< ಅರಸುಗಳು - ದ್ವಿತೀಯ ಭಾಗ 22 >

1 ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದನು, ಅವನು ಮೂವತ್ತೊಂದು ವರ್ಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿ ಬೊಚ್ಕತಿನ ಅದಾಯನ ಮಗಳಾದ ಯೆದೀದಾ ಎಂಬವಳು.
योशीया राज्य करु लागला तेव्हा आठ वर्षांचा होता. त्याने यरूशलेमामध्ये एकतीस वर्षे राज्य केले. याच्या आईचे नाव यदीदा. ती बसकाथमधील अदाया याची मुलगी.
2 ಅವನು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದನ್ನು ಮಾಡಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗದೆ ತನ್ನ ಪೂರ್ವಜನಾದ ದಾವೀದನ ಮಾರ್ಗಗಳಲ್ಲಿಯೇ ನಡೆದನು.
योशीयाचे वर्तन परमेश्वराच्या दृष्टीने नीट ते तो करीत असे. आपला पूर्वज दावीद याच्याप्रमाणे तो चालला. परमेश्वराच्या शिकवणुकी प्रमाणेच वागला. देवाला जसे पाहिजे तेच त्याने केले.
3 ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಅರಸನು ಕಾರ್ಯದರ್ಶಿಯಾದ ಮೆಷುಲ್ಲಾಮನ ಮಗ, ಅಚಲ್ಯನ ಮಗನಾದ ಶಾಫಾನನನ್ನು ಯೆಹೋವ ದೇವರ ಆಲಯಕ್ಕೆ ಕಳುಹಿಸಿ,
मशुल्लामचा मुलगा असल्या याचा मुलगा शाफान चिटणीस, याला योशीया राजाने कारकिर्दीच्या अठराव्या वर्षी परमेश्वराच्या मंदिरात पाठवले आणि सांगितले.
4 “ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗು. ಅವನು ಯೆಹೋವ ದೇವರ ಆಲಯದ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ.
“तिथे तू महायाजक हिल्कीया याच्याकडे जा. द्वारपालांनी लोकांकडून गोळा केलेले पैसे या याजकाकडे जमा व्हायला हवेत. हा परमेश्वराच्या मंदिरात जमा झालेला पैसा आहे.
5 ಅವರು ಅದನ್ನು ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಒಪ್ಪಿಸಲಿ.
परमेश्वराच्या मंदिराच्या कामावर देखेरख करणाऱ्यांना याजकांनी यातील पैसे द्यावेत. मंदिराची दुरुस्ती करणाऱ्या कारागिरांना देण्यासाठी या पैशाचा विनियोग व्हावा.
6 ಆಲಯ ದುರಸ್ತಿ ಮಾಡುವಂತೆ ಯೆಹೋವ ದೇವರ ಆಲಯದಲ್ಲಿ ಕೆಲಸ ಮಾಡುವವರಾದ ಬಡಗಿಯರಿಗೂ, ಶಿಲ್ಪಿಗಾರರಿಗೂ, ಕಲ್ಲುಕೆಲಸದವರಿಗೂ ಕೊಟ್ಟು, ಆಲಯವನ್ನು ದುರಸ್ತಿ ಮಾಡಲು ಮರಗಳನ್ನೂ, ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವುದಕ್ಕೆ ಕೊಡಲಿ.
सुतार, गवंडी, पाथरवट यांना तसेच लाकूड घेणे, चिरे घडवणे यासाठी पैसे द्यावेत.
7 ಆದರೆ ಅವರು ನಂಬಿಗಸ್ತರಾಗಿ ಕೆಲಸ ಮಾಡಿದ್ದರಿಂದ, ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳುವ ಅವಶ್ಯಕತೆ ಇಲ್ಲ, ಎಂದು ಹೇಳು,” ಎಂದನು.
पण त्यांना दिलेल्या पैशाचा हिशोब मागू नये कारण ही मंडळी विश्वसनीय आहे.”
8 ಆಗ ಮಹಾಯಾಜಕನಾದ ಹಿಲ್ಕೀಯನು ಕಾರ್ಯದರ್ಶಿಯಾದ ಶಾಫಾನನಿಗೆ, “ನನಗೆ ಯೆಹೋವ ದೇವರ ಆಲಯದಲ್ಲಿ ಮೋಶೆಯ ನಿಯಮದ ಗ್ರಂಥವು ಸಿಕ್ಕಿರುತ್ತದೆ,” ಎಂದನು. ಹಿಲ್ಕೀಯನು ಆ ಗ್ರಂಥವನ್ನು ಶಾಫಾನನಿಗೆ ಒಪ್ಪಿಸಿದನು. ಅವನು ಅದನ್ನು ಓದಿದನು.
महायाजक चिटणीस शाफान याला म्हणाला, “मला परमेश्वराच्या मंदिरात नियमशास्त्राचे पुस्तक सापडले आहे.” मग ते पुस्तक याजक हिल्कीयाने शाफानला दिले. शाफानने ते वाचले.
9 ಕಾರ್ಯದರ್ಶಿಯಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆ, “ಯೆಹೋವ ದೇವರ ಆಲಯದಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ, ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಒಪ್ಪಿಸಿದ್ದಾರೆ,” ಎಂದನು.
शाफानने परत येऊन राजाला सर्व वर्तमान सांगितले. तो म्हणाला, “तुझ्या सेवकांनी मंदिरातील सर्व पैसा एकत्र करून तो परमेश्वराच्या मंदिराच्या कामावर देखरेख करणाऱ्यांना त्यांनी दिला आहे.”
10 ಇದಲ್ಲದೆ, “ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆ,” ಎಂದು ತೋರಿಸಿ, ಶಾಫಾನನು ಅದನ್ನು ಅರಸನ ಮುಂದೆ ಓದಿದನು.
१०पुढे शाफान राजाला म्हणाला, “याजक हिल्कीया याने हे पुस्तकही मला दिले.” शाफानने ते राजाला वाचून दाखवले.
11 ಅರಸನು ಮೋಶೆಯ ನಿಯಮದ ಪುಸ್ತಕದ ಮಾತುಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡನು.
११नियमशास्त्रातील वचने ऐकून राजाने अति दु: ख प्रदर्शित करण्यासाठी आपली वस्त्रे फाडली.
12 ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ, ಶಾಫಾನನ ಮಗನಾದ ಅಹೀಕಾಮನಿಗೂ, ಮೀಕಾಯನ ಮಗನಾದ ಅಕ್ಬೋರನಿಗೂ, ಕಾರ್ಯದರ್ಶಿಯಾದ ಶಾಫಾನನಿಗೂ, ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ,
१२मग राजाने याजक हिल्कीया, शाफानचा मुलगा अहीकाम, मिखायाचा मुलगा अखबोर, शाफान चिटणीस आणि सेवक असाया यांना आज्ञा केली की,
13 “ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಜನರಿಗೋಸ್ಕರವೂ, ಸಮಸ್ತ ಯೆಹೂದ್ಯರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ದೇವರ ಮಹಾಕೋಪಕ್ಕೆ ಪಾತ್ರರಾಗಿದ್ದೇವೆ,” ಎಂದನು.
१३“आता जाऊन परमेश्वराचा कौल घ्या. मी, आपले लोक आणि सर्व यहूदा यांच्या वतीने त्यास या पुस्तकातील वचनांविषयी विचारा. परमेश्वराचा आपल्यावर कोप झाला आहे. कारण आपल्या पूर्वंजांनी या पुस्तकातील वचनांचा भंग केला आहे. आपल्यासाठी लिहून ठेवलेल्या सर्व गोष्टी त्यांनी आचरणात आणल्या नाहीत.
14 ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಅಸಾಯ ಎಂಬವರು ಪ್ರವಾದಿನಿ ಹುಲ್ದಳ ಬಳಿಗೆ ವಿಚಾರಿಸಲು ಹೋದರು. ಆಕೆಯು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಗಳ ಮೇಲ್ವಿಚಾರಕನೂ ಆದ ಶಲ್ಲೂಮನ ಹೆಂಡತಿ. ಅವಳು ಯೆರೂಸಲೇಮಿನೊಳಗೆ ಹೊಸದಾದ ನಿರ್ಮಿತ ಭಾಗದಲ್ಲಿ ವಾಸವಾಗಿದ್ದಳು.
१४मग हिल्कीया याजक, अहीकाम, अखबोर, शाफान, असाया हे सर्व हुल्दा या संदेष्ट्रीकडे गेले. हरहसचा मुलगा तिकवा याचा मुलगा शल्लूम याची ती पत्नी. शल्लूम याजकांच्या कपड्यांचे खाते सांभाळी, हुल्दा यरूशलेमामध्ये दुसऱ्या भागात राहत होती. हे सर्वजण तिच्याकडे गेले आणि तिच्याशी बोलले.”
15 ಹುಲ್ದಳು ಅವರಿಗೆ, “ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಇಸ್ರಾಯೇಲ್ ದೇವರಾದ ಯೆಹೋವ ದೇವರ ಮಾತುಗಳನ್ನು ತಿಳಿಸಿರಿ:
१५तेव्हा हुल्दा त्यांना म्हणाली, इस्राएलचा देव परमेश्वर म्हणतो: तुम्हास माझ्याकडे ज्याने पाठवले त्यास सांगा,
16 ‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಯೆಹೂದದ ಅರಸನು ಓದಿದ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದರಂತೆ ಕೇಡನ್ನು ಬರಮಾಡುವೆನು.
१६“परमेश्वराचे म्हणणे आहे की, हा प्रदेश आणि तेथे राहणारे लोक यांच्यावर आता मी अरिष्ट आणणार आहे. यहूदाच्या राजाने त्या पुस्तकात वाचली तीच संकटे येतील.”
17 ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಹೊತ್ತಿ ಉರಿಯುತ್ತಿದೆ, ಅದು ಆರಿಹೋಗುವುದಿಲ್ಲ.’
१७यहूदाच्या लोकांनी माझा त्याग केला. इतर दैवतांपुढे त्यांनी धूप जाळला. त्यांनी मला संताप आणला, त्यांनी अनेक मूर्तींही केल्या. म्हणून या प्रदेशावर माझा राग आहे. न विझवता येणाऱ्या अग्नीसारखा माझा संताप असेल.
18 ಆದರೆ ಯೆಹೋವ ದೇವರನ್ನು ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ, ‘ನೀವು ಕೇಳಿದ ಮಾತುಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ,
१८“यहूदाचा राजा योशीया याने तुम्हास परमेश्वराचा कौल घ्यायला पाठवले. योशीयाला हे सांगा: ‘इस्राएलाचा देव परमेश्वराची वचने तू ऐकलीस. हा प्रदेश आणि येथील लोक यांच्याविषयी मी सांगितले ते ऐकलेस.
19 ಈ ಸ್ಥಳವೂ ಅದರ ನಿವಾಸಿಗಳೂ ನಾಶಕ್ಕೂ ಶಾಪಕ್ಕೂ ಗುರಿಯಾಗುವರೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ ನೀನು ನಿನ್ನನ್ನು ಯೆಹೋವ ದೇವರ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ ನಾನು ನಿನ್ನ ಮೊರೆಯನ್ನು ಕೇಳಿದೆನು.
१९तू मृदू मनाचा आहेस. या गोष्टी ऐकून तुला दु: ख झाले. यरूशलेमेवर अरिष्ट येईल असे मी म्हणालो तेव्हा शोकाने तू वस्त्रे फाडलीस आणि रडलास. म्हणून मीही तुझे ऐकले आहे.” हे परमेश्वराचे शब्द आहेत.
20 ಆದ್ದರಿಂದ ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವೆ. ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವುದಿಲ್ಲ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದಳು. ಅವರು ಹೋಗಿ ಈ ಉತ್ತರವನ್ನು ಅರಸನಿಗೆ ತಿಳಿಸಿದರು.
२०“ती तुझी तुझ्या पूर्वजांशी भेट करून देईन. तुला मरण येईल आणि तू सुखाने कबरीत पडशील. यरूशलेमेवर येणारे अरिष्ट तुला आपल्या डोळ्यांनी पाहावे लागणार नाही.” मग याजक हिल्कीया, अहीकाम, अखबोर, शाफान, असाया यांनी हा संदेश राजाला सांगितला.

< ಅರಸುಗಳು - ದ್ವಿತೀಯ ಭಾಗ 22 >