< أعمال 15 >

وَٱنْحَدَرَ قَوْمٌ مِنَ ٱلْيَهُودِيَّةِ، وَجَعَلُوا يُعَلِّمُونَ ٱلْإِخْوَةَ أَنَّهُ: «إِنْ لَمْ تَخْتَتِنُوا حَسَبَ عَادَةِ مُوسَى، لَا يُمْكِنُكُمْ أَنْ تَخْلُصُوا». ١ 1
ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; “ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು” ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.
فَلَمَّا حَصَلَ لِبُولُسَ وَبَرْنَابَا مُنَازَعَةٌ وَمُبَاحَثَةٌ لَيْسَتْ بِقَلِيلَةٍ مَعَهُمْ، رَتَّبُوا أَنْ يَصْعَدَ بُولُسُ وَبَرْنَابَا وَأُنَاسٌ آخَرُونَ مِنْهُمْ إِلَى ٱلرُّسُلِ وَٱلْمَشَايِخِ إِلَى أُورُشَلِيمَ مِنْ أَجْلِ هَذِهِ ٱلْمَسْأَلَةِ. ٢ 2
ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.
فَهَؤُلَاءِ بَعْدَ مَا شَيَّعَتْهُمُ ٱلْكَنِيسَةُ ٱجْتَازُوا فِي فِينِيقِيَةَ وَٱلسَّامِرَةِ يُخْبِرُونَهُمْ بِرُجُوعِ ٱلْأُمَمِ، وَكَانُوا يُسَبِّبُونَ سُرُورًا عَظِيمًا لِجَمِيعِ ٱلْإِخْوَةِ. ٣ 3
ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಫೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.
وَلَمَّا حَضَرُوا إِلَى أُورُشَلِيمَ قَبِلَتْهُمُ ٱلْكَنِيسَةُ وَٱلرُّسُلُ وَٱلْمَشَايِخُ، فَأَخْبَرُوهُمْ بِكُلِّ مَا صَنَعَ ٱللهُ مَعَهُمْ. ٤ 4
ಅವರು ಯೆರೂಸಲೇಮಿಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
وَلَكِنْ قَامَ أُنَاسٌ مِنَ ٱلَّذِينَ كَانُوا قَدْ آمَنُوا مِنْ مَذْهَبِ ٱلْفَرِّيسِيِّينَ، وَقَالُوا: «إِنَّهُ يَنْبَغِي أَنْ يُخْتَنُوا، وَيُوصَوْا بِأَنْ يَحْفَظُوا نَامُوسَ مُوسَى». ٥ 5
ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; “ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು” ಎಂದು ಹೇಳಿದರು.
فَٱجْتَمَعَ ٱلرُّسُلُ وَٱلْمَشَايِخُ لِيَنْظُرُوا فِي هَذَا ٱلْأَمْرِ. ٦ 6
ಅಪೊಸ್ತಲರೂ ಸಭೆಯ ಹಿರಿಯರೂ ಈ ವಿಷಯವನ್ನು ಕುರಿತು ಆಲೋಚಿಸುವುದಕ್ಕೆ ಸೇರಿ ಬಂದಾಗ, ಅವರಲ್ಲಿ ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವರಿಗೆ;
فَبَعْدَ مَا حَصَلَتْ مُبَاحَثَةٌ كَثِيرَةٌ قَامَ بُطْرُسُ وَقَالَ لَهُمْ: «أَيُّهَا ٱلرِّجَالُ ٱلْإِخْوَةُ، أَنْتُمْ تَعْلَمُونَ أَنَّهُ مُنْذُ أَيَّامٍ قَدِيمَةٍ ٱخْتَارَ ٱللهُ بَيْنَنَا أَنَّهُ بِفَمِي يَسْمَعُ ٱلْأُمَمُ كَلِمَةَ ٱلْإِنْجِيلِ وَيُؤْمِنُونَ. ٧ 7
“ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿನಗಳ ಹಿಂದೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದಿದೆ.
وَٱللهُ ٱلْعَارِفُ ٱلْقُلُوبَ، شَهِدَ لَهُمْ مُعْطِيًا لَهُمُ ٱلرُّوحَ ٱلْقُدُسَ كَمَا لَنَا أَيْضًا. ٨ 8
ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು.
وَلَمْ يُمَيِّزْ بَيْنَنَا وَبَيْنَهُمْ بِشَيْءٍ، إِذْ طَهَّرَ بِٱلْإِيمَانِ قُلُوبَهُمْ. ٩ 9
ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
فَٱلْآنَ لِمَاذَا تُجَرِّبُونَ ٱللهَ بِوَضْعِ نِيرٍ عَلَى عُنُقِ ٱلتَّلَامِيذِ لَمْ يَسْتَطِعْ آبَاؤُنَا وَلَا نَحْنُ أَنْ نَحْمِلَهُ؟ ١٠ 10
೧೦ಹೀಗಿರುವುದರಿಂದ ನಮ್ಮ ಪೂರ್ವಿಕರಾಗಲಿ, ನಾವಾಗಲಿ ಹೊರಲಾಗದ ನೋಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ?
لَكِنْ بِنِعْمَةِ ٱلرَّبِّ يَسُوعَ ٱلْمَسِيحِ نُؤْمِنُ أَنْ نَخْلُصَ كَمَا أُولَئِكَ أَيْضًا». ١١ 11
೧೧ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬುದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು” ಎಂದು ಹೇಳಿದನು.
فَسَكَتَ ٱلْجُمْهُورُ كُلُّهُ. وَكَانُوا يَسْمَعُونَ بَرْنَابَا وَبُولُسَ يُحَدِّثَانِ بِجَمِيعِ مَا صَنَعَ ٱللهُ مِنَ ٱلْآيَاتِ وَٱلْعَجَائِبِ فِي ٱلْأُمَمِ بِوَاسِطَتِهِمْ. ١٢ 12
೧೨ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.
وَبَعْدَمَا سَكَتَا أَجَابَ يَعْقُوبُ قَائِلًا: «أَيُّهَا ٱلرِّجَالُ ٱلْإِخْوَةُ، ٱسْمَعُونِي. ١٣ 13
೧೩ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಯಾಕೋಬನು ಆ ಸಂಗತಿಯನ್ನು ಕುರಿತು ಹೇಳಿದ್ದೇನಂದರೆ;
سِمْعَانُ قَدْ أَخْبَرَ كَيْفَ ٱفْتَقَدَ ٱللهُ أَوَّلًا ٱلْأُمَمَ لِيَأْخُذَ مِنْهُمْ شَعْبًا عَلَى ٱسْمِهِ. ١٤ 14
೧೪“ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
وَهَذَا تُوافِقُهُ أَقْوَالُ ٱلْأَنْبِيَاءِ، كَمَا هُوَ مَكْتُوبٌ: ١٥ 15
೧೫ಇದಕ್ಕೆ ಪ್ರವಾದಿಗಳ ಮಾತುಗಳೂ ಒಪ್ಪುತ್ತವೆ. ಹೇಗೆಂದರೆ;
سَأَرْجِعُ بَعْدَ هَذَا وَأَبْنِي أَيْضًا خَيْمَةَ دَاوُدَ ٱلسَّاقِطَةَ، وَأَبْنِي أَيْضًا رَدْمَهَا وَأُقِيمُهَا ثَانِيَةً، ١٦ 16
೧೬“‘ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಪುನಃ ಕಟ್ಟುವೆನು. ಪಾಳು ಬಿದ್ದದ್ದನ್ನು ಜೀರ್ಣೋದ್ಧಾರಮಾಡಿ ಸುಭದ್ರವಾಗಿ ನಿಲ್ಲಿಸುವೆನು.
لِكَيْ يَطْلُبَ ٱلْبَاقُونَ مِنَ ٱلنَّاسِ ٱلرَّبَّ، وَجَمِيعُ ٱلْأُمَمِ ٱلَّذِينَ دُعِيَ ٱسْمِي عَلَيْهِمْ، يَقُولُ ٱلرَّبُّ ٱلصَّانِعُ هَذَا كُلَّهُ. ١٧ 17
೧೭ಮನುಷ್ಯರಲ್ಲಿ ಉಳಿದ ಜನರು ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವರು ಎಂದು
مَعْلُومَةٌ عِنْدَ ٱلرَّبِّ مُنْذُ ٱلْأَزَلِ جَمِيعُ أَعْمَالِهِ. (aiōn g165) ١٨ 18
೧೮ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ’ ಎಂದು ಬರೆದದೆ. (aiōn g165)
لِذَلِكَ أَنَا أَرَى أَنْ لَا يُثَقَّلَ عَلَى ٱلرَّاجِعِينَ إِلَى ٱللهِ مِنَ ٱلْأُمَمِ، ١٩ 19
೧೯“ಹೀಗಿರಲಾಗಿ ನನ್ನ ಅಭಿಪ್ರಾಯ ಏನೆಂದರೆ; ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.
بَلْ يُرْسَلْ إِلَيْهِمْ أَنْ يَمْتَنِعُوا عَنْ نَجَاسَاتِ ٱلْأَصْنَامِ، وَٱلزِّنَا، وَٱلْمَخْنُوقِ، وَٱلدَّمِ. ٢٠ 20
೨೦ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.
لِأَنَّ مُوسَى مُنْذُ أَجْيَالٍ قَدِيمَةٍ، لَهُ فِي كُلِّ مَدِينَةٍ مَنْ يَكْرِزُ بِهِ، إِذْ يُقْرَأُ فِي ٱلْمَجَامِعِ كُلَّ سَبْتٍ». ٢١ 21
೨೧ಏಕೆಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ” ಎಂದು ಹೇಳಿದನು.
حِينَئِذٍ رَأَى ٱلرُّسُلُ وَٱلْمَشَايِخُ مَعَ كُلِّ ٱلْكَنِيسَةِ أَنْ يَخْتَارُوا رَجُلَيْنِ مِنْهُمْ، فَيُرْسِلُوهُمَا إِلَى أَنْطَاكِيَةَ مَعَ بُولُسَ وَبَرْنَابَا: يَهُوذَا ٱلْمُلَقَّبَ بَرْسَابَا، وَسِيلَا، رَجُلَيْنِ مُتَقَدِّمَيْنِ فِي ٱلْإِخْوَةِ. ٢٢ 22
೨೨ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,
وَكَتَبُوا بِأَيْدِيهِمْ هَكَذَا: «اَلرُّسُلُ وَٱلْمَشَايِخُ وَٱلْإِخْوَةُ يُهْدُونَ سَلَامًا إِلَى ٱلْإِخْوَةِ ٱلَّذِينَ مِنَ ٱلْأُمَمِ فِي أَنْطَاكِيَةَ وَسُورِيَّةَ وَكِيلِيكِيَّةَ: ٢٣ 23
೨೩ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;
إِذْ قَدْ سَمِعْنَا أَنَّ أُنَاسًا خَارِجِينَ مِنْ عِنْدِنَا أَزْعَجُوكُمْ بِأَقْوَالٍ، مُقَلِّبِينَ أَنْفُسَكُمْ، وَقَائِلِينَ أَنْ تَخْتَتِنُوا وَتَحْفَظُوا ٱلنَّامُوسَ، ٱلَّذِينَ نَحْنُ لَمْ نَأْمُرْهُمْ. ٢٤ 24
೨೪“ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,
رَأَيْنَا وَقَدْ صِرْنَا بِنَفْسٍ وَاحِدَةٍ أَنْ نَخْتَارَ رَجُلَيْنِ وَنُرْسِلَهُمَا إِلَيْكُمْ مَعَ حَبِيبَيْنَا بَرْنَابَا وَبُولُسَ، ٢٥ 25
೨೫ನಾವು ಕೆಲವರನ್ನು ಆರಿಸಿಕೊಂಡು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾದ,
رَجُلَيْنِ قَدْ بَذَلَا نَفْسَيْهِمَا لِأَجْلِ ٱسْمِ رَبِّنَا يَسُوعَ ٱلْمَسِيحِ. ٢٦ 26
೨೬ನಮ್ಮ ಪ್ರಿಯ ಬಾರ್ನಬ ಪೌಲರ ಜೊತೆಯಲ್ಲಿ ನಿಮ್ಮ ಬಳಿಗೆ ಕಳುಹಿಸಿ ಕೊಡುವುದು ಯುಕ್ತವೆಂದು ನಾವೆಲ್ಲರೂ ಒಮ್ಮನಸ್ಸಿನಿಂದ ತೀರ್ಮಾನಿಸಿದೆವು.
فَقَدْ أَرْسَلْنَا يَهُوذَا وَسِيلَا، وَهُمَا يُخْبِرَانِكُمْ بِنَفْسِ ٱلْأُمُورِ شِفَاهًا. ٢٧ 27
೨೭ಆದುದರಿಂದ ಯೂದನನ್ನೂ, ಸೀಲನನ್ನೂ ಕಳುಹಿಸಿಕೊಡುತ್ತಿದ್ದೇವೆ. ಅವರು ನಾವು ಬರೆದಿರುವ ಈ ಸಂಗತಿಗಳನ್ನು ಬಾಯಿಮಾತಿನಿಂದಲೂ ನಿಮಗೆ ತಿಳಿಸುವರು.
لِأَنَّهُ قَدْ رَأَى ٱلرُّوحُ ٱلْقُدُسُ وَنَحْنُ، أَنْ لَا نَضَعَ عَلَيْكُمْ ثِقْلًا أَكْثَرَ، غَيْرَ هَذِهِ ٱلْأَشْيَاءِ ٱلْوَاجِبَةِ: ٢٨ 28
೨೮ಅವು ಯಾವುವೆಂದರೆ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ಅನೈತಿಕತೆಯನ್ನೂ ವಿಸರ್ಜಿಸುವುದು ಅಗತ್ಯವಾಗಿದೆ.
أَنْ تَمْتَنِعُوا عَمَّا ذُبِحَ لِلْأَصْنَامِ، وَعَنِ ٱلدَّمِ، وَٱلْمَخْنُوقِ، وَٱلزِّنَا، ٱلَّتِي إِنْ حَفِظْتُمْ أَنْفُسَكُمْ مِنْهَا فَنِعِمَّا تَفْعَلُونَ. كُونُوا مُعَافَيْنَ». ٢٩ 29
೨೯ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”
فَهَؤُلَاءِ لَمَّا أُطْلِقُوا جَاءُوا إِلَى أَنْطَاكِيَةَ، وَجَمَعُوا ٱلْجُمْهُورَ وَدَفَعُوا ٱلرِّسَالَةَ. ٣٠ 30
೩೦ಹೀಗೆ ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಸಭೆಯನ್ನು ಸೇರಿಸಿ ಆ ಪತ್ರವನ್ನು ಅವರಿಗೆ ಒಪ್ಪಿಸಿದರು.
فَلَمَّا قَرَأُوهَا فَرِحُوا لِسَبَبِ ٱلتَّعْزِيَةِ. ٣١ 31
೩೧ಅವರು ಓದಿ ಅದರಿಂದ ಧೈರ್ಯ ತಂದುಕೊಂಡು ಸಂತೋಷಪಟ್ಟರು.
وَيَهُوذَا وَسِيلَا، إِذْ كَانَا هُمَا أَيْضًا نَبِيَّيْنِ، وَعَظَا ٱلْإِخْوَةَ بِكَلَامٍ كَثِيرٍ وَشَدَّدَاهُمْ. ٣٢ 32
೩೨ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.
ثُمَّ بَعْدَ مَا صَرَفَا زَمَانًا أُطْلِقَا بِسَلَامٍ مِنَ ٱلْإِخْوَةِ إِلَى ٱلرُّسُلِ. ٣٣ 33
೩೩ಅಲ್ಲಿ ಕೆಲವು ಕಾಲ ಕಳೆದ ನಂತರ ತಮ್ಮನ್ನು ಕಳುಹಿಸಿದವರ ಬಳಿಗೆ ಪುನಃ ಹೋಗುವುದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು.
وَلَكِنَّ سِيلَا رَأَى أَنْ يَلْبَثَ هُنَاكَ. ٣٤ 34
೩೪ಆದರೆ ಸೀಲನಿಗೆ ಅಲ್ಲೇ ಇರುವುದು ಒಳ್ಳೆಯದೆಂದು ತೋಚಿತು.
أَمَّا بُولُسُ وَبَرْنَابَا فَأَقَامَا فِي أَنْطَاكِيَةَ يُعَلِّمَانِ وَيُبَشِّرَانِ مَعَ آخَرِينَ كَثِيرِينَ أَيْضًا بِكَلِمَةِ ٱلرَّبِّ. ٣٥ 35
೩೫ಆದರೆ ಪೌಲನೂ ಮತ್ತು ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು.
ثُمَّ بَعْدَ أَيَّامٍ قَالَ بُولُسُ لِبَرْنَابَا: «لِنَرْجِعْ وَنَفْتَقِدْ إِخْوَتَنَا فِي كُلِّ مَدِينَةٍ نَادَيْنَا فِيهَا بِكَلِمَةِ ٱلرَّبِّ، كَيْفَ هُمْ». ٣٦ 36
೩೬ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು.
فَأَشَارَ بَرْنَابَا أَنْ يَأْخُذَا مَعَهُمَا أَيْضًا يُوحَنَّا ٱلَّذِي يُدْعَى مَرْقُسَ، ٣٧ 37
೩೭ಅದಕ್ಕೆ ಬಾರ್ನಬನು ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು
وَأَمَّا بُولُسُ فَكَانَ يَسْتَحْسِنُ أَنَّ ٱلَّذِي فَارَقَهُمَا مِنْ بَمْفِيلِيَّةَ وَلَمْ يَذْهَبْ مَعَهُمَا لِلْعَمَلِ، لَا يَأْخُذَانِهِ مَعَهُمَا. ٣٨ 38
೩೮ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ ಪೌಲನು; ನಮ್ಮೊಂದಿಗೆ ಸೇವೆಗೆ ಬಾರದೆ ಪಂಫುಲ್ಯದಲ್ಲಿ ನಮ್ಮನ್ನು ಬಿಟ್ಟುಬಿಟ್ಟವನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ನೆನಸಿದನು.
فَحَصَلَ بَيْنَهُمَا مُشَاجَرَةٌ حَتَّى فَارَقَ أَحَدُهُمَا ٱلْآخَرَ. وَبَرْنَابَا أَخَذَ مَرْقُسَ وَسَافَرَ فِي ٱلْبَحْرِ إِلَى قُبْرُسَ. ٣٩ 39
೩೯ಈ ವಿಷಯದಲ್ಲಿ ತೀವ್ರವಾದ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸಮುದ್ರ ಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.
وَأَمَّا بُولُسُ فَٱخْتَارَ سِيلَا وَخَرَجَ مُسْتَوْدَعًا مِنَ ٱلْإِخْوَةِ إِلَى نِعْمَةِ ٱللهِ. ٤٠ 40
೪೦ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಅಲ್ಲಿಂದ
فَٱجْتَازَ فِي سُورِيَّةَ وَكِيلِيكِيَّةَ يُشَدِّدُ ٱلْكَنَائِسَ. ٤١ 41
೪೧ಹೊರಟು ಸಿರಿಯ ಮತ್ತು ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.

< أعمال 15 >