< एज्रा 6 >

1 तेव्हा राजा दारयावेशाने बाबेलच्या ऐतिहासिक कागदपत्रांचा शोध घेण्याचा आदेश दिला.
ಅರಸನಾದ ದಾರ್ಯಾವೆಷನು ಬಾಬಿಲೋನಿನ ಗ್ರಂಥಸಂಗ್ರಹವಾಗಿದ್ದ ಬಾಬಿಲೋನಿನ ಭಂಡಾರದಲ್ಲಿ ರಾಜಾಜ್ಞೆಯನ್ನು ಹುಡುಕುವುದಕ್ಕೆ ಆಜ್ಞೆಯನ್ನು ಹೊರಡಿಸಿದನು.
2 मेदी प्रांतातील अखमथा राजवाड्यात एक गुंडाळी सापडली. तिच्यावर लिहिले होते.
ಅವರು ಹುಡುಕಿದಾಗ ಮೇದ್ಯ ಸಂಸ್ಥಾನದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಒಂದು ಸುರುಳಿ ಸಿಕ್ಕಿತು.
3 “कोरेश राजाच्या कारकिर्दीच्या पहिल्या वर्षी यरूशलेममधील मंदिराच्या बाबतीत राजाने असा आदेश दिला की, जेथे यज्ञ अर्पण करीत त्याठिकाणी देवाचे मंदिर बांधावे. ‘मंदिराचा पाया बांधून काढावा. त्याच्या भिंतीची उंची साठ हात आणि रुंदी साठ हात असावी.
ಅದರಲ್ಲಿ, “ಅರಸನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನ ದೇವಾಲಯದ ವಿಷಯವಾಗಿ ಕೊಟ್ಟ ಅಪ್ಪಣೆ, ‘ಬಲವಾದ ಅಸ್ತಿವಾರವನ್ನು ಹಾಕಿ, ಯಜ್ಞಸಮರ್ಪಣೆಗಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಎತ್ತರ ಅರುವತ್ತು ಮೊಳವು, ಅಗಲ ಅರುವತ್ತು ಮೊಳವು ಇರಬೇಕು.
4 मोठ्या दगडांचे तीन थर आणि मोठ्या लाकडाचा एक थर असावा. त्याचा खर्च राजाच्या घरातून केला जावा.
ದೊಡ್ಡ ಕಲ್ಲುಗಳ ಮೂರು ಸಾಲುಗಳಾದ ಮೇಲೆ ಹೊಸ ಮರದ ಒಂದು ಸಾಲನ್ನು ಹಾಕಿ ಕಟ್ಟಬೇಕು. ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲ್ಪಡುವುದು.
5 देवाच्या घरातील सोन्यारुप्याची पात्रे जी नबुखद्नेस्सराने यरूशलेमेच्या मंदिरातून काढून बाबेलला आणली आहेत ती परत करावी. ती तू यरूशलेमास पाठवावी आणि देवाच्या घरात जमा करावी.’
ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ಬಾಬಿಲೋನಿಗೆ ತೆಗೆದುಕೊಂಡು ಹೋದ ಬೆಳ್ಳಿ, ಬಂಗಾರದ ದೇವಸ್ಥಾನ ಪಾತ್ರೆಗಳನ್ನು ಹಿಂತಿರುಗಿ ಕೊಡಬೇಕು. ಅವುಗಳನ್ನೆಲ್ಲಾ ಮೊದಲಿದ್ದ ಸ್ಥಳಕ್ಕೆ ಅಂದರೆ ಯೆರೂಸಲೇಮಿನ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಡಬೇಕು’ ಎಂಬುದಾಗಿ ಬರೆದಿತ್ತು.
6 आता नदीपलीकडील ततनइ, शथर-बोजनइ आणि तुमचे साथीदार अधिकारी जे नदीपलीकडे आहा ते तुम्ही तेथून दूर व्हा.
“ಆಗ ದಾರ್ಯಾವೆಷನು ಬರೆದು ಕಳುಹಿಸಿದ್ದೇನೆಂದರೆ, ಹೊಳೆಯಾಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈ, ಶೆತರ್ಬೋಜೆನೈ, ಹೊಳೆಯಾಚೆಯಲ್ಲಿ ಇವರು ಜೊತೆಗಾರರಾದ ಅಪರ್ಸತ್ಕಾಯರು ಇವರಿಗೆ, ನೀವು ಅವರ ಗೊಡವೆಗೆ ಹೋಗಬೇಡಿರಿ.
7 देवाच्या घराचे काम चालू द्या. यहूदी अधिकारी आणि यहूदी वडीलांनी हे देवाचे मंदिर त्याच्या जागी पुन्हा बांधावे.
ಆ ದೇವಾಲಯವನ್ನು ಕಟ್ಟುವ ಕೆಲಸಕ್ಕೆ ಅಡ್ಡಿ ಮಾಡಬೇಡಿರಿ. ಯೆಹೂದ ದೇಶಾಧಿಪತಿಯು, ಯೆಹೂದ್ಯರ ಹಿರಿಯರು ಇವರೇ ಅದನ್ನು ಅದರ ಸ್ಥಳದಲ್ಲಿ ಕಟ್ಟಲಿ.
8 आता माझा आदेश असा आहे. देवाचे मंदिर बांधण्यासाठी यहूदी वडीलजनांसाठी पूर्ण खर्च राजाच्या निधीतून नदीच्या पलीकडील येणाऱ्या खंडणीतून त्या मनुष्यांना देण्यासाठी वापरावा. यासाठी की, त्यांनी त्यांचे काम थांबवू नये.
ಆ ದೇವಾಲಯವನ್ನು ಕಟ್ಟುವುದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ ಹೊಳೆಯಾಚೆಯ ಪ್ರಾಂತ್ಯಗಳ ಕಪ್ಪದಿಂದ ತಡಮಾಡದೆ ಎಲ್ಲಾ ವೆಚ್ಚವನ್ನು ಕೊಡಬೇಕು.
9 स्वर्गातील देवाच्या होमार्पणासाठी त्या लोकांस जे काही लागेल ते बैल, मेंढे, कोकरे आणि यरूशलेमेमधील याजकांना मागतील तितके गहू, मीठ, द्राक्षरस तेल या वस्तू त्यांना रोजच्या रोज न चुकता द्या.
ಅವರು ಪರಲೋಕದೇವರ ಸರ್ವಾಂಗಹೋಮಗಳಿಗೋಸ್ಕರ ಬೇಕಾದ ಹೋರಿ, ಟಗರು, ಕುರಿಮರಿಗಳನ್ನೂ, ಗೋದಿ, ಉಪ್ಪು, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ಯೆರೂಸಲೇಮಿನ ಯಾಜಕರು ಹೇಳುವ ಪ್ರಕಾರ ಪ್ರತಿದಿನವೂ ತಪ್ಪದೆ ಒದಗಿಸಿ ಕೊಡಬೇಕು ಎಂಬುದಾಗಿಯೂ ಆಜ್ಞಾಪಿಸುತ್ತೇನೆ.
10 १० हे करा यासाठी की, त्यांनी स्वर्गातील देवाला अर्पण आणावे आणि राजासाठी, माझ्यासाठी व माझ्या मुलासाठी देवाकडे प्रार्थना करावी.
೧೦ಅವರಾದರೋ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯಷ್ಯಕ್ಕಾಗಿ ಪ್ರಾರ್ಥನೆಮಾಡಲಿ.
11 ११ मी तुम्हास आज्ञा करतो की, जो कोणी माझ्या आज्ञेचे उल्लंघन करील त्याच्या घराचे लाकूड काढून त्याच्यावर त्यास टांगावे. त्या अपराधामुळे त्याचे घर कचऱ्याचा ढिग करावा.
೧೧ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವುದಾದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು, ಅದನ್ನು ಶೂಲವನ್ನಾಗಿ ಮಾಡಿ, ಅದರ ಮೇಲೆ ಅವನನ್ನು ಏರಿಸಬೇಕು ಮತ್ತು ಅ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕೆಂದು ಆಜ್ಞಾಪಿಸಿದ್ದೇನೆ.
12 १२ यरूशलेमेतील देवाच्या या मंदिराचा नाश करण्यास किंवा उल्लंघन करणारा जो कोणी राजा असो किंवा लोक आपले हात लावतील त्यांचा नाश जो देव तेथे राहतो तो करील. मी दारयावेश हा हुकूम करीत आहे. तो पूर्णपणे पाळावा.”
೧೨ಮತ್ತು ತನ್ನ ಹೆಸರನ್ನು ಸ್ಥಾಪಿಸುವುದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವುದಕ್ಕೂ, ಯೆರೂಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಮತ್ತು ಪ್ರತಿಯೊಂದು ಜನಾಂಗವನ್ನೂ ಕೆಡವಿ ಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಉದಾಸೀನತೆಯಿಂದ ಅಲಕ್ಷಿಸದೆ ಕೈಕೊಳ್ಳಬೇಕು” ಎಂದು ತಿಳಿಸಿದನು.
13 १३ नदीच्या पलीकडील अधिकारी ततनइ, शथर-बोजनइ आणि त्यांचे सोबती यांनी राजा दारयावेशाच्या आदेशाच्या प्रत्येक गोष्टीचे पालन केले.
೧೩ಅರಸನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟಿದ್ದರಿಂದ ಹೊಳೆಯ ಈಚೆಯ ದೇಶಾಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಮತ್ತು ಅವರ ಜೊತೆಗಾರರೂ ಜಾಗರೂಕರಾಗಿ ಅದನ್ನು ಅನುಸರಿಸಿದರು.
14 १४ यहूद्यांचे वडील बांधणीचे काम करीत राहिले. हाग्गय हा संदेष्टा आणि इद्दोचा मुलगा जखऱ्या यांनी प्रोत्साहन दिल्यामुळे त्यामध्ये त्यांना यश आले. इस्राएलाच्या देवाच्या आज्ञेप्रमाणे आणि पारसाचे राजे कोरेश, दारयावेश व अर्तहशश्त यांच्या आदेशानुसार यांनी मंदिर बांधून पूर्ण केले.
೧೪ಯೆಹೂದ್ಯರ ಹಿರಿಯರು, ಪ್ರವಾದಿಯಾದ ಹಗ್ಗೈ, ಇದ್ದೋವಿನ ಮಗನಾದ ಜೆಕರೀಯ ಇವರ ಪ್ರವಾದನೆಯಿಂದ ಪ್ರೇರಿತರಾಗಿ ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಾಯೇಲ್ ದೇವರ ಆಜ್ಞಾನುಸಾರವಾಗಿಯೂ ಪರ್ಷಿಯ ರಾಜರಾದ ಕೋರೆಷ್, ದಾರ್ಯಾವೆಷ್, ಅರ್ತಷಸ್ತ ಇವರ ಅಪ್ಪಣೆಯ ಆಧಾರದಿಂದಲೂ ಕಟ್ಟಡವನ್ನು ಮುಗಿಸಿದರು.
15 १५ हे मंदिर राजा दारयावेशाच्या कारकिर्दीच्या सहाव्या वर्षी अदार महिन्याच्या तृतीयेला पूर्ण झाले.
೧೫ಅರಸನಾದ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಕಟ್ಟಿ ಪೂರೈಸಿದರು.
16 १६ इस्राएल लोकांनी, याजक, लेवी, बंदिवासातून आलेले यांनी देवाच्या मंदिराची प्रतिष्ठापना आनंदाने केली.
೧೬ಯಾಜಕರೂ, ಲೇವಿಯರೂ ಮತ್ತು ಸೆರೆಯಿಂದ ಹಿಂತಿರುಗಿ ಬಂದ ಬೇರೆ ಇಸ್ರಾಯೇಲರೂ ಸಂತೋಷದಿಂದ ಆ ದೇವಾಲಯದ ಪ್ರತಿಷ್ಠೆಯನ್ನು ಆಚರಿಸಿದರು.
17 १७ प्रतिष्ठापनेच्या वेळी त्यांनी शंभर बैल, दोनशे मेंढे, चारशे कोकरे होमात अर्पण केले. तसेच इस्राएलाच्या पापार्पणासाठी बारा बकरेही अर्पण केले. इस्राएलाच्या बारा घराण्यासाठी प्रत्येकी एक असे ते होते.
೧೭ಅವರು ಆ ದೇವಾಲಯದ ಪ್ರತಿಷ್ಠೆಗೋಸ್ಕರ ನೂರು ಹೋರಿ, ಇನ್ನೂರು ಟಗರು, ನಾನೂರು ಕುರಿಮರಿ ಇವುಗಳನ್ನೂ, ಇಸ್ರಾಯೇಲರ ದೋಷಪರಿಹಾರಾರ್ಥವಾಗಿ ಅವರ ಕುಲಗಳ ಸಂಖ್ಯಾನುಸಾರ ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು.
18 १८ यरूशलेममधील या मंदिराच्या सेवेसाठी त्यांनी मोशेच्या पुस्तकात लिहिल्याप्रमाणे, याजकांची आणि लेव्याची त्यांच्या-त्यांच्या वर्गानुसार योजना केली.
೧೮ಆ ಮೇಲೆ ಯಾಜಕರ ಮತ್ತು ಲೇವಿಯರ ಆಯಾ ಮಾರ್ಗಗಳನ್ನು ಮೋಶೆಯ ಧರ್ಮಶಾಸ್ತ್ರ ನಿಯಮದ ಪ್ರಕಾರ ಯೆರೂಸಲೇಮಿನ ದೇವರ ಸೇವೆಗೆ ನೇಮಿಸಿದರು.
19 १९ बंदिवासातून परत आलेल्या लोकांनी पहिल्या महिन्याच्या चौदाव्या दिवशी वल्हांडण सण पाळला.
೧೯ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕವನ್ನು ಆಚರಿಸಿದರು.
20 २० वल्हांडण सण साजरा करण्यासाठी याजक आणि लेवी यानी एकचित्ताने स्वत: ला शुद्ध केले. कैदेतून आलेल्या सर्व लोकांसाठी व आपल्यासाठी त्यांनी वल्हांडणाचा कोकरा बली दिला.
೨೦ಯಾಜಕರೂ ಮತ್ತು ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡರು. ಎಲ್ಲರೂ ಶುದ್ಧವಾದನಂತರ ಲೇವಿಯರು ದೇಶಾಂತರದಿಂದ ಹಿಂದಿರುಗಿ ಬಂದವರಿಗೋಸ್ಕರವೂ, ತಮಗೋಸ್ಕರವೂ ಪಸ್ಕದ ಕುರಿಮರಿಗಳನ್ನು ವಧಿಸಿದರು.
21 २१ बंदिवासातून परतून आलेल्या समस्त इस्राएल लोकांनी वल्हांडणाचे भोजन केले. इस्राएलाचा देव परमेश्वर याला शोधायला जे देशातील लोकांच्या अशुद्धतेपासून दूर होऊन त्यांच्याकडे आले होते त्यांनी ते खाल्ले.
೨೧ದೇಶಾಂತರದಿಂದ ಬಂದ ಇಸ್ರಾಯೇಲರೂ ಇಸ್ರಾಯೇಲ್ ದೇವರಾದ ಯೆಹೋವನನ್ನು ಹುಡುಕುವುದಕ್ಕಾಗಿ ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದುಬಿಟ್ಟು, ಇವರೊಡನೆ ಕೂಡಿಕೊಂಡವರೆಲ್ಲರೂ ಪಸ್ಕಭೋಜನಮಾಡಿದರು.
22 २२ बेखमीर भाकरीचा सण त्यांनी उत्साहाने सात दिवस साजरा केला. कारण देवाच्या, इस्राएलाच्या देवाच्या मंदिराच्या कामात त्यांचे हात मजबूत करायला परमेश्वराने अश्शूरच्या राजाचे मन त्यांच्याकडे फिरवून त्यांना आनंदीत केले.
೨೨ಇದಲ್ಲದೆ ಇಸ್ರಾಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿನಗಳ ವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.

< एज्रा 6 >