< 1 राजा 12 >

1 रहबाम शेकेम को गया, क्योंकि सब इस्राएली उसको राजा बनाने के लिये वहीं गए थे।
ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಸೇರಿಬಂದಿದ್ದರು.
2 जब नबात के पुत्र यारोबाम ने यह सुना, (जो अब तक मिस्र में ही रहता था, क्योंकि यारोबाम सुलैमान राजा के डर के मारे भागकर मिस्र में रहता था।
ಇದಲ್ಲದೆ ಅರಸನಾದ ಸೊಲೊಮೋನನಿಗೆ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನನ್ನು ಇದನ್ನು ಕೇಳಿ ಕರೆಯಿಸಿಕೊಂಡಿದ್ದರು.
3 अतः उन लोगों ने उसको बुलवा भेजा) तब यारोबाम और इस्राएल की समस्त सभा रहबाम के पास जाकर यह कहने लगी,
ಯಾರೊಬ್ಬಾಮನು ನಡೆದ ಸಂಗತಿಗಳ ವರ್ತಮಾನವನ್ನು ಕೇಳಿ ಎಲ್ಲಾ ಇಸ್ರಾಯೇಲರೊಡನೆ ರೆಹಬ್ಬಾಮನ ಬಳಿಗೆ ಹೋಗಿ,
4 “तेरे पिता ने तो हम लोगों पर भारी जूआ डाल रखा था, तो अब तू अपने पिता की कठिन सेवा को, और उस भारी जूआ को, जो उसने हम पर डाल रखा है, कुछ हलका कर; तब हम तेरे अधीन रहेंगे।”
ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದನು. ನಿನ್ನ ತಂದೆಯು ನೇಮಿಸಿದ ಬಿಟ್ಟೀಕೆಲಸವನ್ನು ನೀನು ಕಡಿಮೆ ಮಾಡಿ ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವುದಾದರೆ ನಾವು ನಿನಗೆ ಸೇವೆಮಾಡುತ್ತೇವೆ” ಎಂದು ಹೇಳಿದರು.
5 उसने कहा, “अभी तो जाओ, और तीन दिन के बाद मेरे पास फिर आना।” तब वे चले गए।
ಅದಕ್ಕೆ ಅವನು, “ನೀವು ಈಗ ಹೋಗಿ ಮೂರು ದಿನಗಳಾದ ನಂತರ ಪುನಃ ಬನ್ನಿರಿ” ಎಂದು ಉತ್ತರಕೊಟ್ಟನು. ಜನರು ಹಿಂದಿರುಗಿ ಹೋದರು.
6 तब राजा रहबाम ने उन बूढ़ों से जो उसके पिता सुलैमान के जीवन भर उसके सामने उपस्थित रहा करते थे, सम्मति ली, “इस प्रजा को कैसा उत्तर देना उचित है, इसमें तुम क्या सम्मति देते हो?”
ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಯಿಸಿ ತಾನು ಜನರಿಗೆ ಕೊಡತಕ್ಕ ಉತ್ತರದ ವಿಷಯದಲ್ಲಿ ಅವರ ಆಲೋಚನೆಯನ್ನು ಕೇಳಿದನು.
7 उन्होंने उसको यह उत्तर दिया, “यदि तू अभी प्रजा के लोगों का दास बनकर उनके अधीन हो और उनसे मधुर बातें कहे, तो वे सदैव तेरे अधीन बने रहेंगे।”
ಅವರು ಅವನಿಗೆ, “ನೀನು ಈ ಹೊತ್ತು ಈ ಜನರ ಮಾತನ್ನು ಕೇಳಿ, ಅವರಿಗೆ ವಿನಯವಾಗಿ ಒಳ್ಳೆಯ ಉತ್ತರ ಕೊಡುವುದಾದರೆ ಅವರು ಯಾವಾಗಲೂ ನಿನ್ನ ಸೇವಕರಾಗಿರುವರು” ಎಂದರು.
8 रहबाम ने उस सम्मति को छोड़ दिया, जो बूढ़ों ने उसको दी थी, और उन जवानों से सम्मति ली, जो उसके संग बड़े हुए थे, और उसके सम्मुख उपस्थित रहा करते थे।
ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡ ಬೆಳೆದ ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿ,
9 उनसे उसने पूछा, “मैं प्रजा के लोगों को कैसा उत्तर दूँ? इसमें तुम क्या सम्मति देते हो? उन्होंने तो मुझसे कहा है, ‘जो जूआ तेरे पिता ने हम पर डाल रखा है, उसे तू हलका कर।’”
“ನನ್ನ ತಂದೆಯು ಹೇರಿದ ನೊಗವನ್ನು ಹಗುರಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು, ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.
10 १० जवानों ने जो उसके संग बड़े हुए थे उसको यह उत्तर दिया, “उन लोगों ने तुझ से कहा है, ‘तेरे पिता ने हमारा जूआ भारी किया था, परन्तु तू उसे हमारे लिए हलका कर;’ तू उनसे यह कहना, ‘मेरी छिंगुलिया मेरे पिता की कमर से भी मोटी है।
೧೦ಅವರು ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ನೊಗವನ್ನು ಹಗುರಮಾಡು ಎಂಬುದಾಗಿ ನಿನ್ನನ್ನು ಬೇಡಿಕೊಂಡ ಜನರಿಗೆ ನೀನು, ‘ನನ್ನ ತಂದೆಯ ನಡುವಿಗಿಂತ ನನ್ನ ಕಿರಿಬೆರಳು ದಪ್ಪವಾಗಿದೆ.
11 ११ मेरे पिता ने तुम पर जो भारी जूआ रखा था, उसे मैं और भी भारी करूँगा; मेरा पिता तो तुम को कोड़ों से ताड़ना देता था, परन्तु मैं बिच्छुओं से दूँगा।’”
೧೧ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು” ಎಂದು ಉತ್ತರಕೊಟ್ಟನು.
12 १२ तीसरे दिन, जैसे राजा ने ठहराया था, कि तीसरे दिन मेरे पास फिर आना, वैसे ही यारोबाम और समस्त प्रजागण रहबाम के पास उपस्थित हुए।
೧೨ಯಾರೊಬ್ಬಾಮನೂ ಮತ್ತು ಎಲ್ಲಾ ಜನರೂ ಅರಸನಾದ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನದಲ್ಲಿ ತಿರುಗಿ ಅವನ ಬಳಿಗೆ ಬಂದರು.
13 १३ तब राजा ने प्रजा से कड़ी बातें की,
೧೩ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ,
14 १४ और बूढ़ों की दी हुई सम्मति छोड़कर, जवानों की सम्मति के अनुसार उनसे कहा, “मेरे पिता ने तो तुम्हारा जूआ भारी कर दिया, परन्तु मैं उसे और भी भारी कर दूँगा: मेरे पिता ने तो कोड़ों से तुम को ताड़ना दी, परन्तु मैं तुम को बिच्छुओं से ताड़ना दूँगा।”
೧೪“ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ, ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು” ಎಂದು ನುಡಿದನು.
15 १५ इस प्रकार राजा ने प्रजा की बात नहीं मानी, इसका कारण यह है, कि जो वचन यहोवा ने शीलोवासी अहिय्याह के द्वारा नबात के पुत्र यारोबाम से कहा था, उसको पूरा करने के लिये उसने ऐसा ही ठहराया था।
೧೫ಅವನು ಜನರ ಮಾತನ್ನು ಕೇಳದೇ ಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶಿಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.
16 १६ जब समस्त इस्राएल ने देखा कि राजा हमारी नहीं सुनता, तब वे बोले, “दाऊद के साथ हमारा क्या अंश? हमारा तो यिशै के पुत्र में कोई भाग नहीं! हे इस्राएल अपने-अपने डेरे को चले जाओः अब हे दाऊद, अपने ही घराने की चिन्ता कर।”
೧೬ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.
17 १७ अतः इस्राएल अपने-अपने डेरे को चले गए। केवल जितने इस्राएली यहूदा के नगरों में बसे हुए थे उन पर रहबाम राज्य करता रहा।
೧೭ಯೆಹೂದ್ಯ ಪ್ರಾಂತ್ಯದಲ್ಲಿದ್ದ ಇಸ್ರಾಯೇಲರಾದರೋ ರೆಹಬ್ಬಾಮನ ಅಧೀನದಲ್ಲಿದ್ದರು.
18 १८ तब राजा रहबाम ने अदोराम को जो सब बेगारों पर अधिकारी था, भेज दिया, और सब इस्राएलियों ने उस पर पथराव किया, और वह मर गया: तब रहबाम फुर्ती से अपने रथ पर चढ़कर यरूशलेम को भाग गया।
೧೮ರೆಹಬ್ಬಾಮನು ಬಿಟ್ಟೀ ಕೆಲಸದವರ ಮೇಲ್ವಿಚಾರಕನಾದ ಅದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಲು ಅವರು ಅವನನ್ನು ಕಲ್ಲೆಸೆದು ಕೊಂದರು. ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು.
19 १९ इस प्रकार इस्राएल दाऊद के घराने से फिर गया, और आज तक फिरा हुआ है।
೧೯ಇಸ್ರಾಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.
20 २० यह सुनकर कि यारोबाम लौट आया है, समस्त इस्राएल ने उसको मण्डली में बुलवा भेजा और सम्पूर्ण इस्राएल के ऊपर राजा नियुक्त किया, और यहूदा के गोत्र को छोड़कर दाऊद के घराने से कोई मिला न रहा।
೨೦ಯಾರೊಬ್ಬಾಮನು ಹಿಂತಿರುಗಿ ಬಂದಿದ್ದಾನೆಂಬ ವರ್ತಮಾನವು ಇಸ್ರಾಯೇಲರಿಗೆ ತಿಳಿದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಯಿಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದ ಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.
21 २१ जब रहबाम यरूशलेम को आया, तब उसने यहूदा के समस्त घराने को, और बिन्यामीन के गोत्र को, जो मिलकर एक लाख अस्सी हजार अच्छे योद्धा थे, इकट्ठा किया, कि वे इस्राएल के घराने के साथ लड़कर सुलैमान के पुत्र रहबाम के वश में फिर राज्य कर दें।
೨೧ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೂ ರಾಜ್ಯವನ್ನು ತಿರುಗಿ ತನಗೆ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಬತ್ತು ಸಾವಿರ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.
22 २२ तब परमेश्वर का यह वचन परमेश्वर के जन शमायाह के पास पहुँचा, “यहूदा के राजा सुलैमान के पुत्र रहबाम से,
೨೨ಆಗ ದೇವರ ಮನುಷ್ಯನಾದ ಶೆಮಾಯನಿಗೆ ದೈವೋತ್ತರವುಂಟಾಯಿತು.
23 २३ और यहूदा और बिन्यामीन के सब घराने से, और सब लोगों से कह, ‘यहोवा यह कहता है,
೨೩“ನೀನು ಹೋಗಿ, ಸೊಲೊಮೋನನ ಮಗನೂ ಯೆಹೂದದ ಅರಸನೂ ಆದ ರೆಹಬ್ಬಾಮನಿಗೂ, ಯೆಹೂದ ಬೆನ್ಯಾಮೀನ್ ಕುಲಗಳವರಿಗೂ ಮತ್ತು ಉಳಿದ ಜನರಿಗೂ
24 २४ कि अपने भाई इस्राएलियों पर चढ़ाई करके युद्ध न करो; तुम अपने-अपने घर लौट जाओ, क्योंकि यह बात मेरी ही ओर से हुई है।’” यहोवा का यह वचन मानकर उन्होंने उसके अनुसार लौट जाने को अपना-अपना मार्ग लिया।
೨೪‘ಯೆಹೋವನ ಮಾತನ್ನು ಕೇಳಿರಿ, ನೀವು ನಿಮ್ಮ ಸಹೋದರರಾದ ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ. ಈ ಕಾರ್ಯವು ಯೆಹೋವನಿಂದಾಗಿದೆ’ ಎಂದು ಹೇಳಬೇಕು” ಎಂಬ ಯೆಹೋವನ ಮಾತನ್ನು ಜನರಿಗೆ ಹೇಳಿದನು. ಆಗ ಅವರು ಯೆಹೋವನ ಮಾತನ್ನು ಕೇಳಿ ವಿಧೇಯರಾಗಿ ಹಿಂದಿರುಗಿ ಹೋದರು.
25 २५ तब यारोबाम एप्रैम के पहाड़ी देश के शेकेम नगर को दृढ़ करके उसमें रहने लगा; फिर वहाँ से निकलकर पनूएल को भी दृढ़ किया।
೨೫ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.
26 २६ तब यारोबाम सोचने लगा, “अब राज्य दाऊद के घराने का हो जाएगा।
೨೬ಅವನು ತನ್ನ ಮನಸ್ಸಿನಲ್ಲಿ, “ರಾಜ್ಯವು ಪುನಃ ದಾವೀದನ ಕುಟುಂಬದವರಿಗೆ ಆಗುವುದೋ ಏನೋ,
27 २७ यदि प्रजा के लोग यरूशलेम में बलि करने को जाएँ, तो उनका मन अपने स्वामी यहूदा के राजा रहबाम की ओर फिरेगा, और वे मुझे घात करके यहूदा के राजा रहबाम के हो जाएँगे।”
೨೭ಜನರು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಯಜ್ಞಸಮರ್ಪಣೆಗಾಗಿ ಹೋಗುವುದಾದರೆ, ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗಿತು. ಅವರು ನನ್ನನ್ನು ಕೊಂದು ಅವನ ಬಳಿಗೆ ಹೋದಾರು” ಅಂದುಕೊಂಡನು.
28 २८ अतः राजा ने सम्मति लेकर सोने के दो बछड़े बनाए और लोगों से कहा, “यरूशलेम को जाना तुम्हारी शक्ति से बाहर है इसलिए हे इस्राएल अपने देवताओं को देखो, जो तुम्हें मिस्र देश से निकाल लाए हैं।”
೨೮ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.
29 २९ उसने एक बछड़े को बेतेल, और दूसरे को दान में स्थापित किया।
೨೯ನಂತರ ಅವನು ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿ, ಇನ್ನೊಂದನ್ನು ದಾನಿಗೆ ಕಳುಹಿಸಿದನು.
30 ३० और यह बात पाप का कारण हुई; क्योंकि लोग उनमें से एक के सामने दण्डवत् करने को दान तक जाने लगे।
೩೦ಇದು ಪಾಪಕ್ಕೆ ಕಾರಣವಾಯಿತು. ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಾಗಿ ದಾನಿಗೆ ಒಯ್ದರು.
31 ३१ और उसने ऊँचे स्थानों के भवन बनाए, और सब प्रकार के लोगों में से जो लेवीवंशी न थे, याजक ठहराए।
೩೧ಇದಲ್ಲದೆ ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು.
32 ३२ फिर यारोबाम ने आठवें महीने के पन्द्रहवें दिन यहूदा के पर्व के समान एक पर्व ठहरा दिया, और वेदी पर बलि चढ़ाने लगा; इस रीति उसने बेतेल में अपने बनाए हुए बछड़ों के लिये वेदी पर, बलि किया, और अपने बनाए हुए ऊँचे स्थानों के याजकों को बेतेल में ठहरा दिया।
೩೨ಅವನು ಎಂಟನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ, “ಬೇತೇಲಿನಲ್ಲಿ ಯೆಹೂದ ದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕು” ಎಂದು ಅಪ್ಪಣೆ ಮಾಡಿ, ತಾನು ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ಯಜ್ಞವೇದಿಯ ಮೇಲೆ ಯಜ್ಞ ಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.
33 ३३ जिस महीने की उसने अपने मन में कल्पना की थी अर्थात् आठवें महीने के पन्द्रहवें दिन को वह बेतेल में अपनी बनाई हुई वेदी के पास चढ़ गया। उसने इस्राएलियों के लिये एक पर्व ठहरा दिया, और धूप जलाने को वेदी के पास चढ़ गया।
೩೩ಇಸ್ರಾಯೇಲರು ಎಂಟನೆಯ ತಿಂಗಳ ಹದಿನೈದನೆಯ ದಿನದಲ್ಲಿ ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವ ಇಚ್ಛೆಯಿಂದ ಗೊತ್ತುಮಾಡಿ ಆ ಸಮಯಕ್ಕೆ ತಾನೂ ಬೇತೇಲಿನ ಯಜ್ಞವೇದಿಯ ಬಳಿಗೆ ಹೋಗಿ ಧೂಪಹಾಕುವುದಕ್ಕಾಗಿ ಅದರ ಮೆಟ್ಟಲುಗಳನ್ನು ಹತ್ತುತ್ತಿದ್ದನು.

< 1 राजा 12 >