< गणना 14 >

1 त्या रात्री सर्व मंडळीने गळा काढून जोरजोरात आक्रोश केला आणि रडले.
ಆಗ ಜನಸಮೂಹದವರೆಲ್ಲರೂ ತಮ್ಮ ಸ್ವರ ಎತ್ತಿ ಆ ರಾತ್ರಿಯೆಲ್ಲಾ ಗೋಳಾಡಿದರು.
2 इस्राएल लोकांनी मोशे आणि अहरोनाविरूद्ध तक्रारी केल्या. सर्व मंडळी त्यांना म्हणाली “आम्ही मिसर देशामध्ये किंवा रानात मरण पावलो असतो तर बरे झाले असते.
ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, “ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು
3 तलवारीने आमचा नाश व्हावा म्हणून या नवीन प्रदेशात युद्धात जाण्यासाठीच परमेश्वराने आम्हास इथे आणले का? शत्रू आम्हास मारून टाकील आणि आमच्या स्त्रिया मुलांना घेऊन जाईल. मिसर देशात परत जाणेच आमच्या दृष्टीने जास्त बरे आहे.”
ಯೆಹೋವನು ನಮ್ಮನ್ನು ಯಾಕೆ ಕತ್ತಿಯ ಬಾಯಿಂದ ಸಾಯಿಸುವುದಕ್ಕೆ ಈ ದೇಶಕ್ಕೆ ಕರೆದುಕೊಂಡು ಬಂದನು. ನಮ್ಮ ಹೆಂಡತಿಯರು ಮತ್ತು ಮಕ್ಕಳು ಬೇರೆಯವರ ಪಾಲಾಗುವರು. ನಾವು ಐಗುಪ್ತ ದೇಶಕ್ಕೆ ತಿರುಗಿ ಹೋಗುವುದು ಒಳ್ಳೆಯದಲ್ಲವೇ” ಎಂದು ಮಾತನಾಡಿಕೊಂಡರು.
4 नंतर ते एकमेकांना म्हणाले, “आपण आता दुसरा नेता निवडू आणि मिसर देशात परत जाऊ.”
ಹೀಗೆ ಅವರು ಒಬ್ಬರ ಸಂಗಡಲೊಬ್ಬರು, “ನಾವು ಬೇರೆ ನಾಯಕನನ್ನು ನೇಮಿಸಿಕೊಂಡು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗೋಣ” ಎಂದು ಮಾತನಾಡಿಕೊಂಡರು.
5 तिथे जमलेल्या सर्व इस्राएलांच्या मंडळीसमोर मोशे आणि अहरोन पालथे पडले.
ಆಗ ಮೋಶೆ ಮತ್ತು ಆರೋನರು ಇಸ್ರಾಯೇಲರ ಸರ್ವಸಮೂಹದವರ ಮುಂದೆ ಅಡ್ಡಬಿದ್ದರು.
6 नूनाचा मुलगा यहोशवा आणि यफुन्नेचा मुलगा कालेब, जे कोणी देश तपासणीसाठी पाठवले होते त्यामधील हे दोघे होते, त्यांनी आपली वस्त्रे फाडली.
ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡರು.
7 ते इस्राएल लोकांच्या सर्व मंडळीशी बोलले. ते म्हणाले, आम्ही जो देश हेरायला येथून तेथे फिरलो तो देश खूप चांगला आहे.
ಅವರು ಇಸ್ರಾಯೇಲರ ಸರ್ವಸಮೂಹದವರಿಗೆ ಹೀಗೆ ಹೇಳಿದರು, “ನಾವು ಸಂಚರಿಸಿ ನೋಡಿದ ದೇಶವು ಅತ್ಯುತ್ತಮವಾದದ್ದು.
8 जर परमेश्वर आपल्यावर प्रसन्न झाला तर तो आपल्याला त्या देशात नेईल आणि तो दूध व मध वाहणारा देश आपल्याला देईल.
ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಹಾಲೂ, ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.
9 “परंतु परमेश्वराविरूद्ध बंड करू नका आणि त्या देशातल्या लोकांची भीती बाळगू नका. आपल्या अन्नाप्रमाणे आपण त्यांना सहज भक्ष्य करू. त्यांचे संरक्षण त्यांच्यापासून काढले जाईल, कारण परमेश्वर आमच्याबरोबर आहे. त्यांना घाबरु नका.”
ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು.
10 १० पण सर्व मंडळी म्हणू लागली त्यांना दगडमार करा. परंतु परमेश्वराचे तेज दर्शनमंडपावर इस्राएल लोकांस दिसले.
೧೦ಆದರೆ ಜನಸಮೂಹದವರೆಲ್ಲರೂ ಅವರ ಮಾತುಗಳನ್ನು ಕೇಳದೆ, ಅವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಹೇಳಿಕೊಳ್ಳುತ್ತಿರುವಾಗ, ಯೆಹೋವನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಪ್ರಕಾಶಿಸಿ ಇಸ್ರಾಯೇಲರೆಲ್ಲರಿಗೂ ಕಾಣಿಸಿಕೊಂಡಿತು.
11 ११ परमेश्वर मोशेला म्हणाला, “हे लोक कोठवर मला तुच्छ लेखतील? ह्यांच्यामध्ये मी केलेली शक्तीशाली चिन्हे पाहूनही त्याची पर्वा न करता माझ्यावर विश्वास ठेवण्यास चुकत आहेत.
೧೧ಯೆಹೋವನು ಮೋಶೆಗೆ, “ಈ ಜನರು ಇನ್ನು ಎಷ್ಟರವರೆಗೆ ನನ್ನನ್ನು ಅಲಕ್ಷ್ಯಮಾಡುವರು? ನಾನು ನಡೆಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರು?
12 १२ मी त्यांना मरीने मारून टाकीन. मी त्यांचा वारसा हक्क काढून घेईल, आणि मी तुझ्या स्वतःच्या कुळापासून त्यांच्यापेक्षा मोठे व सामर्थ्यशाली राष्ट्र करीन.”
೧೨ನಾನು ಇವರಿಗೆ ವ್ಯಾಧಿಯನ್ನು ಉಂಟುಮಾಡಿ ಇವರನ್ನು ನಿರ್ಮೂಲಮಾಡುವೆನು. ಈ ಜನರಿಗಿಂತ ನಿನ್ನನ್ನು ದೊಡ್ಡದಾಗಿಯೂ, ಬಲಿಷ್ಠವಾಗಿಯೂ ಇರುವ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.
13 १३ मोशे परमेश्वरास म्हणाला, जर तू असे केलेस तर ते मिसरी लोक ऐकतील कारण तू आपल्या सामर्थ्याने या लोकांस बाहेर आणले.
೧೩ಅದಕ್ಕೆ ಮೋಶೆಯು ಯೆಹೋವನಿಗೆ, “ನೀನು ಹೀಗೆ ಮಾಡುವುದಾದರೆ ಐಗುಪ್ತ್ಯರು ಈ ಸುದ್ದಿಯನ್ನು ಕೇಳುವರು. ಅವರ ಕೈಯಿಂದ ನೀನು ಈ ಜನರನ್ನು ಭುಜಪರಾಕ್ರಮದಿಂದ ಬಿಡಿಸಿದ ಈ ಸಂಗತಿಯನ್ನು ಈ ಕಾನಾನ್ ದೇಶದ ನಿವಾಸಿಗಳಿಗೆ ತಿಳಿಸುವರು.
14 १४ ते त्या देशातल्या राहणाऱ्यांना हे सांगतील, त्यांनी ऐकले आहे की तू परमेश्वर या लोकांच्या मध्ये आहेस, कारण तू परमेश्वर प्रत्यक्ष दिसत आहेस तुझा ढग त्यांच्यावरती उभा राहतो, आणि दिवसा ढगाच्या खांबात रात्री त्या ढगाचा अग्नीच्या खांबात तू त्यांच्यापुढे चालतोस.
೧೪ಅಲ್ಲದೆ ಯೆಹೋವನಾದ ನೀನು ಇಸ್ರಾಯೇಲರ ಮಧ್ಯದಲ್ಲಿ ಇರುವ ಸಂಗತಿಯನ್ನು, ನೀನು ಇಸ್ರಾಯೇಲರಿಗೆ ಪ್ರತ್ಯಕ್ಷವಾಗಿ ಕಾಣಿಸಿಕೊಳ್ಳುವುದನ್ನು, ಹಗಲಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಇದ್ದು ಇವರ ಮುಂದೆ ನಡೆದುಹೋಗುವುದಾಗಿ ಹಾಗೂ ನೀನಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಈ ದೇಶದವರು ಕೇಳಿದ್ದಾರೆ.
15 १५ आता जर तू या लोकांस एका मनुष्याप्रमाणे मारले, तर ज्या राष्ट्रांनी तुझी किर्ती ऐकली आहे ते बोलतील आणि म्हणतील,
೧೫ಹೀಗಿರಲಾಗಿ ನೀನು ಒಂದೇ ಪೆಟ್ಟಿನಿಂದ ಈ ಜನರನ್ನೆಲ್ಲಾ ಸಾಯಿಸಿದರೆ ನಿನ್ನ ಪ್ರಖ್ಯಾತಿಯನ್ನು ಕೇಳಿದ ಜನಾಂಗದವರು ನಿನ್ನ ವಿಷಯದಲ್ಲಿ,
16 १६ परमेश्वराने त्यांना जो देश देण्याचे शपथपूर्वक सांगितले होते त्यामध्ये तो आणू शकला नाही म्हणून त्याने त्यांना रानात मारून टाकले.
೧೬“‘ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ಆ ಜನರನ್ನು ಸೇರಿಸುವುದಕ್ಕೆ ಶಕ್ತಿಸಾಲದೆ, ಅವರನ್ನು ಅರಣ್ಯದಲ್ಲಿ ಕೊಂದುಹಾಕಿಬಿಟ್ಟನು’ ಎಂದು ಮಾತನಾಡಿಕೊಳ್ಳುವರು.
17 १७ “म्हणून आता मी विनंती करतो, तुझ्या महान सामर्थ्याचा उपयोग कर. तू, म्हणाला होतास,
೧೭ಈಗ ನೀನು ಹೇಳಿದ ಪ್ರಕಾರ ಯೆಹೋವನ ಬಲವು ದೊಡ್ಡದಾಗಿರಲಿ ಎಂದು ಬೇಡಿಕೊಳ್ಳುತ್ತೇನೆ. ನಿನ್ನ ವಿಷಯದಲ್ಲಿ,
18 १८ परमेश्वर रागवायला मंद आहे आणि विपुल दयेने भरलेला आहे. तो अपराधांची व अधर्माची क्षमा करतो पण जे लोक अपराधी आहेत त्यांची मुळीच गय करत नाही. तो पूर्वजांच्या पापाबद्दल त्यांच्या वंशजाच्या तिसऱ्या व चौथ्या पिढीवर वडिलांच्या अन्यायाची शिक्षा लेकरांना करतो.
೧೮‘ಯೆಹೋವನು ದೀರ್ಘಶಾಂತನು, ದಯೆಯುಳ್ಳವನು, ಅಪರಾಧ ಪಾಪಗಳನ್ನು ಕ್ಷಮಿಸುವವನು, ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ಹೇಳಿದ್ದಿ.
19 १९ मी तुला विनंती करतो, तुझ्या महान विश्वसनीयतेच्या कराराने त्यांच्या पापांची क्षमा कर. त्यांनी मिसर सोडल्यापासून आतापर्यंत तू जसा त्यांना क्षमा करीत आला आहेत तशीच आताही त्यांना क्षमा कर.”
೧೯ನಾವು ಐಗುಪ್ತ ದೇಶದಿಂದ ಬಂದ ದಿನದಿಂದ ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.
20 २० परमेश्वर म्हणाला, “तू विनंती केल्याप्रमाणे मी त्यांना क्षमा केली आहे.”
೨೦ಅದಕ್ಕೆ ಯೆಹೋವನು, “ನಿನ್ನ ಪ್ರಾರ್ಥನೆಯ ಮೇರೆಗೆ ನಾನು ಅವರನ್ನು ಕ್ಷಮಿಸಿದ್ದೇನೆ.
21 २१ पण खचित जसा मी जिवंत आहे आणि सारी पृथ्वी परमेश्वराच्या वैभवाने भरलेली आहे.
೨೧ಆದರೆ ನನ್ನ ಜೀವದಾಣೆ, ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರುವುದು.
22 २२ ज्या सर्व लोकांनी माझे वैभव आणि मिसर देशात व रानात सामर्थ्याची चिन्हे पाहिले. तरी दहादा त्यांनी माझी परीक्षा पाहिली आणि माझी वाणी ऐकली नाही.
೨೨ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ
23 २३ मी जो देश त्यांच्या पूर्वजांना शपथपूर्वक देऊ केला तो ते खचित पाहणार नाहीत. ज्यांनी मला तुच्छ मानले त्यांच्यापैकी तो कोणीही पाहणार नाही.
೨೩ನಾನು ಅವರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ; ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ.
24 २४ पण माझा सेवक कालेब याच्यासोबत वेगळा आत्मा होता. तो माझे अनुकरण पूर्णपणे करतो. म्हणून ज्या देशात तो गेला होता त्या देशात मी त्यास नेईल. आणि त्याच्या वंशजांना तो देश वतन होईल.
೨೪ನನ್ನ ದಾಸನಾದ ಕಾಲೇಬನಿಗೆ ಅವರಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದುದ್ದರಿಂದ ಅವನು ಸಂಚರಿಸಿದ ಆ ದೇಶದಲ್ಲಿ ಅವನನ್ನು ಸೇರಿಸುವೆನು, ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.
25 २५ अमालेकी आणि कनानी लोक खोऱ्यात राहत आहेत. म्हणून उद्या तुम्हीही जागा सोडली पाहिजे. तांबड्या समुद्राकडे रस्त्यावरच्या रानात परत जा.
೨೫ಅಮಾಲೇಕ್ಯರೂ, ಕಾನಾನ್ಯರೂ ಆ ತಗ್ಗಿನಲ್ಲಿ ವಾಸವಾಗಿದ್ದಾರೆ. ನೀವು ನಾಳೆ ಹಿಂದಿರುಗಿ ಕೆಂಪು ಸಮುದ್ರಕ್ಕೆ ಹೋಗುವ ದಾರಿಯಲ್ಲಿ ಅರಣ್ಯಕ್ಕೆ ಪ್ರಯಾಣಮಾಡಬೇಕು” ಎಂದು ಹೇಳಿದನು.
26 २६ परमेश्वर मोशे आणि अहरोनाशी बोलला. तो म्हणाला,
೨೬ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ,
27 २७ ही दुष्ट मंडळी माझ्याविरूद्ध टिका करते त्यांचे मी किती काळ सहन करू? इस्राएली लोक माझ्याविरूद्ध तक्रार करतात त्या मी ऐकल्या आहेत.
೨೭“ನನಗೆ ವಿರುದ್ಧವಾಗಿ ಗುಣುಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟು ದಿನ ಸಹಿಸಿಕೊಳ್ಳಲಿ? ಇಸ್ರಾಯೇಲರು ನನಗೆ ವಿರುದ್ಧವಾಗಿ ಗುಣುಗುಟ್ಟುವ ಮಾತುಗಳು ನನಗೆ ಕೇಳಿಸಿದವು.
28 २८ तू त्यांना सांग, परमेश्वर म्हणतो, मी जिवंत आहे. जसे तुम्ही माझ्या कानात बोलला तसे मी करीन.
೨೮ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನು ಹೇಳುವುದೇನೆಂದರೆ, ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಅಂದುಕೊಂಡ ಪ್ರಕಾರವೇ ನಾನು ಮಾಡುತ್ತೇನೆ; ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು.
29 २९ तुमची प्रेते या रानात पडतील. तुमच्यापैकी ज्यांची गणना झाली त्यांच्या पूर्ण संख्येतील वीस वर्षांचा किंवा त्याहून अधिक वयाचे ज्यांनी माझ्याविरूद्ध कुरकुरले,
೨೯ನೀವು ನನಗೆ ವಿರುದ್ಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಎಣಿಕೆಯಾದವರೆಲ್ಲರು ಅಂದರೆ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರೆಲ್ಲರೂ ಅರಣ್ಯದಲ್ಲಿಯೇ ಸಾಯುವರು.
30 ३० ज्या देशात तुमचे घर देण्याचे वचन मी तुम्हास दिले त्यामध्ये तुमच्यापैकी कोणीही जाणार नाही. फक्त यफुन्नेचा मुलगा कालेब आणि नूनाचा मुलगा यहोशवा जातील.
೩೦ಯೆಫುನ್ನೆಯ ಮಗನಾದ ಕಾಲೇಬನು ಮತ್ತು ನೂನನ ಮಗನಾದ ಯೆಹೋಶುವನು ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶವನ್ನು ಸೇರುವುದಿಲ್ಲ.
31 ३१ ज्या तुमच्या मुलाबाळाविषयी तुम्ही म्हणाला की, त्यांची लूट होईल. मी त्यांना त्या देशात नेईल. तुम्ही जो देश नाकारला तो देश ते अनुभवतील.
೩೧ಆದರೆ ಇತರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದು ಹೇಳಿದ ದೇಶವನ್ನು ಅವರು ಅನುಭವಿಸುವರು.
32 ३२ आणि तुमच्याविषयी तर तुमची प्रेते या रानात पडतील.
೩೨ನೀವಂತೂ ಈ ಅರಣ್ಯದಲ್ಲಿ ಸಾಯುವಿರಿ.
33 ३३ तुमची प्रेते या रानात नष्ट होईपर्यंत चाळीस वर्षे तुमची मुलेबाळे तुम्ही केलेल्या विश्वासघाताची शिक्षा भोगीत रानात भटकणारी होतील.
೩೩ನಿಮ್ಮೆಲ್ಲರ ಶವಗಳು ಈ ಮರುಭೂಮಿಯಲ್ಲಿ ಬೀಳುವವರೆಗೂ ನೀವು ಮಾಡಿದ ದ್ರೋಹದ ಫಲವನ್ನು ನಿಮ್ಮ ಮಕ್ಕಳು ಅನುಭವಿಸುವವರಾಗಿ ನಲ್ವತ್ತು ವರ್ಷ ಮರುಭೂಮಿಯಲ್ಲಿ ವಾಸಿಸಬೇಕು.
34 ३४ तुम्हास तुमच्या पापाबद्दल चाळीस वर्षे दु: ख भोगावे लागेल. त्या मनुष्यांना तो प्रदेश शोधायला चाळीस दिवस लागले. त्या प्रत्येक दिवसासाठी एक वर्ष मी तुमच्या विरोधात असणे ही किती भयानक गोष्ट आहे हे तुम्हास समजेल.
೩೪ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲ್ವತ್ತು ದಿನಗಳ ಪ್ರಕಾರ, ಒಂದು ದಿನಕ್ಕೆ ಒಂದು ವರ್ಷವಾಗಿ ಈ ಪ್ರಕಾರ ನಲ್ವತ್ತು ವರ್ಷ ನಿಮ್ಮ ಪಾಪಫಲವನ್ನು ಅನುಭವಿಸುವವರಾಗಿ ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳಬೇಕು.
35 ३५ “मी परमेश्वर आहे आणि मी बोललो आहे. मी वचन देतो की या दुष्ट मनुष्यांना मी या सर्व गोष्टी करीन. माझ्याविरूद्ध जाण्यासाठी ते लोक एकत्र आले म्हणून ते सर्व या रानात मरतील.”
೩೫ಇದು ಯೆಹೋವನೆಂಬ ನಾನೇ ಹೇಳಿದ ಮಾತು. ನನಗೆ ವಿರುದ್ಧವಾಗಿ ಸೇರಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಪ್ರಕಾರವೇ ಮಾಡುತ್ತೇನೆ. ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು’” ಎಂದು ಹೇಳಿದನು.
36 ३६ मोशेने ज्या लोकांस नवीन प्रदेश शोधण्यासाठी पाठवले होते त्याच लोकांनी परत येऊन इस्राएल लोकांमध्ये तक्रारी पसरावयाला सुरुवात केली. ते लोक म्हणाले की त्या प्रदेशात जाण्याइतके आपले लोक शक्तीवान नाहीत.
೩೬ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆಯಿಂದ ಕಳುಹಿಸಲ್ಪಟ್ಟ ಮನುಷ್ಯರು ಹಿಂದಿರುಗಿ ಬಂದು ಆ ದೇಶದ ವಿಷಯದಲ್ಲಿ ಅಶುಭ ಸಮಾಚಾರವನ್ನು ಹೇಳಿ ಸರ್ವಸಮೂಹದವರನ್ನು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟುವಂತೆ ಮಾಡಿದರು.
37 ३७ ज्यांनी वाईट वर्तमान आणले ते पुरुष जबाबदार होते ते परमेश्वरासमोर मरीने मरण पावले.
೩೭ಅಶುಭ ಸಮಾಚಾರವನ್ನು ತಂದ ಆ ಮನುಷ್ಯರು ಯೆಹೋವನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.
38 ३८ यफुन्नेचा मुलगा कालेब आणि नूनाचा मुलगा यहोशवा हे ही तो देश शोधायला पाठवलेल्या लोकात होते परंतु परमेश्वराने त्या दोघांना वाचवले.
೩೮ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಮನುಷ್ಯರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಉಳಿದರು.
39 ३९ मोशेने या सर्व गोष्टी इस्राएल लोकांस सांगितल्या. लोक खूप दु: खी झाले.
೩೯ಮೋಶೆ ಯೆಹೋವನ ಮಾತುಗಳನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸಲಾಗಿ ಅವರು ಬಹಳ ದುಃಖಪಟ್ಟರು.
40 ४० दुसऱ्या दिवशी पहाटे लोकांनी डोंगरावर असलेल्या त्या देशात जायला सुरुवात केली. लोक म्हणाले, “आम्ही पाप केले आहे. आम्ही परमेश्वरावर विश्वास ठेवला नाही याचे आम्हास वाईट वाटते. परमेश्वराने वचन दिलेल्या देशात आम्ही जाऊ.”
೪೦ಮರುದಿನ ಬೆಳಿಗ್ಗೆ ಜನರು ಎದ್ದು, “ನಾವು ಪಾಪ ಮಾಡಿರುವುದು ನಿಜ; ಯೆಹೋವನು ವಾಗ್ದಾನ ಮಾಡಿದ ಸ್ಥಳಕ್ಕೆ ಹತ್ತೋಣ ಬನ್ನಿ” ಎಂದು ಹೇಳಿಕೊಳ್ಳುತ್ತಾ ಆ ಬೆಟ್ಟದ ಮೇಲಕ್ಕೆ ಹತ್ತಿಹೋದರು.
41 ४१ पण मोशे म्हणाला, “तुम्ही परमेश्वराची आज्ञा का पाळत नाही? तुम्हास यश मिळणार नाही.
೪೧ಆದರೆ ಮೋಶೆ ಅವರಿಗೆ, “ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ? ಇದು ಸಫಲವಾಗುವುದಿಲ್ಲ.
42 ४२ त्या देशात जाऊ नका. परमेश्वर तुमच्याबरोबर नाही म्हणून तुमचा सहज पराभव होऊ शकेल.
೪೨ಯೆಹೋವನು ನಿಮ್ಮ ಸಂಗಡ ಇರುವುದಿಲ್ಲ, ಹತ್ತಬೇಡಿರಿ. ನೀವು ಶತ್ರುಗಳ ಮುಂದೆ ನಿಲ್ಲಲಾರದೆ ಬಿದ್ದು ಸತ್ತುಹೋಗುವಿರಿ.
43 ४३ अमालेकी आणि कनानी लोक आहेत तुम्ही तलवारीने पडाल. तुम्ही परमेश्वरापासून दूर गेला आहात म्हणून युध्दाच्या वेळी तो तुमच्याबरोबर नसेल आणि तुम्ही सर्व युद्धात मारले जाल.”
೪೩ಅಲ್ಲಿ ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿ ಇರುವುದರಿಂದ ನೀವು ಅವರ ಕತ್ತಿಯಿಂದ ಸತ್ತುಹೋಗುವಿರಿ. ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.
44 ४४ परंतु लोकांनी मोशेवर विश्वास ठेवला नाही. ते उंच डोंगरावरच्या प्रदेशात गेले. परंतु मोशे आणि परमेश्वराचा आज्ञापटाचा कोश त्यांच्याबरोबर गेला नाही.
೪೪ಆದರೂ ಅವರು ಹಟಮಾಡಿ ಆ ಬೆಟ್ಟವನ್ನು ಹತ್ತಿದರು. ಯೆಹೋವನ ಒಡಂಬಡಿಕೆಯ ಮಂಜೂಷವಾಗಲಿ ಮೋಶೆಯಾಗಲಿ ಪಾಳೆಯವನ್ನು ಬಿಟ್ಟು ಹೊರಡಲಿಲ್ಲ.
45 ४५ डोंगरावरच्या प्रदेशात राहणारे अमालेकी आणि कनानी लोक खाली आले आणि त्यांनी इस्राएल लोकांवर हल्ला केला. त्यांनी इस्राएल लोकांचा सहज पराभव केला आणि हर्मा नगरापर्यंत त्यांचा पाठलाग केला.
೪೫ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಮತ್ತು ಕಾನಾನ್ಯರೂ ಇಳಿದು ಬಂದು ಇಸ್ರಾಯೇಲರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಸಂಹರಿಸಿದರು.

< गणना 14 >