< न्यायकर्ताहरू 1 >

1 यहोशूको मृत्युपछि, इस्राएलका मानिसहरूले परमप्रभुलाई यसो भनेर सोधे, “हाम्रा निम्ति कनानीहरूका विरुद्धमा युद्ध लड्‍नलाई तिनीहरूलाई पहिला कसले आक्रमण गर्नुपर्छ?”
ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವನನ್ನು ಕೇಳಲು
2 परमप्रभुले भन्‍नुभयो, “यहूदाले आक्रमण गर्नेछ । हेर, मैले तिनीहरूलाई यस देशमाथि अधिकार दिएको छु ।”
ಆತನು ಅವರಿಗೆ “ಯೆಹೂದ್ಯರು ಹೋಗಲಿ; ಇಗೋ, ದೇಶವನ್ನು ಅವರಿಗೆ ಒಪ್ಪಿಸಿದ್ದೇನೆ” ಅಂದನು.
3 यहूदाका मानिसहरूले आफ्ना दाजुभाइ शिमियोनीहरूलाई यसो भने, “हामीलाई दिइएको इलाकामा हामीसँग आओ, यसरी कनानीहरूका विरुद्ध हामीले एकसाथ युद्ध लड्‍न सक्‍छौं । त्‍यसरी नै हामी पनि तिमीहरूलाई दिइएको इलाकामा तिमीहरूसँग जानेछौं ।” यसैले शिमियोनी कुल तिनीहरूसँग गए ।
ಆಗ ಯೆಹೂದ್ಯರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ, “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೋಸ್ಕರ ನೀವು ನಮ್ಮ ಸಂಗಡ ನಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬನ್ನಿರಿ; ಅನಂತರ ನಾವೂ ನಿಮ್ಮ ಸಂಗಡ ನಿಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬರುವೆವು” ಎಂದು ಹೇಳಿದರು.
4 यहूदाका मानिसहरूले आक्रमण गरे, र परमप्रभुले तिनीहरूलाई कनानीहरू र परिज्‍जीहरूमाथि विजय दिनुभयो । तिनीहरूले बेजेकमा तिनीहरूका दश हजार जनालाई मारे ।
ಅವರು ಒಪ್ಪಿ ಯೆಹೂದ್ಯರ ಜೊತೆಯಲ್ಲಿ ಯುದ್ಧಕ್ಕೆ ಹೋದರು. ಆಗ ಯೆಹೋವನು ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಅವರ ಕೈಗೆ ಒಪ್ಪಿಸಿದ್ದರಿಂದ ಅವರು ಅವರಲ್ಲಿ ಹತ್ತು ಸಾವಿರ ಮಂದಿಯನ್ನು ಬೆಜೆಕ್ ಎಂಬ ಸ್ಥಳದಲ್ಲಿ ಹತ್ಯೆಮಾಡಿದರು.
5 तिनीहरूले बेजेकमा अदोनी-बेजेकलाई भेट्टाए, र उनको विरुद्ध तिनीहरू लडे, अनि कनानीहरू र परिज्‍जीहरूलाई परास्त गरे ।
ಅವರು ಅಲ್ಲಿ ಅದೋನೀ ಬೆಜೆಕನನ್ನು ಸಂಧಿಸಿ, ಅವನೊಡನೆ ಯುದ್ಧಮಾಡಿ ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಸೋಲಿಸಿದರು.
6 तर अदोनी-बेजेक भागे, र तिनीहरूले उनलाई लखेटे र समाए, र तिनीहरूले उनका हात र खुट्टाका बुढी औंला काटिदिए ।
ಅದೋನೀಬೆಜೆಕನು ಓಡಿಹೋಗಲು ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.
7 अदोनी-बेजेकले भने, “हात र खुट्टाका बुढी औंला काटिएका सत्तरी जना राजाले मेरो टेबिलको मुनिबाट आफ्‍नो निम्ति भोजन बाटुल्‍थे । मैले जस्तो गरेको थिएँ, परमेश्‍वरले मलाई त्यस्तै गर्नुभएको छ ।” तिनीहरूले उनलाई यरूशलेममा ल्याए, र उनी त्यहीं मरे ।
ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.
8 यहूदाका मानिसहरू यरूशलेम सहरको विरुद्धमा युद्ध गरे र त्यसलाई कब्जामा लिए । तिनीहरूले त्यो सहरलाई तरवारको धारले आक्रमण गरे र त्यसमा आगो लगाइदिए ।
ಯೆಹೂದ್ಯರು ಯೆರೂಸಲೇಮಿನವರೊಡನೆ ಯುದ್ಧಮಾಡಿ, ಅಲ್ಲಿನ ಜನರನ್ನು ಹಿಡಿದು ಕತ್ತಿಯಿಂದ ಸಂಹರಿಸಿ ಪಟ್ಟಣಕ್ಕೆ ಬೆಂಕಿಯಿಟ್ಟರು.
9 त्यसपछि, यहूदाका मानिसहरू पहाडी देश, नेगेव र पश्‍चिमी पहाडका फेदीहरूमा बसोबास गर्ने कनानीहरूकहाँ युद्ध गर्न गए ।
ತರುವಾಯ ಯೆಹೂದ್ಯರು ಹೋಗಿ ಪರ್ವತಪ್ರದೇಶ, ದಕ್ಷಿಣಸೀಮೆ ಹಾಗೂ ಕಣಿವೆ ಪ್ರದೇಶಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.
10 यहूदा हेब्रोनमा बस्‍ने (हेब्रोनको नाउँ पहिला किर्यत-अर्बा थियो) कनानीहरूतर्फ अगाडि बढे, र तिनीहरूले शेशै, अहीमन, र तल्मैलाई परास्त गरे ।
೧೦ಅವರು ಮೊದಲು ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು, ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬುವರನ್ನು ಸೋಲಿಸಿದರು.
11 त्यहाँबाट यहूदाका मानिसहरू दबीरका बासिन्दाहरूतर्फ अगि बढे (पहिला दबीरको नाउँ किर्यत-सेपेर थियो) ।
೧೧ಅಲ್ಲಿಂದ ದೆಬೀರಿನವರಿಗೆ ವಿರೋಧವಾಗಿ ಹೋದರು; ದೆಬೀರಕ್ಕೆ ಮೊದಲು ಕಿರ್ಯತಸೇಫೆರ್ ಎಂಬ ಹೆಸರಿತ್ತು.
12 कालेबले भने, “जसले किर्यत-सेपेरलाई आक्रमण गर्छ र त्यसलाई लिन्‍छ, त्यसको पत्‍नी हुनलाई मेरी छोरी अक्सालाई म दिनेछु ।”
೧೨ಕಿರ್ಯತಸೇಫೆರ ಎಂಬ ಪಟ್ಟಣವನ್ನು ವಶಪಡಿಸಿಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಡುತ್ತೇನೆಂದು ಕಾಲೇಬನು ಹೇಳಿದನು.
13 कालेबका भाइ कनजका छोरा, ओत्‍निएलले दबीरमाथि कब्जा गरे, यसैले कालेबले आफ्नी छोरी अक्सा तिनकी पत्‍नी हुनलाई दिए ।
೧೩ಅವನ ತಮ್ಮನೂ, ಕೆನಜನ ಮಗನೂ ಆದ ಒತ್ನೀಯೇಲನು ಕಿರ್ಯತ್ ಸೇಫೆರನ್ನು ವಶಪಡಿಸಿಕೊಂಡನು. ಆಗ ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿಕೊಟ್ಟನು.
14 चाँडै नै अक्सा ओत्‍निएलकहाँ आइन्, र आफ्ना बुबासँग तिनको निम्ति एउटा जमिन मागिदिनलाई बिन्ती गरिन् । तिनी आफ्नो गधाबाट तल झर्दै गर्दा, कालेबले तिनलाई सोधे, “तिम्रो निम्ति म के गर्न सक्‍छु?”
೧೪ಆಕೆಯು ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಹೊಲವನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯಿಂದ ಇಳಿದಳು. ಕಾಲೇಬನು, “ನಿನಗೇನು ಬೇಕು?” ಎಂದು ಆಕೆಯನ್ನು ಕೇಳಲು
15 तिनले उनलाई भनिन्, “मलाई एउटा आशिष् दिनुहोस् । तपाईंले मलाई नेगेवको भूमि दिनुभएको छ, मलाई पानीका मूलहरू पनि दिनुहोस् ।” यसैले कालेबले तिनलाई माथिल्लो र तल्लो पानीका मूलहरू दिए ।
೧೫ಆಕೆಯು, “ನನಗೊಂದು ದಾನಕೊಡಬೇಕು; ನೀನು ನನ್ನನ್ನು ದಕ್ಷಿಣ ಪ್ರಾಂತ್ಯಕ್ಕೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಅಂದಳು. ಆಗ ಅವನು ಆಕೆಗೆ ಮೇಲಣ ಬುಗ್ಗೆ ಮತ್ತು ಕೆಳಗಣ ಪ್ರದೇಶದ ಬುಗ್ಗೆಗಳನ್ನು ಕೊಟ್ಟನು.
16 मोशाका ससुराका वंश, केनीहरू खजूरका रूखहरूको सहरबाट आरादको नजिक यहूदाको उजाड-स्‍थानमा त्यहाँका मानिसहरूसँग बस्‍न गए, जुन नेगेवमा पर्छ ।
೧೬ಮೋಶೆಯ ಮಾವನಾದ ಕೇನ್ಯನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅಡವಿಗೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.
17 यहूदाका मानिसहरू आफ्ना दाजुभाइ शिमियोनका मानिसहरूसँग गए र तिनीहरूले सपतमा बसोबास गर्ने कनानीहरूलाई आक्रमण गरे र त्यसलाई पूर्ण रूपमा नाश गरे । त्यस सहरको नाउँ होर्मा थियो ।
೧೭ತರುವಾಯ ಯೆಹೂದ್ಯರು ತಮ್ಮ ಬಂಧುಗಳಾದ ಸಿಮೆಯೋನ್ಯರ ಸಂಗಡ ಹೋಗಿ ಚೆಫತ್ ಎಂಬ ಪಟ್ಟಣದಲ್ಲಿದ್ದ ಕಾನಾನ್ಯರನ್ನು ಸೋಲಿಸಿ, ಆ ಪಟ್ಟಣವನ್ನು ಹಾಳುಮಾಡಿ ಅದನ್ನು ಹೊರ್ಮಾ ಎಂದು ಕರೆದರು.
18 यहूदाका मानिसहरूले गाजा र त्यसको आसपासको क्षेत्र, अश्कलोन र त्यसको आसपासको क्षेत्र, अनि एक्रोन र त्यसको आसपासको क्षेत्र पनि कब्जा गरे ।
೧೮ಅನಂತರ ಅವರು ಗಾಜಾ, ಅಷ್ಕೆಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರೆಗಳನ್ನೂ ಸ್ವಾಧೀನಮಾಡಿಕೊಂಡರು.
19 परमप्रभु यहूदाका मानिसहरूसँग हुनुहुन्थ्यो र तिनीहरूले पहाडी देशमाथि अधिकार गरे, तर तिनीहरूले मैदानका बासिन्दाहरूलाई बाहिर निकाल्न सकेनन्, किनभने तिनीहरूसँग फलामका रथहरू थिए ।
೧೯ಯೆಹೋವನು ಯೆಹೂದ್ಯರ ಸಂಗಡ ಇದ್ದುದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದುದರಿಂದ ಅವರನ್ನು ಹೊರಡಿಸುವುದಕ್ಕೆ ಆಗಲಿಲ್ಲ.
20 कालेबलाई हेब्रोन दिइयो (मोशाले भनेझैं), र तिनले त्यहाँबाट अनाकका तिन जना छोरालाई बाहिर निकाले ।
೨೦ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು. ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.
21 तर बेन्यामीनका मानिसहरूले यरूशलेममा बसोबास गर्ने यबूसीहरूलाई बाहिर निकालेनन् । यसैले यरूशलेममा आजको दिनसम्मै यबूसीहरू बेन्यामीनका मानिसहरूसँग बसोबास गर्दै आएका छन् ।
೨೧ಯೆರೂಸಲೇಮಿನಲ್ಲಿದ್ದ ಯೆಬೂಸಿಯರನ್ನು ಬೆನ್ಯಾಮೀನ್ಯರು ಹೊರಡಿಸಿಬಿಡಲಿಲ್ಲ. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇಮಿನಲ್ಲಿಯೇ ವಾಸವಾಗಿದ್ದಾರೆ.
22 योसेफका घरानाले बेथेललाई आक्रमण गर्नको निम्ति तयारी गरे, र परमप्रभु तिनीहरूसँग हुनुहुन्थ्यो ।
೨೨ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು.
23 तिनीहरूले बेथेलमा जासुसी गर्न मानिसहरू पठाए (त्यो सहरलाई पहिला लूज भनिन्थ्यो) ।
೨೩ಅವರು ಲೂಜ್ ಎಂದು ಕರೆಯುತ್ತಿದ್ದ ಬೇತೇಲ್ ಊರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದರು.
24 ती जासुसहरूले सहरबाट एक जना मानिस बाहिर निस्कँदै गरेको देखे, र तिनीहरूले त्यसलाई भने, “सहरभित्र कसरी प्रवेश गर्ने भनेर कृपया हामीलाई देखाउनुहोस्, र तपाईंप्रति हामी दयालु हुनेछौं ।”
೨೪ಅವರು ಆ ಊರೊಳಗಿನಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯವಿಟ್ಟು ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸು; ನಾವೂ ನಿನಗೆ ದಯೆತೋರಿಸುವೆವು” ಎಂದು ಹೇಳಲು ಅವನು ಅವರಿಗೆ ಆ ದಾರಿಯನ್ನು ತೋರಿಸಿದನು.
25 उसले तिनीहरूलाई त्यो सहरभित्र जाने बाटो देखायो, र यसैले तिनीहरूले त्यो सहरलाई तरवारको धारले आक्रमण गरे, तर तिनीहरूले त्यस मानिस र उसका जम्मै परिवारलाई जान दिए ।
೨೫ಆಗ ಅವರು ಆ ಪಟ್ಟಣವನ್ನು ಕತ್ತಿಯಿಂದ ಸಂಹರಿಸಿದರು. ಆದರೆ ಆ ಮನುಷ್ಯನನ್ನೂ ಅವನ ಕುಟುಂಬವನ್ನೂ ಏನು ಮಾಡದೆ ಕಳುಹಿಸಿಬಿಟ್ಟರು.
26 तब त्यो मानिस हित्तीहरूको देशमा गयो र एउटा सहर निर्माण गर्‍यो अनि त्यसलाई लूज नाउँ दियो, र आजसम्मै त्‍यसको नाउँ हो ।
೨೬ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ಲೂಜ್ ಎಂದು ಹೆಸರಿಟ್ಟನು; ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ.
27 मनश्शेका मानिसहरूले बेथ-शान, तानाक, डोर, यिबलाम, र मगीद्दो र ती सबैका गाउँहरूमा बसोबास गर्नेहरूलाई बाहिर निकालेनन्, किनभने कनानीहरूले ती ठाउँहरूमा बस्‍ने पक्‍का गरेका थिए ।
೨೭ಮನಸ್ಸೆಯವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ವಾಸವಾಗಿದ್ದವರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ದೃಢಮಾಡಿಕೊಂಡರು.
28 जब इस्राएल शक्तिशाली भ ए, तिनीहरूले कनानीहरूलाई आफ्नो निम्ति कडा परिश्रमले सेवा गर्न लगाए, तर तिनीहरूलाई कहिल्यै पनि पूर्ण रूपमा बाहिर निकालेनन् ।
೨೮ಇಸ್ರಾಯೇಲ್ಯರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಓಡಿಸಲಿಲ್ಲ.
29 एफ्राइमले गेजेरमा बसोबास गर्ने कनानीहरूलाई बाहिर निकालेनन्, यसैले कनानीहरू गेजेरमा तिनीहरूका माझमा नै बसोबास गरे ।
೨೯ಎಫ್ರಾಯೀಮ್ಯರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಆದ್ದರಿಂದ ಕಾನಾನ್ಯರು ಎಫ್ರಾಯೀಮ್ಯರ ಮಧ್ಯದಲ್ಲೇ ವಾಸಿಸುವವರಾದರು.
30 जबूलूनले कित्रोन वा नहलोलमा बसोबास गर्ने मानिसहरूलाई बाहिर निकालेनन्, र यसैले कनानीहरू तिनीहरूका माझमा नै बसोबास गरे, तर जबूलूनले कनानीहरूलाई कडा परिश्रमसँग तिनीहरूहरूको सेवा गर्न लगाए ।
೩೦ಜೆಬುಲೂನ್ಯರು ಕಿತ್ರೋನ್, ನಹಲೋಲ್ ಎಂಬ ಪಟ್ಟಣಗಳ ನಿವಾಸಿಗಳನ್ನು ಓಡಿಸಲಿಲ್ಲ. ಇದರಿಂದ ಕಾನಾನ್ಯರು ಅವರ ಮಧ್ಯದಲ್ಲೇ ವಾಸಮಾಡುವವರಾದರು. ಆದರೆ ಜೆಬುಲೂನ್ಯರು ಕಾನಾನ್ಯರನ್ನು ಗುಲಾಮರನ್ನಾಗಿ ಮಾಡಿಕೊಂಡರು.
31 आशेरले अक्‍को, सीदोन, अहलाब, अक्जीब, हेलवा, अपेक, र रहोबमा बसोबास गर्ने मानिसहरूलाई बाहिर निकालेनन् ।
೩೧ಆಶೇರ್ಯರು ಅಕ್ಕೋ, ಚೀದೋನ್, ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ಪಟ್ಟಣಗಳಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿಬಿಡಲಿಲ್ಲ;
32 यसैकारण आशेरको कुल कनानीहरूसँग (जो त्यस देशमा बसोबास गर्थे) बसोबास गरे, किनभने तिनीहरूले उनीहरूलाई बाहिर निकालेनन् ।
೩೨ಹೀಗಾಗಿ ಆಶೇರ್ಯರು ಕಾನಾನ್ಯರನ ಮಧ್ಯದಲ್ಲೇ ವಾಸಮಾಡಿದರು.
33 नप्‍तालीका कुलले बेथ-शेमेश र बेथ-अनातमा बसोबास गर्नेहरूलाई बाहिर निकालेनन् । यसैले नप्‍तालीको कुल कनानीहरूका (ती मानिसहरू जो त्यस देशमा बसोबास गर्थे) बिचमा बसोबास गरे । तथापि बेथ-शेमेश र बेथ-अनातका बासिन्दाहरूलाई नप्‍तलीको निम्ति कडा परिश्रम गर्न लगाइयो ।
೩೩ನಫ್ತಾಲಿ ಕುಲದವರು ಬೇತ್ ಷೆಮೆಷ್, ಬೇತನಾತ್ ಎಂಬ ಊರುಗಳಲ್ಲಿ ಸ್ವಾಧೀನ ಮಾಡಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು ಮತ್ತು ಬೇತ್ ಷೆಮೆಷ್, ಬೇತನಾತ್ ಊರುಗಳ ಜನರು ಅವರಿಗೆ ಗುಲಾಮರಾದರು.
34 एमोरीहरूले दानका कुललाई पहाडी देशमा बसोबास गर्न बाध्‍ये पारे, र तिनीहरूलाई तल मैदान आउन दिएनन् ।
೩೪ಇದಲ್ಲದೆ ಅಮೋರಿಯರು ದಾನ್ ಕುಲದವರನ್ನು ತಗ್ಗಿನ ಪ್ರದೇಶಕ್ಕೆ ಇಳಿಯಗೊಡದೆ ಹಿಂದಟ್ಟಿ ಬೆಟ್ಟಗಳಿಗೆ ಓಡಿಸಿಬಿಟ್ಟರು.
35 यसैले एमोरीहरू हेरेस पर्वत, अय्यालोन, र शाल्बीममा बसोबास गरे, तर योसेफका घरानाको सैन्य शक्तिले तिनीहरूलाई परास्त गर्‍यो, र तिनीहरूलाई कडा परिश्रमले उनीहरूको सेवा गर्न लगाइयो ।
೩೫ಹೀಗೆ ಅಮೋರಿಯರು ಅಯ್ಯಾಲೋನ್, ಶಾಲ್ಬೀಮ್ ಎಂಬ ಊರುಗಳ ಬಳಿ ಇದ್ದ ಹರ್ ಹೆರೆಸ್ ಎಂಬ ಬೆಟ್ಟದ ಹತ್ತಿರ ವಾಸಿಸಲು ನಿರ್ಧಾರಮಾಡಿಕೊಂಡರು. ಆದರೆ ಯೋಸೇಫನ ಕುಲದವರು ಅವರನ್ನು ಸೋಲಿಸಿ ಗುಲಾಮರನ್ನಾಗಿ ಮಾಡಿಕೊಂಡರು.
36 एमोरीहरूको सिमाना अक्रब्बीमको उकालोदेखि पहाडी देश सेलादेखि माथिसम्म पर्थ्यो ।
೩೬ಅಮೋರಿಯರ ಮೇರೆಯು ಅಕ್ರಬ್ಬೀಮ್ ಮೇಲುದಿಣ್ಣೆಯಿಂದ ಸೇಲಾ ಊರಿನಿಂದ ಮೇಲಕ್ಕೆ ವಿಸ್ತರಿಸಿಕೊಂಡಿದೆ.

< न्यायकर्ताहरू 1 >