< ၂ ရာဇဝင်ချုပ် 26 >
1 ၁ ယုဒပြည်သူအပေါင်းတို့သည်အာမဇိ၏ သားတော်အသက်တစ်ဆယ့်ခြောက်နှစ်ရှိ သြဇိကို ဘုရင်အဖြစ်ခမည်းတော်၏ အရိုက်အရာကိုဆက်ခံစေရန်ရွေးချယ် ကြလေသည်။-
೧ಆನಂತರ ಎಲ್ಲಾ ಯೆಹೂದ್ಯರು ಅಮಚ್ಯನ ಮಗನಾದ ಉಜ್ಜೀಯನನ್ನು ಅರಸನ್ನನ್ನಾಗಿ ಮಾಡಿದರು. ಉಜ್ಜೀಯನು ಅರಸನಾದಾಗ ಹದಿನಾರು ವರ್ಷದವನಾಗಿದ್ದ.
2 ၂ (ဧလုတ်မြို့ကိုသြဇိပြန်လည်သိမ်းယူ၍ ပြန်လည်တည်ဆောက်သည်မှာအာမဇိ ကွယ်လွန်ပြီးမှဖြစ်၏။)
೨ಇವನು ಏಲೋತ್ ಪಟ್ಟಣವನ್ನು ಪುನಃ ಯೆಹೂದ ರಾಜ್ಯಕ್ಕೆ ಸೇರಿಸಿಕೊಂಡು ಭದ್ರಪಡಿಸಿದನು.
3 ၃ သြဇိသည်အသက်တစ်ဆယ့်ခြောက်နှစ်၌ နန်းတက်၍ ယေရုရှလင်မြို့တွင်ငါးဆယ့် နှစ်နှစ်တိုင်တိုင်နန်းစံလေသည်။ သူ၏မယ် တော်မှာယေရုရှလင်မြို့သူယေခေါလိ ဖြစ်၏။-
೩ಅವನು ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷಗಳ ಕಾಲ ಆಳಿದನು. ಯೆರೂಸಲೇಮಿನವಳಾದ ಯೆಕೊಲ್ಯ ಎಂಬಾಕೆಯು ಅವನ ತಾಯಿ.
4 ၄ သူသည်ခမည်းတော်၏စံနမူနာကိုယူ၍ ထာဝရဘုရား၏မျက်မှောက်တော်၌ဖြောင့်မှန် သောအမှုတို့ကိုပြု၏။-
೪ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
5 ၅ သူသည်မိမိ၏ဘာသာရေးအတိုင်ပင်ခံ ဇာခရိအသက်ရှင်လျက်နေသမျှကာလ ပတ်လုံး ထာဝရဘုရားအားသစ္စာနှင့်ကိုး ကွယ်သဖြင့်ဘုရားသခင်သည်သူ့အား ကောင်းချီးပေးတော်မူ၏။
೫ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.
6 ၆ သြဇိသည်ဖိလိတ္တိအမျိုးသားတို့အား စစ် ဆင်တိုက်ခိုက်ကာ ဂါသမြို့၊ ယာဗနေမြို့နှင့် အာဇုတ်မြို့တို့၏မြို့ရိုးများကိုဖြိုချပြီး လျှင်အာဇုတ်မြို့အနီးနှင့်ဖိလိတ္တိပြည်အခြား ဒေသများ၌တံတိုင်းကာရံထားသောမြို့ များကိုတည်ထောင်တော်မူ၏။-
೬ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
7 ၇ သူ့အားဘုရားသခင်သည်ဖိလိတ္တိအမျိုးသား များ၊ ဂုရဗာလမြို့တွင်နေထိုင်သောအာရပ် အမျိုးသားများ၊ မဟုနိမ်အမျိုးသားများ ကိုနှိမ်နင်းရန်ကူမတော်မူသည်။-
೭ಫಿಲಿಷ್ಟಿಯರೊಡನೆ ಗೂರ್ ಬಾಳಿನಲ್ಲಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು.
8 ၈ အမ္မုန်အမျိုးသားတို့သည်သြဇိအားလက် ဆောင်ပဏ္ဏာများဆက်သရကြ၏။ သူသည် အလွန်တန်ခိုးကြီးမားလာသဖြင့်သူ၏ ဂုဏ်သတင်းသည်အီဂျစ်ပြည်သို့ပင်ပျံ့နှံ့ သွားလေ၏။
೮ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕಬಲವುಳ್ಳವನ್ನಾದುದರಿಂದ ಅವನ ಹೆಸರು ಐಗುಪ್ತದ ಮೇರೆಯವರೆಗೂ ಹಬ್ಬಿತು.
9 ၉ သြဇိသည်မြို့ရိုးထောင့်တံခါး၊ ချိုင့်တံခါးနှင့် မြို့ရိုးထောင့်ထိပ်တို့တွင်မျှော်စင်များကိုတည် ဆောက်ခြင်းအားဖြင့် ယေရုရှလင်ကိုခိုင်ခံ့ အောင်ပြုတော်မူ၏။-
೯ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನ ಬಾಗಿಲು, ಗೋಡೆ ತಿರುಗುವ ಭಾಗಗಳ ಮೇಲೆ ಗೋಪುರಗಳನ್ನು ಕಟ್ಟಿಸಿ ಭದ್ರಗೊಳಿಸಿದನು.
10 ၁၀ မင်းကြီးသည်အနောက်ဘက်တောင်ခြေရင်းရှိ တောင်ပူစာများနှင့် လွင်ပြင်များတွင်နွားအုပ် ကြီးများမွေးမြူထားသဖြင့် တောကန္တာရရှိ မြို့များကိုမျှော်စင်များနှင့်တကွတံတိုင်း ကာ၍ရေလှောင်ကန်အမြောက်အမြားကိုတူး တော်မူ၏။ မင်းကြီးသည်လယ်ယာစိုက်ပျိုးမှု ကိုဝါသနာပါသဖြင့် တောင်ကုန်းဒေသများ တွင်စပျစ်ဥယျာဉ်များစိုက်ပျိုးမှု၊ မြေ ကောင်းမြေသန့်များတွင်လယ်ယာများ စိုက်ပျိုးမှုကိုအားပေးတော်မူလေသည်။
೧೦ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು.
11 ၁၁ သူ၌စစ်ပွဲဝင်ရန်အသင့်ရှိသောတပ်မတော် ကြီးရှိ၏။ တပ်မတော်မှတ်တမ်းများကိုစာရေး တော်များဖြစ်သူ ယေယေလနှင့်မာသေယတို့ ကထိန်းသိမ်းထားရကြ၏။ သူတို့အားအမတ် ဟာနနိကကြီးကြပ်ကွပ်ကဲရလေသည်။-
೧೧ಇದಲ್ಲದೆ, ಉಜ್ಜೀಯನಿಗೆ ಯುದ್ಧಕ್ಕೋಸ್ಕರ ಸೈನ್ಯವೂ ಇತ್ತು. ಲೇಖಕನಾದ ಯೆಗೀಯೇಲ್, ಅಧಿಕಾರಿಯಾದ ಮಾಸೇಯ ಇವರು ಹಾಕಿಕೊಟ್ಟ ಪಟ್ಟಿಯಕ್ರಮ ಪ್ರಕಾರ ಅರಸನ ಸರದಾರರಲ್ಲಿ ಒಬ್ಬನಾದ ಹನನ್ಯನ ಆಜ್ಞಾನುಸಾರವಾಗಿ. ಆಯಾ ಗುಂಪುಗಳು ಯುದ್ಧಕ್ಕೆ ಹೊರಡುತ್ತಿದ್ದವು.
12 ၁၂ တပ်မတော်တွင်တပ်မှူးနှစ်ထောင့်ခြောက်ရာ ရှိ၍၊-
೧೨ಯುದ್ಧವೀರರೂ ಎಲ್ಲಾ ಗೋತ್ರಪ್ರಧಾನರ ಸಂಖ್ಯೆಯು ಎರಡು ಸಾವಿರದ ಆರು ನೂರು.
13 ၁၃ သူတို့၏လက်အောက်တွင်မင်းကြီး၏ရန်သူ များကို ရဲစွမ်းသတ္တိနှင့်တိုက်ခိုက်နိုင်သော တပ်သားသုံးသိန်းခုနစ်ထောင့်ငါးရာရှိ၏။-
೧೩ಇವರ ಕೈಕೆಳಗಿದ್ದ ಭಟರ ಸಂಖ್ಯೆಯು ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು ಅವನ ವೈರಿಗಳಿಗೆ ವಿರುದ್ಧವಾಗಿ ಪರಾಕ್ರಮದಿಂದ ಯುದ್ಧಮಾಡುತ್ತಿದ್ದರು.
14 ၁၄ သြဇိသည်တပ်မတော်အား ဒိုင်းလွှား၊ လှံ၊ သံ ခမောက်၊ သံချပ်အင်္ကျီ၊ လေး၊ မြားနှင့်လောက်လွှဲ ပစ်ရန်ကျောက်ခဲများကိုပေးအပ်တော်မူ၏။-
೧೪ಉಜ್ಜೀಯನು ಈ ಎಲ್ಲಾ ಸೈನ್ಯದವರಿಗೆ ಬೇಕಾದ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು, ಕವಣೆಯಕಲ್ಲು ಇವುಗಳನ್ನು ಒದಗಿಸಿ ಕೊಟ್ಟನು.
15 ၁၅ မြို့ရိုးထောင့်ထိပ်နှင့်မျှော်စင်များမှနေ၍ မြားနှင့်ကျောက်တုံးကြီးများပစ်ခတ်ရန် ယန္တယားစက်များကိုလည်း ယေရုရှလင် မြို့ရှိတီထွင်တတ်သူအတတ်ပညာရှင် များကပြုလုပ်ပေးကြလေသည်။ ဘုရားသခင်ထံမှအံ့သြဖွယ်မစတော်မူခြင်း ကိုခံရသဖြင့် မင်းကြီးသည်အလွန် တန်ခိုးကြီးလာပြီးလျှင်သူ၏ဂုဏ် သတင်းသည်အရပ်တကာသို့ပျံ့နှံ့ သွားလေ၏။
೧೫ಇದಲ್ಲದೆ, ಅವನು ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನು ಬಳಸುವುದಕ್ಕಾಗಿ, ತಜ್ಞರ ಆಜ್ಞೆಯ ಮೇರೆಗೆ ಯಂತ್ರಗಳನ್ನೂ ಮಾಡಿಸಿ, ಅವುಗಳನ್ನು ಯೆರೂಸಲೇಮಿನ ಗೋಪುರಗಳ ಮೇಲೆಯೂ, ಕೋಟೆಕೊತ್ತಲಗಳನ್ನು ಮೇಲೆಯೂ ಇಡಿಸಿದ್ದನು. ಅವನು ಬಲಿಷ್ಠನಾಗುವ ಹಾಗೆ ದೇವರ ಅತಿಶಯವಾದ ಸಹಾಯವು ಆಶ್ಚರ್ಯವಾದ ರೀತಿಯಲ್ಲಿ ಅವನಿಗೆ ದೊರೆಯುತ್ತಿದ್ದುದರಿಂದ; ಅವನ ಕೀರ್ತಿಯೂ ಬಹು ದೂರದ ಮೇರೆಯವರೆಗೂ ಹಬ್ಬಿತು.
16 ၁၆ သို့သော်သြဇိမင်းသည်တန်ခိုးကြီးလာသော အခါ မာန်မာနလည်းထောင်လွှားလာသဖြင့် အကျိုးနည်းရလေသည်။ သူသည်ဗိမာန်တော် သို့ဝင်၍နံ့သာပေါင်းကို သက်ဆိုင်ရာယဇ်ပလ္လင် ပေါ်တွင်မီးရှို့ပူဇော်ခြင်းအားဖြင့် မိမိ၏ ဘုရားသခင်ထာဝရဘုရားအားပြစ်မှား၏။-
೧೬ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು.
17 ၁၇ ယဇ်ပုရောဟိတ်အာဇရိနှင့်ရဲရင့်သော ယဇ်ပုရောဟိတ်ရှစ်ကျိပ်တို့သည်မင်းကြီး အား-
೧೭ಆಗ ಮಹಾಯಾಜಕನಾದ ಅಜರ್ಯನೂ ಹಾಗು ಧೈರ್ಯಶಾಲಿಗಳಾದ ಯೆಹೋವನ ಎಂಭತ್ತು ಮಂದಿ ಇತರ ಯಾಜಕರೂ ಅರಸನಾದ ಉಜ್ಜೀಯನ ಹಿಂದೆಯೇ ಹೋಗಿ
18 ၁၈ တားဆီးရန်လိုက်သွားပြီးလျှင်``အို သြဇိမင်း၊ ဘုရင်မင်းသည်ထာဝရဘုရားအားနံ့သာပေါင်း ကိုမီးရှို့ပူဇော်ခွင့်ရှိသူမဟုတ်ပါ။ ဤအမှု ကိုပြုရန်ဆက်ကပ်ပူဇော်ထားသူများမှာ အာရုန် မှဆင်းသက်လာသူယဇ်ပုရောဟိတ်များသာ လျှင်ဖြစ်ပါ၏။ ဤသန့်ရှင်းရာဌာနတော်မှ ထွက်ခွာသွားပါလော့။ ဘုရင်မင်းသည်ထာဝရ အရှင်ဘုရားသခင်အားပြစ်မှားလေပြီ။ ထို ကြောင့်ကိုယ်တော်သည်ထာဝရအရှင်ဘုရားသခင်၏ကောင်းချီးကိုမခံရတော့ပါ'' ဟု ဆို၏။
೧೮ಅರಸನ ಎದುರಿಗೆ ನಿಂತು ಅವನಿಗೆ, “ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವುದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಯೆಹೋವನಿಂದ ನಿನಗೆ ಗೌರವ ದೊರಕಲಾರದು” ಎಂದರು.
19 ၁၉ သြဇိသည်နံ့သာပေါင်းကိုရှို့ရန်မီးကျီးခဲ ကိုကိုင်၍ ဗိမာန်တော်တွင်နံ့သာပေါင်းမီးရှို့ ရာပလ္လင်အနီး၌ရပ်လျက်နေ၏။ သူသည် ယဇ်ပုရောဟိတ်တို့အားအမျက်ထွက်လာ သည်နှင့်တစ်ပြိုင်နက် သူ၏နဖူးသည်ကြောက် မက်ဖွယ်ကောင်းသောအရေပြားရောဂါ စွဲကပ်လေသည်။-
೧೯ಆಗ ಧೂಪ ಹಾಕಬೇಕೆಂದು ಕೈಯಲ್ಲಿ ಧೂಪಾರತಿಯನ್ನು ಹಿಡಿದುಕೊಂಡಿದ್ದ ಉಜ್ಜೀಯನು ಕೋಪಗೊಂಡನು. ಅವನು ಯೆಹೋವನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕರೊಡನೆ ಸಿಟ್ಟಿನಿಂದ ಮಾತನಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯ ಮೇಲೆ ಕುಷ್ಠವು ಕಾಣಿಸಿಕೊಂಡಿತು.
20 ၂၀ အာဇရိနှင့်အခြားယဇ်ပုရောဟိတ်တို့သည် ကြောက်ရွံ့သည့်အမူအရာဖြင့် မင်းကြီးနဖူး ကိုစိုက်၍ကြည့်ပြီးလျှင်သူ့အားဗိမာန်တော် မှနှင်ထုတ်ကြ၏။ မင်းကြီးသည်လည်းမိမိ အားဘုရားသခင်ဒဏ်ခတ်တော်မူပြီဖြစ် ကြောင်းကိုသိ၍ အဆောတလျင်ထွက်ခွာ သွားတော်မူ၏။
೨೦ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠವು ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿಯಿತು. ಅವನೂ ಶೀಘ್ರವಾಗಿ ಹೊರಗೆ ಹೋಗಲು ಆತುರಪಟ್ಟನು.
21 ၂၁ သြဇိမင်းသည်ထိုအချိန်မှစ၍သေသည် တိုင်အောင် ဤရောဂါကြောင့်ဘာသာရေးထုံး နည်းအရမသန့်စင်သူဖြစ်လာလေသည်။ သူသည်ဗိမာန်တော်သို့နောက်တစ်ဖန်ပြန် လည်ဝင်ရောက်ခွင့်မရတော့သဖြင့် သားတော် ယောသံအားမိမိ၏တာဝန်ဝတ္တရားများ ကိုလွှဲပြောင်းပေးအပ်လိုက်ရ၏။ တိုင်းပြည် ကိုသားတော်အုပ်စိုးလျက်နေစဉ် သူသည် မိမိ၏အိမ်တော်၌သာနေထိုင်ရလေသည်။
೨೧ಉಜ್ಜೀಯನು ಜೀವದಿಂದಿರುವ ವರೆಗೂ ಕುಷ್ಠರೋಗಿಯಾಗಿದ್ದು, ಯೆಹೋವನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಅವನು ಕುಷ್ಠದ ದೆಸೆಯಿಂದ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾದಿಪತ್ಯವನ್ನೂ ಮತ್ತು ಪ್ರಜಾಪಾಲನೆಯನ್ನೂ ಅವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.
22 ၂၂ နန်းသက်တစ်လျှောက်သြဇိမင်းဆောင်ရွက်ခဲ့ သည့်အခြားအမှုအရာရှိသမျှကို အာမုတ် ၏သားပရောဖက်ဟေရှာယကမှတ်တမ်း တင်ထားသတည်း။-
೨೨ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದಿದ್ದಾನೆ.
23 ၂၃ သြဇိမင်းကွယ်လွန်သောအခါသူ့အား ဒါဝိဒ်မြို့တော်တွင်သင်္ဂြိုဟ်ကြသော်လည်း သူ၏ရောဂါကြောင့်ရာဇဂူ၌မသင်္ဂြိုဟ် ကြ။ သူ၏သားတော်ယောသံသည်ခမည်း တော်၏အရိုက်အရာကိုဆက်ခံ၍နန်း တက်လေသည်။
೨೩ಉಜ್ಜೀಯನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಕುಷ್ಠ ರೋಗಿಯದೆಂದು ಬಗೆದು, ರಾಜ ಕುಟುಂಬದ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.