< اَلْمُلُوكِ ٱلْأَوَّلُ 19 >
وَأَخْبَرَ أَخْآبُ إِيزَابَلَ بِكُلِّ مَا عَمِلَ إِيلِيَّا، وَكَيْفَ أَنَّهُ قَتَلَ جَمِيعَ ٱلْأَنْبِيَاءِ بِٱلسَّيْفِ. | ١ 1 |
೧ಎಲೀಯನು ಬಾಳನ ಎಲ್ಲಾ ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದನ್ನೂ ಮತ್ತು ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದನು.
فَأَرْسَلَتْ إِيزَابَلُ رَسُولًا إِلَى إِيلِيَّا تَقُولُ: «هَكَذَا تَفْعَلُ ٱلْآلِهَةُ وَهَكَذَا تَزِيدُ، إِنْ لَمْ أَجْعَلْ نَفْسَكَ كَنَفْسِ وَاحِدٍ مِنْهُمْ فِي نَحْوِ هَذَا ٱلْوَقْتِ غَدًا». | ٢ 2 |
೨ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದಳು.
فَلَمَّا رَأَى ذَلِكَ قَامَ وَمَضَى لِأَجْلِ نَفْسِهِ، وَأَتَى إِلَى بِئْرِ سَبْعٍ ٱلَّتِي لِيَهُوذَا وَتَرَكَ غُلَامَهُ هُنَاكَ. | ٣ 3 |
೩ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣ ರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
ثُمَّ سَارَ فِي ٱلْبَرِّيَّةِ مَسِيرَةَ يَوْمٍ، حَتَّى أَتَى وَجَلَسَ تَحْتَ رَتَمَةٍ وَطَلَبَ ٱلْمَوْتَ لِنَفْسِهِ، وَقَالَ: «قَدْ كَفَى ٱلْآنَ يَارَبُّ. خُذْ نَفْسِي لِأَنَّنِي لَسْتُ خَيْرًا مِنْ آبَائِي». | ٤ 4 |
೪ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, “ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ” ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು.
وَٱضْطَجَعَ وَنَامَ تَحْتَ ٱلرَّتَمَةِ. وَإِذَا بِمَلَاكٍ قَدْ مَسَّهُ وَقَالَ: «قُمْ وَكُلْ». | ٥ 5 |
೫ಪಕ್ಕನೆ ಒಬ್ಬ ದೇವದೂತನು ಅವನನ್ನು ತಟ್ಟಿ, “ಎದ್ದು ಊಟ ಮಾಡು” ಎಂದು ಹೇಳಿದನು.
فَتَطَلَّعَ وَإِذَا كَعْكَةُ رَضْفٍ وَكُوزُ مَاءٍ عِنْدَ رَأْسِهِ، فَأَكَلَ وَشَرِبَ ثُمَّ رَجَعَ فَٱضْطَجَعَ. | ٦ 6 |
೬ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರು ತನ್ನ ತಲೆಯ ಹತ್ತಿರ ಇರುವುದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ತಿರುಗಿ ಮಲಗಿದನು.
ثُمَّ عَادَ مَلَاكُ ٱلرَّبِّ ثَانِيَةً فَمَسَّهُ وَقَالَ: «قُمْ وَكُلْ، لِأَنَّ ٱلْمَسَافَةَ كَثِيرَةٌ عَلَيْكَ». | ٧ 7 |
೭ಯೆಹೋವನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ ಅವನಿಗೆ, “ಎದ್ದು ಊಟ ಮಾಡು, ನೀನು ನಿನ್ನ ಶಕ್ತಿ ಮೀರುವಷ್ಟು ಪ್ರಯಾಣಮಾಡಬೇಕಾಗಿದೆ” ಎಂದನು.
فَقَامَ وَأَكَلَ وَشَرِبَ، وَسَارَ بِقُوَّةِ تِلْكَ ٱلْأَكْلَةِ أَرْبَعِينَ نَهَارًا وَأَرْبَعِينَ لَيْلَةً إِلَى جَبَلِ ٱللهِ حُورِيبَ، | ٨ 8 |
೮ಅವನು ಎದ್ದು ತಿಂದು, ಕುಡಿದು ಅದರ ಬಲದಿಂದ ನಲ್ವತ್ತು ದಿನ ಹಗಲಿರುಳು ಪ್ರಯಾಣ ಮಾಡಿ ದೇವಗಿರಿಯಾದ
وَدَخَلَ هُنَاكَ ٱلْمُغَارَةَ وَبَاتَ فِيهَا. وَكَانَ كَلَامُ ٱلرَّبِّ إِلَيْهِ يَقُولُ: «مَا لَكَ هَهُنَا يَاإِيلِيَّا؟» | ٩ 9 |
೯ಹೋರೇಬಿಗೆ ತಲುಪಿ, ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಯೆಹೋವನಿಂದ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.
فَقَالَ: «قَدْ غِرْتُ غَيْرَةً لِلرَّبِّ إِلَهِ ٱلْجُنُودِ، لِأَنَّ بَنِي إِسْرَائِيلَ قَدْ تَرَكُوا عَهْدَكَ، وَنَقَضُوا مَذَابِحَكَ، وَقَتَلُوا أَنْبِيَاءَكَ بِٱلسَّيْفِ، فَبَقِيتُ أَنَا وَحْدِي، وَهُمْ يَطْلُبُونَ نَفْسِي لِيَأْخُذُوهَا». | ١٠ 10 |
೧೦ಅವನು ಅದಕ್ಕೆ, “ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.
فَقَالَ: «ٱخْرُجْ وَقِفْ عَلَى ٱلْجَبَلِ أَمَامَ ٱلرَّبِّ». وَإِذَا بِٱلرَّبِّ عَابِرٌ وَرِيحٌ عَظِيمَةٌ وَشَدِيدَةٌ قَدْ شَقَّتِ ٱلْجِبَالَ وَكَسَّرَتِ ٱلصُّخُورَ أَمَامَ ٱلرَّبِّ، وَلَمْ يَكُنِ ٱلرَّبُّ فِي ٱلرِّيحِ. وَبَعْدَ ٱلرِّيحِ زَلْزَلَةٌ، وَلَمْ يَكُنِ ٱلرَّبُّ فِي ٱلزَّلْزَلَةِ. | ١١ 11 |
೧೧ಆಗ ಪುನಃ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು” ಎಂಬ ವಾಣಿಯಾಯಿತು. ಆಹಾ ಯೆಹೋವನು ಅಲ್ಲಿ ಹಾದು ಹೋದನು. ಆತನ ಮುಂದೆ ಪರ್ವತಗಳು ಭೇದಿಸಿ ಬಂಡೆಗಳನ್ನು ಪುಡಿ ಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು. ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವಾಯಿತು, ಅದರಲ್ಲಿಯೂ ಆತನಿರಲಿಲ್ಲ.
وَبَعْدَ ٱلزَّلْزَلَةِ نَارٌ، وَلَمْ يَكُنِ ٱلرَّبُّ فِي ٱلنَّارِ. وَبَعْدَ ٱلنَّارِ صَوْتٌ مُنْخَفِضٌ خَفِيفٌ. | ١٢ 12 |
೧೨ಭೂಕಂಪವಾದ ನಂತರ ಸಿಡಿಲುಂಟಾಯಿತು, ಅದರಲ್ಲಿಯೂ ಯೆಹೋವನಿರಲಿಲ್ಲ. ಕಡೆಗೆ ನಯವಾದ ಮೃದು ಸ್ವರವೊಂದು ಕೇಳಿಸಿತು,
فَلَمَّا سَمِعَ إِيلِيَّا لَفَّ وَجْهَهُ بِرِدَائِهِ وَخَرَجَ وَوَقَفَ فِي بَابِ ٱلْمُغَارَةِ، وَإِذَا بِصَوْتٍ إِلَيْهِ يَقُولُ: «مَا لَكَ هَهُنَا يَا إِيلِيَّا؟» | ١٣ 13 |
೧೩ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.
فَقَالَ: «غِرْتُ غَيْرَةً لِلرَّبِّ إِلَهِ ٱلْجُنُودِ، لِأَنَّ بَنِي إِسْرَائِيلَ قَدْ تَرَكُوا عَهْدَكَ، وَنَقَضُوا مَذَابِحَكَ، وَقَتَلُوا أَنْبِيَاءَكَ بِٱلسَّيْفِ، فَبَقِيتُ أَنَا وَحْدِي، وَهُمْ يَطْلُبُونَ نَفْسِي لِيَأْخُذُوهَا». | ١٤ 14 |
೧೪ಅದಕ್ಕೆ ಅವನು, “ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.
فَقَالَ لَهُ ٱلرَّبُّ: «ٱذْهَبْ رَاجِعًا فِي طَرِيقِكَ إِلَى بَرِّيَّةِ دِمِشْقَ، وَٱدْخُلْ وَٱمْسَحْ حَزَائِيلَ مَلِكًا عَلَى أَرَامَ، | ١٥ 15 |
೧೫ಆಗ ಯೆಹೋವನು ಅವನಿಗೆ, “ನೀನು ಬಂದ ದಾರಿಯಿಂದ ಹಿಂದಿರುಗಿ ದಮಸ್ಕದ ಅರಣ್ಯಕ್ಕೆ ಹೋಗು, ಅಲ್ಲಿಂದ ಪಟ್ಟಣದೊಳಗೆ ಪ್ರವೇಶಿಸಿ ಹಜಾಯೇಲನನ್ನು ಅರಾಮ್ಯರ ಅರಸನನ್ನಾಗಿ ಅಭಿಷೇಕಿಸು.
وَٱمْسَحْ يَاهُوَ بْنَ نِمْشِي مَلِكًا عَلَى إِسْرَائِيلَ، وَٱمْسَحْ أَلِيشَعَ بْنَ شَافَاطَ مِنْ آبَلَ مَحُولَةَ نَبِيًّا عِوَضًا عَنْكَ. | ١٦ 16 |
೧೬ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲರ ಅರಸನನ್ನಾಗಿಯೂ, ಆಬೇಲ್ ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭಿಷೇಕಿಸು.
فَٱلَّذِي يَنْجُو مِنْ سَيْفِ حَزَائِيلَ يَقْتُلُهُ يَاهُو، وَٱلَّذِي يَنْجُو مِنْ سَيْفِ يَاهُو يَقْتُلُهُ أَلِيشَعُ. | ١٧ 17 |
೧೭ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು. ಅವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.
وَقَدْ أَبْقَيْتُ فِي إِسْرَائِيلَ سَبْعَةَ آلَافٍ، كُلَّ ٱلرُّكَبِ ٱلَّتِي لَمْ تَجْثُ لِلْبَعْلِ وَكُلَّ فَمٍ لَمْ يُقَبِّلْهُ». | ١٨ 18 |
೧೮ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ, ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಇಸ್ರಾಯೇಲರನ್ನು ಉಳಿಸುವೆನು” ಎಂದು ಹೇಳಿದನು.
فَذَهَبَ مِنْ هُنَاكَ وَوَجَدَ أَلِيشَعَ بْنَ شَافَاطَ يَحْرُثُ، وَٱثْنَا عَشَرَ فَدَّانَ بَقَرٍ قُدَّامَهُ، وَهُوَ مَعَ ٱلثَّانِي عَشَرَ. فَمَرَّ إِيلِيَّا بِهِ وَطَرَحَ رِدَاءَهُ عَلَيْهِ. | ١٩ 19 |
೧೯ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆ ಜೋಡಿಯಿಂದ ತಾನಾಗಿಯೇ ಹೊಲವನ್ನು ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
فَتَرَكَ ٱلْبَقَرَ وَرَكَضَ وَرَاءَ إِيلِيَّا وَقَالَ: «دَعْنِي أُقَبِّلُ أَبِي وَأُمِّي وَأَسِيرُ وَرَاءَكَ». فَقَالَ لَهُ: «ٱذْهَبْ رَاجِعًا، لِأَنِّي مَاذَا فَعَلْتُ لَكَ؟» | ٢٠ 20 |
೨೦ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ, ಅನಂತರ ನಿನ್ನನ್ನು ಹಿಂಬಾಲಿಸುವೆನು” ಅಂದನು. ಅದಕ್ಕೆ ಎಲೀಯನು “ಹೋಗು ನಾನು ನಿನಗೆ ಮಾಡಿರುವುದನ್ನು ಮರೆಯಬೇಡ?” ಎಂದು ಉತ್ತರಕೊಟ್ಟನು.
فَرَجَعَ مِنْ وَرَائِهِ وَأَخَذَ فَدَّانَ بَقَرٍ وَذَبَحَهُمَا، وَسَلَقَ ٱللَّحْمَ بِأَدَوَاتِ ٱلْبَقَرِ وَأَعْطَى ٱلشَّعْبَ فَأَكَلُوا. ثُمَّ قَامَ وَمَضَى وَرَاءَ إِيلِيَّا وَكَانَ يَخْدِمُهُ. | ٢١ 21 |
೨೧ಎಲೀಷನು ಹಿಂದಿರುಗಿ ಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.