< ՀՌՈՎՄԱՅԵՑԻՍ 10 >

1 Եղբայրնե՛ր, սիրտիս բաղձանքն է, նաեւ Աստուծոյ ուղղած աղերսանքս՝ Իսրայէլի համար, որ անոնք փրկուին:
ಪ್ರಿಯರೇ, ನನ್ನ ಹೃದಯದ ಬಯಕೆಯು, ನಾನು ದೇವರಿಗೆ ಸಲ್ಲಿಸುವ ಪ್ರಾರ್ಥನೆಯು ಇಸ್ರಾಯೇಲರು ರಕ್ಷಣೆ ಹೊಂದಬೇಕೆಂಬುದೇ.
2 Որովհետեւ ես անոնց համար կը վկայեմ թէ նախանձախնդրութիւն ունին Աստուծոյ հանդէպ, բայց ո՛չ թէ գիտակցութեամբ:
ಅವರು ದೇವರಿಗಾಗಿ ಆಸಕ್ತರು ಎಂಬುದಾಗಿ ನಾನು ಸಾಕ್ಷಿಕೊಡುತ್ತೇನೆ. ಆದರೆ ಅವರ ಆಸಕ್ತಿಯು ಜ್ಞಾನಕ್ಕೆ ಅನುಸಾರವಾದದ್ದು ಅಲ್ಲ.
3 Քանի որ՝ անգիտանալով Աստուծոյ արդարութիւնը եւ ջանալով հաստատել իրե՛նց արդարութիւնը՝ անոնք չհպատակեցան Աստուծոյ արդարութեան:
ಅವರು ದೇವರಿಂದ ಬರುವ ನೀತಿಯನ್ನು ತಿಳಿಯದವರಾಗಿ ತಮ್ಮದೇ ಆದ ನೀತಿಯನ್ನು ಸ್ಥಾಪಿಸಲು ಪ್ರಯತ್ನಪಟ್ಟದ್ದರಿಂದ ಅವರು ತಮ್ಮನ್ನು ದೇವರ ನೀತಿಗೆ ಒಳಪಡಿಸಲಿಲ್ಲ.
4 Որովհետեւ Քրիստո՛ս է Օրէնքին վախճանը՝ ամէն հաւատացեալի արդարութեան համար:
ಕ್ರಿಸ್ತ ಯೇಸುವನ್ನು ನಂಬುವ ಪ್ರತಿಯೊಬ್ಬರಿಗೂ ನೀತಿಯು ದೊರಕುವಂತೆ ಕ್ರಿಸ್ತ ಯೇಸು ಮೋಶೆಯ ನಿಯಮದ ಅಂತ್ಯವಾಗಿರುತ್ತಾರೆ.
5 Արդարեւ Մովսէս Օրէնքէն եղող արդարութեան մասին կը գրէ. «Այն մարդը որ կը գործադրէ այդ բաները՝ պիտի ապրի անոնցմով»:
ನಿಯಮದಿಂದ ಬರುವ ನೀತಿಯ ಬಗ್ಗೆ ಮೋಶೆಯು ಬರೆದಿರುವುದು ಏನೆಂದರೆ: “ನಿಯಮದಲ್ಲಿ ಬರೆದಿರುವ ಎಲ್ಲವನ್ನೂ ಮಾಡುವವರೇ ಬಾಳುವವರು,” ಎಂಬುದಾಗಿ ಬರೆದನು.
6 Բայց հաւատքէն եղող արդարութիւնը սա՛ կ՚ըսէ. «Մի՛ ըսեր սիրտիդ մէջ. “Ո՞վ պիտի բարձրանայ երկինքը”, (այսինքն՝ Քրիստոսը վար իջեցնելու, )
ಆದರೆ ವಿಶ್ವಾಸದಿಂದ ಬರುವ ನೀತಿಯ ಬಗ್ಗೆ ಮೋಶೆಯು ಹೇಳುವುದೇನೆಂದರೆ: “‘ಕ್ರಿಸ್ತನನ್ನು ಕೆಳಗೆ ತರಲು ಪರಲೋಕಕ್ಕೆ ಯಾರು ಏರಿ ಹೋಗುವರು?’
7 կամ. “Ո՞վ պիտի իջնէ անդունդը” (այսինքն՝ Քրիստոսը մեռելներէն վեր հանելու)»: (Abyssos g12)
ಅಥವಾ, ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರಲು ಯಾರು ಪಾತಾಳಕ್ಕೆ ಇಳಿದು ಹೋಗುವರು?’ ಎಂದು ಮನಸ್ಸಿನಲ್ಲಿ ಹೇಳಿಕೊಳ್ಳಬೇಡ.” (Abyssos g12)
8 Հապա ի՞նչ կ՚ըսէ ան. «Խօսքը մօտ է քեզի, բերանիդ եւ սիրտիդ մէջ է». այսինքն հաւատքին խօսքը՝ որ մենք կը քարոզենք:
ಆದರೆ ಇದು ಏನು ಹೇಳುತ್ತದೆ, “ತಕ್ಕ ವಾಕ್ಯವು ನಿನ್ನ ಬಳಿಯಲ್ಲಿ ಇದೆ, ಅದು ನಿನ್ನ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ.” ಅದೇ ನಾವು ಸಾರುವ ವಿಶ್ವಾಸದ ವಾಕ್ಯ.
9 Որովհետեւ եթէ բերանովդ Տէր դաւանիս Յիսուսը, ու սիրտիդ մէջ հաւատաս թէ Աստուած մեռելներէն յարուցանեց զայն՝ պիտի փրկուիս.
ನೀನು, “ಯೇಸುವೇ ಕರ್ತ,” ಎಂದು ಬಾಯಿಂದ ಅರಿಕೆಮಾಡಿ, ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ಹೃದಯದಲ್ಲಿ ನಂಬಿದರೆ ನೀನು ರಕ್ಷಣೆ ಹೊಂದುವೆ.
10 (որովհետեւ սիրտով կը հաւատայ մէկը՝ արդարանալու համար, ու բերանով կը դաւանի՝ փրկուելու համար: )
ನೀನು ನಿನ್ನ ಹೃದಯದಿಂದ ನಂಬಿ ನೀತಿವಂತನೆಂದು ಎಣಿಸಿಕೊಳ್ಳುವಿ ಮತ್ತು ನಿನ್ನ ಬಾಯಿಂದ ನಿನ್ನ ವಿಶ್ವಾಸವನ್ನು ಅರಿಕೆ ಮಾಡಿದಾಗ ರಕ್ಷಣೆ ಹೊಂದುತ್ತಿ.
11 Քանի որ Գիրքը կ՚ըսէ. «Ո՛վ որ անոր հաւատայ՝ ամօթահար պիտի չըլլայ»:
ಪವಿತ್ರ ವೇದದಲ್ಲಿ ಹೇಳಿರುವಂತೆ, “ಅವರ ಮೇಲೆ ನಂಬಿಕೆಯಿಡುವ ಯಾವನಾದರೂ ಆಶಾಭಂಗಪಡುವದೇ ಇಲ್ಲ.”
12 Արդարեւ խտրութիւն չկայ Հրեային ու Յոյնին միջեւ, որովհետեւ բոլորին վրայ եղող նոյն Տէրը ճոխութեամբ կը հասնի բոլոր անոնց՝ որ զինք կը կանչեն:
ಈ ವಿಷಯದಲ್ಲಿ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಕರ್ತ ಆಗಿರುವ ಒಬ್ಬರೇ ಕರ್ತ; ಅವರು ತಮ್ಮನ್ನು ಕರೆಯುವವರೆಲ್ಲರನ್ನು ಹೇರಳವಾಗಿ ಆಶೀರ್ವದಿಸುತ್ತಾರೆ.
13 Քանի որ “ո՛վ որ Տէրոջ անունը կանչէ՝ պիտի փրկուի”:
ಏಕೆಂದರೆ, “ಕರ್ತನ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು.”
14 Ուրեմն ի՞նչպէս պիտի կանչեն զայն՝ որուն հաւատացած չեն. կամ ի՞նչպէս պիտի հաւատան անոր՝ որուն մասին լսած չեն. կամ ի՞նչպէս պիտի լսեն՝ առանց քարոզիչի:
ಆದರೆ, ತಾವು ವಿಶ್ವಾಸವಿಡದ ಕರ್ತನನ್ನು ಕರೆಯುವುದಾದರೂ ಹೇಗೆ? ತಾವು ಕೇಳದ ಕರ್ತನ ಬಗ್ಗೆ ಅವರು ವಿಶ್ವಾಸವಿಡುವುದು ಹೇಗೆ? ಕರ್ತನ ಬಗ್ಗೆ ಸಾರುವವನಿಲ್ಲದೆ ಅವರು ಕೇಳುವುದಾದರೂ ಹೇಗೆ?
15 Կամ ի՞նչպէս պիտի քարոզեն՝ եթէ չղրկուին, ինչպէս գրուած է. «Ի՜նչ գեղեցիկ են ոտքերը անոնց՝ որոնք խաղաղութիւն կ՚աւետեն, բարի բաներ կ՚աւետեն»:
ಅವರು ಕಳುಹಿಸದ ಹೊರತು ಸಾರುವುದಾದರೂ ಹೇಗೆ? ಆದ್ದರಿಂದಲೇ, “ಶುಭವರ್ತಮಾನವನ್ನು ಸಾರುವವರ ಪಾದಗಳು ಎಷ್ಟೊಂದು ಅಂದವಾಗಿವೆ!” ಎಂದು ಬರೆಯಲಾಗಿದೆ.
16 Բայց բոլորը չհնազանդեցան աւետարանին, քանի որ Եսայի կ՚ըսէ. «Տէ՛ր, ո՞վ հաւատաց մեր տուած լուրին»:
ಆದರೆ ಇಸ್ರಾಯೇಲರಲ್ಲಿ ಎಲ್ಲರೂ ಸುವಾರ್ತೆಯನ್ನು ಸ್ವೀಕರಿಸಲಿಲ್ಲ. ಏಕೆಂದರೆ, “ಕರ್ತನೇ, ನಮ್ಮ ಸಂದೇಶವನ್ನು ಯಾರು ನಂಬಿದರು?” ಎಂದು ಯೆಶಾಯ ಪ್ರವಾದಿಯು ಹೇಳುತ್ತಾನೆ.
17 Ուրեմն հաւատքը կու գայ լսելէն, ու լսելը՝ Աստուծոյ խօսքէն:
ಆದಕಾರಣ, ತಕ್ಕ ವಾಕ್ಯವನ್ನು ಕೇಳುವುದರಿಂದಲೇ ವಿಶ್ವಾಸವು ಬರುತ್ತದೆ, ಅದು ಕ್ರಿಸ್ತನ ವಾಕ್ಯವನ್ನು ಕೇಳುವುದರಿಂದಲೇ ಬರುತ್ತದೆ.
18 Բայց կ՚ըսեմ. «Միթէ չլսեցի՞ն: Անկասկած. “Անոնց հնչիւնը գնաց ամբո՛ղջ երկիրը, եւ անոնց խօսքը՝ մինչեւ երկրագունդին ծայրերը”»:
ಆದರೆ ಇಸ್ರಾಯೇಲರು ಎಂದೂ ಸುವಾರ್ತೆಯನ್ನು ಕೇಳಲಿಲ್ಲವೋ ಎಂದು ನಾನು ಪ್ರಶ್ನಿಸುತ್ತೇನೆ? ಅವರು ನಿಶ್ಚಯವಾಗಿ ಕೇಳಿದ್ದಾರೆ. ಪವಿತ್ರ ವೇದದಲ್ಲಿ ಹೇಳಿರುವಂತೆ: “ಅವರ ಸ್ವರವು ಭೂಮಿಯ ಎಲ್ಲಾ ಕಡೆಗಳಲ್ಲಿ ಹೋಗಿರುತ್ತದೆ, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿವೆ.”
19 Բայց կ՚ըսեմ. «Միթէ Իսրայէլ չգիտցա՞ւ»: Նախ Մովսէս կ՚ըսէ. «Ես պիտի գրգռեմ ձեր նախանձը անպիտան ազգով՝՝ մը, պիտի բարկացնեմ ձեզ անխելք ազգով մը»:
ಆದರೆ ಇಸ್ರಾಯೇಲರಿಗೆ ಅರ್ಥವಾಗಲಿಲ್ಲವೇ? ಎಂದು ನಾನು ಪ್ರಶ್ನಿಸುತ್ತೇನೆ. ಮೊದಲನೆಯದಾಗಿ ಮೋಶೆಯು, “ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ತಿಳುವಳಿಕೆಯಿಲ್ಲದ ಜನಾಂಗದವರ ಮೂಲಕ ನೀವು ಕೋಪಗೊಳ್ಳುವಂತೆ ಮಾಡುವೆನು,” ಎಂದು ಹೇಳುತ್ತಾನೆ.
20 Բայց Եսայի շատ յանդուգն է, ու կ՚ըսէ. «Ես գտնուեցայ անոնցմէ՝ որոնք չէին փնտռեր զիս, յայտնուեցայ անոնց՝ որոնք չէին հարցներ իմ մասիս»:
ಆದರೆ ಯೆಶಾಯನು ಬಹು ಧೈರ್ಯವಾಗಿ, “ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು. ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.
21 Սակայն Իսրայէլի համար կ՚ըսէ. «Ամբողջ օրը երկարեցի իմ ձեռքերս՝ չանսացող եւ հակաճառող ժողովուրդի մը»:
ಆದರೆ ಇಸ್ರಾಯೇಲರ ಕುರಿತಾಗಿ, “ನನಗೆ ಅವಿಧೇಯರೂ ಎದುರುಮಾತಾಡುವವರೂ ಆಗಿರುವ ಜನರಿಗೆ, ದಿನವೆಲ್ಲಾ ನಾನು ಕೈಚಾಚಿ ಕರೆದೆನು,” ಎಂದು ಹೇಳುತ್ತಾನೆ.

< ՀՌՈՎՄԱՅԵՑԻՍ 10 >