್ಯರನ್ನು, “ನಿಮ್ಮ ಗುರುವು ಸುಂಕದವರು ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.
12 Բայց երբ Յիսուս լսեց՝ ըսաւ անոնց. «Ո՛չ թէ առողջներուն բժիշկ պէտք է, հապա՝ հիւանդներուն:
೧೨ಯೇಸು ಅದನ್ನು ಕೇಳಿ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು.
13 Գացէ՛ք, սորվեցէ՛ք թէ ի՛նչ ըսել է. “Կարեկցութի՛ւն կ՚ուզեմ, ու ո՛չ թէ զոհ”. որովհետեւ ես եկայ կանչելու ո՛չ թէ արդարները, հապա մեղաւորները՝ ապաշխարութեան»:
೧೩ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.
14 Այն ատեն Յովհաննէսի աշակերտները եկան անոր եւ ըսին. «Ինչո՞ւ մենք ու Փարիսեցիները յաճախ ծոմ կը պահենք, իսկ քու աշակերտներդ չեն պահեր»:
೧೪ನಂತರ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು, “ಫರಿಸಾಯರೂ ನಾವೂ ಬಹಳಸಾರಿ ಉಪವಾಸಮಾಡುತ್ತೇವೆ; ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ,
15 Յիսուս ըսաւ անոնց. «Միթէ կարելի՞ է՝ որ հարսնեւորները սգան, քանի փեսան իրենց հետ է: Բայց օրերը պիտի գան՝ երբ փեսան պիտի վերցուի իրենցմէ. ա՛յն ատեն ծոմ պիտի պահեն:
೧೫“ಮದುವೆಯ ಅತಿಥಿಗಳು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಡುವರೇ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ; ಆಗ ಅವರು ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ; ಹಾಗೆ ಹಚ್ಚಿದರೆ
16 Ո՛չ մէկը կը ձգէ նոր լաթի կտոր մը հին հանդերձի մը վրայ, որովհետեւ անիկա որ անոր լրումին համար դրուած է, կը քաշէ հանդերձը, ու պատռուածքը աւելի գէշ կ՚ըլլայ:
೧೬ಆ ತ್ಯಾಪೆಯು ಹಳೇ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು.
17 Ո՛չ ալ նոր գինին կը դնեն հին տիկերու մէջ. այլապէս՝ տիկերը կը պատռին, ե՛ւ գինին կը թափի, ե՛ւ տիկերը կը կորսուին: Հապա նոր գինին կը դնեն նո՛ր տիկերու մէջ, ու երկուքն ալ կը պահուին»:
೧೭ಇದಲ್ಲದೆ ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಹಾಕಿಡುವುದಿಲ್ಲ; ಇಟ್ಟರೆ ಬುದ್ದಲಿಗಳು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗುವುದಲ್ಲದೆ, ಬುದ್ದಲಿಗಳು ನಾಶವಾಗುವವು; ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ, ಆಗ ಎರಡೂ ಸಂರಕ್ಷಿಸಲ್ಪಡುವವು” ಎಂದು ಹೇಳಿದನು.
18 Երբ ան այս բաները կը խօսէր անոնց հետ, ահա՛ պետ մը եկաւ ու երկրպագեց անոր՝ ըսելով. «Աղջիկս թերեւս վախճանած է մինչեւ հիմա. բայց եկո՛ւր, դի՛ր ձեռքդ անոր վրայ, եւ պիտի ապրի»:
೧೮ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, “ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು” ಎಂದು ಬೇಡಿಕೊಂಡನು.
19 Յիսուս ալ ոտքի ելաւ ու հետեւեցաւ անոր՝ իր աշակերտներուն հետ:
೧೯ಯೇಸು ಎದ್ದು ಆ ಅಧಿಕಾರಿಯ ಹಿಂದೆ ಹೋಗುವಾಗ ಆತನ ಶಿಷ್ಯರು ಸಹ ಆತನನ್ನು ಹಿಂಬಾಲಿಸಿದರು.
20 Եւ ահա՛ կին մը, որ արիւնահոսութենէ կը տառապէր տասներկու տարիէ ի վեր, մօտեցաւ ետեւէն ու դպաւ անոր հանդերձին քղանցքին.
೨೦ಆಗ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು,
21 քանի որ կ՚ըսէր ինքնիրեն. «Եթէ միայն դպչիմ անոր հանդերձին՝ պիտի բժշկուիմ»:
೨೧“ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆ ಎಂದು ಮನಸ್ಸಿನಲ್ಲಿ” ಅಂದುಕೊಂಡು ಹಿಂದಿನಿಂದ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು.
22 Յիսուս, երբ ետեւ դարձաւ ու տեսաւ զայն, ըսաւ. «Քաջալերուէ՛, աղջիկ, հաւատքդ բժշկեց քեզ»: Եւ կինը բժշկուեցաւ նոյն ժամուն:
೨೨ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು.
23 Երբ Յիսուս հասաւ պետին տունը, ու տեսաւ սրնգահարները եւ աղմկարար բազմութիւնը,
೨೩ಯೇಸು ಆ ಅಧಿಕಾರಿಯ ಮನೆಗೆ ಬಂದಾಗ ಕೊಳಲು ಊದುವವರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು ಅವರಿಗೆ,
24 ըսաւ անոնց. «Մեկնեցէ՛ք, որովհետեւ աղջիկը մեռած չէ, հապա կը քնանայ»:
೨೪“ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ ನಿದ್ರಿಸುತ್ತಿದ್ದಾಳೆ” ಅಂದನು. ಅದಕ್ಕೆ ಅವರು ಆತನನ್ನು ಪರಿಹಾಸ್ಯ ಮಾಡಿದರು.
25 Անոնք ալ ծաղրեցին զինք: Բայց երբ բազմութիւնը դուրս հանուեցաւ, ինք ներս մտաւ, բռնեց անոր ձեռքէն, եւ աղջիկը ոտքի ելաւ:
೨೫ಜನರನ್ನು ಹೊರಕ್ಕೆ ಕಳುಹಿಸಿದ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈ ಹಿಡಿಯಲು ಆಕೆ ಎದ್ದಳು.
26 Այս լուրը տարածուեցաւ ամբողջ երկիրը:
೨೬ಈ ಸುದ್ದಿ ಆ ದೇಶದೊಳಗೆಲ್ಲಾ ಹಬ್ಬಿತು.
27 Երբ Յիսուս յառաջ անցաւ անկէ, երկու կոյրեր հետեւեցան անոր՝ աղաղակելով. «Ողորմէ՜ մեզի, Դաւիթի՛ Որդի».
೨೭ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು.
28 Երբ տուն հասաւ, կոյրերը եկան իրեն: Յիսուս ըսաւ անոնց. «Կը հաւատա՞ք թէ կրնամ ընել այս բանը»: Ըսին անոր. «Այո՛, Տէ՛ր»:
೨೮ಯೇಸು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು, “ನಾನು ಇದನ್ನು ಮಾಡಬಲ್ಲೆನೆಂಬುದನ್ನು ನೀವು ನಂಬುತ್ತೀರೋ” ಎಂದು ಕೇಳಿದ್ದಕ್ಕೆ, ಅವರು “ಹೌದು, ಕರ್ತನೇ, ನಂಬುತ್ತೇವೆ” ಅಂದರು.
29 Այն ատեն դպաւ անոնց աչքերուն եւ ըսաւ. «Թող ըլլայ ձեզի՝ ձեր հաւատքին համեմատ»:
೨೯ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ, “ನಿಮ್ಮ ನಂಬಿಕೆಯಂತೆ ನಿಮಗೆ ಆಗಲಿ” ಅಂದನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು.
30 Անոնց աչքերը բացուեցան, ու Յիսուս ազդարարեց անոնց՝ ըսելով. «Զգուշացէ՛ք որ ո՛չ մէկը գիտնայ»:
೩೦ನಂತರ ಯೇಸು ಅವರಿಗೆ, “ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ” ಎಂದು ಕಟ್ಟುನಿಟ್ಟಾಗಿ ಆದೇಶಿಸಿದನು.
31 Բայց անոնք մեկնելով տարածեցին անոր համբաւը այդ ամբողջ երկրին մէջ:
೩೧ಆದರೆ ಅವರು ಹೊರಟುಹೋಗಿ ಆ ದೇಶದೊಳಗೆಲ್ಲಾ ಆತನ ಸುದ್ದಿಯನ್ನು ಹಬ್ಬಿಸಿದರು.
32 Երբ անոնք դուրս ելան, ահա՛ համր դիւահար մարդ մը բերին իրեն:
೩೨ಅವರು ಹೊರಟುಹೋಗುತ್ತಿರುವಾಗ ದೆವ್ವಹಿಡಿದ ಒಬ್ಬ ಮೂಕನನ್ನು ಯೇಸುವಿನ ಬಳಿಗೆ ಕರೆತಂದರು.
33 Երբ դեւը ելաւ, համրը խօսեցաւ: Ուստի բազմութիւնները զարմացան, ու կ՚ըսէին թէ բնա՛ւ այսպիսի բան երեւցած չէր Իսրայէլի մէջ:
೩೩ದೆವ್ವ ಬಿಡಿಸಿದ ಮೇಲೆ ಮೂಕನಾಗಿದ್ದ ಅವನು ಮಾತನಾಡುವವನಾದನು. ಅದಕ್ಕೆ ಜನರು, “ಇಸ್ರಾಯೇಲಿನಲ್ಲಿ ಇಂಥ ಕಾರ್ಯವನ್ನು ಇದುವರೆಗೂ ಯಾರೂ ನೋಡಲಿಲ್ಲವೆಂದು” ಆಶ್ಚರ್ಯಚಕಿತರಾದರು.
34 Բայց Փարիսեցիները կ՚ըսէին. «Ան դեւերուն իշխանո՛վ դուրս կը հանէ դեւերը»:
೩೪ಆದರೆ ಫರಿಸಾಯರು, “ಇವನು ದೆವ್ವಗಳ ಒಡೆಯನ ಸಹಾಯದಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ” ಎಂದು ಹೇಳಿದರು.
35 Յիսուս կը շրջէր բոլոր քաղաքներն ու գիւղերը, կը սորվեցնէր անոնց ժողովարաններուն մէջ, կը քարոզէր արքայութեան աւետարանը, եւ կը բուժէր բոլոր ախտերն ու բոլոր վատառողջութիւնները ժողովուրդին մէջ:
೩೫ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
36 Եւ տեսնելով բազմութիւնները՝ գթաց անոնց վրայ, որովհետեւ պարտասած ու ցրուած էին՝ հովիւ չունեցող ոչխարներու պէս:
೩೬ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.
37 Այն ատեն ըսաւ իր աշակերտներուն. «Հունձքը ի՛րապէս շատ է, բայց գործաւորները՝ քիչ.
೩೭ಆತನು ತನ್ನ ಶಿಷ್ಯರಿಗೆ, “ಬೆಳೆಯು ಬಹಳ ಇದೆ, ಆದರೆ ಕೆಲಸದವರು ಸ್ವಲ್ಪ.
38 ուրեմն աղերսեցէ՛ք հունձքին Տէրոջ, որ գործաւորներ ուղարկէ իր հունձքին»:
೩೮ಆದುದರಿಂದ ಬೆಳೆಯ ಯಜಮಾನನನ್ನು, ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಿಕೊಡಬೇಕೆಂದು ಬೇಡಿಕೊಳ್ಳಿರಿ” ಎಂದು ಹೇಳಿದನು.

< ՄԱՏԹԷՈՍ 9 >