< ಯೆರೆಮೀಯನು 27 >
1 ಯೆಹೂದದ ಅರಸನಾದ ಯೋಷೀಯನ ಮಗನೂ, ಯೆಹೋಯಾಕೀಮನ ದೊರೆತನದ ಪ್ರಾರಂಭದಲ್ಲಿ ಈ ವಾಕ್ಯವು ಯೆಹೋವ ದೇವರಿಂದ ಯೆರೆಮೀಯನಿಗೆ ಬಂತು.
၁ယုဒပြည်တွင်ယောရှိ၏သားဇေဒကိနန်း တက်ပြီးနောက် များမကြာမီထာဝရ ဘုရားသည်ငါ့အားမိန့်တော်မူသည်မှာ၊-
2 ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು.
၂``သားရေကြိုးများ၊ ကန့်လန့်ဖြတ်သစ်သား တန်းများဖြင့်နွားထမ်းပိုးပြုလုပ်၍သင် ၏လည်ကုပ်တွင်တင်လော့။-
3 ಅವುಗಳನ್ನು ಎದೋಮಿನ ಅರಸನಿಗೂ, ಮೋವಾಬಿನ ಅರಸನಿಗೂ, ಅಮ್ಮೋನ್ಯರ ಅರಸನಿಗೂ, ಟೈರಿನ ಅರಸನಿಗೂ, ಸೀದೋನಿನ ಅರಸನಿಗೂ, ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಕೈಯಿಂದ ಕಳುಹಿಸು.
၃ထိုနောက်ဇေဒကိမင်းနှင့်တွေ့ဆုံရန်ယေရု ရှလင်မြို့သို့ရောက်ရှိလာသောသံတမန် များမှတစ်ဆင့်ဧဒုံမင်း၊ မောဘမင်း၊ အမ္မုန် မင်း၊ တုရုမင်းနှင့်ဇိဒုန်မင်းတို့ထံသို့ သတင်းပေးပို့လော့'' ဟုမိန့်တော်မူ၏။-
4 ‘ಇಸ್ರಾಯೇಲರ ದೇವರೂ ಸೇನಾಧೀಶ್ವರರೂ ಆದ ಯೆಹೋವ ದೇವರು ನಿಮ್ಮ ಯಜಮಾನರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾರೆ ಎಂಬುದಾಗಿ ಹೇಳಿ ಅವರು, “ತಮ್ಮ ತಮ್ಮ ಯಜಮಾನರಿಗೆ ಹೀಗೆ ಹೇಳಬೇಕು:
၄ဣသရေလအမျိုးသားတို့၏ဘုရားသခင် အနန္တတန်ခိုးရှင်ထာဝရဘုရားသည်ငါ့ အား``သင်သည်ထိုသံတမန်များမှတစ်ဆင့် မိမိတို့၏ဘုရင်များအားဤသို့ပြော ကြားစေလော့။-
5 ನಾನೇ ಭೂಮಿಯನ್ನೂ, ಭೂಮಿಯ ಮೇಲಿರುವ ಮನುಷ್ಯರನ್ನೂ, ಮೃಗಗಳನ್ನೂ ನನ್ನ ಮಹಾ ಬಲದಿಂದಲೂ, ನನ್ನ ಚಾಚಿದ ಕೈಯಿಂದಲೂ ಉಂಟುಮಾಡಿ, ನನಗೆ ಸರಿ ತೋಚಿದವರಿಗೆ ಅದನ್ನು ಕೊಟ್ಟಿದ್ದೇನೆ.
၅ငါသည်မိမိ၏ကြီးမားသောတန်ခိုးစွမ်း ရည်တော်ဖြင့်ကမ္ဘာမြေပေါ်ရှိလူများ၊ တိ ရစ္ဆာန်များနှင့်တကွကမ္ဘာလောကကိုဖန် ဆင်းတော်မူခဲ့သည်ဖြစ်၍ ထိုကမ္ဘာလောက ကိုမိမိ၏ဆန္ဒအလျောက်အဘယ်သူ့အား မဆိုပေးအပ်နိုင်ပေသည်။-
6 ಈಗ ಈ ನಾಡುಗಳನ್ನೆಲ್ಲಾ ಬಾಬಿಲೋನಿಯದ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶ ಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ.
၆လူမျိုးတကာတို့အားငါ၏အစေခံနေ ဗုခဒ်နေဇာ၏လက်အောက်သို့ကျရောက်စေ သူမှာငါပင်ဖြစ်၏။ ငါသည်တောတိရစ္ဆာန် များကိုပင်လျှင်သူ၏အစေကိုခံစေလေ ပြီ။-
7 ಅವನ ದೇಶಕ್ಕೆ ನಿಯಮಿತ ಕಾಲ ಬರುವ ತನಕ, ಎಲ್ಲ ರಾಷ್ಟ್ರಗಳು ಅವನಿಗೂ, ಅವನ ಮಗನಿಗೂ, ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ, ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು,” ಎಂಬುದು.
၇သူ၏နိုင်ငံပျက်သုဉ်းချိန်မရောက်မချင်း လူမျိုးတကာတို့သည်သူ၏အစေကိုလည်း ကောင်း၊ သူ၏သားနှင့်မြေးတို့၏အစေကို လည်းကောင်းခံရကြလိမ့်မည်။ ထိုနောက်သူ ၏လူမျိုးသည်တန်ခိုးကြီးမားသည့်လူမျိုး များနှင့်ဘုရင်တို့၏အစေကိုခံရကြလိမ့် မည်။
8 “‘“ಆದರೆ ಯಾವುದೇ ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲು ಕೊಡಲು ಒಪ್ಪದೆ ಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೇ ಅದನ್ನು ನಿರ್ಮೂಲ ಮಾಡಿಸುವೆನು, ಇದು ಯೆಹೋವ ದೇವರಾದ ನನ್ನ ನುಡಿ.
၈သို့ရာတွင်ဘယ်လူမျိုးသို့မဟုတ်ဘယ် နိုင်ငံသည် ထိုမင်း၏အုပ်စိုးမှုကိုမခံဘဲ နေလျှင် ထိုလူမျိုးအားနေဗုခဒ်နေဇာ မဖျက်ဆီးမီတိုင်အောင်စစ်မက်အန္တရာယ်၊ ငတ်မွတ်ခေါင်းပါးခြင်းဘေးနှင့်အနာ ရောဂါဘေးတို့ဖြင့်ငါသည်အပြစ်ဒဏ် ခတ်တော်မူမည်။-
9 ‘ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ,’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ.
၉အိပ်မက်အနက်ဖွင့်သူများ၊ လူသေဝိညာဉ် များကိုခေါ်ယူ၍ မှော်အတတ်အားဖြင့် အနာဂတ်ကိုဟောနိုင်သည်ဟုဆိုသူများ၊ သို့မဟုတ်သင်တို့၏ပရောဖက်များ၏ စကားကိုနားမထောင်ကြနှင့်။ သူတို့ အားလုံးပင်လျှင်သင်တို့အားဗာဗုလုန် ဘုရင်၏အစေကိုမခံရန်ပြောကြား ကြ၏။-
10 ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ದೇಶ ಭ್ರಷ್ಟರಾಗಿ ನಾಶವಾಗುವಿರಿ.
၁၀သူတို့သည်သင်တို့အားလိမ်လည်ဟောပြော လျက်နေကြ၏။ ထို့ကြောင့်သင်တို့သည်မိမိ တို့ပြည်မှရပ်ဝေးသို့ခေါ်ဆောင်ခြင်းကိုခံရ လိမ့်မည်။ ငါသည်လည်းသင်တို့ကိုနှင်ထုတ် မည်။ သင်တို့သည်သေကြေပျက်စီးကြလိမ့် မည်။-
11 ಯಾವ ರಾಷ್ಟ್ರ ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನ ಅಡಿಯಾಳಾಗುವುದೋ; ಆ ರಾಷ್ಟ್ರದವರನ್ನು ನಾನು ಅವರ ಸ್ವಂತ ನಾಡಿನಲ್ಲೇ ನೆಲೆಗೊಳಿಸುವೆನು. ಅವರು ಅಲ್ಲೇ ಉತ್ತು, ಬಿತ್ತು ವಾಸಮಾಡುವರು. ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ.”’”
၁၁သို့သော်အကြင်လူမျိုးသည်ဗာဗုလုန်ဘုရင် ၏ထမ်းပိုးအောက်တွင် အညံ့ခံ၍သူ၏အစေ ကိုခံ၏။ ထိုလူမျိုးအားငါသည်မိမိတို့တိုင်း ပြည်တွင် ထွန်ယက်လုပ်ကိုင်နေထိုင်ခွင့်ကိုပေး တော်မူမည်။ ဤကားငါထာဝရဘုရား မြွက်ဟသည့်စကားဖြစ်၏'' ဟုမိန့်တော် မူ၏။
12 ಯೆಹೂದದ ಅರಸ ಚಿದ್ಕೀಯನಿಗೂ ನಾನು ಅದೇ ಮಾತುಗಳನ್ನು ಹೇಳಿದೆ: “ನೀವು ಬಾಬಿಲೋನಿನ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನಿಗೂ, ಅವನ ಜನರಿಗೂ ಅಡಿಯಾಳಾಗಬೇಕು. ಆಗ ಬದುಕುವಿರಿ.
၁၂ငါသည်ယုဒဘုရင်ဟေဇကိအားလည်း အထက်ပါအတိုင်းလျှောက်၏။ ငါက``အရှင် သည်ဗာဗုလုန်ဘုရင်၏ထမ်းပိုးအောက်တွင် အညံ့ခံပါလော့။ ထိုဘုရင်နှင့်သူ၏အမျိုး သားများ၏အစေကိုခံပါမူအသက်ချမ်း သာရာရပါလိမ့်မည်။-
13 ಬಾಬಿಲೋನಿಯದ ಅರಸನ ಅಡಿಯಾಳಾಗಲು ನಿರಾಕರಿಸಿದ ರಾಷ್ಟ್ರವು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯಬೇಕಾಗುವುದೆಂದು ಯೆಹೋವ ದೇವರೇ ನುಡಿದಿದ್ದಾರೆ. ಅಂಥ ಗತಿ ನಿಮಗೂ, ನಿಮ್ಮ ಪ್ರಜೆಗೂ ಏಕೆ ಬರಬೇಕು?
၁၃အရှင်နှင့်အရှင်၏အမျိုးသားတို့သည် အဘယ် ကြောင့်စစ်ပွဲတွင်ကျဆုံး၍ငတ်မွတ်ခေါင်းပါး ခြင်းဘေး၊ သို့မဟုတ်အနာရောဂါဘေးသင့်၍ သေရကြပါမည်နည်း။ ဗာဗုလုန်၏အစေကို မခံသည့်လူမျိုးသည် ဤနည်းအတိုင်းဖြစ်ရ လိမ့်မည်ဟုထာဝရဘုရားမိန့်တော်မူပါပြီ။-
14 ‘ನೀವು ಬಾಬಿಲೋನಿಯದ ಅರಸನ ಅಡಿಯಾಳಾಗುವುದಿಲ್ಲ,’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ, ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.
၁၄ဗာဗုလုန်မင်း၏အစေကိုမခံရန်အရှင့်အား ပြောဆိုကြသည့်ပရောဖက်တို့၏စကား ကိုနားထောင်တော်မမူပါနှင့်။ သူတို့သည် အရှင့်အားလိမ်လည်ပြောဆိုနေခြင်းဖြစ် ပါ၏။-
15 ಅವರನ್ನು ನಾನು ಕಳುಹಿಸಲಿಲ್ಲ, ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಮತ್ತು ನಿಮಗೆ ಪ್ರವಾದಿಸುವ ಪ್ರವಾದಿಗಳನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಯೆಹೋವ ದೇವರೇ ನುಡಿದಿದ್ದಾರೆ.”
၁၅ထာဝရဘုရားကိုယ်တော်တိုင်ကထိုသူတို့ အား မိမိစေလွှတ်တော်မမူကြောင်းမိန့်တော် မူပါပြီ။ သူတို့သည်ကိုယ်တော်၏နာမတော် ကိုအမှီပြု၍ လိမ်လည်ဟောပြောလျက်နေ ကြပါ၏။ သို့ဖြစ်၍ထာဝရဘုရားသည် အရှင့်အားနှင်ထုတ်တော်မူပါလိမ့်မည်။ အရှင်နှင့်တကွအရှင့်အားလိမ်လည် ဟောပြောကြသည့်ပရောဖက်များသည် သေကြေပျက်စီးရကြပါလိမ့်မည်'' ဟု လျှောက်ထား၏။
16 ಬಳಿಕ ನಾನು ಯಾಜಕರಿಗೂ, ಈ ಜನರೆಲ್ಲರಿಗೂ ಹೀಗೆಂದು ಸಾರಿದೆ: “ಇಗೋ, ಕೇಳಿ ಯೆಹೋವ ದೇವರ ನುಡಿ: ‘ದೇವಾಲಯದ ಉಪಕರಣಗಳನ್ನು ಬೇಗನೆ ಬಾಬಿಲೋನಿನಿಂದ ಹಿಂದಕ್ಕೆ ತರಲಾಗುವುದು,’ ಎಂಬುದಾಗಿ ನಿಮಗೆ ಪ್ರವಾದಿಸುವವರ ಮಾತುಗಳನ್ನು ಕೇಳಬೇಡಿ, ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.
၁၆ထိုနောက်ငါသည်ထာဝရဘုရားအားအဘယ် သို့မိန့်တော်မူသည်ကို ယဇ်ပုရောဟိတ်များနှင့် ပြည်သူတို့အားဆင့်ဆို၏။ ထာဝရဘုရား က``ဗိမာန်တော်ဘဏ္ဍာများသည်ဗာဗုလုန် ပြည်မှမကြာမီပြန်လည်ရောက်ရှိလာ လိမ့်မည်ဟု ဟောပြောသည့်ပရောဖက်တို့ ၏စကားကိုနားမထောင်ကြနှင့်။ သူ တို့သည်သင်တို့အားလိမ်လည်နေကြ ခြင်းဖြစ်၏။-
17 ಅವರಿಗೆ ನೀವು ಕಿವಿಗೊಡಲೇಬಾರದು. ಬಾಬಿಲೋನಿಯದ ಅರಸನಿಗೆ ಅಡಿಯಾಳಾಗಿರಿ. ಆಗ ಬದುಕುವಿರಿ. ಈ ನಗರವೇಕೆ ನಾಶವಾಗಬೇಕು?
၁၇သူတို့၏စကားကိုနားမထောင်ကြနှင့်။ ဗာ ဗုလုန်မင်း၏အစေကိုခံကြလော့။ သို့ပြု လျှင်သင်တို့အသက်ချမ်းသာရာရလိမ့်မည်။ ဤမြို့သည်အဘယ်ကြောင့်ယိုယွင်းပျက်စီး ၍သွားရပါမည်နည်း။-
18 ಅವರು ನಿಜವಾದ ಪ್ರವಾದಿಗಳಾಗಿದ್ದರೆ, ಯೆಹೋವ ದೇವರ ವಾಕ್ಯ ಅವರಲ್ಲಿ ನೆಲಸಿದ್ದರೆ, ದೇವಾಲಯದಲ್ಲೂ, ಯೆಹೂದದ ಅರಸನ ಅರಮನೆಯಲ್ಲೂ, ಯೆರೂಸಲೇಮಿನಲ್ಲೂ, ಇನ್ನು ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಸೇನಾಧೀಶ್ವರ ಯೆಹೋವ ದೇವರಿಗೆ ವಿಜ್ಞಾಪನೆಮಾಡಿ ಬೇಡಿಕೊಳ್ಳಲಿ.
၁၈အကယ်၍ထိုသူတို့သည်ပရောဖက်အစစ် အမှန်ဖြစ်၍ ငါ၏ဗျာဒိတ်တော်ကိုခံယူရ သည်ဆိုပါမူ ယေရုရှလင်မြို့ဗိမာန်တော်နှင့် ဘုရင်နန်းတော်တို့တွင်ကျန်ရှိသည့်ဘဏ္ဍာတို့ ကိုဗာဗုလုန်မြို့သို့သိမ်းယူခွင့်မပြုရန် အနန္တ တန်ခိုးရှင်ငါထာဝရဘုရားအား လျှောက် ထားကြပါစေ။''
19 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ, ಯೆಹೂದದ ಅರಸನೂ ಆದ ಯೆಕೊನ್ಯನನ್ನು ಮತ್ತು ಯೆಹೂದದ ಹಾಗೂ ಯೆರೂಸಲೇಮಿನ ಎಲ್ಲ ಮಂತ್ರಿಗಳನ್ನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ, ಕೆಲವು ವಸ್ತುಗಳನ್ನು ಅಂದರೆ ಕಂಬಗಳು, ಕಂಚಿನ ಕಡಲು, ಪೀಠಗಳು, ನಗರದಲ್ಲಿ ಉಳಿದಿರುವ ಮತ್ತಿತರ ಉಪಕರಣಗಳು ಇವನ್ನು ತೆಗೆದುಕೊಂಡು ಹೋಗಲಿಲ್ಲ.
၁၉(ဗာဗုလုန်ဘုရင်နေဗုခဒ်နေဇာမင်းသည် ယောယကိမ်၏သားယုဒဘုရင်ယေခေါနိ အားလည်းကောင်း၊ ယုဒပြည်နှင့်ယေရုရှလင် မြို့မှဦးစီးခေါင်းဆောင်များအားလည်းကောင်း၊ ယေရုရှလင်မြို့မှဗာဗုလုန်မြို့သို့ခေါ်ဆောင် သွားစဉ်အခါကချန်ထားခဲ့သည့်ကြေးဝါ တိုင်ကြီးများ၊ ကြေးဝါရေကန်များနှင့်အောက် ခံခုံများ၊ အခြားဗိမာန်တော်ဘဏ္ဍာအချို့ တို့ကိုချန်ထားခဲ့လေသည်။
21 ದೇವಾಲಯದಲ್ಲೂ, ಯೆಹೂದದ ಅರಸನ ಅರಮನೆಯಲ್ಲೂ, ಯೆರೂಸಲೇಮಿನಲ್ಲೂ ಉಳಿದಿರುವ ಈ ಉಪಕರಣಗಳ ವಿಷಯವಾಗಿ ಇಸ್ರಾಯೇಲರ ದೇವರೂ ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ:
၂၁``ယေရုရှလင်မြို့ဗိမာန်တော်နှင့်ဘုရင်နန်း တော်တွင်ချန်ထားခဲ့သည့်ဘဏ္ဍာများနှင့်ပတ် သက်၍ ဣသရေလအမျိုးသားတို့၏ဘုရားသခင်အနန္တတန်ခိုးရှင် ငါထာဝရဘုရား မိန့်တော်မူသည့်စကားကိုနားထောင်ကြလော့။-
22 ‘ಅವುಗಳನ್ನು ಬಾಬಿಲೋನಿಗೆ ಒಯ್ಯಲಾಗುವುದು. ನಾನು ಬಿಡಿಸುವತನಕ ಅವು ಅಲ್ಲೇ ಇರುವುವು. ಬಳಿಕ ನಾನು ಅವುಗಳನ್ನು ತಂದು ಈ ಸ್ಥಳಕ್ಕೆ ಸೇರಿಸುವೆನು.’ ಇದು ಯೆಹೋವ ದೇವರಾದ ನನ್ನ ನುಡಿ.”
၂၂ထိုဘဏ္ဍာတို့သည်ဗာဗုလုန်မြို့သို့ယူဆောင် သွားပြီးလျှင် ယင်းတို့အားငါတစ်ဖန်ဂရု စိုက်သည့်အချိန်တိုင်အောင်ထိုမြို့တွင်ရှိနေ လိမ့်မည်။ ထိုနောက်ငါသည်ထိုဘဏ္ဍာများကို ဤဌာနတော်သို့ပြန်လည်ပို့ဆောင်မည်။ ဤ ကားငါထာဝရဘုရားမြွက်ဟသည့် စကားဖြစ်၏'' ဟုမိန့်တော်မူကြောင်း ဆင့်ဆိုပြောကြားလေသည်။