< ಲೂಕನು 18 >

1 ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತಮ್ಮ ಶಿಷ್ಯರಿಗೆ ಒಂದು ಸಾಮ್ಯವನ್ನು ಹೇಳಿದರು.
निराश न होता नेहमी प्रार्थना कशी करावी हे शिष्यांनी शिकावे म्हणून त्याने त्यांना एक दाखला सांगितला.
2 “ಒಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೂ ಭಯಪಡುತ್ತಿರಲಿಲ್ಲ ಮನುಷ್ಯರಿಗೂ ಲಕ್ಷ್ಯಕೊಡುತ್ತಿರಲಿಲ್ಲ.
तो म्हणाला, “एका नगरात एक न्यायाधीश होता. तो देवाला भीत नसे व लोकांचीही भीड धरीत नसे.
3 ಅದೇ ಪಟ್ಟಣದಲ್ಲಿ ಒಬ್ಬ ವಿಧವೆಯಿದ್ದಳು. ಆಕೆ ಪದೇಪದೇ ಅವನ ಬಳಿಗೆ ಬಂದು, ‘ನನ್ನ ವಿರೋಧಿಯ ಎದುರಾಗಿ ನನಗೆ ನ್ಯಾಯ ದೊರಕಿಸಿಕೊಡು,’ ಎಂದು ಕೇಳಿಕೊಳ್ಳುತ್ತಿದ್ದಳು.
त्या नगरात एक विधवा होती. ती नेहमी येऊन न्यायधिशाला म्हणत असे, ‘माझ्या विरोधकांविरुद्ध माझा न्याय करा!’
4 “ಅವನು ಸ್ವಲ್ಪಕಾಲ ಆಕೆಗೆ ಗಮನಕೊಡಲಿಲ್ಲ. ತರುವಾಯ ಅವನು ತನ್ನೊಳಗೆ, ‘ನಾನು ದೇವರಿಗೆ ಭಯಪಡುವುದಿಲ್ಲ ಹಾಗೂ ಮನುಷ್ಯರಿಗೂ ಲಕ್ಷ್ಯಕೊಡುವುದಿಲ್ಲ,
त्याची इच्छा काही काळ नव्हती पण शेवटी तो मनात म्हणाला, ‘मी जरी देवाला भीत नाही व लोकांस मान देत नाही,
5 ಆದರೂ ಈ ವಿಧವೆಯು ನನಗೆ ತೊಂದರೆಕೊಟ್ಟು ಪದೇಪದೇ ನನ್ನ ಬಳಿಗೆ ಬಂದು, ನನ್ನನ್ನು ಕಾಡಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು,’” ಎಂದುಕೊಂಡನು.
तरीही विधवा मला त्रास देते म्हणून मी तिचा न्याय करीन, नाही तर ती नेहमी येऊन मला अगदी त्रासून सोडेल.”
6 ಅನಂತರ ಕರ್ತದೇವರು, “ಈ ಅನ್ಯಾಯಗಾರನಾದ ನ್ಯಾಯಾಧಿಪತಿಯು ಹೇಳಿಕೊಂಡಿದ್ದನ್ನು ಕೇಳಿರಿ.
मग प्रभू म्हणाला, “लक्ष्य द्या अन्यायी न्यायाधीश काय म्हणाला.
7 ದೇವರಾದುಕೊಂಡವರು ದೇವರಿಗೆ ಹಗಲುರಾತ್ರಿ ಮೊರೆಯಿಡುವಾಗ, ದೇವರು ಅವರ ವಿಷಯದಲ್ಲಿ ಅವರಿಗೆ ನ್ಯಾಯವನ್ನು ಕೊಡದೆ ಇರುವರೋ? ದೇವರು ನ್ಯಾಯ ಕೊಡಲು ತಡಮಾಡುವರೋ?
आणि मग जे देवाचे निवडलेले लोक दिवसरात्र त्याचा धावा करतात त्यांचा तो न्याय करणार नाही काय? तो त्यांना मदत करण्यास वेळ लावेल का?
8 ದೇವರು ಬೇಗನೇ ಅವರಿಗೆ ನ್ಯಾಯತೀರಿಸುವರೆಂದು, ನಾನು ನಿಮಗೆ ಹೇಳುತ್ತೇನೆ. ಆದರೂ, ಮನುಷ್ಯಪುತ್ರನಾದ ನಾನು ಬಂದಾಗ ಭೂಮಿಯ ಮೇಲೆ ವಿಶ್ವಾಸವನ್ನು ಕಾಣುವೆನೋ?” ಎಂದರು.
मी तुम्हास सांगतो, तो त्यांचा न्याय लवकर करील, तरीही जेव्हा मनुष्याचा पुत्र येईल, तेव्हा त्यास पृथ्वीवर विश्वास आढळेल काय?”
9 ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸೆಯನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ, ಯೇಸು ಈ ಸಾಮ್ಯವನ್ನು ಹೇಳಿದರು:
आपण नीतिमान आहोत असा जे कित्येक स्वतःविषयी विश्वास धरून इतर सर्वांस तुच्छ मानीत होते त्यांनाही त्याने दाखला सांगितला, तो असा,
10 “ಇಬ್ಬರು ಪ್ರಾರ್ಥನೆಮಾಡುವುದಕ್ಕೆ ದೇವಾಲಯಕ್ಕೆ ಹೋದರು. ಅವರಲ್ಲಿ ಒಬ್ಬನು ಫರಿಸಾಯನು ಮತ್ತೊಬ್ಬನು ಸುಂಕದವನು.
१०“दोन जण प्रार्थना करण्यास वर परमेश्वराच्या भवनात गेले. एक परूशी होता आणि दुसरा जकातदार होता.
11 ಫರಿಸಾಯನು ನಿಂತುಕೊಂಡು: ‘ದೇವರೇ, ಸುಲಿಗೆ ಮಾಡುವವರು, ಅನೀತಿವಂತರು, ವ್ಯಭಿಚಾರಿಗಳು ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ನಾನಲ್ಲ. ಆದ್ದರಿಂದ ನಾನು ನಿನಗೆ ಸ್ತೋತ್ರ ಮಾಡುತ್ತೇನೆ.
११परूशी उभा राहिला आणि त्याने अशी प्रार्थना केली, ‘हे देवा, मी तुझे उपकार मानतो कारण, मी इतर लोकांसारखा म्हणजे चोर, अन्यायी, व्यभिचारी व या जकातदारासारखा नाही.
12 ನಾನು ವಾರಕ್ಕೆ ಎರಡು ಸಾರಿ ಉಪವಾಸ ಮಾಡುತ್ತೇನೆ. ನನಗಿರುವ ಎಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ,’ ಎಂದು ಹೇಳಿ ತನಗೆ ತಾನೇ ಪ್ರಾರ್ಥಿಸಿದನು.
१२उलट मी आठवड्यातून दोनदा उपवास करतो आणि माझ्या सर्व उत्त्पन्नाचा दहावा भाग देतो.’
13 “ಆದರೆ ಸುಂಕದವನು ದೂರದಲ್ಲಿ ನಿಂತು, ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಧೈರ್ಯಗೊಳ್ಳದೇ ತನ್ನ ಎದೆಯನ್ನು ಬಡಿದುಕೊಳ್ಳುತ್ತಾ, ‘ದೇವರೇ ಪಾಪಿಯಾದವನು ನಾನೇ ನನ್ನನ್ನು ಕರುಣಿಸು,’ ಎಂದು ಪ್ರಾರ್ಥಿಸಿದನು.
१३परंतु जकातदार दूर अंतरावर उभा राहून वर स्वर्गाकडे दृष्टी लावण्यास देखील न धजता आपला ऊर बडवत म्हणाला, ‘हे देवा मज पाप्यावर दया कर.’
14 “ನಾನು ನಿಮಗೆ ಹೇಳುತ್ತೇನೆ, ಅವನಲ್ಲ, ಇವನೇ ನೀತಿವಂತನೆಂಬ ನಿರ್ಣಯ ಪಡೆದವನಾಗಿ ತನ್ನ ಮನೆಗೆ ಹೋದನು. ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.
१४मी तुम्हास सांगतो हा मनुष्य त्या दुसऱ्या मनुष्यापेक्षा न्यायी ठरुन घरी गेला कारण जो कोणी स्वतःला उंच करतो त्यास कमी केले जाईल आणि जो कोणी स्वतःला कमी करतो त्यास उंच केले जाईल.”
15 ಚಿಕ್ಕಮಕ್ಕಳನ್ನು ಯೇಸು ಮುಟ್ಟುವಂತೆ ಕೆಲವರು ಚಿಕ್ಕಮಕ್ಕಳನ್ನು ಅವರ ಬಳಿಗೆ ತಂದರು ಆಗ ಅವರ ಶಿಷ್ಯರು ಇದನ್ನು ಕಂಡು, ಜನರನ್ನು ಗದರಿಸಿದರು.
१५आणि लोक आपल्या मुलांनाही त्याच्याकडे स्पर्श करण्यास आणत असता हे शिष्यांनी पहिल्यावर त्यांनी लोकांस धमकावले.
16 ಆದರೆ ಯೇಸುವೋ ಚಿಕ್ಕಮಕ್ಕಳನ್ನು ತಮ್ಮ ಹತ್ತಿರಕ್ಕೆ ಆಹ್ವಾನಿಸಿ ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ. ಅವುಗಳಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಇಂಥವರದೇ.
१६पण येशू बालकांना स्वतःकडे बोलवून म्हणाला, “बालकांना माझ्याकडे येऊ द्या. त्यांना अडवू नका कारण देवाचे राज्य त्यांच्यासारख्यांचेच आहे.
17 ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾರಾದರೂ ಚಿಕ್ಕಮಗುವಿನಂತೆ ದೇವರ ರಾಜ್ಯವನ್ನು ಸ್ವೀಕರಿಸದಿದ್ದರೆ, ಅವರು ಅದರೊಳಗೆ ಸೇರುವುದೇ ಇಲ್ಲ,” ಎಂದರು.
१७मी तुम्हास खरे सांगतो, जो कोणी बालकाप्रमाणे देवाच्या राज्याचा स्वीकार करणार नाही, त्याचा स्वर्गात प्रवेश होऊ शकणार नाही.”
18 ಒಬ್ಬ ಅಧಿಕಾರಿಯು ಯೇಸುವಿಗೆ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಕೇಳಿದನು. (aiōnios g166)
१८एका यहूदी अधिकाऱ्याने त्यास विचारले, “उत्तम गुरुजी, सार्वकालिक जीवन मिळविण्यासाठी मी काय करू?” (aiōnios g166)
19 ಅದಕ್ಕೆ ಯೇಸು ಅವನಿಗೆ, “ನೀನು ನನ್ನನ್ನು ಒಳ್ಳೆಯವನೆಂದು ಏಕೆ ಕರೆಯುತ್ತಿ? ದೇವರೊಬ್ಬರೇ ಹೊರತು ಬೇರೆ ಯಾರೂ ಒಳ್ಳೆಯವರಲ್ಲ.
१९येशू त्यास म्हणाला, “मला उत्तम का म्हणतोस? देवाशिवाय कोणीही उत्तम नाही.
20 ‘ವ್ಯಭಿಚಾರ ಮಾಡಬಾರದು, ನರಹತ್ಯೆ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,’ ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆಯಲ್ಲಾ,” ಎಂದರು.
२०तुला आज्ञा माहीत आहेत ‘व्यभिचार करू नको, खून करू नको, चोरी करू नको, खोटी साक्ष देऊ नको, तुझ्या आई-वडीलांचा मान राख.”
21 ಅದಕ್ಕವನು, “ನನ್ನ ಬಾಲ್ಯದಿಂದಲೇ ನಾನು ಇವೆಲ್ಲವನ್ನೂ ಕೈಕೊಂಡಿದ್ದೇನೆ,” ಎಂದು ಹೇಳಿದನು.
२१तो अधिकारी म्हणाला, “या सर्व आज्ञा मी माझ्या तरुणपणासून पाळल्या आहेत.”
22 ಯೇಸು ಇವುಗಳನ್ನು ಕೇಳಿ ಅವನಿಗೆ, “ಆದರೂ ನಿನಗೆ ಒಂದು ಕೊರತೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.
२२जेव्हा येशूने हे ऐकले, तेव्हा तो त्यास म्हणाला, “तुझ्यामध्ये अजून एका गोष्टीची कमी आहे. तुझ्याजवळचे सर्वकाही विकून ते गरिबांना वाट, म्हणजे स्वर्गात तुला धन मिळेल. मग ये. माझ्यामागे चल.”
23 ಅವನು ಇದನ್ನು ಕೇಳಿ, ಬಹಳ ದುಃಖವುಳ್ಳವನಾದನು. ಏಕೆಂದರೆ ಅವನು ಬಹಳ ಸಿರಿವಂತನಾಗಿದ್ದನು.
२३पण जेव्हा त्या अधिकाऱ्याने हे ऐकले तेव्हा तो फार दुःखी झाला, कारण तो फार श्रीमंत होता.
24 ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ಕಂಡು, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ!
२४तो दुःखी झाला आहे हे जेव्हा येशूने पाहिले तेव्हा तो लोकांस म्हणाला, “ज्यांच्याजवळ धन आहे, त्या लोकांचा देवाच्या राज्यात प्रवेश होणे किती कठीण आहे!
25 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ,” ಎಂದು ಹೇಳಿದರು.
२५होय, श्रीमंत मनुष्याचे देवाच्या राज्यात प्रवेश करणे यापेक्षा उंटाने सुईच्या नाकातून जाणे सोपे आहे.”
26 ಇದನ್ನು ಕೇಳಿದವರು, “ಹಾಗಾದರೆ ಯಾರು ರಕ್ಷಣೆ ಹೊಂದುವವರು?” ಎಂದರು.
२६नंतर ज्या लोकांनी हे ऐकले, ते म्हणाले, “तर मग कोणाचे तारण होईल?”
27 ಅದಕ್ಕೆ ಯೇಸು, “ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ,” ಎಂದು ಹೇಳಿದರು.
२७तो म्हणाला, “ज्या गोष्टी मनुष्यांना अशक्य आहेत त्या देवाला शक्य आहेत.”
28 ಆಗ ಪೇತ್ರನು, “ಇಗೋ, ನಾವು ಎಲ್ಲವನ್ನೂ ಬಿಟ್ಟು ನಿಮ್ಮನ್ನು ಹಿಂಬಾಲಿಸಿದ್ದೇವಲ್ಲ,” ಎಂದನು.
२८मग पेत्र म्हणाला, “बघा, आमच्याकडे जे होते, ते सर्व टाकून आम्ही तुमच्यामागे आलो आहोत.”
29 ಯೇಸು ಅವರಿಗೆ, “ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ, ಮನೆಯನ್ನಾದರೂ ಹೆಂಡತಿಯನ್ನಾದರೂ ಸಹೋದರರನ್ನಾದರೂ ತಂದೆತಾಯಿಗಳನ್ನಾದರೂ ಮಕ್ಕಳನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು,
२९येशूने त्यांना म्हटले, “मी तुम्हास खरे सांगतो, देवाच्या राज्याकरता ज्याने आपले घर, पत्नी, भाऊ, आई-वडील किंवा मुलेबाळ सोडली
30 ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಕಾಲದಲ್ಲಿ ನಿತ್ಯಜೀವವನ್ನೂ ಹೊಂದುವನು,” ಎಂದರು. (aiōn g165, aiōnios g166)
३०त्यांना या काळी पुष्कळ पटीने व येणाऱ्या युगात सार्वकालिक जीवन मिळणार नाही असा कोणी नाही.” (aiōn g165, aiōnios g166)
31 ಯೇಸು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ, “ಇಗೋ, ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ, ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಪ್ರವಾದಿಗಳಿಂದ ಬರೆದಿರುವುದೆಲ್ಲವೂ ನೆರವೇರಬೇಕು.
३१येशूने निवडलेल्या बाराजणांना बाजूला घेतले आणि त्यांना म्हणाला, “ऐका! आपण वर यरूशलेम शहरात जात आहोत आणि संदेष्टयांनी मनुष्याच्या पुत्राविषयी जे काही लिहिले होते ते सर्व पूर्ण होईल.
32 ನಾನು ಯೆಹೂದ್ಯರಲ್ಲದವರ ಕೈಗೆ ಸೆರೆಯಾಗುವೆನು. ಅವರು ನನ್ನನ್ನು ಹಾಸ್ಯಮಾಡಿ, ನನಗೆ ಅವಮಾನ ಮಾಡಿ, ನನ್ನ ಮೇಲೆ ಉಗುಳುವರು.
३२म्हणजे त्यास परराष्ट्रीयांच्या स्वाधीन करतील, त्याची थट्टा होईल, त्याची निंदा करतील, त्याच्यावर थुंकतील
33 ಇದಲ್ಲದೆ ಅವರು ನನ್ನನ್ನು ಕೊರಡೆಗಳಿಂದ ಹೊಡೆದು, ಕೊಂದುಹಾಕುವರು. ಆದರೆ ನಾನು ಮೂರನೆಯ ದಿನ ಜೀವಿತನಾಗಿ ಎದ್ದು ಬರುವೆನು,” ಎಂದರು.
३३त्यास फटके मारतील, त्याचा जीव घेतील आणि तो तिसऱ्या दिवशी पुन्हा उठेल.”
34 ಆದರೆ ಶಿಷ್ಯರಿಗೆ ಇವುಗಳಲ್ಲಿ ಒಂದೂ ಅರ್ಥವಾಗಲಿಲ್ಲ. ಈ ಮಾತುಗಳು ಅವರಿಗೆ ಮರೆಯಾಗಿದ್ದುದರಿಂದ, ಯೇಸು ಹೇಳಿದವುಗಳನ್ನು ಅವರು ತಿಳಿದುಕೊಳ್ಳಲಿಲ್ಲ.
३४त्याने म्हटलेले काहीच शिष्यांना समजले नाही कारण हे वचन त्यांच्यापासून लपवून ठेवण्यात आले होते आणि तो कोणत्या गोष्टीविषयी बोलत आहे हे त्यांना माहीत नव्हते.
35 ಯೇಸು ಯೆರಿಕೋವಿನ ಸಮೀಪಕ್ಕೆ ಬಂದಾಗ, ಒಬ್ಬ ಕುರುಡನು ದಾರಿಯ ಪಕ್ಕದಲ್ಲಿ ಕುಳಿತುಕೊಂಡು ಭಿಕ್ಷೆಬೇಡುತ್ತಿದ್ದನು.
३५येशू यरीहोजवळ येत असतांना एक आंधळा रस्त्यावर बसून भीक मागत होता.
36 ಜನಸಮೂಹವು ಹಾದು ಹೋಗುವುದನ್ನು ಇವನು ಕೇಳಿಸಿಕೊಂಡು, ಅದೇನೆಂದು ವಿಚಾರಿಸಿದನು.
३६जेव्हा त्या आंधळ्या मनुष्याने जवळून जाणाऱ्या लोकांचा आवाज ऐकला तेव्हा त्याने विचारले, ही कशाची गडबड चालली आहे.
37 “ನಜರೇತಿನ ಯೇಸು ಹಾದು ಹೋಗುತ್ತಿದ್ದಾರೆ,” ಎಂದು ಜನರು ಅವನಿಗೆ ಹೇಳಿದರು.
३७लोकांनी त्यास सांगितले, “नासरेथकर येशू जवळून जात आहे.”
38 ಆಗ ಅವನು, “ಯೇಸುವೇ, ದಾವೀದನ ಪುತ್ರನೇ, ನನ್ನನ್ನು ಕರುಣಿಸಿ!” ಎಂದು ಗಟ್ಟಿಯಾಗಿ ಕೂಗಿಕೊಂಡನು.
३८तो ओरडून म्हणाला, “अहो येशू, दाविदाचे पुत्र माझ्यावर दया करा.”
39 ಮುಂದೆ ಹೋಗುತ್ತಿದ್ದವರು ಸುಮ್ಮನಿರುವಂತೆ ಅವನನ್ನು ಗದರಿಸಿದರು, ಆದರೂ ಅವನು, “ದಾವೀದನ ಪುತ್ರರೇ, ನನ್ನನ್ನು ಕರುಣಿಸಿ,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
३९जे पुढे चालले होते त्यांनी त्यास शांत राहण्यास सांगितले. पण तो अजून मोठ्याने ओरडून म्हणाला, “दाविदाचे पुत्र माझ्यावर दया करा!”
40 ಆಗ ಯೇಸು ನಿಂತು ಅವನನ್ನು ತಮ್ಮ ಬಳಿಗೆ ಕರೆತರುವಂತೆ ಅಪ್ಪಣೆಕೊಟ್ಟರು. ಅವನು ಯೇಸುವಿನ ಬಳಿಗೆ ಬಂದಾಗ, ಅವರು ಅವನಿಗೆ,
४०येशू थांबला आणि त्याने आंधळ्याला स्वतःकडे आणण्याची आज्ञा केली, तो आंधळा जवळ आल्यावर येशूने त्यास विचारले,
41 “ನನ್ನಿಂದ ನಿನಗೇನಾಗಬೇಕು?” ಎಂದು ಕೇಳಿದರು. ಅದಕ್ಕವನು, “ಕರ್ತದೇವರೇ, ನನಗೆ ದೃಷ್ಟಿ ಕೊಡಿ,” ಎಂದನು.
४१“मी तुझ्यासाठी काय करावे म्हणून तुझी इच्छा आहे?” तो म्हणाला, “प्रभू मला पुन्हा दृष्टी यावी.”
42 ಆಗ ಯೇಸು ಅವನಿಗೆ, “ನೀನು ದೃಷ್ಟಿ ಪಡೆ; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು.
४२येशू त्यास म्हणाला, “तुला दृष्टी येवो, तुझ्या विश्वासाने तुला चांगले केले आहे.”
43 ಕೂಡಲೇ ಅವನು ದೃಷ್ಟಿಯನ್ನು ಪಡೆದನು. ಆಗ ಅವನು ದೇವರನ್ನು ಸ್ತುತಿಸುತ್ತಾ, ಯೇಸುವನ್ನು ಹಿಂಬಾಲಿಸಿದನು. ಎಲ್ಲಾ ಜನರು ಅದನ್ನು ಕಂಡು, ದೇವರಿಗೆ ಸ್ತೋತ್ರ ಸಲ್ಲಿಸಿದರು.
४३ताबडतोब त्यास दिसू लागले आणि तो देवाचे गौरव करीत येशूच्या मागे गेला. सर्व लोकांनी हे पाहिले आणि देवाची स्तुती केली.

< ಲೂಕನು 18 >