< इजकिएल 46 >

1 परमप्रभु परमेश्‍वर यसो भन्‍नुहुन्छ: भित्री चोकको पूर्वपट्टि फर्किएको ढोका कामको हप्‍ताको छ दिनसम्म बन्द हुनेछ, तर शबाथको दिनमा त्यो खोलिनेछ र औंसीको दिनमा त्यो खोलिनेछ ।
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವಾರದೊಳಗೆ ಕೆಲಸ ಮಾಡುವ ಆರು ದಿನಗಳಲ್ಲಿ ಒಳಗಿನ ಅಂಗಳದ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ಮುಚ್ಚಿರಬೇಕು. ಅದನ್ನು ಸಬ್ಬತ್ ದಿನದಲ್ಲಿಯೂ, ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.
2 बाहिरबाट ढोका र त्यसको दलान हुँदै शासक बाहिरी चोकमा आउनेछन्, र पुजारीहरूले होमबलि र मेलबलि चढाउँदा तिनी भित्री ढोकाको चौकोसको छेउमा खडा हुनेछन् । तब तिनले भित्री ढोकाको सँघारमा आराधना गर्नेछन् र बाहिर जानेछन्, तर त्यो ढोका भने साँझसम्म नै बन्द हुनेछैन ।
ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ, ಬಾಗಿಲಿನ ಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞ ಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲಿನ ಹೊಸ್ತಿಲಿನಲ್ಲಿ ಅಡ್ಡಬೀಳಲಿ, ಆ ಮೇಲೆ ಹೊರಟು ಹೋಗಲಿ. ಅ ದಿನ ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.
3 शबाथ र औंसीमा देशका मानिसहरूले पनि यही ढोकामा परमप्रभुको आराधना गर्नेछन् ।
ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ ದೇಶದ ಜನರು ಆ ಹೆಬ್ಬಾಗಿಲಿನ ದ್ವಾರದ ಮುಂದೆ ಯೆಹೋವನ ಸಮ್ಮುಖವಾಗಿ ಅಡ್ಡಬೀಳಲಿ.
4 शासकले परमप्रभुलाई शबाथ दिनमा चढाउने होमबलि छवटा निष्खोट थुमा र एउटा निष्खोट भेडो हुनेछ ।
ಸಬ್ಬತ್ ದಿನದಲ್ಲಿ ಅರಸನು ಯೆಹೋವನಿಗೆ ಪೂರ್ಣಾಂಗವಾದ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಅರ್ಪಿಸತಕ್ಕದ್ದು.
5 भेडोसँग चढाइने अन्‍नबलि एक एपा हुनेछ, र थुमासँग चढाइने अन्‍नबलि तिनले दिन चाहेजति हुनेछ, र अन्‍नको हरेक एपासँग एक हीन तेल होस् ।
ಟಗರಿನೊಡನೆ ಮೂವತ್ತು ಸೇರು ಗೋದಿಹಿಟ್ಟನ್ನೂ, ಕುರಿಗಳೊಡನೆ ಕೈಯಲಾದಷ್ಟು ಗೋದಿಹಿಟ್ಟನ್ನೂ, ಮೂವತ್ತು ಸೇರು ಗೋದಿಹಿಟ್ಟಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಕೊಡಲಿ.
6 औंसीको दिनमा तिनले बथानबाट एउटा निष्खोट साँढे, छवटा थुमा, र एउटा निष्खोट भेडो चढाउन् ।
ಅಮಾವಾಸ್ಯೆಯಲ್ಲಿ ಅವನು ಪೂರ್ಣಾಂಗವಾದ ಒಂದು ಹೋರಿಯನ್ನೂ, ಆರು ಕುರಿಗಳನ್ನೂ, ಒಂದು ಟಗರನ್ನೂ ಒಪ್ಪಿಸತಕ್ಕದ್ದು. ಅವು ಪೂರ್ಣಾಂಗವಾಗಿಯೇ ಇರಬೇಕು.
7 तिनले साँढेको निम्ति एक एपा, भेडोको निम्ति एक एपा, र थुमाहरूका निम्ति तिनले दिन चाहेजति अन्‍नबलि चढाउन्, र अन्‍नको हरेक एपाको निम्ति एक हीन तेल होस् ।
ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.
8 जब शासक ढोका र त्यसको दलानको बाटोबाट आउँछन्, तब तिनी त्यही बाटोबाट भएर बाहिर जानुपर्छ ।
“ಅರಸನು ಪ್ರವೇಶ ಮಾಡುವಾಗ ಹೆಬ್ಬಾಗಿಲಿನ ಕೈಸಾಲೆಯ ಮಾರ್ಗವಾಗಿ ಒಳಗೆ ಬಂದು, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.
9 तर जब देशका मानिसहरू तोकिएका चाडहरूमा परमप्रभुको सामु आउँछन्, तब उत्तरी ढोकाबाट आउनेहरू दक्षिणी ढोकाबाट बाहिर जानुपर्छ, र दक्षिणी ढोकाबाट आउनेहरू उत्तरी ढोकाबाट बाहिर जानुपर्छ । कोही पनि आफू भित्र पसेको ढोकातिर फर्कनुहुँदैन, किनकि त्यो सिधै अगाडि जानुपर्छ ।
ದೇಶದ ಜನರಾದರೋ ಹಬ್ಬಗಳಲ್ಲಿ ಯೆಹೋವನ ಸಮ್ಮುಖದಲ್ಲಿ ಕಾಣಿಸಿಕೊಳ್ಳುವಾಗ ಉತ್ತರ ಬಾಗಿಲಿನಿಂದ ಆರಾಧಿಸುವುದಕ್ಕೆ ಪ್ರವೇಶಿಸಿದವನು ದಕ್ಷಿಣ ಬಾಗಿಲಿಂದ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನಿಂದ ಪ್ರವೇಶಿಸಿದವನು ಉತ್ತರ ಬಾಗಿಲಿನಿಂದ ಹೊರಗೆ ಹೋಗಬೇಕು. ತಾನು ಪ್ರವೇಶಿಸಿದ ಬಾಗಿಲಿನಿಂದ ಹಿಂದಿರುಗದೆ ಅದಕ್ಕೆ ಎದುರಾಗಿರುವ ಬಾಗಿಲಿಂದ ಹೊರಗೆ ಹೋಗಬೇಕು.
10 शासक तिनीहरूका बिचमा हुनुपर्छ । तिनीहरू भित्र जाँदा उनी पनि भित्र जानुपर्छ, र तिनीहरू बाहिर निस्कँदा, उनी पनि बाहिर निस्कनुपर्छ ।
೧೦ಜನರು ಪ್ರವೇಶಿಸುವಾಗ ಅರಸನು ಅವರ ಮಧ್ಯದಲ್ಲಿ ಒಳಗೆ ಪ್ರವೇಶಿಸಲಿ. ಅವರು ಹೊರಗೆ ಹೋಗುವಾಗ ಅವರೂ ಹೊರಗೆ ಹೋಗಲಿ.
11 चाडहरूमा साँढेको निम्ति एक एपा, र भेडोको निम्ति एक एपा, र थुमाहरूका तिनले दिने गरेजति अन्‍नबलि होस्, र हरेक एपाको निम्त एक हीन तेल होस् ।
೧೧ಅರಸನು ಉತ್ಸವಗಳಲ್ಲಿಯೂ, ಹಬ್ಬಗಳಲ್ಲಿಯೂ ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ, ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.
12 जब शासकले स्वइच्छा भेटी चढाउँछन्, चाहे त्यो परमप्रभुको निम्ति होमबलि होस् वा मेलबलि, पूर्वपट्टि फर्केको ढोका तिनको निम्ति खोलिनेछ । तिनले शबाथ दिनमा झैं होमबलि वा मेलबलि चढाउनुपर्छ । तब तिनी बाहिर जानुपर्छ, र तिनी बाहिर गएपछि, त्‍यो ढोका बन्द गरिनेछ ।
೧೨ಅರಸನು ಸ್ವಂತ ಇಚ್ಛೆಯಿಂದ ಕಾಣಿಕೆಯನ್ನಾಗಲಿ, ಸರ್ವಾಂಗಹೋಮವನ್ನಾಗಲಿ, ಸಮಾಧಾನ ಯಜ್ಞಗಳನ್ನಾಗಲಿ ಯೆಹೋವನಿಗೆ ಸಮರ್ಪಿಸುವಾಗ ಅವನಿಗಾಗಿ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ತೆರೆಯಬೇಕು. ಅವನು ಸಬ್ಬತ್ ದಿನದಲ್ಲಿ ಸಮರ್ಪಿಸುವಂತೆ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞಪಶುಗಳನ್ನೂ ಸಮರ್ಪಿಸಿ ಹೊರಡಲಿ. ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು.
13 यसका अतिरक्‍त, तिमीहरूले दैनिक रूपमा परमप्रभुलाई एक वर्षे निष्खोट भेडो होमबलिको रूपमा चढाउनु । यो तिमीहरूले हरेक बिहान गर्नुपर्छ ।
೧೩“ನೀನು ಪೂರ್ಣಾಂಗವಾದ ವರ್ಷದ ಕುರಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಪ್ರತಿ ದಿನ ಅರ್ಪಿಸಬೇಕು. ಪ್ರತಿ ದಿನ ಬೆಳಿಗ್ಗೆ ಅದನ್ನು ಅರ್ಪಿಸತಕ್ಕದ್ದು.
14 त्योसँगै तिमीहरूले हरेक बिहान अन्‍नबलि चढाउनु, एक एपाको छैटौं भाग र परमप्रभुको निम्ति चढाइने अन्‍नबलिको पिठोलाई भिजाउनको निम्ति एक हीन तेलको एक-तिहाई भाग चढाउने अनन्तको विधि होस् ।
೧೪ಅದರೊಂದಿಗೆ ಪ್ರತಿ ದಿನ ಬೆಳಗ್ಗೆ ಧಾನ್ಯ ನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ, ಅದನ್ನು ಕಲಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು. ಇವುಗಳನ್ನು ಪ್ರತಿನಿತ್ಯವೂ ಯೆಹೋವನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು. ಇದು ಶಾಶ್ವತ ನಿಯಮವಾಗಿದೆ.
15 तिनीहरूले थुमा, अन्‍नबलि र तेललाई हरेक बिहान तयार गर्नेछन् । यो सधैंको होमबलि हुनेछ ।
೧೫ಯಾಜಕರು ಕುರಿಯನ್ನೂ, ಧಾನ್ಯನೈವೇದ್ಯವನ್ನೂ, ಎಣ್ಣೆಯನ್ನೂ ನಿತ್ಯ ಸರ್ವಾಂಗಹೋಮವಾಗಿ ಪ್ರತಿ ದಿನ ಬೆಳಗ್ಗೆ ಸಮರ್ಪಿಸಬೇಕು.”
16 परमप्रभु परमेश्‍वर यस्तो भन्‍नुहुन्छ: शासकले आफ्ना कुनै पनि छोरोलाई बकस दिन्‍छन् भने त्यो तिनको उत्तराधिकार हुनेछ । त्यो तिनका छोराहरूका सम्पत्ति, अर्थात् उत्तराधिकार हुनेछ ।
೧೬ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಅರಸನು ತನ್ನ ಮಕ್ಕಳಲ್ಲಿ ಒಬ್ಬನಿಗೆ ದಾನ ಕೊಟ್ಟರೆ, ಅದು ತಂದೆಯ ಸ್ವಾಸ್ತ್ಯವಾದ ಕಾರಣ, ಮಕ್ಕಳಿಗೆ ಹಕ್ಕು ಬರುವುದು, ಅದು ಬಾಧ್ಯವಾಗಿ ಸಿಕ್ಕಿದ ಸ್ವಾಸ್ತ್ಯವೇ.
17 तर तिनले आफ्नो उत्तराधिकारबाट आफ्ना सेवकमध्ये एक जनालाई बकस दिन्‍छन् भने, स्वन्त्रताको वर्ष नभएसम्म त्यो त्यस सेवकको हुनेछ, र त्यसपछि त्‍यो उक्‍त शासकलाई फिर्ता हुनेछन् । तिनको उत्तराधिकार निश्‍चय पनि तिनका छोराहरूकै हुनेछ ।
೧೭ಆದರೆ ಅರಸನು ತನ್ನ ಭೂಮಿಯ ಒಂದು ಭಾಗವನ್ನು ತನ್ನ ಸೇವಕರಲ್ಲಿ ಒಬ್ಬನಿಗೆ ದಾನ ಮಾಡಿದರೆ, ಬಿಡುಗಡೆಯ ವರ್ಷದವರೆಗೆ ಅದು ಅವನ ಅಧೀನವಾಗಿರುವುದು; ಆ ಮೇಲೆ ಅದು ಪುನಃ ಅರಸನ ವಶವಾಗುವುದು; ಆದರೆ ಅರಸನು ತನ್ನ ಮಕ್ಕಳಿಗೆ ಕೊಟ್ಟ ಸ್ವತ್ತು ಅವರಿಗೇ ಸೇರುವುದು.
18 शासकले मानिसहरूका उत्तराधिकार कब्‍जा गरेर तिनीहरूलाई आफ्नो सम्पत्तिबाट अलग गर्नुहुँदैन। तिनले आफ्ना छोराहरूलाई आफ्नै सम्पत्तिबाट दिनुपर्छ ताकि मेरा मानिसहरू आफ्नो सम्पत्तिबाट तितर-बितर हुनेछैनन् ।’”
೧೮ಇದಲ್ಲದೆ ಅರಸನು ಪ್ರಜೆಗಳ ಪಿತ್ರಾರ್ಜಿತ ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು. ಸ್ವಂತ ಭೂಮಿಯನ್ನೇ ವಿಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ. ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳೆದುಕೊಂಡು ದಿಕ್ಕಾಪಾಲಾಗಿ ಹೋಗುವನು.
19 त्यसपछि ती मानिसले मलाई ढोकाबाट पुजारीहरूका पवित्र कोठाहरूमा लगे, जुन उत्तरतर्फ फर्केका थिए । पश्‍चिमतर्फ एउटा ठाउँ थियो ।
೧೯“ಬಳಿಕ ಆ ಪುರುಷನು ನನ್ನನ್ನು ಹೆಬ್ಬಾಗಿಲ ಪಕ್ಕದಲ್ಲಿನ ಪ್ರವೇಶದ ಮಾರ್ಗವಾಗಿ ಉತ್ತರಕ್ಕೆ ಅಭಿಮುಖವಾಗಿಯೂ, ಯಾಜಕರಿಗೆ ನೇಮಕವಾಗಿಯೂ ಇರುವ ಪರಿಶುದ್ಧವಾದ ಕೋಣೆಗಳಿಗೆ ಬರಮಾಡಿದನು. ಇಗೋ, ಅವುಗಳ ಹಿಂದೆ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.”
20 तिनले मलाई भने, “यो त्यही ठाउँ हो जहाँ पुजारीहरूले पापबलि र दोषबलिलाई उमाल्छन् र जहाँ तिनीहरूले अन्‍नबलिलाई पोल्छन् । तिनीहरूले ती बलिहरूलाई बाहिरी चोकमा लानुहुँदैन, किनकि त्‍यसो गरे मानिसहरू पवित्र हुनेछन् ।”
೨೦ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ, ಪ್ರಾಯಶ್ಚಿತ್ತಯಜ್ಞ ಬಲಿಯನ್ನೂ, ಬೇಯಿಸಿದ ಧಾನ್ಯನೈವೇದ್ಯವನ್ನು ಸುಡುವುದಕ್ಕೆ ಏರ್ಪಡಿಸಿರುವ ಪರಿಶುದ್ಧ ಸ್ಥಳವು ಇದೆ” ಎಂದು ಹೇಳಿದನು.
21 तब तिनले मलाई बाहिरी चोकमा ल्याए र तिनले मलाई त्यस चोकका चार कुनाबाट हिंड्न लगाए, र मैले चोकका हरेक कुनामा अर्को एउटा चोक देखें ।
೨೧ತರುವಾಯ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಬರಮಾಡಿ, ಅಲ್ಲಿನ ನಾಲ್ಕು ಮೂಲೆಗಳ ಮಾರ್ಗವಾಗಿ ಕರೆದುಕೊಂಡು ಹೋದನು. ಇಗೋ, ಅಂಗಳದ ಒಂದೊಂದು ಮೂಲೆಯಲ್ಲಿ ಒಂದೊಂದು ಒಳ ಅಂಗಳವು ಕಾಣಿಸಿತು.
22 बाहिरी चोकको चार कुनामा चारवटा स-साना, चालिस हात लामो र तिस हात चौडा चोकहरू थिए । चारै चोकका एउटै नाप थियो ।
೨೨ಹೌದು, ಅಂಗಳದ ನಾಲ್ಕು ಮೂಲೆಗಳಲ್ಲಿಯೂ ನಲ್ವತ್ತು ಮೊಳ ಉದ್ದದ, ಮೂವತ್ತು ಮೊಳ ಅಗಲದ ಪ್ರತ್ಯೇಕವಾದ ಅಂಗಳಗಳು ಇದ್ದವು; ಮೂಲೆಗಳಲ್ಲಿನ ಆ ನಾಲ್ಕು ಅಂಗಳಗಳು ಒಂದೇ ಅಳತೆಯಾಗಿದ್ದವು.
23 ती चारैको वरिपरि ढुङ्गाको एउटा लहर थियो, र ती ढुङ्गाको लहरमुनि चुलाहरू थिए ।
೨೩ಅವುಗಳೊಳಗೆ ಸುತ್ತಲು, ಅಂದರೆ ಆ ನಾಲ್ಕು ಅಂಗಳಗಳ ಸುತ್ತು ಮುತ್ತಲು ಕಲ್ಲಿನ ಸಾಲುಗಳು ಚಾಚಿಕೊಂಡಿತು. ಆ ಸಾಲುಗಳ ಕೆಳಗೆ ಒಲೆಗಳು ಸುತ್ತಲೂ ಇದ್ದವು.
24 ती मानिसले मलाई भने, “यी ठाउँहरूमा मन्दिरका सेवकहरूले मानिसहरूका बलिहरूलाई उमाल्नेछन् ।”
೨೪ಆಗ ಅವನು ನನಗೆ, “ಇವು ದೇವಾಲಯದ ಸೇವಕರು. ಯಜ್ಞಪಶುಗಳನ್ನು ತಂದ ಜನರಿಗೋಸ್ಕರ ಅವುಗಳ ಮಾಂಸವನ್ನು ಬೇಯಿಸಿದ ಪಾಕಶಾಲೆಗಳು” ಎಂದು ಹೇಳಿದನು.

< इजकिएल 46 >