< २ इतिहास 26 >

1 यहूदाका सबै मानिसले सोह्र वर्ष उमेर पुगेका उज्‍जियाहलाई लिए र तिनका पिता अमस्‍याहको ठाउँमा तिनलाई राजा बनाए ।
ಆನಂತರ ಎಲ್ಲಾ ಯೆಹೂದ್ಯರು ಅಮಚ್ಯನ ಮಗನಾದ ಉಜ್ಜೀಯನನ್ನು ಅರಸನ್ನನ್ನಾಗಿ ಮಾಡಿದರು. ಉಜ್ಜೀಯನು ಅರಸನಾದಾಗ ಹದಿನಾರು ವರ್ಷದವನಾಗಿದ್ದ.
2 यिनले नै एलात सहरलाई पुनर्निर्माण गरे र यहूदामा फिर्ता ल्‍याए । त्यसपछि राजा आफ्‍ना पुर्खाहरूसित सुते ।
ಇವನು ಏಲೋತ್ ಪಟ್ಟಣವನ್ನು ಪುನಃ ಯೆಹೂದ ರಾಜ್ಯಕ್ಕೆ ಸೇರಿಸಿಕೊಂಡು ಭದ್ರಪಡಿಸಿದನು.
3 उज्‍जियाहले राज्य गर्न सुरु गर्दा तिनी सोह्र वर्षका थिए । तिनले यरूशलेममा बाउन्‍न वर्ष राज्‍य गरे । तिनकी आमाको नाउँ यकोल्‍याह थियो । तिनी यरूशलेमकी थिइन्‌ ।
ಅವನು ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷಗಳ ಕಾಲ ಆಳಿದನು. ಯೆರೂಸಲೇಮಿನವಳಾದ ಯೆಕೊಲ್ಯ ಎಂಬಾಕೆಯು ಅವನ ತಾಯಿ.
4 तिनले हरेक कुरामा आफ्‍ना पिता अमस्‍याहको उदाहरण पच्छ्याएर परमप्रभुको दृष्‍टिमा जे कुरो असल थियो सो गरे ।
ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
5 तिनलाई परमेश्‍वरको आदरको गर्नुपर्छ भनेर शिक्षा दिने जकरियाको समयभरि तिनले परमेश्‍वरको अगुवाइ खोज्‍नमा आफैलाई लगाए । जबसम्म तिनले परमप्रभुको खोजी गरे, तबसम्‍म परमेश्‍वरले तिनको फलिफाप गराइदिनुभयो ।
ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.
6 उज्‍जियाह बाहिर गए र पलिश्‍तीहरूसँग युद्ध गरे । तिनले गात, यब्‍ने र अश्‍दोदका पर्खालहरू भत्‍काइदिए । तिनले अश्‍दोदको गाउँमा र पलिश्‍तीहरूका बिचमा सहरहरू बनाए ।
ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
7 परमेश्‍वरले तिनलाई पलिश्‍तीहरू, गूर-बालमा बस्‍ने अरबीहरू र मोनीहरूका विरुद्धमा सहायता गर्नुभयो ।
ಫಿಲಿಷ್ಟಿಯರೊಡನೆ ಗೂರ್ ಬಾಳಿನಲ್ಲಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು.
8 अम्‍मोनीहरूले उज्‍जियाहलाई कर तिरे, र तिनको ख्‍याति मिश्रदेशको ढोकासम्‍मै पुग्‍यो, किनभने तिनी धेरै शक्तिशाली हुँदै गएका थिए ।
ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕಬಲವುಳ್ಳವನ್ನಾದುದರಿಂದ ಅವನ ಹೆಸರು ಐಗುಪ್ತದ ಮೇರೆಯವರೆಗೂ ಹಬ್ಬಿತು.
9 साथै उज्‍जियाहले यरूशलेममा कुने-ढोका, बेसी ढोका र पर्खालका कुनाको घुम्‍तीमा पनि धरहराहरू बनाए र तिनलाई सुरक्षित पारे ।
ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನ ಬಾಗಿಲು, ಗೋಡೆ ತಿರುಗುವ ಭಾಗಗಳ ಮೇಲೆ ಗೋಪುರಗಳನ್ನು ಕಟ್ಟಿಸಿ ಭದ್ರಗೊಳಿಸಿದನು.
10 तिनले उजाड-स्‍थानमा अरू रक्षक धरहराहरू बनाए, र पहाड र बेसी दुवैमा तिनका गाईबस्‍तुका धेरै बथान भएको कारणले तिनले धेरै वटा कूवाहरू खने । पहाडी इलाकामा र फलवन्त खेतहरूमा तिनका खेती गर्ने किसानहरू र दाखबारी हेर्नेहरू पनि थिए, किनकि तिनले खेतीपाती मन पराउँथे ।
೧೦ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು.
11 यसबाहेक उज्‍जियाहको युद्ध गर्ने एउटा फौज पनि थियो, जो फजका मुख्‍य सचिव यहीएल र अधिकृत मासेयाहले गणना गरेका दल-दल गरी राजाका कमाण्‍डरमध्‍ये एक जना हनन्‍याहको अधीनमा युद्धमा जान्थे ।
೧೧ಇದಲ್ಲದೆ, ಉಜ್ಜೀಯನಿಗೆ ಯುದ್ಧಕ್ಕೋಸ್ಕರ ಸೈನ್ಯವೂ ಇತ್ತು. ಲೇಖಕನಾದ ಯೆಗೀಯೇಲ್, ಅಧಿಕಾರಿಯಾದ ಮಾಸೇಯ ಇವರು ಹಾಕಿಕೊಟ್ಟ ಪಟ್ಟಿಯಕ್ರಮ ಪ್ರಕಾರ ಅರಸನ ಸರದಾರರಲ್ಲಿ ಒಬ್ಬನಾದ ಹನನ್ಯನ ಆಜ್ಞಾನುಸಾರವಾಗಿ. ಆಯಾ ಗುಂಪುಗಳು ಯುದ್ಧಕ್ಕೆ ಹೊರಡುತ್ತಿದ್ದವು.
12 वीर योद्धाहरूको नेतृत्‍व गर्ने परिवारका अगुवाहरूका जम्‍मा संख्‍या २,६०० थियो ।
೧೨ಯುದ್ಧವೀರರೂ ಎಲ್ಲಾ ಗೋತ್ರಪ್ರಧಾನರ ಸಂಖ್ಯೆಯು ಎರಡು ಸಾವಿರದ ಆರು ನೂರು.
13 तिनीहरूको अधीनमा ३,०७,५०० योद्धाहरू भएको एक विर फौज थियो जसले राजालाई शत्रुहरूका विरुद्धमा सहायता पुर्‍याउन ठुलो शक्तिका साथमा युद्ध गरे ।
೧೩ಇವರ ಕೈಕೆಳಗಿದ್ದ ಭಟರ ಸಂಖ್ಯೆಯು ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು ಅವನ ವೈರಿಗಳಿಗೆ ವಿರುದ್ಧವಾಗಿ ಪರಾಕ್ರಮದಿಂದ ಯುದ್ಧಮಾಡುತ್ತಿದ್ದರು.
14 तिनीहरूका निम्ति—सबै फौजका निम्‍ति उज्‍जियाहले ढाल, भाला, टोप, कवच, धनु र घुयेंत्राहरू तयार गरे ।
೧೪ಉಜ್ಜೀಯನು ಈ ಎಲ್ಲಾ ಸೈನ್ಯದವರಿಗೆ ಬೇಕಾದ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು, ಕವಣೆಯಕಲ್ಲು ಇವುಗಳನ್ನು ಒದಗಿಸಿ ಕೊಟ್ಟನು.
15 धरहरा र बुर्जाहरूमा प्रयोग गर्न सिपालु कारीगरहरूले बनाएका काँडहरू र ठुला ढुङ्गा हान्‍ने यन्‍त्रहरू तिनले यरूशलेममा तयार पारे । तिनको ख्‍याति टाढाका देशसम्‍म पुग्‍यो, किनकि तिनलाई ठुलो सहायता मिलेको थयो र यसैले तिनी धेरै शक्तिशाली भए ।
೧೫ಇದಲ್ಲದೆ, ಅವನು ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನು ಬಳಸುವುದಕ್ಕಾಗಿ, ತಜ್ಞರ ಆಜ್ಞೆಯ ಮೇರೆಗೆ ಯಂತ್ರಗಳನ್ನೂ ಮಾಡಿಸಿ, ಅವುಗಳನ್ನು ಯೆರೂಸಲೇಮಿನ ಗೋಪುರಗಳ ಮೇಲೆಯೂ, ಕೋಟೆಕೊತ್ತಲಗಳನ್ನು ಮೇಲೆಯೂ ಇಡಿಸಿದ್ದನು. ಅವನು ಬಲಿಷ್ಠನಾಗುವ ಹಾಗೆ ದೇವರ ಅತಿಶಯವಾದ ಸಹಾಯವು ಆಶ್ಚರ್ಯವಾದ ರೀತಿಯಲ್ಲಿ ಅವನಿಗೆ ದೊರೆಯುತ್ತಿದ್ದುದರಿಂದ; ಅವನ ಕೀರ್ತಿಯೂ ಬಹು ದೂರದ ಮೇರೆಯವರೆಗೂ ಹಬ್ಬಿತು.
16 तर जब उज्‍जियाह शक्तिशाली भए, तब तिनको हृदय अहंकारी भयो ताकि तिनले भ्रष्‍ट किसिमले काम गरे । तिनले परमप्रभु आफ्‍ना परमेश्‍वरको विरुद्धमा पाप गरे, किनकि धूप-वेदीमा धूप बाल्‍नलाई तिनी परमप्रभुको मन्‍दिरमा पसे ।
೧೬ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು.
17 पुजारी अजर्याह र परमप्रभुका अरू असी जना साहसी पुजारीहरू राजा उज्‍जियाहको पछिपछि भित्र गए ।
೧೭ಆಗ ಮಹಾಯಾಜಕನಾದ ಅಜರ್ಯನೂ ಹಾಗು ಧೈರ್ಯಶಾಲಿಗಳಾದ ಯೆಹೋವನ ಎಂಭತ್ತು ಮಂದಿ ಇತರ ಯಾಜಕರೂ ಅರಸನಾದ ಉಜ್ಜೀಯನ ಹಿಂದೆಯೇ ಹೋಗಿ
18 तिनीहरूले उज्‍जियाहको विरोध गरे र तिनलाई भने, “ए उज्‍जियाह, परमप्रभुको निम्‍ति धूप बाल्‍ने काम तपाईंको होइन, तर हारूनको वंशका पुजारीहरूको हो, जसलाई धूप बाल्‍नलाई अभिषेक गरिएको छ । पवित्रस्‍थानबाट बाहिर जानुहोस्, किनकि तपाईंले विश्‍वासघात गर्नुभएको छ र परमप्रभु परमेश्‍वरबाट तपाईंले केही कदर पाउनुहुनेछैन ।”
೧೮ಅರಸನ ಎದುರಿಗೆ ನಿಂತು ಅವನಿಗೆ, “ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವುದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಯೆಹೋವನಿಂದ ನಿನಗೆ ಗೌರವ ದೊರಕಲಾರದು” ಎಂದರು.
19 तब उज्‍जियाह रिसाए । तिनले धूप बाल्‍नलाई हातमा धुपौरो समातेका थिए । तिनी पुजारीहरूसँग रिसाएको बेलामा, ती पुजारीहरूकै सामुन्‍ने परमप्रभुको मन्‍दिरभित्र धूप-वेदीको छेउमा तिनको निधारमा कुष्‍ठरोग निस्‍क्‍यो ।
೧೯ಆಗ ಧೂಪ ಹಾಕಬೇಕೆಂದು ಕೈಯಲ್ಲಿ ಧೂಪಾರತಿಯನ್ನು ಹಿಡಿದುಕೊಂಡಿದ್ದ ಉಜ್ಜೀಯನು ಕೋಪಗೊಂಡನು. ಅವನು ಯೆಹೋವನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕರೊಡನೆ ಸಿಟ್ಟಿನಿಂದ ಮಾತನಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯ ಮೇಲೆ ಕುಷ್ಠವು ಕಾಣಿಸಿಕೊಂಡಿತು.
20 प्रधान पुजारी अजर्याह र अरू पुजारीहरूले तिनलाई हेर्दाहेर्दै तिनको निधारमा कुष्‍ठरोग निस्‍केको तिनीहरूले देखे । तिनीहरूले तिनलाई हतार-हतार त्‍यहाँबाट बाहिर निकाले । वास्तवमा तिनी आफै बाहिर निस्‍कनलाई हतार गरे, किनभने परमप्रभुले तिनलाई प्रहार गर्नुभएको थियो ।
೨೦ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠವು ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿಯಿತು. ಅವನೂ ಶೀಘ್ರವಾಗಿ ಹೊರಗೆ ಹೋಗಲು ಆತುರಪಟ್ಟನು.
21 राजा उज्‍जियाह आफ्‍नो मर्ने दिनसम्‍मै कुष्‍ठरोगी भए । तिनी कुष्‍ठरोगी भएको हुनाले अलग्‍गै घरमा बसे, किनकि तिनलाई परमप्रभुको मन्‍दिरबाट बहिष्‍कार गरिएको थियो । तिनका छोरा योतामले राजाको महलको रेखदेख गरे, र देशका मानिसहरूमाथि शासन गरे ।
೨೧ಉಜ್ಜೀಯನು ಜೀವದಿಂದಿರುವ ವರೆಗೂ ಕುಷ್ಠರೋಗಿಯಾಗಿದ್ದು, ಯೆಹೋವನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಅವನು ಕುಷ್ಠದ ದೆಸೆಯಿಂದ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾದಿಪತ್ಯವನ್ನೂ ಮತ್ತು ಪ್ರಜಾಪಾಲನೆಯನ್ನೂ ಅವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.
22 उज्‍जियाहका राजकालका अरू घटनाहरूको विवरण सुरुदेखि अन्‍त्‍यसम्‍मै आमोजका छोरा यशैया अगमवक्ताले लेखेका छन्‌ ।
೨೨ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದಿದ್ದಾನೆ.
23 यसरी उज्‍जियाह आफ्‍ना पुर्खाहरूसित सुते । तिनीहरूले राजाहरूका चिहानको जमिनमा पुर्खाहरूसित गाडे, किनकि तिनीहरूले भने, “तिनी एक जना कुष्‍ठरोगी हुन्‌ ।” अनि तिनीपछि तिनका छोरा योताम तिनको ठाउँमा राजा भए ।
೨೩ಉಜ್ಜೀಯನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಕುಷ್ಠ ರೋಗಿಯದೆಂದು ಬಗೆದು, ರಾಜ ಕುಟುಂಬದ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.

< २ इतिहास 26 >