< ՀՌՈՎՄԱՅԵՑԻՍ 10 >

1 Եղբայրնե՛ր, սիրտիս բաղձանքն է, նաեւ Աստուծոյ ուղղած աղերսանքս՝ Իսրայէլի համար, որ անոնք փրկուին:
ಸಹೋದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬುದೇ ನನ್ನ ಮನೋಭಿಲಾಷೆಯೂ ಮತ್ತು ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.
2 Որովհետեւ ես անոնց համար կը վկայեմ թէ նախանձախնդրութիւն ունին Աստուծոյ հանդէպ, բայց ո՛չ թէ գիտակցութեամբ:
ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ.
3 Քանի որ՝ անգիտանալով Աստուծոյ արդարութիւնը եւ ջանալով հաստատել իրե՛նց արդարութիւնը՝ անոնք չհպատակեցան Աստուծոյ արդարութեան:
ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
4 Որովհետեւ Քրիստո՛ս է Օրէնքին վախճանը՝ ամէն հաւատացեալի արդարութեան համար:
ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.
5 Արդարեւ Մովսէս Օրէնքէն եղող արդարութեան մասին կը գրէ. «Այն մարդը որ կը գործադրէ այդ բաները՝ պիտի ապրի անոնցմով»:
ಧರ್ಮಶಾಸ್ತ್ರದ ನೀತಿಯನುಸಾರ, “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.
6 Բայց հաւատքէն եղող արդարութիւնը սա՛ կ՚ըսէ. «Մի՛ ըսեր սիրտիդ մէջ. “Ո՞վ պիտի բարձրանայ երկինքը”, (այսինքն՝ Քրիստոսը վար իջեցնելու, )
ಆದರೆ ನಂಬಿಕೆಯಿಂದುಂಟಾಗುವ ನೀತಿಯು ಈ ರೀತಿಯಾಗಿ ಹೇಳುತ್ತದೆ. “‘ಕ್ರಿಸ್ತನನ್ನು ಭೂಮಿಗಿಳಿಸಿಕೊಂಡು ಬರುವುದಕ್ಕಾಗಿ ಮೇಲಣ ಲೋಕಕ್ಕೆ ಏರಿಹೋದವರಾರು?’
7 կամ. “Ո՞վ պիտի իջնէ անդունդը” (այսինքն՝ Քրիստոսը մեռելներէն վեր հանելու)»: (Abyssos g12)
ಎಂದಾಗಲಿ ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರುವುದಕ್ಕಾಗಿ ಯಾರು ಪಾತಾಳಲೋಕಕ್ಕೆ ಇಳಿದುಹೋದರು? ಎಂದಾಗಲಿ ನಿನ್ನ ಮನಸ್ಸಿನಲ್ಲಿ ಅಂದುಕೊಳ್ಳಬಾರದು.’” ಆದರೆ ಅದು ಏನನ್ನು ಹೇಳುತ್ತದೆ. (Abyssos g12)
8 Հապա ի՞նչ կ՚ըսէ ան. «Խօսքը մօտ է քեզի, բերանիդ եւ սիրտիդ մէջ է». այսինքն հաւատքին խօսքը՝ որ մենք կը քարոզենք:
“ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ, ನಿನ್ನ ಹೃದಯದಲ್ಲಿಯೂ ಇದೆ.” ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.
9 Որովհետեւ եթէ բերանովդ Տէր դաւանիս Յիսուսը, ու սիրտիդ մէջ հաւատաս թէ Աստուած մեռելներէն յարուցանեց զայն՝ պիտի փրկուիս.
ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ.
10 (որովհետեւ սիրտով կը հաւատայ մէկը՝ արդարանալու համար, ու բերանով կը դաւանի՝ փրկուելու համար: )
೧೦ಹೃದಯದಿಂದ ನಂಬುವುದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವುದರ ಮೂಲಕ ರಕ್ಷಣೆಯಾಗುತ್ತದೆ.
11 Քանի որ Գիրքը կ՚ըսէ. «Ո՛վ որ անոր հաւատայ՝ ամօթահար պիտի չըլլայ»:
೧೧“ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ.
12 Արդարեւ խտրութիւն չկայ Հրեային ու Յոյնին միջեւ, որովհետեւ բոլորին վրայ եղող նոյն Տէրը ճոխութեամբ կը հասնի բոլոր անոնց՝ որ զինք կը կանչեն:
೧೨ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ.
13 Քանի որ “ո՛վ որ Տէրոջ անունը կանչէ՝ պիտի փրկուի”:
೧೩ಆದ್ದರಿಂದ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೂ ರಕ್ಷಣೆಯಾಗುವುದೆಂದು ಬರೆದಿದೆ.
14 Ուրեմն ի՞նչպէս պիտի կանչեն զայն՝ որուն հաւատացած չեն. կամ ի՞նչպէս պիտի հաւատան անոր՝ որուն մասին լսած չեն. կամ ի՞նչպէս պիտի լսեն՝ առանց քարոզիչի:
೧೪ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?
15 Կամ ի՞նչպէս պիտի քարոզեն՝ եթէ չղրկուին, ինչպէս գրուած է. «Ի՜նչ գեղեցիկ են ոտքերը անոնց՝ որոնք խաղաղութիւն կ՚աւետեն, բարի բաներ կ՚աւետեն»:
೧೫ಇದಕ್ಕೆ ಸರಿಯಾಗಿ “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ.
16 Բայց բոլորը չհնազանդեցան աւետարանին, քանի որ Եսայի կ՚ըսէ. «Տէ՛ր, ո՞վ հաւատաց մեր տուած լուրին»:
೧೬ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, “ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?” ಎಂದು ನುಡಿಯುತ್ತಾನೆ.
17 Ուրեմն հաւատքը կու գայ լսելէն, ու լսելը՝ Աստուծոյ խօսքէն:
೧೭ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.
18 Բայց կ՚ըսեմ. «Միթէ չլսեցի՞ն: Անկասկած. “Անոնց հնչիւնը գնաց ամբո՛ղջ երկիրը, եւ անոնց խօսքը՝ մինչեւ երկրագունդին ծայրերը”»:
೧೮ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”
19 Բայց կ՚ըսեմ. «Միթէ Իսրայէլ չգիտցա՞ւ»: Նախ Մովսէս կ՚ըսէ. «Ես պիտի գրգռեմ ձեր նախանձը անպիտան ազգով՝՝ մը, պիտի բարկացնեմ ձեզ անխելք ազգով մը»:
೧೯ಆದರೆ “ಇಸ್ರಾಯೇಲ್ಯರು ಆ ವಾರ್ತೆಯನ್ನು ತಿಳಿದುಕೊಳ್ಳಲಿಲ್ಲವೇನು” ಎಂದು ಹೇಳುತ್ತೇನೆ. ಈ ವಿಷಯದಲ್ಲಿ, “ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಅಸೂಯೆ ಹುಟ್ಟುವಂತೆ ಪ್ರೆರೇಪಿಸುತ್ತೇನೆ; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ರೊಚ್ಚಿಗೆಬ್ಬಿಸುವೆನು” ಎಂದು ಮೊದಲು ಮೋಶೆಯು ಹೇಳುತ್ತಾನೆ.
20 Բայց Եսայի շատ յանդուգն է, ու կ՚ըսէ. «Ես գտնուեցայ անոնցմէ՝ որոնք չէին փնտռեր զիս, յայտնուեցայ անոնց՝ որոնք չէին հարցներ իմ մասիս»:
೨೦ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ, “ನನ್ನನ್ನು ಹುಡುಕದವರಿಗೂ ನಾನು ಸಿಕ್ಕಿದೆನು, ನನ್ನನ್ನು ಕೇಳದವರಿಗೆ ನಾನು ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.
21 Սակայն Իսրայէլի համար կ՚ըսէ. «Ամբողջ օրը երկարեցի իմ ձեռքերս՝ չանսացող եւ հակաճառող ժողովուրդի մը»:
೨೧ಆದರೆ ಅವನು ಇಸ್ರಾಯೇಲ್ಯರನ್ನು ಕುರಿತು, “ನನ್ನ ಮಾತಿಗೆ ಅವಿಧೇಯರಾಗಿ ಎದುರುಮಾತನಾಡುವ ಜನರನ್ನು ನಾನು ದಿನವೆಲ್ಲಾ ಎಡೆಬಿಡದೆ ಕೈ ಚಾಚಿ ಕರೆದೆನೆಂದು” ಆತನು ಹೇಳುತ್ತಾನೆ.

< ՀՌՈՎՄԱՅԵՑԻՍ 10 >