< ၂ ရာဇဝင်ချုပ် 26 >

1 ယုဒပြည်သူပြည်သားအပေါင်းတို့သည်၊ အသက်တဆယ်ခြောက်နှစ်ရှိသော သားတော်ဩဇိကို ယူ၍ ခမည်းတော် အာမဇိအရာ၌ နန်းတင်ကြ၏။
ಆನಂತರ ಎಲ್ಲಾ ಯೆಹೂದ್ಯರು ಅಮಚ್ಯನ ಮಗನಾದ ಉಜ್ಜೀಯನನ್ನು ಅರಸನ್ನನ್ನಾಗಿ ಮಾಡಿದರು. ಉಜ್ಜೀಯನು ಅರಸನಾದಾಗ ಹದಿನಾರು ವರ್ಷದವನಾಗಿದ್ದ.
2 ထိုမင်းသည် ခမည်းတော်သေသောနောက်၊ ဧလုတ်မြို့ကို ပြုစု၍ ယုဒနိုင်ငံထဲသို့ သွင်းပြန်၏။
ಇವನು ಏಲೋತ್ ಪಟ್ಟಣವನ್ನು ಪುನಃ ಯೆಹೂದ ರಾಜ್ಯಕ್ಕೆ ಸೇರಿಸಿಕೊಂಡು ಭದ್ರಪಡಿಸಿದನು.
3 ဩဇိသည် အသက်တဆယ်ခြောက်နှစ်ရှိသော်၊ နန်းထိုင်၍ ယေရုရှလင်မြို့၌ ငါးဆယ်နှစ်နှစ်စိုးစံလေ၏။ မယ်တော်ကား၊ ယေရုရှလင်မြို့သူ ယေခေါလိ အမည် ရှိ၏။
ಅವನು ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷಗಳ ಕಾಲ ಆಳಿದನು. ಯೆರೂಸಲೇಮಿನವಳಾದ ಯೆಕೊಲ್ಯ ಎಂಬಾಕೆಯು ಅವನ ತಾಯಿ.
4 ထိုမင်းသည် ခမည်းတော် အာမဇိပြုသမျှ အတိုင်း၊ ထာဝရဘုရားရှေ့တော်၌ တရားသောအမှုကို ပြု၏။
ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
5 ဘုရားသခင်၏ ဗျာဒိတ်ရူပါရုံကို နားလည် သော ဇာခရိလက်ထက်၌၊ ဩဇိမင်းသည် ဘုရားသခင်ကို ဆည်းကပ်၏။ ထာဝရဘုရားကို ဆည်းကပ်သော ကာလပတ်လုံး၊ ဘုရားသခင်သည် အကြံထမြောက် ရသော အခွင့်ကို ပေးတော်မူ၏။
ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.
6 ထိုမင်းသည် စစ်ချီ၍ ဖိလိတ္တိလူတို့ကို တိုက် သဖြင့်၊ ဂါသမြို့ရိုး၊ ယာဗနေမြို့ရိုး၊ အာဇုတ်မြို့ရိုးတို့ကို ဖြိုဖျက်ပြီးမှ၊ အာဇုတ်မြို့ပတ်လည်၊ ဖိလိတ္တိပြည်အရပ် ရပ်၌ မြို့သစ်တို့ကို တည်ထောင်လေ၏။
ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
7 ဘုရားသခင်သည် ဖိလိတ္တိလူ၊ ဂုရဗာလမြို့မှာ နေသောအာရပ်လူ၊ မဟုနိမ်လူတို့တဘက်၌ သူ့ကို မစတော် မူ၏။
ಫಿಲಿಷ್ಟಿಯರೊಡನೆ ಗೂರ್ ಬಾಳಿನಲ್ಲಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು.
8 အမ္မုန်အမျိုးသားတို့သည်လည်း၊ ဩဇိမင်းအား လက်ဆောင်ပဏ္ဍာတို့ကို ဆက်ကြ၏။ သူသည် အလွန် ကိုယ်ကိုယ်ခိုင်ခံ့စေသဖြင့်၊ သိတင်းတော်သည် အဲဂုတ္တု ပြည်တိုင်အောင် ကျော်စောလေ၏။
ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕಬಲವುಳ್ಳವನ್ನಾದುದರಿಂದ ಅವನ ಹೆಸರು ಐಗುಪ್ತದ ಮೇರೆಯವರೆಗೂ ಹಬ್ಬಿತು.
9 ဩဇိမင်းသည် ယေရုရှလင်မြို့ ထောင့်တံခါး၊ ချိုင့်တံခါး၊ မြို့ရိုးကွေ့တံခါး၌ ရဲတိုက်တို့ကို တည်၍ ခိုင်ခံ့စေ၏။
ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನ ಬಾಗಿಲು, ಗೋಡೆ ತಿರುಗುವ ಭಾಗಗಳ ಮೇಲೆ ಗೋಪುರಗಳನ್ನು ಕಟ್ಟಿಸಿ ಭದ್ರಗೊಳಿಸಿದನು.
10 ၁၀ တော၌လည်းရဲတိုက်တို့ကို တည်၏။ ရေတွင်း များကိုလည်း တူ၏။ ချိုင့်ဝှမ်းရာ အရပ်နှင့်မြေညီရာ အရပ်၌ များစွာသော သိုးနွားတို့ကို ဆည်းဖူး၍ တောင် အရပ်၊ မြေကောင်းသောအရပ်၌ လယ်လုပ်သောသူနှင့် စပျစ်ဥယျာဉ် ပြုစုသောသူတို့ကိုလည်း စေစား၏။ ထိုသို့ သော အမှုများကို ဝါသနာရှိ၏။
೧೦ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು.
11 ၁၁ ဩဇိမင်း၌ တပ်စာရေးယေယေလနှင့် တပ်အုပ် မာသေယတို့သည် စာရင်းယူသည်အတျိုင်း၊ ရှင်ဘုရင်၏ ဗိုလ်မင်းဟာ နနိသည် စီရင်၍၊ အသီး အသီးတပ်ဖွဲ့သော စစ်သူရဲဗိုလ်ခြေများရှိကြ၏။
೧೧ಇದಲ್ಲದೆ, ಉಜ್ಜೀಯನಿಗೆ ಯುದ್ಧಕ್ಕೋಸ್ಕರ ಸೈನ್ಯವೂ ಇತ್ತು. ಲೇಖಕನಾದ ಯೆಗೀಯೇಲ್, ಅಧಿಕಾರಿಯಾದ ಮಾಸೇಯ ಇವರು ಹಾಕಿಕೊಟ್ಟ ಪಟ್ಟಿಯಕ್ರಮ ಪ್ರಕಾರ ಅರಸನ ಸರದಾರರಲ್ಲಿ ಒಬ್ಬನಾದ ಹನನ್ಯನ ಆಜ್ಞಾನುಸಾರವಾಗಿ. ಆಯಾ ಗುಂಪುಗಳು ಯುದ್ಧಕ್ಕೆ ಹೊರಡುತ್ತಿದ್ದವು.
12 ၁၂ ထိုသို့ခွန်အားကြီးသော သူရဲအဆွေအမျိုး အလိုက် အကြီးအကဲ လုပ်သောသူပေါင်းကား၊ နှစ်ထောင်ခြောက်ရာတည်း။
೧೨ಯುದ್ಧವೀರರೂ ಎಲ್ಲಾ ಗೋತ್ರಪ್ರಧಾನರ ಸಂಖ್ಯೆಯು ಎರಡು ಸಾವಿರದ ಆರು ನೂರು.
13 ၁၃ ထိုသို့အကြီးအကဲလုပ်သောသူ၊ ရန်သူတဘက်၌ ရှင်ဘုရင်ကို ထောက်မခြင်းငှါ၊ ကြီးသောခွန်အားနှင့် စစ်တိုက်သောသူရဲပေါင်းကား၊ သုံးသိန်းခုနစ်ထောင် ငါးရာတည်း။
೧೩ಇವರ ಕೈಕೆಳಗಿದ್ದ ಭಟರ ಸಂಖ್ಯೆಯು ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು ಅವನ ವೈರಿಗಳಿಗೆ ವಿರುದ್ಧವಾಗಿ ಪರಾಕ್ರಮದಿಂದ ಯುದ್ಧಮಾಡುತ್ತಿದ್ದರು.
14 ၁၄ ဩဇိမင်းသည်လည်း၊ ဗိုလ်ခြေအပေါင်းတို့အဘို့ ဒိုင်းလွှား၊ လှံ၊ သံခမောက်လုံး၊ သံချပ်၊ လေး၊ ကျောက်နှင့် ပစ်စရာလောက်လွှဲတို့ကို ပြင်ဆင်လေ၏။
೧೪ಉಜ್ಜೀಯನು ಈ ಎಲ್ಲಾ ಸೈನ್ಯದವರಿಗೆ ಬೇಕಾದ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು, ಕವಣೆಯಕಲ್ಲು ಇವುಗಳನ್ನು ಒದಗಿಸಿ ಕೊಟ್ಟನು.
15 ၁၅ လိမ္မာသောသူတို့သည် ဥာဏ်ရှာ၍လုပ်သော ယန္တရားစက်တို့ကိုလည်း၊ ယေရှုရှလင်မြို့ရဲတိုက်၊ မြို့ပြအိုး အပေါ်က မြှားနှင့်ကျောက်ကြီးကို ပစ်စရာဘို့ ပြင်ဆင် လေ၏။ ထိုသို့တန်ခိုးကြီးအောင် အထူးသဖြင့် မစခြင်းကို ခံရသည်ဖြစ်၍၊ သိတင်းတော်သည် အနှံ့အပြားကျော်စော ၏။
೧೫ಇದಲ್ಲದೆ, ಅವನು ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನು ಬಳಸುವುದಕ್ಕಾಗಿ, ತಜ್ಞರ ಆಜ್ಞೆಯ ಮೇರೆಗೆ ಯಂತ್ರಗಳನ್ನೂ ಮಾಡಿಸಿ, ಅವುಗಳನ್ನು ಯೆರೂಸಲೇಮಿನ ಗೋಪುರಗಳ ಮೇಲೆಯೂ, ಕೋಟೆಕೊತ್ತಲಗಳನ್ನು ಮೇಲೆಯೂ ಇಡಿಸಿದ್ದನು. ಅವನು ಬಲಿಷ್ಠನಾಗುವ ಹಾಗೆ ದೇವರ ಅತಿಶಯವಾದ ಸಹಾಯವು ಆಶ್ಚರ್ಯವಾದ ರೀತಿಯಲ್ಲಿ ಅವನಿಗೆ ದೊರೆಯುತ್ತಿದ್ದುದರಿಂದ; ಅವನ ಕೀರ್ತಿಯೂ ಬಹು ದೂರದ ಮೇರೆಯವರೆಗೂ ಹಬ್ಬಿತು.
16 ၁၆ ဩဇိမင်းသည် တန်ခိုးကြီးသောအခါ၊ ကိုယ် အကျိုးနည်းအောင် ထောင်လွှားသောစိတ်ထသဖြင့်၊ မိမိ ဘုရားသခင် ထာဝရဘုရားကို ပြစ်မှား၍၊ နံ့သာပေါင်းကို မီးရှို့ရာ ယဇ်ပလ္လင်ပေါ်မှာ နံ့သာပေါင်းကို မီးရှို့ခြင်းငှါ၊ ထာဝရဘုရား၏ ဗိမာန်တော်ထဲသို့ ဝင်လေ၏။
೧೬ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು.
17 ၁၇ ယဇ်ပုရောဟိတ်အာဇရိသည် ရဲရင့်ခြင်းသတ္တိ ရှိသော ထာဝရဘုရား၏ အမှုတော်ထမ်းယဇ်ပုရောဟိတ် ရှစ်ကျိပ်တို့နှင့်တကွ၊ ရှင်ဘုရင်ဩဇိနောက်တော်သို့ လိုက်၍၊
೧೭ಆಗ ಮಹಾಯಾಜಕನಾದ ಅಜರ್ಯನೂ ಹಾಗು ಧೈರ್ಯಶಾಲಿಗಳಾದ ಯೆಹೋವನ ಎಂಭತ್ತು ಮಂದಿ ಇತರ ಯಾಜಕರೂ ಅರಸನಾದ ಉಜ್ಜೀಯನ ಹಿಂದೆಯೇ ಹೋಗಿ
18 ၁၈ ဆီးတားသဖြင့်၊အိုဩဇိမင်း၊ ကိုယ်တော်သည် ထာဝရဘုရားအား နံ့သာပေါင်းကို မီးရှို့ခြင်းအမှုနှင့် မဆိုင်ပါ။ နံ့သာပေါင်းကို မီးရှို့စေခြင်းငှါ၊ ခန့်ထား သောအာရုန်သား ယဇ်ပုရောဟိတ်တို့သာ ထိုအမှုနှင့် ဆိုင်ကြပါ၏။ သန့်ရှင်းရာဌာနထဲက ထွက်သွားလော့။ ကိုယ်တော်သည် ပြစ်မှားပြီ။ ထာဝရအရှင် ဘုရားသခင့် ရှေ့တော်၌ ကိုယ်တော်အသရေပျက်လိမ့်မည်ဟု ဆိုကြ လျှင်၊
೧೮ಅರಸನ ಎದುರಿಗೆ ನಿಂತು ಅವನಿಗೆ, “ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವುದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಯೆಹೋವನಿಂದ ನಿನಗೆ ಗೌರವ ದೊರಕಲಾರದು” ಎಂದರು.
19 ၁၉ ဩဇိမင်းသည် ဒေါသစိတ်ရှိ၍၊ နံ့သာပေါင်းကို မီးရှို့ခြင်းငှါ၊ လင်ပန်းကိုကိုင်လျက်၊ ယဇ်ပုရောဟိတ်တို့ကို အမျက်ထွက်လျှင်၊ ဗိမာန်တော်တွင် နံ့သာပေါင်းကို မီးရှို့ ရာယဇ်ပလ္လင်၏အနား၊ ယဇ်ပုရောဟိတ်တို့ ရှေ့မှာ၊ နူနာ သည် ရှင်ဘုရင်နဖူး၌ ပေါ်လေ၏။
೧೯ಆಗ ಧೂಪ ಹಾಕಬೇಕೆಂದು ಕೈಯಲ್ಲಿ ಧೂಪಾರತಿಯನ್ನು ಹಿಡಿದುಕೊಂಡಿದ್ದ ಉಜ್ಜೀಯನು ಕೋಪಗೊಂಡನು. ಅವನು ಯೆಹೋವನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕರೊಡನೆ ಸಿಟ್ಟಿನಿಂದ ಮಾತನಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯ ಮೇಲೆ ಕುಷ್ಠವು ಕಾಣಿಸಿಕೊಂಡಿತು.
20 ၂၀ ယဇ်ပုရောဟိတ်မင်းနှင့် ယဇ်ပုရောဟိတ် အပေါင်းတို့သည် ကြည့်ရှု၍၊ နဖူးတော်၌ နူနာစွဲသည် ကိုမြင်လျှင်၊ ရှင်ဘုရင်ကို ပြင်သို့နှင်ထုတ်ကြ၏။ ရှင်ဘုရင် ကိုယ်တိုင်လည်း၊ ထာဝရဘုရားဒဏ်ခတ်တော်မူသော ကြောင့်၊ အလျင်အမြန်ထွက်လေ၏။
೨೦ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠವು ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿಯಿತು. ಅವನೂ ಶೀಘ್ರವಾಗಿ ಹೊರಗೆ ಹೋಗಲು ಆತುರಪಟ್ಟನು.
21 ၂၁ ထိုသို့ဩဇိမင်းကြီးသည် သေသည်တိုင်အောင် နူနာစွဲ၍၊ ခြားနားသောနန်း၌နေရ၏။ ဗိမာန်တော်သို့ ဝင်သော အခွင့်ကို မရ။ သားတော်ယောသံသည် နန်းတော်ကို အုပ်စိုး၍ နိုင်ငံတော်မှုကိုစီရင်ရ၏။
೨೧ಉಜ್ಜೀಯನು ಜೀವದಿಂದಿರುವ ವರೆಗೂ ಕುಷ್ಠರೋಗಿಯಾಗಿದ್ದು, ಯೆಹೋವನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಅವನು ಕುಷ್ಠದ ದೆಸೆಯಿಂದ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾದಿಪತ್ಯವನ್ನೂ ಮತ್ತು ಪ್ರಜಾಪಾಲನೆಯನ್ನೂ ಅವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.
22 ၂၂ ဩဇိပြုမူသောအမှုအရာ ကြွင်းလေသမျှ အစ အဆုံးတို့ကို၊ အာမုတ်သား ပရောဖက်ဟေရှာယသည် ရေးထားလေ၏။
೨೨ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದಿದ್ದಾನೆ.
23 ၂၃ ဩဇိသည် ဘိုးဘေးတို့နှင့်အိပ်ပျော်၍၊ သူတို့နှင့် အတူ သင်္ဂြိုဟ်ခြင်းကိုခံရသော်လည်း၊ လူနူဖြစ်သော ကြောင့်၊ ရှင်ဘုရင်ကို သင်္ချိုင်းနှင့်ဆိုင် သောမြေအကွက်၌ သာ သင်္ဂြိဟ်ကြ၏။ သားတော်ယောသံသည် ခမည်း တော်အရာ၌ နန်းထိုင်၏။
೨೩ಉಜ್ಜೀಯನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಕುಷ್ಠ ರೋಗಿಯದೆಂದು ಬಗೆದು, ರಾಜ ಕುಟುಂಬದ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.

< ၂ ရာဇဝင်ချုပ် 26 >