Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kanada Open Contemporary Bible, 2-Samuel Chapter 23 https://www.AionianBible.org/Bibles/Kannada---Open-Contemporary/2-Samuel/23 1) ದಾವೀದನ ಕಡೆಯ ಮಾತುಗಳು: “ಇಷಯನ ಮಗ ದಾವೀದನ ನುಡಿಗಳಿವು: ಉನ್ನತವಾಗಿ ಸಾಗಿದ ಪುರುಷನು ಯಾಕೋಬನ ದೇವರಿಂದ ಅಭಿಷಿಕ್ತನಾದವನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನೆಂದರೆ: 2) “ಯೆಹೋವ ದೇವರ ಆತ್ಮರು ನನ್ನ ಮೂಲಕ ಮಾತನಾಡಿದರು; ಅವರ ನುಡಿ ನನ್ನ ಬಾಯಲ್ಲಿ ಇತ್ತು. 3) ಇಸ್ರಾಯೇಲಿನ ದೇವರೂ, ಇಸ್ರಾಯೇಲಿನ ಬಂಡೆಯಾದವರೂ ನನಗೆ ಮಾತನಾಡಿದ್ದು: ‘ಮನುಷ್ಯರ ಮೇಲೆ ನೀತಿಯಿಂದ ಆಳುವವನು, ದೇವರ ಭಯದಿಂದ ಆಳುವವನು. 4) ಮೋಡವಿಲ್ಲದ ಮುಂಜಾನೆ ಸೂರ್ಯೋದಯದ ಸಮಯದಲ್ಲಿಯ ಉದಯದ ಬೆಳಕಿನಂತಿರುವನು. ಭೂಮಿಯಿಂದ ಹುಲ್ಲು ಮೊಳೆಯಿಸುವ ಮಳೆಯ ನಂತರದ ಪ್ರಕಾಶದಂತಿರುವನು.’ 5) “ನನ್ನ ಮನೆ ದೇವರೊಂದಿಗೆ ಸರಿಯಾಗಿರದಿದ್ದರೆ, ನಿಶ್ಚಯವಾಗಿಯೂ ಅವರು ನನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಿರಲಿಲ್ಲ, ಪ್ರತಿಯೊಂದು ವಿಭಾಗದಲ್ಲಿಯೂ ವ್ಯವಸ್ಥೆಗೊಳಿಸಲಾಗಿದೆ ಮತ್ತು ಭದ್ರಪಡಿಸಲಾಗಿದೆ. ದೇವರು ನಿಶ್ಚಯವಾಗಿಯೂ ನನ್ನ ರಕ್ಷಣೆಯನ್ನು ಪೂರ್ತಿಗೊಳಿಸುವುದಿಲ್ಲ. ದೇವರು ನನ್ನ ಎಲ್ಲಾ ಅಪೇಕ್ಷೆಗಳನ್ನು ಪೂರೈಸುವುದಿಲ್ಲ. 6) ಆದರೆ ದುಷ್ಟಜನರೆಲ್ಲರು ಕೈಗಳಿಂದ ಕೂಡಿಸದೆ, ಎಸೆದುಬಿಡುವ ಮುಳ್ಳಿನಂತೆ ಇದ್ದಾರೆ. 7) ಮುಳ್ಳುಗಳನ್ನು ಮುಟ್ಟುವವರು ಕಬ್ಬಿಣದ ಆಯುಧ ಉಪಯೋಗಿಸುವರು, ಇಲ್ಲವೆ ಈಟಿಯ ಮೊನೆಯನ್ನು ಉಪಯೋಗಿಸುವರು. ಅವು ಬೀಳುವ ಸ್ಥಳದಲ್ಲಿ ಸುಟ್ಟುಹೋಗುವುವು.” 8) ದಾವೀದನ ಪರಾಕ್ರಮಶಾಲಿಗಳ ಹೆಸರುಗಳು ಇವೇ: ಮೂರು ಜನ ಮುಖ್ಯಸ್ಥರಲ್ಲಿ ಒಬ್ಬನು ತಹ್ಕೆಮೋನ್ಯನಾದ ಯೋಷೆಬ್ ಬಷ್ಷೆಬೆತ ಎಂಬವನು; ಇವನು ತನ್ನ ಈಟಿಯಿಂದ ಎಂಟುನೂರು ಮಂದಿಗೆ ವಿರೋಧವಾಗಿ ಹೋರಾಡಿ ಅವರನ್ನು ಒಂದೇ ಕಾಳಗದಲ್ಲಿ ಕೊಂದುಹಾಕಿದನು. 9) ಇವನ ತರುವಾಯ ಅಹೋಹ್ಯನಾಗಿರುವ ದೋದೋ ಎಂಬವನ ಮಗನಾಗಿರುವ ಎಲಿಯಾಜರನು; ಇವನು ಇಸ್ರಾಯೇಲ್ ಜನರು ಓಡಿ ಹೋದ ತರುವಾಯ ಯುದ್ಧಕ್ಕೆ ಕೂಡಿಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು. 10) ಎಲಿಯಾಜರನು ಎದ್ದು ಖಡ್ಗ ಹಿಡಿದ ತನ್ನ ಕೈ ದಣಿದು ಮರಗಟ್ಟಿ ಹೋಗುವವರೆಗೂ ಫಿಲಿಷ್ಟಿಯರನ್ನು ಸಂಹರಿಸುತ್ತಿದ್ದನು. ಆ ದಿನ ಯೆಹೋವ ದೇವರು ದೊಡ್ಡ ರಕ್ಷಣೆಯನ್ನು ಉಂಟುಮಾಡಿದರು. ಸೈನಿಕರು ಸುಲಿದುಕೊಳ್ಳುವುದಕ್ಕೆ ಮಾತ್ರ ಅವನ ಹಿಂದೆ ಹಿಂದಿರುಗಿದರು. 11) ಇವನ ತರುವಾಯ ಹರಾರ್ಯನಾದ ಆಗೇಯನ ಮಗನಾದ ಶಮ್ಮನು; ಅಲಸಂದಿಯಿಂದ ತುಂಬಿರುವ ಹೊಲದಲ್ಲಿ ಫಿಲಿಷ್ಟಿಯರು ದಂಡಾಗಿ ಕೂಡಿಬಂದಾಗ, ಇಸ್ರಾಯೇಲ್ ಸೈನ್ಯದವರು ಫಿಲಿಷ್ಟಿಯರ ಎದುರಿನಿಂದ ಓಡಿಹೋದರು. 12) ಆದರೆ ಅವನು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದುಹಾಕಿ ಹೊಲವನ್ನು ಕಾಪಾಡಿದನು, ಹೀಗೆ ಯೆಹೋವ ದೇವರು ಮಹಾಜಯವನ್ನು ಉಂಟುಮಾಡಿದರು. 13) ಮೂವತ್ತು ಮಂದಿ ಪರಾಕ್ರಮಶಾಲಿಗಳ ಮುಖ್ಯಸ್ಥರಲ್ಲಿ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿತ್ತು. 14) ದಾವೀದನು ಕೋಟೆ ಸ್ಥಳದಲ್ಲಿ ಇದ್ದನು, ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು. 15) ಆಗ ದಾವೀದನು, “ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವವನ್ಯಾರು,” ಎಂದು ಬಹು ಆಶೆಯಿಂದ ಹೇಳಿದನು. 16) ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತೆಗೆದುಕೊಂಡು ಬಂದರು. ಆದರೆ ಅದನ್ನು ಅವನು ಕುಡಿಯದೇ ಯೆಹೋವ ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು. 17) ಅವನು, “ಯೆಹೋವ ದೇವರೇ, ನಾನು ಇಂಥಾ ಕಾರ್ಯವನ್ನು ಎಂದಿಗೂ ಮಾಡಲು ಸಾಧ್ಯವಿಲ್ಲ. ಇದು ತಮ್ಮ ಪ್ರಾಣದಾಶೆ ತೊರೆದ ಮನುಷ್ಯರ ರಕ್ತವಲ್ಲವೇ?” ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇಂಥಾ ಮಹಾಕಾರ್ಯಗಳನ್ನು ಈ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು. 18) ಯೋವಾಬನ ಸಹೋದರ ಚೆರೂಯಳ ಮಗ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು. 19) ಈ ಮೂವರಲ್ಲಿ ಅವನು ಇಬ್ಬರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು, ಆದ್ದರಿಂದ ಅವನು ಅವರಲ್ಲಿ ಪ್ರಧಾನನಾದನು. ಆದರೂ ಆ ಮೊದಲಿನ ಮೂರು ಜನರಿಗೆ ಅವನು ಸಮಾನನಾಗಿರಲಿಲ್ಲ. 20) ಕಬ್ಜಯೇಲನ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದಾವನ ಮಗನೂ ಆದ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದನು. ಅವನು ಬಲಶಾಲಿಯಾದ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು. 21) ಅವನು ಬಲಿಷ್ಠನಾದ ಒಬ್ಬ ಈಜಿಪ್ಟಿನವನನ್ನು ಹೊಡೆದುಬಿಟ್ಟನು. ಆ ಈಜಿಪ್ಟಿನವನ ಕೈಯಲ್ಲಿ ದಪ್ಪವಾದ ಒಂದು ಈಟಿ ಇದ್ದರೂ, ತಾನು ಒಂದು ಕೋಲು ಹಿಡಿದುಕೊಂಡು ಅವನ ಬಳಿಗೆ ಹೋಗಿ ಈಜಿಪ್ಟಿನವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು, ಅವನ ಈಟಿಯಿಂದಲೇ ಅವನನ್ನು ಕೊಂದುಹಾಕಿದನು. 22) ಇವುಗಳನ್ನು ಯೆಹೋಯಾದಾವನ ಮಗ ಬೆನಾಯನು ಮಾಡಿದ್ದರಿಂದ, ಮೂರು ಮಂದಿ ಪರಾಕ್ರಮಶಾಲಿಗಳಂತೆಯೇ ಹೆಸರುಗೊಂಡನು. 23) ಇವನು ಮೂವತ್ತು ಜನರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು. ಆದರೆ ಆ ಮೊದಲಿನ ಮೂರು ಮಂದಿಯಲ್ಲಿ ಅವನನ್ನು ಸೇರಿಸಲಾಗಲಿಲ್ಲ. ದಾವೀದನು ಅವನನ್ನು ತನ್ನ ಮೈಗಾವಲಿನವರ ಮೇಲೆ ಯಜಮಾನನನ್ನಾಗಿ ಇಟ್ಟನು. 24) ಈ ಮೂವತ್ತು ಮಂದಿ ಯಾರೆಂದರೆ: ಯೋವಾಬನ ಸಹೋದರನಾದ ಅಸಾಯೇಲನು, ಬೇತ್ಲೆಹೇಮ್ ಊರಿನ ದೋದೋವಿನ ಮಗ ಎಲ್ಹನಾನನು; 25) ಹರೋದಿನವನಾದ ಶಮ್ಮನು; ಹರೋದಿನವನಾದ ಎಲೀಕನು; 26) ಪೆಲೆಟಿನವನಾದ ಹೆಲೆಚನು; ತೆಕೋವದ ಇಕ್ಕೇಷನ ಮಗನಾದ ಈರನು; 27) ಅನಾತೋತಿನವನಾದ ಅಬೀಯೆಜೆರನು; ಹುಷಾ ಊರಿನವನಾದ ಮೆಬುನೈ, 28) ಅಹೋಹ್ಯನಾದ ಚಲ್ಮೋನನು; ನೆಟೋಫದವನಾದ ಮಹರೈ; 29) ನೆಟೋಫದವನಾದ ಬಾಣನ ಮಗ ಹೆಲೇಬ್, ಬೆನ್ಯಾಮೀನ್ಯರಿಗೆ ಸೇರಿದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಇತ್ತೈ; 30) ಪಿರಾತೋನ್ಯನಾದ ಬೆನಾಯನು; ಹೊಳೆಗಳುಳ್ಳ ಗಾಷ್ ಊರಿನವನಾದ ಹಿದ್ದೈ; 31) ಅರಾಬಾ ತಗ್ಗಿನವನಾದ ಅಬೀ ಅಲ್ಬೋನನು; ಬಹರೂಮ್ಯನಾದ ಅಜ್ಮಾವೆತನು; 32) ಶಾಲ್ಬೋನ್ಯನಾದ ಎಲೆಯಖ್ಬಾನು; ಯಾಷೇನನ ಪುತ್ರರಲ್ಲಿ ಒಬ್ಬನು ಯೋನಾತಾನನು; 33) ಹರಾರ್ಯನಾದ ಶಮ್ಮನು; ಹರಾರ್ಯನಾದ ಶಾರಾರನ ಮಗ ಅಹೀಯಾಮ್; 34) ಮಾಕಾ ಊರಿನ ಅಹಸ್ಬೈ ಎಂಬುವನ ಮಗನಾದ ಎಲೀಫೆಲೆಟನು; ಗಿಲೋವಿನ ಅಹೀತೋಫೆಲ್ ಎಂಬವನ ಮಗ ಎಲೀಯಾಮ್; 35) ಕರ್ಮೇಲ್ಯನಾದ ಹೆಚ್ರೋ; ಅರ್ಬಿಯನಾದ ಪಾರೈ; 36) ಹಗ್ರೀಯನ ಮಗನಾದ ಚೋಬ ಊರಿನವನಾದ ನಾತಾನನ ಮಗ ಇಗಾಲನು, ಗಾದ್ಯನಾದ ಬಾನೀ. 37) ಅಮ್ಮೋನಿಯನಾದ ಚೆಲೆಕನು; ಚೆರೂಯಳ ಮಗನಾದ ಯೋವಾಬನ ಆಯುಧವಾಹಕನು ಆಗಿದ್ದ ಬೇರೋತ್ಯನಾದ ನಹರೈ; 38) ಯೆತೆರಿಯನಾದ ಈರನು; ಯೆತೆರಿಯನಾದ ಗಾರೇಬನು; 39) ಹಿತ್ತಿಯನಾದ ಊರೀಯನು. ಹೀಗೆ ಇವರು ಸೇರಿ ಒಟ್ಟು ಮೂವತ್ತೇಳು ಮಂದಿ ರಣಧೀರರಿದ್ದರು. Additional comments?
Refresh Captcha
The world's first Holy Bible un-translation!