< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 12 >

1 ಕೀಷನ ಮಗ ಸೌಲನ ನಿಮಿತ್ತ ದಾವೀದನು ಇನ್ನೂ ಬಚ್ಚಿಟ್ಟುಕೊಂಡಿರುವಾಗ, ಚಿಕ್ಲಗಿನಲ್ಲಿರುವ ದಾವೀದನ ಬಳಿಗೆ ಬಂದವರು ಇವರೇ. ಅವರು ಪರಾಕ್ರಮಶಾಲಿಗಳಲ್ಲಿ ಸೇರಿದವರೂ, ಯುದ್ಧಕ್ಕೆ ಸಹಾಯಕರೂ.
जब दाऊद सिकलग में कीश के पुत्र शाऊल के डर के मारे छिपा रहता था, तब ये उसके पास वहाँ आए, और ये उन वीरों में से थे जो युद्ध में उसके सहायक थे।
2 ಎಡಬಲ ಕೈಗಳಿಂದ ಕಲ್ಲುಗಳನ್ನು ಎಸೆಯಲೂ, ಬಿಲ್ಲುಗಳಿಂದ ಬಾಣಗಳನ್ನು ಎಸೆಯಲೂ, ಇವರು ಬೆನ್ಯಾಮೀನನ ಗೋತ್ರದ ಸೌಲನ ಸಂಬಂಧಿಕರೂ ಆಗಿದ್ದರು.
ये धनुर्धारी थे, जो दाएँ-बाएँ, दोनों हाथों से गोफन के पत्थर और धनुष के तीर चला सकते थे; और ये शाऊल के भाइयों में से बिन्यामीनी थे,
3 ಅವರ ಮುಖ್ಯಸ್ಥ ಅಹೀಗೆಜೆರ್, ಇವನ ನಂತರ ಯೋವಾಷ್. ಇವರಿಬ್ಬರೂ ಗಿಬೆಯ ಊರಿನ ಶೇಮಾನ ಪುತ್ರರು. ಅಜ್ಮಾವೆತನ ಪುತ್ರರಾದ ಯೆಜಿಯೇಲ್ ಮತ್ತು ಪೆಲೆಟ್, ಅನಾತೋತ್ ಊರಿನವರಾದ ಬೆರಾಕಾ, ಯೇಹು.
मुख्य तो अहीएजेर और दूसरा योआश था जो गिबावासी शमाआ का पुत्र था; फिर अज्मावेत के पुत्र यजीएल और पेलेत, फिर बराका और अनातोती येहू,
4 ಗಿಬ್ಯೋನ್ಯನಾದ ಇಷ್ಮಾಯನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿಯಾಗಿದ್ದ ಮತ್ತು ಮೂವತ್ತು ಮಂದಿಯ ಮುಖ್ಯಸ್ಥನಾಗಿದ್ದ; ಯೆರೆಮೀಯ, ಯಹಜಿಯೇಲ್, ಯೋಹಾನಾನ್, ಗೆದೇರದವನಾದ ಯೋಜಾಬಾದ್,
और गिबोनी यिशमायाह जो तीसों में से एक वीर और उनके ऊपर भी था; फिर यिर्मयाह, यहजीएल, योहानान, गदेरावासी योजाबाद,
5 ಎಲ್ಲೂಜೈ, ಯೆರೀಮೋತ್, ಬೆಯಲ್ಯ, ಶೆಮರ್ಯ, ಹರುಫ್ಯನಾದ ಶೆಫಟ್ಯ,
एलूजै, यरीमोत, बाल्याह, शेमर्याह, हारूपी शपत्याह,
6 ಕೋರಹಿಯರಾದ ಎಲ್ಕಾನ, ಇಷ್ಷೀಯ, ಅಜರಯೇಲ್, ಯೋವೆಜೆರ್, ಯಾಷೊಬ್ಬಾಮ,
एल्काना, यिश्शिय्याह, अजरेल, योएजेर, याशोबाम, जो सब कोरहवंशी थे,
7 ಗೆದೋರಿನಲ್ಲಿರುವ ಯೆರೋಹಾಮನ ಪುತ್ರರಾದ ಯೋಯೇಲಹ, ಜೆಬದ್ಯ.
और गदोरवासी यरोहाम के पुत्र योएला और जबद्याह।
8 ಇದಲ್ಲದೆ ಮರುಭೂಮಿಯಲ್ಲಿ ಬಲವಾದ ಸ್ಥಳದಲ್ಲಿರುವ ದಾವೀದನ ಬಳಿಯಲ್ಲಿ ತಮ್ಮನ್ನು ಪ್ರತ್ಯೇಕಿಸಿಕೊಂಡಿದ್ದ ಗಾದ್ಯರು ಇದ್ದರು. ಇವರು ಖೇಡ್ಯವನ್ನೂ, ಭಲ್ಲೆಯನ್ನೂ ಹಿಡಿದು ಪರಾಕ್ರಮಶಾಲಿಗಳಾಗಿಯೂ, ಯುದ್ಧಕ್ಕೆ ತಕ್ಕ ಸೈನಿಕರಾಗಿಯೂ ಇದ್ದರು. ಅವರ ಮುಖಗಳು ಸಿಂಹಗಳಂತೆ ಭೀಕರವಾಗಿದ್ದವು. ಪರ್ವತಗಳ ಮೇಲೆ ಇವರು ಜಿಂಕೆಗಳ ಹಾಗೆ ವೇಗವುಳ್ಳವರಾಗಿದ್ದರು.
फिर जब दाऊद जंगल के गढ़ में रहता था, तब ये गादी जो शूरवीर थे, और युद्ध विद्या सीखे हुए और ढाल और भाला काम में लानेवाले थे, और उनके मुँह सिंह के से और वे पहाड़ी मृग के समान वेग से दौड़नेवाले थे, ये और गादियों से अलग होकर उसके पास आए,
9 ಅಧಿಕಾರದಲ್ಲಿ ಏಜೆರ್ ಮುಖ್ಯಸ್ಥನು; ಎರಡನೆಯವನು ಓಬದ್ಯ; ಮೂರನೆಯವನು ಎಲೀಯಾಬ್;
अर्थात् मुख्य तो एजेर, दूसरा ओबद्याह, तीसरा एलीआब,
10 ನಾಲ್ಕನೆಯವನು ಮಿಷ್ಮನ್ನ, ಐದನೆಯವನು ಯೆರೆಮೀಯ;
१०चौथा मिश्मन्ना, पाँचवाँ यिर्मयाह,
11 ಆರನೆಯವನು ಅತ್ತೈ; ಏಳನೆಯವನು ಎಲೀಯೇಲ್;
११छठा अत्तै, सातवाँ एलीएल,
12 ಎಂಟನೆಯವನು ಯೋಹಾನಾನ್, ಒಂಬತ್ತನೆಯವನು ಎಲ್ಜಾಬಾದ್;
१२आठवाँ योहानान, नौवाँ एलजाबाद,
13 ಹತ್ತನೆಯವನು ಯೆರೆಮೀಯ; ಹನ್ನೊಂದನೆಯವನು ಮಕ್ಬನ್ನೈ.
१३दसवाँ यिर्मयाह और ग्यारहवाँ मकबन्नै था,
14 ಗಾದನ ಪುತ್ರರಾದ ಇವರು ಸೈನ್ಯದಲ್ಲಿ ಅಧಿಪತಿಗಳಾಗಿದ್ದರು. ಕಿರಿಯನು ನೂರು ಮಂದಿಯ ಮೇಲೆಯೂ ಹಿರಿಯನು ಸಾವಿರ ಮಂದಿಯ ಮೇಲೆಯೂ ಇದ್ದರು.
१४ये गादी मुख्य योद्धा थे, उनमें से जो सबसे छोटा था वह तो एक सौ के ऊपर, और जो सबसे बड़ा था, वह हजार के ऊपर था।
15 ಇವರು ಮೊದಲನೆಯ ತಿಂಗಳಲ್ಲಿ ಯೊರ್ದನ್ ಹೊಳೆ ದಡಮೀರಿ ಹರಿಯುತ್ತಿದ್ದಾಗ, ಅದನ್ನು ದಾಟಿ ಪೂರ್ವ ಕಡೆಯಲ್ಲಿಯೂ, ಪಶ್ಚಿಮ ಕಡೆಯಲ್ಲಿಯೂ ತಗ್ಗುಗಳಲ್ಲಿ ಇರುವವರೆಲ್ಲರನ್ನು ಓಡಿಸಿಬಿಟ್ಟರು.
१५ये ही वे हैं, जो पहले महीने में जब यरदन नदी सब किनारों के ऊपर-ऊपर बहती थी, तब उसके पार उतरे; और पूर्व और पश्चिम दोनों ओर के सब तराई के रहनेवालों को भगा दिया।
16 ಬೆನ್ಯಾಮೀನನ ಮತ್ತು ಯೆಹೂದ್ಯರಲ್ಲಿ ಕೆಲವರು ಕೋಟೆಯ ಸ್ಥಳದಲ್ಲಿದ್ದ ದಾವೀದನ ಬಳಿಗೆ ಬಂದರು.
१६कई एक बिन्यामीनी और यहूदी भी दाऊद के पास गढ़ में आए।
17 ಆಗ ದಾವೀದನು ಅವರನ್ನು ಎದುರುಗೊಳ್ಳಲು ಹೊರಟುಹೋಗಿ ಅವರಿಗೆ ಉತ್ತರವಾಗಿ, “ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ, ನನ್ನ ಹೃದಯವು ನಿಮ್ಮ ಸಂಗಡ ಒಂದಾಗಿರುವುದು. ಆದರೆ ದೋಷವು ನನ್ನ ಕೈಯಲ್ಲಿ ಇಲ್ಲದಿರುವಾಗ, ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ, ನಮ್ಮ ಪಿತೃಗಳ ದೇವರು ನೋಡಿ ನ್ಯಾಯತೀರಿಸಲಿ,” ಎಂದನು.
१७उनसे मिलने को दाऊद निकला और उनसे कहा, “यदि तुम मेरे पास मित्रभाव से मेरी सहायता करने को आए हो, तब तो मेरा मन तुम से लगा रहेगा; परन्तु जो तुम मुझे धोखा देकर मेरे शत्रुओं के हाथ पकड़वाने आए हो, तो हमारे पितरों का परमेश्वर इस पर दृष्टि करके डाँटे, क्योंकि मेरे हाथ से कोई उपद्रव नहीं हुआ।”
18 ಆಗ ಆತ್ಮವು ಮೂವತ್ತು ಮಂದಿ ಅಧಿಪತಿಗಳ ಮುಖ್ಯಸ್ಥನಾದ ಅಮಾಸೈಯ ಮೇಲೆ ಬಂತು. ಅವನು ಹೀಗೆ ಹೇಳಿದನು, “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನ್ನ ಜೊತೆಯಿದ್ದೇವೆ; ಜಯವು ನಿನ್ನದೇ, ನಿನಗೆ ಸಹಾಯ ಮಾಡುವವರಿಗೆ ಜಯವು; ಏಕೆಂದರೆ ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾರೆ.” ಆಗ ದಾವೀದನು ಅವರನ್ನು ಅಂಗೀಕರಿಸಿ, ಅವರನ್ನು ದಂಡಿನ ಅಧಿಪತಿಗಳಾಗಿ ಮಾಡಿದನು.
१८तब आत्मा अमासै में समाया, जो तीसों वीरों में मुख्य था, और उसने कहा, “हे दाऊद! हम तेरे हैं; हे यिशै के पुत्र! हम तेरी ओर के हैं, तेरा कुशल ही कुशल हो और तेरे सहायकों का कुशल हो, क्योंकि तेरा परमेश्वर तेरी सहायता किया करता है।” इसलिए दाऊद ने उनको रख लिया, और अपने दल के मुखिए ठहरा दिए।
19 ದಾವೀದನು ಸೌಲನ ಮೇಲೆ ಯುದ್ಧಮಾಡಲು ಫಿಲಿಷ್ಟಿಯರ ಸಂಗಡ ಬರುತ್ತಿರುವಾಗ, ಮನಸ್ಸೆಯವರಲ್ಲಿ ಕೆಲವರು ದಾವೀದನ ಕಡೆಗೆ ಸೇರಿದರು. ಆದರೆ ಇವರು ಅವರಿಗೆ ಸಹಾಯ ಕೊಡದೆ ಇದ್ದರು. ಏಕೆಂದರೆ ಫಿಲಿಷ್ಟಿಯರ ಅಧಿಪತಿಗಳು ಯೋಚನೆ ಮಾಡಿದ ತರುವಾಯ, “ಅವನು ನಮಗೆ ಮೋಸಮಾಡಿ, ತನ್ನ ಯಜಮಾನನಾದ ಸೌಲನ ಕಡೆಗೆ ಸೇರಿದರೆ, ನಮ್ಮ ತಲೆಗಳು ಬಿದ್ದು ಹೋಗುವುವು,” ಎಂದು ಹೇಳಿ ಅವನನ್ನು ಕಳುಹಿಸಿಬಿಟ್ಟರು.
१९फिर कुछ मनश्शेई भी उस समय दाऊद के पास भाग आए, जब वह पलिश्तियों के साथ होकर शाऊल से लड़ने को गया, परन्तु वह उसकी कुछ सहायता न कर सका, क्योंकि पलिश्तियों के सरदारों ने सम्मति लेने पर यह कहकर उसे विदा किया, “वह हमारे सिर कटवाकर अपने स्वामी शाऊल से फिर मिल जाएगा।”
20 ದಾವೀದನು ಹಿಂದಿರುಗಿ ಚಿಕ್ಲಗಿಗೆ ಹಿಂದಿರುಗುತ್ತಿದ್ದಾಗ ಅವನೊಂದಿಗೆ ಮನಸ್ಸೆ ಗೋತ್ರದ ಸಹಸ್ರಾಧಿಪತಿಗಳಾದ ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹು, ಚಿಲ್ಲೆತೈ ಎಂಬವರು ಬಂದು ಸೇರಿಕೊಂಡರು.
२०जब वह सिकलग को जा रहा था, तब ये मनश्शेई उसके पास भाग आए; अर्थात् अदनह, योजाबाद, यदीएल, मीकाएल, योजाबाद, एलीहू और सिल्लतै जो मनश्शे के हजारों के मुखिए थे।
21 ಇವರು ಗುಂಪಿಗೆ ವಿರೋಧವಾಗಿ ದಾವೀದನಿಗೆ ಸಹಾಯಕರಾಗಿದ್ದರು; ಅವರೆಲ್ಲರೂ ಬಲವುಳ್ಳ ಪರಾಕ್ರಮಶಾಲಿಗಳಾಗಿಯೂ ದಂಡಿನ ಪ್ರಧಾನರಾಗಿಯೂ ಇದ್ದರು.
२१इन्होंने लुटेरों के दल के विरुद्ध दाऊद की सहायता की, क्योंकि ये सब शूरवीर थे, और सेना के प्रधान भी बन गए।
22 ಅದೇ ಕಾಲದಲ್ಲಿ ದಿನೇ ದಿನೇ ದೊಡ್ಡ ಸೈನ್ಯವು ದೇವರ ಸೈನ್ಯದ ಹಾಗೆ ಆಗುವವರೆಗೆ, ದಾವೀದನಿಗೆ ಸಹಾಯ ಕೊಡುವುದಕ್ಕೆ ಅವನ ಕಡೆಗೆ ಬರುತ್ತಿದ್ದರು.
२२वरन् प्रतिदिन लोग दाऊद की सहायता करने को उसके पास आते रहे, यहाँ तक कि परमेश्वर की सेना के समान एक बड़ी सेना बन गई।
23 ಯೆಹೋವ ದೇವರ ವಾಕ್ಯದ ಪ್ರಕಾರ ಸೌಲನ ರಾಜ್ಯವನ್ನು ದಾವೀದನ ಕಡೆಗೆ ತಿರುಗಿಸುವುದಕ್ಕೆ, ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಯುದ್ಧಕ್ಕೆ ಆಯುಧಗಳನ್ನು ಧರಿಸಿಕೊಂಡು ಬಂದ ದಂಡುಗಳ ಸಂಖ್ಯೆ ಇದು:
२३फिर लोग लड़ने के लिये हथियार बाँधे हुए हेब्रोन में दाऊद के पास इसलिए आए कि यहोवा के वचन के अनुसार शाऊल का राज्य उसके हाथ में कर दें: उनके मुखियों की गिनती यह है।
24 ಖೇಡ್ಯವನ್ನೂ, ಭಲ್ಲೆಯನ್ನೂ ಹಿಡಿದುಕೊಂಡು, ಯುದ್ಧಕ್ಕೆ ಸಿದ್ಧರಾದ ಯೆಹೂದನ ಮಕ್ಕಳು 6,800 ಮಂದಿ.
२४यहूदा के ढाल और भाला लिए हुए छः हजार आठ सौ हथियार-बन्द लड़ने को आए।
25 ಯುದ್ಧಕ್ಕೆ ಪರಾಕ್ರಮಶಾಲಿಗಳಾದ ಸಿಮೆಯೋನನ ಮಕ್ಕಳಲ್ಲಿ 7,100 ಮಂದಿ.
२५शिमोनी सात हजार एक सौ तैयार शूरवीर लड़ने को आए।
26 ಲೇವಿಯ ಮಕ್ಕಳಲ್ಲಿ 4,600 ಮಂದಿ.
२६लेवीय चार हजार छः सौ आए।
27 ಆರೋನಿಯರಲ್ಲಿ ಯೆಹೋಯಾದಾವನು ನಾಯಕನಾಗಿದ್ದನು. ಅವನ ಸಂಗಡ 3,700 ಮಂದಿ.
२७और हारून के घराने का प्रधान यहोयादा था, और उसके साथ तीन हजार सात सौ आए।
28 ಇದಲ್ಲದೆ ಬಲವುಳ್ಳ ಪರಾಕ್ರಮಶಾಲಿಯಾದ ಪ್ರಾಯಸ್ತನಾಗಿದ್ದ ಚಾದೋಕನೂ, ಅವನ ತಂದೆಯ ಮನೆಯಿಂದ 22 ಮಂದಿ ಪ್ರಧಾನರೂ.
२८और सादोक नामक एक जवान वीर भी आया, और उसके पिता के घराने के बाईस प्रधान आए।
29 ಸೌಲನ ಸಹೋದರರಾಗಿರುವ ಬೆನ್ಯಾಮೀನನ ಮಕ್ಕಳಲ್ಲಿ 3,000 ಮಂದಿ. ಇಂದಿನವರೆಗೂ ಅವರಲ್ಲಿ ಅನೇಕರು ಸೌಲನ ಮನೆಯ ವಿಚಾರಣೆಯನ್ನು ಮಾಡುತ್ತಿದ್ದರು.
२९और शाऊल के भाई बिन्यामीनियों में से तीन हजार आए, क्योंकि उस समय तक आधे बिन्यामीनियों से अधिक शाऊल के घराने का पक्ष करते रहे।
30 ಎಫ್ರಾಯೀಮನ ಮಕ್ಕಳಲ್ಲಿ 20,800 ಮಂದಿ, ಬಲವುಳ್ಳ ಪರಾಕ್ರಮಶಾಲಿಗಳೂ, ತಮ್ಮ ಪಿತೃಗಳ ಮನೆಯಲ್ಲಿ ಹೆಸರುಗೊಂಡವರೂ ಆಗಿದ್ದರು.
३०फिर एप्रैमियों में से बड़े वीर और अपने-अपने पितरों के घरानों में नामी पुरुष बीस हजार आठ सौ आए।
31 ಮನಸ್ಸೆಯ ಅರ್ಧಗೋತ್ರದಲ್ಲಿ 18,000 ಮಂದಿ. ಅವರು ದಾವೀದನನ್ನು ಅರಸನಾಗಿ ಮಾಡಲು ಬಂದವರ ಹೆಸರು ಹೆಸರಾಗಿ ಹೇಳಲು ಆಯ್ಕೆಯಾದವರು.
३१मनश्शे के आधे गोत्र में से दाऊद को राजा बनाने के लिये अठारह हजार आए, जिनके नाम बताए गए थे।
32 ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲರು ಮಾಡತಕ್ಕದ್ದು ಯಾವುದೆಂದು ತಿಳಿಯತಕ್ಕಂಥ ಕಾಲಗಳನ್ನು ಪರೀಕ್ಷಿಸಿ ತಿಳಿದವರು ಬಂದರು. ಅವರ ಯಜಮಾನರು 200 ಮಂದಿಯಾಗಿದ್ದರು. ಅವರ ಸಹೋದರರೆಲ್ಲರು ಇವರ ಆಜ್ಞಾಧೀನರಾಗಿದ್ದರು.
३२इस्साकारियों में से जो समय को पहचानते थे, कि इस्राएल को क्या करना उचित है, उनके प्रधान दो सौ थे; और उनके सब भाई उनकी आज्ञा में रहते थे।
33 ಜೆಬುಲೂನನವರಲ್ಲಿ ದೃಢಹೃದಯದಿಂದ ಸಾಲಾಗಿ ನಡೆಯುವ ಸಕಲ ಆಯುಧಗಳನ್ನು ಧರಿಸಿಕೊಂಡ ಯುದ್ಧ ನಿಪುಣರಾದ ಸೈನ್ಯವಾಗಿ ಹೊರಡುವವರು 50,000 ಮಂದಿ.
३३फिर जबूलून में से युद्ध के सब प्रकार के हथियार लिए हुए लड़ने को पाँति बाँधनेवाले योद्धा पचास हजार आए, वे पाँति बाँधनेवाले थे और चंचल न थे।
34 ನಫ್ತಾಲಿಯವರಲ್ಲಿ 1,000 ಜನ ನಾಯಕರೂ ಗುರಾಣಿಬರ್ಜಿಗಳನ್ನು ಹಿಡಿದಿರುವ 37,000 ಸೈನಿಕರೂ
३४फिर नप्ताली में से प्रधान तो एक हजार, और उनके संग ढाल और भाला लिए सैंतीस हजार आए।
35 ದಾನನವರಲ್ಲಿ 28,600 ಮಂದಿ ಯುದ್ಧ ನಿಪುಣರು.
३५दानियों में से लड़ने के लिये पाँति बाँधनेवाले अट्ठाईस हजार छः सौ आए।
36 ಆಶೇರನವರಲ್ಲಿ ಯುದ್ಧಕ್ಕೆ ಹೋಗತಕ್ಕ ಹಾಗೆ ಯುದ್ಧ ನಿಪುಣರು ಸೈನ್ಯವಾಗಿ ಹೋಗುವವರು 40,000 ಮಂದಿ.
३६और आशेर में से लड़ने को पाँति बाँधनेवाले चालीस हजार योद्धा आए।
37 ಯೊರ್ದನ್ ನದಿ ಆಚೆಯಲ್ಲಿರುವ ರೂಬೇನ್ಯರಲ್ಲಿಯೂ, ಗಾದ್ಯರಲ್ಲಿಯೂ, ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಯುದ್ಧಕ್ಕೆ ತಕ್ಕಂಥ ಸಕಲ ಆಯುಧಗಳನ್ನು ಧರಿಸಿಕೊಂಡವರು 1,20,000 ಮಂದಿ.
३७और यरदन पार रहनेवाले रूबेनी, गादी और मनश्शे के आधे गोत्रियों में से युद्ध के सब प्रकार के हथियार लिए हुए एक लाख बीस हजार आए।
38 ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲರ ಮೇಲೆ ಅರಸನಾಗಿ ಮಾಡಲು ಹೆಬ್ರೋನಿಗೆ ಪೂರ್ಣಮನಸ್ಸಿನಿಂದ ಬಂದರು. ಇದಲ್ಲದೆ ಇಸ್ರಾಯೇಲಿನಲ್ಲಿದ್ದ ಮಿಕ್ಕಾದವರೆಲ್ಲರು ದಾವೀದನನ್ನು ಅರಸನಾಗಿ ಮಾಡಲು ಒಂದೇ ಮನಸ್ಸುಳ್ಳವರಾಗಿದ್ದರು.
३८ये सब युद्ध के लिये पाँति बाँधनेवाले दाऊद को सारे इस्राएल का राजा बनाने के लिये हेब्रोन में सच्चे मन से आए, और अन्य सब इस्राएली भी दाऊद को राजा बनाने के लिये सहमत थे।
39 ಅವರು ಅಲ್ಲಿ ದಾವೀದನ ಸಂಗಡ ಮೂರು ದಿವಸ ಅವರ ಕುಟುಂಬದವರು ಅವರಿಗೋಸ್ಕರ ಸಿದ್ಧಮಾಡಿದ ಆಹಾರವನ್ನು ತಿನ್ನುತ್ತಾ, ಕುಡಿಯುತ್ತಾ ಇದ್ದರು.
३९वे वहाँ तीन दिन दाऊद के संग खाते पीते रहे, क्योंकि उनके भाइयों ने उनके लिये तैयारी की थी,
40 ಇದಲ್ಲದೆ ಅವರ ನೆರೆಯವನಾದ ಇಸ್ಸಾಕಾರ್, ಜೆಬುಲೂನ್, ನಫ್ತಾಲಿಯರು ಮೊದಲುಗೊಂಡು ಎಲ್ಲರೂ ತಮ್ಮ ಎತ್ತು, ಕತ್ತೆ, ಹೇಸರಗತ್ತೆ ಮತ್ತು ಒಂಟೆಗಳ ಮೇಲೆಯೂ ರೊಟ್ಟಿಗಳನ್ನೂ ಆಹಾರವನ್ನೂ, ಹಿಟ್ಟನ್ನೂ ಅಂಜೂರದ ಉಂಡೆಗಳನ್ನೂ ಒಣಗಿದ ದ್ರಾಕ್ಷಿ ಗೊಂಚಲುಗಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ದನಕುರಿಗಳನ್ನೂ ಬಹಳವಾಗಿ ತಂದರು. ಇಸ್ರಾಯೇಲಿನಲ್ಲಿ ಸಂತೋಷವಿತ್ತು.
४०और जो उनके निकट वरन् इस्साकार, जबूलून और नप्ताली तक रहते थे, वे भी गदहों, ऊँटों, खच्चरों और बैलों पर मैदा, अंजीरों और किशमिश की टिकियाँ, दाखमधु और तेल आदि भोजनवस्तु लादकर लाए, और बैल और भेड़-बकरियाँ बहुतायत से लाए; क्योंकि इस्राएल में आनन्द मनाया जा रहा था।

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 12 >