< ٢ أخبار 18 >

وَكَانَ لِيَهُوشَافَاطَ غِنًى وَكَرَامَةٌ بِكَثْرَةٍ. وَصَاهَرَ أَخْآبَ. ١ 1
ಯೆಹೋಷಾಫಾಟನಿಗೆ ಐಶ್ವರ್ಯವೂ, ಘನತೆಯೂ ಅಧಿಕವಾಗಿರುವಾಗ, ಅವನು ಅಹಾಬನ ಸಂಗಡ ಬಂಧುತ್ವ ಮಾಡಿದನು.
وَنَزَلَ بَعْدَ سِنِينَ إِلَى أَخْآبَ إِلَى ٱلسَّامِرَةِ، فَذَبَحَ أَخْآبُ غَنَمًا وَبَقَرًا بِكَثْرَةٍ لَهُ وَلِلشَّعْبِ ٱلَّذِي مَعَهُ، وَأَغْوَاهُ أَنْ يَصْعَدَ إِلَى رَامُوتِ جِلْعَادَ. ٢ 2
ಕೆಲವು ವರ್ಷಗಳ ತರುವಾಯ ಅವನು ಅಹಾಬನ ಬಳಿಗೆ ಸಮಾರ್ಯಕ್ಕೆ ಹೋದನು. ಆಗ ಅಹಾಬನು ಅವನಿಗೋಸ್ಕರವೂ, ಅವನ ಸಂಗಡ ಇದ್ದ ಜನರಿಗೋಸ್ಕರವೂ ಅನೇಕ ಕುರಿದನಗಳನ್ನೂ ವಧಿಸಿ ಔತಣವನ್ನೇರ್ಪಡಿಸಿ, ತನ್ನ ಸಂಗಡ ಯುದ್ಧಕ್ಕಾಗಿ ಗಿಲ್ಯಾದಿನ ರಾಮೋತಿಗೆ ಹೋಗಲು ಪ್ರೇರೇಪಿಸಿದನು.
وَقَالَ أَخْآبُ مَلِكُ إِسْرَائِيلَ لِيَهُوشَافَاطَ مَلِكِ يَهُوذَا: «أَتَذْهَبُ مَعِي إِلَى رَامُوتِ جِلْعَادَ؟» وَقَالَ لَهُ: «مَثَلِي مَثَلُكَ وَشَعْبِي كَشَعْبِكَ وَمَعَكَ فِي ٱلْقِتَالِ». ٣ 3
ಇಸ್ರಾಯೇಲಿನ ಅರಸನಾದ ಅಹಾಬನು ಯೆಹೂದದ ಅರಸನಾದ ಯೆಹೋಷಾಫಾಟನಿಗೆ, “ನೀನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ?” ಎಂದನು. ಅದಕ್ಕವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಾವು ಯುದ್ಧದಲ್ಲಿ ನಿನ್ನ ಸಂಗಡ ಇರುವೆವು,” ಎಂದನು.
ثُمَّ قَالَ يَهُوشَافَاطُ لِمَلِكِ إِسْرَائِيلَ: «ٱسْأَلِ ٱلْيَوْمَ عَنْ كَلَامِ ٱلرَّبِّ». ٤ 4
ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ಈ ಹೊತ್ತು ಮೊದಲು ಯೆಹೋವ ದೇವರ ಆಲೋಚನೆಯನ್ನು ವಿಚಾರಿಸಿರಿ,” ಎಂದನು.
فَجَمَعَ مَلِكُ إِسْرَائِيلَ ٱلْأَنْبِيَاءَ، أَرْبَعَ مِئَةِ رَجُلٍ، وَقَالَ لَهُمْ: «أَنَذْهَبُ إِلَى رَامُوتِ جِلْعَادَ لِلْقِتَالِ أَمْ أَمْتَنِعُ؟» فَقَالُوا: «ٱصْعَدْ فَيَدْفَعَهَا ٱللهُ لِيَدِ ٱلْمَلِكِ». ٥ 5
ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ ಅವರಿಗೆ, “ನಾನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ, ಬೇಡವೋ?” ಎಂದು ಕೇಳಿದನು. ಅದಕ್ಕವರು, “ಹೋಗು, ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.
فَقَالَ يَهُوشَافَاطُ: «أَلَيْسَ هُنَا أَيْضًا نَبِيٌّ لِلرَّبِّ فَنَسْأَلَ مِنْهُ؟» ٦ 6
ಆದರೆ ಯೆಹೋಷಾಫಾಟನು, “ಯೆಹೋವ ದೇವರ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಬೇರೆ ಪ್ರವಾದಿ ಇಲ್ಲಿ ಇಲ್ಲವೋ?” ಎಂದು ಕೇಳಿದನು.
فَقَالَ مَلِكُ إِسْرَائِيلَ لِيَهُوشَافَاطَ: «بَعْدُ رَجُلٌ وَاحِدٌ لِسُؤَالِ ٱلرَّبِّ بِهِ، وَلَكِنَّنِي أُبْغِضُهُ لِأَنَّهُ لَا يَتَنَبَّأُ عَلَيَّ خَيْرًا بَلْ شَرًّا كُلَّ أَيَّامِهِ، وَهُوَ مِيخَا بْنُ يَمْلَةَ». فَقَالَ يَهُوشَافَاطُ: «لَا يَقُلِ ٱلْمَلِكُ هَكَذَا». ٧ 7
ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು.
فَدَعَا مَلِكُ إِسْرَائِيلَ خَصِيًّا وَقَالَ: «أَسْرِعْ بِمِيخَا بْنِ يَمْلَةَ». ٨ 8
ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು, “ಇಮ್ಲನ ಮಗನಾದ ಮೀಕಾಯನನ್ನು ಶೀಘ್ರವಾಗಿ ಕರೆದುಕೊಂಡು ಬಾ,” ಎಂದನು.
وَكَانَ مَلِكُ إِسْرَائِيلَ وَيَهُوشَافَاطُ مَلِكُ يَهُوذَا جَالِسَيْنِ كُلُّ وَاحِدٍ عَلَى كُرْسِيِّهِ، لَابِسَيْنِ ثِيَابَهُمَا وَجَالِسَيْنِ فِي سَاحَةٍ عِنْدَ مَدْخَلِ بَابِ ٱلسَّامِرَةِ، وَجَمِيعُ ٱلْأَنْبِيَاءِ يَتَنَبَّأُونَ أَمَامَهُمَا. ٩ 9
ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು, ಸಮಾರ್ಯದ ಬಾಗಿಲಿನ ಮುಂದೆ ಬಯಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತುಕೊಂಡಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸುತ್ತಿದ್ದರು.
وَعَمِلَ صِدْقِيَّا بْنُ كَنْعَنَةَ لِنَفْسِهِ قُرُونَ حَدِيدٍ وَقَالَ: «هَكَذَا قَالَ ٱلرَّبُّ: بِهَذِهِ تَنْطَحُ ٱلْأَرَامِيِّينَ حَتَّى يَفْنَوْا». ١٠ 10
ಆಗ ಕೆನಾನನ ಮಗನಾದ ಚಿದ್ಕೀಯನು, “ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು, ‘ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.
وَتَنَبَّأَ جَمِيعُ ٱلْأَنْبِيَاءِ هَكَذَا قَائِلِينَ: «ٱصْعَدْ إِلَى رَامُوتِ جِلْعَادَ وَأَفْلِحْ، فَيَدْفَعَهَا ٱلرَّبُّ لِيَدِ ٱلْمَلِكِ». ١١ 11
ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ, “ಗಿಲ್ಯಾದಿನ ರಾಮೋತಿಗೆ ಹೋಗಿ ಜಯ ಹೊಂದು. ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.
وَأَمَّاَ ٱلرَّسُولُ ٱلَّذِي ذَهَبَ لِيَدْعُوَ مِيخَا فَكَلَّمَهُ قَائِلًا: «هُوَذَا كَلَامُ جَمِيعِ ٱلْأَنْبِيَاءِ بِفَمٍ وَاحِدٍ خَيْرٌ لِلْمَلِكِ. فَلْيَكُنْ كَلَامُكَ كَوَاحِدٍ مِنْهُمْ وَتَكَلَّمْ بِخَيْرٍ». ١٢ 12
ಆದರೆ ಮೀಕಾಯನನ್ನು ಕರೆಯಲು ಹೋದ ದೂತನು ಅವನಿಗೆ, “ನೋಡು, ಎಲ್ಲ ಪ್ರವಾದಿಗಳು ಏಕಮನಸ್ಸಿನಿಂದ ಅರಸನಿಗೆ ಒಳ್ಳೆಯದನ್ನೇ ಪ್ರವಾದಿಸಿದ್ದಾರೆ. ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೆಯ ಮಾತು ಆಡು,” ಎಂದನು.
فَقَالَ مِيخَا: «حَيٌّ هُوَ ٱلرَّبُّ، إِنَّ مَا يَقُولُهُ إِلَهِي فَبِهِ أَتَكَلَّمُ». ١٣ 13
ಅದಕ್ಕೆ ಮೀಕಾಯನು, “ಯೆಹೋವ ದೇವರ ಜೀವದಾಣೆ, ನನ್ನ ದೇವರು ಏನು ಹೇಳುವರೋ, ಅದನ್ನೇ ಮಾತನಾಡುವೆನು,” ಎಂದನು.
وَلَمَّا جَاءَ إِلَى ٱلْمَلِكِ قَالَ لَهُ ٱلْمَلِكُ: «يَا مِيخَا، أَنَذْهَبُ إِلَى رَامُوتِ جِلْعَادَ لِلْقِتَالِ أَمْ أَمْتَنِعُ؟» فَقَالَ: «ٱصْعَدُوا وَأَفْلِحُوا فَيُدْفَعُوا لِيَدِكُمْ». ١٤ 14
ಅವನು ಅರಸನ ಬಳಿಗೆ ಬಂದಾಗ, ಅರಸನು ಅವನಿಗೆ, “ಮೀಕಾಯೆಹುವೇ, ನಾವು ಗಿಲ್ಯಾದಿನ ರಾಮೋತ್ ವಿರುದ್ಧವಾಗಿ ಯುದ್ಧಕ್ಕೆ ಹೋಗಬಹುದೋ ಅಥವಾ ಬೇಡವೋ?” ಎಂದನು. ಆಗ ಅವನು, “ಹೋಗಿ ಜಯ ಹೊಂದಿರಿ. ಅವರು ನಿಮ್ಮ ಕೈವಶರಾಗುವರು,” ಎಂದನು.
فَقَالَ لَهُ ٱلْمَلِكُ: «كَمْ مَرَّةٍ أَسْتَحْلِفُكَ أَنْ لَا تَقُولَ لِي إِلَّا ٱلْحَقَّ بِٱسْمِ ٱلرَّبِّ؟» ١٥ 15
ಆಗ ಅರಸನು ಅವನಿಗೆ, “ನೀನು ಯೆಹೋವ ದೇವರ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು?” ಎಂದನು.
فَقَالَ: «رَأَيْتُ كُلَّ إِسْرَائِيلَ مُشَتَّتِينَ عَلَى ٱلْجِبَالِ كَخِرَافٍ لَا رَاعِيَ لَهَا. فَقَالَ ٱلرَّبُّ: لَيْسَ لِهَؤُلَاءِ أَصْحَابٌ، فَلْيَرْجِعُوا كُلُّ وَاحِدٍ إِلَى بَيْتِهِ بِسَلَامٍ». ١٦ 16
ಅದಕ್ಕೆ ಮೀಕಾಯನು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳ ಮೇಲೆ ಚದರಿಹೋದದ್ದನ್ನು ಕಂಡೆನು. ಆಗ ಯೆಹೋವ ದೇವರು, ‘ಇವರಿಗೆ ಯಜಮಾನನು ಇಲ್ಲ. ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂದಿರುಗಿ ಹೋಗಲಿ,’ ಎಂಬುದಾಗಿ ಹೇಳಿದರು,” ಎಂದನು.
فَقَالَ مَلِكُ إِسْرَائِيلَ لِيَهُوشَافَاطَ: «أَمَا قُلْتُ لَكَ إِنَّهُ لَا يَتَنَبَّأُ عَلَيَّ خَيْرًا بَلْ شَرًّا؟» ١٧ 17
ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ಇವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ?” ಎಂದನು.
وَقَالَ: «فَٱسْمَعْ إِذًا كَلَامَ ٱلرَّبِّ. قَدْ رَأَيْتُ ٱلرَّبَّ جَالِسًا عَلَى كُرْسِيِّهِ، وَكُلُّ جُنْدِ ٱلسَّمَاءِ وُقُوفٌ عَنْ يَمِينِهِ وَعَنْ يَسَارِهِ. ١٨ 18
ಆಗ ಮೀಕಾಯನು, “ಆದ್ದರಿಂದ ಯೆಹೋವ ದೇವರ ವಾಕ್ಯವನ್ನು ಕೇಳು. ಯೆಹೋವ ದೇವರು ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡಿರುವುದನ್ನೂ ಆಕಾಶದ ಸಮಸ್ತ ಸೈನ್ಯವು ಅವರ ಬಲಗಡೆ ಮತ್ತು ಎಡಗಡೆಯಲ್ಲಿ ನಿಂತಿರುವುದನ್ನೂ ನಾನು ಕಂಡೆನು.
فَقَالَ ٱلرَّبُّ: مَنْ يُغْوِي أَخْآبَ مَلِكَ إِسْرَائِيلَ فَيَصْعَدَ وَيَسْقُطَ فِي رَامُوتِ جِلْعَادَ؟ فَقَالَ هَذَا هَكَذَا، وَقَالَ ذَاكَ هَكَذَا. ١٩ 19
ಆಗ ಯೆಹೋವ ದೇವರು, ‘ಇಸ್ರಾಯೇಲಿನ ಅರಸನಾದ ಅಹಾಬನು ಹೋಗಿ ಗಿಲ್ಯಾದಿನ ರಾಮೋತಿನಲ್ಲಿ ಬೀಳುವ ಹಾಗೆ ಅವನನ್ನು ಮರುಳುಗೊಳಿಸುವವನು ಯಾರು?’ ಎಂದರು. “ಒಬ್ಬನು ಒಂದು ವಿಧವಾಗಿಯೂ ಮತ್ತೊಬ್ಬನು ಇನ್ನೊಂದು ವಿಧವಾಗಿಯೂ ಹೇಳುತ್ತಿದ್ದರು.
ثُمَّ خَرَجَ ٱلرُّوحُ وَوَقَفَ أَمَامَ ٱلرَّبِّ وَقَالَ: أَنَا أُغْوِيهِ. فَقَالَ لَهُ ٱلرَّبُّ: بِمَاذَا؟ ٢٠ 20
ಕೊನೆಯಲ್ಲಿ, ಒಂದು ಆತ್ಮವು ಹೊರಟುಬಂದು ಯೆಹೋವ ದೇವರ ಮುಂದೆ ನಿಂತು, ‘ನಾನು ಅವನನ್ನು ಮರುಳುಗೊಳಿಸುತ್ತೇನೆ,’ ಎಂದಿತು. “ಆಗ ಯೆಹೋವ ದೇವರು, ‘ಅದು ಹೇಗೆ?’ ಎಂದರು.
فَقَالَ: أَخْرُجُ وَأَكُونُ لِرُوحِ كَذِبٍ فِي أَفْوَاهِ جَمِيعِ أَنْبِيَائِهِ. فَقَالَ: إِنَّكَ تُغْوِيهِ وَتَقْتَدِرُ. فَٱخْرُجْ وَٱفْعَلْ هَكَذَا. ٢١ 21
“ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. “ಅದಕ್ಕೆ ಯೆಹೋವ ದೇವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ, ಹೊರಟುಹೋಗಿ ಹಾಗೆ ಮಾಡು,’ ಎಂದರು.
وَٱلْآنَ هُوَذَا قَدْ جَعَلَ ٱلرَّبُّ رُوحَ كَذِبٍ فِي أَفْوَاهِ أَنْبِيَائِكَ هَؤُلَاءِ، وَٱلرَّبُّ تَكَلَّمَ عَلَيْكَ بِشَرٍّ». ٢٢ 22
“ಆದ್ದರಿಂದ ಇಗೋ, ಯೆಹೋವ ದೇವರು ಈ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳನ್ನಾಡುವ ಆತ್ಮವನ್ನು ಇಟ್ಟಿದ್ದಾರೆ. ಇದಲ್ಲದೆ ಯೆಹೋವ ದೇವರು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾರೆ,” ಎಂದನು.
فَتَقَدَّمَ صِدْقِيَّا بْنُ كَنْعَنَةَ وَضَرَبَ مِيخَا عَلَى ٱلْفَكِّ وَقَالَ: «مِنْ أَيِّ طَرِيقٍ عَبَرَ رُوحُ ٱلرَّبِّ مِنِّي لِيُكَلِّمَكَ؟». ٢٣ 23
ಆಗ ಕೆನಾನನ ಮಗನಾದ ಚಿದ್ಕೀಯನು ಸಮೀಪಕ್ಕೆ ಬಂದು ಮೀಕಾಯನ ಕೆನ್ನೆಯ ಮೇಲೆ ಹೊಡೆದು, “ಯೆಹೋವ ದೇವರ ಆತ್ಮವು ನನ್ನನ್ನು ಬಿಟ್ಟು, ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಬಂದಿತು?” ಎಂದನು.
فَقَالَ مِيخَا: «إِنَّكَ سَتَرَى فِي ذَلِكَ ٱلْيَوْمِ ٱلَّذِي تَدْخُلُ فِيهِ مِنْ مُخْدَعٍ إِلَى مُخْدَعٍ لِتَخْتَبِئَ». ٢٤ 24
ಅದಕ್ಕೆ ಮೀಕಾಯನು, “ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ನೀನು ಹೋಗುವ ದಿವಸದಲ್ಲಿ ನೋಡುವೆ,” ಎಂದನು.
فَقَالَ مَلِكُ إِسْرَائِيلَ: «خُذُوا مِيخَا وَرُدُّوهُ إِلَى أَمُّونَ رَئِيسِ ٱلْمَدِينَةِ وَإِلَى يُوآشَ ٱبْنِ ٱلْمَلِكِ، ٢٥ 25
ಆಗ ಇಸ್ರಾಯೇಲಿನ ಅರಸನು ಹೇಳಿದ್ದೇನೆಂದರೆ, “ನೀವು ಮೀಕಾಯನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ, ಅರಸನ ಮಗನಾದ ಯೋವಾಷನ ಬಳಿಗೂ ತೆಗೆದುಕೊಂಡುಹೋಗಿ,
وَقُولُوا هَكَذَا يَقُولُ ٱلْمَلِكُ: ضَعُوا هَذَا فِي ٱلسِّجْنِ، وَأَطْعِمُوهُ خُبْزَ ٱلضِّيقِ وَمَاءَ ٱلضِّيقِ حَتَّى أَرْجِعَ بِسَلَامٍ». ٢٦ 26
‘ನಾನು ಸಮಾಧಾನವಾಗಿ ತಿರುಗಿ ಬರುವವರೆಗೂ ನೀವು ಇವನನ್ನು ಸೆರೆಮನೆಯಲ್ಲಿಟ್ಟು, ಅವನಿಗೆ ರೊಟ್ಟಿ ಮತ್ತು ನೀರನ್ನು ಬಿಟ್ಟು ಮತ್ತೇನೂ ಕೊಡಬೇಡಿರೆಂದು ಅರಸನು ಹೇಳಿದ್ದಾನೆ’ ಎಂದು ತಿಳಿಸು,” ಎಂದನು.
فَقَالَ مِيخَا: «إِنْ رَجَعْتَ رُجُوعًا بِسَلَامٍ، فَلَمْ يَتَكَلَّمِ ٱلرَّبُّ بِي». وَقَالَ: «ٱسْمَعُوا أَيُّهَا ٱلشُّعُوبُ أَجْمَعُونَ». ٢٧ 27
ಅದಕ್ಕೆ ಮೀಕಾಯನು, “ನೀನು ಸಮಾಧಾನದಿಂದ ನಿಜವಾಗಿ ಬಂದರೆ, ಯೆಹೋವ ದೇವರು ನನ್ನ ಮುಖಾಂತರ ಮಾತನಾಡಿಲ್ಲ, ಎಂದು ಹೇಳಿ; ಜನರೇ, ನೀವೆಲ್ಲರೂ ನನ್ನ ಮಾತನ್ನು ಗಮನದಲ್ಲಿಡಿರಿ!” ಎಂದು ಕೂಗಿ ಹೇಳಿದನು.
فَصَعِدَ مَلِكُ إِسْرَائِيلَ وَيَهُوشَافَاطُ مَلِكُ يَهُوذَا إِلَى رَامُوتِ جِلْعَادَ. ٢٨ 28
ಹೀಗೆಯೇ ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು.
وَقَالَ مَلِكُ إِسْرَائِيلَ لِيَهُوشَافَاطَ: «إِنِّي أَتَنَكَّرُ وَأَدْخُلُ ٱلْحَرْبَ، وَأَمَّا أَنْتَ فَٱلْبَسْ ثِيَابَكَ». فَتَنَكَّرَ مَلِكُ إِسْرَائِيلَ وَدَخَلَا ٱلْحَرْبَ. ٢٩ 29
ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ಯುದ್ಧದಲ್ಲಿ ಪ್ರವೇಶಿಸುವೆನು. ಆದರೆ ನೀನು ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡಿರು,” ಎಂದನು. ಹಾಗೆಯೇ ಇಸ್ರಾಯೇಲಿನ ಅರಸನು ವೇಷಹಾಕಿಕೊಂಡು ಯುದ್ಧಕ್ಕೆ ಹೋದನು.
وَأَمَرَ مَلِكُ أَرَامَ رُؤَسَاءَ ٱلْمَرْكَبَاتِ ٱلَّتِي لَهُ قَائِلًا: «لَا تُحَارِبُوا صَغِيرًا وَلَا كَبِيرًا إِلَّا مَلِكَ إِسْرَائِيلَ وَحْدَهُ». ٣٠ 30
ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲಿನ ಅರಸನನ್ನು ಮಾತ್ರ ಗುರಿಯಾಗಿಸಿಕೊಂಡು ಯುದ್ಧಮಾಡಿರಿ,” ಎಂದು ಆಜ್ಞಾಪಿಸಿದನು.
فَلَمَّا رَأَى رُؤَسَاءُ ٱلْمَرْكَبَاتِ يَهُوشَافَاطَ قَالُوا: «إِنَّهُ مَلِكُ إِسْرَائِيلَ»، فَحَاوَطُوهُ لِلْقِتَالِ، فَصَرَخَ يَهُوشَافَاطُ، وَسَاعَدَهُ ٱلرَّبُّ وَحَوَّلَهُمُ ٱللهُ عَنْهُ. ٣١ 31
ಆದ್ದರಿಂದ ರಥಗಳ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ, “ಇವನೇ ಇಸ್ರಾಯೇಲಿನ ಅರಸನು,” ಎಂದು ಹೇಳಿ ಅವನ ಸಂಗಡ ಯುದ್ಧಮಾಡುವುದಕ್ಕೆ ತಿರುಗಿಕೊಂಡರು. ಆದರೆ ಯೆಹೋಷಾಫಾಟನು ಕೂಗಿಕೊಂಡನು. ಆಗ ಯೆಹೋವ ದೇವರು ಅವನಿಗೆ ಸಹಾಯಮಾಡಿ, ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದರು.
فَلَمَّا رَأَى رُؤَسَاءُ ٱلْمَرْكَبَاتِ أَنَّهُ لَيْسَ مَلِكَ إِسْرَائِيلَ رَجَعُوا عَنْهُ. ٣٢ 32
ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳಿಗೆ ಗೊತ್ತಾದಾಗ, ಅವರು ಅವನನ್ನು ಬಿಟ್ಟುಹೋದರು.
وَإِنَّ رَجُلًا نَزَعَ فِي قَوْسِهِ غَيْرَ مُتَعَمِّدٍ وَضَرَبَ مَلِكَ إِسْرَائِيلَ بَيْنَ أَوْصَالِ ٱلدِّرْعِ، فَقَالَ لِمُدِيرِ ٱلْمَرْكَبَةِ: «رُدَّ يَدَكَ وَأَخْرِجْنِي مِنَ ٱلْجَيْشِ لِأَنِّي قَدْ جُرِحْتُ». ٣٣ 33
ಆದರೆ ಅರಾಮ್ಯರ ಸೈನಿಕನೊಬ್ಬನು ಗುರಿ ಇಡದೆ ಬಿಲ್ಲಿಗೆ ಬಾಣವನ್ನೇರಿಸಿ ಹೊಡೆಯಲು, ಅದು ಇಸ್ರಾಯೇಲಿನ ಅರಸನಿಗೆ, ಅವನ ಕವಚದ ಸಂದಿನಲ್ಲಿ ಬಂದು ತಾಕಿತು. ಆದ್ದರಿಂದ ಅವನು ತನ್ನ ರಥ ನಡೆಸುವವನಿಗೆ, “ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆಗೆ ತೆಗೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ,” ಎಂದನು.
وَٱشْتَدَّ ٱلْقِتَالُ فِي ذَلِكَ ٱلْيَوْمِ، وَأُوقِفَ مَلِكُ إِسْرَائِيلَ فِي ٱلْمَرْكَبَةِ مُقَابِلَ أَرَامَ إِلَى ٱلْمَسَاءِ، وَمَاتَ عِنْدَ غُرُوبِ ٱلشَّمْسِ. ٣٤ 34
ಆ ದಿವಸವೆಲ್ಲಾ ಯುದ್ಧವು ಬಹು ಘೋರವಾದದ್ದರಿಂದ ಇಸ್ರಾಯೇಲಿನ ಅರಸನಾದ ಅಹಾಬನು ಸಾಯಂಕಾಲದವರೆಗೂ ಅರಾಮ್ಯರಿಗೆ ಎದುರಾಗಿ ರಥದಲ್ಲಿಯೇ ಆತುಕೊಂಡು ನಿಂತಿದ್ದನು, ಸೂರ್ಯನು ಅಸ್ತಮಿಸಿದಾಗ ಅವನು ಮರಣಹೊಂದಿದನು.

< ٢ أخبار 18 >