< गणना 22 >

1 नंतर इस्राएल लोक मवाबामधल्या यार्देन नदीच्या खोऱ्याकडे निघाले. यरीहोच्या पलिकडे असलेल्या यार्देन नदीजवळ त्यांनी तळ दिला.
ತರುವಾಯ ಇಸ್ರಾಯೇಲರು ಪ್ರಯಾಣಮಾಡಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಬಯಲಿನಲ್ಲಿ ಇಳಿದುಕೊಂಡರು.
2 सिप्पोराच्या मुलाने, बालाक याने इस्राएल लोकांनी अमोरी लोकांचे काय केले ते पाहिले होते.
ಇಸ್ರಾಯೇಲರು ಅಮೋರಿಯರಿಗೆ ಮಾಡಿದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು. ಇವನು ಮೋವಾಬ್ಯರ ಅರಸನಾಗಿದ್ದನು.
3 मवाबाचा राजा खूप घाबरला कारण इस्राएलचे लोक खूप होते. मवाब त्यांना खरोखरच भीत होता.
ಇಸ್ರಾಯೇಲರು ಬಹಳ ಜನವಾಗಿರುವುದರಿಂದ ಮೋವಾಬ್ಯರು ಬಹಳ ಭಯಪಟ್ಟು ಹೆದರಿದರು.
4 मवाबाचा राजा मिद्यानीं लोकांच्या वडीलांना म्हणाला, बैल जसा शेतातले सगळे गवत खाऊन टाकतो तसेच हे लोक आपला नाश करतील. त्यावेळी सिप्पोराचा मुलगा बालाक मवाबाचा राजा होता.
ಮೋವಾಬ್ಯರ ಅರಸನು ಮಿದ್ಯಾನ್ಯರ ಹಿರಿಯರಿಗೆ, “ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇಯುವಂತೆ ಈ ಸಮೂಹವು ನಮ್ಮನ್ನೂ, ನಮ್ಮ ಸುತ್ತಲಿರುವ ಎಲ್ಲರನ್ನೂ ನಾಶಮಾಡುವ ಹಾಗಿದೆ” ಎಂದು ಹೇಳಿದರು.
5 त्याने बौराचा मुलगा बलाम ह्याला बोलवायला काही माणसे पाठवली. बलाम फरात नदीकाठी पथोर शहरात राहत होता. इथेच बलामचे लोक राहत असत. बालाकाचा निरोप हा होता. एका नवीन राष्ट्राचे लोक मिसर देशातून आले आहेत. ते इतके आहेत की ते सगळा प्रदेश व्यापून टाकतात. त्यांनी माझ्याजवळच तळ दिला आहे.
ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸುವುದಕ್ಕೆ ಸ್ವಜನರ ದೇಶವಾದ ಯೂಫ್ರೆಟಿಸ್ ನದಿಯ ತೀರದಲ್ಲಿರುವ ಪೆತೋರ್ ಎಂಬ ಊರಿಗೆ ದೂತರನ್ನು ಕಳುಹಿಸಿ ಅವನಿಗೆ, “ಒಂದು ಜನಾಂಗವು ಐಗುಪ್ತ ದೇಶದಿಂದ ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡು ನನ್ನ ಸಮೀಪಕ್ಕೆ ಬಂದಿದ್ದಾರೆ.
6 तर आता ये, मी तुला विनंती करतो, तू या लोकांस माझ्यासाठी शाप दे. कारण ते माझ्यापेक्षा खूप भारी आहेत. कदाचित मी त्यांना मारावयास समर्थ होऊन देशातून घालवून टाकील. कारण मला माहीत आहे. जर तू एखाद्याला आशीर्वाद दिलास तर त्यास आशीर्वाद मिळतो. आणि जर एखाद्यास शाप दिलास तर त्यास शाप लागतो.
ಆದುದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನರಿಗೆ ಶಾಪಕೊಡಬೇಕು. ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು. ನಿನ್ನ ಆಶೀರ್ವಾದದಿಂದ ಶುಭವೂ, ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬುದನ್ನು ನಾನು ಬಲ್ಲೆನು” ಎಂದು ಕಳುಹಿಸಿದನು.
7 मवाबी वडील आणि मिद्यानी वडील बलामाशी बोलावयास गेले. त्याच्या कामाचा मोबदला म्हणून त्यांनी बरोबर पैसै नेले. नंतर त्यांनी बालाक काय म्हणाला ते बलामास सांगितले.
ಮೋವಾಬ್ಯರ ಹಿರಿಯರೂ, ಮಿದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.
8 बलाम त्यांना म्हणाला, “रात्री इथे रहा. मी परमेश्वराशी बोलेन आणि तो काय उत्तर देतो ते तुम्हास सांगेन.” मवाबाचे पुढारी त्या रात्री बलामाबरोबर राहिले.
ಬಿಳಾಮನು ಅವರಿಗೆ, “ಈ ರಾತ್ರಿ ನೀವು ಇಲ್ಲಿಯೇ ಇಳಿದುಕೊಂಡಿರಿ. ಯೆಹೋವನು ನನಗೆ ಹೇಳುವ ಮಾತುಗಳನ್ನು ನಿಮಗೆ ತಿಳಿಸುವೆನು” ಎಂದು ಹೇಳಿದನು. ಆಗ ಆ ರಾತ್ರಿ ಮೋವಾಬ್ಯರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು.
9 देव बलामाकडे आला आणि त्याने विचारले, “तुझ्याकडे हे कोण लोक आले आहेत?”
ದೇವರು ಬಿಳಾಮನಿಗೆ, “ನಿನ್ನ ಬಳಿಯಲ್ಲಿರುವ ಆ ಮನುಷ್ಯರು ಯಾರು?” ಎಂದು ಕೇಳಲು,
10 १० बलाम देवाला म्हणाला, सिप्पोराचा मुलगा बालाकाने, मवाबाच्या राजाने यांना माझ्याकडे एक निरोप देऊन पाठवले आहे.
೧೦ಬಿಳಾಮನು ದೇವರಿಗೆ, “ಮೋವಾಬ್ಯರ ಅರಸನೂ, ಚಿಪ್ಪೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ,
11 ११ तो निरोप हा, एका नवीन राष्ट्राचे लोक मिसर देशामधून आले आहेत. ते इतके आहेत की ते सगळा प्रदेश व्यापून टाकतात. म्हणून आता तू येऊन माझ्यासाठी त्यांना शाप दे. नंतर कदाचित मी त्या लोकांचा पराभव करु शकेन आणि त्यांना माझ्या देशातून जायला भाग पाडू शकेन.
೧೧‘ಒಂದು ಜನಾಂಗವು ಐಗುಪ್ತ ದೇಶದಿಂದ ಹೊರಟು ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡಿದ್ದಾರೆ; ನೀನು ಬಂದು ಅವರಿಗೆ ಶಾಪಕೊಡಬೇಕು; ಕೊಟ್ಟರೆ ಅವರನ್ನು ಸೋಲಿಸಿ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು’” ಎಂದು ಹೇಳಿಕಳುಹಿಸಿದ್ದಾನೆ ಎಂದು ಉತ್ತರಕೊಟ್ಟನು.
12 १२ पण देव बलामास म्हणाला, त्यांच्याबरोबर जाऊ नकोस. तू त्या लोकांस शाप देऊ नको. कारण ते माझे आशीर्वादित लोक आहेत.
೧೨ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು” ಎಂದು ಹೇಳಿದನು.
13 १३ दुसऱ्या दिवशी बलाम उठला आणि बालाकाच्या पुढाऱ्यांना म्हणाला, तुम्ही तुमच्या देशात परत जा. परमेश्वर मला तुमच्याबरोबर जाऊ देणार नाही
೧೩ಬೆಳಿಗ್ಗೆ ಬಿಳಾಮನು ಎದ್ದು ಬಾಲಾಕನ ಪ್ರಧಾನರಿಗೆ, “ನೀವು ನಿಮ್ಮ ದೇಶಕ್ಕೆ ಹೋಗಿರಿ. ನಾನು ನಿಮ್ಮ ಜೊತೆಯಲ್ಲಿ ಬರುವುದಕ್ಕೆ ಯೆಹೋವನು ನನಗೆ ಅಪ್ಪಣೆಕೊಡಲಿಲ್ಲ” ಎಂದು ಹೇಳಿದನು.
14 १४ त्यामुळे मवाबाचे पुढारी बालाककडे परत गेले आणि त्यांनी त्यास हे सांगितले. ते म्हणाले, बलामाने आमच्याबरोबर यायला नकार दिला.
೧೪ಮೋವಾಬ್ಯರ ಪ್ರಧಾನರು ಹೊರಟು ಬಾಲಾಕನ ಬಳಿಗೆ ಬಂದು, “ಬಿಳಾಮನು ನಮ್ಮ ಜೊತೆಯಲ್ಲಿ ಬರಲ್ಲಿಲ” ಎಂದು ತಿಳಿಸಿದರು.
15 १५ म्हणून बालाकाने बलामाकडे दुसरे पुढारी पाठवले. यावेळी त्याने पहिल्या वेळेपेक्षा खूप जास्त पुढारी पाठवले. हे पुढारी पहिल्या पुढाऱ्यांपेक्षा अधिक महत्वाचे होते.
೧೫ಆದರೆ ಬಾಲಾಕನು ಅವರಿಗಿಂತಲೂ ಘನವಂತರಾದ ಹೆಚ್ಚು ಮಂದಿ ಪ್ರಧಾನರನ್ನು ಕಳುಹಿಸಿದನು.
16 १६ ते बलामाकडे गेले आणि म्हणाले, बालाक, सिप्पोराचा मुलगा तुला हे सांगतो, तुझ्या इथे येण्याच्या आड कोठलीही गोष्ट येऊ देवू नको.
೧೬ಇವರು ಬಿಳಾಮನ ಬಳಿಗೆ ಬಂದು ಅವನಿಗೆ, “ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ, ‘ನೀನು ದಯಮಾಡಿ ನನ್ನ ಬಳಿಗೆ ಬರುವುದಕ್ಕೆ ಯಾವ ಅಡ್ಡಿಯನ್ನೂ ಹೇಳಬೇಡ.
17 १७ मी जे सांगतो ते तू केलेस तर मी तुला नक्कीच मान देईन आणि तू मला जे काही विनवशील ते मी करीन परंतु तू ये व माझ्यासाठी या लोकांस शाप दे.
೧೭ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ. ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸಬೇಕು’” ಎಂದನು.
18 १८ बलामाने बालाकाच्या पुढाऱ्यांना उत्तर दिले. तो म्हणाला, परमेश्वर माझा देव ह्याच्या शब्दाबाहेर मला कमीजास्त काहीएक करता येत नाही. बालाकाने माझे घर सोन्या चांदीने भरुन दिले तरीही मी काही करणार नाही.
೧೮ಅದಕ್ಕೆ ಬಿಳಾಮನು ಬಾಲಾಕನ ಸೇವಕರಿಗೆ, “ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾದ ಯೆಹೋವನ ಆಜ್ಞೆಯನ್ನು ಮೀರಿ ಸಣ್ಣ ಕೆಲಸವನ್ನಾಗಲಿ, ದೊಡ್ಡ ಕೆಲಸವನ್ನಾಗಲಿ ಮಾಡಲಾರೆನು.
19 १९ तरीपण रात्री तुम्ही येथे राहा आणि परमेश्वर मला काय सांगतो ते मला कळू शकेल.
೧೯ಆದುದರಿಂದ ನೀವೂ ಕೂಡ ಈ ರಾತ್ರಿ ಇಲ್ಲಿಯೇ ಇಳಿದುಕೊಳ್ಳಿರಿ. ಯೆಹೋವನು ಈಗ ಏನು ಹೇಳುವನೋ ಅದನ್ನು ನಿಮಗೆ ತಿಳಿಸುತ್ತೇನೆ” ಎಂದು ಉತ್ತರಕೊಟ್ಟನು.
20 २० त्या रात्री देव बलामाकडे आला. देव म्हणाला, “तुला घेऊन जाण्यासाठी हे लोक पुन्हा आले आहेत. म्हणून तू त्यांच्याबरोबर जाऊ शकतोस. पण मी जे सांगेन तेवढेच तू कर.”
೨೦ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಆ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿರುವುದರಿಂದ ಎದ್ದು ಅವರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಆಜ್ಞಾಪಿಸುವ ಪ್ರಕಾರವೇ ನೀನು ಮಾಡಬೇಕು” ಎಂದನು.
21 २१ दुसऱ्या दिवशी सकाळी बलाम उठला आणि त्याने आपल्या गाढवीवर खोगीर घातले. नंतर तो मवाबाच्या पुढाऱ्यांबरोबर चालला.
೨೧ಬೆಳಿಗ್ಗೆ ಬಿಳಾಮನು ತನ್ನ ಕತ್ತೆಗೆ ಕಡಿವಾಣ ಹಾಕಿಸಿ ಮೋವಾಬ್ಯರ ಪ್ರಧಾನರ ಜೊತೆಯಲ್ಲಿ ಹೊರಟನು.
22 २२ बलाम त्याच्या गाढवीवर बसला होता. त्याचे दोन नोकर त्याच्याबरोबर होते. बलाम प्रवास करीत होता तेव्हा देव त्याच्यावर रागावला. परमेश्वराचा दूत रस्त्यावर बलामापुढे येऊन उभा राहिला. देवदूत बलामास थांबवणार होता.
೨೨ಅವನು ಹೋದುದರಿಂದ ದೇವರಿಗೆ ಕೋಪವುಂಟಾಯಿತು. ಯೆಹೋವನ ದೂತನು ಅವನಿಗೆ ಎದುರಾಳಿಯಾಗಿ ದಾರಿಯಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಕುಳಿತುಕೊಂಡಿದ್ದನು. ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.
23 २३ बलामाच्या गाढवीने परमेश्वराच्या दूताला रस्त्यात उभे असलेले पाहिले. देवदूताने हातात तलवार घेतली होती. म्हणून गाढवी रस्ता सोडून शेतात गेली. बलामास देवदूत दिसू शकला नाही. म्हणून तो गाढवीवर खूप रागावला. त्याने गाढवीला मारले आणि जबरदस्तीने रस्त्यावर आणले.
೨೩ಯೆಹೋವನ ದೂತನು ಬಿಚ್ಚುಕತ್ತಿಯನ್ನು ಕೈಯಲ್ಲಿ ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಅಡವಿಯ ಕಡೆಗೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವುದಕ್ಕೆ ಬಿಳಾಮನು ಅದನ್ನು ಹೊಡೆದನು.
24 २४ नंतर परमेश्वराचा दूत रस्ता जिथे अरुंद होता तिथे थांबला. हा दोन द्राक्षांच्या मव्व्यांच्या मधला भाग होता. रस्ताच्या दोन्ही बाजूला भिंती होत्या.
೨೪ಆ ಮೇಲೆ ಯೆಹೋವನ ದೂತನು ದ್ರಾಕ್ಷಿತೋಟಗಳ ಸಂದಿನಲ್ಲಿ ನಿಂತುಕೊಂಡನು. ಎರಡು ಕಡೆಯಲ್ಲಿಯೂ ಗೋಡೆಯಿತ್ತು.
25 २५ गाढवीने पुन्हा परमेश्वराच्या दूताला पाहिले म्हणून ती एका भिंतीला चिकटून चालू लागली त्यामुळे बलामाचा पाय भिंतीला लागून चिरडला गेला. म्हणून बलामने गाढवीला पुन्हा मारले.
೨೫ಕತ್ತೆ ಯೆಹೋವನ ದೂತನನ್ನು ಪುನಃ ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಆ ಗೋಡೆಗೆ ಇರುಕಿಸಲು ಅವನು ಅದನ್ನು ತಿರುಗಿ ಹೊಡೆದನು.
26 २६ नंतर परमेश्वराचा दूत दुसऱ्या ठिकाणी उभा राहिला. अरुंद रस्ता असलेले हे दुसरे ठिकाण होते. येथे वळायला सुद्धा मुळीच जागा नव्हती गाढवीला त्यास वळसा घालून जाणे शक्य नव्हते.
೨೬ಆಗ ಯೆಹೋವನ ದೂತನು ಮುಂದೆ ಹೋಗಿ ಎಡಬಲಕ್ಕೆ ತಿರುಗಲಿಕ್ಕೆ ದಾರಿಯಿಲ್ಲದ ಇಕ್ಕಟ್ಟಾದ ಸ್ಥಳದಲ್ಲಿ ನಿಂತುಕೊಂಡನು.
27 २७ गाढवीने परमेश्वराच्या दूताला पाहिले म्हणून बलाम तिच्यावर बसला असतानाच ती खाली बसली त्यामुळे बलाम खूप रागावला आणि त्याने गाढवीला त्याच्या काठीने मारायला सुरुवात केली.
೨೭ಕತ್ತೆಯು ಯೆಹೋವನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಬಿಳಾಮನು ಸಿಟ್ಟುಗೊಂಡು ತನ್ನ ಕೈಕೋಲಿನಿಂದ ಕತ್ತೆಯನ್ನು ಹೊಡೆದನು.
28 २८ नंतर परमेश्वराने गाढवीला बोलते केले. गाढवी बलामास म्हणाली, तू माझ्यावर का रागावला आहेस? मी तुला काय केले आहे? तू मला तीन वेळा मारलेस.
೨೮ಆಗ ಯೆಹೋವನು ಆ ಕತ್ತೆಗೆ ಮಾತನಾಡುವ ಶಕ್ತಿಯನ್ನು ಕೊಡಲಾಗಿ ಅದು ಬಿಳಾಮನನ್ನು, “ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ? ನಾನು ನಿನಗೇನು ಮಾಡಿದ್ದೇನೆ” ಎಂದು ಕೇಳಿತು.
29 २९ बलामने गाढवीला उत्तर दिले, तू मला मूर्ख बनवलेस. जर माझ्या हातात तलवार असती तर मी तुला मारुन टाकले असते.
೨೯ಅದಕ್ಕೆ ಬಿಳಾಮನು ಕತ್ತೆಗೆ, “ನೀನು ಇಷ್ಟ ಬಂದಂತೆ ನನ್ನನ್ನು ಆಡಿಸಿದೆಯಲ್ಲಾ. ನನ್ನ ಕೈಯಲ್ಲಿ ಕತ್ತಿಯಿದ್ದರೆ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆ” ಎಂದನು.
30 ३० पण गाढवी बलामास म्हणाली, बघ मी तुझीच गाढवी आहे. खूप वर्षे तू माझ्यावर बसत आला आहेस. आणि यापूर्वी मी असे काही केले नाही हे तुला माहीत आहे. बलाम म्हणाला, नाही.
೩೦ಅದಕ್ಕೆ ಆ ಕತ್ತೆಯು ಬಿಳಾಮನಿಗೆ, “ನಿನ್ನ ಜೀವಮಾನವೆಲ್ಲಾ ಇಂದಿನವರೆಗೂ ನೀನು ಹತ್ತುತ್ತಾ ಇರುವ ನಿನ್ನ ಕತ್ತೆಯು ನಾನಲ್ಲವೇ? ನಾನು ಯಾವಾಗಲಾದರೂ ಈ ರೀತಿಯಾಗಿ ಮಾಡಿದ್ದುಂಟೋ?” ಎಂದಾಗ ಬಿಳಾಮನು “ಇಲ್ಲ” ಎಂದನು.
31 ३१ नंतर परमेश्वराने बलामाचे डोळे उघडले, तेव्हा त्यास परमेश्वराचा दूत दिसला. तो रस्त्यात तलवार घेऊन उभा होता. त्याने परमेश्वराच्या दूताला रस्त्यात जमिनीपर्यंत वाकून नमस्कार केला.
೩೧ಅಷ್ಟರಲ್ಲೇ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದನು. ಯೆಹೋವನ ದೂತನು ಬಿಚ್ಚು ಕತ್ತಿಯನ್ನು ಹಿಡಿದು ದಾರಿಯಲ್ಲೇ ನಿಂತಿರುವುದನ್ನು ಕಂಡು ಬೋರಲುಬಿದ್ದು ನಮಸ್ಕರಿಸಿದನು.
32 ३२ परमेश्वराच्या दूताने बलामास विचारले, तू तुझ्या गाढवीला तीनदा का मारलेस? तुला थांबवण्यासाठी मी आलो आहे. पण अगदी ऐनवेळी
೩೨ಯೆಹೋವನ ದೂತನು ಅವನಿಗೆ, “ನೀನು ಮೂರು ಸಾರಿ ಕತ್ತೆಯನ್ನು ಹೊಡೆದದ್ದೇಕೆ? ನೀನು ನನಗೆ ವಿರುದ್ಧವಾದ ಮಾರ್ಗವನ್ನು ಹಿಡಿದುದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ.
33 ३३ तुझ्या गाढवीने मला पाहिले आणि ती दूर गेली. असे तीन वेळा घडले. जर गाढवी वळली नसती तर आतापर्यंत मी तुला मारले असते आणि तुझ्या गाढवीला जिवंत राहू दिले असते.
೩೩ಆ ಕತ್ತೆ ನನ್ನನ್ನು ನೋಡಿ ಮೂರು ಸಾರಿ ನನ್ನ ಎದುರಿನಿಂದ ವಾರೆಯಾಗಿ ತಿರುಗಿಕೊಂಡಿತು. ಹಾಗೆ ತಿರುಗಿಕೊಳ್ಳದಿದ್ದರೆ ನಾನು ಕತ್ತೆಯ ಪ್ರಾಣವನ್ನು ಉಳಿಸಿ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆನು” ಎಂದು ಹೇಳಿದನು.
34 ३४ तेव्हा बलाम परमेश्वराच्या दूताला म्हणाला, मी पाप केले आहे. तू रस्त्यात उभा आहेस हे मला माहीत नव्हते. मी जर चूक करीत असेन तर मी घरी परत जाईन.
೩೪ಅದಕ್ಕೆ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನೇ ನನಗೆ ಎದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯಲಿಲ್ಲ. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ಹೋಗುತ್ತೇನೆ” ಎಂದನು.
35 ३५ तेव्हा परमेश्वराचा दूत बलामास म्हणाला, नाही! तू या लोकांबरोबर जाऊ शकतोस. पण सावध रहा. मी जे सांगेन तेच शब्द बोल. म्हणून बलाम बालाकाने पाठवलेल्या पुढाऱ्यांबरोबर गेला.
೩೫ಯೆಹೋವನ ದೂತನು ಬಿಳಾಮನಿಗೆ, “ಈ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟುಹೋದನು.
36 ३६ बलाम येत असल्याचे बालाकाला समजले. म्हणून तो बलामास भेटायला आर्णोन नदीजवळच्या मवाबाच्या शहरात गेला. ते त्याच्या देशाच्या उत्तर सरहद्दीवर होते.
೩೬ಬಿಳಾಮನು ಬಂದ ವರ್ತಮಾನವನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವುದಕ್ಕಾಗಿ ತನ್ನ ದೇಶದ ಗಡಿಯಾದ ಅರ್ನೋನ್ ನದಿಯ ತೀರದಲ್ಲಿರುವ ಮೋವಾಬ್ಯರ ಪಟ್ಟಣಕ್ಕೆ ಹೋದನು.
37 ३७ जेव्हा बालाकाने बलामास पाहिले तेव्हा तो त्यास म्हणाला, मी तुला आधीच यायला सांगितले होते. तुला साजेसा सन्मान करण्यास मी समर्थ नव्हतो काय?
೩೭ಬಾಲಾಕನು ಬಿಳಾಮನನ್ನು ಕಂಡಾಗ, “ನಿನ್ನನ್ನು ಅವಸರದಿಂದ ಕರೆಯುವುದಕ್ಕೆ ದೂತರನ್ನು ಕಳುಹಿಸಿದೆನಲ್ಲಾ? ನೀನು ಏಕೆ ಆಗಲೇ ಬರಲಿಲ್ಲ? ನಿನ್ನನ್ನು ಘನಪಡಿಸುವುದಕ್ಕೆ ನಾನು ಸಮರ್ಥನಲ್ಲವೆಂದು ಭಾವಿಸುತ್ತೀಯೋ?” ಎಂದನು.
38 ३८ बलामाने बालाकाला उत्तर दिले, पण आताच मी येथे आलो आहे. मी आलो आहे पण तू सांगितलेल्या गोष्टी मला कदाचित करता येणार नाहीत. परमेश्वर देव जेवढे सांगेल तेवढेच मी बोलू शकतो.
೩೮ಅದಕ್ಕೆ ಬಿಳಾಮನು ಬಾಲಾಕನಿಗೆ, “ನೋಡು, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ನಾನಾಗಿ ಏನಾದರೂ ಹೇಳುವುದಕ್ಕೆ ನನಗೆ ಶಕ್ತಿಯಿಲ್ಲ. ದೇವರು ನನ್ನಿಂದ ಹೇಳಿಸಿದ ಮಾತನ್ನೇ ಹೇಳುವೆನು” ಎಂದು ಹೇಳಿದನು.
39 ३९ नंतर बलाम बालाकाबरोबर किर्याथ-हसोथ येथे गेला.
೩೯ಆಗ ಬಿಳಾಮನು ಬಾಲಾಕನ ಜೊತೆಯಲ್ಲಿ ಹೋದನು. ಅವರು ಕಿರ್ಯತ್ ಹುಚೋತಿಗೆ ಬಂದರು.
40 ४० बालाकाने काही गुरे व मेंढ्या बली म्हणून मारल्या. त्याने थोडे मांस बलामास दिले आणि थोडे त्याच्याबरोबर असलेल्या पुढाऱ्यांना दिले.
೪೦ಬಾಲಾಕನು ಹೋರಿಗಳನ್ನೂ, ಕುರಿಗಳನ್ನೂ ವಧಿಸಿ ಯಜ್ಞಮಾಡಿ ಬಿಳಾಮನಿಗೂ, ಅವನ ಸಂಗಡ ಇದ್ದ ಪ್ರಧಾನರಿಗೂ ಊಟಕ್ಕೆ ಕಳುಹಿಸಿದನು.
41 ४१ दुसऱ्या दिवशी सकाळी बालाक बलामास घेऊन बामोथ-बआल शहरी गेला. तेथून त्यांना इस्राएल लोकांच्या तळाचा शेवटचा भाग दिसू शकत होता.
೪೧ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು “ಬಾಳ್” ಎಂಬ ದೇವತೆಯ ಪೂಜಾಸ್ಥಳಗಳಲ್ಲಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು.

< गणना 22 >