< ಜ್ಞಾನೋಕ್ತಿಗಳು 15 >

1 ಮೃದುವಾದ ಉತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ. ಆದರೆ ಬಿರುಸಾದ ಮಾತುಗಳು ಕೋಪವನ್ನು ಎಬ್ಬಿಸುತ್ತದೆ.
মৃদু উত্তর রাগ দূর করে, কিন্তু কঠোর শব্দ রাগ উত্তেজিত করে।
2 ಜ್ಞಾನಿಯ ನಾಲಿಗೆಯು ಒಳ್ಳೆಯ ಪರಿಜ್ಞಾನವನ್ನು ಹರಡುತ್ತದೆ. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನು ಹೊರಗೆಡವುತ್ತದೆ.
জ্ঞানীদের জিহ্বা জ্ঞান প্রশংসা করে; কিন্তু নির্বোধদের মুখ নির্বোধমিতা বের করে।
3 ಯೆಹೋವ ದೇವರ ಕಣ್ಣುಗಳು ಪ್ರತಿಯೊಂದು ಸ್ಥಳದಲ್ಲಿ ಇವೆ. ಕೆಟ್ಟವರನ್ನೂ ಒಳ್ಳೆಯವರನ್ನೂ ನೋಡುತ್ತಾ ಇರುವರು.
সদাপ্রভুর চোখ সব জায়গাতেই আছে, তা খারাপ ও ভালোদের প্রতি দৃষ্টি রাখে।
4 ಹಿತವಾದ ನಾಲಿಗೆಯು ಜೀವವೃಕ್ಷ. ಆದರೆ ವಕ್ರ ನಾಲಿಗೆಯು ಆತ್ಮಚೈತನ್ಯವನ್ನು ನಾಶಮಾಡುವುದು.
নিরাময় জিহ্বা জীবনবৃক্ষ; কিন্তু প্রতারণামূলক জিহ্বা আত্মা ভেঙে দেয়।
5 ಮೂರ್ಖನು ತನ್ನ ತಂದೆಯ ಶಿಸ್ತನ್ನು ತಿರಸ್ಕರಿಸುತ್ತಾನೆ. ಆದರೆ ಜಾಣನು ಗದರಿಕೆಯನ್ನು ಲಕ್ಷಿಸುವನು.
নির্বোধ নিজের বাবার শাসন অবজ্ঞা করে; কিন্তু যে সংশোধন মানে, সেই বিচক্ষণ হয়।
6 ನೀತಿವಂತನ ಮನೆಯಲ್ಲಿ ಬಹಳ ಸಂಪತ್ತು. ಆದರೆ ದುಷ್ಟನ ಆದಾಯವು ವಿನಾಶ ತರುವುದು.
ধার্ম্মিকের বাড়িতে প্রচুর সম্পত্তি থাকে; কিন্তু দুষ্টের আয়ে বিপদ থাকে।
7 ಜ್ಞಾನಿಗಳ ತುಟಿಗಳು ಪರಿಜ್ಞಾನವನ್ನು ಹರಡುತ್ತವೆ. ಆದರೆ ಬುದ್ಧಿಹೀನರ ಹೃದಯವು ಹಾಗೆ ಮಾಡುವುದೇ ಇಲ್ಲ.
জ্ঞানবানদের ঠোঁট জ্ঞান ছড়িয়ে দেয়; কিন্তু নির্বোধদের হৃদয় স্থির না।
8 ದುಷ್ಟರ ಯಜ್ಞವು ಯೆಹೋವ ದೇವರಿಗೆ ಅಸಹ್ಯ. ಆದರೆ ಯಥಾರ್ಥವಂತರ ಪ್ರಾರ್ಥನೆಯು ಅವರಿಗೆ ಮೆಚ್ಚುಗೆ.
দুষ্টদের বলিদান সদাপ্রভু ঘৃণা করেন; কিন্তু সরলদের প্রার্থনা তাঁর সন্তুষ্টজনক।
9 ದುಷ್ಟರ ಮಾರ್ಗವು ಯೆಹೋವ ದೇವರಿಗೆ ಅಸಹ್ಯ. ಆದರೆ ನೀತಿಯನ್ನು ಹಿಂಬಾಲಿಸುವವನನ್ನು ಅವರು ಪ್ರೀತಿಸುತ್ತಾರೆ.
দুষ্টদের রাস্তা সদাপ্রভু ঘৃণা করেন; কিন্তু তিনি ধার্মিকতার অনুগামীকে ভালবাসেন।
10 ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ. ಗದರಿಕೆಯನ್ನು ಹಗೆಮಾಡುವವನು ಸಾಯುವನು.
১০যে রাস্তা পরিত্যাগ করে তার জন্য কঠোর শাস্তি অপেক্ষা করছে; যে সংশোধন ঘৃণা করবে, সে মরবে।
11 ಮರಣವೂ ಪಾತಾಳವೂ ಯೆಹೋವ ದೇವರಿಗೆ ಕಾಣುತ್ತಿರುವಾಗ, ಮನುಷ್ಯರ ಹೃದಯಗಳು ಅವರಿಗೆ ಮುಚ್ಚುಮರೆಯೇ? (Sheol h7585)
১১পাতাল ও ধ্বংস সদাপ্রভুর সামনে খোলা; তবে মানবজাতির বংশধরদের হৃদয়ও কি সেরকম না? (Sheol h7585)
12 ಕುಚೋದ್ಯಗಾರನು ಬುದ್ಧಿವಾದವನ್ನು ದ್ವೇಷಿಸುತ್ತಾನೆ. ಅವನು ಜ್ಞಾನಿಗಳಿಂದ ದೂರವಿರುತ್ತಾನೆ.
১২উপহাসক সংশোধন ক্ষতিকর মনে করে; সে জ্ঞানবানের কাছে যায় না।
13 ಸಂತೋಷದ ಹೃದಯವು ಹರ್ಷವುಳ್ಳ ಮುಖಭಾವ ತೋರುವುದು. ಆದರೆ ನೊಂದ ಹೃದಯವು ಆತ್ಮಚೈತನ್ಯವನ್ನು ಕುಂದಿಸುತ್ತದೆ.
১৩আনন্দিত মন মুখকে প্রফুল্ল করে, কিন্তু মানসিক যন্ত্রণায় আত্মা ভেঙে যায়।
14 ವಿವೇಕವುಳ್ಳವನ ಹೃದಯವು ಪರಿಜ್ಞಾನವನ್ನು ಹುಡುಕುತ್ತದೆ. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನೇ ತಿನ್ನುತ್ತದೆ.
১৪বুদ্ধিমানের মন জ্ঞানের খোঁজ করে; কিন্তু নির্বোধদের মুখ নির্বোধমির ক্ষেতে চরে।
15 ಬಾಧಿತರ ದಿನಗಳೆಲ್ಲವೂ ದುಃಖಭರಿತ. ಆದರೆ ಸಂತೋಷ ಹೃದಯವುಳ್ಳವನಿಗೆ ನಿತ್ಯವೂ ಔತಣ.
১৫দুঃখীর সব দিন ই নির্যাতিত; কিন্তু যার আনন্দিত হৃদয়, তার চিরস্থায়ী ভোজ।
16 ತೊಂದರೆಯಿಂದ ಕೂಡಿದ ದೊಡ್ಡ ಸಂಪತ್ತಿಗಿಂತ ಯೆಹೋವ ದೇವರ ಭಯದಿಂದ ಕೂಡಿದ ಅಲ್ಪವೇ ಮೇಲು.
১৬সদাপ্রভুর ভয়ের সঙ্গে অল্পও ভাল, তবু বিশৃঙ্খলার সঙ্গে প্রচুর সম্পত্তি ভাল না।
17 ದ್ವೇಷವಿರುವಲ್ಲಿ ಕೊಬ್ಬಿದ ಎತ್ತಿನ ಮಾಂಸಕ್ಕಿಂತಲೂ, ಪ್ರೀತಿ ಇರುವಲ್ಲಿ ಸಸ್ಯಾಹಾರ ಊಟವೇ ಉತ್ತಮ.
১৭ভালবাসার সঙ্গে শাকসবজি খাওয়া ভাল, তবু ঘৃণার সঙ্গে মোটাসোটা গরু ভাল নয়।
18 ಕೋಪಿಷ್ಟನು ವಿವಾದವನ್ನು ಎಬ್ಬಿಸುವನು. ಆದರೆ ತಾಳ್ಮೆಯಿಂದ ಇರುವವನು ಜಗಳವನ್ನು ಶಾಂತಗೊಳಿಸುವನು.
১৮একজন রাগী লোক, সে বিবাদ উত্তেজিত করে; কিন্তু যে রাগে ধীর, সে বিবাদ থামায়।
19 ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ. ಆದರೆ ಯಥಾರ್ಥವಂತನ ಮಾರ್ಗವು ರಾಜಮಾರ್ಗ.
১৯অলসের পথ কাঁটার বেড়ার মতো; কিন্তু সরলদের রাস্তা রাজপথ।
20 ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸಗೊಳಿಸುತ್ತಾನೆ. ಬುದ್ಧಿಹೀನನಾದರೋ ತನ್ನ ತಾಯಿಯನ್ನು ತಿರಸ್ಕರಿಸುತ್ತಾನೆ.
২০জ্ঞানবান ছেলে বাবার আনন্দ জন্মায়; কিন্তু নির্বোধ লোক মাকে অবজ্ঞা করে।
21 ಬುದ್ಧಿಹೀನನು ಮೂರ್ಖತನದಲ್ಲಿ ಉಲ್ಲಾಸಿಸುವನು. ತಿಳುವಳಿಕೆಯನ್ನು ಹೊಂದಿರುವವನು ನೇರ ಮಾರ್ಗದಲ್ಲಿ ನಡೆಯುತ್ತಾನೆ.
২১জ্ঞানহীন নির্বোধমিতায় আনন্দ করে, কিন্তু বুদ্ধিমান লোক সোজা রাস্তায় চলে।
22 ಸಲಹೆಯ ಕೊರತೆಯಿಂದ ಯೋಜನೆಗಳು ವಿಫಲಗೊಳ್ಳುತ್ತವೆ. ಆದರೆ ಬಹುಮಂದಿ ಸಲಹೆಗಾರರಿರುವಲ್ಲಿ ಅವು ಸಫಲಗೊಳ್ಳುವುವು.
২২উপদেশের অভাবে পরিকল্পনা সব ব্যর্থ হয়; কিন্তু অনেক উপদেষ্টার জন্যে সে সব সফল হয়।
23 ಸೂಕ್ತವಾದ ಉತ್ತರವನ್ನು ನೀಡುವಲ್ಲಿ ಮನುಷ್ಯನು ಸಂತೋಷವನ್ನು ಕಂಡುಕೊಳ್ಳುತ್ತಾನೆ. ತಕ್ಕ ಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೆಯದು.
২৩মানুষ নিজের প্রাসঙ্গিক উত্তরে আনন্দ পায়; আর সঠিক দিনের র কথা কেমন ভালো।
24 ಜೀವದ ಮಾರ್ಗವು ಜಾಣನನ್ನು ಮೇಲಕ್ಕೆತ್ತುವುದು. ಅದು ಅವನನ್ನು ಪಾತಾಳಕ್ಕೆ ಇಳಿಯುವದರಿಂದ ತಪ್ಪಿಸುವುದು. (Sheol h7585)
২৪বুদ্ধিমানের জন্য জীবনের পথ উপরে, যেন সে নীচের পাতাল থেকে সরে যায়। (Sheol h7585)
25 ಯೆಹೋವ ದೇವರು ಗರ್ವಿಷ್ಠರ ಮನೆಯನ್ನು ಕೆಡವಿಬಿಡುವರು, ಆದರೆ ವಿಧವೆಯರ ಮೇರೆಯನ್ನು ಅವರು ನೆಲೆಗೊಳಿಸುವರು.
২৫সদাপ্রভু অহঙ্কারীদের উত্তরাধিকার বিচ্ছিন্ন করেন, কিন্তু বিধবার সম্পত্তি সুরক্ষিত রাখেন।
26 ದುಷ್ಟರ ಆಲೋಚನೆಯು ಯೆಹೋವ ದೇವರಿಗೆ ಅಸಹ್ಯವಾಗಿದೆ, ಆದರೆ ಸೌಜನ್ಯಶೀಲ ಮಾತುಗಳು ಅವರ ದೃಷ್ಟಿಯಲ್ಲಿ ಶುದ್ಧವಾಗಿವೆ.
২৬কুসঙ্কল্প সব সদাপ্রভু ঘৃণা করেন, কিন্তু উদারতার কথা খাঁটি।
27 ದುರಾಶೆಯುಳ್ಳವನು ತನ್ನ ಕುಟುಂಬವನ್ನು ಬಾಧಿಸುತ್ತಾನೆ. ಲಂಚವನ್ನು ಹಗೆಮಾಡುವವನು ಬದುಕುವನು.
২৭অর্থলোভী তার পরিবারের বিপদ; কিন্তু যে ঘুষ ঘৃণা করে, সে জীবিত থাকে।
28 ನೀತಿವಂತರ ಹೃದಯವು ಹೇಗೆ ಉತ್ತರಿಸಬೇಕೆಂದು ಯೋಚಿಸುತ್ತದೆ. ಆದರೆ ದುಷ್ಟರ ಬಾಯಿಯು ಕೆಟ್ಟವುಗಳನ್ನು ಹೊರಗೆಡವುತ್ತದೆ.
২৮ধার্ম্মিকের মন উত্তর করার জন্যে চিন্তা করে; কিন্তু দুষ্টদের মুখ খারাপ কথা বের করে।
29 ಯೆಹೋವ ದೇವರು ದುಷ್ಟರಿಗೆ ದೂರ; ಆದರೆ ನೀತಿವಂತರ ಪ್ರಾರ್ಥನೆಯನ್ನು ಅವರು ಕೇಳುತ್ತಾರೆ.
২৯সদাপ্রভু দুষ্টদের থেকে দূরে থাকেন, কিন্তু তিনি ধার্ম্মিকদের প্রার্থনা শোনেন।
30 ಹರ್ಷಚಿತ್ತದ ನೋಟವು ಹೃದಯಕ್ಕೆ ಸಂತೋಷವನ್ನು ತರುತ್ತದೆ. ಒಳ್ಳೆಯ ವಾರ್ತೆಯು ಎಲುಬುಗಳನ್ನು ಪುಷ್ಟಿಗೊಳಿಸುತ್ತದೆ.
৩০আনন্দময় চেহারা হৃদয়কে আনন্দিত করে, ভালো সংবাদ হল শরীরের স্বাস্থ্য।
31 ಜೀವದ ಗದರಿಕೆಗೆ ಕಿವಿಗೊಡುವವನು, ಜ್ಞಾನಿಗಳ ನಡುವೆ ವಾಸಿಸುವವನಾಗಿದ್ದಾನೆ.
৩১যার কান জীবনদায়ক সংশোধন শোনে, সে জ্ঞানীদের মধ্যে থাকবে।
32 ಶಿಸ್ತನ್ನು ನಿರಾಕರಿಸುವವನು, ತನಗೆ ತಾನೆ ಹಾನಿ ತಂದುಕೊಳ್ಳುತ್ತಾನೆ, ಆದರೆ ಗದರಿಕೆಗೆ ಕಿವಿಗೊಡುವವನು ವಿವೇಕವನ್ನು ಪಡೆಯುತ್ತಾನೆ.
৩২যে শাসন অমান্য করে, সে নিজেকে অবজ্ঞা করে; কিন্তু যে সংশোধন শোনে, সে বুদ্ধি উপার্জন করে।
33 ಯೆಹೋವ ದೇವರ ಭಯವೇ ಜ್ಞಾನವನ್ನು ಕಲಿಸುತ್ತದೆ. ನಮ್ರತೆ ಗೌರವಕ್ಕೆ ಮೊದಲು ಬರುತ್ತದೆ.
৩৩সদাপ্রভুর ভয় প্রজ্ঞার শিক্ষা, আর সম্মানের আগে নম্রতা থাকে।

< ಜ್ಞಾನೋಕ್ತಿಗಳು 15 >