< ٢ أخبار 10 >

وَذَهَبَ رَحُبْعَامُ إِلَى شَكِيمَ، لِأَنَّهُ جَاءَ إِلَى شَكِيمَ كُلُّ إِسْرَائِيلَ لِيُمَلِّكُوهُ. ١ 1
ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವುದಕ್ಕೆ ಸಮಸ್ತ ಇಸ್ರಾಯೇಲರು ಶೆಕೆಮಿಗೆ ಬಂದರು.
وَلَمَّا سَمِعَ يَرُبْعَامُ بْنُ نَبَاطَ، وَهُوَ فيِ مِصْرَ حَيْثُ هَرَبَ مِنْ وَجْهِ سُلَيْمَانَ ٱلْمَلِكِ، رَجَعَ يَرُبْعَامُ مِنْ مِصْرَ. ٢ 2
ಅರಸನಾದ ಸೊಲೊಮೋನನ ಸಮ್ಮುಖದಿಂದ ಓಡಿಹೋಗಿ ಈಜಿಪ್ಟಿನಲ್ಲಿ ವಾಸವಾಗಿದ್ದ ನೆಬಾಟನ ಮಗ ಯಾರೊಬ್ಬಾಮನು ಇದನ್ನು ಕೇಳಿದಾಗ, ಅವನು ಈಜಿಪ್ಟಿನಿಂದ ತಿರುಗಿಬಂದನು.
فَأَرْسَلُوا وَدَعَوْهُ، فَأَتَى يَرُبْعَامُ وَكُلُّ إِسْرَائِيلَ وَكَلَّمُوا رَحُبْعَامَ قَائِلِينَ: ٣ 3
ಆಗ ಯಾರೊಬ್ಬಾಮನೂ ಸಮಸ್ತ ಇಸ್ರಾಯೇಲರೂ ರೆಹಬ್ಬಾಮನ ಬಳಿಗೆ ಬಂದು ಅವನ ಸಂಗಡ ಮಾತನಾಡಿ,
«إِنَّ أَبَاكَ قَسَّى نِيرَنَا، فَٱلْآنَ خَفِّفْ مِنْ عُبُودِيَّةِ أَبِيكَ ٱلْقَاسِيَةِ وَمِنْ نِيرِهِ ٱلثَّقِيلِ ٱلَّذِي جَعَلَهُ عَلَيْنَا فَنَخْدِمَكَ». ٤ 4
“ನಿನ್ನ ತಂದೆಯು ನಮ್ಮ ನೊಗವನ್ನು ಭಾರವಾಗಿ ಮಾಡಿದನು. ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ, ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ, ನಾವು ನಿನಗೆ ಸೇವೆಮಾಡುತ್ತೇವೆ,” ಎಂದರು.
فَقَالَ لَهُمُ: «ٱرْجِعُوا إِلَيَّ بَعْدَ ثَلَاثَةِ أَيَّامٍ». فَذَهَبَ ٱلشَّعْبُ. ٥ 5
ಅದಕ್ಕೆ ರೆಹಬ್ಬಾಮನು ಅವರಿಗೆ, “ಮೂರು ದಿವಸಗಳಾದ ತರುವಾಯ ತಿರುಗಿ ನನ್ನ ಬಳಿಗೆ ಬನ್ನಿರಿ,” ಎಂದು ಹೇಳಿದ್ದರಿಂದ ಜನರು ಹೊರಟು ಹೋದರು.
فَٱسْتَشَارَ ٱلْمَلِكُ رَحُبْعَامُ ٱلشُّيُوخَ ٱلَّذِينَ كَانُوا يَقِفُونَ أَمَامَ سُلَيْمَانَ أَبِيهِ وَهُوَ حَيٌّ قَائِلًا: «كَيْفَ تُشِيرُونَ أَنْ أَرُدَّ جَوَابًا عَلَى هَذَا ٱلشَّعْبِ؟» ٦ 6
ಆಗ ಅರಸನಾದ ರೆಹಬ್ಬಾಮನು, ತನ್ನ ತಂದೆ ಸೊಲೊಮೋನನು ಬದುಕಿರುವಾಗ, ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ ಅವರಿಗೆ, “ನಾನು ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ನಿಮ್ಮ ಆಲೋಚನೆಯೇನು?” ಎಂದು ಕೇಳಿದನು.
فَكَلَّمُوهُ قَائِلِينَ: «إِنْ كُنْتَ صَالِحًا نَحْوَ هَذَا ٱلشَّعْبِ وَأَرْضَيْتَهُمْ وَكَلَّمْتَهُمْ كَلَامًا حَسَنًا، يَكُونُونَ لَكَ عَبِيدًا كُلَّ ٱلْأَيَّامِ». ٧ 7
ಅವರು ಅವನಿಗೆ, “ನೀನು ಈ ಜನರಿಗೆ ದಯವುಳ್ಳವನಾಗಿ ಅವರನ್ನು ಮೆಚ್ಚಿಸಿ, ಒಳ್ಳೆಯ ಮಾತುಗಳಿಂದ ಅವರಿಗೆ ಉತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು,” ಎಂದು ಹೇಳಿದರು.
فَتَرَكَ مَشُورَةَ ٱلشُّيُوخِ ٱلَّتِي أَشَارُوا بِهَا عَلَيْهِ، وَٱسْتَشَارَ ٱلْأَحْدَاثَ ٱلَّذِينَ نَشَأُوا مَعَهُ وَوَقَفُوا أَمَامَهُ، ٨ 8
ಆದರೆ ರೆಹಬ್ಬಾಮನು, ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು, ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಕೇಳಿ,
وَقَالَ لَهُمْ: «بِمَاذَا تُشِيرُونَ أَنْتُمْ فَنَرُدَّ جَوَابًا عَلَى هَذَا ٱلشَّعْبِ ٱلَّذِينَ كَلَّمُونِي قَائِلِينَ: خَفِّفْ مِنَ ٱلنِّيرِ ٱلَّذِي جَعَلَهُ عَلَيْنَا أَبُوكَ؟» ٩ 9
ಅವನು ಅವರಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಉತ್ತರ ಕೊಡಲು ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.
فَكَلَّمَهُ ٱلْأَحْدَاثُ ٱلَّذِينَ نَشَأُوا مَعَهُ قَائِلِينَ: «هَكَذَا تَقُولُ لِلشَّعْبِ ٱلَّذِينَ كَلَّمُوكَ قَائِلِينَ: إِنَّ أَبَاكَ ثَقَّلَ نِيرَنَا وَأَمَّا أَنْتَ فَخَفِّفْ عَنَّا، هَكَذَا تَقُولُ لَهُمْ: إِنَّ خِنْصَرِي أَغْلَظُ مِنْ مَتْنَيْ أَبِي. ١٠ 10
ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವನಿಗೆ, “ನಿನ್ನ ತಂದೆಯು ನಮ್ಮ ನೊಗವನ್ನು ಭಾರಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ, ‘ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರುವುದು.
وَٱلْآنَ أَبِي حَمَّلَكُمْ نِيرًا ثَقِيلًا وَأَنَا أَزِيدُ عَلَى نِيرِكُمْ. أَبِي أَدَّبَكُمْ بِٱلسِّيَاطِ وَأَمَّا أَنَا فَبِٱلْعَقَارِبِ». ١١ 11
ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು. ಆದರೆ ನಾನು ನಿಮ್ಮ ನೊಗವನ್ನು ಇನ್ನೂ ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ, ನಾನಾದರೋ ನಿಮ್ಮನ್ನು ಚೇಳು ಕೊರಡೆಗಳಿಂದ ಶಿಕ್ಷಿಸುವೆನು,’ ಎಂದು ನೀನು ಅವರಿಗೆ ಹೇಳು,” ಎಂದರು.
فَجَاءَ يَرُبْعَامُ وَجَمِيعُ ٱلشَّعْبِ إِلَى رَحُبْعَامَ فِي ٱلْيَوْمِ ٱلثَّالِثِ كَمَا تَكَلَّمَ ٱلْمَلِكُ قَائِلًا: «ٱرْجِعُوا إِلَيَّ فِي ٱلْيَوْمِ ٱلثَّالِثِ». ١٢ 12
ಆಗ, “ಮೂರನೆಯ ದಿವಸದಲ್ಲಿ ನನ್ನ ಬಳಿಗೆ ಬನ್ನಿರಿ” ಎಂದು ಅರಸನು ಹೇಳಿದ ಪ್ರಕಾರ ಮೂರನೆಯ ದಿವಸದಲ್ಲಿ ಯಾರೊಬ್ಬಾಮನೂ, ಸಮಸ್ತ ಜನರೂ ಅರಸನಾದ ರೆಹಬ್ಬಾಮನ ಬಳಿಗೆ ಬಂದರು.
فَأَجَابَهُمُ ٱلْمَلِكُ بِقَسَاوَةٍ، وَتَرَكَ ٱلْمَلِكُ رَحُبْعَامُ مَشُورَةَ ٱلشُّيُوخِ، ١٣ 13
ಆದರೆ ಅರಸನು ಜನರಿಗೆ ಕಠಿಣವಾದ ಉತ್ತರವನ್ನು ಕೊಟ್ಟು, ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ನಿರಾಕರಿಸಿ,
وَكَلَّمَهُمْ حَسَبَ مَشُورَةِ ٱلْأَحْدَاثِ قَائِلًا: «أَبِي ثَقَّلَ نِيرَكُمْ وَأَنَا أَزِيدُ عَلَيْهِ. أَبِي أَدَّبَكُمْ بِٱلسِّيَاطِ وَأَمَّا أَنَا فَبِالْعَقَارِبِ». ١٤ 14
ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ, “ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗಿ ಮಾಡಿದನು. ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಶಿಕ್ಷಿಸಿದನು; ಆದರೆ ನಾನು ಮುಳ್ಳು ಕೊರಡೆಗಳಿಂದ ಶಿಕ್ಷಿಸುವೆನು,” ಎಂದನು.
وَلَمْ يَسْمَعِ ٱلْمَلِكُ لِلشَّعْبِ، لِأَنَّ ٱلسَّبَبَ كَانَ مِنْ قِبَلِ ٱللهِ، لِكَيْ يُقِيمَ ٱلرَّبُّ كَلَامَهُ ٱلَّذِي تَكَلَّمَ بِهِ عَنْ يَدِ أَخِيَّا ٱلشِّيلُونِيِّ إِلَى يَرُبْعَامَ بْنِ نَبَاطَ. ١٥ 15
ಅರಸನು ಜನರ ಮಾತನ್ನು ಕೇಳದೆಹೋದದ್ದು ದೇವರಿಂದಲೇ. ಹೀಗೆ ಯೆಹೋವ ದೇವರು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ಈಡೇರುವುದಕ್ಕೆ ಕಾರಣವಾಯಿತು.
فَلَمَّا رَأَى كُلُّ إِسْرَائِيلَ أَنَّ ٱلْمَلِكَ لَمْ يَسْمَعْ لَهُمْ، جَاوَبَ ٱلشَّعْبُ ٱلْمَلِكَ قَائِلِينَ: «أَيُّ قِسْمٍ لَنَا فِي دَاوُدَ؟ وَلَا نَصِيبَ لَنَا فِي ٱبْنِ يَسَّى! كُلُّ وَاحِدٍ إِلَى خَيْمَتِهِ يَا إِسْرَائِيلُ. ٱلْآنَ ٱنْظُرْ إِلَى بَيْتِكَ يَادَاوُدُ». وَذَهَبَ كُلُّ إِسْرَائِيلَ إِلَى خِيَامِهِمْ. ١٦ 16
ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲರು ತಿಳಿದಾಗ, ಜನರು ಅರಸನಿಗೆ ಉತ್ತರವಾಗಿ, “ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾಯೇಲರೇ, ನಿಮ್ಮ ಡೇರೆಗಳಿಗೆ ಹೋಗಿರಿ. ದಾವೀದನೇ, ಈಗ ನಿನ್ನ ಕುಟುಂಬವನ್ನು ನೀನೇ ನೋಡಿಕೋ,” ಎಂದು ಹೇಳಿ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಡೇರೆಗಳಿಗೆ ಹೋದರು.
وَأَمَّا بَنُو إِسْرَائِيلَ ٱلسَّاكِنُونَ فِي مُدُنِ يَهُوذَا فَمَلَكَ عَلَيْهِمْ رَحُبْعَامُ. ١٧ 17
ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲರ ಮೇಲೆ ರೆಹಬ್ಬಾಮನು ಆಳಿದನು.
ثُمَّ أَرْسَلَ ٱلْمَلِكُ رَحُبْعَامُ هَدُورَامَ ٱلَّذِي عَلَى ٱلتَّسْخِيرِ، فَرَجَمَهُ بَنُو إِسْرَائِيلَ بِٱلْحِجَارَةِ فَمَاتَ. فَبَادَرَ ٱلْمَلِكُ رَحُبْعَامُ وَصَعِدَ إِلَى ٱلْمَرْكَبَةِ لِيَهْرُبَ إِلَى أُورُشَلِيمَ، ١٨ 18
ಆಗ ರೆಹಬ್ಬಾಮನು ದಾಸರ ಮೇಲ್ವಿಚಾರಕನಾದ ಅದೋನೀರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲರು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು. ಆದ್ದರಿಂದ ಅರಸನಾದ ರೆಹಬ್ಬಾಮನು ಆತುರಪಟ್ಟು ತನ್ನ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು.
فَعَصَى إِسْرَائِيلُ بَيْتَ دَاوُدَ إِلَى هَذَا ٱلْيَوْمِ. ١٩ 19
ಹೀಗೆ ಇಂದಿನವರೆಗೂ ಇಸ್ರಾಯೇಲರು ದಾವೀದನ ಕುಟುಂಬದವರೊಡನೆ ವಿರೋಧವಾಗಿ ತಿರುಗಿಬೀಳುತ್ತಲೇ ಇದ್ದಾರೆ.

< ٢ أخبار 10 >