< उत्पत्ति 42 >

1 जब याकूब ने सुना कि मिस्र में अन्न है, तब उसने अपने पुत्रों से कहा, “तुम एक दूसरे का मुँह क्यों देख रहे हो।”
ಐಗುಪ್ತ ದೇಶದಲ್ಲಿ ದವಸಧಾನ್ಯವುಂಟೆಂದು ಯಾಕೋಬನು ತಿಳಿದಾಗ ತನ್ನ ಮಕ್ಕಳಿಗೆ, “ನೀವು ಒಬ್ಬರನ್ನೊಬ್ಬರು ನೋಡಿಕೊಂಡಿರುವುದೇಕೆ?”
2 फिर उसने कहा, “मैंने सुना है कि मिस्र में अन्न है; इसलिए तुम लोग वहाँ जाकर हमारे लिये अन्न मोल ले आओ, जिससे हम न मरें, वरन् जीवित रहें।”
“ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ” ಎಂದು ಹೇಳಿದನು.
3 अतः यूसुफ के दस भाई अन्न मोल लेने के लिये मिस्र को गए।
ಯೋಸೇಫನ ಹತ್ತು ಮಂದಿ ಅಣ್ಣಂದಿರು ಧಾನ್ಯವನ್ನು ಖರೀದಿಸಿಕೊಂಡು ತರುವುದಕ್ಕಾಗಿ ಐಗುಪ್ತ ದೇಶಕ್ಕೆ ಹೋದರು.
4 पर यूसुफ के भाई बिन्यामीन को याकूब ने यह सोचकर भाइयों के साथ न भेजा कि कहीं ऐसा न हो कि उस पर कोई विपत्ति आ पड़े।
ಆದರೆ ಯಾಕೋಬನು ಯೋಸೇಫನ ತಮ್ಮನಾದ ಬೆನ್ಯಾಮೀನನಿಗೆ “ಕೇಡು ಉಂಟಾದೀತೆಂದು” ಹೇಳಿ ಅಣ್ಣಂದಿರ ಜೊತೆಯಲ್ಲಿ ಕಳುಹಿಸಲಿಲ್ಲ.
5 इस प्रकार जो लोग अन्न मोल लेने आए उनके साथ इस्राएल के पुत्र भी आए; क्योंकि कनान देश में भी भारी अकाल था।
ಧಾನ್ಯವನ್ನು ಕೊಂಡುಕೊಳ್ಳುವುದಕ್ಕೋಸ್ಕರ ಐಗುಪ್ತ ದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು, ಏಕೆಂದರೆ ಕಾನಾನ್ ದೇಶದಲ್ಲಿಯೂ ಬರವಿತ್ತು.
6 यूसुफ तो मिस्र देश का अधिकारी था, और उस देश के सब लोगों के हाथ वही अन्न बेचता था; इसलिए जब यूसुफ के भाई आए तब भूमि पर मुँह के बल गिरकर उसको दण्डवत् किया।
ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.
7 उनको देखकर यूसुफ ने पहचान तो लिया, परन्तु उनके सामने भोला बनकर कठोरता के साथ उनसे पूछा, “तुम कहाँ से आते हो?” उन्होंने कहा, “हम तो कनान देश से अन्न मोल लेने के लिये आए हैं।”
ಯೋಸೇಫನು ಅವರನ್ನು ಕಂಡಾಗ ಅವರ ಗುರುತು ಹಿಡಿದು ತನ್ನ ಅಣ್ಣಂದಿರೆಂದು ತಿಳಿದರೂ ಅವರಿಗೆ ಅನ್ಯನಂತೆ ತೋರ್ಪಡಿಸಿಕೊಂಡು ಕಠಿಣ ನುಡಿಯಿಂದ, “ನೀವು ಎಲ್ಲಿಂದ ಬಂದವರು” ಎಂದು ಕೇಳಿದನು. ಅವರು, “ಧಾನ್ಯವನ್ನು ಕೊಂಡುಕೊಳ್ಳುವುದಕ್ಕೊಸ್ಕರ ಕಾನಾನ್ ದೇಶದಿಂದ ಬಂದಿದ್ದೇವೆ” ಎಂದರು.
8 यूसुफ ने अपने भाइयों को पहचान लिया, परन्तु उन्होंने उसको न पहचाना।
ಅಣ್ಣಂದಿರ ಗುರುತು ಯೋಸೇಫನಿಗೆ ತಿಳಿದಿದ್ದರೂ ಅವನ ಗುರುತು ಅವರಿಗೆ ತಿಳಿಯಲಿಲ್ಲ.
9 तब यूसुफ अपने उन स्वप्नों को स्मरण करके जो उसने उनके विषय में देखे थे, उनसे कहने लगा, “तुम भेदिए हो; इस देश की दुर्दशा को देखने के लिये आए हो।”
ಯೋಸೇಫನು ಅವರ ವಿಷಯದಲ್ಲಿ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡನು. ಅವರಿಗೆ ಅವನು, “ನೀವು ಗೂಢಚಾರರು. ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ನೋಡುವುದಕ್ಕಾಗಿ ಬಂದವರು” ಎಂದು ಹೇಳಿದನು.
10 १० उन्होंने उससे कहा, “नहीं, नहीं, हे प्रभु, तेरे दास भोजनवस्तु मोल लेने के लिये आए हैं।
೧೦ಅದಕ್ಕೆ ಅವರು, “ಇಲ್ಲ ಸ್ವಾಮಿ, ತಮ್ಮ ಸೇವಕರಾದ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕಾಗಿ ಬಂದಿದ್ದೇವೆ.
11 ११ हम सब एक ही पिता के पुत्र हैं, हम सीधे मनुष्य हैं, तेरे दास भेदिए नहीं।”
೧೧ನಾವೆಲ್ಲರೂ ಒಬ್ಬನೇ ತಂದೆಯ ಮಕ್ಕಳು. ನಾವು ಸತ್ಯವಂತರಾಗಿದ್ದೇವೆ ಹೊರತು ಗೂಢಚಾರರಲ್ಲ” ಅಂದರು.
12 १२ उसने उनसे कहा, “नहीं नहीं, तुम इस देश की दुर्दशा देखने ही को आए हो।”
೧೨ಅವನು ಅವರಿಗೆ, “ಇಲ್ಲ, ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ತಿಳಿದುಕೊಳ್ಳುವುದಕ್ಕೆ ಬಂದ್ದಿದೀರಿ” ಎಂದು ಹೇಳಿದನು.
13 १३ उन्होंने कहा, “हम तेरे दास बारह भाई हैं, और कनान देशवासी एक ही पुरुष के पुत्र हैं, और छोटा इस समय हमारे पिता के पास है, और एक जाता रहा।”
೧೩ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು, ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು. ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ. ಮತ್ತೊಬ್ಬನು ಇಲ್ಲ” ಎಂದರು.
14 १४ तब यूसुफ ने उनसे कहा, “मैंने तो तुम से कह दिया, कि तुम भेदिए हो;
೧೪ಯೋಸೇಫನು ಅವರಿಗೆ, “ನಾನು ಈಗಾಗಲೇ ಹೇಳಿದಂತೆ ನೀವು ಗೂಢಚಾರರೇ.
15 १५ अतः इसी रीति से तुम परखे जाओगे, फ़िरौन के जीवन की शपथ, जब तक तुम्हारा छोटा भाई यहाँ न आए तब तक तुम यहाँ से न निकलने पाओगे।
೧೫ನೀವು ಪರೀಕ್ಷಿಸಲ್ಪಡುವುದು ಹೇಗೆಂದರೆ, ನಿಮ್ಮ ಚಿಕ್ಕ ತಮ್ಮನು ಬರಬೇಕು. ಅವನು ಬಂದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಟು ಹೋಗಬಾರದು.
16 १६ इसलिए अपने में से एक को भेज दो कि वह तुम्हारे भाई को ले आए, और तुम लोग बन्दी रहोगे; इस प्रकार तुम्हारी बातें परखी जाएँगी कि तुम में सच्चाई है कि नहीं। यदि सच्चे न ठहरे तब तो फ़िरौन के जीवन की शपथ तुम निश्चय ही भेदिए समझे जाओगे।”
೧೬ಅವನನ್ನು ಕರೆದುಕೊಂಡು ಬರುವುದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ. ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇಡುತ್ತೇನೆ. ಹೀಗೆ ನಾನು ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಅಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ ಫರೋಹನ ಜೀವದಾಣೆ ನೀವು ಗೂಢಚಾರರೇ” ಎಂದು ಹೇಳಿದನು.
17 १७ तब उसने उनको तीन दिन तक बन्दीगृह में रखा।
೧೭ಅವರೆಲ್ಲರನ್ನು ಅವನು, ಮೂರು ದಿನ ಕಾವಲಿನಲ್ಲಿರಿಸಿದನು.
18 १८ तीसरे दिन यूसुफ ने उनसे कहा, “एक काम करो तब जीवित रहोगे; क्योंकि मैं परमेश्वर का भय मानता हूँ;
೧೮ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.
19 १९ यदि तुम सीधे मनुष्य हो, तो तुम सब भाइयों में से एक जन इस बन्दीगृह में बँधुआ रहे; और तुम अपने घरवालों की भूख मिटाने के लिये अन्न ले जाओ।
೧೯ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿರಿಸುತ್ತೇನೆ. ಮಿಕ್ಕವರು ನಿಮ್ಮ ಮನೆಯವರಿಗೆ ಧಾನ್ಯವನ್ನು ತೆಗೆದುಕೊಂಡು ಹೋಗಿರಿ.
20 २० और अपने छोटे भाई को मेरे पास ले आओ; इस प्रकार तुम्हारी बातें सच्ची ठहरेंगी, और तुम मार डाले न जाओगे।” तब उन्होंने वैसा ही किया।
೨೦ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವುದರಿಂದ ನೀವು ಸಾಯುವುದಿಲ್ಲ” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿದರು.
21 २१ उन्होंने आपस में कहा, “निःसन्देह हम अपने भाई के विषय में दोषी हैं, क्योंकि जब उसने हम से गिड़गिड़ाकर विनती की, तब भी हमने यह देखकर, कि उसका जीवन कैसे संकट में पड़ा है, उसकी न सुनी; इसी कारण हम भी अब इस संकट में पड़े हैं।”
೨೧ಆಗ ಅವರು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, “ನಾವು ನಮ್ಮ ತಮ್ಮನಿಗೆ ಮಾಡಿದ್ದು ಅಪರಾಧವೇ ಸರಿ. ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ. ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ” ಎಂದು ಮಾತನಾಡಿಕೊಂಡರು.
22 २२ रूबेन ने उनसे कहा, “क्या मैंने तुम से न कहा था कि लड़के के अपराधी मत बनो? परन्तु तुम ने न सुना। देखो, अब उसके लहू का बदला लिया जाता है।”
೨೨ಅದಕ್ಕೆ ರೂಬೇನನು, “ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಆದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ” ಎಂದನು.
23 २३ यूसुफ की और उनकी बातचीत जो एक दुभाषिया के द्वारा होती थी; इससे उनको मालूम न हुआ कि वह उनकी बोली समझता है।
೨೩ಯೋಸೇಫನು ದ್ವಿಭಾಷೆಯಲ್ಲಿ ಮಾತನಾಡಬಲ್ಲ ಅನುವಾದಕರೊಂದಿಗೆ ಮಾತನಾಡಿದ್ದರಿಂದ ಅವರು ತಮ್ಮ ಮಾತು ಅವನಿಗೆ ಗೊತ್ತಾಗುತ್ತದೆಂದು ತಿಳಿಯಲಿಲ್ಲ.
24 २४ तब वह उनके पास से हटकर रोने लगा; फिर उनके पास लौटकर और उनसे बातचीत करके उनमें से शिमोन को छाँट निकाला और उनके सामने उसे बन्दी बना लिया।
೨೪ಯೋಸೇಫನಾದರೋ ಅವರ ಬಳಿಯಿಂದ ಹೊರಟು ಹೋಗಿ ಅತ್ತನು. ತರುವಾಯ ಅವರ ಬಳಿಗೆ ಹಿಂತಿರುಗಿ ಬಂದು ಅವರ ಸಂಗಡ ಮಾತನಾಡಿ ಅವರೊಳಗೆ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿಗೆ ಅವನಿಗೆ ಬೇಡಿಗಳನ್ನು ಹಾಕಿಸಿದನು.
25 २५ तब यूसुफ ने आज्ञा दी, कि उनके बोरे अन्न से भरो और एक-एक जन के बोरे में उसके रुपये को भी रख दो, फिर उनको मार्ग के लिये भोजनवस्तु दो। अतः उनके साथ ऐसा ही किया गया।
೨೫ಆ ಮೇಲೆ ಯೋಸೇಫನು ತನ್ನ ಆಳುಗಳಿಗೆ ಆ ಮನುಷ್ಯರ ಚೀಲಗಳಲ್ಲಿ ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದಲ್ಲಿ ಅವರವರು ತಂದಿದ್ದ ಹಣವನ್ನು ಅವರ ಚೀಲಗಳಲ್ಲೇ ಇಟ್ಟು ಅವರ ಪ್ರಯಾಣಕ್ಕೆ ಬೇಕಾದ ಆಹಾರವನ್ನು ಕೊಡಬೇಕೆಂದು ಅಪ್ಪಣೆ ಮಾಡಲು ಅವರು ಹಾಗೆಯೇ ಮಾಡಿದರು.
26 २६ तब वे अपना अन्न अपने गदहों पर लादकर वहाँ से चल दिए।
೨೬ಇವರು ತಾವು ಕೊಂಡ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಹೊರಟು ಹೋದರು.
27 २७ सराय में जब एक ने अपने गदहे को चारा देने के लिये अपना बोरा खोला, तब उसका रुपया बोरे के मुँह पर रखा हुआ दिखलाई पड़ा।
೨೭ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲಿ ತಾನು ತಂದಿದ್ದ ಹಣವನ್ನು ಕಂಡನು.
28 २८ तब उसने अपने भाइयों से कहा, “मेरा रुपया तो लौटा दिया गया है, देखो, वह मेरे बोरे में है,” तब उनके जी में जी न रहा, और वे एक दूसरे की ओर भय से ताकने लगे, और बोले, “परमेश्वर ने यह हम से क्या किया है?”
೨೮ಅವನು ತನ್ನ ಅಣ್ಣತಮ್ಮಂದಿರಿಗೆ, “ನಾನು ಕೊಟ್ಟ ಹಣವು ಹಿಂದಕ್ಕೆ ಬಂದಿದೆ. ಇಗೋ, ಅದು ನನ್ನ ಚೀಲದಲ್ಲಿದೆ” ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ, “ದೇವರು ನಮಗೆ ಹೀಗೆ ಮಾಡಿದ್ದೇನು?” ಎಂದು ಅಂದುಕೊಂಡರು.
29 २९ तब वे कनान देश में अपने पिता याकूब के पास आए, और अपना सारा वृत्तान्त उसे इस प्रकार वर्णन किया:
೨೯ಅವರು ಕಾನಾನ್ ದೇಶಕ್ಕೆ ತಮ್ಮ ತಂದೆಯಾದ ಯಾಕೋಬನ ಬಳಿಗೆ ಬಂದು ನಡೆದ ಎಲ್ಲ ವಿಷಯವನ್ನು ತಿಳಿಸಿದರು.
30 ३० “जो पुरुष उस देश का स्वामी है, उसने हम से कठोरता के साथ बातें की, और हमको देश के भेदिए कहा।
೩೦ಆ ದೇಶಾಧಿಪತಿ ನಮ್ಮ ಸಂಗಡ ಕಟುವಾಗಿ ಮಾತನಾಡಿ ನಮ್ಮನ್ನು ಗೂಢಚಾರರೆಂದು ಭಾವಿಸಿದನು.
31 ३१ तब हमने उससे कहा, ‘हम सीधे लोग हैं, भेदिए नहीं।
೩೧ನಾವು ಅವನಿಗೆ, “ನಾವು ಸತ್ಯವಂತರೇ ಹೊರತು ಗೂಢಚಾರರಲ್ಲ.
32 ३२ हम बारह भाई एक ही पिता के पुत्र हैं, एक तो जाता रहा, परन्तु छोटा इस समय कनान देश में हमारे पिता के पास है।’
೩೨ನಾವು ಒಬ್ಬ ತಂದೆಯಿಂದಲೆ ಹುಟ್ಟಿದ ಹನ್ನೆರಡು ಮಂದಿ ಅಣ್ಣತಮ್ಮಂದಿರಾಗಿದ್ದೇವೆ. ನಮ್ಮಲ್ಲಿ ಒಬ್ಬನಿಲ್ಲ. ಚಿಕ್ಕವನು ಈಗ ಕಾನಾನ್ ದೇಶದಲ್ಲಿ ನಮ್ಮ ತಂದೆಯ ಬಳಿಯಲ್ಲಿದಾನೆ” ಎಂದು ಹೇಳಿದೆವು.
33 ३३ तब उस पुरुष ने, जो उस देश का स्वामी है, हम से कहा, ‘इससे मालूम हो जाएगा कि तुम सीधे मनुष्य हो; तुम अपने में से एक को मेरे पास छोड़कर अपने घरवालों की भूख मिटाने के लिये कुछ ले जाओ,
೩೩ಅದಕ್ಕೆ “ದೇಶಾಧಿಪತಿ, ನೀವು ಸತ್ಯವಂತರೋ ಅಲ್ಲವೋ ಎಂಬುದು ಗೊತ್ತಾಗುವುದಕ್ಕಾಗಿ ನಿಮ್ಮೊಳಗೆ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಮನೆಯವರ ಕ್ಷಾಮ ನಿವಾರಣೆಗೆ ಬೇಕಾದದ್ದನ್ನು ತೆಗೆದುಕೊಂಡು ಹೋಗಿ,
34 ३४ और अपने छोटे भाई को मेरे पास ले आओ। तब मुझे विश्वास हो जाएगा कि तुम भेदिए नहीं, सीधे लोग हो। फिर मैं तुम्हारे भाई को तुम्हें सौंप दूँगा, और तुम इस देश में लेन-देन कर सकोगे।’”
೩೪ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು, ಕರೆದುಕೊಂಡು ಬಂದರೆ ನೀವು ಗೂಢಚಾರರಲ್ಲ ಸತ್ಯವಂತರೇ ಎಂದು ತಿಳಿದುಕೊಂಡು ನಿಮ್ಮ ಅಣ್ಣನನ್ನು ಸೆರೆಯಿಂದ ಬಿಡಿಸುತ್ತೇನೆ ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ಮಾಡಬಹುದು” ಎಂದು ಹೇಳಿದನು ಎಂದರು.
35 ३५ यह कहकर वे अपने-अपने बोरे से अन्न निकालने लगे, तब, क्या देखा, कि एक-एक जन के रुपये की थैली उसी के बोरे में रखी है। तब रुपये की थैलियों को देखकर वे और उनका पिता बहुत डर गए।
೩೫ಅವರು ತಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಚೀಲದಲ್ಲಿಯೂ ಅವರವರ ಹಣದ ಗಂಟು ಸಿಕ್ಕಿತು. ಅವರು, ಅವರ ತಂದೆಯೂ ಹಣದ ಗಂಟುಗಳನ್ನು ಕಂಡಾಗ ಭಯಪಟ್ಟರು.
36 ३६ तब उनके पिता याकूब ने उनसे कहा, “मुझ को तुम ने निर्वंश कर दिया, देखो, यूसुफ नहीं रहा, और शिमोन भी नहीं आया, और अब तुम बिन्यामीन को भी ले जाना चाहते हो। ये सब विपत्तियाँ मेरे ऊपर आ पड़ी हैं।”
೩೬ಆಗ ಅವರ ತಂದೆಯಾದ ಯಾಕೋಬನು, “ಅವರಿಗೆ ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ. ಯೋಸೇಫನು ಇಲ್ಲ, ಸಿಮೆಯೋನನು ಇಲ್ಲ. ಬೆನ್ಯಾಮೀನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂದಿತಲ್ಲಾ” ಎಂದು ಹೇಳಿದನು.
37 ३७ रूबेन ने अपने पिता से कहा, “यदि मैं उसको तेरे पास न लाऊँ, तो मेरे दोनों पुत्रों को मार डालना; तू उसको मेरे हाथ में सौंप दे, मैं उसे तेरे पास फिर पहुँचा दूँगा।”
೩೭ರೂಬೇನನು ತನ್ನ ತಂದೆಗೆ, “ನಾನು ಈ ಹುಡುಗನನ್ನು ತಿರುಗಿ ತಂದು ಒಪ್ಪಿಸದೆ ಹೋದರೆ ನನ್ನ ಇಬ್ಬರು ಗಂಡುಮಕ್ಕಳನ್ನು ಕೊಂದು ಹಾಕಬಹುದು. ಇವನನ್ನು ನನ್ನ ವಶಕ್ಕೆ ಕೊಟ್ಟರೆ ನಾನು ತಪ್ಪದೆ ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುತ್ತೇನೆ” ಎಂದು ಹೇಳಿದನು.
38 ३८ उसने कहा, “मेरा पुत्र तुम्हारे संग न जाएगा; क्योंकि उसका भाई मर गया है, और वह अब अकेला रह गया है: इसलिए जिस मार्ग से तुम जाओगे, उसमें यदि उस पर कोई विपत्ति आ पड़े, तब तो तुम्हारे कारण मैं इस बुढ़ापे की अवस्था में शोक के साथ अधोलोक में उतर जाऊँगा।” (Sheol h7585)
೩೮ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು. (Sheol h7585)

< उत्पत्ति 42 >