< ٢ أخبار 24 >

كَانَ يُوآشُ ٱبْنَ سَبْعِ سِنِينَ حِينَ مَلَكَ، وَمَلَكَ أَرْبَعِينَ سَنَةً فِي أُورُشَلِيمَ، وَٱسْمُ أُمِّهِ ظَبْيَةُ مِنْ بِئْرِ سَبْعٍ. ١ 1
ಯೋವಾಷ್ ಅರಸನಾದಾಗ ಏಳು ವರ್ಷದವನಾಗಿದ್ದನು. ಯೆರೂಸಲೇಮಿನಲ್ಲಿ ನಾಲ್ವತ್ತು ವರ್ಷ ಆಳಿದನು, ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು.
وَعَمِلَ يُوآشُ ٱلْمُسْتَقِيمَ فِي عَيْنَيِ ٱلرَّبِّ كُلَّ أَيَّامِ يَهُويَادَاعَ ٱلْكَاهِنِ. ٢ 2
ಯೋವಾಷನು ಯಾಜಕನಾದ ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯೆಹೋವ ದೇವರ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.
وَٱتَّخَذَ يَهُويَادَاعُ لَهُ ٱمْرَأَتَيْنِ فَوَلَدَ بَنِينَ وَبَنَاتٍ. ٣ 3
ಯೆಹೋಯಾದಾವನು ಯೋವಾಷನಿಗೆ ಇಬ್ಬರು ಮಹಿಳೆಯರನ್ನು ಮದುವೆಮಾಡಿಕೊಟ್ಟನು. ಅವನು ಪುತ್ರಪುತ್ರಿಯರನ್ನು ಪಡೆದನು.
وَحَدَثَ بَعْدَ ذَلِكَ أَنَّهُ كَانَ فِي قَلْبِ يُوآشَ أَنْ يُجَدِّدَ بَيْتَ ٱلرَّبِّ. ٤ 4
ಕ್ರಮೇಣ ಯೋವಾಷನು ಯೆಹೋವ ದೇವರ ಆಲಯವನ್ನು ದುರಸ್ತು ಮಾಡುವ ಮನಸ್ಸುಳ್ಳವನಾದನು.
فَجَمَعَ ٱلْكَهَنَةَ وَٱللَّاوِيِّينَ وَقَالَ لَهُمُ: «ٱخْرُجُوا إِلَى مُدُنِ يَهُوذَا وَٱجْمَعُوا مِنْ جَمِيعِ إِسْرَائِيلَ فِضَّةً لِأَجْلِ تَرْمِيمِ بَيْتِ إِلَهِكُمْ مِنْ سَنَةٍ إِلَى سَنَةٍ، وَبَادِرُوا أَنْتُمْ إِلَى هَذَا ٱلْأَمْرِ». فَلَمْ يُبَادِرِ ٱللَّاوِيُّونَ. ٥ 5
ಆದ್ದರಿಂದ ಅವನು ಯಾಜಕರನ್ನೂ, ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆ, “ನೀವು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ ವರ್ಷ ವರ್ಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವುದಕ್ಕೆ ಸಮಸ್ತ ಇಸ್ರಾಯೇಲರಿಂದ ಹಣವನ್ನು ಕೂಡಿಸಿರಿ ಮತ್ತು ಕೆಲಸವನ್ನು ಶೀಘ್ರವಾಗಿ ನಡೆಸಿರಿ,” ಎಂದನು. ಆದರೂ ಲೇವಿಯರು ಅವಸರ ಮಾಡದೆ ಇದ್ದರು.
فَدَعَا ٱلْمَلِكُ يَهُويَادَاعَ ٱلرَّأْسَ وَقَالَ لَهُ: «لِمَاذَا لَمْ تَطْلُبْ مِنَ ٱللَّاوِيِّينَ أَنْ يَأْتُوا مِنْ يَهُوذَا وَأُورُشَلِيمَ بِجِزْيَةِ مُوسَى عَبْدِ ٱلرَّبِّ وَجَمَاعَةِ إِسْرَائِيلَ لِخَيْمَةِ ٱلشَّهَادَةِ؟ ٦ 6
ಅರಸನು ಮುಖ್ಯಯಾಜಕನಾದ ಯೆಹೋಯಾದಾವನನ್ನು ಕರೆಕಳುಹಿಸಿ ಅವನಿಗೆ, “ಯೆಹೋವ ದೇವರ ಸೇವಕನಾದ ಮೋಶೆಯೂ, ಇಸ್ರಾಯೇಲಿನ ಸಭೆಯೂ ದೇವದರ್ಶನ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆಯನ್ನು ಯೆಹೂದದಿಂದಲೂ, ಯೆರೂಸಲೇಮಿನಿಂದಲೂ ಬರುವಂತೆ ಮಾಡಲು ನೀನು ಲೇವಿಯರನ್ನು ಏಕೆ ವಿಚಾರಿಸಲಿಲ್ಲ?” ಎಂದನು.
لِأَنَّ بَنِي عَثَلْيَا ٱلْخَبِيثَةِ قَدْ هَدَمُوا بَيْتَ ٱللهِ، وَصَيَّرُوا كُلَّ أَقْدَاسِ بَيْتِ ٱلرَّبِّ لِلْبَعْلِيمِ». ٧ 7
ಆ ದುಷ್ಟ ಸ್ತ್ರೀಯಾದ ಅತಲ್ಯಳ ಪುತ್ರರು ಯೆಹೋವ ದೇವರ ಆಲಯವನ್ನು ಒಡೆದುಬಿಟ್ಟು, ಯೆಹೋವ ದೇವರ ಆಲಯಕ್ಕೆ ಪ್ರತಿಷ್ಠೆ ಮಾಡಿದವುಗಳನ್ನೆಲ್ಲಾ ಬಾಳನಿಗೆ ಕೊಟ್ಟುಬಿಟ್ಟಿದ್ದರು.
وَأَمَرَ ٱلْمَلِكُ فَعَمِلُوا صُنْدُوقًا وَجَعَلُوهُ فِي بَابِ بَيْتِ ٱلرَّبِّ خَارِجًا، ٨ 8
ಅರಸನು ಹೇಳಿದ್ದರಿಂದ ಅವರು ಒಂದು ಪೆಟ್ಟಿಗೆಯನ್ನು ಮಾಡಿ, ಯೆಹೋವ ದೇವರ ಆಲಯದ ಬಾಗಿಲಿನ ಹೊರಗೆ ಇಟ್ಟರು.
وَنَادَوْا فِي يَهُوذَا وَأُورُشَلِيمَ بِأَنْ يَأْتُوا إِلَى ٱلرَّبِّ بِجِزْيَةِ مُوسَى عَبْدِ ٱلرَّبِّ ٱلْمَفْرُوضَةِ عَلَى إِسْرَائِيلَ فِي ٱلْبَرِّيَّةِ. ٩ 9
ದೇವರ ಸೇವಕನಾದ ಮೋಶೆಯು ಮರುಭೂಮಿಯಲ್ಲಿ ಇಸ್ರಾಯೇಲರಿಗೆ ಆಜ್ಞಾಪಿಸಿದ ತೆರಿಗೆಯನ್ನು ಯೆಹೋವ ದೇವರಿಗೆ ತರಬೇಕೆಂದು ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಮಾಡಿದರು.
فَفَرِحَ كُلُّ ٱلرُّؤَسَاءِ وَكُلُّ ٱلشَّعْبِ وَأَدْخَلُوا وَأَلْقَوْا فِي ٱلصُّنْدُوقِ حَتَّى ٱمْتَلَأَ. ١٠ 10
ಆಗ ಪ್ರಧಾನರೆಲ್ಲರೂ ಸಂತೋಷಪಟ್ಟು, ತೆರಿಗೆಯನ್ನು ತೆಗೆದುಕೊಂಡು ಬಂದು, ತುಂಬುವವರೆಗೆ ಪೆಟ್ಟಿಗೆಯೊಳಗೆ ಹಾಕಿದರು.
وَحِينَمَا كَانَ يُؤْتَى بِٱلصُّنْدُوقِ إِلَى وَكَالَةِ ٱلْمَلِكِ بِيَدِ ٱللَّاوِيِّينَ، عِنْدَمَا يَرَوْنَ أَنَّ ٱلْفِضَّةَ قَدْ كَثُرَتْ، كَانَ يَأْتِي كَاتِبُ ٱلْمَلِكِ وَوَكِيلُ ٱلْكَاهِنِ ٱلرَّأْسِ وَيُفْرِغَانِ ٱلصُّنْدُوقَ، ثُمَّ يَحْمِلَانِهِ وَيَرُدَّانِهِ إِلَى مَكَانِهِ. هَكَذَا كَانُوا يَفْعَلُونَ يَوْمًا فَيَوْمًا، حَتَّى جَمَعُوا فِضَّةً بِكَثْرَةٍ. ١١ 11
ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಕಛೇರಿಗೆ ತಂದಾಗಲೆಲ್ಲಾ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ, ಅರಸನ ಕಾರ್ಯದರ್ಶಿಯೂ, ಮುಖ್ಯಯಾಜಕನ ಪರಿಚಾರಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ, ತೆಗೆದುಕೊಂಡು ತಿರುಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು.
وَدَفَعَهَا ٱلْمَلِكُ وَيَهُويَادَاعُ لِعَامِلِي شُغْلِ خِدْمَةِ بَيْتِ ٱلرَّبِّ، وَكَانُوا يَسْتَأْجِرُونَ نَحَّاتِينَ وَنَجَّارِينَ لِتَجْدِيدِ بَيْتِ ٱلرَّبِّ، وَلِلْعَامِلِينَ فِي ٱلْحَدِيدِ وَٱلنُّحَاسِ أَيْضًا لِتَرْمِيمِ بَيْتِ ٱلرَّبِّ. ١٢ 12
ಆಗ ಅರಸನೂ, ಯೆಹೋಯಾದಾವನೂ ಅದನ್ನು ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನು ಮಾಡುವವರಿಗೆ ಕೊಟ್ಟು ಅವರಿಂದ ಕೆಲಸ ಮಾಡಿಸಿದರು. ಯೆಹೋವ ದೇವರ ಆಲಯವನ್ನು ದುರಸ್ತಿಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ, ಬಡಗಿಯವರನ್ನೂ ಕೂಲಿಗೆ ಕರೆದುಕೊಂಡರು. ಯೆಹೋವ ದೇವರ ಆಲಯವನ್ನು ಭದ್ರ ಮಾಡುವ ನಿಮಿತ್ತ ಕಬ್ಬಿಣ, ಕಂಚಿನ ಕೆಲಸ ಮಾಡುವವರನ್ನು ಕೂಲಿಗೆ ಕರೆದುಕೊಂಡರು.
فَعَمِلَ عَامِلُو ٱلشُّغْلِ وَنَجَحَ ٱلْعَمَلُ بِأَيْدِيهِمْ، وَأَقَامُوا بَيْتَ ٱللهِ عَلَى رَسْمِهِ وَثَبَّتُوهُ. ١٣ 13
ಹೀಗೆ ಕೆಲಸದವರು ಕೆಲಸವನ್ನು ನಡೆಸಿದ್ದರಿಂದ, ಕೆಲಸವು ಅವರ ಕೈಯಿಂದ ಪೂರ್ಣವಾಯಿತು. ಅವರು ಯೆಹೋವ ದೇವರ ಆಲಯವನ್ನು ಮೊದಲಿದ್ದ ಸ್ಥಿತಿಗೆ ಅದನ್ನು ತಂದು ಭದ್ರಪಡಿಸಿದರು.
وَلَمَّا أَكْمَلُوا أَتَوْا إِلَى مَا بَيْنَ يَدَيِ ٱلْمَلِكِ وَيَهُويَادَاعَ بِبَقِيَّةِ ٱلْفِضَّةِ وَعَمِلُوهَا آنِيَةً لِبَيْتِ ٱلرَّبِّ، آنِيَةَ خِدْمَةٍ وَإِصْعَادٍ وَصُحُونًا وَآنِيَةَ ذَهَبٍ وَفِضَّةٍ. وَكَانُوا يُصْعِدُونَ مُحْرَقَاتٍ فِي بَيْتِ ٱلرَّبِّ دَائِمًا كُلَّ أَيَّامِ يَهُويَادَاعَ. ١٤ 14
ಕೆಲಸ ಮುಗಿಸಿದ ಮೇಲೆ, ಮಿಕ್ಕ ಅರಸನ ಮುಂದೆಯೂ ಯೆಹೋಯಾದಾವನ ಮುಂದೆಯೂ ತಂದರು. ಅದರಿಂದ ಯೆಹೋವ ದೇವರ ಆಲಯಕ್ಕೋಸ್ಕರ ಬಂಗಾರ ಬೆಳ್ಳಿ ಪಾತ್ರೆಗಳಾದ ಸೇವೆಯ ಪಾತ್ರೆಗಳು, ಅರ್ಪಣೆಯ ಪಾತ್ರೆಗಳು, ಸೌಟುಗಳು ಮಾಡಲಾಗಿದ್ದವು. ಯೆಹೋಯಾದಾವನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಯೆಹೋವ ದೇವರ ಆಲಯದಲ್ಲಿ ದಹನಬಲಿಗಳನ್ನು ಅರ್ಪಿಸಿದರು.
وَشَاخَ يَهُويَادَاعُ وَشَبِعَ مِنَ ٱلْأَيَّامِ وَمَاتَ. كَانَ ٱبْنَ مِئَةٍ وَثَلَاثِينَ سَنَةً عِنْدَ وَفَاتِهِ. ١٥ 15
ಯೆಹೋಯಾದಾವನು ವೃದ್ಧನಾಗಿ ಮರಣಹೊಂದಿದನು. ಅವನು ಸಾಯುವಾಗ ನೂರಾಮೂವತ್ತು ವರ್ಷಗಳುಳ್ಳವನಾಗಿದ್ದನು.
فَدَفَنُوهُ فِي مَدِينَةِ دَاوُدَ مَعَ ٱلْمُلُوكِ لِأَنَّهُ عَمِلَ خَيْرًا فِي إِسْرَائِيلَ وَمَعَ ٱللهِ وَبَيْتِهِ. ١٦ 16
ಅವನು ದೇವರಿಗೋಸ್ಕರವಾಗಿಯೂ, ಆತನ ಆಲಯಕ್ಕೋಸ್ಕರವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೆಯದನ್ನು ಮಾಡಿದ್ದರಿಂದ, ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅರಸರ ಬಳಿಯಲ್ಲಿ ಹೂಳಿಟ್ಟರು.
وَبَعْدَ مَوْتِ يَهُويَادَاعَ جَاءَ رُؤَسَاءُ يَهُوذَا وَسَجَدُوا لِلْمَلِكِ. حِينَئِذٍ سَمِعَ ٱلْمَلِكُ لَهُمْ. ١٧ 17
ಯೆಹೋಯಾದಾವನ ಮರಣದ ತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.
وَتَرَكُوا بَيْتَ ٱلرَّبِّ إِلَهِ آبَائِهِمْ وَعَبَدُوا ٱلسَّوَارِيَ وَٱلْأَصْنَامَ، فَكَانَ غَضَبٌ عَلَى يَهُوذَا وَأُورُشَلِيمَ لِأَجْلِ إِثْمِهِمْ هَذَا. ١٨ 18
ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಆಲಯವನ್ನು ಬಿಟ್ಟು, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ದೇವರ ಕೋಪಾಗ್ನಿಯು ಬಂತು.
وَأَرْسَلَ إِلَيْهِمْ أَنْبِيَاءَ لِإِرْجَاعِهِمْ إِلَى ٱلرَّبِّ، وَأَشْهَدُوا عَلَيْهِمْ فَلَمْ يُصْغُوا. ١٩ 19
ಆದರೂ ಯೆಹೋವ ದೇವರು ತನ್ನ ಕಡೆಗೆ ಅವರನ್ನು ತಿರುಗಿಸುವುದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು. ಇವರು ಅವರಿಗೆ ಸಾಕ್ಷಿಗಾಗಿ ಮಾತನಾಡಿದರು. ಆದರೂ ಅವರು ಕಿವಿಗೊಡದೆ ಹೋದರು.
وَلَبِسَ رُوحُ ٱللهِ زَكَرِيَّا بْنَ يَهُويَادَاعَ ٱلْكَاهِنَ فَوَقَفَ فَوْقَ ٱلشَّعْبِ وَقَالَ لَهُمْ: «هَكَذَا يَقُولُ ٱللهُ: لِمَاذَا تَتَعَدَّوْنَ وَصَايَا ٱلرَّبِّ فَلَا تُفْلِحُونَ؟ لِأَنَّكُمْ تَرَكْتُمُ ٱلرَّبَّ قَدْ تَرَكَكُمْ». ٢٠ 20
ಆಗ ದೇವರ ಆತ್ಮ ಯಾಜಕ ಯೆಹೋಯಾದಾವನ ಮಗನಾದ ಜೆಕರ್ಯನ ಮೇಲೆ ಬಂದು, ಅವನು ಜನರ ಮುಂದೆ ನಿಂತು ಅವರಿಗೆ, “ನೀವು ವೃದ್ಧಿ ಹೊಂದಕೂಡದ ಹಾಗೆ ಯೆಹೋವ ದೇವರ ಆಜ್ಞೆಗಳನ್ನು ಮೀರುವುದೇನು? ನಿಮಗೆ ಶುಭವಾಗುವುದಿಲ್ಲ. ನೀವು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ದೇವರು ಸಹ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.
فَفَتَنُوا عَلَيْهِ وَرَجَمُوهُ بِحِجَارَةٍ بِأَمْرِ ٱلْمَلِكِ فِي دَارِ بَيْتِ ٱلرَّبِّ. ٢١ 21
ಆದ್ದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಯೆಹೋವ ದೇವರ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
وَلَمْ يَذْكُرْ يُوآشُ ٱلْمَلِكُ ٱلْمَعْرُوفَ ٱلَّذِي عَمِلَهُ يَهُويَادَاعُ أَبُوهُ مَعَهُ، بَلْ قَتَلَ ٱبْنَهُ. وَعِنْدَ مَوْتِهِ قَالَ: «ٱلرَّبُّ يَنْظُرُ وَيُطَالِبُ». ٢٢ 22
ಹಾಗೆಯೇ ಅರಸನಾದ ಯೋವಾಷನು, ಇವನ ತಂದೆಯಾದ ಯೆಹೋಯಾದಾವನು ತನಗೆ ತೋರಿಸಿದ ದಯೆಯನ್ನು ಜ್ಞಾಪಕಮಾಡದೆ ಅವನ ಮಗನನ್ನು ಕೊಂದುಹಾಕಿದನು. ಜೆಕರ್ಯನು ಸಾಯುವಾಗ, “ಯೆಹೋವ ದೇವರು ನೋಡಿ ವಿಚಾರಿಸಲಿ,” ಎಂದು ಹೇಳಿದನು.
وَفِي مَدَارِ ٱلسَّنَةِ صَعِدَ عَلَيْهِ جَيْشُ أَرَامَ وَأَتَوْا إِلَى يَهُوذَا وَأُورُشَلِيمَ وَأَهْلَكُوا كُلَّ رُؤَسَاءِ ٱلشَّعْبِ مِنَ ٱلشَّعْبِ، وَجَمِيعَ غَنِيمَتِهِمْ أَرْسَلُوهَا إِلَى مَلِكِ دِمَشْقَ. ٢٣ 23
ವರ್ಷಾಂತ್ಯದಲ್ಲಿ ಅರಾಮಿನ ಸೈನ್ಯದವರು ಅವನಿಗೆ ವಿರೋಧವಾಗಿ ಹೊರಟು, ಯೆಹೂದ ಮತ್ತು ಯೆರೂಸಲೇಮಿಗೆ ಬಂದು, ಜನರ ಪ್ರಧಾನರನ್ನು ಅವರೊಳಗಿಂದ ನಾಶಮಾಡಿ, ಅವರಿಂದ ತೆಗೆದುಕೊಂಡ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.
لِأَنَّ جَيْشَ أَرَامَ جَاءَ بِشِرْذِمَةٍ قَلِيلَةٍ، وَدَفَعَ ٱلرَّبُّ لِيَدِهِمْ جَيْشًا كَثِيرًا جِدًّا لِأَنَّهُمْ تَرَكُوا ٱلرَّبَّ إِلَهَ آبَائِهِمْ. فَأَجْرَوْا قَضَاءً عَلَى يُوآشَ. ٢٤ 24
ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ ಅರಾಮ್ಯರು ಚಿಕ್ಕ ಗುಂಪಿನ ಸೈನ್ಯದ ಸಂಗಡ ಬಂದಿದ್ದರೂ, ಯೆಹೋವ ದೇವರು ಅವರ ಮಹಾ ಸೈನ್ಯವನ್ನು ಶತ್ರುಗಳ ಕೈಯಲ್ಲಿ ಒಪ್ಪಿಸಿದನು. ಹೀಗೆಯೇ ಯೆಹೋವ ದೇವರು ಯೋವಾಷನಿಗೆ ವಿರೋಧವಾಗಿ ತೀರ್ಪು ಮಾಡಿದರು.
وَعِنْدَ ذَهَابِهِمْ عَنْهُ، لِأَنَّهُمْ تَرَكُوهُ بِأَمْرَاضٍ كَثِيرَةٍ، فَتَنَ عَلَيْهِ عَبِيدُهُ مِنْ أَجْلِ دِمَاءِ بَنِي يَهُويَادَاعَ ٱلْكَاهِنِ، وَقَتَلُوهُ عَلَى سَرِيرِهِ فَمَاتَ. فَدَفَنُوهُ فِي مَدِينَةِ دَاوُدَ، وَلَمْ يَدْفِنُوهُ فِي قُبُورِ ٱلْمُلُوكِ. ٢٥ 25
ಯೋವಾಷನು ತೀವ್ರ ಗಾಯಗೊಂಡು ಬಿದ್ದಿರುವಾಗ, ಅರಾಮೀಯರು ಅವನನ್ನು ಬಿಟ್ಟುಹೋದರು. ಅವರು ಹೋದ ತರುವಾಯ ಯಾಜಕನಾದ ಯೆಹೋಯಾದಾವನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಯೋವಾಷನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಅವನ ಮಂಚದ ಮೇಲೆಯೇ ಅವನನ್ನು ಕೊಂದುಹಾಕಿದರು. ಅವರು ಯೋವಾಷನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಯಲ್ಲಿ ಅವನನ್ನು ಸಮಾಧಿಮಾಡಲಿಲ್ಲ.
وَهَذَانِ هُمَا ٱلْفَاتِنَانِ عَلَيْهِ: زَابَادُ بْنُ شِمْعَةَ ٱلْعَمُّونِيَّةِ، وَيَهُوزَابَادُ بْنُ شِمْرِيتَ ٱلْمُوآبِيَّةِ. ٢٦ 26
ಯೋವಾಷನಿಗೆ ವಿರೋಧವಾಗಿ ಒಳಸಂಚು ಮಾಡಿದವರು ಯಾರೆಂದರೆ, ಅಮ್ಮೋನ್ ದೇಶದ ಶಿಮೆಯಾತ್ ಎಂಬಾಕೆಯ ಮಗ ಜಾಬಾದ್; ಮೋವಾಬ್ ದೇಶದ ಶಿಮ್ರೀತ್ ಎಂಬಾಕೆಯ ಮಗ ಯೆಹೋಜಾಬಾದನು.
وَأَمَّا بَنُوهُ وَكَثْرَةُ مَا حُمِلَ عَلَيْهِ وَمَرَمَّةُ بَيْتِ ٱللهِ، هَا هِيَ مَكْتُوبَةٌ فِي مِدْرَسِ سِفْرِ ٱلْمُلُوكِ. وَمَلَكَ أَمَصْيَا ٱبْنُهُ عِوَضًا عَنْهُ ٢٧ 27
ಆದರೆ ಅವನ ಪುತ್ರನನ್ನು ಕುರಿತೂ, ಅವನ ವಿರುದ್ಧ ನುಡಿದ ಪ್ರವಾದನೆಯ ಕುರಿತೂ, ದೇವರ ಆಲಯ ದುರಸ್ತು ಮಾಡುವುದನ್ನು ಕುರಿತೂ, ಅರಸರ ಚರಿತ್ರೆಯ ಪುಸ್ತಕದಲ್ಲಿ ಬರೆದಿರುತ್ತವೆ. ಅವನ ಮಗ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.

< ٢ أخبار 24 >