< ಯೆಶಾಯನು 37 >

1 ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ, ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿ ತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು, ಯೆಹೋವ ದೇವರ ಆಲಯಕ್ಕೆ ಹೋದನು.
ఆ మాటలు విని హిజ్కియా తన బట్టలు చింపుకుని, గోనెపట్ట కట్టుకుని యెహోవా మందిరానికి వెళ్ళాడు.
2 ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.
రాజ గృహ నిర్వాహకుడు ఎల్యాకీమును, శాస్త్రి షెబ్నాను, యాజకుల్లో పెద్దలను ఆమోజు కొడుకు, ప్రవక్త అయిన యెషయా దగ్గరికి పంపించాడు.
3 ಆಗ ಅವರು ಯೆಶಾಯನಿಗೆ, “ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.
వారంతా గోనెపట్ట కట్టుకుని అతని దగ్గరికి వచ్చి అతనితో “హిజ్కియా ఇలా చెప్పమన్నాడు, ‘ఈ రోజు బాధ, శిక్ష, నిందల రోజు. పిల్లలు పుట్టడానికి సమయం వచ్చిందిగాని కనడానికి తల్లికి శక్తి లేదు.
4 ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು, ಎಂಬುದಾಗಿ ಹಿಜ್ಕೀಯನು ಅನ್ನುತ್ತಾನೆ,” ಎಂದು ಹೇಳಿದರು.
సజీవుడైన దేవుణ్ణి దూషించడానికి తన యజమాని అష్షూరు రాజు పంపిన రబ్షాకే పలికిన మాటలు నీ దేవుడు యెహోవా ఒకవేళ విని, ఆ మాటలను బట్టి ఆయన అష్షూరు రాజును గద్దిస్తాడేమో. కాబట్టి ఇప్పటికి బతికి ఉన్న మన కొద్దిమంది కోసం నువ్వు ఎక్కువగా ప్రార్థన చెయ్యి.’”
5 ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದು ಹೇಳಿದಾಗ,
హిజ్కియా రాజు సేవకులు యెషయా దగ్గరికి వచ్చారు.
6 ಯೆಶಾಯನು ಅವರಿಗೆ, “ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಕೇಳಿದಂಥ ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿದಂಥ ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.
యెషయా వారితో ఇలా అన్నాడు. “మీ యజమానికి ఈ మాట చెప్పండి, యెహోవా ఏమి చెబుతున్నాడంటే, అష్షూరు రాజు సేవకులు నన్ను దూషిస్తూ పలికిన మాటలకు భయపడవద్దు.
7 ಇಗೋ, ನಾನು ಅವರ ಮೇಲೆ ಆತ್ಮವನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತನ್ನ ದೇಶಕ್ಕೆ ಹಿಂದಿರುಗುವನು. ಇದಲ್ಲದೆ ಅವನು ತನ್ನ ದೇಶದಲ್ಲಿ ಖಡ್ಗಕ್ಕೆ ತುತ್ತಾಗುವಂತೆ ಮಾಡುವೆನು,’” ಎಂದು ಹೇಳಿದನು.
అతనిలో నేను ఒక ఆత్మను పుట్టిస్తాను. అతడు ఒక పుకారు విని తన దేశానికి తిరిగి వెళ్ళిపోతాడు. అతని దేశంలోనే కత్తివాత హతం అవుతాడు.”
8 ಹೀಗೆ ಸೈನ್ಯಾಧಿಕಾರಿಯು ಅಸ್ಸೀರಿಯದ ಅರಸನು ಲಾಕೀಷನ್ನು ಬಿಟ್ಟು ಹೊರಟಿದ್ದಾನೆಂದು ಕೇಳಿದಾಗ, ಅವನು ಲಿಬ್ನಕ್ಕೆ ಹೋಗಿ, ಅಲ್ಲಿ ಅರಸನು ಲಿಬ್ನದವರೊಂದಿಗೆ ಯುದ್ಧಮಾಡುತ್ತಿರುವುದನ್ನು ಕಂಡನು.
అష్షూరు రాజు లాకీషు పట్టణం విడిచి వెళ్లి లిబ్నా మీద యుద్ధం చేస్తున్నాడని తెలిసి రబ్షాకే తిరిగి వెళ్ళి అతనితో కలిశాడు.
9 ಅಷ್ಟರಲ್ಲಿ ಕೂಷನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೊರಟಿದ್ದಾನೆಂಬ ಸುದ್ದಿಯನ್ನು ಅಸ್ಸೀರಿಯದ ಅರಸನು ಕೇಳಿ,
కూషు రాజు తిర్హాకా తనపై యుద్ధం చేయడానికి వచ్చాడని అష్షూరురాజు సన్హెరీబు విన్నాడు. అప్పుడు అతడు తన దూతలతో హిజ్కియాకు ఒక సందేశం పంపాడు.
10 “ಹಿಜ್ಕೀಯನೇ, ನೀನು ನಂಬುವ ದೇವರು, ‘ಯೆರೂಸಲೇಮನ್ನು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ ನಿನ್ನನ್ನು ಮೋಸಗೊಳಿಸಾನು.
౧౦“యూదా రాజు హిజ్కియాతో ఇలా చెప్పండి, ‘నీ దేవుని చేతిలో మోసపోయి అష్షూరు రాజు యెరూషలేమును ఆక్రమించలేడని అనుకోవద్దు.
11 ಇಗೋ, ಅಸ್ಸೀರಿಯದ ಅರಸರು ಸಮಸ್ತ ದೇಶಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ನೀನು ಕೇಳಿದಿಯಲ್ಲಾ. ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವೆಯೋ?
౧౧అష్షూరు రాజులు సకల దేశాలనూ పూర్తిగా నాశనం చేసిన సంగతి నువ్వు విన్నావు కదా, నీవు మాత్రం తప్పించుకోగలవా?
12 ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?
౧౨నా పూర్వికులు నిర్మూలం చేసిన గోజాను, హారాను, రెజెపు, తెలశ్శారులో ఉండే ఏదెనీయులు, వీరిలో ఎవరైనా తమ దేవుళ్ళ సహాయంతో తప్పించుకున్నారా?
13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ,” ಎಂದು ಪತ್ರ ಬರೆದು ದೂತರ ಮುಖಾಂತರ ಕಳುಹಿಸಿದನು.
౧౩హమాతు, అర్పాదు, సెపర్వయీము, హేన, ఇవ్వా అనే పట్టణాల రాజులు ఏమయ్యారు?’”
14 ಹಿಜ್ಕೀಯನು ಆ ದೂತರ ಕೈಯಿಂದ ಪತ್ರವನ್ನು ತೆಗೆದುಕೊಂಡು ಓದಿದನು, ಅನಂತರ ಯೆಹೋವ ದೇವರ ಆಲಯಕ್ಕೆ ಹೋಗಿ ಅದನ್ನು ಯೆಹೋವ ದೇವರ ಮುಂದೆ ತೆರೆದಿಟ್ಟನು.
౧౪హిజ్కియా ఆ ఉత్తరం తీసుకుని, చదివి, యెహోవా మందిరంలోకి వెళ్లి ఆయన సన్నిధిలో దాన్ని ఉంచాడు.
15 ಇದಲ್ಲದೆ ಹಿಜ್ಕೀಯನು ಯೆಹೋವ ದೇವರ ಮುಂದೆ ಪ್ರಾರ್ಥನೆಮಾಡಿ ಹೇಳಿದ್ದೇನೆಂದರೆ,
౧౫తరువాత ఈ విధంగా ప్రార్థన చేశాడు,
16 “ಸೇನಾಧೀಶ್ವರ ಯೆಹೋವ ದೇವರೇ, ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.
౧౬“యెహోవా, కెరూబుల మధ్య నివసించే ఇశ్రాయేలీయుల దేవా, భూమ్యాకాశాలను సృష్టించిన అద్వితీయ దేవా, నీవు ఈ లోక రాజ్యాలన్నిటిపై దేవుడివి.
17 ಯೆಹೋವ ದೇವರೇ, ನಿಮ್ಮ ಕಿವಿಗೊಟ್ಟು ಕೇಳಿರಿ. ಯೆಹೋವ ದೇವರೇ, ನಿಮ್ಮ ಕಣ್ಣುಗಳನ್ನು ತೆರೆದು ನೋಡಿರಿ. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತುಗಳನ್ನು ಕೇಳಿರಿ.
౧౭సేనల ప్రభువైన యెహోవా, నీ కళ్ళు తెరచి చూసి నా మాటలు ఆలకించు. జీవం గల దేవుడవైన నిన్ను దూషిస్తూ సన్హెరీబు రాసిన మాటలు విను.
18 “ಯೆಹೋವ ದೇವರೇ, ಅಸ್ಸೀರಿಯದ ಅರಸರು ಸಕಲ ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ, ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ.
౧౮యెహోవా, అష్షూరు రాజులు వివిధ జాతుల ప్రజలనూ వారి దేశాలనూ నాశనం చేసి వారి దేవుళ్ళను అగ్నిలో వేసింది నిజమే.
19 ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ.
౧౯ఆ రాజ్యాల దేవుళ్ళు నిజమైనవారు కారు. చెక్కతో రాళ్ళతో మనుషులు చేసిన వారు కనుక అష్షూరు రాజులు వారిని నిర్మూలం చేశారు.
20 ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.
౨౦యెహోవా, ఈ లోకంలో నీవే, నిజంగా నీవే అద్వితీయ దేవుడవైన యెహోవా అని మనుషులంతా గ్రహించేలా అతని చేతిలో నుండి మమ్మల్ని రక్షించు.”
21 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನೆಂದರೆ, “ನೀನು ಅಸ್ಸೀರಿಯದ ಅರಸನಾದ ಸನ್ಹೇರೀಬನನ್ನು ಕುರಿತು, ಇಸ್ರಾಯೇಲಿನ ಯೆಹೋವ ದೇವರಿಗೆ ಪ್ರಾರ್ಥನೆ ಮಾಡಿದ್ದನ್ನು ಕೇಳಿ,
౨౧అప్పుడు ఆమోజు కొడుకు యెషయా హిజ్కియా దగ్గరికి ఈ సందేశం పంపాడు. “ఇశ్రాయేలీయుల దేవుడైన యెహోవా చెప్పేదేమిటంటే”, అష్షూరు రాజు సన్హెరీబు విషయం నీవు నా ఎదుట ప్రార్థన చేశావు కదా,
22 ಅವನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: “ಕನ್ನಿಕೆಯಾದ ಚೀಯೋನ್ ಪುತ್ರಿಯು ನಿನ್ನನ್ನು ತಿರಸ್ಕರಿಸಿ, ನಿನಗೆ ಅಪಹಾಸ್ಯ ಮಾಡುತ್ತಾಳೆ. ಯೆರೂಸಲೇಮಿನ ಪುತ್ರಿಯು ನೀನು ಓಡಿ ಹೋಗುವಾಗ ತನ್ನ ತಲೆಯಾಡಿಸುತ್ತಾಳೆ.
౨౨అతని గూర్చి యెహోవా సెలవిచ్చే మాట ఇదే, “కన్య అయిన సీయోను ఆడపడుచు నిన్ను తిరస్కరించి, అపహసిస్తున్నది, యెరూషలేము కుమారి నిన్ను చూసి తల ఊపుతూ ఉంది.
23 ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದೆ? ಯಾರಿಗೆ ವಿರೋಧವಾಗಿ ನಿನ್ನ ಧ್ವನಿಯನ್ನು ಎತ್ತಿದ್ದೀ? ನಿನ್ನ ಕಣ್ಣುಗಳು ಗರ್ವದಿಂದ ನೋಡಿದ್ದು ಯಾರನ್ನು? ಇಸ್ರಾಯೇಲಿನ ಪರಿಶುದ್ಧ ದೇವರಿಗೆ ವಿರೋಧವಾಗಿಯಲ್ಲವೇ?
౨౩నువ్వు ఎవరిని తిరస్కరించావు? ఎవరిని దూషించావు? గర్వంతో ఎవరిని భయపెట్టాలని చూశావు? పరిశుద్ధుడైన ఇశ్రాయేలీయుల దేవుణ్ణి కదా?
24 ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು, ‘ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಉನ್ನತವಾದ ಸ್ಥಳವನ್ನೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.
౨౪నీ దూతల ద్వారా యెహోవాను తిరస్కరించి నువ్వు ఇలా పలికావు, ‘నా గొప్ప రథాల గుంపుతో నేను పర్వత శిఖరాల మీదకీ ఉన్నతమైన లెబానోను స్థలాల పైకీ ఎక్కాను. ఎత్తయిన దాని దేవదారు చెట్లూ శ్రేష్ఠమైన సరళ చెట్లూ నరికేశాను. వాటికి బహు దూరంలో సరిహద్దుల్లో ఉన్న సత్రాల్లోకి, ఫలవంతమైన అడవిలోకి ప్రవేశించాను.
25 ಪರದೇಶಗಳಲ್ಲಿ ನಾನು ಬಾವಿಗಳನ್ನು ಅಗೆದು, ನೀರು ಕುಡಿದಿದ್ದೇನೆ. ನನ್ನ ಅಂಗಾಲುಗಳಿಂದ ಈಜಿಪ್ಟಿನವರ ಎಲ್ಲಾ ನದಿಗಳನ್ನು ಬತ್ತಿಹೋಗುವಂತೆ ಮಾಡಿದ್ದೇನೆ, ಎಂದು ಕೊಚ್ಚಿಕೊಂಡಿದ್ದೀ.’
౨౫నేను బావులు తవ్వి అక్కడి నీళ్లు తాగాను. నా అరకాలి కింద ఐగుప్తు నదులన్నిటిని ఎండిపోయేలా చేశాను.’
26 “ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ
౨౬అయితే దీన్ని నేనే ఎప్పుడో నిర్ణయించాననీ, పూర్వకాలంలోనే దీన్ని ఏర్పాటు చేశాననీ నీకు వినబడలేదా? నువ్వు ప్రాకారాలు గల పట్టణాలను పాడుదిబ్బలుగా చేయడం నా వల్లనే జరిగింది.
27 ಆದ್ದರಿಂದ ಅವುಗಳ ನಿವಾಸಿಗಳು ಬಲಹೀನರಾಗಿ ಹೆದರಿ ಆಶಾಭಂಗಹೊಂದಿ ನಾಚಿಕೆಪಟ್ಟರು. ಅವರು ಹೊಲದ ಹುಲ್ಲಿನಂತೆಯೂ, ಹಸಿರು ಸಸಿಗಳಂತೆಯೂ, ಮಾಳಿಗೆಯ ಮೇಲಿನ ಹುಲ್ಲಿನಂತೆಯೂ, ಬೆಳೆಯುವುದಕ್ಕಿಂತ ಮುಂಚೆಯೇ ಬಾಡಿಹೋಗುವ ಪೈರಿನಂತೆಯೂ ಅವರಿದ್ದಾರೆ.
౨౭అందుకే వాటి ప్రజలు బలహీనులై చెదరిపోయారు. భయంతో పొలంలోని గడ్డిలాగా, బలం లేని కాడల్లాగా మారారు.
28 “ಆದರೆ ನೀನು ಎಲ್ಲಿ ವಾಸಿಸುವೆಯೆಂಬುದನ್ನು ನೀನು ಯಾವಾಗ ಬರುವೆ ಹೋಗುವೆ ಎಂಬುದನ್ನು ನೀನು ನನ್ನ ಮೇಲೆ ಹೇಗೆ ಕೋಪಿಸಿಕೊಳ್ಳುವೆ? ಎಂಬುದನ್ನು ನಾನು ಬಲ್ಲೆನು.
౨౮నువ్వు కూర్చోవడం, బయటికి వెళ్ళడం, లోపలి రావడం, నా మీద రంకెలు వేయడం నాకు తెలుసు.
29 ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ; ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು.
౨౯నా మీద నువ్వు వేసే రంకెలు, నీవు చూపిన అహంకారం నా దాకా వచ్చాయి. కాబట్టి నీ ముక్కుకి నా గాలం తగిలిస్తాను. నా కళ్ళెం నీ నోటిలో పెట్టి నిన్ను మళ్లిస్తాను. నీవు వచ్చిన దారిలోనే నిన్ను తిప్పి పంపుతాను.”
30 “ಹಿಜ್ಕೀಯನೇ, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವುದೇ ನಿಮಗೆ ಸಂಕೇತವಾಗಿರುವದು.
౩౦యెషయా ఇంకా ఇలా చెప్పాడు. “హిజ్కియా, నీకిదే సూచన. ఈ సంవత్సరం దానంతట అదే పండే ధాన్యాన్నీ, రెండో సంవత్సరంలో దాని నుండి కలిగే ధాన్యాన్నీ మీరు తింటారు. మూడో సంవత్సరంలో మీరు విత్తనం చల్లి పంట కోస్తారు. ద్రాక్షతోటలు నాటి వాటిఫలం అనుభవిస్తారు.
31 ಯೆಹೂದದ ಮನೆತನದಲ್ಲಿ ತಪ್ಪಿಸಿಕೊಂಡು ಉಳಿದವರು ತಿರುಗಿ, ದೇಶದಲ್ಲಿ ಬೇರೂರಿ ನೆಲೆಗೊಂಡು ಅಭಿವೃದ್ಧಿಯಾಗುವರು.
౩౧యూదా వంశంలో తప్పించుకొన్న శేషం బాగా వేరుతన్ని ఎదిగి ఫలిస్తారు.
32 ಏಕೆಂದರೆ ಯೆರೂಸಲೇಮಿನಿಂದ ಉಳಿದವರೂ, ಚೀಯೋನ್ ಪರ್ವತದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೇನಾಧೀಶ್ವರ ಯೆಹೋವ ದೇವರ ಆಸಕ್ತಿಯು ಇದನ್ನು ನೆರವೇರಿಸುವುದು.
౩౨మిగిలినవారు యెరూషలేములో నుండి, తప్పించుకొన్న వారు సీయోను కొండలో నుండి బయలుదేరతారు. సైన్యాల అధిపతి యెహోవా ఆసక్తి దీన్ని నెరవేరుస్తుంది.
33 “ಆದ್ದರಿಂದ ಯೆಹೋವ ದೇವರು ಅಸ್ಸೀರಿಯದ ಅರಸನನ್ನು ಕುರಿತು ಹೀಗೆ ಹೇಳುತ್ತಾರೆ: “ಅವನು ಈ ಪಟ್ಟಣದೊಳಗೆ ಬರುವುದಿಲ್ಲ. ಅಲ್ಲಿ ಬಾಣವನ್ನು ಎಸೆಯುವುದಿಲ್ಲ. ಗುರಾಣಿಯೊಂದಿಗೆ ಅದರ ಮುಂದೆ ಬರಲಾರನು. ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಲು ದಿಬ್ಬವನ್ನು ನಿರ್ಮಿಸುವುದಿಲ್ಲ.
౩౩కాబట్టి అష్షూరు రాజు గూర్చి యెహోవా చెప్పేది ఏమంటే, ‘అతడు ఈ పట్టణంలోకి రాడు. దాని మీద ఒక బాణం కూడా విసరడు. ఒక్క డాలైనా ఆడించడు, దాని ఎదుట ముట్టడి దిబ్బ కట్టడు.
34 ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು, ಈ ಪಟ್ಟಣದೊಳಗೆ ಬರುವುದೇ ಇಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
౩౪ఈ పట్టణం లోపలికి రాకుండా తాను వచ్చిన దారిలోనే అతడు తిరిగి పోతాడు.’ ఇదే యెహోవా వాక్కు.
35 “ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.”
౩౫నా నిమిత్తమూ నా సేవకుడైన దావీదు నిమిత్తమూ నేను ఈ పట్టణాన్ని కాపాడి రక్షిస్తాను.”
36 ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.
౩౬అప్పుడు యెహోవా దూత వెళ్ళి అష్షూరువారి సైనిక పటాలంలో 1, 85,000 మందిని హతమార్చాడు. ఉదయాన్నే ప్రజలు చూసినప్పుడు వారంతా శవాలుగా పడి ఉన్నారు.
37 ಆಗ ಅಸ್ಸೀರಿಯದ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.
౩౭అష్షూరు రాజు సన్హెరీబు తిరిగి నీనెవె పట్టణానికి వెళ్ళిపోయాడు.
38 ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಆಲಯದಲ್ಲಿ ಆರಾಧನೆ ಮಾಡುತ್ತಿರುವಾಗ, ಅವನ ಮಕ್ಕಳಾದ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಖಡ್ಗದಿಂದ ಕೊಂದು, ಅರಾರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
౩౮ఆ తరవాత అతడు నిస్రోకు అనే తన దేవత మందిరంలో పూజలు చేస్తూ ఉన్నప్పుడు అద్రమ్మెలెకు, షెరెజెరు అనే అతని కొడుకులు అతణ్ణి కత్తితో చంపి అరారాతు దేశంలోకి పారిపోయారు. అప్పుడు అతని కొడుకు ఏసర్హద్దోను అతనికి బదులుగా రాజయ్యాడు.

< ಯೆಶಾಯನು 37 >