< ಯೆರೆಮೀಯನು 28 >

1 ಅದೇ ವರ್ಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ ಗಿಬ್ಯೋನಿನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾದಿಯು ಯೆಹೋವ ದೇವರ ಆಲಯದಲ್ಲಿ ಯಾಜಕರ ಮುಂದೆಯೂ, ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನೆಂದರೆ,
యూదా రాజు సిద్కియా పరిపాలన మొదట్లో నాలుగో సంవత్సరం అయిదో నెలలో గిబియోనువాడు, అజ్జూరు ప్రవక్త కొడుకు హనన్యా యాజకుల ఎదుట, ప్రజలందరి ఎదుట యెహోవా మందిరంలో నాతో ఇలా అన్నాడు,
2 “ಇಸ್ರಾಯೇಲಿನ ದೇವರೂ ಸೇನಾಧೀಶ್ವರ ಯೆಹೋವ ದೇವರೂ ಹೀಗೆ ಹೇಳುತ್ತಾರೆ: ‘ನಾನು ಬಾಬಿಲೋನಿನ ಅರಸನ ನೊಗವನ್ನು ಮುರಿದಿದ್ದೇನೆ.
“ఇశ్రాయేలు దేవుడు, సేనల అధిపతి యెహోవా ఇలా చెబుతున్నాడు, ‘నేను బబులోను రాజు కాడిని విరిచేశాను.
3 ಎರಡು ವರ್ಷದೊಳಗಾಗಿ ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದುಕೊಂಡು, ಬಾಬಿಲೋನಿಗೆ ಒಯ್ದ ಯೆಹೋವ ದೇವರ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.
రెండేళ్లలో బబులోను రాజు నెబుకద్నెజరు ఈ స్థలంలో నుంచి బబులోనుకు తీసుకుపోయిన యెహోవా మందిరంలోని పాత్రలన్నీ ఇక్కడికి మళ్ళీ తెప్పిస్తాను.
4 ಯೆಹೂದದ ಅರಸನಾದ ಯೆಹೋಯಾಕೀಮನ ಮಗ ಯೆಕೊನ್ಯನನ್ನು ಬಾಬಿಲೋನಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಬಾಬಿಲೋನಿನ ಅರಸನ ನೊಗವನ್ನು ಮುರಿದುಬಿಡುವೆನು.”
బబులోను రాజు కాడిని విరగగొట్టి యెహోయాకీము కొడుకు యూదా రాజు యెకొన్యాను, బబులోనుకు బందీలుగా తీసుకుపోయిన యూదులందరినీ ఈ స్థలానికి తిరిగి రప్పిస్తాను.’ ఇదే యెహోవా వాక్కు.”
5 ಆಗ ಪ್ರವಾದಿಯಾದ ಯೆರೆಮೀಯನು ಯಾಜಕರ ಮುಂದೆಯೂ, ಯೆಹೋವ ದೇವರ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯನಿಗೆ,
అప్పుడు ప్రవక్త అయిన యిర్మీయా యాజకుల ఎదుట, యెహోవా మందిరంలో నిలబడి ఉన్న ప్రజలందరి ఎదుట హనన్యా ప్రవక్తతో ఇలా అన్నాడు,
6 “ಆಮೆನ್, ಯೆಹೋವ ದೇವರು ಹಾಗೆಯೇ ಮಾಡಲಿ; ನೀನು ಪ್ರವಾದಿಸಿದೆ; ನಿನ್ನ ವಾಕ್ಯಗಳನ್ನು ಯೆಹೋವ ದೇವರು ನೆರವೇರಿಸಿ, ಯೆಹೋವ ದೇವರ ಆಲಯದ ಪಾತ್ರೆಗಳನ್ನೂ, ಸೆರೆಯವರೆಲ್ಲರನ್ನೂ ಬಾಬಿಲೋನಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.
“యెహోవా దీనిని చేస్తాడు గాక! యెహోవా మందిరపు పాత్రలన్నీ బందీలుగా తీసుకుపోయిన వారందరినీ యెహోవా బబులోనులో నుంచి ఈ స్థలానికి తెప్పించి నువ్వు ప్రకటించిన మాటలను నెరవేరుస్తాడు గాక!
7 ಆದರೂ ನಾನು ನಿನಗೂ, ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು.
అయినా నువ్వు వింటుండగా ఈ ప్రజలందరూ వింటుండగా నేను చెబుతున్న మాట విను.
8 ನನಗೆ ಮುಂಚೆಯೂ, ನಿನಗೆ ಮುಂಚೆಯೂ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ, ದೊಡ್ಡ ರಾಜ್ಯಗಳಿಗೂ ವಿರೋಧವಾಗಿ ಯುದ್ಧವನ್ನು ಕೇಡನ್ನೂ, ವ್ಯಾಧಿಯನ್ನೂ ಕುರಿತು ಪ್ರವಾದಿಸಿದರು.
నాకూ నీకూ ముందున్న ప్రవక్తలు, అనేక దేశాలకూ గొప్ప రాజ్యాలకూ వ్యతిరేకంగా యుద్ధాలు జరుగుతాయనీ కీడు సంభవిస్తుందనీ అంటురోగాలు వస్తాయనీ ఎప్పటినుంచో ప్రవచిస్తూ ఉన్నారు.
9 ಸಮಾಧಾನವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ, ಆ ಪ್ರವಾದಿಯ ವಾಕ್ಯವು ಉಂಟಾಗುವಾಗ, ಅವನು ಯೆಹೋವ ದೇವರಿಂದ ನಿಜವಾಗಿ ಕಳುಹಿಸಲಾದ ಪ್ರವಾದಿ, ಎಂದು ತಿಳಿಯತಕ್ಕದ್ದು,” ಎಂದನು.
అయితే క్షేమం కలుగుతుందని ప్రకటించే ప్రవక్త మాట నెరవేరితే అతన్ని నిజంగా యెహోవాయే పంపాడని తెలుసుకోవచ్చు,” అని యిర్మీయా ప్రవక్త చెప్పాడు.
10 ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಕುತ್ತಿಗೆಯಿಂದ ನೊಗವನ್ನು ತೆಗೆದು, ಅದನ್ನು ಮುರಿದುಬಿಟ್ಟನು.
౧౦అయితే హనన్యా ప్రవక్త, యిర్మీయా ప్రవక్త మెడ మీదనుంచి ఆ కాడిని తీసి దాన్ని విరిచేశాడు.
11 ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನೆಂದರೆ, “ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇದೇ ಪ್ರಕಾರ ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು,’” ಎಂದನು. ಆಗ ಪ್ರವಾದಿಯಾದ ಯೆರೆಮೀಯನು ತನ್ನ ಮಾರ್ಗವಾಗಿ ಹೊರಟುಹೋದನು.
౧౧ప్రజలందరి ఎదుట హనన్యా ఇలా అన్నాడు. “యెహోవా ఇలా చెబుతున్నాడు, ‘రెండేళ్ళలో నేను బబులోను రాజు నెబుకద్నెజరు కాడిని రాజ్యాలన్నిటి మెడమీద నుంచి తొలగించి దానిని విరిచివేస్తాను.’” అప్పుడు యిర్మీయా ప్రవక్త తన దారిన వెళ్లిపోయాడు.
12 ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆಮೀಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ, ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಉಂಟಾಗಿ,
౧౨హనన్యా, యిర్మీయా మెడ మీద ఉన్న కాడిని విరిచిన తరువాత యెహోవా దగ్గర నుంచి ఈ సందేశం యిర్మీయాకు వచ్చింది.
13 “ನೀನು ಹೋಗಿ ಹನನ್ಯನಿಗೆ ಹೀಗೆ ಹೇಳು: ‘ನೀವು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವಕ್ಕೆ ಬದಲಾಗಿ ನಿನ್ನ ಮೇಲೆ ಕಬ್ಬಿಣದ ನೊಗಗಳನ್ನು ಉಂಟುಮಾಡು,’ ಎಂದು ಯೆಹೋವ ದೇವರು ಹೇಳುತ್ತಾರೆ.
౧౩“నువ్వు పోయి హనన్యాతో ఇలా చెప్పు, ‘యెహోవా ఇలా చెబుతున్నాడు, నువ్వు కొయ్య కాడిని విరిచావు గదా! దానికి బదులు ఇనుప కాడిని నేను చేయిస్తాను.’
14 ಇಸ್ರಾಯೇಲರ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಡುವೆನು. ಅವರು ಅವನಿಗೆ ಸೇವೆಮಾಡುವರು; ಕಾಡುಮೃಗಗಳನ್ನು ಸಹ ಅವನಿಗೆ ಕೊಡುವೆನು.’”
౧౪ఇశ్రాయేలు దేవుడు సేనల ప్రభువు యెహోవా ఇలా చెబుతున్నాడు. ‘ఈ ప్రజలంతా బబులోను రాజు నెబుకద్నెజరుకు సేవ చేయాలని వారి మెడ మీద ఇనుప కాడి ఉంచాను. కాబట్టి వాళ్ళు అతనికి సేవ చేస్తారు. భూజంతువులను కూడా నేను అతనికి అప్పగించాను.’”
15 ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನೆಂದರೆ, “ಹನನೀಯನೇ, ಕೇಳು. ಯೆಹೋವ ದೇವರು ನಿನ್ನನ್ನು ಕಳುಹಿಸಲಿಲ್ಲ. ಆದರೆ ನೀನು ಈ ಜನರನ್ನು ಸುಳ್ಳಿನಲ್ಲಿ ಭರವಸೆ ಇಡುವಂತೆ ಮಾಡುತ್ತೀ.
౧౫అప్పుడు యిర్మీయా ప్రవక్త, హనన్యాతో ఇలా అన్నాడు. “హనన్యా, విను. యెహోవా నిన్ను పంపలేదు, ఈ ప్రజల చేత అబద్ధాలను నమ్మించావు.
16 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿಬಿಡುತ್ತೇನೆ. ಈ ವರ್ಷವೇ ನೀನು ಸಾಯುವೆ. ಏಕೆಂದರೆ ನೀನು ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ,’” ಎಂದನು.
౧౬కాబట్టి యెహోవా ఈ మాట చెబుతున్నాడు, ‘నేను నిన్ను భూమి మీద లేకుండా చేయబోతున్నాను. యెహోవా మీద నమ్మకం ఉంచకుండా చేయడానికి నువ్వు ప్రజలను ప్రేరేపించావు. కాబట్టి ఈ సంవత్సరమే నువ్వు చనిపోతావు’” అని చెప్పాడు.
17 ಹಾಗೆಯೇ ಪ್ರವಾದಿಯಾದ ಹನನ್ಯನು ಅದೇ ವರ್ಷದಲ್ಲಿ ಏಳನೆಯ ತಿಂಗಳಲ್ಲಿ ಸತ್ತನು.
౧౭ఆ సంవత్సరం ఏడో నెలలో హనన్యా ప్రవక్త చనిపోయాడు.

< ಯೆರೆಮೀಯನು 28 >