< أعمال 13 >
وَكَانَ فِي أَنْطَاكِيَةَ فِي ٱلْكَنِيسَةِ هُنَاكَ أَنْبِيَاءُ وَمُعَلِّمُونَ: بَرْنَابَا، وَسِمْعَانُ ٱلَّذِي يُدْعَى نِيجَرَ، وَلُوكِيُوسُ ٱلْقَيْرَوَانِيُّ، وَمَنَايِنُ ٱلَّذِي تَرَبَّى مَعَ هِيرُودُسَ رَئِيسِ ٱلرُّبْعِ، وَشَاوُلُ. | ١ 1 |
೧ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.
وَبَيْنَمَا هُمْ يَخْدِمُونَ ٱلرَّبَّ وَيَصُومُونَ، قَالَ ٱلرُّوحُ ٱلْقُدُسُ: «أَفْرِزُوا لِي بَرْنَابَا وَشَاوُلَ لِلْعَمَلِ ٱلَّذِي دَعَوْتُهُمَا إِلَيْهِ». | ٢ 2 |
೨ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.
فَصَامُوا حِينَئِذٍ وَصَلُّوا وَوَضَعُوا عَلَيْهِمَا ٱلْأَيَادِيَ، ثُمَّ أَطْلَقُوهُمَا. | ٣ 3 |
೩ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು.
فَهَذَانِ إِذْ أُرْسِلَا مِنَ ٱلرُّوحِ ٱلْقُدُسِ ٱنْحَدَرَا إِلَى سَلُوكِيَةَ، وَمِنْ هُنَاكَ سَافَرَا فِي ٱلْبَحْرِ إِلَى قُبْرُسَ. | ٤ 4 |
೪ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.
وَلَمَّا صَارَا فِي سَلَامِيسَ نَادَيَا بِكَلِمَةِ ٱللهِ فِي مَجَامِعِ ٱلْيَهُودِ. وَكَانَ مَعَهُمَا يُوحَنَّا خَادِمًا. | ٥ 5 |
೫ಸಲಮೀಸ್ ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು.
وَلَمَّا ٱجْتَازَا ٱلْجَزِيرَةَ إِلَى بَافُوسَ، وَجَدَا رَجُلًا سَاحِرًا نَبِيًّا كَذَّابًا يَهُودِيًّا ٱسْمُهُ بَارْيَشُوعُ، | ٦ 6 |
೬ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು.
كَانَ مَعَ ٱلْوَالِي سَرْجِيُوسَ بُولُسَ، وَهُوَ رَجُلٌ فَهِيمٌ. فَهَذَا دَعَا بَرْنَابَا وَشَاوُلَ وَٱلْتَمَسَ أَنْ يَسْمَعَ كَلِمَةَ ٱللهِ. | ٧ 7 |
೭ಅವನು ರಾಜ್ಯ ಪಾಲನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಜೊತೆಯಲ್ಲಿದ್ದನು. ಆ ಅಧಿಪತಿಯು ಬುದ್ಧಿವಂತನಾಗಿದ್ದು, ಬಾರ್ನಬ ಮತ್ತು ಸೌಲನನ್ನು ತನ್ನ ಬಳಿಗೆ ಕರೆಸಿ ದೇವರ ವಾಕ್ಯವನ್ನು ಕೇಳುವುದಕ್ಕೆ ಅಪೇಕ್ಷೆ ಪಟ್ಟನು.
فَقَاوَمَهُمَا عَلِيمٌ ٱلسَّاحِرُ، لِأَنْ هَكَذَا يُتَرْجَمُ ٱسْمُهُ، طَالِبًا أَنْ يُفْسِدَ ٱلْوَالِيَ عَنِ ٱلْإِيمَانِ. | ٨ 8 |
೮ಆದರೆ ಆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು.
وَأَمَّا شَاوُلُ، ٱلَّذِي هُوَ بُولُسُ أَيْضًا، فَٱمْتَلَأَ مِنَ ٱلرُّوحِ ٱلْقُدُسِ وَشَخَصَ إِلَيْهِ | ٩ 9 |
೯ಆಗ ಪೌಲನೆನಿಸಿಕೊಳ್ಳುವ ಸೌಲನು ಪವಿತ್ರಾತ್ಮಭರಿತನಾಗಿ,
وَقَالَ: «أَيُّهَا ٱلْمُمْتَلِئُ كُلَّ غِشٍّ وَكُلَّ خُبْثٍ! يَا ٱبْنَ إِبْلِيسَ! يَاعَدُوَّ كُلِّ بِرٍّ! أَلَا تَزَالُ تُفْسِدُ سُبُلَ ٱللهِ ٱلْمُسْتَقِيمَةَ؟ | ١٠ 10 |
೧೦ಅವನನ್ನು ದೃಷ್ಟಿಸಿನೋಡಿ; “ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ?
فَٱلْآنَ هُوَذَا يَدُ ٱلرَّبِّ عَلَيْكَ، فَتَكُونُ أَعْمَى لَا تُبْصِرُ ٱلشَّمْسَ إِلَى حِينٍ». فَفِي ٱلْحَالِ سَقَطَ عَلَيْهِ ضَبَابٌ وَظُلْمَةٌ، فَجَعَلَ يَدُورُ مُلْتَمِسًا مَنْ يَقُودُهُ بِيَدِهِ. | ١١ 11 |
೧೧ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ” ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು.
فَٱلْوَالِي حِينَئِذٍ لَمَّا رَأَى مَا جَرَى، آمَنَ مُنْدَهِشًا مِنْ تَعْلِيمِ ٱلرَّبِّ. | ١٢ 12 |
೧೨ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.
ثُمَّ أَقْلَعَ مِنْ بَافُوسَ بُولُسُ وَمَنْ مَعَهُ وَأَتَوْا إِلَى بَرْجَةِ بَمْفِيلِيَّةَ. وَأَمَّا يُوحَنَّا فَفَارَقَهُمْ وَرَجَعَ إِلَى أُورُشَلِيمَ. | ١٣ 13 |
೧೩ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆ ಪಟ್ಟಣಕ್ಕೆ ಬಂದರು; ಮಾರ್ಕನೆಂಬ ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು.
وَأَمَّا هُمْ فَجَازُوا مِنْ بَرْجَةَ وَأَتَوْا إِلَى أَنْطَاكِيَةِ بِيسِيدِيَّةَ، وَدَخَلُوا ٱلْمَجْمَعَ يَوْمَ ٱلسَّبْتِ وَجَلَسُوا. | ١٤ 14 |
೧೪ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.
وَبَعْدَ قِرَاءَةِ ٱلنَّامُوسِ وَٱلْأَنْبِيَاءِ، أَرْسَلَ إِلَيْهِمْ رُؤَسَاءُ ٱلْمَجْمَعِ قَائِلِينَ: «أَيُّهَا ٱلرِّجَالُ ٱلْإِخْوَةُ، إِنْ كَانَتْ عِنْدَكُمْ كَلِمَةُ وَعْظٍ لِلشَّعْبِ فَقُولُوا». | ١٥ 15 |
೧೫ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.
فَقَامَ بُولُسُ وَأَشَارَ بِيَدِهِ وَقَالَ: «أَيُّهَا ٱلرِّجَالُ ٱلْإِسْرَائِيلِيُّونَ وَٱلَّذِينَ يَتَّقُونَ ٱللهَ، ٱسْمَعُوا! | ١٦ 16 |
೧೬ಆಗ ಪೌಲನು ಎದ್ದು ಕೈಸನ್ನೆ ಮಾಡಿ ಹೇಳಿದ್ದೇನಂದರೆ;
إِلَهُ شَعْبِ إِسْرَائِيلَ هَذَا ٱخْتَارَ آبَاءَنَا، وَرَفَعَ ٱلشَّعْبَ فِي ٱلْغُرْبَةِ فِي أَرْضِ مِصْرَ، وَبِذِرَاعٍ مُرْتَفِعَةٍ أَخْرَجَهُمْ مِنْهَا. | ١٧ 17 |
೧೭“ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪೂರ್ವಿಕರು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ಆ ದೇಶದಿಂದ ಬರಮಾಡಿದನು.
وَنَحْوَ مُدَّةِ أَرْبَعِينَ سَنَةً، ٱحْتَمَلَ عَوَائِدَهُمْ فِي ٱلْبَرِّيَّةِ. | ١٨ 18 |
೧೮ಆತನು ಸುಮಾರು ನಲವತ್ತು ವರ್ಷಗಳವರೆಗೂ ಅಡವಿಯಲ್ಲಿ ಅವರ ನಡವಳಿಕೆಯನ್ನು ಸಹಿಸಿಕೊಂಡು,
ثُمَّ أَهْلَكَ سَبْعَ أُمَمٍ فِي أَرْضِ كَنْعَانَ وَقَسَمَ لَهُمْ أَرْضَهُمْ بِٱلْقُرْعَةِ. | ١٩ 19 |
೧೯ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟನು.
وَبَعْدَ ذَلِكَ فِي نَحْوِ أَرْبَعَمِئَةٍ وَخَمْسِينَ سَنَةً أَعْطَاهُمْ قُضَاةً حَتَّى صَمُوئِيلَ ٱلنَّبِيِّ. | ٢٠ 20 |
೨೦ಇಷ್ಟರೊಳಗೆ ಸುಮಾರು ನಾನೂರೈವತ್ತು ವರ್ಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದ ವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು.
وَمِنْ ثَمَّ طَلَبُوا مَلِكًا، فَأَعْطَاهُمُ ٱللهُ شَاوُلَ بْنَ قَيْسٍ، رَجُلًا مِنْ سِبْطِ بِنْيَامِينَ، أَرْبَعِينَ سَنَةً. | ٢١ 21 |
೨೧ತರುವಾಯ ಅವರು ತಮಗೆ ಅರಸನು ಬೇಕೆಂದು ಕೇಳಿಕೊಳ್ಳಲು, ದೇವರು ಅವರಿಗೆ ಬೆನ್ಯಾಮೀನನ ಕುಲದ ಕೀಷನ ಮಗನಾದ ಸೌಲನನ್ನು ರಾಜನನ್ನಾಗಿ ಕೊಟ್ಟನು. ಅವನು ಅವರನ್ನು ನಲವತ್ತು ವರ್ಷ ಆಳಿದನು.
ثُمَّ عَزَلَهُ وَأَقَامَ لَهُمْ دَاوُدَ مَلِكًا، ٱلَّذِي شَهِدَ لَهُ أَيْضًا، إِذْ قَالَ: وَجَدْتُ دَاوُدَ بْنَ يَسَّى رَجُلًا حَسَبَ قَلْبِي، ٱلَّذِي سَيَصْنَعُ كُلَّ مَشِيئَتِي. | ٢٢ 22 |
೨೨ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; ‘ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು’ ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು.
مِنْ نَسْلِ هَذَا، حَسَبَ ٱلْوَعْدِ، أَقَامَ ٱللهُ لإِسْرَائِيلَ مُخَلِّصًا، يَسُوعَ. | ٢٣ 23 |
೨೩“ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ.
إِذْ سَبَقَ يُوحَنَّا فَكَرَزَ قَبْلَ مَجِيئِهِ بِمَعْمُودِيَّةِ ٱلتَّوْبَةِ لِجَمِيعِ شَعْبِ إِسْرَائِيلَ. | ٢٤ 24 |
೨೪ಆ ರಕ್ಷಕನೇ ಯೇಸು, ಆತನ ಆಗಮನಕ್ಕೆ ಮೊದಲು ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ, ನೀವು ದೇವರ ಕಡೆಗೆ ತಿರುಗಿಕೊಂಡು ಪಶ್ಚಾತ್ತಾಪದ ದೀಕ್ಷಾಸ್ನಾನಮಾಡಿಸಿಕೊಳ್ಳಬೇಕೆಂದು ಸಾರಿದನು.
وَلَمَّا صَارَ يُوحَنَّا يُكَمِّلُ سَعْيَهُ جَعَلَ يَقُولُ: مَنْ تَظُنُّونَ أَنِّي أَنَا؟ لَسْتُ أَنَا إِيَّاهُ، لَكِنْ هُوَذَا يَأْتِي بَعْدِي ٱلَّذِي لَسْتُ مُسْتَحِقًّا أَنْ أَحُلَّ حِذَاءَ قَدَمَيْهِ. | ٢٥ 25 |
೨೫ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ; ‘ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದರಕ್ಷೆಯನ್ನು ಬಿಚ್ಚುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.
«أَيُّهَا ٱلرِّجَالُ ٱلْإِخْوَةُ بَنِي جِنْسِ إِبْرَاهِيمَ، وَٱلَّذِينَ بَيْنَكُمْ يَتَّقُونَ ٱللهَ، إِلَيْكُمْ أُرْسِلَتْ كَلِمَةُ هَذَا ٱلْخَلَاصِ. | ٢٦ 26 |
೨೬“ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.
لِأَنَّ ٱلسَّاكِنِينَ فِي أُورُشَلِيمَ وَرُؤَسَاءَهُمْ لَمْ يَعْرِفُوا هَذَا. وَأَقْوَالُ ٱلْأَنْبِيَاءِ ٱلَّتِي تُقْرَأُ كُلَّ سَبْتٍ تَمَّمُوهَا، إِذْ حَكَمُوا عَلَيْهِ. | ٢٧ 27 |
೨೭ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.
وَمَعْ أَنَّهُمْ لَمْ يَجِدُوا عِلَّةً وَاحِدَةً لِلْمَوْتِ طَلَبُوا مِنْ بِيلَاطُسَ أَنْ يُقْتَلَ. | ٢٨ 28 |
೨೮ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ, ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
وَلَمَّا تَمَّمُوا كُلَّ مَا كُتِبَ عَنْهُ، أَنْزَلُوهُ عَنِ ٱلْخَشَبَةِ وَوَضَعُوهُ فِي قَبْرٍ. | ٢٩ 29 |
೨೯ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವುದೆಲ್ಲಾ ನೆರವೇರಿಸಿದ ಮೇಲೆ, ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
وَلَكِنَّ ٱللهَ أَقَامَهُ مِنَ ٱلْأَمْوَاتِ. | ٣٠ 30 |
೩೦“ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.
وَظَهَرَ أَيَّامًا كَثِيرَةً لِلَّذِينَ صَعِدُوا مَعَهُ مِنَ ٱلْجَلِيلِ إِلَى أُورُشَلِيمَ، ٱلَّذِينَ هُمْ شُهُودُهُ عِنْدَ ٱلشَّعْبِ. | ٣١ 31 |
೩೧ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
وَنَحْنُ نُبَشِّرُكُمْ بِٱلْمَوْعِدِ ٱلَّذِي صَارَ لِآبَائِنَا، | ٣٢ 32 |
೩೨“ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ;
إِنَّ ٱللهَ قَدْ أَكْمَلَ هَذَا لَنَا نَحْنُ أَوْلَادَهُمْ، إِذْ أَقَامَ يَسُوعَ كَمَا هُوَ مَكْتُوبٌ أَيْضًا فِي ٱلْمَزْمُورِ ٱلثَّانِي: أَنْتَ ٱبْنِي، أَنَا ٱلْيَوْمَ وَلَدْتُكَ. | ٣٣ 33 |
೩೩‘ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ’ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.
إِنَّهُ أَقَامَهُ مِنَ ٱلْأَمْوَاتِ، غَيْرَ عَتِيدٍ أَنْ يَعُودَ أَيْضًا إِلَى فَسَادٍ، فَهَكَذَا قَالَ: إِنِّي سَأُعْطِيكُمْ مَرَاحِمَ دَاوُدَ ٱلصَّادِقَةَ. | ٣٤ 34 |
೩೪“ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬುದರ ಕುರಿತು ದೇವರು ಹೇಳಿರುವುದು ಏನೆಂದರೆ; ‘ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೂ ಕೊಡುತ್ತೇನೆ, ಅವು ನಂಬತಕ್ಕವುಗಳೇ’ ಎಂಬುದೆ.
وَلِذَلِكَ قَالَ أَيْضًا فِي مَزْمُورٍ آخَرَ: لَنْ تَدَعَ قُدُّوسَكَ يَرَى فَسَادًا. | ٣٥ 35 |
೩೫ಅದಕ್ಕೆ ಅನುಸಾರವಾಗಿ ಆತನು; ‘ನೀನು ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವುದಿಲ್ಲವೆಂದು’ ಬೇರೊಂದು ಕೀರ್ತನೆಯಲ್ಲಿ ಹೇಳಿದ್ದಾನೆ.
لِأَنَّ دَاوُدَ بَعْدَ مَا خَدَمَ جِيلَهُ بِمَشُورَةِ ٱللهِ، رَقَدَ وَٱنْضَمَّ إِلَى آبَائِهِ، وَرَأَى فَسَادًا. | ٣٦ 36 |
೩೬“ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.
وَأَمَّا ٱلَّذِي أَقَامَهُ ٱللهُ فَلَمْ يَرَ فَسَادًا. | ٣٧ 37 |
೩೭ಆದರೆ ದೇವರು ಮರಣದಿಂದ ಎಬ್ಬಿಸಿದ ಯೇಸುವು ಕೊಳೆಯುವ ಅವಸ್ಥೆಯನ್ನು ಅನುಭವಿಸಲಿಲ್ಲ.
فَلْيَكُنْ مَعْلُومًا عِنْدَكُمْ أَيُّهَا ٱلرِّجَالُ ٱلْإِخْوَةُ، أَنَّهُ بِهَذَا يُنَادَى لَكُمْ بِغُفْرَانِ ٱلْخَطَايَا، | ٣٨ 38 |
೩೮“ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.
وَبِهَذَا يَتَبَرَّرُ كُلُّ مَنْ يُؤْمِنُ مِنْ كُلِّ مَا لَمْ تَقْدِرُوا أَنْ تَتَبَرَّرُوا مِنْهُ بِنَامُوسِ مُوسَى. | ٣٩ 39 |
೩೯ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ.
فَٱنْظُرُوا لِئَلَّا يَأْتِيَ عَلَيْكُمْ مَا قِيلَ فِي ٱلْأَنْبِيَاءِ: | ٤٠ 40 |
೪೦ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವುದು ನಿಮಗೆ ಸಂಭವಿಸದಂತೆ ನೋಡಿಕೊಳ್ಳಿರಿ. ಆದೇನಂದರೆ;
اُنْظُرُوا أَيُّهَا ٱلْمُتَهَاوِنُونَ، وَتَعَجَّبُوا وَٱهْلِكُوا! لِأَنَّنِي عَمَلًا أَعْمَلُ فِي أَيَّامِكُمْ. عَمَلًا لَا تُصَدِّقُونَ إِنْ أَخْبَرَكُمْ أَحَدٌ بِهِ». | ٤١ 41 |
೪೧“‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.
وَبَعْدَمَا خَرَجَ ٱلْيَهُودُ مِنَ ٱلْمَجْمَعِ جَعَلَ ٱلْأُمَمُ يَطْلُبُونَ إِلَيْهِمَا أَنْ يُكَلِّمَاهُمْ بِهَذَا ٱلْكَلَامِ فِي ٱلسَّبْتِ ٱلْقَادِمِ. | ٤٢ 42 |
೪೨ಪೌಲನೂ, ಬಾರ್ನಬನೂ ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು.
وَلَمَّا ٱنْفَضَّتِ ٱلْجَمَاعَةُ، تَبِعَ كَثِيرُونَ مِنَ ٱلْيَهُودِ وَٱلدُّخَلَاءِ ٱلْمُتَعَبِّدِينَ بُولُسَ وَبَرْنَابَا، ٱللَّذَيْنِ كَانَا يُكَلِّمَانِهِمْ وَيُقْنِعَانِهِمْ أَنْ يَثْبُتُوا فِي نِعْمَةِ ٱللهِ. | ٤٣ 43 |
೪೩ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿ, ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಬಿಗಳಲ್ಲಿ ಅನೇಕರು ಪೌಲ ಮತ್ತು ಬಾರ್ನಬನನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
وَفِي ٱلسَّبْتِ ٱلتَّالِي ٱجْتَمَعَتْ كُلُّ ٱلْمَدِينَةِ تَقْرِيبًا لِتَسْمَعَ كَلِمَةَ ٱللهِ. | ٤٤ 44 |
೪೪ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚುಕಡಿಮೆ ಇಡೀ ಊರಿನವರು ದೇವರ ವಾಕ್ಯವನ್ನು ಕೇಳುವುದಕ್ಕೆ ಸೇರಿಬಂದರು.
فَلَمَّا رَأَى ٱلْيَهُودُ ٱلْجُمُوعَ ٱمْتَلَأُوا غَيْرَةً، وَجَعَلُوا يُقَاوِمُونَ مَا قَالَهُ بُولُسُ مُنَاقِضِينَ وَمُجَدِّفِينَ. | ٤٥ 45 |
೪೫ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.
فَجَاهَرَ بُولُسُ وَبَرْنَابَا وَقَالَا: «كَانَ يَجِبُ أَنْ تُكَلَّمُوا أَنْتُمْ أَوَّلًا بِكَلِمَةِ ٱللهِ، وَلَكِنْ إِذْ دَفَعْتُمُوهَا عَنْكُمْ، وَحَكَمْتُمْ أَنَّكُمْ غَيْرُ مُسْتَحِقِّينَ لِلْحَيَاةِ ٱلْأَبَدِيَّةِ، هُوَذَا نَتَوَجَّهُ إِلَى ٱلْأُمَمِ. (aiōnios ) | ٤٦ 46 |
೪೬ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ. (aiōnios )
لِأَنْ هَكَذَا أَوْصَانَا ٱلرَّبُّ: قَدْ أَقَمْتُكَ نُورًا لِلْأُمَمِ، لِتَكُونَ أَنْتَ خَلَاصًا إِلَى أَقْصَى ٱلْأَرْضِ». | ٤٧ 47 |
೪೭ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು.
فَلَمَّا سَمِعَ ٱلْأُمَمُ ذَلِكَ كَانُوا يَفْرَحُونَ وَيُمَجِّدُونَ كَلِمَةَ ٱلرَّبِّ. وَآمَنَ جَمِيعُ ٱلَّذِينَ كَانُوا مُعَيَّنِينَ لِلْحَيَاةِ ٱلْأَبَدِيَّةِ. (aiōnios ) | ٤٨ 48 |
೪೮ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು. (aiōnios )
وَٱنْتَشَرَتْ كَلِمَةُ ٱلرَّبِّ فِي كُلِّ ٱلْكُورَةِ. | ٤٩ 49 |
೪೯ಕರ್ತನ ವಾಕ್ಯವು ಆ ಸೀಮೆಯ ಎಲ್ಲಾ ಕಡೆಗಳಲ್ಲಿ ಹಬ್ಬುತ್ತಾ ಬಂದಿತು.
وَلَكِنَّ ٱلْيَهُودَ حَرَّكُوا ٱلنِّسَاءَ ٱلْمُتَعَبِّدَاتِ ٱلشَّرِيفَاتِ وَوُجُوهَ ٱلْمَدِينَةِ، وَأَثَارُوا ٱضْطِهَادًا عَلَى بُولُسَ وَبَرْنَابَا، وَأَخْرَجُوهُمَا مِنْ تُخُومِهِمْ. | ٥٠ 50 |
೫೦ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.
أَمَّا هُمَا فَنَفَضَا غُبَارَ أَرْجُلِهِمَا عَلَيْهِمْ، وَأَتَيَا إِلَى إِيقُونِيَةَ. | ٥١ 51 |
೫೧ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.
وَأَمَّا ٱلتَّلَامِيذُ فَكَانُوا يَمْتَلِئُونَ مِنَ ٱلْفَرَحِ وَٱلرُّوحِ ٱلْقُدُسِ. | ٥٢ 52 |
೫೨ಶಿಷ್ಯರಾದವರು ಸಂತೋಷಭರಿತರೂ, ಪವಿತ್ರಾತ್ಮಭರಿತರೂ ಆಗಿದ್ದರು.