< דברי הימים ב 26 >

וַיִּקְחוּ כׇּל־עַם יְהוּדָה אֶת־עֻזִּיָּהוּ וְהוּא בֶּן־שֵׁשׁ עֶשְׂרֵה שָׁנָה וַיַּמְלִיכוּ אֹתוֹ תַּחַת אָבִיו אֲמַצְיָֽהוּ׃ 1
ಆನಂತರ ಎಲ್ಲಾ ಯೆಹೂದ್ಯರು ಅಮಚ್ಯನ ಮಗನಾದ ಉಜ್ಜೀಯನನ್ನು ಅರಸನ್ನನ್ನಾಗಿ ಮಾಡಿದರು. ಉಜ್ಜೀಯನು ಅರಸನಾದಾಗ ಹದಿನಾರು ವರ್ಷದವನಾಗಿದ್ದ.
הוּא בָּנָה אֶת־אֵילוֹת וַיְשִׁיבֶהָ לִֽיהוּדָה אַחֲרֵי שְׁכַֽב־הַמֶּלֶךְ עִם־אֲבֹתָֽיו׃ 2
ಇವನು ಏಲೋತ್ ಪಟ್ಟಣವನ್ನು ಪುನಃ ಯೆಹೂದ ರಾಜ್ಯಕ್ಕೆ ಸೇರಿಸಿಕೊಂಡು ಭದ್ರಪಡಿಸಿದನು.
בֶּן־שֵׁשׁ עֶשְׂרֵה שָׁנָה עֻזִּיָּהוּ בְמׇלְכוֹ וַחֲמִשִּׁים וּשְׁתַּיִם שָׁנָה מָלַךְ בִּירוּשָׁלָ͏ִם וְשֵׁם אִמּוֹ (יכיליה) [יְכׇלְיָה] מִן־יְרוּשָׁלָֽ͏ִם׃ 3
ಅವನು ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷಗಳ ಕಾಲ ಆಳಿದನು. ಯೆರೂಸಲೇಮಿನವಳಾದ ಯೆಕೊಲ್ಯ ಎಂಬಾಕೆಯು ಅವನ ತಾಯಿ.
וַיַּעַשׂ הַיָּשָׁר בְּעֵינֵי יְהֹוָה כְּכֹל אֲשֶׁר־עָשָׂה אֲמַצְיָהוּ אָבִֽיו׃ 4
ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
וַֽיְהִי לִדְרֹשׁ אֱלֹהִים בִּימֵי זְכַרְיָהוּ הַמֵּבִין בִּרְאֹת הָאֱלֹהִים וּבִימֵי דׇּרְשׁוֹ אֶת־יְהֹוָה הִצְלִיחוֹ הָאֱלֹהִֽים׃ 5
ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.
וַיֵּצֵא וַיִּלָּחֶם בַּפְּלִשְׁתִּים וַיִּפְרֹץ אֶת־חוֹמַת גַּת וְאֵת חוֹמַת יַבְנֵה וְאֵת חוֹמַת אַשְׁדּוֹד וַיִּבְנֶה עָרִים בְּאַשְׁדּוֹד וּבַפְּלִשְׁתִּֽים׃ 6
ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
וַיַּעְזְרֵהוּ הָאֱלֹהִים עַל־פְּלִשְׁתִּים וְעַל־[הָעַרְבִים] (הערביים) הַיֹּשְׁבִים בְּגוּר־בָּעַל וְהַמְּעוּנִֽים׃ 7
ಫಿಲಿಷ್ಟಿಯರೊಡನೆ ಗೂರ್ ಬಾಳಿನಲ್ಲಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು.
וַיִּתְּנוּ הָעַמּוֹנִים מִנְחָה לְעֻזִּיָּהוּ וַיֵּלֶךְ שְׁמוֹ עַד־לְבוֹא מִצְרַיִם כִּי הֶחֱזִיק עַד־לְמָֽעְלָה׃ 8
ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕಬಲವುಳ್ಳವನ್ನಾದುದರಿಂದ ಅವನ ಹೆಸರು ಐಗುಪ್ತದ ಮೇರೆಯವರೆಗೂ ಹಬ್ಬಿತು.
וַיִּבֶן עֻזִּיָּהוּ מִגְדָּלִים בִּירוּשָׁלַ͏ִם עַל־שַׁעַר הַפִּנָּה וְעַל־שַׁעַר הַגַּיְא וְעַל־הַמִּקְצוֹעַ וַֽיְחַזְּקֵֽם׃ 9
ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನ ಬಾಗಿಲು, ಗೋಡೆ ತಿರುಗುವ ಭಾಗಗಳ ಮೇಲೆ ಗೋಪುರಗಳನ್ನು ಕಟ್ಟಿಸಿ ಭದ್ರಗೊಳಿಸಿದನು.
וַיִּבֶן מִגְדָּלִים בַּמִּדְבָּר וַיַּחְצֹב בֹּרוֹת רַבִּים כִּי מִקְנֶה־רַּב הָיָה לוֹ וּבַשְּׁפֵלָה וּבַמִּישׁוֹר אִכָּרִים וְכֹרְמִים בֶּהָרִים וּבַכַּרְמֶל כִּי־אֹהֵב אֲדָמָה הָיָֽה׃ 10
೧೦ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು.
וַיְהִי לְעֻזִּיָּהוּ חַיִל עֹשֵׂה מִלְחָמָה יוֹצְאֵי צָבָא לִגְדוּד בְּמִסְפַּר פְּקֻדָּתָם בְּיַד (יעואל) [יְעִיאֵל] הַסּוֹפֵר וּמַעֲשֵׂיָהוּ הַשּׁוֹטֵר עַל יַד־חֲנַנְיָהוּ מִשָּׂרֵי הַמֶּֽלֶךְ׃ 11
೧೧ಇದಲ್ಲದೆ, ಉಜ್ಜೀಯನಿಗೆ ಯುದ್ಧಕ್ಕೋಸ್ಕರ ಸೈನ್ಯವೂ ಇತ್ತು. ಲೇಖಕನಾದ ಯೆಗೀಯೇಲ್, ಅಧಿಕಾರಿಯಾದ ಮಾಸೇಯ ಇವರು ಹಾಕಿಕೊಟ್ಟ ಪಟ್ಟಿಯಕ್ರಮ ಪ್ರಕಾರ ಅರಸನ ಸರದಾರರಲ್ಲಿ ಒಬ್ಬನಾದ ಹನನ್ಯನ ಆಜ್ಞಾನುಸಾರವಾಗಿ. ಆಯಾ ಗುಂಪುಗಳು ಯುದ್ಧಕ್ಕೆ ಹೊರಡುತ್ತಿದ್ದವು.
כֹּל מִסְפַּר רָאשֵׁי הָאָבוֹת לְגִבּוֹרֵי חָיִל אַלְפַּיִם וְשֵׁשׁ מֵאֽוֹת׃ 12
೧೨ಯುದ್ಧವೀರರೂ ಎಲ್ಲಾ ಗೋತ್ರಪ್ರಧಾನರ ಸಂಖ್ಯೆಯು ಎರಡು ಸಾವಿರದ ಆರು ನೂರು.
וְעַל־יָדָם חֵיל צָבָא שְׁלֹשׁ מֵאוֹת אֶלֶף וְשִׁבְעַת אֲלָפִים וַחֲמֵשׁ מֵאוֹת עוֹשֵׂי מִלְחָמָה בְּכֹחַ חָיִל לַעְזֹר לַמֶּלֶךְ עַל־הָֽאוֹיֵֽב׃ 13
೧೩ಇವರ ಕೈಕೆಳಗಿದ್ದ ಭಟರ ಸಂಖ್ಯೆಯು ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು ಅವನ ವೈರಿಗಳಿಗೆ ವಿರುದ್ಧವಾಗಿ ಪರಾಕ್ರಮದಿಂದ ಯುದ್ಧಮಾಡುತ್ತಿದ್ದರು.
וַיָּכֶן לָהֶם עֻזִּיָּהוּ לְכׇל־הַצָּבָא מָגִנִּים וּרְמָחִים וְכוֹבָעִים וְשִׁרְיֹנוֹת וּקְשָׁתוֹת וּלְאַבְנֵי קְלָעִֽים׃ 14
೧೪ಉಜ್ಜೀಯನು ಈ ಎಲ್ಲಾ ಸೈನ್ಯದವರಿಗೆ ಬೇಕಾದ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು, ಕವಣೆಯಕಲ್ಲು ಇವುಗಳನ್ನು ಒದಗಿಸಿ ಕೊಟ್ಟನು.
וַיַּעַשׂ ׀ בִּירוּשָׁלַ͏ִם חִשְּׁבֹנוֹת מַחֲשֶׁבֶת חוֹשֵׁב לִהְיוֹת עַל־הַמִּגְדָּלִים וְעַל־הַפִּנּוֹת לִירוֹא בַּחִצִּים וּבָאֲבָנִים גְּדֹלוֹת וַיֵּצֵא שְׁמוֹ עַד־לְמֵרָחוֹק כִּֽי־הִפְלִיא לְהֵעָזֵר עַד כִּֽי־חָזָֽק׃ 15
೧೫ಇದಲ್ಲದೆ, ಅವನು ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನು ಬಳಸುವುದಕ್ಕಾಗಿ, ತಜ್ಞರ ಆಜ್ಞೆಯ ಮೇರೆಗೆ ಯಂತ್ರಗಳನ್ನೂ ಮಾಡಿಸಿ, ಅವುಗಳನ್ನು ಯೆರೂಸಲೇಮಿನ ಗೋಪುರಗಳ ಮೇಲೆಯೂ, ಕೋಟೆಕೊತ್ತಲಗಳನ್ನು ಮೇಲೆಯೂ ಇಡಿಸಿದ್ದನು. ಅವನು ಬಲಿಷ್ಠನಾಗುವ ಹಾಗೆ ದೇವರ ಅತಿಶಯವಾದ ಸಹಾಯವು ಆಶ್ಚರ್ಯವಾದ ರೀತಿಯಲ್ಲಿ ಅವನಿಗೆ ದೊರೆಯುತ್ತಿದ್ದುದರಿಂದ; ಅವನ ಕೀರ್ತಿಯೂ ಬಹು ದೂರದ ಮೇರೆಯವರೆಗೂ ಹಬ್ಬಿತು.
וּכְחֶזְקָתוֹ גָּבַהּ לִבּוֹ עַד־לְהַשְׁחִית וַיִּמְעַל בַּיהֹוָה אֱלֹהָיו וַיָּבֹא אֶל־הֵיכַל יְהֹוָה לְהַקְטִיר עַל־מִזְבַּח הַקְּטֹֽרֶת׃ 16
೧೬ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು.
וַיָּבֹא אַחֲרָיו עֲזַרְיָהוּ הַכֹּהֵן וְעִמּוֹ כֹּהֲנִים ׀ לַיהֹוָה שְׁמוֹנִים בְּנֵי־חָֽיִל׃ 17
೧೭ಆಗ ಮಹಾಯಾಜಕನಾದ ಅಜರ್ಯನೂ ಹಾಗು ಧೈರ್ಯಶಾಲಿಗಳಾದ ಯೆಹೋವನ ಎಂಭತ್ತು ಮಂದಿ ಇತರ ಯಾಜಕರೂ ಅರಸನಾದ ಉಜ್ಜೀಯನ ಹಿಂದೆಯೇ ಹೋಗಿ
וַיַּעַמְדוּ עַל־עֻזִּיָּהוּ הַמֶּלֶךְ וַיֹּאמְרוּ לוֹ לֹֽא־לְךָ עֻזִּיָּהוּ לְהַקְטִיר לַיהֹוָה כִּי לַכֹּהֲנִים בְּנֵֽי־אַהֲרֹן הַמְקֻדָּשִׁים לְהַקְטִיר צֵא מִן־הַמִּקְדָּשׁ כִּי מָעַלְתָּ וְלֹֽא־לְךָ לְכָבוֹד מֵיְהֹוָה אֱלֹהִֽים׃ 18
೧೮ಅರಸನ ಎದುರಿಗೆ ನಿಂತು ಅವನಿಗೆ, “ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವುದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಯೆಹೋವನಿಂದ ನಿನಗೆ ಗೌರವ ದೊರಕಲಾರದು” ಎಂದರು.
וַיִּזְעַף עֻזִּיָּהוּ וּבְיָדוֹ מִקְטֶרֶת לְהַקְטִיר וּבְזַעְפּוֹ עִם־הַכֹּהֲנִים וְהַצָּרַעַת זָרְחָה בְמִצְחוֹ לִפְנֵי הַכֹּֽהֲנִים בְּבֵית יְהֹוָה מֵעַל לְמִזְבַּח הַקְּטֹֽרֶת׃ 19
೧೯ಆಗ ಧೂಪ ಹಾಕಬೇಕೆಂದು ಕೈಯಲ್ಲಿ ಧೂಪಾರತಿಯನ್ನು ಹಿಡಿದುಕೊಂಡಿದ್ದ ಉಜ್ಜೀಯನು ಕೋಪಗೊಂಡನು. ಅವನು ಯೆಹೋವನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕರೊಡನೆ ಸಿಟ್ಟಿನಿಂದ ಮಾತನಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯ ಮೇಲೆ ಕುಷ್ಠವು ಕಾಣಿಸಿಕೊಂಡಿತು.
וַיִּפֶן אֵלָיו עֲזַרְיָהוּ כֹהֵן הָרֹאשׁ וְכׇל־הַכֹּהֲנִים וְהִנֵּה־הוּא מְצֹרָע בְּמִצְחוֹ וַיַּבְהִלוּהוּ מִשָּׁם וְגַם־הוּא נִדְחַף לָצֵאת כִּי נִגְּעוֹ יְהֹוָֽה׃ 20
೨೦ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠವು ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿಯಿತು. ಅವನೂ ಶೀಘ್ರವಾಗಿ ಹೊರಗೆ ಹೋಗಲು ಆತುರಪಟ್ಟನು.
וַיְהִי עֻזִּיָּהוּ הַמֶּלֶךְ מְצֹרָע ׀ עַד־יוֹם מוֹתוֹ וַיֵּשֶׁב בֵּית (החפשות) [הַֽחׇפְשִׁית] מְצֹרָע כִּי נִגְזַר מִבֵּית יְהֹוָה וְיוֹתָם בְּנוֹ עַל־בֵּית הַמֶּלֶךְ שׁוֹפֵט אֶת־עַם הָאָֽרֶץ׃ 21
೨೧ಉಜ್ಜೀಯನು ಜೀವದಿಂದಿರುವ ವರೆಗೂ ಕುಷ್ಠರೋಗಿಯಾಗಿದ್ದು, ಯೆಹೋವನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಅವನು ಕುಷ್ಠದ ದೆಸೆಯಿಂದ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾದಿಪತ್ಯವನ್ನೂ ಮತ್ತು ಪ್ರಜಾಪಾಲನೆಯನ್ನೂ ಅವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.
וְיֶתֶר דִּבְרֵי עֻזִּיָּהוּ הָרִאשֹׁנִים וְהָאַחֲרֹנִים כָּתַב יְשַֽׁעְיָהוּ בֶן־אָמוֹץ הַנָּבִֽיא׃ 22
೨೨ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದಿದ್ದಾನೆ.
וַיִּשְׁכַּב עֻזִּיָּהוּ עִם־אֲבֹתָיו וַיִּקְבְּרוּ אֹתוֹ עִם־אֲבֹתָיו בִּשְׂדֵה הַקְּבוּרָה אֲשֶׁר לַמְּלָכִים כִּי אָמְרוּ מְצוֹרָע הוּא וַיִּמְלֹךְ יוֹתָם בְּנוֹ תַּחְתָּֽיו׃ 23
೨೩ಉಜ್ಜೀಯನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಕುಷ್ಠ ರೋಗಿಯದೆಂದು ಬಗೆದು, ರಾಜ ಕುಟುಂಬದ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.

< דברי הימים ב 26 >