< ကမ္ဘာ​ဦး 18 >

1 ထာဝရဘုရားသည် မံရေသပိတ်တောနားမှာ၊ အာဗြဟံအား ထင်ရှားတော်မူသည် အကြောင်းအရာဟူ မူကား၊ နေပူသောအချိန်တွင် အာဗြဟံသည် တဲတံခါးဝ၌ ထိုင်လျက်၊
ಅಬ್ರಹಾಮನು ಬಿಸಿಲೇರಿದಾಗ ಮಮ್ರೆಯ ಮೋರೆ ತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿರುವಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾದನು.
2 မြော်ကြည့်၍၊ မိမိရှေ့မှာ လူသုံးယောက် ရပ်နေကြသည်ကို မြင်သောအခါ၊ ခရီးဦးကြိုပြုခြင်းငှါ တဲတံခါးဝမှပြေး၍ မြေသို့ ဦးညွတ်ချလျက်၊
ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ.
3 အကျွန်ုပ်သခင်၊ ရှေ့တော်၌ အကျွန်ုပ်သည် မျက်နှာရလျှင် ကိုယ်တော်ကျွန်မှလွန်၍မသွားပါနှင့်။
“ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ; ದಾಸನ ಗುಡಾರಕ್ಕೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ.
4 ရေအနည်းငယ်ကို ယူခဲ့ပါရစေ။ ခြေကို ဆေးပြီး လျှင် သစ်ပင်အောက်၌ လျောင်းနေကြပါလော့။
ನೀರು ತರಿಸಿಕೊಡುತ್ತೇನೆ; ನಿಮ್ಮ ಕಾಲುಗಳನ್ನು ತೊಳೆದುಕೊಂಡು ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿರಿ.
5 မုန့်အနည်းငယ်ကိုလည်း ယူခဲ့ပါမည်။ အမော အပန်းပြေသောအခါ သွားကြပါလော့။ ထိုသို့သော ကျေးဇူးတော်ကို ခံစေခြင်းငှါ၊ ကိုယ်တော် ကျွန်ရှိရာသို့ ရောက်ပါပြီဟုဆို၏။ ထိုသူတို့ကလည်း၊ ပြောသည်အတိုင်း ပြုပါလော့ဟုဆိုကြ၏။
ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು” ಎನ್ನಲು ಅವರು, “ನೀನು ಹೇಳಿದಂತೆ ಮಾಡಬಹುದು” ಅಂದರು.
6 အာဗြဟံသည်လည်း၊ တဲအတွင်း၌ရှိသော စာရာ ဆီသို့ အလျင်အမြန်ဝင်ပြီးလျှင်၊ ဂျုံမုန့်ညက်သုံးစလယ်ကို အသော့ပြင်၍နယ်ပါ။ ပေါင်မုန့်ကို လုပ်ပါဟုဆိုလေ၏။
ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು.
7 တဖန်နွားစုသို့ပြေး၍ နုထွားကောင်းမွန်သော နွားသငယ်ကို ယူခဲ့၍၊ လုလင်၌အပ်သဖြင့် မြန်မြန်ပြင်ဆင် စေ၏။
ಆ ಮೇಲೆ ಅವನು ದನಗಳ ಕಡೆಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು.
8 ထိုနောက် နို့နှင့် နို့စမ်းကို၎င်း၊ ပြင်ဆင်သော နွားသငယ်ကို၎င်း ယူ၍၊ ထိုသူတို့ရှေ့၌ ထည့်ပြီးလျှင်၊ သစ်ပင်အောက်၊ သူတို့အနားမှာရပ်နေ၍၊ သူတို့သည် စားကြ၏။
ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು.
9 ပြီးသောအခါ၊ သင်၏ မယားစာရာသည် အဘယ်မှာရှိသနည်းဟု မေးကြလျှင်၊ တဲအတွင်း၌ ရှိပါသည်ဟု ပြန်ပြော၏။
ಬಳಿಕ ಅವರು ಅವನಿಗೆ, “ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ” ಎಂದು ಕೇಳಲು ಅವನು “ಅಗೋ, ಗುಡಾರದಲ್ಲಿದ್ದಾಳೆ” ಎಂದನು.
10 ၁၀ ထိုသူတို့တွင် တပါးကလည်း၊ ဘွားချိန်စေ့သော အခါ၊ ငါသည် သင့်ဆီသို့ ဆက်ဆက်ပြန်လာဦးမည်။ ထိုအခါ သင်၏မယားစာရာသည် သားကိုရလိမ့်မည်ဟု ပြောဆို၏။ ထိုသို့ဆိုသောသူ၏နောက်၌ တံခါးဝအနား မှာ၊ စာရာရှိသောကြောင့် ထိုစကားကိုကြား၏။
೧೦ಅದಕ್ಕೆ ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.
11 ၁၁ ထိုအခါ အာဗြဟံနှင့်စာရာသည် အသက် အရွယ်ကြီးရင့်လှပြီ။ စာရာသည် မိန်းမတို့၌ ဥတုရောက်မြဲ ရှိသည့်အတိုင်း မရောက်ပြီ။
೧೧ಅಬ್ರಹಾಮನೂ ಸಾರಳೂ ಬಹುವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು.
12 ၁၂ ထိုကြောင့် စာရာက၊ ငါလည်းအိုပြီ၊ ငါ့သခင် လည်းအိုပြီ၊ သို့ဖြစ်၍ ငါသည် ပျော်မွေ့ခြင်းရှိလိမ့်မည် လောဟု ဆိုလျှက်၊ တိတ်ဆိတ်စွာ ရယ်လေ၏။
೧೨ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.
13 ၁၃ သင်၏မယားစာရာက၊ အကယ်၍ ငါသည် အိုပြီးမှ၊ သားကို ဘွားလိမ့်မည်လောဟုဆိုလျက်၊ အဘယ် ကြောင့် ရယ်သနည်း။
೧೩ಯೆಹೋವನು ಅಬ್ರಹಾಮನಿಗೆ, “ಸಾರಳು ನಕ್ಕು, ಮುದುಕಿಯಾದ, ನಾನು ಮಗುವನ್ನು ಹೆರುವುದಾದೀತೇ ಎಂದು ಹೇಳಿದ್ದೇನು?
14 ၁၄ ထာဝရဘုရားမတတ်နိုင်သောအမှု တစုံတခု ရှိသလော။ ချိန်းချက်သော ဘွားချိန်စေ့သောအခါ၊ သင့်ဆီသို့ငါပြန်လာ၍၊ စာရာသည် သားကိုရလိမ့်မည်ဟု ထာဝရဘုရားသည် အာဗြဟံအားမိန့်တော်မူ၏။
೧೪ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು.
15 ၁၅ စာရာကလည်း ကျွန်မမရယ်ပါဟု၊ ကြောက်၍ ငြင်းလေ၏။ မဟုတ်ဘူး။ သင်ရယ်ပြီဟုမိန့်တော်မူ၏။
೧೫ಆಗ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಎಂದು ಸುಳ್ಳಾಡಿದಾಗ, ಆತನು ಅದಕ್ಕೆ, “ಹಾಗಲ್ಲ, ನೀನು ನಕ್ಕಿದ್ದುಂಟು” ಎಂದನು.
16 ၁၆ ထိုလူတို့သည် ထိုအရပ်က ထ၍ သောဒုံမြို့သို့ မျက်နှာပြုလျက် သွားကြ၏။ အာဗြဟံသည်လည်း သူတို့ ကို ပို့ခြင်းငှါ လိုက်လေ၏။
೧೬ತರುವಾಯ ಆ ಮನುಷ್ಯರು ಅಲ್ಲಿಂದ ಹೊರಟು ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡಲು ಅವರ ಜೊತೆಯಲ್ಲೇ ಹೋದನು.
17 ၁၇ ထာဝရဘုရားကလည်း၊ ငါပြုမည်အမှုကို အာဗြဟံအား မဘော်မပြဘဲ ဝှက်ထားရမည်လော။
೧೭ಆಗ ಯೆಹೋವನು ತನ್ನೊಳಗೆ, “ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವುದು ಸರಿಯೋ?
18 ၁၈ အာဗြဟံသည် ကြီးမြတ်၍၊ တန်ခိုးနှင့်ပြည့်စုံ သော လူမျိုးဖြစ်လိမ့်မည်။ လူမျိုးအပေါင်းတို့သည် သူ့အားဖြင့် ကောင်းကြီးမင်္ဂလာကို ခံရကြလိမ့်မည်။
೧೮ಅವನಿಂದ ಬಲಿಷ್ಠವಾದ ಮಹಾ ಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದಲ್ಲಾ;
19 ၁၉ အကြောင်းမူကား၊ သူသည် မိမိနောက်၌ ဖြစ်သော သားများ၊ အိမ်သူများတို့အား ပညတ်မည်အရာ ကို ငါသိ၏။ သူတို့သည်လည်း ထာဝရဘုရား၏ တရား လမ်းသို့ လိုက်၍ ဟုတ်မှန်ဖြောင့်မတ်စွာ ကျင့်ကြလိမ့် မည်။ သို့ဖြစ်၍ ဂတိတော်ရှိသည့်အတိုင်း၊ ထာဝရ ဘုရားသည် အာဗြဟံ၌ပြုရသော အခွင့်ရှိလိမ့်မည်ဟု အကြံတော်ရှိ၏။
೧೯ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.
20 ၂၀ တဖန်ထာဝရဘုရားက၊ သောဒုံမြို့၊ ဂေါမောရ မြို့၌ ကြွေးကြော်သော အသံသည်ကြီး၍၊ အလွန်အပြစ် လေးသောကြောင့်၊
೨೦ಇದಲ್ಲದೆ ಯೆಹೋವನು, “ಸೊದೋಮ್ ಗೊಮೋರಗಳ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು,
21 ၂၁ ယခုငါသွား၍ ငါ့ရှေ့သို့ရောက်ခဲ့ပြီးသော ကြွေး ကြော်ခြင်းရှိသည်အတိုင်း၊ သူတို့သည် အမှန်ပြုသည် မပြုသည်ကို ငါကြည့်ရှုမည်။ မပြုလျှင် မပြုကြောင်းကို ငါသိမည် ဟု မိန့်တော်မူ၏။
೨೧ನಾನು ಇಳಿದು ಹೋಗಿ, ನನಗೆ ಮುಟ್ಟಿದ ಮೊರೆಯಂತೆಯೇ ಅವರು ಮಾಡಿರುವರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ” ಎಂದನು.
22 ၂၂ ထိုသူတို့သည် ထိုအရပ်မှ မျက်နှာလှည့်၍ သောဒုံမြို့သို့သွားကြ၏။ အာဗြံဟံမူကား၊ ထာဝရဘုရား ရှေ့တော်၌ ရပ်နေလျက်ရှိသေး၏။
೨೨ಆ ಮನುಷ್ಯರು ಅಲ್ಲಿಂದ ಸೊದೋಮಿನ ಕಡೆಗೆ ಹೋದರು; ಆದರೆ ಅಬ್ರಹಾಮನು ಯೆಹೋವನಿಗೆ ಎದುರಾಗಿ ಇನ್ನೂ ನಿಂತುಕೊಂಡಿದ್ದನು.
23 ၂၃ ထိုအခါ အာဗြဟံချဉ်းကပ်၍၊ ကိုယ်တော်သည် ဖြောင့်မတ်သော သူတို့ကို၊ မတရားသော သူတို့နှင့်တကွ ဖျက်ဆီးတော်မူမည်လော။
೨೩ಆಗ ಅಬ್ರಹಾಮನು ಹತ್ತಿರಕ್ಕೆ ಬಂದು, “ನೀನು ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡುವಿಯಾ?
24 ၂၄ ထိုမြို့တွင် ဖြောင့်မတ်သောသူငါးဆယ်ရှိလျှင်၊ ဖျက်ဆီးတော်မူမည်လော။ ဖြောင့်မတ်သောသူ ငါးဆယ် ပါသောမြို့ကို သူတို့အတွက် မနှမြောဘဲ ဖျက်ဆီးတော် မူမည်လော။
೨೪ಒಂದು ವೇಳೆ ಆ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ?
25 ၂၅ ထိုသို့ပြု၍ ဖြောင့်မတ်သော သူတို့ကို မတရား သော သူတို့နှင့်တကွ ကွပ်မျက်ခြင်းအမှုသည် ကိုယ်တော်နှင် ဝေးပါစေသတည်း။ ဖြောင့်မတ်သော သူတို့ကို မတရားသောသူတို့ကဲ့သို့ခံစေသောအမှုသည် ကိုယ်တော်နှင့် ဝေးပါစေသတည်း၊ မြေကြီးလုံးကို စီရင်တော်မူသော သခင်သည်၊ တရားသဖြင့် ပြုတော်မူမည် မဟုတ်လောဟု လျောက်ဆို၏။
೨೫ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.
26 ၂၆ ထာဝရဘုရားကလည်း၊ သောဒုမြို့၌ ဖြောင့်မတ် သောသူငါးဆယ်ကို ငါတွေ့လျှင်၊ သူတို့အတွက် ထိုအရပ် လုံးကို ငါနှမြောမည်ဟု မိန့်တော်မူ၏။
೨೬ಯೆಹೋವನು, “ಸೊದೋಮನಲ್ಲಿ ಐವತ್ತು ಮಂದಿ ನೀತಿವಂತರು ನನಗೆ ಸಿಕ್ಕಿದರೆ ಅವರ ನಿಮಿತ್ತ ಪಟ್ಟಣವನ್ನೆಲ್ಲಾ ಉಳಿಸುವೆನು” ಎಂದನು.
27 ၂၇ တဖန်အာဗြဟံက၊ အကျွန်ုပ်သည် မြေမှုန့်နှင့် ပြာသက်သက်ဖြစ်သော်လည်း၊ ဘုရားရှင်ကို ယခုလျှောက် မည်ဟု အားထုတ်ပါ၏။
೨೭ಅದಕ್ಕೆ ಅಬ್ರಹಾಮನು, “ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ;
28 ၂၈ ဖြောင့်မတ်သောသူ ငါးဆယ်တို့တွင် ငါးယောက်မပြည့်လျှင်၊ ထိုငါးယောက်မပြည့်သော အတွက်ကြောင့်၊ ထိုမြို့လုံးကို ဖျက်ဆီးတော်မူမည်လောဟု မေးလျှောက်ပြန်သော်၊ ထိုမြို့၌ လေးဆယ့်ငါးယောက်ကို ငါတွေ့လျှင်၊ ငါမဖျက်ဆီးဟု မိန့်တော်မူ၏။
೨೮ಒಂದು ವೇಳೆ ಐವತ್ತು ಮಂದಿ ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ ಪಟ್ಟಣವನ್ನೆಲ್ಲಾ ನಾಶ ಮಾಡುವಿಯಾ?” ಎಂದು ಕೇಳಲು ಯೆಹೋವನು, “ಅಲ್ಲಿ ನಲ್ವತ್ತೈದು ಮಂದಿ ನೀತಿವಂತರು ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.
29 ၂၉ တဖန်တုံ၊ ထိုမြို့၌ လေးဆယ်ကိုတွေ့ကောင်းတွေ့တော် မူလိမ့်မည်ဟု လျှောက်ဆိုပြန်လျှင်၊ ထိုလေးဆယ်အတွက် ငါမပြုဘဲနေမည်ဟု မိန့်တော်မူ၏။
೨೯ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ, “ಒಂದು ವೇಳೆ ಅಲ್ಲಿ ನಲ್ವತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ನಲ್ವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶ ಮಾಡುವುದಿಲ್ಲ” ಎಂದನು.
30 ၃၀ တဖန်တုံ၊ အိုဘုရားရှင်၊ စိတ်ရှိတော်မမူပါနှင့်၊ အကျွန်ုပ် လျှောက်ပါရစေ။ ထိုမြို့၌သုံးဆယ်ကို တွေ့ ကောင်းတွေ့တော်မူလိမ့်မည်ဟု လျှောက်ဆိုပြန်လျှင်၊ ထိုမြို့၌ သုံးဆယ်ကိုငါတွေ့လျှင်၊ ငါမပြုဟုမိန့်တော်မူ၏။
೩೦ಅಬ್ರಹಾಮನು, “ಕರ್ತನೇ, ಕೋಪಮಾಡಬಾರದು; ಇನ್ನೂ ಮಾತನಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.
31 ၃၁ တဖန်တုံ၊ အကျွန်ုပ်သည် ထာဝရဘုရားကို ယခု လျှောက်မည်ဟု အားထုတ်ပါ၏။ ထိုမြို့၌ နှစ်ဆယ်ကို တွေ့ကောင်းတွေ့တော်မူလိမ့်မည်ဟု လျှောက်ဆိုပြန်လျှင်၊ နှစ်ဆယ်အတွက် ငါမဖျက်ဆီးဘဲနေမည်ဟု မိန့်တော်မူ၏။
೩೧ಅವನು, “ಇಗೋ, ಸ್ವಾಮಿಯ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಆ ಪಟ್ಟಣವನ್ನು ಉಳಿಸುವೆನು, ನಾಶ ಮಾಡುವುದಿಲ್ಲ” ಅಂದನು.
32 ၃၂ အိုဘုရားရှင်၊ စိတ်ရှိတော်မမူပါနှင့်။ သည် တကြိမ် အကျွန်ုပ်လျှောက်ပါရစေဦး။ ထိုမြို့၌ တဆယ်ကို တွေ့ကောင်းတွေ့တော်မူလိမ့်မည်ဟု လျှောက်ဆိုပြန်လျှင်၊ တဆယ်အတွက် ငါမဖျက်ဆီးဘဲနေမည်ဟု မိန့်တော်မူ၏။
೩೨ಅಬ್ರಹಾಮನು, “ಕರ್ತನೇ, ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ.” ಎಂದನು.
33 ၃၃ ထာဝရဘုရားသည် အာဗြံဟံနှင့် နှုတ်ဆက်ခြင်း အမှုကုန်စင်ပြီးမှ ကြွသွားတော်မူ၏။ အာဗြံဟံသည် လည်း မိမိနေရာအရပ်သို့ ပြန်လေ၏။
೩೩ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.

< ကမ္ဘာ​ဦး 18 >