< ಯೆರೆಮೀಯನು 50 >

1 ಯೆಹೋವನು ಪ್ರವಾದಿಯಾದ ಯೆರೆಮೀಯನ ಮೂಲಕ ಕಸ್ದೀಯರ ದೇಶವಾದ ಬಾಬೆಲಿನ ವಿಷಯವಾಗಿ ಪ್ರಕಟಿಸಿದ ವಾಕ್ಯ.
वह कलाम जो ख़ुदावन्द ने बाबुल और कसदियों के मुल्क के बारे में यरमियाह नबी की ज़रिए' फ़रमाया:
2 “ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.
क़ौमों में 'ऐलान करो, और इश्तिहार दो, और झण्डा खड़ा करो, 'ऐलान करो, पोशीदा न रख्खो; कह दो कि बाबुल ले लिया गया, बेल रुस्वा हुआ, मरोदक सरासीमा हो गया; उसके बुत ख़जिल हुए, उसकी मूरतें तोड़ी गईं।
3 ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬರುತ್ತಿದೆ, ಅದು ಬಾಬೆಲ್ ದೇಶವನ್ನು ಹಾಳುಮಾಡುವುದು, ಅಲ್ಲಿ ಯಾರೂ ವಾಸಿಸರು, ಪಶುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.
क्यूँकि उत्तर से एक क़ौम उस पर चढ़ी चली आती है, जो उसकी सरज़मीन को उजाड़ देगी, यहाँ तक कि उसमें कोई न रहेगा, वह भाग निकले, वह चल दिए, क्या इंसान क्या हैवान।
4 ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು.
'ख़ुदावन्द फ़रमाता है, उन दिनों में बल्कि उसी वक़्त बनी — इस्राईल आएँगे; वह और बनी यहूदाह इकट्ठे रोते हुए चलेंगे और ख़ुदावन्द अपने ख़ुदा के तालिब होंगे।
5 ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ, ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.
वह सिय्यून की तरफ़ मुतवज्जिह होकर उसकी राह पूछेंगे, 'आओ, हम ख़ुदावन्द से मिल कर उससे अबदी 'अहद करें, जो कभी फ़रामोश न हो।
6 ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.
मेरे लोग भटकी हुई भेड़ों की तरह हैं; उनके चरवाहों ने उनको गुमराह कर दिया, उन्होंने उनको पहाड़ों पर ले जाकर छोड़ दिया; वह पहाड़ों से टीलों पर गए और अपने आराम का मकान भूल गए हैं।
7 ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ಸತ್ಯಸ್ವರೂಪನಾದ ಯೆಹೋವನಿಗೆ, ಹೌದು, ತಮ್ಮ ಪೂರ್ವಿಕರ ನಿರೀಕ್ಷೆಯಾದ ಯೆಹೋವನಿಗೆ ಪಾಪ ಮಾಡಿದರಲ್ಲಾ’ ಅಂದುಕೊಂಡರು.
सब जिन्होंने उनको पाया उनको निगल गए, और उनके दुश्मनों ने कहा, हम क़ुसूरवार नहीं हैं क्यूँकि उन्होंने ख़ुदावन्द का गुनाह किया है; वह ख़ुदावन्द जो सदाक़त का मस्कन और उनके बाप — दादा की उम्मीदगाह है।
8 ಬಾಬೆಲ್ ದೇಶದೊಳಗಿಂದ ಓಡಿಹೋಗಿರಿ, ಕಸ್ದೀಯರ ಸೀಮೆಯಿಂದ ಹೊರಡಿರಿ; ಹಿಂಡುಗಳ ಮುಂದೆ ಹೋಗುವ ಹೋತಗಳಂತಿರಿ.
बाबुल में से भागो, और कसदियों की सरज़मीन से निकलो, और उन बकरों की तरह हो जो गल्लों के आगे आगे चलते हैं।
9 ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬೀಳಮಾಡುವೆನು; ಅವು ಬಾಬಿಲೋನಿಗೆ ವಿರುದ್ಧವಾಗಿ ವ್ಯೂಹಕಟ್ಟಿ ಅದನ್ನು ಅದರ ಸ್ಥಳದೊಳಗಿಂದ ನಿರ್ಮೂಲಮಾಡುವವು; ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧಪ್ರವೀಣರಾದ ಶೂರನಂತಿರುವವು.
क्यूँकि देख, मैं उत्तर की सरज़मीन से बड़ी क़ौमों के अम्बोह को बर्पा करूँगा और बाबुल पर चढ़ा लाऊँगा, और वह उसके सामने सफ़ — आरा होंगे; वहाँ से उस पर क़ब्ज़ा कर लेंगे उनके तीरकार आज़मूदा बहादुर के से होंगे जो ख़ाली हाथ नहीं लौटता।
10 ೧೦ ಕಸ್ದೀಯ ರಾಜ್ಯವು ಸೂರೆಯಾಗುವುದು; ಸೂರೆಗಾರರೆಲ್ಲರೂ ತೃಪ್ತಿಗೊಳ್ಳವರು, ಇದು ಯೆಹೋವನ ನುಡಿ” ಎಂಬುದೇ.
कसदिस्तान लूटा जाएगा, उसे लूटने वाले सब आसूदा होंगे, ख़ुदावन्द फ़रमाता है।
11 ೧೧ “ನನ್ನ ಸ್ವತ್ತನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ, ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ, ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವುದರಿಂದ
ऐ मेरी मीरास को लूटनेवालों, चूँकि तुम शादमान और ख़ुश हो और दावने वाली बछिया की तरह कूदते फाँदते और ताक़तवर घोड़ों की तरह हिनहिनाते हो;
12 ೧೨ ನಿಮ್ಮ ಮಾತೃಭೂಮಿಯು ಮಾನಭಂಗಕ್ಕೆ ಈಡಾಗುವುದು, ನಿಮ್ಮನ್ನು ಹೆತ್ತ ರಾಜ್ಯವು ನಾಚಿಕೊಳ್ಳುವುದು; ಆಹಾ, ಅದು ಕಾಡು, ಕಗ್ಗಾಡು, ಬೆಗ್ಗಾಡು, ಜನಾಂಗಗಳಲ್ಲಿ ಕನಿಷ್ಠವೂ ಆಗುವುದು.
इसलिए तुम्हारी माँ बहुत शर्मिन्दा होगी, तुम्हारी वालिदा ख़जालत उठाएगी। देखो, वह क़ौमों में सबसे आख़िरी ठहरेगी और वीरान — ओ — ख़ुश्क ज़मीन और रेगिस्तान होगी।
13 ೧೩ ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವುದು; ಬಾಬೆಲನ್ನು ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಪರಿಹಾಸ್ಯ ಮಾಡುವರು.
ख़ुदावन्द के क़हर की वजह से वह आबाद न होगी, बल्कि बिल्कुल वीरान हो जाएगी; जो कोई बाबुल से गुज़रेगा हैरान होगा, और उसकी सब आफ़तों के बाइस सुस्कारेगा।
14 ೧೪ ಬಿಲ್ಲುಗಾರರೇ, ನೀವೆಲ್ಲರೂ ವ್ಯೂಹಕಟ್ಟಿ ಬಾಬಿಲೋನಿಗೆ ಮುತ್ತಿಗೆ ಹಾಕಿರಿ, ಬಾಣಗಳನ್ನು ಉಳಿಸದೆ ಎಸೆಯಿರಿ; ಅದು ಯೆಹೋವನಿಗೆ ಪಾಪ ಮಾಡಿತಲ್ಲಾ.
ऐ सब तीरअन्दाज़ो, बाबुल को घेर कर उसके ख़िलाफ़ सफ़आराई करो, उस पर तीर चलाओ, तीरों को दरेग़ न करो, क्यूँकि उसने ख़ुदावन्द का गुनाह किया है।
15 ೧೫ ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲುಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು. ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.
उसे घेर कर तुम उस पर ललकारो, उसने इता'अत मन्ज़ूर कर ली; उसकी बुनियादें धंस गई, उसकी दीवारें गिर गई। क्यूँकि यह ख़ुदावन्द का इन्तक़ाम है, उससे इन्तक़ाम लो; जैसा उसने किया, वैसा ही तुम उससे करो।
16 ೧೬ ಬೀಜ ಬಿತ್ತುವವನನ್ನೂ ಮತ್ತು ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ; ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.
बाबुल में हर एक बोनेवाले को और उसे जो दिरौ के वक़्त दरॉती पकड़े, काट डालो; ज़ालिम की तलवार की हैबत से हर एक अपने लोगों में जा मिलेगा, और हर एक अपने वतन को भाग जाएगा।
17 ೧೭ ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.
इस्राईल तितर — बितर भेड़ों की तरह है, शेरों ने उसे रगेदा है। पहले शाह — ए — असूर ने उसे खा लिया और फिर यह शाह — ए — बाबुल नबूकदनज़र उसकी हड्डियाँ तक चबा गया।
18 ೧೮ ಹೀಗಿರಲು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಅಶ್ಶೂರದ ಅರಸನನ್ನು ದಂಡಿಸಿದಂತೆ ಬಾಬೆಲಿನ ಅರಸನನ್ನೂ ಮತ್ತು ಅವನ ದೇಶವನ್ನೂ ದಂಡಿಸುವೆನು.
इसलिए रब्ब — उल — अफ़वाज, इस्राईल का ख़ुदा, यूँ फ़रमाता है कि: देख, मैं शाह — ए — बाबुल और उसके मुल्क को सज़ा दूँगा, जिस तरह मैंने शाह — ए — असूर को सज़ा दी है।
19 ೧೯ ಇಸ್ರಾಯೇಲನ್ನು ಪುನಃ ಅದರ ಹುಲ್ಗಾವಲಿಗೆ ಸೇರಿಸುವೆನು; ಅದು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವುದು; ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತೃಪ್ತಿಗೊಳ್ಳುವುದು.
लेकिन मैं इस्राईल को फिर उसके घर में लाऊँगा, और वह कर्मिल और बसन में चरेगा, और उसकी जान कोह — ए — इफ़्राईम और जिल'आद पर आसूदा होगी।
20 ೨೦ ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.”
ख़ुदावन्द फ़रमाता है, उन दिनों में और उसी वक़्त इस्राईल की बदकिरदारी ढूँडे न मिलेगी; और यहूदाह के गुनाहों का पता न मिलेगा जिनको मैं बाक़ी रखूँगा उनको मु'आफ़ करूँगा।
21 ೨೧ ಯೆಹೋವನು ಇಂತೆನ್ನುತ್ತಾನೆ, “ಮೆರಾಥಯಿಮ್ ದೇಶಕ್ಕೂ ಮತ್ತು ಪೆಕೋದಿನ ನಿವಾಸಿಗಳಿಗೂ ವಿರುದ್ಧವಾಗಿ ದಂಡೆತ್ತಿ ಹೋಗಿ, ಅವರನ್ನು ಸಂಹರಿಸಿ, ಅನಂತರ ದೇಶವನ್ನು ತೀರಾ ಹಾಳುಮಾಡಿ, ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು.
मरातायम की सरज़मीन पर और फ़िक़ोद के बाशिन्दों पर चढ़ाई कर। उसे वीरान कर और उनको बिल्कुल नाबूद कर, ख़ुदावन्द फ़रमाता है; और जो कुछ मैंने तुझे फ़रमाया है, उस सब के मुताबिक़ 'अमल कर।
22 ೨೨ ಯುದ್ಧದ ಆರ್ಭಟವೂ ಮಹಾನಾಶನದ ಶಬ್ದವೂ ದೇಶದೊಳಗೆ ಕೇಳಿಸುತ್ತವೆ.
मुल्क में लड़ाई और बड़ी हलाकत की आवाज़ है।
23 ೨೩ ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟಿಗೆಯು ಮುರಿದು ತುಂಡುತುಂಡಾಯಿತು! ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!
तमाम दुनिया का हथौड़ा, क्यूँकर काटा और तोड़ा गया! बाबुल क़ौमों के बीच कैसा जा — ए — हैरत हुआ!
24 ೨೪ ಬಾಬೆಲೇ, ನಾನು ನಿನಗೆ ಉರುಲೊಡ್ಡಿದೆನು; ನೀನು ತಿಳಿಯದೆ ಸಿಕ್ಕಿಕೊಂಡಿ; ನೀನು ಯೆಹೋವನೊಂದಿಗೆ ಹೋರಾಡಿದ್ದರಿಂದ ಬೋನಿಗೆ ಬಿದ್ದು ವಶವಾದಿ.
मैंने तेरे लिए फन्दा लगाया, और ऐ बाबुल, तू पकड़ा गया, और तुझे ख़बर न थी। तेरा पता मिला और तू गिरफ़्तार हो गया, क्यूँकि तूने ख़ुदावन्द से लड़ाई की है।
25 ೨೫ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕಸ್ದೀಯರ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದುಂಟು; ಅದಕ್ಕಾಗಿ ಯೆಹೋವನು ತನ್ನ ಆಯುಧ ಶಾಲೆಯನ್ನು ತೆರೆದು ತನ್ನ ರೋಷದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ.
ख़ुदावन्द ने अपना सिलाहख़ाना खोला और अपने क़हर के हथियारों को निकाला है; क्यूँकि कसदियों की सरज़मीन में ख़ुदावन्द रब्ब — उल — अफ़वाज को कुछ करना है।
26 ೨೬ ಲೋಕದ ಕಟ್ಟಕಡೆಯಿಂದ ಬಾಬಿಲೋನಿಗೆ ಬನ್ನಿರಿ, ಅದರ ಕಣಜಗಳನ್ನು ತೆರೆಯಿರಿ; ಪಟ್ಟಣವನ್ನು ಹಾಳುದಿಬ್ಬಗಳಾಗಿ ಮಾಡಿ ಪೂರ್ಣವಾಗಿ ನಾಶಪಡಿಸಿರಿ; ಏನೂ ಉಳಿಯದಿರಲಿ.
सिरे से शुरू' करके उस पर चढ़ो, और उसके अम्बारख़ानों को खोलो, उसको खण्डर कर डालो और उसको बर्बाद करो, उसकी कोई चीज़ बाक़ी न छोड़ो।
27 ೨೭ ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ; ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.
उसके सब बैलों को ज़बह करो, उनको मसलख़ में जाने दो; उन पर अफ़सोस! कि उनका दिन आ गया, उनकी सज़ा का वक़्त आ पहुँचा।
28 ೨೮ ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶ ಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು ಚೀಯೋನಿನಲ್ಲಿ ಪ್ರಕಟಿಸುವುದಕ್ಕೆ ಹೋಗುತ್ತಾರಲ್ಲಾ.
सरज़मीन — ए — बाबुल से फ़रारियों की आवाज़! वह भागते और सिय्यून में ख़ुदावन्द हमारे ख़ुदा के इन्तक़ाम, या'नी उसकी हैकल के इन्तक़ाम का ऐलान करते हैं।
29 ೨೯ ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.
तीरअन्दाज़ों को बुलाकर इकट्ठा करो कि बाबुल पर जाएँ, सब कमानदारों को हर तरफ़ से उसके सामने ख़ेमाज़न करो। वहाँ से कोई बच न निकले, उसके काम के मुवाफ़िक़ उसको बदला दो। सब कुछ जो उसने किया उसे करों क्यूँकि उसने ख़ुदावन्द इस्राईल के क़ुद्दूस के सामने बहुत तकब्बुर किया।
30 ೩೦ ಆದಕಾರಣ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು; ಇದು ಯೆಹೋವನ ನುಡಿ” ಎಂಬುದೇ.
इसलिए उसके जवान बाज़ारों में गिर जाएँगे, और सब जंगी मर्द उस दिन काट डाले जाएँगे, ख़ुदावन्द फ़रमाता है।
31 ೩೧ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ, “ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನ್ನ ವಿರುದ್ಧವಾಗಿದ್ದೇನೆ; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.
ऐ मग़रूर, देख, मैं तेरा मुख़ालिफ़ हूँ ख़ुदावन्द रब्ब — उल — अफ़वाज फ़रमाता है क्यूँकि तेरा वक़्त आ पहुँचा, हाँ, वह वक़्त जब मैं तुझे सज़ा दूँ।
32 ೩೨ ಸೊಕ್ಕಿನ ರಾಜ್ಯವು ಎಡವಿ ಬೀಳುವುದು, ಅದನ್ನು ಯಾರೂ ಎತ್ತರು; ಅದರ ಪಟ್ಟಣಗಳಿಗೆ ಬೆಂಕಿಹೊತ್ತಿಸುವೆನು, ಅದು ಸುತ್ತಲಿರುವುದನ್ನು ನುಂಗಿಬಿಡುವುದು.”
और वह मग़रूर ठोकर खाएगा, वह गिरेगा और कोई उसे न उठाएगा; और मैं उसके शहरों में आग भड़काऊँगा, और वह उसके तमाम 'इलाक़े को भसम कर देगी।
33 ೩೩ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮತ್ತು ಯೆಹೂದ್ಯರು ಉಭಯರೂ ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆ ಒಯ್ದವರೆಲ್ಲರೂ ಅವರನ್ನು ಬಿಡಿಸಲೊಲ್ಲದೆ ಬಿಗಿಹಿಡಿದಿದ್ದಾರೆ.
'रब्ब — उल — अफ़वाज यूँ फ़रमाता है: कि बनी — इस्राईल और बनी यहूदाह दोनों मज़लूम हैं; और उनको ग़ुलाम करने वाले उनको क़ैद में रखते हैं, और छोड़ने से इन्कार करते हैं।
34 ೩೪ ಅವರ ರಕ್ಷಕನು ಬಲಿಷ್ಠನು; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ, ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.”
उनका छुड़ानेवाला ज़ोरआवर है; रब्ब — उल — अफ़वाज उसका नाम है; वह उनकी पूरी हिमायत करेगा ताकि ज़मीन को राहत बख़्शे, और बाबुल के बाशिन्दों को परेशान करे।
35 ೩೫ ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ಕಸ್ದೀಯರ ಮೇಲೆ ಬೀಳಲಿ! ಬಾಬೆಲಿನ ಸಾಮಾನ್ಯ ಜನರು, ಪ್ರಧಾನರು, ಪಂಡಿತರು, ಇವರನ್ನೆಲ್ಲಾ ಹತಿಸಲಿ!
ख़ुदावन्द फ़रमाता है, कि तलवार कसदियों पर और बाबुल के बाशिन्दों पर, और उसके हाकिम और हुक्मा पर है।
36 ೩೬ ಖಡ್ಗವು ಕೊಚ್ಚಿಕೊಳ್ಳುವವರನ್ನು ಇರಿಯಲಿ! ಅವರ ಬುದ್ಧಿಹೀನತೆಯು ಬಯಲಿಗೆ ಬರುವುದು. ಖಡ್ಗವು ಬಾಬೆಲಿನ ಶೂರರನ್ನು ಸಂಹರಿಸಲಿ! ಅವರು ಬೆಚ್ಚಿಬೀಳುವರು.
लाफ़ज़नों पर तलवार है, वह बेवकूफ़ हो जाएँगे; उसके बहादुरों पर तलवार है, वह डर जाएँगे।
37 ೩೭ ಖಡ್ಗವು ಅವರ ಅಶ್ವಗಳನ್ನೂ, ರಥಗಳನ್ನೂ, ಬಾಬೆಲಿನಲ್ಲಿರುವ ಬಗೆಬಗೆಯ ವಿದೇಶೀಯರನ್ನೆಲ್ಲ ಹೊಡೆಯಲಿ! ಅವರು ಹೆಂಗಸರಂತೆ ಬೆದರುವರು, ಖಡ್ಗವು ಅವರ ಸಂಪತ್ತನ್ನು ನುಂಗಲಿ! ಅವರು ಸೂರೆಗೆ ಈಡಾಗುವರು.
उसके घोड़ों और रथों और सब मिले — जुले लोगों पर जो उसमें हैं, तलवार है, वह 'औरतों की तरह होंगे; उसके ख़ज़ानों पर तलवार है, वह लूटे जाएँगे।
38 ೩೮ ಬರಗಾಲವು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವುದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ತಮ್ಮ ಭಯಂಕರವಾದ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;
उसकी नहरों पर ख़ुश्कसाली है, वह सूख जाएँगी; क्यूँकि वह तराशी हुई मूरतों की ममलुकत है और वह बुतों पर शेफ़्ता हैं।
39 ೩೯ ಆದಕಾರಣ ತೋಳ ಮುಂತಾದ ಕಾಡುಮೃಗಗಳು ಅಲ್ಲಿ ಬೀಡು ಮಾಡಿಕೊಳ್ಳುವವು, ಉಷ್ಟ್ರಪಕ್ಷಿಗಳು ತಂಗುವವು; ಅದು ಎಂದಿಗೂ ವಾಸಸ್ಥಳವಾಗದು, ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಇರುವುದಿಲ್ಲ.
इसलिए दश्ती दरिन्दे गीदड़ों के साथ वहाँ बसेंगे और शुतुरमुर्ग उसमें बसेरा करेंगे, और वह फिर अबद तक आबाद न होगी, नसल — दर — नसल कोई उसमें सुकूनत न करेगा।
40 ೪೦ ದೇವರು ಕೆಡವಿದ ಸೊದೋಮ್, ಗೊಮೋರ ಪಟ್ಟಣಗಳಲ್ಲಿಯೂ ಮತ್ತು ಸುತ್ತಣ ಊರುಗಳಲ್ಲಿಯೂ ಹೇಗೋ, ಹಾಗೆಯೇ ಬಾಬೆಲಿನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲೆ ನಿಲ್ಲುವುದಿಲ್ಲ.
जिस तरह ख़ुदा ने सदूम और 'अमूरा और उनके आसपास के शहरों को उलट दिया ख़ुदावन्द फ़रमाता है उसी तरह कोई आदमी वहाँ न बसेगा, न आदमज़ाद उसमें रहेगा।
41 ೪೧ ಆಹಾ, ಉತ್ತರ ದಿಕ್ಕಿನಿಂದ ಒಂದು ಜನಾಂಗವು ಬರುತ್ತೆ, ಮಹಾ ಜನವೂ, ಬಹು ಮಂದಿ ಅರಸರೂ ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಬರುತ್ತಾರೆ.
देख, उत्तरी मुल्क से एक गिरोह आती है; और इन्तिहा — ए — ज़मीन से एक बड़ी क़ौम और बहुत से बादशाह बरअन्गेख़ता किए जाएँगे।
42 ೪೨ ಬಿಲ್ಲನ್ನೂ ಮತ್ತು ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ಅನ್ನುತ್ತಾನೆ.
वह तीरअन्दाज़ — ओ — नेज़ा बाज़ हैं, वह संगदिल — ओ — बेरहम हैं, उनके ना'रों की आवाज़ हमेशा समन्दर की जैसी है, वह घोड़ों पर सवार हैं; ऐ दुख़्तर — ए — बाबुल, वह जंगी मर्दों की तरह तेरे सामने सफ़ — आराई करते हैं।
43 ೪೩ ಬಾಬೆಲಿನ ಅರಸನು ಅದರ ಸುದ್ದಿಯನ್ನು ಕೇಳಿದನು, ಅವನ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ಅವನನ್ನು ಹಿಡಿದಿದೆ.
शाह — ए — बाबुल ने उनकी शोहरत सुनी है, उसके हाथ ढीले हो गए, वह ज़च्चा की तरह मुसीबत और दर्द में गिरफ़्तार है।
44 ೪೪ ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ ಕಸ್ದೀಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲನು?
“देख, वह शेर — ए — बबर की तरह यरदन के जंगल से निकलकर मज़बूत बस्ती पर चढ़ आएगा; लेकिन मैं अचानक उसको वहाँ से भगा दूँगा, और अपने बरगुज़ीदा को उस पर मुक़र्रर करूँगा; क्यूँकि मुझ सा कौन है? कौन है जो मेरे लिए वक़्त मुक़र्रर करे? और वह चरवाहा कौन है जो मेरे सामने खड़ा हो सके?
45 ೪೫ ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ, ಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶಕ್ಕೆ ಬೆದರುವುದು.
इसलिए ख़ुदावन्द की मसलहत को जो उसने बाबुल के ख़िलाफ़ ठहराई है, और उसके इरादे को जो उसने कसदियों की सरज़मीन के ख़िलाफ़ किया है, सुनो, यक़ीनन उनके गल्ले के सब से छोटों को भी घसीट ले जाएँगे; यक़ीनन उनका घर भी उनके साथ बर्बाद होगा।
46 ೪೬ ಬಾಬೆಲು ಶತ್ರುವಶವಾಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುತ್ತದೆ, ಅದರ ಮೊರೆಯು ಜನಾಂಗಗಳಲ್ಲಿ ಕೇಳಿಸುತ್ತದೆ.
बाबुल की शिकस्त के शोर से ज़मीन काँपती है, और फ़रियाद को क़ौमों ने सुना है।”

< ಯೆರೆಮೀಯನು 50 >