< यिर्मया 9 >

1 जर माझे मस्तक पाण्याने भरलेले असते आणि माझे डोळे अश्रूंचे झरे असते तर मी माझ्या नाश पावलेल्या लोकांच्या कन्येसाठी अहोरात्र रडलो असतो तर किती बरे झाले असते.
ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!
2 जर वाळवंटात माझासाठी एक ठिकाण असते, तर मी माझ्या लोकांस सोडून त्यांच्यापासून खूप दूर गेलो असतो, कारण ते सर्व व्यभिचारी आणि विद्रोही असे आहेत.
ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು! ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ.
3 कारण ते त्यांच्या जिभेने खोटे बाण सोडतात, पण ते या पृथ्वीवर विश्वासूपणात मोठे नाहीत. ते एका पापाकडून दुसऱ्या पापाकडे जातात. ते मला ओळखत नाही, परमेश्वर असे म्हणातो.
ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.
4 तुम्ही प्रत्येक आपल्या शेजाऱ्याविषयी सावध असा आणि कोणत्याही भावावर विश्वास ठेवू नका? कारण प्रत्येक भाऊ फसवणारा आहे आणि प्रत्येक शेजारी निंदा करणारा आहे.
ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ. ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು.
5 प्रत्येक मनुष्य आपल्या शेजाऱ्याची थट्टा करतो आणि सत्य बोलत नाही. त्यांची जीभ खोटे बोलते. दुष्टाई करण्यासाठी ते आपणाला दमवतात.
ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ. ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ.
6 तू आपल्या कपटामध्ये राहतो, त्यांच्या कपटामुळे ते मला ओळखायला नाकारतात, असे परमेश्वर म्हणतो.
ನಿಮ್ಮ ನಿವಾಸವು ಮೋಸದೊಳಗೆ ಇದೆ; ಅಯ್ಯೋ, ಅವರು ಮೋಸಗಾರರಾಗಿರುವುದರಿಂದ ನನ್ನನ್ನು ತಿಳಿಯರು ಎಂದು ಯೆಹೋವನು ನುಡಿಯುತ್ತಾನೆ.
7 यास्तव सेनाधीश परमेश्वर असे म्हणतो: पाहा! मी त्यांची परिक्षा घेईल आणि त्यांना तपासून पाहीन. कारण मी आपल्या लोकांच्या कन्येकरिता आणखी काय करू?
ಹೀಗಿರಲು ಸೇನಾಧೀಶ್ವರನಾದ ಯೆಹೋವನು, “ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು.
8 त्यांच्या जिभा टोकदार बाणाप्रमाणे आहेत. त्या अविश्वासू गोष्टी बोलतात. प्रत्येकजण शेजाऱ्याशी वरवर चांगले बोलतो. पण गुप्तपणे ते शेजाऱ्यावर टपून असतात.
ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಆಡುತ್ತದೆ; ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದೂ ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ.
9 या गोष्टींमुळे मी त्यांना शिक्षा करणार नाही काय? “अशा गोष्टींविषयी या राष्ट्रावर मी सूड उगवू नये का? परमेश्वर असे म्हणतो.
ನಾನು ಅವರನ್ನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ?” ಎಂದು ನುಡಿಯುತ್ತಾನೆ.
10 १० मी डोंगरासाठी आकांत व विलाप करीन आणि मी कुरणांसाठी शोकगीत गाईन. कारण ती जाळून टकली आहे, तेथून आता कोणीही प्रवास करीत नाही. त्यांना गुरांचा आवाजही ऐकू येत नाही. आकाशातील पक्षी आणि प्राणी दूर निघून गेले आहेत.
೧೦“ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.
11 ११ म्हणून मी यरूशलेम नगरी कचऱ्याचा ढीग करीन. ते कोल्ह्यांचे वसतिस्थान होईल. मी यहूदातील नगरे नष्ट करीन. मग तेथे कोणीही राहणार नाही.”
೧೧ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.
12 १२ या गोष्टी समजण्याइतका सुज्ञ कोणी आहे का? परमेश्वराच्या मुखाने जे काही घोषीत केले, म्हणजे ते तो कळवू शकेल काय? या भूमीचा नाश का झाला? जेथे कोणीही जात नाही अशा वाळवंटासारखी ती का केली गेली.
೧೨ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟು ಹೋದದ್ದು ಏಕೆ? ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು?
13 १३ परमेश्वर म्हणाला, “हे असे झाले कारण, त्यांनी माझ्या शिकवणुकीला सोडून दिले, जे मी त्यांच्या समोर ठेवली होती, आणि त्यांनी माझी वाणी ऐकाण्यास आणि त्यावर चालण्यास नकार दिला.
೧೩ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು, “ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಾರದೆ, ನನ್ನ ಮಾತನ್ನು ಕೇಳದೆ ಹೋದರು.
14 १४ हे असे झाले कारण ते आपल्या दुराग्रही हृदयाच्या मर्जी प्रमाणे वागले आणि त्यांच्या वडिलांनी त्यांना शिकवल्या प्रमाणे, बालदेवास अनुसरले.”
೧೪ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.
15 १५ यास्तव सेनाधीश परमेश्वर, इस्राएलाचा देव असे म्हणतो, “मी या लोकांस कडू दवणा खायला लावीन आणि विषारी पाणी प्यायला लावीन.
೧೫ಆದುದರಿಂದ ಆಹಾ, ನಾನು ಈ ಜನರಿಗೆ ವಿಷದ ಆಹಾರವನ್ನು ಮತ್ತು ಕಹಿಯಾದ ಪಾನಗಳನ್ನು ಕೊಡುವೆನು.
16 १६ नंतर मी त्यांना आशा राष्ट्रांमध्ये विखरुन टाकीन त्यांनी किंवा त्यांच्या वडिलांनी पूर्वी कधीही ज्यांच्याबद्दल ऐकले नव्हते. आणि मी सर्व लोकांचा नाश होईपर्यंत त्यांच्या मागे तलवार पाठवीन.”
೧೬ಇವರಿಗಾಗಲಿ ಅಥವಾ ಇವರ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು, ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು” ಎಂದು ಹೇಳುತ್ತಾನೆ.
17 १७ सेनाधीश परमेश्वर असे म्हणतो, “या गोष्टींचा विचार करा. प्रेतयात्रेच्या वेळी रडणाऱ्यांना बोलवा, त्यांना येऊ द्या. आक्रंदणात कुशल असलेल्या स्त्रियांना बोलवा, त्यांना येऊ द्या.
೧೭ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, “ನಿಮ್ಮ ಬಗ್ಗೆ ಯೋಚಿಸಿರಿ; ರೋದನ ಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ.
18 १८ त्यांनी घाईने आमच्यासाठी विलाप करवा. म्हणजे आमचे डोळे भरुन येतील आणि अश्रूंचा पूर येईल.
೧೮ಅವರು ತ್ವರೆಪಟ್ಟು ನಮ್ಮ ನೇತ್ರಗಳಿಂದ ಧಾರೆಹೊರಡುವಂತೆಯೂ, ನಮ್ಮ ಕಣ್ಣುಗಳಿಂದ ನೀರುಕ್ಕುವಂತೆಯೂ ನಮಗೋಸ್ಕರ ಗೋಳಾಡಲಿ.
19 १९ सियोनमधून विलापाचा आवाज ऐकायला येतो आहे. आम्ही कसे उद्ध्वस्त झालो आहोत, कारण आमची खरोखरच अप्रतिष्ठा झाली. आम्ही आपली भूमी सोडली आहे, कारण त्यांनी आमची घरे पाडून टाकली आहेत.”
೧೯‘ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, ಶತ್ರುಗಳು ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ’” ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ.
20 २० तर स्त्रियांनो, परमेश्वराचे वचन ऐका, त्याच्या मुखातील निघणाऱ्या संदेशाकडे चित्त लावा. नंतर तुमच्या मुलींना मोठ्याने विलाप करण्यास शिकव आणि शेजारील प्रत्येक स्त्रीला शोकगीत शिकवा.
೨೦ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ. ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಡುವುದನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸ ಮಾಡಿಸಲಿ;
21 २१ कारण बाहेर असलेली मुले आणि चौकात तरुणांना नाहीसे करण्यास मृत्यू आमच्या खिडक्यातून चढून आला आहे. तो आमच्या राजवाड्यांमध्ये शिरला आहे.
೨೧ಏಕೆಂದರೆ ಬೀದಿಗಳಲ್ಲಿ ಮಕ್ಕಳೂ, ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಅರಮನೆಗಳೊಳಗೆ ನುಗ್ಗಿದೆ.
22 २२ असे सांग: परमेश्वर असे म्हणतो, जसे उघड्यावर खत पडते आणि कापणाऱ्या मागे पेंढीतून गळण पडते, तशी मनुष्याची प्रेते पडतील, आणि ती कोणी गोळा करणार नाहीत.
೨೨“ಈ ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುದು; ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಸಿವುಡಿನಂತೆ ಇರುವವು, ಯೆಹೋವನ ಈ ಮಾತನ್ನು ಸಾರು” ಎಂದು ನನಗೆ ಅಪ್ಪಣೆಯಾಯಿತು.
23 २३ परमेश्वर म्हणतो, “शहाण्यांनी त्यांच्या शहाणपणाबद्दल, बलवानांनी त्यांच्या बळाबद्दल व श्रीमंतांनी त्यांच्या पैशाबद्दल अभिमान बाळगू नये.”
೨೩ಯೆಹೋವನು ಹೀಗೆನ್ನುತ್ತಾನೆ, “ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ.
24 २४ पण जर कोणाला अभिमान बाळगायचा असेल या गोष्टीत बाळगावा, की तो मला समजतो आणि मला ओळखोतो, कारण मी परमेश्वर आहे, जो प्रामाणिकपणा व न्याय आणि नितीमानता या पृथ्वीवर चालवतो, कारण या गोष्टींमध्ये मला हर्ष वाटतो, परमेश्वर असे म्हणतो.
೨೪ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು, ನಾನು ಲೋಕದಲ್ಲಿ ಪ್ರೀತಿ, ನೀತಿ ಮತ್ತು ನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬುವುದಕ್ಕೇ ಹೆಚ್ಚಳಪಡಲಿ; ಪ್ರೀತಿ, ನೀತಿ ಮತ್ತು ನ್ಯಾಯಗಳೇ ನನಗೆ ಆನಂದ” ಎಂದು ಯೆಹೋವನು ನುಡಿಯುತ್ತಾನೆ.
25 २५ परमेश्वर असे म्हणतो, ज्यांची फक्त शारीरिक सुंता झाली आहे, अशांना शिक्षा करण्याचे दिवस येत आहेत.
೨೫“ಆಹಾ, ಐಗುಪ್ತರು, ಯೆಹೂದ್ಯರು, ಎದೋಮ್ಯರು, ಅಮ್ಮೋನ್ಯರು, ಮೋವಾಬ್ಯರು, ಚಂಡಿಕೆಯನ್ನು ಬಿಟ್ಟುಕೊಂಡಿರುವ ಅರಣ್ಯದ ನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ.
26 २६ मिसर, यहूदा, अदोम, अम्मोन, मवाब यातील व वाळवंटात राहणारे, ज्यांनी आपल्या डोक्यावरचे केस कापले त्यांना शासन करीन. कारण ही सर्व राष्ट्रे बेसुनत आहेत, आणि इस्राएलाचे सर्व घराणे बेसुनत हृदयाचे आहेत.
೨೬ಏಕೆಂದರೆ ಸಕಲ ಜನಾಂಗಗಳವರೂ ಸುನ್ನತಿಹೀನರು, ಎಲ್ಲಾ ಇಸ್ರಾಯೇಲ್ ವಂಶದವರೂ ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ನುಡಿಯುತ್ತಾನೆ.

< यिर्मया 9 >